Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಗಂಧದ ಮರ ಕಳವು ಮಾಡಿದ್ದ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ಜೊತೆ 1 ಲಕ್ಷ ರೂಪಾಯಿ ದಂಡ ವಿಧಿಸುವ ಮೂಲಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನಲೆ: ಗಂಧದ ಮರ ಕಳವು ಮಾಡಿದ್ದ ಆರೋಪದಲ್ಲಿ ಆರೋಪಿಯೊಬ್ಬರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷಗಳ ಶಿಕ್ಷೆಯನ್ನು ಎತ್ತಿಹಿಡಿದಿರುವ ಹೈಕೋರ್ಟ್, 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ಧ ದಂಡದ ಪ್ರಮಾಣ ಹೆಚ್ಚಳ ಮಾಡುವಂತೆ ಕೋರಿದ್ದ ರಾಜ್ಯ ಸರ್ಕಾರ ಮತ್ತು ಶಿಕ್ಷೆ ರದ್ದು ಕೋರಿ ಮಂಡ್ಯ ಜಿಲ್ಲೆ ಬಲ್ಲೆನಹಳ್ಳಯ ಆರೋಪಿ ದೇವರಾಜಚಾರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ನ್ಯಾಯಪೀಠ, ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಎತ್ತಿಹಿಡಿದಿದೆ. ಆರೋಪಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.
ಕರಾಚಿ: ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಯಾವಾಗಲೂ ವಿವಾದದ ಪರಿಸ್ಥಿತಿ ಇದೆ. ಪಾಕಿಸ್ತಾನದಲ್ಲಿ ಹಿಂದೂ ಸಮಾಜವು ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿದೆ, ಮಾನವ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ ಎಂದು ಅನೇಕ ವರದಿಗಳು ಹೊರಬಂದಿವೆ. ಈಗ ಈ ಮಧ್ಯೆ, ಪಾಕಿಸ್ತಾನ್ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ (ಪಿಬಿಎಸ್) ವರದಿ ಹೊರಬಂದಿದ್ದು, ಇದು ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆ ಹೆಚ್ಚಾಗಿದೆ ಎಂದು ಹೇಳುತ್ತದೆ. ಹಿಂದೂಗಳ ಜನಸಂಖ್ಯೆ ಹೆಚ್ಚಾಯಿತು ಆದರೆ… ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆ 3.5 ಮಿಲಿಯನ್ ನಿಂದ 3.8 ಮಿಲಿಯನ್ ಗೆ ತಲುಪಿದೆ, ಈ ಅಂಕಿ ಅಂಶವು 2017 ಮತ್ತು 2023 ರ ನಡುವೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ರೀತಿಯಾಗಿ, ಹಿಂದೂಗಳು ಪಾಕಿಸ್ತಾನದ ಅತಿದೊಡ್ಡ ಅಲ್ಪಸಂಖ್ಯಾತ ಸಮಾಜವಾಗಿ ಮಾರ್ಪಟ್ಟಿದ್ದಾರೆ. ಆದರೆ ಇದನ್ನು ಸಂಪೂರ್ಣ ಸತ್ಯವೆಂದು ಪರಿಗಣಿಸಲಾಗುವುದಿಲ್ಲ, ವಾಸ್ತವವಾಗಿ ಪಾಕಿಸ್ತಾನದಲ್ಲಿ ಹಿಂದೂಗಳ ಜನಸಂಖ್ಯೆ ಖಂಡಿತವಾಗಿಯೂ ಹೆಚ್ಚಾಗಿದೆ, ಆದರೆ ಅದೇ ಒಟ್ಟು ಜನಸಂಖ್ಯೆಯಲ್ಲಿ ಅವರ ಪಾಲು ಕಡಿಮೆಯಾಗಿದೆ. ಪಾಕಿಸ್ತಾನದಲ್ಲಿ ಪ್ರಸ್ತುತ ಹಿಂದೂ ಜನಸಂಖ್ಯೆ 3.8 ಮಿಲಿಯನ್…
ನವದೆಹಲಿ: 2041 ರ ವೇಳೆಗೆ ಅಸ್ಸಾಂ ಮುಸ್ಲಿಂ ಬಹುಸಂಖ್ಯಾತವಾಗಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಹೇಳಿದ್ದಾರೆ ಮತ್ತು ಪ್ರತಿ 10 ವರ್ಷಗಳಿಗೊಮ್ಮೆ ಮುಸ್ಲಿಂ ಜನಸಂಖ್ಯೆ ಶೇಕಡಾ 30 ರಷ್ಟು ಬೆಳೆಯುತ್ತಿದೆ ಎಂದು ಹೇಳಿದರು. ಅಂಕಿಅಂಶಗಳ ಮಾದರಿಗಳ ಪ್ರಕಾರ ಮುಸ್ಲಿಮರು ಈಗ ಅಸ್ಸಾಂನ ಜನಸಂಖ್ಯೆಯ ಶೇಕಡಾ 40 ರಷ್ಟಿದ್ದಾರೆ ಎಂದು ಶರ್ಮಾ ಹೇಳಿದರು. “ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆಯ ಹೆಚ್ಚಳವು ಅಂಕಿಅಂಶಗಳ ಸತ್ಯವಾಗಿದೆ. ಮುಸ್ಲಿಮರ ಜನಸಂಖ್ಯಾ ಹೆಚ್ಚಳದ ಪ್ರಮಾಣವು ಹಿಂದೂಗಳಿಗಿಂತ ಹೆಚ್ಚಾಗಿದೆ ಮತ್ತು ಈ ದರದಲ್ಲಿ, 2041 ರ ವೇಳೆಗೆ ಅವರು ಬಹುಸಂಖ್ಯಾತರಾಗುತ್ತಾರೆ” ಎಂದು ಅವರು ಆರೋಪಿಸಿದರು. ಇದೇ ಅವಧಿಯಲ್ಲಿ ಮುಸ್ಲಿಮರ ಬೆಳವಣಿಗೆಗೆ ಹೋಲಿಸಿದರೆ ಹಿಂದೂಗಳ ಜನಸಂಖ್ಯೆ ಪ್ರತಿ 10 ವರ್ಷಗಳಿಗೊಮ್ಮೆ ಸುಮಾರು 16 ಪ್ರತಿಶತದಷ್ಟು ಹೆಚ್ಚುತ್ತಿದೆ ಎಂದು ಶರ್ಮಾ ಹೇಳಿದರು. ಹಿಂದೂಗಳ ಜನಸಂಖ್ಯೆ ಶೇ.16ರಷ್ಟು ಹೆಚ್ಚಾಗಿದೆ. 2011ರಲ್ಲಿ ಅಸ್ಸಾಂನ ಜನಸಂಖ್ಯೆಯಲ್ಲಿ ಮುಸ್ಲಿಮರ ಸಂಖ್ಯೆ 1.40 ಕೋಟಿಯಷ್ಟಿತ್ತು. ಪ್ರತಿ 10 ವರ್ಷಗಳಿಗೊಮ್ಮೆ ಮುಸ್ಲಿಂ ಜನಸಂಖ್ಯೆಯ ಶೇಕಡಾ 30 ರಷ್ಟು ಹೆಚ್ಚಳವಾಗುತ್ತಿದೆ.…
ರಬಕವಿ-ಬನಹಟ್ಟಿ: 12 ಕಾಲ್ಬೆರಳುಗಳು ಮತ್ತು 13 ಕೈ ಬೆರಳುಗಳ ನವಜಾತ ಶಿಶುವೊಂದು ಜನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಸನ್ಶೈನ್ ಮಲ್ಪಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಮಗುವಿಗೆ ಬಲಗೈಗೆ 6, ಎಡಗೈಗೆ 7 ಮತ್ತು ಪ್ರತಿ ಕಾಲಿನಲ್ಲಿ 6 ಬೆರಳುಗಳನ್ನು ನೋಡಿ ವೈದ್ಯರು ಹಾಗೂ ಕುಟುಂಬ ವರ್ಗ ಅಚ್ಚರಿಯಾಗಿದೆ. ಮಗುವಿಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಕ್ರೋಮೋಸೋಮ್ ಗಳಿಂದ ಇಂತಹ ಮಗು ಹುಟ್ಟುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಈ ನಡುವೆ ನನ್ನ ಪತ್ನಿ ಪ್ರತಿ ವಾರ ಬೀಳಗಿ ತಾಲೂಕಿನ ಕುಂದರಗಿಯ ಭುವನೇಶ್ವರಿ ದೇವಿಗೆ ತೆರಳಿ ಮಕ್ಕಳಾಗುವಂತೆ ಬೇಡಿಕೊಂಡಿದ್ದಳು. ದೇವಿಯ ಕೃಪಾಶೀರ್ವಾದದಿಂದ ನಮಗೆ ಗಂಡು ಮಗು ಜನಿಸಿದೆ ಎಂದು ತಂದೆ ಗುರಪ್ಪ ಕೊಣ್ಣೂರ ಸಂತಸ ವ್ಯಕ್ತಪಡಿಸಿದ್ದಾರೆ.
Renukaswamy murder case: ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ಜೈಲು ಸೇರಿದ್ದಾರೆ. ನಡುವೆ ಚಿತ್ರದುರ್ಗದ ಅಭಿಮಾನಿಗಳ ಸಂಘದ ಅಧ್ಯಕ್ಷ ರಘು ತಾಯಿ ನಿಧನರಾಗಿದ್ದಾರೆ ಎನ್ನಲಾಗಿದೆ. ಕಳೆದ ಒಂದು ವರ್ಷದಿಂದ ರಘು ತಾಯಿ ಮಂಜುಳಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇಂದು ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎನ್ನಲಾಗಿದೆ.ಚಿತ್ರದುರ್ಗದ ಅಭಿಮಾನಿಗಳ ಸಂಘದ ಅಧ್ಯಕ್ಷ ರಘು, 15 ವರ್ಷಗಳಿಂದ ದರ್ಶನ್ ಅಭಿಮಾನಿಯಾಗಿದ್ದು, ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ರಘೂ ಜೈಲುಪಾಲಾಗಿದ್ದಾನೆ.ಇನ್ನು ತಮ್ಮ ತಾಯಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಕ್ಕೆ ಇಂದು ನ್ಯಾಯಾಲಯದಲ್ಲಿ ರಘು ಪರ ವಕೀಲರ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ನ್ಯಾಯಾಲಯದಿಂದ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಕ್ಕೆ ಅವಕಾಶ ಸಿಕ್ಕರೆ ಆರೋಪಿ ರಘು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾನೆ.
ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ) ಹುದ್ದೆಗಳ ನೇಮಕಾತಿ ನಡೆಯಲಿದ್ದು, ಈ ನಡುವೆ ಕರ್ನಾಟಕದಲ್ಲಿರುವ ಅಂಚೆ ಕಚೇರಿಯಲ್ಲಿ 1940 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದ್ರೇ ಯಾವ ಜಿಲ್ಲೆಯಲ್ಲಿ ಎಸ್ಟು ಹುದ್ದೆಗಳು ಖಾಲಿ ಇವೆ ಎನ್ನುವುದನ್ನು ನೋಡುವುದಾದರೆ ಅದರ ವಿವರ ಈ ಕೆಳಕಂಡತಿದೆ. ಈ ಹುದ್ದೆ ಕುರಿತು ಸಂಪೂರ್ಣ ವಿವರಣೆ, ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ಜಾಲತಾಣವಾದ karnatakapost.gov.inಗೆ ಭೇಟಿ ನೀಡಬಹುದಾಗಿದೆ. ಖಾಲಿ ಹುದ್ದೆಗಳ ಸಂಖ್ಯೆ ಹೀಗಿದೆ 1 ಕಾಯ್ದಿರಿಸದ (UR) 827 2 ಇತರ ಹಿಂದುಳಿದ ಜಾತಿ (ಒಬಿಸಿ) 446 3 ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲ್ಯೂಎಸ್) 230 4 ಪರಿಶಿಷ್ಟ ಜಾತಿ (ಎಸ್ಸಿ) 264 5 ಪರಿಶಿಷ್ಟ ಪಂಗಡ (ಎಸ್ಟಿ)…
ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕನ್ವರ್ ಯಾತ್ರಾ ಮಾರ್ಗದಲ್ಲಿನ ಎಲ್ಲಾ ಹೋಟೆಲ್ಗಳ ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವಂತೆ ಶುಕ್ರವಾರ ಆದೇಶಿಸಿದ್ದಾರೆ. ಮುಜಾಫರ್ ನಗರದ ಉತ್ತರ ಪ್ರದೇಶದ ಪೊಲೀಸರು ತನ್ನ ಆದೇಶಗಳನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ, ವಿರೋಧ ಪಕ್ಷಗಳ ವಿರೋಧದ ನಂತರ ತಿನಿಸುಗಳು ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವುದು “ಸ್ವಯಂಪ್ರೇರಿತ” ಎಂದು ಹೇಳಿದೆ. ಮುಜಾಫರ್ ನಗರ ಪೊಲೀಸರು ಇಡೀ ಜಿಲ್ಲೆಗೆ ಆದೇಶಿಸಿದ ಒಂದು ದಿನದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಅನೇಕ ವಿರೋಧ ಪಕ್ಷಗಳು ತಮ್ಮ ಸೂಚನೆಗಳನ್ನು ಹಿಂತೆಗೆದುಕೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದವು. ಧಾರ್ಮಿಕ ಯಾತ್ರಾರ್ಥಿಗಳ ಪಾಲನ್ನು ಮತ್ತು ಪಾವಿತ್ರ್ಯವನ್ನು ರಕ್ಷಿಸುವ ಅಗತ್ಯದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಗಮನಿಸಿದರು. ಈಗ, ರೆಸ್ಟೋರೆಂಟ್, ರಸ್ತೆಬದಿಯ ಧಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಉಪಾಹಾರ ಗೃಹವು ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸಬೇಕಾಗುತ್ತದೆ.
ಬೆಂಗಳೂರು: 01-04-2018 ರಿಂದ 31-03-2020 ರಾ ಅವಧಿಯಲ್ಲಿ ಚಾಲ್ತಿಯಲ್ಲಿರುವ ಪಾಲಿಸಿಗಳಿಗೆ ಸರಳ ಪ್ರತ್ಯಾವರ್ತಿ ಲಾಭಾಂಶ ನೀಡುವ ಬಗ್ಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ಸುತ್ತೋಲೆಯಲ್ಲಿ ಈ ಕೆಳಕಂಡ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಆಇ 09 ಕವಿಇ 2024, ಬೆಂಗಳೂರು, ದಿನಾಂಕ:11-07-2024. ಕರ್ನಾಟಕ ಸರ್ಕಾರವು ಉಲ್ಲೇಖ (1) ರ ನಿರ್ದೇಶನಾಲಯದ ಪುಸ್ತಾವನೆ ಮತ್ತು ವಿಮಾ ಗಣಕರ ವಿಮಾ ಮೌಲ್ಯಮಾಪನ ವರದಿಯನ್ನು ಪರಿಶೀಲಿಸಿ, ಅಂಗೀಕರಿಸಿದ ನಂತರ ದಿನಾಂಕ: 01-04-2018 ರಿಂದ 31-03-2020 ರ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ವಿಮಾ ಪಾಲಿಸಿಗಳಿಗೆ ಸರಳ ಪ್ರತ್ಯಾವರ್ತಿ ಲಾಭಾಂಶ ಮತ್ತು 01-04-2020 ರಿಂದ 31-03-2022 ರವರೆಗಿನ ಅವಧಿಯಲ್ಲಿ ವಿವಿಧ ಹಕ್ಕುಗಳ ರೂಪದಲ್ಲಿ ಹೊರ ಹೋಗಿರುವ ಪಾಲಿಸಿಗಳಿಗೆ ಮಧ್ಯಕಾಲೀನ ಅವಧಿಗೆ ಲಾಭಾಂಶವನ್ನು ಉಲ್ಲೇಖ (2) ರ ಆದೇಶದಲ್ಲಿ ಘೋಷಿಸಿ, ಮಂಜೂರು ಮಾಡಲಾಗಿದ್ದು, ವಿವರವನ್ನು ಈ ಕೆಳಕಂಡಂತೆ ನೀಡಲಾಗಿದೆ. 1) ದಿನಾಂಕ: 01.04.2018 ರಿಂದ 31.03.2020 ರ ದೈವಾರ್ಷಿಕ ಮೌಲ್ಯಮಾಪನ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ಹಾಗೂ ಚಾಲ್ತಿಯಲ್ಲಿದ್ದ…
ಬೆಂಗಳೂರು: ರಾಜ್ಯದಲ್ಲಿ ಒಟ್ಟು 69,919 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ 30 ವರ್ಷ ಮೇಲ್ಪಟ್ಟ ಅಂಗನವಾಡಿ ಕಟ್ಟಡಗಳ ವಿವರಗಳನ್ನು ಪಡೆಯಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಆಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಥಿಲಗೊಂಡ ಅಂಗನವಾಡಿ ಕಟ್ಟಡಗಳ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ ಈವರೆಗೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂದೆಯು ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು. ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸಲು ಹಾಗೂ ಸದೃಢರಾಗಲು ಮೊಟ್ಟೆ ಹಾಗೂ ಗುಣಮಟ್ಟz ಆಹಾರ ಒದಗಿಸಲಾಗುತ್ತಿದೆ. ನಾನು ಸಹ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ. ಏನಾದರೂ ಲೋಪ – ದೋಷವಿದ್ದಲ್ಲಿ ಅದರ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು
ಬೆಂಗಳೂರು: ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸುವ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಆಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್. ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಂತಿ ಬೇಲಿ ಅಳವಡಿಸಲು ಸರ್ಕಾರದಿಂದ ಶೇ.40 ರಿಂದ ಶೇ. 50ರ ವರೆಗೆ ಸಬ್ಸಿಡಿ ನೀಡಲಾಗುತ್ತಿದೆ ಎಂದರು. ಕಳೆದ ಮೂರು ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ 6,601 ಕೃಷಿ ಹೊಂಡಗಳನ್ನು ನಿರ್ಮಿಸಲು ರೂ.2,332.75 ಲಕ್ಷ ವೆಚ್ಚ ಭರಿಸಲಾಗಿದೆ. ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕಳೆದ ಮೂರು ವರ್ಷಗಳಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಹಾಗೂ ಇತರೆ ಉಪಚಾರಗಳು ಯೋಜನೆಯಡಿ ರೂ. 1297.82 ಲಕ್ಷಗಳ ವೆಚ್ಚದಲ್ಲಿ 3,768 ಕೃಷಿ ಹೊಂಡಗಳು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರೂ. 18874.96 ಲಕ್ಷಗಳ ವೆಚ್ಚದಲ್ಲಿ 23,317 ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿದೆ ಎಂದರು ಕೃಷಿ ಇಲಾಖೆಯ 2023-24ನೇ ಸಾಲಿನ ಕೃಷಿ…