Subscribe to Updates
Get the latest creative news from FooBar about art, design and business.
Author: ಅವಿನಾಶ್ ಆರ್ ಭೀಮಸಂದ್ರ
ಅವಿನಾಶ್ ಆರ್ ಭೀಮಸಂದ್ರ ಪರಿಚಯ: ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 15 ವರ್ಷಗಳ ಅನುಭವ, ತನಿಖಾ ಪತ್ರಿಕೋದ್ಯಮ, ಅಪರಾಧ ವರದಿಗಾರಿಕೆ ಇವರ ಪ್ರಮುಖ ಆಸಕ್ತಿ ವಿಭಾಗ. ಊರು ಕಲ್ಪತರು ನಾಡು ತುಮಕೂರು ಜಿಲ್ಲೆಯ ಇವರು ಓದಿದ್ದು ಪದವಿಯಲ್ಲಿ ಪತ್ರಿಕೋದ್ಯಮ, ಐಚ್ಚಿಕ ಕನ್ನಡ, ಮನೋವಿಜ್ಞಾನ, ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ. ಕಸ್ತೂರಿ ನ್ಯೂಸ್. ವಿಜಯವಾಣಿ, ಪ್ರಜಾಪ್ರಗತಿ, ಪ್ರಗತಿ ಟಿವಿಯಲ್ಲಿ ಕೆಲಸ ಮಾಡಿದ ಅನುಭವವಿದೆ. ಕನ್ನಡಿಗರ ಮನೆಮಾತಾಗಿರುವ ಕನ್ನಡ ನ್ಯೂಸ್ನೌ.ಕಾಂ ಡಿಜಿಟಲ್ ಮೀಡಿಯಾದ ಸಂಸ್ಥಾಪಕ ಸಂಪಾದಕರು ಕೂಡ ಹೌದು.
ಬೆಂಗಳೂರು: ಸರ್ಕಾರಿ ನೌಕರರು ಯಾವುದೇ ಪಕ್ಷದ ಪರ ಅಥಾವ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಬಾರದು ಎನ್ನುವ ನಿಯಮವಿದ್ದರು ಕೂಡ ಕೆಎಸ್ಆರ್ಟಿಸಿ ಬಸ್ ಚಾಲಕನೊಬ್ಬ ಕರ್ತವ್ಯ ಸಮಯದಲ್ಲಿ ಪಕ್ಷದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಬಾಗೇಪಲ್ಲಿ ಘಟಕದ ಚಾಲಕನೊಬ್ಬರು ಕನ್ನಡದ ವಾಹಿನಿಯಿಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಪಕ್ಷವೊಂದ ಪರ ಅಭಿಪ್ರಾಯ ವ್ಯಕ್ತಪಡಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಇನ್ನೂ ಸರ್ಕಾರಿ ಅಧಿಕಾರಿಗಳು/ನೌಕರರು ಯಾವುದೇ ಕಾರಣಕ್ಕೂ ಕೂಡ ಈ ರೀತಿ ಹೇಳಿಕೆಗಳನ್ನು ನೀಡಬಾರದು ಅಂತ ನಿಯಮ ವಿದ್ದರು ಕೂಡ ನಿಯಮ ಬಾಹಿರವಾಗಿ ಹೇಳಿಕೆ ನೀಡುತ್ತಿರುವುದು ಯಾಕೆ ಎನ್ನುವುದು ಈಗ ವಿವಾದಕ್ಕೆ ಕಾರಣವಾಗಿದೆ. ಮುಂದೆ ಇಲಾಖೆ ಯಾವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಕೃಷ್ಣಗಿರಿ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 55 ವರ್ಷದ ವ್ಯಕ್ತಿಗೆ ಆತನ ಸಂಬಂಧಿಯೇ ಬೆಂಕಿ ಹಚ್ಚಿದ ಘಟನೆ ಕಾವೇರಿಪಟ್ಟಣಂ ಸಮೀಪದ ಸಾವುಲೂರು ಜಂಕ್ಷನ್ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಕಾವೇರಿಪಟ್ಟಣಂ ಬಳಿಯ ಪೂಮಲೈ ನಗರದ ವಿ ಚಿನ್ನವನ್ (55) ಅವರಿಗೆ 70% ಸುಟ್ಟ ಗಾಯಗಳಾಗಿವೆ. ಅವರು ಕೃಷ್ಣಗಿರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿನ್ನವನ್ ರಸಗೊಬ್ಬರ ಅಂಗಡಿಯೊಂದನ್ನು ಹೊಂದಿದ್ದಾರೆ ಎನ್ನಲಾಗಿದೆ. ಚಿನ್ನವನ್ ಅವರ ಸಂಬಂಧಿ, ಖಾಸಗಿ ಕಂಪನಿ ಉದ್ಯೋಗಿ ಸೆಂಥಿಲ್ ಕುಮಾರ್ (26) ಬಂಧಿತ ಆರೋಪಿಯಾಗಿದ್ದಾರೆ. ಸಂಬಂಧಿಕರೊಂದಿಗಿನ ಮಾರ್ಗದ ವಿವಾದದಲ್ಲಿ ಚಿನ್ನವನ್ ತನ್ನ ಹಿರಿಯ ಸಹೋದರನ ಕುಟುಂಬವನ್ನು ಬೆಂಬಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. ಚಿನ್ನವನ್ ಸವುಲೂರು ಜಂಕ್ಷನ್ ರಸ್ತೆಯಲ್ಲಿರುವ ತನ್ನ ರಸಗೊಬ್ಬರ ಅಂಗಡಿಯಲ್ಲಿದ್ದಾಗ ಈ ಅಪರಾಧ ನಡೆದಿದೆ. ಸೆಂಥಿಲ್ ಒಂದು ಪಾತ್ರೆಯಲ್ಲಿ ಪೆಟ್ರೋಲ್ ನೊಂದಿಗೆ ಅಂಗಡಿಗೆ ಪ್ರವೇಶಿಸಿ ಚಿನ್ನವನದ ಮೇಲೆ ಸುರಿದನು. ಚಿನ್ನವನ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ, ಸೆಂಥಿಲ್ ಅವನ ಮೇಲೆ ಬೆಂಕಿ ಹಚ್ಚಿ ಮತ್ತೆ ಪೆಟ್ರೋಲ್ ತುಂಬಿದ…
ನಮ್ಮ ಮನಸ್ಸಿನಲ್ಲಿ ಯೋಚಿಸಬಹುದಾದ ಎಲ್ಲಾ ವಿಷಯಗಳು ಸರಿಯಾಗಿ ನಡೆಯಲು ಪ್ರಾರಂಭಿಸಿದರೆ, ಸಂತೋಷದ ನಂತರ ಬರುವ ದಿನಗಳು ನಮಗೆ ಒಳ್ಳೆಯದಾಗುತ್ತವೆ. ಗೆಲುವಿನ ಸರಣಿ ಸಂಗ್ರಹವಾಗುತ್ತದೆ. ಆದರೆ ಜೀವನದಲ್ಲಿ ಒಮ್ಮೆ ಅವನತಿ ಪ್ರಾರಂಭವಾದರೆ, ಆ ದುಃಖವು ಜೀವನದಲ್ಲಿ ಮತ್ತೆ ಮತ್ತೆ ನಮ್ಮನ್ನು ಜಯಿಸುವುದಿಲ್ಲ. ನಾವು ಸೋಲುತ್ತಲೇ ಇರುತ್ತೇವೆ. ನಮಗೆ ಯಶಸ್ಸು ಸಿಗುವುದಿಲ್ಲ, ಏನನ್ನೂ ಸಾಧಿಸಲು ಸಾಧ್ಯವಾಗುವುದಿಲ್ಲ, ಒಳ್ಳೆಯದೇ ಆಗುವುದಿಲ್ಲ, ನಮ್ಮೊಳಗೆ ಮೇಲು ಕೀಳು ಎಂಬ ಭಾವನೆ ಮೂಡುತ್ತದೆ. ನೀವು ಅದೇ ಸಮಸ್ಯೆಯನ್ನು ಹೊಂದಿದ್ದೀರಾ? ಜೀವನದಲ್ಲಿ ನೀವು ಅಂದುಕೊಂಡ ಒಂದೇ ಒಂದು ಒಳ್ಳೆಯ ವಿಷಯವೂ ಸರಿಯಾಗಿ ನಡೆಯುತ್ತಿಲ್ಲ. ಈ ಆಧ್ಯಾತ್ಮಿಕ ಉಪ್ಪು ಪರಿಹಾರವನ್ನು ಮಾಡಿ. ಹತ್ತನೇ ದಿನ ನೀವು ಅಂದುಕೊಂಡ ಒಳ್ಳೆಯದೇ ಆಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ…
ಬೆಂಗಳೂರು: ಬೆಲೆ ಏರಿಕೆ ತಡೆಯುವುದಾಗಿ ಭಾರತೀಯರನ್ನು ನಂಬಿಸಿ ಅಧಿಕಾರಕ್ಕೆ ಬಂದ ಮೋದಿಯವರೇ ವಿಪರೀತ ಬೆಲೆ ಏರಿಕೆ ಮಾಡಿದ್ದರಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು. ನಾವು ಗ್ಯಾರಂಟಿಗಳ ಮೂಲಕ ಸ್ಪಂದಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕೋಣನಕುಂಟೆ ಕ್ರಾಸ್ ನಲ್ಲಿ ನಡೆದ ಬೃಹತ್ ಪ್ರಜಾಧ್ವನಿ -2 ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬೆಲೆ ಏರಿಕೆ ಭಾರತೀಯರ ಶತ್ರು. ನಾನು ಪ್ರಧಾನಿಯಾದರೆ ಬೆಲೆ ಏರಿಕೆ ತಡೆಯುವುದಾಗಿ ಇಡಿ ಭಾರತೀಯರನ್ನು ಮೋದಿ ನಂಬಿಸಿದ್ದರು. ಆದರೆ ಇದೇ ಮೋದಿ ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಸೇರಿ ಎಲ್ಲದರ ಬೆಲೆಯನ್ನೂ ಗಗನಕ್ಕೆ ಏರಿಸಿದರು ಎಂದು ಬೆಲೆ ಏರಿಕೆಯ ಪಟ್ಟಿ ನೀಡಿದರು. ಮೋದಿಯವರ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಮಧ್ಯಮ ವರ್ಗದ ಜನ ಮತ್ತು ದುಡಿಯುವ ವರ್ಗಗಳು ಹಾಗೂ ಬಡ ಜನರ ಬದುಕಿಗೆ ಸ್ಪಂದಿಸುವ ಉದ್ದೇಶದಿಂದ ನಾನು ಐದು ಗ್ಯಾರಂಟಿಗಳನ್ನು ರೂಪಿಸಿ ಐದನ್ನೂ ಜಾರಿ ಮಾಡಿದ್ದೇವೆ. ನಾವು ನುಡಿದಂತೆ ನಡೆದು ನಿಮ್ಮ ಮತಕ್ಕೆ ಗೌರವ ತಂದು ಘನತೆ…
ಕೆಎನ್ಎನ್ಡಿಜಿಟಲ್ಡೆಸ್ಕ್: ಚೈತ್ರ ಮಾಸದ ಹುಣ್ಣಿಮೆಯ ದಿನದಂದು ಹನುಮಾನ್ ಜಯಂತಿಯನ್ನು ದೇಶಾದ್ಯಂತ ಉತ್ಸಾಹ ಮತ್ತು ಆಚರಣೆಗಳೊಂದಿಗೆ ಆಚರಿಸಲಾಗುತ್ತದೆ. ಆದಾಗ್ಯೂ, ಹನುಮಾನ್ ಜಯಂತಿಯನ್ನು ಏಪ್ರಿಲ್ 23 ರಂದು ಆಚರಿಸಲಾಗುತ್ತದೆಯೇ ಅಥವಾ ಏಪ್ರಿಲ್ 24 ರಂದು ಆಚರಿಸಲಾಗುತ್ತದೆಯೇ ಎಂಬ ಬಗ್ಗೆ ಜನರಲ್ಲಿ ಗೊಂದಲವಿದೆ. ತ್ರೇತಾಯುಗದ ಚೈತ್ರ ಮಾಸದ ಹುಣ್ಣಿಮೆಯ ದಿನದಂದು ಬಜರಂಗ್ ಬಲಿ ಜನಿಸಿದನೆಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಆದ್ದರಿಂದ, ಭಕ್ತರು ಈ ದಿನ ಹನುಮಾನ್ ಜಿಯನ್ನು ಪೂಜಿಸುತ್ತಾರೆ. ಈ ದಿನದಂದು, ದೇವಾಲಯಗಳನ್ನು ಅಲಂಕರಿಸಲಾಗುತ್ತದೆ ಮತ್ತು ಭಂಡಾರಗಳು ಮತ್ತು ಕಾರ್ಯಕ್ರಮಗಳನ್ನು ಎಲ್ಲೆಡೆ ಆಯೋಜಿಸಲಾಗುತ್ತದೆ. 2024 ರಲ್ಲಿ ಹನುಮಾನ್ ಜಯಂತಿ ಯಾವಾಗ? ಉದಯ ತಿಥಿಯ ಪ್ರಕಾರ, ಹನುಮಾನ್ ಜಯಂತಿಯನ್ನು ಏಪ್ರಿಲ್ 23 ರಂದು ಆಚರಿಸಲಾಗುವುದು. ಹನುಮಾನ್ ಜಯಂತಿಯ ಸಂದರ್ಭದಲ್ಲಿ, ಭಕ್ತರು ಬಜರಂಗ ಬಲಿಯ ಧಾರ್ಮಿಕ ಪೂಜೆಯಲ್ಲಿ ಕೆಂಪು ವೇಷಭೂಷಣಗಳನ್ನು ಧರಿಸುತ್ತಾರೆ. ಇದರೊಂದಿಗೆ, ಬಜರಂಗ್ ಬಲಿಗೆ ಲಡ್ಡುಗಳನ್ನು, ಸಿಹಿ ತಿಂಡಿಗಳನ್ನು ನೀಡಲಾಗುತ್ತದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಈ ಬಾರಿ ಚೈತ್ರ ಮಾಸದ ಹುಣ್ಣಿಮೆಯ ದಿನಾಂಕವು ಏಪ್ರಿಲ್ 23 ರ ಮಂಗಳವಾರ…
ಹುಬ್ಬಳ್ಳಿ: ನೇಹಾಳ ಹತ್ಯೆ ಖಂಡಿಸಿ ಹಳೆ ಹುಬ್ಬಳ್ಳಿಯಲ್ಲಿ ಪ್ರತಿಭಟನ ಕಾರರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭೀಕರವಾಗಿ ಹತ್ಯೆಯಾದ ನೇಹಾಳಿಗೆ ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದ್ದು, ಆಕೆಯ ಸಾವಿಗೆ ನ್ಯಾಯ ದೊರಕಿಸುವಂತೆ ಪ್ರತಿಭಟನಕಾರರು ಒತ್ತಾಯಿಸಿದರು. ಇದಲ್ಲದೇ ಸಿಎಂ ಮತ್ತು ಡಿಸಿಎಂ ವಿರುದ್ದ ಕೂಡ ಕಿಡಿಕಾರಿದ ಪ್ರತಿಭಟನ ಕಾರರು ಇಬ್ಬರ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ರಾಜ್ಯದ ನಾನಾ ಭಾಗಗಳಲ್ಲಿ ಇಂದು ಬಿಜೆಪಿಯಿಂದ ನೇಹಾಳ ಕೊಲೆ ವಿರೋಧಿಸಿ ಆಕೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದೆ. ಈ ನಡುವೆ ಮೈಸೂರಿನಲ್ಲಿ ಬಿಜೆಪಿ ಕೂಡ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಬಿ.ವೈ ವಿಜೇಂಯೇಂದ್ರ ಅವರು ಈಗಾಗಲೇ ಮೈಸೂರಿನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಮುಂದಾಗಿದ್ದಾರೆ. ಆದರೆ ಇನ್ನೂ ಕೂಡ ಪ್ರತಿಭಟನೆಗೆ ಅನುಮತಿ ಸಿಕ್ಕಿಲ್ಲ ಎನ್ನಲಾಗಿದೆ.
ಹುಬ್ಬಳ್ಳಿ: ರಾಜ್ಯಾದ್ಯಂತ ನೇಹಾ ಹಿರೇಮಠ ಸಾವಿಗೆ ನ್ಯಾಯ ಮರಣೋತ್ತರ ಪರೀಕ್ಷೆಯಲ್ಲಿ ನೇಹಾಳಿಗೆ ಹದಿನಾಲ್ಕು ಬಾರಿ ಇರಿದು ಕೊಂದಿದ್ದಾನೆ ಎನ್ನುವ ಅಂಶ ಹೊರ ಬಿದಿದ್ದೆ. ಇದಲ್ಲದೇ ನೇಹಾಳ ಕತ್ತಿನ ಬಾಗದಲ್ಲಿರುವ ರಕ್ತನಾಳ ತುಂಡಾಗಿದೆ ಎನ್ನಲಾಗಿದ್ದು, ಅತಿಯಾದ ರಕ್ತಸ್ರಾವದಿಂದಲೇ ಆಕೆ ಸಾವನ್ನಪ್ಪಿರುವ ಬಗ್ಗೆ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಇದಲ್ಲದೇ ನೇಹಾಳ ಹೃದಯಕ್ಕೂ ಕೂಡ ಫಯಾಜ್ ಚುಚ್ಚಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರ ಬರಬೇಕಾಗಿದೆ. ಈ ನಡುವೆ ಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ನೇಹಾಳ ಹತ್ಯೆಯನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಆದರೆ ಪೊಲೀಸರು ಪ್ರತಿಭಟನೆ ನಡೆಸಲು ಅನುಮತಿ ನಡೆಸಲು ಇನ್ನೂ ಅವಕಾಶ ನೀಡಿಲ್ಲ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಆಲದ ಮರವನ್ನು ಪೂಜ್ಯನೀಯ ಹಾಗೂ ತುಂಬಾ ಪವಿತ್ರವಾದ ಮರ ಎಂದು ತಿಳಿಯಲಾಗಿದೆ. ಈ ಮರದಲ್ಲಿ ಎಲ್ಲಾ ದೇವಾನುದೇವತೆಗಳು ಕೂಡ ವಾಸವನ್ನು ಮಾಡುತ್ತಾರೆ. ಒಂದು ಮಾಹಿತಿಯ ಪ್ರಕಾರ ಭಗವಂತನಾದ ಮಹಾಶಿವನು ಹಾಗೂ ಬ್ರಹ್ಮ-ದೇವರು ವಾಸ ಮಾಡುತ್ತಾರೆ ಎಂಬ ಉಲ್ಲೇಖವಿದೆ. ಹಲವಾರು ದಿನಗಳಿಂದ ರೋಗದಿಂದ ಮುಕ್ತಿ ದೊರೆಯುತ್ತಿಲ್ಲ, ವೈದ್ಯರಿಂದ ಚಿಕಿತ್ಸೆಯನ್ನು ಪಡೆದ ನಂತರವೂ ರೋಗದಿಂದ ಮುಕ್ತಿಯನ್ನು ಹೊಂದಲು ಸಾಧ್ಯವಾಗುತ್ತಿಲ್ಲ ಎಂದರೆ ಆಲದ ಮರದ ಬೇರನ್ನು ತಲೆದಿಂಬಿನ ಕೆಳಗೆ ಇಟ್ಟುಕೊಳ್ಳುವುದರಿಂದ ಕೆಲವೇ ದಿನಗಳಲ್ಲಿ ರೋಗಗಳಿಂದ ಮುಕ್ತಿಯನ್ನು ಹೊಂದಬಹುದು. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಒಂದು ವೇಳೆ ಹಣಕಾಸಿನ ಸಮಸ್ಯೆ ಇದ್ದು ಆ ಸಮಸ್ಯೆಯನ್ನು ದೂರ ಮಾಡಬೇಕು ಎಂದು ಅನಿಸಿದರೆ ಅಮವಾಸ್ಯೆ ಅಥವಾ ಹುಣ್ಣಿಮೆಯ ದಿನ ಆಲದ ಮರದ ಕೆಳಗೆ 5 ವಿಳೆದೆಲೆಯ…
ಬೆಂಗಳೂರು: ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಘಟನೆಯಲ್ಲಿ ಯುವತಿಯೊಬ್ಬಳು ಸಜೀವಾಗಿ ಸಾವನ್ನಪ್ಪಿರುವ ಬೆಂಗಳೂರಿನ ಮಾದಾವರ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು. ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗಿಯೊಬ್ಬಳು ಸಜೀವ ದಹನವಾಗಿದ್ದಾಳೆ ಎನ್ನಲಾಗಿದೆ. ಸಾವನ್ನಪ್ಪಿರುವ ಯುವತಿಯನ್ನು ದಿವ್ಯಾ ಎನ್ನಲಾಗಿದೆ. ಇನ್ನೂ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಗೊಂಡಿದ್ದಾರೆ. ಇದಲ್ಲದೇ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಮಾದಾವರದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳುಗಳೆಲ್ಲರೂ ಗುಜರಾತಿ ಮೂಲದ ಕುಟುಂಬದವರು ಅಂಥ ತಿಳಿದು ಬಂದಿದೆ.
ಬೆಂಗಳೂರು: ಈಗಾಗಲೇ ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈ ಸಂಬಂಧ ಗ್ರಾಮಾಧಿಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಈ ಪೈಕಿ 10 ಲಕ್ಷ ರೈತರ ಆರ್ಟಿಸಿಗೆ ಆಧಾರ್ ಲಿಂಕ್ ಮಾಡಲಾಗಿದೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಧಿಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ ಪಹಣಿಗಳು ಇದ್ದರೆ ದುರಪಯೋಗ ಆಗುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಆಧಾರ್ ಜೋಡಣೆ ಮಾಡುವುದರಿಂದ ಯಾರದ್ದೋ ಆಸ್ತಿ ಮತ್ತಾರೋ ನೋಂದಣಿ ಮಾಡಿಸಿಕೊಳ್ಳುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹುದಾಗಿದೆ. ಇನ್ನೂ ಆಸ್ತಿಗಳ ನೋಂದಣಿ ಸಮಯದಲ್ಲಿಯೂ ಸಹ ಆಧಾರ್ ಕಡ್ಡಾಯವಾಗಿ ಕೇಳಲಾಗುತ್ತದೆ. ಆಗ ಆಧಾರ್ ಸಂಖ್ಯೆ ಕೊಡದಿದ್ದರೆ ಅದು ಅನುಮಾನಕ್ಕೆ ಕಾರಣವಾಗಿ ಅದರ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ತದನಂತರ ನೋಂದಣಿ ಮಾಡಿದರೆ ಒಂದಷ್ಟು ಅಕ್ರಮಗಳನ್ನು ತಡೆದಂತಾಗುತ್ತದೆ ಎಂದು…









