Author: kannadanewsnow07

ಚನ್ನೈ: ತಮಿಳುನಾಡಿನಲ್ಲಿ ಎರಡನೇ ದಿನವಾದ ಶುಕ್ರವಾರವೂ ಭಾರಿ ಮಳೆಯಾಗುತ್ತಿದ್ದು, ತೆಂಕಾಸಿ, ತಿರುನೆಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ಸಾಮಾನ್ಯ ಜೀವನಕ್ಕೆ ತೊಂದರೆಯಾಗಿದೆ. ಶುಕ್ರವಾರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಳೆ ಎಚ್ಚರಿಕೆ ನೀಡಿದೆ. ತಾಮಿರಬರಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ತೂತುಕುಡಿ ಜಿಲ್ಲಾಡಳಿತವು ಶ್ರೀವೈಕುಂಠಂ ಮತ್ತು ಎರಾಲ್ ಪ್ರದೇಶದ ನಿವಾಸಿಗಳಿಗೆ ಪ್ರವಾಹ ಎಚ್ಚರಿಕೆ ನೀಡಿದೆ. ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅವರು ವಿನಂತಿಸಿದರು. ದಿಂಡಿಗಲ್ನಲ್ಲಿ, ನಿರಂತರ ಮಳೆಯಿಂದಾಗಿ ಪೆರಿಯದುರೈ ಕಾಲುವೆ ಒಡೆದು ಹತ್ತಿರದ ಪ್ರದೇಶಗಳಿಗೆ ಪ್ರವಾಹ ಉಂಟಾಗಿದೆ. ಭಾರೀ ಮಳೆಯಿಂದಾಗಿ ಮುಳುಗಿರುವ ಕುಂಬಕ್ಕರೈ ಜಲಪಾತದಲ್ಲಿ ಪ್ರವಾಸಿಗರಿಗೆ ಸ್ನಾನ ಮಾಡುವುದನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ತೆಂಕಾಸಿ ಪ್ರವಾಹದಂತಹ ಪರಿಸ್ಥಿತಿಗಳಿಗೆ ಸಾಕ್ಷಿಯಾಗಿದ್ದು, ಕಡೈಯಂ-ಪೊಟ್ಟಲ್ಪುದೂರ್ ರಸ್ತೆಯಲ್ಲಿ ಸಂಚಾರವು ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. ಶಂಕರನ್ ಕೋಯಿಲ್ ನ ಶಂಕರನಾರಾಯಣ ದೇವಸ್ಥಾನಕ್ಕೂ ಮಳೆ ನೀರು ನುಗ್ಗಿದ್ದು, ವಡಕರೈನ ಪ್ರಾಥಮಿಕ ಆರೋಗ್ಯ ಕೇಂದ್ರ ಮುಳುಗಿದೆ ಎನ್ನಲಾಗಿದೆ. ಚೆನ್ನೈನಲ್ಲಿ, ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ರೆಡ್ಹಿಲ್ಸ್ ಮತ್ತು ಚೆಂಬರಂಬಕ್ಕಂ…

Read More

ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು. ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕಾನೂನಿನ ಮುಂದೆ ಎಲ್ಲರೂ ಸಮಾನರು: ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು. ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇವೆ: ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು…

Read More

ನವದೆಹಲಿ: ಬೇಬಿ ಜಾನ್ ಚಿತ್ರದ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಲು ಸಜ್ಜಾಗಿರುವ ನಟಿ ಕೀರ್ತಿ ಸುರೇಶ್ ಗೋವಾದಲ್ಲಿ ತಮ್ಮ ಗೆಳೆಯ ಆಂಟನಿ ತಟ್ಟಿಲ್ ಅವರನ್ನು ವಿವಾಹವಾದರು. ಮದುವೆ ಇಂದು ನಡೆಯಿತು ಮತ್ತು ನಟ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಫೋಟೋಗಳನ್ನು ಹಂಚಿಕೊಂಡ ನಟ ಫಾರ್ ದಿ ಲವ್ ಆಫ್ ನೈಕೆ ಎಂಬ ಹ್ಯಾಶ್ ಟ್ಯಾಗ್ ಅನ್ನು ಬಳಸಿದ್ದಾರೆ. ಕೀರ್ತಿ ಸುರೇಶ್ ಮತ್ತು ಆಂಟನಿ ತಟ್ಟಿಲ್ ಅಯ್ಯಂಗಾರ್ ಸಂಪ್ರದಾಯದಂತೆ ವಿವಾಹವಾದರು. ಕೀರ್ತಿ ಸುರೇಶ್ ಮತ್ತು ಆಂಟನಿ ತಟ್ಟಿಲ್ 15 ವರ್ಷಗಳಿಂದ ಸಂಬಂಧದಲ್ಲಿದ್ದರು. ಕೀರ್ತಿ ಮುಂದಿನ ವರುಣ್ ಧವನ್ ಅಭಿನಯದ ಬೇಬಿ ಜಾನ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದು ಕ್ರಿಸ್ಮಸ್ಗೆ ಬಿಡುಗಡೆಯಾಗಲಿದೆ. ಕಾಲೀಶ್ ನಿರ್ದೇಶನದ ಈ ಚಿತ್ರವು ತಲಪತಿ ವಿಜಯ್ ಅವರ ಥೆರಿ ಚಿತ್ರದ ರಿಮೇಕ್ ಆಗಿದ್ದು, ವಾಮಿಕಾ ಗಬ್ಬಿ ಕೂಡ ನಟಿಸಿದ್ದಾರೆ.

Read More

 ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ ಕುರಿತ 45 ದಿನಗಳ ಉಚಿತ ತರಬೇತಿಯು 2024ರ ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ- ಯುವತಿಯರು ಡಿಸೆಂಬರ್ 18 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9380162042, 9241482541, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಶಾಖೆ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಶಿವಮೊಗ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. 16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.20 ಕಡೆಯ ದಿನವಾಗಿದೆ. ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ/ಮೇಕೆ, 01 ಟಗರು/ಹೋತ ಒಟ್ಟು ಘಟಕ ದರ ರೂ.66,000/ಗಳಿದ್ದು, ಶೇ.90 ರಷ್ಟು ಸಹಾಯಧನ ಹೊಂದಿರುತ್ತದೆ.ಜಿಲ್ಲೆಗೆ ಒಟ್ಟು 03 ಗುರಿಗಳನ್ನು ನೀಡಲಾಗಿದೆ. ಹೆಚ್ಚಿನ ವಿವರಗಳಿಗೆ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿತು ಮತ್ತು ಅಭಿವೃದ್ದಿ ನಿಗಮ, ನಿಯಮಿತ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕುರಿತು ಮತ್ತು…

Read More

ಶಿವಮೊಗ್ಗ: 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾ./ಪ. ಪಂ. ಗಳ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕ್ರೀಡಾಪಟುಗಳು ಅರ್ಜಿಯನ್ನು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ. 21 ರೊಳಗಾಗಿ ಸಲ್ಲಿಸುವಂತೆ ಇಲಾಖೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.:08182-223328 ನ್ನು ಸಂಪರ್ಕಿಸುವುದು.

Read More

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿದೆ. ಸಚಿವ ಸತೀಶ್‌ ಜಾರಕಿಹೊಳಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ. ಹಿಂದೂ ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್‌ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದ” ಎಂದು ಕಾರ್ಯಕ್ರಮವೊಂದರಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಗುರುವಾರ ಕೇಸ್‌ನ ರದ್ದು ಮಾಡಿ ಆದೇಶ ನೀಡಿದೆ. ಐಪಿಸಿ ಸೆಕ್ಷನ್‌ಗಳಾದ 153 (ಗಲಭೆಗೆ ಪ್ರಚೋದನೆ) ಮತ್ತು 500ರ (ಬೇರೊಬ್ಬರಿಗೆ ಅವಮಾನ ಮಾಡುವುದು) ಅಡಿ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸಂಜ್ಞೇ ತೆಗೆದುಕೊಂಡು ಕಾನೂನಿನ ಅನ್ವಯ ಮುನ್ನಡೆಯಬೇಕು ಎಂದು ಸತ್ರ ನ್ಯಾಯಾಲಯ ಮಾಡಿದ್ದ ಆದೇಶವನ್ನು ಸತೀಶ್‌ ಜಾರಕಿಹೊಳಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Read More

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ ಬಗ್ಗೆ ಈ ಹಿಂದೆ ಹಲವು ಬಾರಿ ದೂರುಗಳು ಕೇಳಿಬಂದಿದ್ದವು. ವರ್ಗಾವಣೆ ದಂಧೆಯ ಬಗ್ಗೆ ಹಲವು ನಾಯಕರು ಸದನದಲ್ಲೇ ಧ್ವನಿ ಎತ್ತಿದ್ದರು. ಹೀಗಾಗಿ ಈ ಎಲ್ಲಾ ಅವ್ಯವಹಾರಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ವರ್ಗಾವಣೆಯಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವ ಸಲುವಾಗಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಸಾಲಿನಿಂದ ಉಪ-ನೋಂದಣಾಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್‌ ಮೂಲಕ ನಡೆಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಇಂದು ರಾಜ್ಯದ 31 ಜಿಲ್ಲೆಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪ ನೋಂದಣಿ ಕಚೇರಿಗಳಲ್ಲಿ ನೋಂದಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ 90ಜನ ಕೇಂದ್ರಸ್ಥಾನ ಸಹಾಯಕರು/ ಹಿರಿಯ ಉಪನೋಂದಣಾಧಿಕಾರಿಗಳನ್ನು ಇಂದು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಈ ವರ್ಗಾವಣೆ ಅವಧಿಯಲ್ಲಿ ಒಂದು ರೂಪಾಯಿ ಸಹ ಹಣ ವಹಿವಾಟು ನಡೆದಿರುವ ಬಗ್ಗೆ ದೂರುಗಳು…

Read More

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಅನ್ನು ಗುರುವಾರ ಮಧ್ಯಾಹ್ನ ಕೇಂದ್ರ ಬ್ಯಾಂಕಿಗೆ ಕಳುಹಿಸಲಾಗಿದೆ. ಇಮೇಲ್ ಅನ್ನು ರಷ್ಯನ್ ಭಾಷೆಯಲ್ಲಿ ಕಳುಹಿಸಲಾಗಿದೆ. ಅಪರಿಚಿತ ಆರೋಪಿಗಳ ವಿರುದ್ಧ ಮಾತಾ ರಮಾಬಾಯಿ ಮಾರ್ಗ್ (MRA Marg) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಳೆದ ತಿಂಗಳು, ಆರ್ಬಿಐ ಗ್ರಾಹಕ ಆರೈಕೆಗೆ ಇದೇ ರೀತಿಯ ಬೆದರಿಕೆಯನ್ನು ಕಳುಹಿಸಲಾಗಿತ್ತು. ಇದಕ್ಕೂ ಮುನ್ನ ಶುಕ್ರವಾರ ಬೆಳಿಗ್ಗೆ ದೆಹಲಿಯ ಆರು ಶಾಲೆಗಳು ಬಾಂಬ್ ಬೆದರಿಕೆಯಿಂದಾಗಿ ತರಗತಿಗಳನ್ನು ಸ್ಥಗಿತಗೊಳಿಸಿದವು. ಶುಕ್ರವಾರ ಮುಂಜಾನೆ 12:54 ಕ್ಕೆ ಬೆದರಿಕೆ ಬಂದಿದ್ದು, ಶಾಲೆಗಳು ತಮ್ಮ ಮಕ್ಕಳನ್ನು ಶಾಲೆಗೆ ಕರೆತರದಂತೆ ಪೋಷಕರಿಗೆ ಮಾಹಿತಿ ನೀಡಿವೆ.

Read More

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟ ಆಗಲಿದ್ದು, ಈ ನಿಟ್ಟಿನಲ್ಲಿ ಎಲ್ಲರ ಗಮನ ಹೈಕೋರ್ಟ್‌ ನತ್ತ ನೆಟ್ಟಿದೆ. 7 ಜನ ಆರೋಪಿಗಳ ಪರ ವಿರುದ್ಧ ವಾದ – ಪ್ರತಿವಾದ ಆಲಿಸಿರೋ ನ್ಯಾ. ವಿಶ್ವಜಿತ್ ಶೆಟ್ಟಿ ಪೀಠದಿಂದ ಮಧ್ಯಾಹ್ನ 2:30ರ ವೇಳೆಗೆ ತೀರ್ಪು ಹೊರ ಬೀಳುವ ಸಾಧ್ಯತೆ ಇದೆ. ಒಂದೊಮ್ಮೆ ದರ್ಶನ್‌ ಜಾಮೀನು ಅರ್ಜಿ ವಜಾಗೊಂಡರೆ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿ, ಗುಣಮುಖರಾದ ಬಳಿಕ ಮತ್ತೆ ಜೈಲಿಗೆ ಹೋಗಬೇಕಾದ ಸಂಧರ್ಭ ನಿರ್ಮಾಣವಾಗಲಿದೆ. ಇದಲ್ಲದೇ ಬೇಲ್‌ ಸಿಕ್ಕರೆ ಗುಣಮುಖರಾದ ನಂತರ ಮನೆಗೆ ತೆರಳಲಿದ್ದಾರೆ.

Read More