Subscribe to Updates
Get the latest creative news from FooBar about art, design and business.
Author: kannadanewsnow07
ರಬಕವಿ-ಬನಹಟ್ಟಿ: 12 ಕಾಲ್ಬೆರಳುಗಳು ಮತ್ತು 13 ಕೈ ಬೆರಳುಗಳ ನವಜಾತ ಶಿಶುವೊಂದು ಜನಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಸನ್ಶೈನ್ ಮಲ್ಪಿಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಮಗುವಿಗೆ ಬಲಗೈಗೆ 6, ಎಡಗೈಗೆ 7 ಮತ್ತು ಪ್ರತಿ ಕಾಲಿನಲ್ಲಿ 6 ಬೆರಳುಗಳನ್ನು ನೋಡಿ ವೈದ್ಯರು ಹಾಗೂ ಕುಟುಂಬ ವರ್ಗ ಅಚ್ಚರಿಯಾಗಿದೆ. ಮಗುವಿಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಕ್ರೋಮೋಸೋಮ್ ಗಳಿಂದ ಇಂತಹ ಮಗು ಹುಟ್ಟುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಈ ನಡುವೆ ನನ್ನ ಪತ್ನಿ ಪ್ರತಿ ವಾರ ಬೀಳಗಿ ತಾಲೂಕಿನ ಕುಂದರಗಿಯ ಭುವನೇಶ್ವರಿ ದೇವಿಗೆ ತೆರಳಿ ಮಕ್ಕಳಾಗುವಂತೆ ಬೇಡಿಕೊಂಡಿದ್ದಳು. ದೇವಿಯ ಕೃಪಾಶೀರ್ವಾದದಿಂದ ನಮಗೆ ಗಂಡು ಮಗು ಜನಿಸಿದೆ ಎಂದು ತಂದೆ ಗುರಪ್ಪ ಕೊಣ್ಣೂರ ಸಂತಸ ವ್ಯಕ್ತಪಡಿಸಿದ್ದಾರೆ.
Renukaswamy murder case: ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳು ಜೈಲು ಸೇರಿದ್ದಾರೆ. ನಡುವೆ ಚಿತ್ರದುರ್ಗದ ಅಭಿಮಾನಿಗಳ ಸಂಘದ ಅಧ್ಯಕ್ಷ ರಘು ತಾಯಿ ನಿಧನರಾಗಿದ್ದಾರೆ ಎನ್ನಲಾಗಿದೆ. ಕಳೆದ ಒಂದು ವರ್ಷದಿಂದ ರಘು ತಾಯಿ ಮಂಜುಳಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇಂದು ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎನ್ನಲಾಗಿದೆ.ಚಿತ್ರದುರ್ಗದ ಅಭಿಮಾನಿಗಳ ಸಂಘದ ಅಧ್ಯಕ್ಷ ರಘು, 15 ವರ್ಷಗಳಿಂದ ದರ್ಶನ್ ಅಭಿಮಾನಿಯಾಗಿದ್ದು, ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ರಘೂ ಜೈಲುಪಾಲಾಗಿದ್ದಾನೆ.ಇನ್ನು ತಮ್ಮ ತಾಯಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಕ್ಕೆ ಇಂದು ನ್ಯಾಯಾಲಯದಲ್ಲಿ ರಘು ಪರ ವಕೀಲರ ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ನ್ಯಾಯಾಲಯದಿಂದ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಕ್ಕೆ ಅವಕಾಶ ಸಿಕ್ಕರೆ ಆರೋಪಿ ರಘು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾನೆ.
ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ) ಹುದ್ದೆಗಳ ನೇಮಕಾತಿ ನಡೆಯಲಿದ್ದು, ಈ ನಡುವೆ ಕರ್ನಾಟಕದಲ್ಲಿರುವ ಅಂಚೆ ಕಚೇರಿಯಲ್ಲಿ 1940 ಡಾಕ್ ಸೇವಕ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾದ್ರೇ ಯಾವ ಜಿಲ್ಲೆಯಲ್ಲಿ ಎಸ್ಟು ಹುದ್ದೆಗಳು ಖಾಲಿ ಇವೆ ಎನ್ನುವುದನ್ನು ನೋಡುವುದಾದರೆ ಅದರ ವಿವರ ಈ ಕೆಳಕಂಡತಿದೆ. ಈ ಹುದ್ದೆ ಕುರಿತು ಸಂಪೂರ್ಣ ವಿವರಣೆ, ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ಜಾಲತಾಣವಾದ karnatakapost.gov.inಗೆ ಭೇಟಿ ನೀಡಬಹುದಾಗಿದೆ. ಖಾಲಿ ಹುದ್ದೆಗಳ ಸಂಖ್ಯೆ ಹೀಗಿದೆ 1 ಕಾಯ್ದಿರಿಸದ (UR) 827 2 ಇತರ ಹಿಂದುಳಿದ ಜಾತಿ (ಒಬಿಸಿ) 446 3 ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲ್ಯೂಎಸ್) 230 4 ಪರಿಶಿಷ್ಟ ಜಾತಿ (ಎಸ್ಸಿ) 264 5 ಪರಿಶಿಷ್ಟ ಪಂಗಡ (ಎಸ್ಟಿ)…
ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕನ್ವರ್ ಯಾತ್ರಾ ಮಾರ್ಗದಲ್ಲಿನ ಎಲ್ಲಾ ಹೋಟೆಲ್ಗಳ ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವಂತೆ ಶುಕ್ರವಾರ ಆದೇಶಿಸಿದ್ದಾರೆ. ಮುಜಾಫರ್ ನಗರದ ಉತ್ತರ ಪ್ರದೇಶದ ಪೊಲೀಸರು ತನ್ನ ಆದೇಶಗಳನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ, ವಿರೋಧ ಪಕ್ಷಗಳ ವಿರೋಧದ ನಂತರ ತಿನಿಸುಗಳು ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವುದು “ಸ್ವಯಂಪ್ರೇರಿತ” ಎಂದು ಹೇಳಿದೆ. ಮುಜಾಫರ್ ನಗರ ಪೊಲೀಸರು ಇಡೀ ಜಿಲ್ಲೆಗೆ ಆದೇಶಿಸಿದ ಒಂದು ದಿನದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಅನೇಕ ವಿರೋಧ ಪಕ್ಷಗಳು ತಮ್ಮ ಸೂಚನೆಗಳನ್ನು ಹಿಂತೆಗೆದುಕೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದವು. ಧಾರ್ಮಿಕ ಯಾತ್ರಾರ್ಥಿಗಳ ಪಾಲನ್ನು ಮತ್ತು ಪಾವಿತ್ರ್ಯವನ್ನು ರಕ್ಷಿಸುವ ಅಗತ್ಯದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ಗಮನಿಸಿದರು. ಈಗ, ರೆಸ್ಟೋರೆಂಟ್, ರಸ್ತೆಬದಿಯ ಧಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಉಪಾಹಾರ ಗೃಹವು ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸಬೇಕಾಗುತ್ತದೆ.
ಬೆಂಗಳೂರು: 01-04-2018 ರಿಂದ 31-03-2020 ರಾ ಅವಧಿಯಲ್ಲಿ ಚಾಲ್ತಿಯಲ್ಲಿರುವ ಪಾಲಿಸಿಗಳಿಗೆ ಸರಳ ಪ್ರತ್ಯಾವರ್ತಿ ಲಾಭಾಂಶ ನೀಡುವ ಬಗ್ಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ಸುತ್ತೋಲೆಯಲ್ಲಿ ಈ ಕೆಳಕಂಡ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಆಇ 09 ಕವಿಇ 2024, ಬೆಂಗಳೂರು, ದಿನಾಂಕ:11-07-2024. ಕರ್ನಾಟಕ ಸರ್ಕಾರವು ಉಲ್ಲೇಖ (1) ರ ನಿರ್ದೇಶನಾಲಯದ ಪುಸ್ತಾವನೆ ಮತ್ತು ವಿಮಾ ಗಣಕರ ವಿಮಾ ಮೌಲ್ಯಮಾಪನ ವರದಿಯನ್ನು ಪರಿಶೀಲಿಸಿ, ಅಂಗೀಕರಿಸಿದ ನಂತರ ದಿನಾಂಕ: 01-04-2018 ರಿಂದ 31-03-2020 ರ ದೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ವಿಮಾ ಪಾಲಿಸಿಗಳಿಗೆ ಸರಳ ಪ್ರತ್ಯಾವರ್ತಿ ಲಾಭಾಂಶ ಮತ್ತು 01-04-2020 ರಿಂದ 31-03-2022 ರವರೆಗಿನ ಅವಧಿಯಲ್ಲಿ ವಿವಿಧ ಹಕ್ಕುಗಳ ರೂಪದಲ್ಲಿ ಹೊರ ಹೋಗಿರುವ ಪಾಲಿಸಿಗಳಿಗೆ ಮಧ್ಯಕಾಲೀನ ಅವಧಿಗೆ ಲಾಭಾಂಶವನ್ನು ಉಲ್ಲೇಖ (2) ರ ಆದೇಶದಲ್ಲಿ ಘೋಷಿಸಿ, ಮಂಜೂರು ಮಾಡಲಾಗಿದ್ದು, ವಿವರವನ್ನು ಈ ಕೆಳಕಂಡಂತೆ ನೀಡಲಾಗಿದೆ. 1) ದಿನಾಂಕ: 01.04.2018 ರಿಂದ 31.03.2020 ರ ದೈವಾರ್ಷಿಕ ಮೌಲ್ಯಮಾಪನ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ಹಾಗೂ ಚಾಲ್ತಿಯಲ್ಲಿದ್ದ…
ಬೆಂಗಳೂರು: ರಾಜ್ಯದಲ್ಲಿ ಒಟ್ಟು 69,919 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ 30 ವರ್ಷ ಮೇಲ್ಪಟ್ಟ ಅಂಗನವಾಡಿ ಕಟ್ಟಡಗಳ ವಿವರಗಳನ್ನು ಪಡೆಯಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಆಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಥಿಲಗೊಂಡ ಅಂಗನವಾಡಿ ಕಟ್ಟಡಗಳ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ ಈವರೆಗೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಂದೆಯು ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು. ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸಲು ಹಾಗೂ ಸದೃಢರಾಗಲು ಮೊಟ್ಟೆ ಹಾಗೂ ಗುಣಮಟ್ಟz ಆಹಾರ ಒದಗಿಸಲಾಗುತ್ತಿದೆ. ನಾನು ಸಹ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ. ಏನಾದರೂ ಲೋಪ – ದೋಷವಿದ್ದಲ್ಲಿ ಅದರ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು
ಬೆಂಗಳೂರು: ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸುವ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಆಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎಸ್. ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಂತಿ ಬೇಲಿ ಅಳವಡಿಸಲು ಸರ್ಕಾರದಿಂದ ಶೇ.40 ರಿಂದ ಶೇ. 50ರ ವರೆಗೆ ಸಬ್ಸಿಡಿ ನೀಡಲಾಗುತ್ತಿದೆ ಎಂದರು. ಕಳೆದ ಮೂರು ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ 6,601 ಕೃಷಿ ಹೊಂಡಗಳನ್ನು ನಿರ್ಮಿಸಲು ರೂ.2,332.75 ಲಕ್ಷ ವೆಚ್ಚ ಭರಿಸಲಾಗಿದೆ. ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕಳೆದ ಮೂರು ವರ್ಷಗಳಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಹಾಗೂ ಇತರೆ ಉಪಚಾರಗಳು ಯೋಜನೆಯಡಿ ರೂ. 1297.82 ಲಕ್ಷಗಳ ವೆಚ್ಚದಲ್ಲಿ 3,768 ಕೃಷಿ ಹೊಂಡಗಳು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರೂ. 18874.96 ಲಕ್ಷಗಳ ವೆಚ್ಚದಲ್ಲಿ 23,317 ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿದೆ ಎಂದರು ಕೃಷಿ ಇಲಾಖೆಯ 2023-24ನೇ ಸಾಲಿನ ಕೃಷಿ…
ನವದೆಹಲಿ: ಕರೋನಾ ಸಮಯದಲ್ಲಿ ಕೇಂದ್ರ ಸರ್ಕಾರವು 2020 ರ ಮಾರ್ಚ್ 26 ರಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಪ್ರಾರಂಭಿಸಿತು. ಕರೋನಾ ಸಾಂಕ್ರಾಮಿಕ ಸಮಯದಲ್ಲಿ, ದೇಶದಲ್ಲಿ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದರು, ಇದರಿಂದಾಗಿ ಕುಟುಂಬಗಳ ಮುಂದೆ ಬಿಕ್ಕಟ್ಟು ಉದ್ಭವಿಸಿತು. ನಂತರ ಸರ್ಕಾರ ಈ ಯೋಜನೆಯನ್ನು ಪ್ರಾರಂಭಿಸಿತು. ಈ ನಡುವೆ ಈ ಯೋಜನೆಯಡಿ, ಸರ್ಕಾರವು ದೇಶದ 81 ಕೋಟಿಗೂ ಹೆಚ್ಚು ಜನರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡುತ್ತಿದೆ. ಈ ಯೋಜನೆಯ ಅವಧಿಯನ್ನು ಈಗ 5 ವರ್ಷಗಳವರೆಗೆ ವಿಸ್ತರಿಸಲಾಗಿದೆ. ಈಗ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಪ್ರಯೋಜನವು 2029 ರವರೆಗೆ ಜನರಿಗೆ ಲಭ್ಯವಿರುತ್ತದೆ. ಈ ಯೋಜನೆಗಾಗಿ ಸರ್ಕಾರವು 5 ವರ್ಷಗಳಲ್ಲಿ 11.80 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತದೆ. ಯೋಜನೆಯ ಮೊದಲ ಮತ್ತು ಎರಡನೇ ಹಂತಗಳನ್ನು ಏಪ್ರಿಲ್ ನಿಂದ ಜೂನ್ 2020 ರವರೆಗೆ ಮತ್ತು ಜುಲೈನಿಂದ ನವೆಂಬರ್ 2020 ರವರೆಗೆ ನಡೆಸಲಾಯಿತು. ಯೋಜನೆಯ ಮೂರನೇ ಹಂತವನ್ನು 2021…
ಶುಕ್ರವಾರವನ್ನು ವಿಶೇಷ ಪೂಜೆಯ ದಿನವೆಂದು ಪರಿಗಣಿಸಲಾಗಿದೆ. ಹಾಗೆಯೇ ಆದಿ ಮಾಸವನ್ನು ಸ್ತ್ರೀ ದೇವತೆಗಳ ಆರಾಧನೆಯ ಮಾಸವೆಂದು ಪರಿಗಣಿಸಲಾಗಿದೆ. ಈ ಚಂದ್ರ ಮತ್ತು ಶುಕ್ರವಾರ ಒಟ್ಟಿಗೆ ಬಂದಾಗ, ಇದು ಅನೇಕ ಅದ್ಭುತ ಶಕ್ತಿಗಳನ್ನು ಹೊಂದಿದೆ. ಆ ದಿನ ನಾವು ಯಾವುದನ್ನು ಪೂಜಿಸುತ್ತೇವೆ ಅಥವಾ ಪ್ರಾರ್ಥಿಸುತ್ತೇವೆಯೋ ಅದು ಕಟ್ಟುನಿಟ್ಟಾಗಿ ನೆರವೇರುತ್ತದೆ ಎಂದು ಹೇಳಲಾಗುತ್ತದೆ. ಆದುದರಿಂದಲೇ ಆದಿ ಮಾಸದಲ್ಲಿ ಇತರ ಶುಭ ಕಾರ್ಯಕ್ರಮಗಳನ್ನು ನಡೆಸದೆ ದೇವರ ಪೂಜೆಯನ್ನು ಮಾಡುತ್ತೇವೆ. ಆ ರೀತಿಯಲ್ಲಿ ಆಡಿ ಶುಕ್ರವಾರದಂದು ತುಳಸಿ ಪೂಜೆಯನ್ನು ಹೇಗೆ ಮಾಡಬೇಕು ಎಂಬುದನ್ನು ಈ ಆಧ್ಯಾತ್ಮಿಕ ಬರಹದಲ್ಲಿ ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ…
*ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು: ಇಂಡಿಯಾ ಪೋಸ್ಟ್ 2024-25ರ ಹಣಕಾಸು ವರ್ಷಕ್ಕೆ ದೇಶಾದ್ಯಂತ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ನೇಮಕಾತಿಯನ್ನು ಪ್ರಾರಂಭಿಸಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ) / ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನೋಂದಣಿಯು 05 ಆಗಸ್ಟ್ 2024 ರಂದು indiapostgdsonline.gov.in ಗಂಟೆಗೆ ಕೊನೆಗೊಳ್ಳುತ್ತದೆ. ಅರ್ಜಿಯನ್ನು ಸಲ್ಲಿಸಿದ ನಂತರ 06 ರಿಂದ 08 ಆಗಸ್ಟ್ 2024 ರವರೆಗೆ ಎಡಿಟ್ಮಾಡಬಹುದಾಗಿದೆ. ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ದೇಶಾದ್ಯಂತ ಒಟ್ಟು 44228 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇಂಡಿಯಾ ಪೋಸ್ಟ್ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಭ್ಯರ್ಥಿಗಳು ಅರ್ಹತೆ, ಆಯ್ಕೆ ಪ್ರಕ್ರಿಯೆ,…