Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ಮಳೆಗಾಲದಲ್ಲಿ ವಾಹನ ಚಲಾಯಿಸುವಾಗ ಅಥವಾ ನಡೆದಾಡುವಾಗ ಸುತ್ತಮುತ್ತಲ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. ಭಾರಿ ಗಾಳಿ – ಮಳೆಯಿಂದ ವಿದ್ಯುತ್ ಕಂಬಗಳು ಅಥವಾ ತಂತಿಗಳು ಬೀಳುವ ಸಂಭವವಿರುತ್ತದೆ. ವಿದ್ಯುತ್ ತಂತಿ / ಕಂಬಗಳು ತುಂಡಾಗಿ ಬಿದ್ದಿರುವುದು ಕಂಡುಬಂದಲ್ಲಿ ಕೂಡಲೇ ಬೆಸ್ಕಾಂನ 24×7 ಸಹಾಯವಾಣಿ 1912ಕ್ಕೆ ಕರೆ ಮಾಡಿ ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಪಯಾರ್ಯ ವಾಟ್ಸ್ ಆಪ್ ಸಂಖ್ಯೆಗಳನ್ನು ನೀಡಲಾಗಿದೆ. ಈ ವಾಟ್ಸ್ಆಪ್ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಾಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿದರೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಬೆಸ್ಕಾಂಗೆ ಸಹಾಯವಾಗಲಿದೆ. ಈ ಮೊಬೈಲ್ ಸಂಖ್ಯೆಗಳು ಅಂದರೆ, 9480816108, 9480816109, 9480816110, 9480816111, 9480816112, 9480816113, 9480816114, 9480816115, 9480816116, 9480816117, 9480816118 ಮತ್ತು 9480816119 ಗಳನ್ನು ಕೇವಲ ಎಸ್ಎಂಎಸ್ ಗಳಿಗೆ ಮಾತ್ರ ಮೀಸಲಿಡಲಾಗಿದೆ. https://twitter.com/NammaBESCOM/status/1787842767344808122 https://twitter.com/NammaBESCOM/status/1787820524443177108
ನವದೆಹಲಿ: ಪೂರೈಕೆ ಸರಪಳಿಗಳನ್ನು ಮುರಿಯಲು ನಿರ್ದಯ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಮಾದಕವಸ್ತು ವಿರೋಧಿ ಸಂಸ್ಥೆಗಳನ್ನು ಪ್ರೇರೇಪಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ (ಜುಲೈ 18) ಭಾರತವು ಒಂದು ಗ್ರಾಂ ಮಾದಕವಸ್ತುಗಳನ್ನು ಸಹ ದೇಶಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ ಅಥವಾ ಯಾವುದೇ ರೀತಿಯಲ್ಲಿ ಮಾದಕವಸ್ತು ವ್ಯಾಪಾರಕ್ಕಾಗಿ ತನ್ನ ಗಡಿಗಳನ್ನು ಬಳಸಲು ಅನುಮತಿಸುವುದಿಲ್ಲ ಎಂದು ಹೇಳಿದರು. ಒಂದು ಗ್ರಾಂ ಮಾದಕವಸ್ತುಗಳು ಸಹ ದೇಶಕ್ಕೆ ಬರಲು ಅಥವಾ ವಿದೇಶಕ್ಕೆ ಕಳ್ಳಸಾಗಣೆ ಮಾಡಲು ಅವಕಾಶ ನೀಡದ ವ್ಯವಸ್ಥೆಯನ್ನು ಭಾರತ ರೂಪಿಸುತ್ತಿದೆ, ಏಕೆಂದರೆ ಪೂರೈಕೆ ಸರಪಳಿಗಳನ್ನು ಮುರಿಯಲು ನಿರ್ದಯ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಮಾದಕವಸ್ತು ವಿರೋಧಿ ಸಂಸ್ಥೆಗಳನ್ನು ಅವರು ಪ್ರೇರೇಪಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎನ್ಸಿಒಆರ್ಡಿ ಅಥವಾ ಮಾದಕವಸ್ತು-ಸಮನ್ವಯ ಕೇಂದ್ರದ 7 ನೇ ಉನ್ನತ ಮಟ್ಟದ ಸಭೆಯಲ್ಲಿ ಅವರು ಕೇಂದ್ರ ಮತ್ತು ರಾಜ್ಯ ಮಾದಕವಸ್ತು ವಿರೋಧಿ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತ ಅವರು ಈ ಬಗ್ಗೆ ತಿಳಿಸಿದರು.
ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಅಸಕ್ತರು ಆನ್ಲೈನ್ ವೆಬ್ಸೈಟ್ ವಿಳಾಸ www.kacdc.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. *ಅರ್ಹತೆ:* ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ” ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆ ಜೋಡಣೆ ಮಾಡಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ). *ಯೋಜನೆಗಳು:* ಸ್ವಯಂ-ಉದ್ಯೋಗ ನೇರ…
ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ,…
ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರು ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಡೆಹರಾಡೂನ್. ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ 01 ಡಿಸೆಂಬರ್ 2024ರಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜುಲೈ 2025ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ದಿನಾಂಕ 01ನೇ ಡಿಸೆಂಬರ್ 2024 ರಂದು ನಡೆಸಲಾಗುವುದು. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-07-2025 ರಂತೆ ಹನ್ನೊಂದುವರೆ ವರ್ಷದಿಂದ ಹದಿಮೂರು ವರ್ಷದೊಳಗಿರುವ (ಅಂದರೆ ದಿನಾಂಕ 02-07-2012 ರಿಂದ 01-01-2014 ರೊಳಗೆ) ಜನಿಸಿರುವ ಬಾಲಕರು ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ ಗುರಿ ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ್ರ ಪಡೆಗೆ…
ಬೆಂಗಳೂರು: ಸಾಂಪ್ರದಾಯಿಕ ಉಡುಗೆ ಪಂಚೆ ಧರಿಸಿದ ಗ್ರಾಮೀಣ ಭಾಗದ ರೈತನಿಗೆ ಜಿ.ಟಿ. ಮಾಲ್ ಪ್ರವೇಶ ನಿರಾಕರಿಸಿದ ಹಾಗೂ ರೈತರಿಗೆ ಅಗೌರವ ತೋರಿಸಿದ ಜಿ.ಟಿ ಮಾಲ್ನ್ನು 7 ದಿವಸಗಳ ಕಾಲ ಮುಚ್ಚಿಸಲು ಈ ಕೂಡಲೇ ಆದೇಶ ಹೊರಡಿಸಲಾಗುವುದೆಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರು ವಿಧಾನಸಭೆಯಲ್ಲಿ ಹೇಳಿದರು. ಜುಲೈ 16, 2024 ರಂದು ಗ್ರಾಮೀಣ ಭಾಗದಿಂದ ಆಗಮಿಸಿದ ಓರ್ವ ರೈತರನ್ನು ಬೆಂಗಳೂರಿನಲ್ಲಿ ವಾಸವಾಗಿರುವ ಅವರ ಮಗ ಮಾಲ್ಗೆ ಕರೆದುಕೊಂಡು ಹೋದಾಗ ಸಾಂಪ್ರದಾಯಿಕ ಉಡುಗೆ ಪಂಚೆಯನ್ನು ಧರಿಸಿದ್ದ ಕಾರಣ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ನ ಪ್ರವೇಶಕ್ಕೆ ನಿರಾಕರಿಸಲಾಗಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಬೇಕು ಮಾಲ್ನ ವಿರುದ್ದ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಸದನದಲ್ಲಿ ಪ್ರಸ್ತಾಪಿಸಿದರು. ಸಚಿವರಾದ ಮಹಾದೇವಪ್ರಸಾದ್ ರವರು ಮಾತನಾಡಿ, ವ್ಯಕ್ತಿಯ ಘನತೆಗೆ ಸ್ವಾಭಿಮಾನಕ್ಕೆ ಧಕ್ಕೆ ಹಾಗೂ ಅಪಮಾನ ಮಾಡಿರುವುದು ಖಂಡನೀಯ. ಈ ಕೂಡಲೇ ಮಾಲ್ನ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ವಿಧಾನಸಭೆಯ ಸಭಾಧ್ಯಕ್ಷರು ಪ್ರಸ್ತಾಪಿಸಿದ ವಿಷಯಕ್ಕೆ…
ನವದೆಹಲಿ: ನೀಟ್-ಯುಜಿ 2024 ಅನ್ನು ಹೊಸದಾಗಿ ನಡೆಸುವ ಯಾವುದೇ ಆದೇಶವು ಇಡೀ ಪರೀಕ್ಷೆಯ ಪಾವಿತ್ರ್ಯದ ಮೇಲೆ ಪರಿಣಾಮ ಬೀರಿದೆ ಎಂಬ ದೃಢವಾದ ನೆಲೆಗಟ್ಟಿನಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ವಿವಾದಾತ್ಮಕ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ 2024 ಗೆ ಸಂಬಂಧಿಸಿದ ಅರ್ಜಿಗಳ ಬಗ್ಗೆ ನಿರ್ಣಾಯಕ ವಿಚಾರಣೆಯನ್ನು ಪ್ರಾರಂಭಿಸಿದೆ. ನೀಟ್-ಯುಜಿ ಅರ್ಜಿಗಳಿಗೆ ಮುಂಚಿತವಾಗಿ ಪಟ್ಟಿ ಮಾಡಲಾದ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಮುಂದೂಡಿತು ಮತ್ತು “ನಾವು ಇಂದು ಪ್ರಕರಣವನ್ನು ತೆರೆಯುತ್ತೇವೆ. ಲಕ್ಷಾಂತರ ಯುವ ವಿದ್ಯಾರ್ಥಿಗಳು ಇದಕ್ಕಾಗಿ ಕಾಯುತ್ತಿದ್ದಾರೆ, ನಾವು ಕೇಳೋಣ ಮತ್ತು ನಿರ್ಧರಿಸೋಣ” ಎಂದು ಹೇಳಿದರು.ಮೇ 5 ರಂದು ನಡೆದ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ರದ್ದತಿ, ಮರು ಪರೀಕ್ಷೆ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿದ ಅರ್ಜಿದಾರರಿಗೆ ನ್ಯಾಯಪೀಠವು ಪ್ರಶ್ನೆ ಪತ್ರಿಕೆ ಸೋರಿಕೆಯು “ವ್ಯವಸ್ಥಿತ” ಮತ್ತು ಇಡೀ ಪರೀಕ್ಷೆಯ ಮೇಲೆ ಪರಿಣಾಮ ಬೀರಿದೆ…
ಬೆಂಗಳೂರು: ಕೊಲೆ ಪ್ರಕರಣದ ಆರೋಪದ ಮೇಲೆ ಸದ್ಯ ಬೆಂಗಳೂರಿನ ಕೇಂದ್ರ ಕಾರಗೃಹದಲ್ಲಿರುವ ನಟ ದರ್ಶನ್ ಅಂಡ್ ಗ್ಯಾಂಗ್ಗೆ ಸದ್ಯ ಮತ್ತೆ ಜೈಲಿನಲ್ಲೇ ಕಾಲ ಕಳೆಯ ಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ಇಂದು ದರ್ಶನ್ ಅಂಡ್ ಗ್ಯಾಂಗ್ ಕಸ್ಟಡಿ ಅವಧಿ ಅಂತ್ಯವಾಗಿತ್ತು, ಈ ಹಿನ್ನಲೆಯಲ್ಲಿ ಇಂದು ಮತ್ತೆ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಪರೇನ್ಸ್ ಮೂಲಕ ಆರೋಪಿಗಳನ್ನು ಹಾಜರು ಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶವನ್ನು ಹೊರಡಿಸಿದರು. ಇಂದು ದರ್ಶನ್ ಹಾಗೂ ಅವರ ಗ್ಯಾಂಗ್ನ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದಿತ್ತು. ಈ ನಡುವೆ ಪ್ರಕರಣದ ತನಿಖೆ ಶುರುವಾಗಿ ತಿಂಗಳು ಕಳೆದಿದೆ. ಪೊಲೀಸರು ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಲು ಮುಂದಾಗಿದ್ದಾರೆ
ನವದೆಹಲಿ: ಮೀಸಲಾತಿಗಾಗಿ ಹಿಂಸಾತ್ಮಕ ಪ್ರತಿಭಟನೆಗಳಿಂದಾಗಿ ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಅನಿಯಂತ್ರಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಾರತೀಯ ರಾಯಭಾರ ಕಚೇರಿ ಕೂಡ ಜಾಗರೂಕವಾಗಿದೆ. ಬಾಂಗ್ಲಾದೇಶದಲ್ಲಿ ವಾಸಿಸುವ ತನ್ನ ನಾಗರಿಕರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಭಾರತವು ವಿಶೇಷ ಸಲಹೆಗಳನ್ನು ನೀಡಿದೆ ಮತ್ತು ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ಬಾಂಗ್ಲಾದೇಶದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣವನ್ನು ತಪ್ಪಿಸಿ ಮತ್ತು ಮನೆಯೊಳಗೆ ಇರುವಂತೆ ಭಾರತವು ಬಾಂಗ್ಲಾದೇಶದಲ್ಲಿರುವ ಭಾರತೀಯ ವಲಸಿಗರು ಮತ್ತು ವಿದ್ಯಾರ್ಥಿಗಳನ್ನು ಕೇಳಿದೆ. ಯಾವುದೇ ತುರ್ತು ಸಂದರ್ಭದಲ್ಲಿ, ಅಲ್ಲಿನ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ. ಭಾರತದ ಹೈಕಮಿಷನ್ ತನ್ನ ನಾಗರಿಕರಿಗೆ ದಿನದ 24 ಗಂಟೆಗಳ ಕಾಲ ಸೇವೆ ಸಲ್ಲಿಸಲು ಸಿದ್ಧವಾಗಿದೆ ಅಂತ ತಿಳಿಸಿದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಬಾಂಗ್ಲಾದೇಶದಲ್ಲಿರುವ ತನ್ನ ನಾಗರಿಕರು ಮತ್ತು ವಿದ್ಯಾರ್ಥಿಗಳು ಢಾಕಾದಲ್ಲಿರುವ 880-1937400591 ಅಥವಾ ವಾಟ್ಸಾಪ್ಗೆ ಕರೆ ಮಾಡುವ ಮೂಲಕ ಅವರನ್ನು ಸಂಪರ್ಕಿಸಬಹುದು ಎಂದು ಭಾರತ ಹೇಳಿದೆ. ಇದಲ್ಲದೆ, ನೀವು ಚಿತ್ತಗಾಂಗ್ನಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್ ಕಚೇರಿಗೆ 880-1814654797 ಮತ್ತು 880-1814654799 ಗೆ ಕರೆ…
ಬೆಂಗಳೂರು: ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದು ಬೆಳಗ್ಗೆ ವಾಲ್ಮಿಕಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಫ್ರಿಡ್ಮಂ ಪಾರ್ಕ್ನಲ್ಲಿ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಬಳಿಕ ವಿಜಯೇಂದ್ರ ಸೇರಿದಂತೆ ಹಲವು ಮಂದಿ ಬಿಜೆಪಿ ನಾಯಕರುಗಳು ವಿಧಾನಸಭೆಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೋಲಿಸರು ಹಲವು ಮಂದಿಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳದಲ್ಲಿ ಹಲವು ಗಲಾಟೆ ಸನ್ನಿವೇಶ ಕೂಡ ಬಂದಿತ್ತು. ಸ್ಥಳದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಫೋಲಿಸರು ಹರಸಾಹಸ ಪಡುತ್ತಿದ್ದಾರೆ.