Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ನಿಮ್ಮ ಹೆಸರಿನಲ್ಲಿ ಅನೇಕ ಸಿಮ್ ಕಾರ್ಡ್ ಗಳನ್ನು ತೆಗೆದುಕೊಳ್ಳುವುದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಟೆಲಿಕಾಂ ಕಾನೂನಿನಲ್ಲಿ ನಿರ್ದಿಷ್ಟಪಡಿಸಿರುವುದಕ್ಕಿಂತ ಹೆಚ್ಚಿನ ಸಿಮ್ ಕಾರ್ಡ್ ಗಳನ್ನು ನೀವು ತೆಗೆದುಕೊಂಡಿದ್ದರೆ ನೀವು ಭಾರಿ ದಂಡವನ್ನು ಪಾವತಿಸಬೇಕಾಗಬಹುದು. ನಿಯಮವನ್ನು ಪದೇ ಪದೇ ಉಲ್ಲಂಘಿಸಿದರೆ ನಿಮ್ಮನ್ನು ಜೈಲಿಗೆ ತಳ್ಳಬಹುದು. ನೀವು ಎಷ್ಟು ಸಿಮ್ ಕಾರ್ಡ್ ಗಳನ್ನು ತೆಗೆದುಕೊಳ್ಳಬಹುದು ಮತ್ತು ಆನ್ ಲೈನ್ ನಲ್ಲಿ ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ನೋಂದಾಯಿಸಲ್ಪಟ್ಟಿವೆ ಎಂಬುದನ್ನು ಹೇಗೆ ಪರಿಶೀಲಿಸುವುದು ಎಂಬುದರ ಕುರಿತು ಇತ್ತೀಚಿನ ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಮುಂದೆ ಓದಿ ನಿಮ್ಮ ಹೆಸರಿನಲ್ಲಿ ನೀವು ಎಷ್ಟು ಸಿಮ್ ಕಾರ್ಡ್ ಗಳನ್ನು ತೆಗೆದುಕೊಳ್ಳಬಹುದು? ಒಬ್ಬ ವ್ಯಕ್ತಿಯು ತೆಗೆದುಕೊಳ್ಳಬಹುದಾದ ಗರಿಷ್ಠ ಸಂಖ್ಯೆಯ ಸಿಮ್ ಕಾರ್ಡ್ ಗಳು ಅವನು ಅಥವಾ ಅವಳು ಸಿಮ್ ಕಾರ್ಡ್ ಅನ್ನು ಎಲ್ಲಿ ತೆಗೆದುಕೊಳ್ಳುತ್ತಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. “ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಈಶಾನ್ಯ ಪರವಾನಗಿ ಪಡೆದ ಸೇವಾ ಪ್ರದೇಶಗಳನ್ನು (ಎಲ್ ಎಸ್…
ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ವಿಚಿತ್ರ ಉದ್ಯೋಗಗಳನ್ನು ಜಾಹೀರಾತು ಮಾಡುವ ಮೂಲಕ ಮಹಿಳೆಯರನ್ನು ಗರ್ಭಿಣಿಯನ್ನಾಗಿ ಮಾಡಿ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುತ್ತಿದ್ದ ಇಬ್ಬರು ಪುರುಷರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ, ನಿರುದ್ಯೋಗದಿಂದಾಗಿ, ಯುವಕರು ಆನ್ಲೈನ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಉದ್ಯೋಗಗಳನ್ನು ಹುಡುಕುತ್ತಲೇ ಇರುತ್ತಾರೆ ಮತ್ತು ಅಂತಹ ನಿರುದ್ಯೋಗಿ ಯುವಕರನ್ನು ಬಲೆಗೆ ಬೀಳಿಸುವ ಪ್ರಕ್ರಿಯೆಯಲ್ಲಿ ಅನೇಕ ಜನರಿದ್ದಾರೆ. ಅಂತಹ ಒಂದು ಘಟನೆ ಹರಿಯಾಣದಲ್ಲಿ ಬೆಳಕಿಗೆ ಬಂದಿದೆ. ಉದ್ಯೋಗ ಜಾಹೀರಾತನ್ನು ನೋಡಿದ ಪೊಲೀಸರು ಸಹ ಆಘಾತಕ್ಕೊಳಗಾಗಿದ್ದಾರೆ. ಹರಿಯಾಣದ ನುಹ್ ಜಿಲ್ಲೆಯಲ್ಲಿ, ‘ಮಹಿಳೆಯರನ್ನು ಗರ್ಭಧರಿಸಿ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸಿ, ಎಂಬ ಜಾಹೀರಾತನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಯಿತು. ಈ ಜಾಹೀರಾತುಗಳನ್ನು ನೋಡಿದ ಪೊಲೀಸರು ಸಹ ಆಘಾತಕ್ಕೊಳಗಾಗಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ಪ್ರಕಾರ, ಮಹಿಳೆಯರನ್ನು ಗರ್ಭಧರಿಸುವ ಈ ನಕಲಿ ಜಾಹೀರಾತು ವೈರಲ್ ಆಗಿದೆ. ಇದು ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಧರಿಸುವ ಜಾಹೀರಾತಾಗಿತ್ತು. ಈ ಗ್ಯಾಂಗ್ನ ಜನರು…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 28 ನೇ ತಾರೀಖು ಆಕಾಶಕಾಯದಾಲ್ಲಿ ಕುಜ ಮತ್ತು ರಾಹುವಿನ ಗೃಹ ಸಂಯೋಗವಾಗಿರುವುದು ಬಹಳ ಪ್ರಮುಖವಾದದ್ದು. ಕುಜ ಮತ್ತು ರಾಹು ಸಂಧಿಯಿಂದ ಯಾವೆಲ್ಲ ತೊಂದರೆಗಳಾಗಿವೆ ಎಂದು ತಿಳಿದುಕೊಳ್ಳೋಣ ಬನ್ನಿ ಕುಜ ರಾಹು ಸಂಧಿಯಿಂದ ಈ ಹಿಂದೆ ಮಹಾಭಾರತದಲ್ಲಿ ಕೃಷ್ಣ ಮತ್ತು ಅರ್ಜುನರ ನಡುವೆ ವೈಮನಸ್ಸು ಉಂಟಾಗುತ್ತದೆ. ಹಾಗೆಯೇ ರಾಮಾಯಣದಲ್ಲಿ ರಾವಣನ ತಂಗಿ ಮಂಡೋದರಿ ಸಹ ಕುಜ-ರಾಹುವಿನ ಪ್ರಭಾವದಿಂದ ಆಕೆಗೆ ಲಕ್ಷ್ಮಣನಿಂದ ತೊಂದರೆಯಾಗುತ್ತದೆ ನಂತರ ರಾಮ ಮತ್ತು ಲಕ್ಷ್ಮಣರ ನಡುವೆ ವೈಮನಸ್ಸು ಉಂಟಾಗುತ್ತದೆ. ಇದೆಲ್ಲದಕ್ಕೂ ಕಾರಣವಾಗಿರುವುದು ಕುಜ ಮತ್ತು ರಾಹು ಸಂಯೋಗ ವಾಗಿರುವುದು. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ,ಮಾನವನ ಜನ್ಮ ಕುಲದಲ್ಲಿ ರಾಹು ಮತ್ತು ಕುಜನ ಪ್ರಭಾವದಿಂದ ಹಿಂಸಾತ್ಮಕವಾಗಿ ನಡೆಯುವಂತಹ ಯುದ್ಧಗಳು ಅತಿ ದೊಡ್ಡ ಪ್ರಮಾಣದ ಬೆಂಕಿ ಅನಾಹುತ,…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559. ನಿಮ್ಮ ಮನೆಯ ಮುಖ್ಯ ದ್ವಾರಕ್ಕೆ ಈ ರೀತಿ ಮಾಡಿದರೆ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ. ಅಕ್ಕಪಕ್ಕದ ಮನೆಯವರ ದೃಷ್ಟಿ ಯಾಗಬಾರದು ಅಥವಾ ಶತ್ರುಗಳ ಭಾದೆಯಾಗಿರಬಹುದು, ಅಮಾವಾಸ್ಯೆ ಹಾಗೂ ಹುಣ್ಣಿಮೆಗಳು ಸಮೀಪವಾಗುತ್ತಿದ್ದಂತೆ ಮನೆಯಲ್ಲಿ ಅನಾರೋಗ್ಯದ ಸಮಸ್ಯೆ ಹೆಚ್ಚಾಗುವುದು, ಪತಿ ಪತ್ನಿಯ ನಡುವೆ ಕಿರಿಕಿರಿ ಹೆಚ್ಚಾಗುತ್ತಿದ್ದರೆ ಮುಖ್ಯದ್ವಾರದ ಹೊರಬಾಗಿಲಿಗೆ ವಿಶೇಷವಾಗಿ ಜನರಿಗೆ ಕಾಣುವಂತೆ 3 ನವಿಲುಗರಿಯನ್ನು ನೇತಾಕ ಬೇಕಾಗುತ್ತದೆ ವಿಶೇಷವಾಗಿ ತ್ರಿಶೂಲ ಆಕಾರದಲ್ಲಿ ಮುಖ್ಯದ್ವಾರದ ಹೊರಬಾಗಿಲಿಗೆ ನೇತಾಕ ಬೇಕಾಗುತ್ತದೆ. ಹೀಗೆ ಮಾಡಿದ್ದೆ ಆದಲ್ಲಿ ಮನೆಗೆ ರಕ್ಷಣೆ ದೊರೆಯುತ್ತದೆ. ಈ ಕೆಲಸವನ್ನು ಅಮಾವಾಸ್ಯೆಯ ದಿನ ಅಥವಾ ಹುಣ್ಣಿಮೆಯ ದಿನ ನವಿಲುಗರಿಯನ್ನು ತಂದು ಮುಖ್ಯದ್ವಾರದ ಹೊರಬಾಗಿಲಿನ ಮೇಲ್ಗಡೆ ತ್ರಿಶೂಲ ಆಕಾರದಲ್ಲಿ ನೇತಾಕ ಬೇಕಾಗುತ್ತದೆ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಸುಖ-ಶಾಂತಿ ಲಭಿಸುತ್ತದೆ. ದೈವ ಬಲ ಎಂಬುದು ಮನೆಗೆ ಹೆಚ್ಚಾಗಿ ಪ್ರಾಪ್ತಿಯಾಗುತ್ತದೆ. ಒಂದು ವೇಳೆ ಶತ್ರುಗಳು ಕಾಟ ಹೆಚ್ಚಾಗಿದ್ದರೆ ಒಂದು…
ಚಿಕ್ಕಮಗಳೂರು: ಆಟ ಆಡೋ ಮಕ್ಕಳೆಲ್ಲ ಬಾರ್ಗೆ ಹೋಗ್ತಿದ್ದಾರೆ ಸರ್. ಬದುಕಿ-ಬಾಳಬೇಕಾದ ಮಕ್ಕಳೆಲ್ಲಾ ಕುಡಿದು ಸಾಯ್ತಿದ್ದಾರೆ. ದಯವಿಟ್ಟು ನಮ್ಮೂರಲ್ಲಿರೋ ಬಾರ್ ಬಂದ್ ಮಾಡ್ಸಿ ಅಂಥ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರಿಗೆ ಮನವಿ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೆಡಿಕಲ್ ಕಾಲೇಜಿಗೆ ಸಚಿವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆಯಲ್ಲಿ ಮಹಿಳೆಯೊಬ್ಬರು ಅವರ ಬಳಿ ಈ ಮನವಿ ಮಾಡಿದ್ದಾರೆ. ನಮ್ಮೂರಲ್ಲಿ ಕದ್ದು- ಮುಚ್ಚಿ ಎಣ್ಣೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ತುಂಬಾ ಕಷ್ಟವಾಗುತ್ತಿದೆ. ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಕುಡಿದು ಸತ್ತು ಹೋಗ್ತಿದ್ದಾರೆ ಎಂದು ಮಹಿಳೆ ಕೈ ಮುಗಿದು ಸಚಿವರ ಬಳಿ ಹೇಳಿಕೊಂಡ ಘಟನೆ ನಡೆದಿದೆ. ನಮ್ಮ ಊರಿಗೆ ಬಾರ್ & ರೆಸ್ಟೋರೆಂಟ್ ಬೇಡ ಎಂದು ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಮನವಿ ಮಾಡಲಾಗಿದೆ. ಇಷ್ಟಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಚಿವರ ಮುಂದೆ ಗ್ರಾಮಸ್ಥರು ಹೇಳಿಕೊಂಡಿದ್ದಾರೆ.
ಹಾವೇರಿ: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಬಿಟ್ಟು ಬಿಡದೇ ಜನರನ್ನು ಕಾಡುತ್ತಿದೆ. ಇದರ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಅಂದ ಹಾಗೇ ಹಾವೇರಿ (Haveri) ತಾಲ್ಲೂಕಿನ 12 ವರ್ಷದ ಬಾಲಕನಿಗೆ ಇಲಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬಾಲಕನಿಗೆ ಕಳೆದ ಒಂದು ವಾರದಿಂದ ನಿರಂತರವಾಗಿ ಜ್ವರ ಕಾಣಿಸಿಕೊಂಡ ಹಿನ್ನಲೆ ಹಾವೇರಿ ಜಿಲ್ಲಾಸ್ಪತ್ರಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕನಿಗೆ ಜಾಂಡೀಸ್ ಕಾಣಿಸಿಕೊಂಡಿತ್ತು. ಬಳಿಕ ರೋಗ ಗುಣಮುಖಗೊಂಡ ಹಿನ್ನೆಲೆ ಚಿಕಿತ್ಸೆ ಪಡೆದು ಊರಿಗೆ ತೆರಳಿದ್ದ. ಮತ್ತೆ ಬಾಲಕನಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಬಾಲಕನಿಗೆ ಇಲಿ ಜ್ವರ ಇರುವುದು ಪತ್ತೆಯಾಗಿದೆ ಎನ್ನಲಾಗಿದೆ.
ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಆರ್ಯವೈಶ್ಯ ಸಮಾಜದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಸ್ವಯಂ ಉದ್ಯೋಗ ನೇರ ಸಾಲ, ಆರ್ಯವೈಶ್ಯ ಆಹಾರ ವಾಹಿನಿ ಹಾಗೂ ವಾಸವಿ ಜಲಶಕ್ತಿ ಯೋಜನೆಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದೆ. ಆನ್ಲೈನ್ ವೆಬ್ಸೈಟ್ www.kacdc.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. *ಸ್ವಯಂ –ಉದ್ಯೋಗ ನೇರಸಾಲ ಯೋಜನೆ:* ಕರ್ನಾಟಕ ಆರ್ಯವೈಶ್ಯ ಸಮುದಾಯದ ಅಭಿವೃದ್ಧಿ ನಿಗಮದಿಂದ ವ್ಯಾಪಾರ ಚಟುವಟಿಕೆ ಕೈಗೊಳ್ಳಲು ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ರೂ.1 ಲಕ್ಷಗಳ ಸಾಲ-ಸಹಾಯ ಧನ ನೀಡಲಾಗುತ್ತಿದ್ದು, ಇದರಲ್ಲಿ ರೂ.20 ಸಾವಿರ ಸಹಾಯಧನವಿರುತ್ತದೆ. ಬಾಕಿ ಮೊತ್ತವನ್ನು ಶೇ.4ರ ಬಡ್ಡಿ ದರದಲ್ಲಿ ನೀಡಲಾಗುವುದು.ವಯೋಮಿತಿಯು 45 ವರ್ಷಗಳಿಂದ 55 ವರ್ಷಗಳಿಗೆ ಹೆಚ್ಚಿಸಲಾಗಿದ್ದು, 2019-20 ಮತ್ತು 2020-21 ಸಾಲಿನ…
ಬಳ್ಳಾರಿ: ಸಾರ್ವಜನಿಕರ ಸುಸ್ಥಿರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಶುದ್ಧೀಕರಣಗಳ ಘಟಕಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಜಿಲ್ಲಾ ಪಂಚಾಯತ್ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ್ ಅವರು ಸೂಚಿಸಿದರು. ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕ್ಷೇತ್ರ ಪರೀಕ್ಷಾ ಕಿಟ್(ಎಫ್ಟಿಕೆ) ಮತ್ತು ಹೆಚ್2ಎಸ್ ವಿಐಎಎಲ್ಎಸ್ ಸಾಧನಗಳನ್ನು ಉಪಯೋಗಿಸಿ ನೀರಿನ ಪರೀಕ್ಷೆ ಕೈಗೊಳ್ಳುವ ವಿಷಯವಾಗಿ ಗ್ರಾಪಂನ ಪಿಡಿಓಗಳಿಗೆ ಶುಕ್ರವಾರ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಕಲುಷಿತ ನೀರು ಸೇವನೆಯಿಂದ ಜನ ಸಾಮಾನ್ಯರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ನೀರಿನ ಮೂಲಗಳನ್ನು ಪರಿಶೀಲನೆ ಕೈಗೊಂಡು ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು. ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳು ಬೀರುವ ಸಾಧ್ಯತೆಗಳಿರುವುದರಿಂದ, ಗ್ರಾಮ ಪಂಚಾಯಿತಿ…
ಬೆಂಗಳೂರು ಛ ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು IG ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. SP-IG ಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ಇವನ್ನೆಲ್ಲಾ ತಪ್ಪಿಸಬಹುದು ಎಂದು ಎಚ್ಚರಿಸಿದರು. ನಾಳೆಯಿಂದಲೇ SP, IG ಗಳು ಠಾಣೆಗಳಿಗೆ ಭೇಟಿ ನೀಡಬೇಕು. ಭೇಟಿ ನೀಡಿ ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು. ಕೂಲಂಕುಶ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಸಿದರು. ಫೇಕ್ ನ್ಯೂಸ್ ಪ್ರಸಾರ ತಡೆಗಟ್ಟಿ: ಇಲ್ಲಾಂದ್ರೆ ಕ್ರಮ ಎದುರಿಸಿ: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು…
ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಕೆಲ ಹೊತ್ತು ಸಮಯ ಕಳೆದ ಎಲ್ಲರ ಗಮನ ಸೆಳೆದಿದ್ದಾರೆ. ಈ ಬಗ್ಗೆ ವಿಡಿಯೋ ಟ್ವಿಟ್ ಮಾಡಿರುವ ಅವರು ಥಮಿಕ ಶಾಲೆಯಲ್ಲಿ ನಾನು ಕಲಿತ ಕನ್ನಡ ವ್ಯಾಕರಣ ಪಾಠಗಳು ಉಸಿರಿರುವವ ವರೆಗೆ ಹಸಿರಾಗಿರಲಿದೆ. ಕನ್ನಡ ಭಾಷೆಯ ಸೌಂದರ್ಯವನ್ನು ಬಣ್ಣಿಸುವ, ವ್ಯಾಕರಣದ ಬಗ್ಗೆ ವಿವರಿಸುವ ಅವಕಾಶ ಸಿಕ್ಕಾಗಲೆಲ್ಲ ಸಂಧಿಗಳು, ಸಮಾಸಗಳು, ಸ್ವರ, ವ್ಯಂಜನಗಳು ಥಟ್ಟನೆ ನೆನಪಾಗುತ್ತವೆ. ಅದು ಶಾಲಾ ಕೊಠಡಿಯೇ ಇರಲಿ, ವಿಧಾನಸಭೆಯೇ ಆಗಿರಲಿ. ಮುತ್ತು ಪೋಣಿಸಿದಂತೆ ಬಿಡಿ ಬಿಡಿಯಾಗಿ ಕಣ್ಣಮುಂದೆ ಬರುತ್ತದೆ. ಯಾವುದೇ ಭಾಷೆಯಾಗಿರಲಿ ಅದು ಹೃದಯಕ್ಕೆ ಹತ್ತಿರವಾದಾಗ ಮಾತ್ರ ಜೀವಂತಿಕೆಯನ್ನು ಉಳಿಸಿಕೊಳ್ಳುತ್ತದೆ. ಹಾಗಾಗಿಯೇ ಕನ್ನಡ ನನಗೆ ಆಡು ಭಾಷೆಯೂ ಹೌದು, ನಾಡಭಾಷೆಯೂ ಹೌದು,\ ನನ್ನ ಹೆತ್ತ ತಾಯಿಭಾಷೆಯೂ ಹೌದು. ಅಂಥ ತಿಳಿಸಿದ್ದಾರೆ. SC/ST ಜನಸಂಖ್ಯೆಗೆ ಅನುಗುಣವಾಗಿ ಹಣ ಖರ್ಚು ಮಾಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಇಡೀ ದೇಶದಲ್ಲಿ ಪರಿಶಿಷ್ಟ ಜಾತಿ…







