Author: kannadanewsnow07

ಬೆಂಗಳೂರು: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು. ಇದೇ ವೇಳೇ ಅವರು ಮಾತನಾಡಿ ವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 3784…

Read More

ನವದೆಹಲಿ: ಜಿಕಾ ವೈರಸ್ ಭಾರತದ ಆರೋಗ್ಯ ಅಧಿಕಾರಿಗಳಿಗೆ ಪ್ರಸ್ತುತ ಕಳವಳಕ್ಕೆ ಕಾರಣವಾಗಿದೆ. ಝಿಕಾ ವೈರಸ್ ಒಂದು ಫ್ಲೇವಿವೈರಸ್ ಆಗಿದ್ದು, ಇದು ಮುಖ್ಯವಾಗಿ ಸೋಂಕಿತ ಈಡಿಸ್ ಸೊಳ್ಳೆಗಳ ಕಡಿತದಿಂದ ಹರಡುತ್ತದೆ, ವಿಶೇಷವಾಗಿ ಈಡಿಸ್ ಈಜಿಪ್ಟಿ ಮತ್ತು ಈಡಿಸ್ ಅಲ್ಬೋಪಿಕ್ಟಸ್. ಈ ಸೊಳ್ಳೆಗಳು ಹಗಲಿನಲ್ಲಿ ಸಕ್ರಿಯವಾಗಿರುತ್ತವೆ ಎಂದು ನಂಬಲಾಗಿದೆ, ಇದು ಮಾನವರಲ್ಲಿ ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ. ಸೊಳ್ಳೆ ಕಡಿತದ ಹೊರತಾಗಿ, ಲೈಂಗಿಕ ಸಂಪರ್ಕ, ರಕ್ತ ವರ್ಗಾವಣೆ ಮತ್ತು ಗರ್ಭಧಾರಣೆ ಅಥವಾ ಹೆರಿಗೆಯ ಸಮಯದಲ್ಲಿ ಜಿಕಾ ವೈರಸ್ ತಾಯಿಯಿಂದ ಮಗುವಿಗೆ ಹರಡಬಹುದು. ದೇಶದಲ್ಲಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ದೇಹವನ್ನು ಪ್ರವೇಶಿಸಿದ ನಂತರ ವೈರಸ್ ಹೇಗೆ ವರ್ತಿಸುತ್ತದೆ ಮತ್ತು ಸೋಂಕಿಗೆ ಒಳಗಾದ ನಂತರ ವ್ಯಕ್ತಿಯ ಅಂಗಗಳಿಗೆ ಏನಾಗುತ್ತದೆ ಎಂಬುದನ್ನು ಈ ಲೇಖನದಲ್ಲಿ ನಾವು ನೋಡುತ್ತೇವೆ. ವೈರಸ್ ದೇಹವನ್ನು ಹೇಗೆ ಪ್ರವೇಶಿಸುತ್ತದೆ? ಝಿಕಾ ವೈರಸ್ ಸಾಮಾನ್ಯವಾಗಿ ಸೋಂಕಿತ ಈಡಿಸ್ ಸೊಳ್ಳೆಯ ಕಡಿತದ ಮೂಲಕ ಮಾನವ ದೇಹವನ್ನು ಪ್ರವೇಶಿಸುತ್ತದೆ ಮತ್ತು ವೇಗವಾಗಿ ರಕ್ತಪ್ರವಾಹವನ್ನು ಪ್ರವೇಶಿಸುತ್ತದೆ, ಅಲ್ಲಿ ಅದು ಬೆಳೆಯಲು ಪ್ರಾರಂಭಿಸುತ್ತದೆ. ಒಳಗೆ…

Read More

ಬೆಂಗಳೂರು: ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು ಅಂಥ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಕೆಲವು DC ಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DC ಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎನ್ನುವ ಸೂಚನೆ ನೀಡಿದರು ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ)…

Read More

ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು. ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು. ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು. ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ…

Read More

ಬೆಂಗಳೂರು: ಪಿಂಚಣಿ ಗಳ ವಿಲೇ ಅವಧಿ ಸದ್ಯ 45 ದಿನ ಇದೆ. ಇದನ್ನು 30 ದಿನಕ್ಕೆ ಇಳಿಸಲಾಗುವುದು ಎಂದು ಸಿಎಂ ತಿಳಿಸಿದರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಸಿಎಂ ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕು ಎನ್ನುವ ಸೂಚನೆ ನೀಡಿದ ಸಿಎಂ, ಕಾಲ ಮಿತಿ ಮೀರಿದ ಅರ್ಜಿಗಳು ಏಕೆ ಇದೆ ಎಂದು ಆಯಾ ಜಿಲ್ಲಾಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿ ಇತ್ಯರ್ಥ ಮಾಡಲು ಸೂಚಿಸಿದರು. ಇನ್ನೂ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎನ್ನುವ ಸೂಚನೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಿಎಂ ನೀಡಿ, ಸಣ್ಣ ಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ ವರ್ತಿಸಿ ರೈತ ಕುಟುಂಬಗಳಿಗೆ ಸಹಾಯ ಮಾಡಿ…

Read More

 ಹಸುಗಳನ್ನು ನಿರ್ದಿಷ್ಟವಾದ ಸ್ಥಳದಲ್ಲಿ ಕಟ್ಟಲಾಗುತ್ತದೆ. ಹಾಲು, ಹೈನು ಇತ್ಯಾದಿಗಳಿಗಾಗಿ ಪ್ರತ್ಯೇಕ ಕೊಟ್ಟಿಗೆ ದೊಡ್ಡಿಗಳನ್ನು ರೂಪಿಸಿ, ಯುಕ್ತ, ಮುಕ್ತ ಸ್ಥಳಾವಕಾಶ ರೂಪಿಸಿದರೆ ಅದು ಒಳ್ಳೆಯದೇ. ಈ ಕೊಟ್ಟಿಗೆಗಳು ದಕ್ಷಿಣ ದಿಕ್ಕಿನಲ್ಲಿ ಕಟ್ಟುವುದು ಸರಿ ಅಲ್ಲ. ಹಾಗೆಯೇ ಕುರಿ, ಕೋಳಿ, ಹಂದಿ ಸಾಕಣಿಕೆ ನಿಷಿದ್ಧವಲ್ಲ. ಮನೆಯ ವಾಸ್ತುವಿಗೆ ಪಂಚ ಭೂತ ತತ್ವಾಧಾರಿತ ಬೆಳಕು, ಗಾಳಿ, ನೀರು, ಮಣ್ಣು ಹಾಗೂ ಆಕಾಶ ಧಾತುಗಳು ಪ್ರಾಮುಖ್ಯವಾದವು ಎಂಬುದು ನಾವೆಲ್ಲಾ ತಿಳಿದ ವಿಚಾರ. ಹೀಗಾಗಿ ಈ ಪಂಚ ಭೂತಾತ್ಮಕ ಘಟಕಗಳು ಒಂದು ಸಾವಯವ ಚಕ್ರದ ನಿಯಂತ್ರಣಕ್ಕೆ ಒಳಗೊಂಡಾಗ ತಂತಾನೆ ಇವು ಅಶುದ್ಧತೆಯಿಂದ ಶುದ್ಧತೆಗೆ ಪರಿವರ್ತನೆಗೊಳ್ಳುತ್ತವೆ. ಮನುಷ್ಯ ಮಿದುಳಿನ ವಿಕಾಸದಿಂದಾಗಿ ಪರಿಸರವನ್ನು ಮಲಿನಗೊಳಿಸದ ಹಾಗೆ ಹೇಗೆ ರಕ್ಷಿಸಬೇಕೆಂಬುದನ್ನು ತಿಳಿದಿರುತ್ತಾನೆ. ಆದರೆ ಸಾಕು ಪ್ರಾಣಿಗಳಿಗೆ ಬುದ್ಧಿ ವಿಕಸನ ಇರುವುದಿಲ್ಲ. ತಮ್ಮನ್ನೇ ತಾವು ಶುದ್ಧಿಕರಿಸಿಕೊಳ್ಳುವ ವಿಚಾರದಲ್ಲಿ ಅವು ಹಿಂದೆ ಬೀಳುತ್ತವೆ. ಕಟ್ಟಿಕೊಂಡ ಮನೆಯಲ್ಲಿ ಸ್ವಾಭಾವಿಕವಾಗಿ ಅವು ಶುದಟಛಿವಾಗಿರಲು ಸಾಧ್ಯವಾಗದು. ಹೀಗಾಗಿ ಮನೆಯೊಳಗಡೆ ಪ್ರಾಣಿಗಳನ್ನು ಸಾಧ್ಯವಾದಷ್ಟು ದೂರವಿಡಲು ಪ್ರಯತ್ನಿಸಬೇಕು. ಕೆಲವರು ಸಾಕು ಪ್ರಾಣಿಗಳನ್ನು ತಮ್ಮ…

Read More

ಹುಬ್ಬಳ್ಳಿ: ಶಾಲಾ ವಿದ್ಯಾರ್ಥಿ ಓರ್ವ ಯುವತಿಯೊಂದಿಗೆ ಮಾತನಾಡಿದ್ದ ಎನ್ನುವ ಕಾರಣಕ್ಕೆ ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಶಾಲಾ ವಿದ್ಯಾರ್ಥಿ ಓರ್ವ ಯುವತಿಯೊಂದಿಗೆ ಮಾತನಾಡುತ್ತಿದ್ದ ಎನ್ನಲಾಗಿದ್ದು, ಈ ನಡುವೆ ಕೆಲ ಹುಡುಗರು ಯುವತಿಯೊಂದಿಗೆ ಏಕೆ ಮಾತನಾಡಿದ್ದಿ ಅಂಥ ಹುಡುಗನನ್ನು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು , ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ವಿದ್ಯಾರ್ಥಿಯ ಶಾಲೆಯ ಪ್ರಾಂಶುಪಾಲರು ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಾಂಶುಪಾಲರು ನೀಡಿದ ದೂರಿನ ಅನ್ವಯ ಪೋಲೀಸರ ತನಿಖೆ ನಡೆಸಿ, ಹಲ್ಲೆ ಮಾಡಿದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Read More

ಉತ್ತರ ಕನ್ನಡ: 2015ರ ನಂತರ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ಮರಣ ಮತ್ತು ರಾಜೀನಾಮೆಯಿಂದ ತೆರವಾದ ಹುದ್ದೆಗಳನ್ನು ಕೂಡಲೇ ತುಂಬಿಕೊಳ್ಳಲು ಅನುಮತಿ ನೀಡಬೇಕೆಂದು ವಿಧಾನಪರಿಷತ್ತಿನ ಶಾಸಕರಾದ ಎಸ್ .ವಿ .ಸಂಕನೂರ್ ಇವರು ಸರಕಾರವನ್ನು ಒತ್ತಾಯಿಸಿದರು . ಅವರು ಎಂ.ಪಿ.ಇ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘ(ರಿ) ಧಾರವಾಡ ಇದರ ಘಟಕವಾದ ಕಾರವಾರ ಶೈಕ್ಷಣಿಕ ಜಿಲ್ಲಾ ಪದವಿ ಪೂರ್ವ ನೌಕರರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು .ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಅನುದಾನಿತ ಶಿಕ್ಷಕರ ಕೊರತೆಯಿಂದಾಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟದಲ್ಲಿದೆ. ಈ ಹಿಂದೆ ಅನುದಾನಕ್ಕೆ ಒಳಪಟ್ಟ ಪದವಿ ಕಾಲೇಜಿನಿಂದ ಬೇರ್ಪಟ್ಟ ಪದವಿಪೂರ್ವ ಕಾಲೇಜುಗಳಿಗೆ ಅನುದಾನಿತ ಹುದ್ದೆಯನ್ನು ಹೊಸದಾಗಿ ಸೃಜಿಸದೆ ಇಂತಹ ಕಾಲೇಜುಗಳು ಸಂಕಷ್ಟಕ್ಕೆ ಒಳಗಾಗಿದ್ದು ಶೀಘ್ರವಾಗಿ ಅಗತ್ಯ ಇರುವ ಹುದ್ದೆಗಳನ್ನು ತುಂಬಬೇಕು ಹಾಗೂ ಅನುದಾನಕ್ಕೆ ಒಳಪಡಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. 2006ರ ನಂತರ ನೇಮಕವಾದ ಅನುದಾನಿತ ಉಪನ್ಯಾಸಕರಿಗೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತಂದು…

Read More

ಬಳ್ಳಾರಿ: ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಶನಿವಾರ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಘಟಕದಲ್ಲಿ ಉತ್ಪಾದನಾ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಉತ್ಪಾದನಾ ಘಟಕದ ಕಾರ್ಯನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಅಂಗನವಾಡಿಗಳಿಗೆ ಪೂರೈಕೆ ಮಾಡುವ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸಚಿವರು ಸೂಚಿಸಿದರು. ಇದೇ ವೇಳೆ, ಪುಷ್ಟಿ ನ್ಯೂಟ್ರಿಮಿಕ್ಸ್, ಗೋಧಿ ನುಚ್ಚು ಹಾಲಿನ ಪುಡಿ, ಅರಿಶಿಣ ಪುಡಿ ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಮಗ್ರಗಳ ಬಗ್ಗೆ ಸ್ಥಳದಲ್ಲಿದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಎಚ್…

Read More

ಕರಾಚಿ: 2015ರ ಗುರುದಾಸ್ಪುರ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಅಲಿ ರಾಜಾ ಅವರನ್ನು ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪಾಕಿಸ್ತಾನದ ಕರಾಚಿಯಲ್ಲಿ ಭಾನುವಾರ (ಜುಲೈ 7) ಅಪರಿಚಿತ ದಾಳಿಕೋರನೊಬ್ಬ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಮತ್ತು ಐಎಸ್ಐ ಅಧಿಕಾರಿ ಅಲಿ ರಾಜಾ ಅವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಅಲಿ ರಾಜಾ 2015 ರಲ್ಲಿ ಗುರುದಾಸ್ಪುರ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಎನ್ನಲಾಗಿದೆ.

Read More