Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ನವದೆಹಲಿ: ಕನ್ವರ್ ಯಾತ್ರಾ ಮಾರ್ಗದಲ್ಲಿನ ತಿನಿಸುಗಳು ತಮ್ಮ ಅಂಗಡಿಗಳ ಹೊರಗೆ ತಮ್ಮ ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿದ ಕೆಲವು ರಾಜ್ಯ ಸರ್ಕಾರಗಳ ಅಧಿಕಾರಿಗಳು ಹೊರಡಿಸಿದ ನಿರ್ದೇಶನಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ಮಧ್ಯಂತರ ಆದೇಶವನ್ನು ಉಳಿಸಿಕೊಂಡಿದೆ. ಈ ವಿಷಯದ ವಿಚಾರಣೆಯನ್ನು ಮುಂದೂಡಲಾಯಿತು, ಮಧ್ಯಂತರ ತಡೆಯಾಜ್ಞೆ ಜಾರಿಯಲ್ಲಿದೆ. ಸುಪ್ರೀಂ ಕೋರ್ಟ್ ತನ್ನ ನಿಲುವನ್ನು ಸ್ಪಷ್ಟಪಡಿಸಿ, “ನಮ್ಮ ಆದೇಶ ಸ್ಪಷ್ಟವಾಗಿದೆ. ಯಾರಾದರೂ ಸ್ವಯಂಪ್ರೇರಣೆಯಿಂದ ತಮ್ಮ ಅಂಗಡಿಯ ಹೊರಗೆ ತಮ್ಮ ಹೆಸರನ್ನು ಬರೆಯಲು ಬಯಸಿದರೆ, ನಾವು ಅವರನ್ನು ತಡೆಯಲಿಲ್ಲ. ಅವರ ಹೆಸರನ್ನು ಬರೆಯುವಂತೆ ಯಾರನ್ನೂ ಒತ್ತಾಯಿಸಬಾರದು ಎಂಬುದು ನಮ್ಮ ಆದೇಶವಾಗಿತ್ತು. ಈ ನಿರ್ದೇಶನಗಳನ್ನು ಹೊರಡಿಸಿದ ನಂತರ ಈ ವಿಷಯವು ವಿವಾದವನ್ನು ಹುಟ್ಟುಹಾಕಿತು, ಈ ಆದೇಶಗಳು “ಕೋಮುವಾದಿ ಮತ್ತು ವಿಭಜಕ” ಎಂದು ಪ್ರತಿಪಕ್ಷಗಳು ಆರೋಪಿಸಿವೆ, ಅವರು ಮುಸ್ಲಿಮರು ಮತ್ತು ಪರಿಶಿಷ್ಟ ಜಾತಿಗಳನ್ನು ತಮ್ಮ ಗುರುತನ್ನು ಬಹಿರಂಗಪಡಿಸುವಂತೆ ಒತ್ತಾಯಿಸುವ ಮೂಲಕ ಅವರನ್ನು ಗುರಿಯಾಗಿಸುತ್ತಾರೆ ಎಂದು ಹೇಳಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ಬಿಜೆಪಿ ಈ ನಿರ್ದೇಶನವನ್ನು ಸಮರ್ಥಿಸಿಕೊಂಡಿದ್ದು, ಕಾನೂನು ಮತ್ತು…
ನವದೆಹಲಿ: ಕನ್ವರ್ ಯಾತ್ರಾ ಮಾರ್ಗದಲ್ಲಿನ ಅಂಗಡಿಗಳು ಮತ್ತು ತಿನಿಸುಗಳ ನಾಮಫಲಕ ವಿವಾದವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಿತು. “ಶಿವಭಕ್ತ ಕನ್ವಾರಿಯಾಗಳ ಆಹಾರ ಆಯ್ಕೆಗಳನ್ನು ಸಹ ನಾವು ಗೌರವಿಸಬೇಕು” ಎಂದು ನ್ಯಾಯಪೀಠ ಹೇಳಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ.ಎನ್.ಭಟ್ಟಿ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ. “ಯಾರಾದರೂ ತಮ್ಮ ಸ್ವಂತ ಇಚ್ಛೆಯಿಂದ ಅಂಗಡಿಯ ಹೊರಗೆ ತಮ್ಮ ಹೆಸರನ್ನು ಬರೆಯಲು ಬಯಸಿದರೆ, ನಾವು ಅವರನ್ನು ನಿಲ್ಲಿಸಿಲ್ಲ ಎಂದು ನಮ್ಮ ಆದೇಶ ಸ್ಪಷ್ಟವಾಗಿದೆ. ಹೆಸರುಗಳನ್ನು ಬರೆಯುವಂತೆ ಯಾರನ್ನೂ ಒತ್ತಾಯಿಸಬಾರದು ಆಂತ ಹೇಳಿದೆ. ಕನ್ವರ್ ಯಾತ್ರಾ ಮಾರ್ಗದಲ್ಲಿನ ಅಂಗಡಿಗಳಿಗೆ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವ ಉತ್ತರ ಪ್ರದೇಶ ಸರ್ಕಾರದ ಆದೇಶಕ್ಕೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಮಧ್ಯಪ್ರದೇಶ ಮತ್ತು ಉತ್ತರಾಖಂಡದ ಪರವಾಗಿ ಪ್ರತಿ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಸೋಮವಾರ ನಡೆಯಲಿದೆ.
ಬೆಂಗಳೂರು: ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದ ದಲ್ಲಿ ಇಂದು ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು. ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದರು. ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು…
ಬೆಂಗಳೂರು: “ಹೊಸ ನಾಯಕರನ್ನು ಸೃಷ್ಟಿ ಮಾಡುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆಗಸ್ಟ್ 16ರಿಂದ ಸೆಪ್ಟೆಂಬರ್ 16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, ಶುಕ್ರವಾರ ಈ ಮಾಹಿತಿ ನೀಡಿದರು. “ಜುಲೈ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ಕಾರಣ ಈ ವಿಚಾರದ ಬಗ್ಗೆ ಮಾಧ್ಯಮಗೋಷ್ಠಿ ಮಾಡಿರಲಿಲ್ಲ. ಆಗಸ್ಟ್ 2ರವರೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ, ಆಗಸ್ಟ್ 3ರಿಂದ 8ರವರೆಗೆ ನಾಮಪತ್ರ ಪರಿಶೀಲನೆ ಮಾಡಲಾಗುವುದು. ಆಗಸ್ಟ್ 9ರಂದು ನಾಮಪತ್ರ ಅಂತಿಮ ಮಾಡಲಾಗುವುದು. ಅತಿ ಹೆಚ್ಚು ಮತ ಪಡೆಯುವವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಮತಗಳ ಆಧಾರದ ಮೇಲೆ ನಂತರದ ಸ್ಥಾನ ಪಡೆಯುವರಿಗೆ ಇತರೆ ಸ್ಥಾನ ನೀಡಲಾಗುವುದು. ಈ ವೇಳೆ ಪಕ್ಷವು ಅಗ್ರ ಮೂರು ಸ್ಥಾನ ಪಡೆದವರ ಸಂದರ್ಶನವನ್ನು ಮಾಡಲಿದೆ” ಎಂದು ಮಾಹಿತಿ ನೀಡಿದರು. “ಸದಸ್ಯತ್ವ ನೋಂದಣಿಯನ್ನು ಆಗಸ್ಟ್…
ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿರುವ ಮಾತಿನ ಹೈಲೆಟ್ಸ್ ಇಲ್ಲಿದೆ. ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ. ನಾವು 135 ಸ್ಥಾನ ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ಕೊಡ್ತಾರೆ. ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. *ಎರಡು ವಾರವೂ ವಾಲ್ಮೀಕಿ ನಿಗಮದ ಒಂದೇ ವಿಚಾರ ಪ್ರಸ್ತಾಪ ಆಗಿದೆ. *ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚಕಾರವನ್ನೇ ಎತ್ತಲಿಲ್ಲ. ಆಡಳಿತ ಪಕ್ಷದ ಶಾಸಕರು ರಾಜ್ಯದ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಚರ್ಚೆ ನಡೆಸಿದರು. ಇದನ್ನೆಲ್ಲಾ ನೋಡಿದಾಗ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಅಧಿವೇಶನವನ್ನು ದುರುಪಯೋಗ ಪಡಿಸಿಕೊಳ್ಳುವುದು ಬಿಟ್ಟರೆ ಬೇರೆ ಜನಪರವಾದ ಉದ್ದೇಶ ವಿರೋಧ ಪಕ್ಷಗಳಿಗೆ ಇರಲಿಲ್ಲ ಎನ್ನುವುದು ಸ್ಪಷ್ಟವಾಗಿದೆ. *ನಾನು ಮಂತ್ರಿಯಾಗಿ 40 ವರ್ಷ ಆಯ್ತು.…
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಬಿಜಪಿ ಜೆಡಿಎಸ್ ಸದನದಲ್ಲಿ ಕಾನೂನು ಬಾಹಿರ ನಿಯಮದ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿತ್ತು ಅಂತ ಹೇಳಿದರು. ಇನ್ನೂ ಲೋಕಸಭೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ಕಡಿಮೆ ಸೀಟು ಗಳಿಸಿದ್ದು, ಇದನ್ನು ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಅಂತ ತಿಳಿಸಿದರು. ಯಾವುದೇ ಆಧಾರಗಳಿಲ್ಲದೇ ಇವರುಗಳು ಆರೋಪ ಮಾಡುತ್ತಿದ್ದಾರೆ ಅಂತ ತಿಳಿಸಿದರು. ಸಿಎಂಗೆ ಕಪ್ಪು ಚುಕ್ಕೆ ತರುವುದಕ್ಕೆ ಇವರೆಲ್ಲ ಪಿತೂರಿ ನಡೆಸುತ್ತಿದ್ದಾರೆ ಅಂಥ ತಿಳಿಸಿದರು. ಇನ್ನೂ ತಮ್ಮ ವಿರುದ್ದ ಕೇಳಿ ಬಂದಿರುವ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿದ ಅವರು ಪಿಟಿಸಿಎಲ್ ಕಾಯ್ದೆ ಅನ್ವ ನನ್ನ ರಾಜಕೀಯ ಜೀವನ ತೆರೆದ ಪುಸ್ತಕ: ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ\ ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ ಚರ್ಚಿಸಿದರು ವಿರೋಧ ಪಕ್ಷದವರು ನೆಪಕ್ಕೂ ರಾಜ್ಯದ ಜನರ…
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಬಿಜಪಿ ಜೆಡಿಎಸ್ ಸದನದಲ್ಲಿ ಕಾನೂನು ಬಾಹಿರ ನಿಯಮದ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿತ್ತು ಅಂತ ಹೇಳಿದರು. ಇನ್ನೂ ಲೋಕಸಭೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ಕಡಿಮೆ ಸೀಟು ಗಳಿಸಿದ್ದು, ಇದನ್ನು ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಅಂತ ತಿಳಿಸಿದರು. ಯಾವುದೇ ಆಧಾರಗಳಿಲ್ಲದೇ ಇವರುಗಳು ಆರೋಪ ಮಾಡುತ್ತಿದ್ದಾರೆ ಅಂತ ತಿಳಿಸಿದರು. ಸಿಎಂಗೆ ಕಪ್ಪು ಚುಕ್ಕೆ ತರುವುದಕ್ಕೆ ಇವರೆಲ್ಲ ಪಿತೂರಿ ನಡೆಸುತ್ತಿದ್ದಾರೆ ಅಂಥ ತಿಳಿಸಿದರು. ಇನ್ನೂ ತಮ್ಮ ವಿರುದ್ದ ಕೇಳಿ ಬಂದಿರುವ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿದ ಅವರು ಪಿಟಿಸಿಎಲ್ ಕಾಯ್ದೆ ಅನ್ವಯ ಜಮೀನು ಇಲ್ಲ, ಇದು ಪಿತ್ರರ್ಜಿತ ಆಸ್ತಿಯಾಗಿದ್ದು, ಈ ಜಮೀನ ಮಾಲೀಕ ನಿಂಗ ಬಿನ್ ಜವರ 2-08-1935ರಲ್ಲಿ ಮೈಸೂರು ತಾಲೂಕು ಕಚೇರಿಗೆ ಒಂದು ಅರ್ಜಿಯನ್ನು ನೀಡಿದ್ದಾರೆ ಅದರ ಅನ್ವಯ ಹರಾಜು ನಡೆಯುತ್ತದೆ. ಆಗ ಹರಾಜಿನ ಮೊತ್ತು ಮೂರು ರೂ ಆಗಿರುತ್ತದೆ. ಹರಾಜಿನಲ್ಲಿ ಒಂದು ರೂಗೆ ನಿಂಗ…
ನವದೆಹಲಿ: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ತನಿಖೆಗಾಗಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೆಳಗ್ಗೆ ಸಂಸತ್ತಿನ ಮುಂಭಾಗದಲ್ಲಿ ಕರ್ನಾಟಕದ ಬಿಜೆಪಿ ಸಂಸದರಿಂದ ಪ್ರತಿಭಟನೆ ನಡೆಯಿತು. ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅ ಹಾಗೂ ಹಾಲಿ ಹಾವೇರಿ ಸಂಸದ ಮುಡಾದ ಆಸ್ತಿಯನ್ನು ಕಾಂಗ್ರೆಸ್ ಲೂಟಿ ಮಾಡಿದೆ. ಅವರು ಕೋಟಿಗಟ್ಟಲೆ ಲಾಭ ಗಳಿಸಿದರು. ಇದೆಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಮಾಡಲಾಗಿದೆ. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು. ಪ್ರತಿಭಟಿಸುವುದು ಮತ್ತು ಜನರ ಮುಂದೆ ಸತ್ಯಗಳನ್ನು ಹೊರತರುವುದು ನಮ್ಮ ಕರ್ತವ್ಯ ಅಂತ ಹೇಳಿದರು. https://twitter.com/ANI/status/1816708243466649767
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ದಾಳಿಯ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ವಿಜಯ್ ದಿವಸ್ ದಿನದಂದು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಲಡಾಖ್ನ ಶಿಂಕುನ್ ಲಾ ಸುರಂಗಕ್ಕಾಗಿ ಪ್ರಧಾನಿ ಮೊದಲ ಸ್ಫೋಟವನ್ನು ನಡೆಸಿದರು, ಇದು 15,800 ಅಡಿ ಎತ್ತರದಲ್ಲಿದೆ, ಇದು ಪೂರ್ಣಗೊಂಡಾಗ ಅತಿ ಎತ್ತರದ ಸುರಂಗವಾಗಲಿದೆ. ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು 25 ವರ್ಷಗಳ ಹಿಂದೆ ಕಾರ್ಗಿಲ್ ಯುದ್ಧವನ್ನು ಗೆದ್ದಿದೆ ಮಾತ್ರವಲ್ಲ, “ಸತ್ಯ, ಸಂಯಮ ಮತ್ತು ಶಕ್ತಿಯ” ಅದ್ಭುತ ಉದಾಹರಣೆಯನ್ನು ನೀಡಿದೆ ಎಂದು ಹೇಳಿದರು. ಪಾಕಿಸ್ತಾನವು ಈ ಹಿಂದೆ ತನ್ನ ಎಲ್ಲಾ ದುಷ್ಕೃತ್ಯಗಳಲ್ಲಿ ವಿಫಲವಾಗಿದೆ ಆದರೆ ಭಯೋತ್ಪಾದನೆ ಮತ್ತು ಪರೋಕ್ಷ ಯುದ್ಧದ ಸಹಾಯದಿಂದ ತನ್ನನ್ನು ಪ್ರಸ್ತುತವಾಗಿಡಲು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, “… ಅಗ್ನಿಪಥ್ ಯೋಜನೆಯು ಸೈನ್ಯವು ಮಾಡಿದ ಅಗತ್ಯ ಸುಧಾರಣೆಗಳಿಗೆ ಒಂದು ಉದಾಹರಣೆಯಾಗಿದೆ … ಸೇನೆ ಎಂದರೆ ರಾಜಕಾರಣಿಗಳಿಗೆ ನಮಸ್ಕರಿಸುವುದು, ಮೆರವಣಿಗೆ ನಡೆಸುವುದು…
ಬೆಂಗಳೂರು: ನಮ್ಮ ಸಮಾಜದಲ್ಲಿ ಹೆಣ್ಣುಮಕ್ಕಳು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಬಾರದು, ಇಲ್ಲವೇ ಮಾಡಬಾರದು ಎನ್ನುವ ನಿಯಮವೊಂದಿದೆ ಈ ಕಾರಣಕ್ಕೆ ಅವರಿಗೆ ಅಂತ್ಯಸಂಸ್ಕಾರ ಸಂಬಂಧಿಸಿದ ಕಾರ್ಯಗಳಿಗೆ ಅವಕಾಶ ನೀಡುವುದಿಲ್ಲ. ಈ ನಡುವೆ ತಮ್ಮ ತಂದೆಯ ಅಂತ್ಯಸಂಸ್ಕಾರವನ್ನು ಮಗಳು, ನಿರೂಪಕಿ, ಗಾಯಕಿ ದಿವ್ಯಾ ಆಲೂರು ಅವರು ಮಾಡಿದ್ದು, ಈ ಮೂಲಕ ಸಮಾಜಕ್ಕೆ ಒಂದೊಳ್ಳೆಯ ಸಂದೇಶವನ್ನು ಕಳುಹಿಸಿಕೊಟ್ಟಿದ್ದು, ಮೌಡ್ಯಕ್ಕೆ ಧಿಕ್ಕಾರ ಕೂಗಿದ್ದಾರೆ. ಈ ಬಗ್ಗೆ ಹಿರಿಯ ಪತ್ರಕರ್ತ ದಂಡಿನಕೆರೆ ನಾಗರಾಜ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಅದರ ವಿವರ ಈ ಕೆಳಕಂಡತಿದೆ. ಗಂಡು ಮಕ್ಕಳಿಲ್ಲದ ಜಾನಪದ ಗಾಯಕ ಆಲೂರು ನಾಗಪ್ಪ ಅವರ ಅಂತ್ಯಸಂಸ್ಕಾರ ಮಾಡಿದ್ದು ಅವರ ಮಗಳು, ನಿರೂಪಕಿ, ಗಾಯಕಿ ದಿವ್ಯಾ ಆಲೂರು. ತನ್ನ ಅಪ್ಪನ ಅಂತ್ಯಸಂಸ್ಕಾರ ನಾನೇ ಮಾಡಬೇಕು ಎಂದು ಹಠ ಹಿಡಿದು ಸಾಧಿಸಿದ ದಿವ್ಯಾರ ಬಗ್ಗೆ ಗೌರವ ಬಂತು. ನೀ ಈ ಕೆಲಸ ಮಾಡಿದ್ರೆ ನಿನಗೆ ಕೆಟ್ಟದಾಗುತ್ತೆ ಅಂತ ಊರಿನ ಹಿರಿಯರು ಹೇಳಿದಾಗಲೂ, ಏನಾದ್ರೂ ಪರವಾಗಿಲ್ಲ ನಮ್ಮಪ್ಪನ ಅಂತ್ಯಸಂಸ್ಕಾರ ನಾನೇ ಮಾಡೋದು…