Subscribe to Updates
Get the latest creative news from FooBar about art, design and business.
Author: ಅವಿನಾಶ್ ಆರ್ ಭೀಮಸಂದ್ರ
ಅವಿನಾಶ್ ಆರ್ ಭೀಮಸಂದ್ರ ಪರಿಚಯ: ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 15 ವರ್ಷಗಳ ಅನುಭವ, ತನಿಖಾ ಪತ್ರಿಕೋದ್ಯಮ, ಅಪರಾಧ ವರದಿಗಾರಿಕೆ ಇವರ ಪ್ರಮುಖ ಆಸಕ್ತಿ ವಿಭಾಗ. ಊರು ಕಲ್ಪತರು ನಾಡು ತುಮಕೂರು ಜಿಲ್ಲೆಯ ಇವರು ಓದಿದ್ದು ಪದವಿಯಲ್ಲಿ ಪತ್ರಿಕೋದ್ಯಮ, ಐಚ್ಚಿಕ ಕನ್ನಡ, ಮನೋವಿಜ್ಞಾನ, ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ. ಕಸ್ತೂರಿ ನ್ಯೂಸ್. ವಿಜಯವಾಣಿ, ಪ್ರಜಾಪ್ರಗತಿ, ಪ್ರಗತಿ ಟಿವಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಕನ್ನಡಿಗರ ಮನೆಮಾತಾಗಿರುವ ಕನ್ನಡ ನ್ಯೂಸ್ನೌ.ಕಾಂ ಡಿಜಿಟಲ್ ಮೀಡಿಯಾದ ಸಂಸ್ಥಾಪಕ ಸಂಪಾದಕರು ಕೂಡ ಹೌದು.
ಕೆಎನ್ಎನ್ಡಿಜಿಟಲ್ಡೆಸ್ಕ್:ಇದುವರೆಗೂ ಭಿನ್ನ ಪಥದ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವವರು ಅಶೋಕ್ ಕಡಬ. ಇದೀಗ ಅವರು `ಸತ್ಯಂ’ ಚಿತ್ರದ ಮೂಲಕ ಮತ್ತೊಂದು ಜಾಡಿನತ್ತ ಹೊರಳಿಕೊಂಡಿರುವ ಸ್ಪಷ್ಟ ಸೂಚನೆಯೊಂದು ಸಿಕ್ಕಿಬಿಟ್ಟಿದೆ. ಈ ಹಿಂದೆ ಸತ್ಯಂ ಟೀಸರ್ ಬಿಕಡುಗಡೆಯಾದಾಗಲೇ ಅದು ಸ್ಪಷ್ಟವಾಗಿತ್ತು. ಆ ಟೀಸರ್ಗೆ ಮಿಲಿಯನ್ನುಗಟ್ಟಲೆ ವೀಕ್ಷಣೆಗಳು ಸಿಕ್ಕಿ, ಎಲ್ಲ ಕಡೆಗಳಿಂದಲೂ ಮೆಚ್ಚುಗೆಗಳೂ ಮೂಡಿಕೊಂಡಿದ್ದವು. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿರುವ ಸತ್ಯಂ ಸೆನ್ಸಾರ್ ಸರ್ಟಿಫಿಕೇಟ್ ಪಡೆದುಕೊಂಡಿದೆ. ಈ ವಿಚಾರವನ್ನು ನಿರ್ಮಾಪಕರಾದ ಮಹಾಂತೇಶ್ ವಿ.ಕೆ ಹಂಚಿಕೊಂಡಿದ್ದಾರೆ. ಯು\ಎ ಸರ್ಟಿಫಿಕೇಟಿನೊಂದಿಗೆ, ಸೆನ್ಸಾರ್ ಅಧಿಕಾರಿಗಳ ತುಂಬು ಮೆಚ್ಚುಗೆಯೂ ಎದುರುಗೊಂಡಿರೋದರಿಂದ ಚಿತ್ರತಂಡ ಖುಷಿಗೊಂಡಿದೆ. ಇದು ಗಣಪ ನಂತರ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಚಿತ್ರ. ಕನ್ನಡತಿ ಖ್ಯಾತಿಯ ರಂಜಿನಿ ರಾಘವನ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಈ ಹಿಂದೆ ರಂಗಿತರಂಗ, ಕಾಂತಾರ ಚಿತ್ರಗಳಲ್ಲಿ ತುಳುನಾಡಿನ ದೈವಾರಾಧನೆಯ ಕಥೆಯಿತ್ತು. ಆ ಎರ್ಡು ಸಿನಿಮಾಗಳ ದೊಡ್ಡ ಮಟ್ಟದ ಗೆಲುವಿನ ಶಕ್ತಿಯೂ ಅದೇ. ಅಂಥಾದ್ದೊಂದು ನೆಲದ ಘಮಲಿನ ಕಥೆಯನ್ನೊಳಗೊಂಡಿರುವ ಚಿತ್ರ `ಸತ್ಯಂ’. ಹಾಗೆಂದ ಮಾತ್ರಕ್ಕೆ ಇದು ಆ…
ಜಮ್ಮು-ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಎರಡು ವಾಹನಗಳ ಮೇಲೆ ಉಗ್ರರು ಭಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಂದ್ಹಾಗೆ, ಕಳೆದ ವರ್ಷ ಸೇನೆಯ ಮೇಲೆ ಸರಣಿ ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾದ ಈ ಪ್ರದೇಶದಲ್ಲಿ ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ. https://twitter.com/PTI_News/status/1786758358000599126 https://kannadanewsnow.com/kannada/4-air-force-personnel-injured-as-terrorists-attack-vehicles-in-jks-poonch/ https://kannadanewsnow.com/kannada/chant-this-mantra-21-times-for-excellence-in-your-art/ https://kannadanewsnow.com/kannada/chant-this-mantra-21-times-for-excellence-in-your-art/
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನೇ ಗೆದ್ದ ಹಾಗೆ ಎಂದು ಸಿ.ಎಂ.ಸಿದ್ದರಾಮಯ್ಯ ಘೋಷಿಸಿದರು. ದಾವಣಗೆರೆಯಲ್ಲಿ ನಡೆದ ಪ್ರಜಾಧ್ವನಿ ಜನಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು. ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ ಎಂದರು. ಇಂಥಾ ಬಿಜೆಪಿಗೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಸ್ಪರ್ಧಿಸುತ್ತಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ವಿನಯ್ ಗೆ ಓಟು ಹಾಕಿದರೆ,ಬಿಜೆಪಿಗೆ ಓಟು ಹಾಕಿದಂತೆ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೀವುಗಳು ಹಾಕುವ ಪ್ರತೀ ಓಟು ನನಗೇ ಹಾಕಿದಂತೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಕಣದಲ್ಲಿ ಇದ್ದೇನೆ ಎಂದುಕೊಂಡು ಮತ ಹಾಕಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ ಎಂದು ಕರೆ ನೀಡಿದರು. 15 ಲಕ್ಷ ರೂಪಾಯಿ ಪ್ರತಿಯೊಬ್ಬ ಭಾರತೀಯರ ಖಾತೆಗೆ ಹಾಕ್ತೀನಿ ಎಂದು ನಂಬಿಸಿದ ಮೋದಿ ಈ ಹತ್ತು ವರ್ಷದಲ್ಲಿ…
ಕೆಎನ್ಎನ್ಡಿಜಿಟಲ್ ಡೆಸ್ಕ್ : ನಾಯಿಗಳು ತಮಗೆ ಆಹಾರ ನೀಡುವವರಿಗೆ ಅಪಾರ ಸಂತೋಷ ಮತ್ತು ಕೃತಜ್ಞತೆಯನ್ನ ವ್ಯಕ್ತಪಡಿಸುತ್ತವೆ. ರೈಲು ನಿಲ್ದಾಣದ ಈ ವೀಡಿಯೊ ಮತ್ತೊಮ್ಮೆ ಅದನ್ನ ಸಾಬೀತುಪಡಿಸಿದೆ. ದಿನಾಂಕವಿಲ್ಲದ ವೀಡಿಯೊದಲ್ಲಿ ಬೀದಿ ನಾಯಿ ರೈಲಿನ ಆಗಮನವನ್ನ ಕುತೂಹಲದಿಂದ ನಿರೀಕ್ಷಿಸುತ್ತಿರುವುದನ್ನ ತೋರಿಸುತ್ತದೆ. ರೈಲು ನಿಲ್ದಾಣವನ್ನ ಸಮೀಪಿಸುತ್ತಿರುವುದನ್ನ ನೋಡುತ್ತಿದ್ದಂತೆ, ನಾಯಿ ಓಡಲು ಪ್ರಾರಂಭಿಸುತ್ತದೆ ಮತ್ತು ರೈಲು ನಿಲ್ಲುವವರೆಗೂ ನಿಲ್ಲುವುದಿಲ್ಲ. ಚಾಲಕ ಕುಳಿತುಕೊಳ್ಳುವ ರೈಲಿನ ಎಂಜಿನ್ ಕ್ಯಾರೇಜ್’ನೊಂದಿಗೆ ನಾಯಿ ವೇಗವಾಗಿ ಓಡುತ್ತೆ. ಈ ವೀಡಿಯೊವನ್ನ ಎಂಜಿನ್ ಗಾಡಿಯಲ್ಲಿದ್ದ ಯಾರೋ ತೆಗೆದಿದ್ದಾರೆ. ಈ ವೀಡಿಯೋವನ್ನ ಹಂಚಿಕೊಂಡ ಎಕ್ಸ್ ಬಳಕೆದಾರ, ರೈಲಿನ ಚಾಲಕ ಮತ್ತು ಎಂಜಿನಿಯರ್ ನಿಯಮಿತವಾಗಿ ಆಹಾರವನ್ನ ನೀಡಿದ್ದರಿಂದ ನಾಯಿ ಬರುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ಎಕ್ಸ್ ಬಳಕೆದಾರರು, “ರೈಲು ಚಾಲಕ ನಿಲ್ದಾಣದಲ್ಲಿ ಈ ನಾಯಿಗೆ ಆಹಾರವನ್ನ ನೀಡಿದರು. ನಾಯಿಗೆ ರೈಲು ನೆನಪಾಯಿತು ಮತ್ತು ಎಂಜಿನಿಯರ್ ನಿಯಮಿತವಾಗಿ ಆಹಾರವನ್ನ ತಂದರು. ಇವ್ರ ಸಂತೋಷವನ್ನ ನೋಡುವುದು ಯೋಗ್ಯವಾಗಿದೆ. ಯಾರಾದರೂ ಪ್ರತಿಯೊಬ್ಬ ಜೀವಿಯನ್ನ ಸಂತೋಷಪಡಿಸಲು ಸಾಧ್ಯವಿಲ್ಲ, ಆದರೆ ದಯೆ ಯಾವಾಗಲೂ ಸಂತೋಷವನ್ನ ನೀಡುತ್ತದೆ”…
ನವದೆಹಲಿ : ಕಾಂಗ್ರೆಸ್ ಮುಖಂಡ ಮತ್ತು ಇತ್ತೀಚೆಗೆ ರಾಯ್ಬರೇಲಿಯಿಂದ ನಾಮನಿರ್ದೇಶನಗೊಂಡ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಗುಜರಾತ್ನ ದ್ವಾರಕಾಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯನ್ನ ‘ನಾಟಕ’ ಎಂದು ಕರೆದ ನಂತ್ರ, ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರನ್ನ ತರಾಟೆಗೆ ತೆಗೆದುಕೊಂಡರು, “ಅವರು (ಕಾಂಗ್ರೆಸ್) ಕೇವಲ ಮುಸ್ಲಿಂ ಲೀಗ್ ಪ್ರಣಾಳಿಕೆಯನ್ನ ಹೊರತಂದಿಲ್ಲ. ಆದ್ರೆ ಅವರ ಅಭಿವ್ಯಕ್ತಿಯು ಮುಸ್ಲಿಂ ಲೀಗ್ನಂತೆಯೇ ಇದೆ. ಅವರ ಅಭಿವ್ಯಕ್ತಿಯಲ್ಲಿ ಹಿಂದೂ ವಿರೋಧಿ ದ್ವೇಷ ಈಗ ಸ್ಪಷ್ಟವಾಗಿದೆ ಎಂದಿದೆ. ಪ್ರಧಾನಿ ದ್ವಾರಕಾ ಭೇಟಿಯ ಬಗ್ಗೆ ಮಾತನಾಡಿದ ಶೆಹಜಾದ್ ಪೂನಾವಾಲಾ, “ಕಾಂಗ್ರೆಸ್’ನ ಹಿಂದೂ ವಿರೋಧಿ ಮುಖ ಬಯಲಾಗಿದೆ. ಒಂದೆಡೆ, ಕೃಷ್ಣ ಭಕ್ತರಾದ ಪ್ರಧಾನಿ ದ್ವಾರಕಾಕ್ಕೆ ಹೋಗಿ ಸಮುದ್ರದ ಕೆಳಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಮತ್ತೊಂದೆಡೆ, ರಾಹುಲ್ ಗಾಂಧಿ ಇದನ್ನ ಅಪಹಾಸ್ಯ ಮಾಡುತ್ತಾರೆ ಮತ್ತು ಇದನ್ನು ನಾಟಕ ಎಂದು ಕರೆಯುತ್ತಾರೆ” ಎಂದು ಜರಿದಿದ್ದಾರೆ. https://twitter.com/ANI/status/1786622361342558499?ref_src=twsrc%5Etfw%7Ctwcamp%5Etweetembed%7Ctwterm%5E1786622361342558499%7Ctwgr%5Eeec764df2371875f1b149d3f63191a7f6cf4a7b6%7Ctwcon%5Es1_&ref_url=https%3A%2F%2Fnews.abplive.com%2Felections%2Frahul-gandhi-calls-pm-modi-dwarka-underwater-dive-drama-bjp-reacts-video-1684988 ರಾಹುಲ್ ಗಾಂಧಿ ಅವರ ಹೇಳಿಕೆಯ ಬಗ್ಗೆ ಅಖಿಲೇಶ್ ಯಾದವ್ ಮತ್ತು ತೇಜಸ್ವಿ ಯಾದವ್ ಅವರ ಮೌನವನ್ನ…
*ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ವಸಂತ್ ಈಶ್ವರ್ಗೆರೆ ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣನವರನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ. ಇದರ ಬೆನ್ನಲೇ ಎಸ್ಐಟಿ ಅಧಿಕಾರಿಗಳು ರೇವಣ್ಣವರನ್ನು ಹುಡುಕಾಟ ಮಾಡುವುದಕ್ಕೆ ಮುಂದಾಗಿದ್ದರು. ಇದಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿದ್ದರು, ಇದಲ್ಲದೇ ಬಳಿಕ ಅವರನ್ನು ರೇವಣ್ಣನವರನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ. ಇಂದು ಏನೆಲ್ಲ ಆಗಿತ್ತು? ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ನಿನ್ನೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ಇಂದಿಗೆ ಮುಖ್ಯ…
ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣನವರನ್ನು ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ ಮಾಡಲಾಗಿದೆ. ಇದರ ಬೆನ್ನಲೇ ಎಸ್ಐಟಿ ಅಧಿಕಾರಿಗಳು ರೇವಣ್ಣವರನ್ನು ಹುಡುಕಾಟ ಮಾಡುವುದಕ್ಕೆ ಮುಂದಾಗಿದ್ದರು. ಇದಲ್ಲದೇ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿದ್ದರು, ಇದಲ್ಲದೇ ಬಳಿಕ ಅವರನ್ನು ರೇವಣ್ಣನವರನ್ನು ಬಂಧನ ಮಾಡಲಾಗಿದೆ ಎನ್ನಲಾಗಿದೆ. ಇಂದು ಏನೆಲ್ಲ ಆಗಿತ್ತು? ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದ್ದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ನಿನ್ನೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ವಾದ ಆಲಿಸಿದಂತ ನ್ಯಾಯಪೀಠವು, ಈ ಪ್ರಕರಣವೂ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಪ್ರಕರಣವೇ ಆಗಿರುವುದರಿಂದ ಇಂದಿಗೆ ಮುಖ್ಯ ಪ್ರಕರಣದ ಮೇಲೆಯೇ ಸಂಪೂರ್ಣ ವಾದ ಆಲಿಸಿ, ನಂತ್ರ…
ಬೆಂಗಳೂರು: ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರ ಮಾಜಿ ಮನೆ ಸಹಾಯಕನ ತೋಟದ ಮನೆಯಲ್ಲಿ ಅಪಹರಣಕ್ಕೊಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿ ನ್ಯಾಯಾಲಯ ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ನಲ್ಲಿ ಕಾಣಿಸಿಕೊಂಡಿರುವ ಅನೇಕ ಮಹಿಳೆಯರಲ್ಲಿ ಒಬ್ಬರಾದ ತಮ್ಮ ತಾಯಿಯನ್ನು ರೇವಣ್ಣ ಅವರ ಸಹಚರರು ಅಪಹರಿಸಿದ್ದಾರೆ ಎಂದು ಆರೋಪಿಸಿ 20 ವರ್ಷದ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ ನಂತರ ಗುರುವಾರ ಅವರ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು
ಬೆಂಗಳೂರು: ಹಾಸನ ಸಂಸದ ಪ್ರಜ್ಬಲ್ ರೇವಣ್ಣ ವಿರುದ್ದ ಎಸ್ಐಟಿ ತಂಡ ತನಿಖೆಯನ್ನು ಭರದಿಂದ ನಡೆಸ್ತಿದೆ. ಈ ನಡುವೆ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನು ಇಂದು ನೀಡಿದೆ. ಇನ್ನೂ ಯಾವುದೇ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗ ರೇವಣ್ಣ ವಿಚಾರಣೆಗೆ ಹಾಜರಾಗದೇ ಇದ್ದರೇ ಎಸ್ಐಟಿ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಳ್ಳಬಹುದಾಗಿದೆ ಎನ್ನಲಾಗಿದೆ. ಅರ್ಜಿ ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿ, ಪೊಲೀಸರು ಬಂಧಿಸುವ ಸಾಧ್ಯತೆ ಇದ್ದು, ಅವರನ್ನು ಬಂಧಿಸಿದಂತೆ ಮನವಿ ಮಾಡಿ ತನಿಖೆಗೆ ರೇವಣ್ಣ ಸಹಕರಿಸುವುದಾಗಿ ತಿಳಿಸಿದ್ದರು. ಈ ನಡುವೆ ಎಸ್ ಪಿಸಿ ಜಗದೀಶ್ ಅವರು ಕೂಡ ನ್ಯಾಯಾಧೀಶರ ಮುಂದೆ ರೀಕ್ಷಣಾ ಜಾಮೀನು ನೀಡಬಾರದು ಇದು ಗಂಭೀರವಾದ ಪ್ರಕರಣ. ಬಂಧನ ಮಾಡಿ ತನಿಖೆ ಮಾಡುವ ಅವಶ್ಯಕತೆ ಇರುವುದನ್ನು…
ಬೆಂಗಳೂರು: ಹಾಸನ ಸಂಸದ ಪ್ರಜ್ಬಲ್ ರೇವಣ್ಣ ವಿರುದ್ದ ಎಸ್ಐಟಿ ತಂಡ ತನಿಖೆಯನ್ನು ಭರದಿಂದ ನಡೆಸ್ತಿದೆ. ಈ ನಡುವೆ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶವನ್ನು ಇಂದು ನೀಡಿದೆ. ಅರ್ಜಿ ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿ, ಪೊಲೀಸರು ಬಂಧಿಸುವ ಸಾಧ್ಯತೆ ಇದ್ದು, ಅವರನ್ನು ಬಂಧಿಸಿದಂತೆ ಮನವಿ ಮಾಡಿ ತನಿಖೆಗೆ ರೇವಣ್ಣ ಸಹಕರಿಸುವುದಾಗಿ ತಿಳಿಸಿದ್ದರು. ಈ ನಡುವೆ ಎಸ್ ಪಿಸಿ ಜಗದೀಶ್ ಅವರು ಕೂಡ ನ್ಯಾಯಾಧೀಶರ ಮುಂದೆ ರೀಕ್ಷಣಾ ಜಾಮೀನು ನೀಡಬಾರದು ಇದು ಗಂಭೀರವಾದ ಪ್ರಕರಣ. ಬಂಧನ ಮಾಡಿ ತನಿಖೆ ಮಾಡುವ ಅವಶ್ಯಕತೆ ಇರುವುದನ್ನು ನ್ಯಾಯಾಧೀಶರ ಗಮನಕ್ಕೆತಂದಿದ್ದರು.ಈ ನಡುವೆ ದ ಪ್ರತಿ ವಾದ ಆಲಿಸಿ ನ್ಯಾಯಾಧೀಶ ತೀರ್ಪುನ್ನು ಕಾಯ್ದಿರಿಸಿದ್ದರು, ಅದರಂತೆ ಈಗ ನ್ಯಾಯಾಲಯವು ಆದೇಶವನ್ನು ನೀಡಿದ್ದು, ಅದರಂತೆ ರೇವಣ್ಣ ‘ನಿರೀಕ್ಷಣಾ ಜಾಮೀನು’ ಅರ್ಜಿ ವಜಾ…








