Author: kannadanewsnow09

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 56,432 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಶಶೀಲ್ ನಮೋಶಿ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ಈ ಮಹತ್ವದ ಮಾಹಿತಿ ನೀಡಿದರು. ವಿಪಕ್ಷಗಳ ಗಂಭೀರ ಆರೋಪ: ಕಲಾಪದ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಶೀಲ್ ನಮೋಶಿ ಅವರು ಈ ಕೆಳಗಿನ ಅಂಶಗಳನ್ನು ಪ್ರಸ್ತಾಪಿಸಿದರು: ರಾಜ್ಯದಲ್ಲಿ ಸದ್ಯ 2.84 ಲಕ್ಷ ಹುದ್ದೆಗಳು ಖಾಲಿ ಇವೆ. ಒಳಮೀಸಲಾತಿ ಮತ್ತು ನ್ಯಾಯಾಲಯದ ಪ್ರಕ್ರಿಯೆಗಳ ನೆಪವೊಡ್ಡಿ ನೇಮಕಾತಿ ವಿಳಂಬ ಮಾಡಲಾಗುತ್ತಿದೆ. ಯುವಕರಿಗೆ ಅನ್ಯಾಯವಾಗುತ್ತಿದೆ ಹಾಗೂ ಗುತ್ತಿಗೆ ಆಧಾರದ ನೇಮಕಾತಿಗಳಿಂದ ಅಭ್ಯರ್ಥಿಗಳಿಗೆ ಭದ್ರತೆ ಇಲ್ಲದಂತಾಗಿದೆ. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ನೇಮಕಾತಿಯಲ್ಲಿ 371J (ಕಲ್ಯಾಣ ಕರ್ನಾಟಕ ಭಾಗದ ವಿಶೇಷ ಮೀಸಲಾತಿ)…

Read More

ವಿಧಾನಸಭೆ : ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರ ಪರ್ವತ ಚಾರಣಕ್ಕೆ ಆಗಮಿಸುವವರು ಕಡ್ಡಾಯವಾಗಿ ಆನ್ ಲೈನ್ ಮೂಲಕ ಮಾತ್ರ ಟಿಕೆಟ್ ಖರೀದಿಸಬೇಕಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ತಿಳಿಸಿದ್ದಾರೆ. ಸದಸ್ಯರಾದ ಭಾಗೀರಥಿ ಮುರುಳ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಒಂದೇ ದಿನ 2-3 ಸಾವಿರ ಜನರು ಒಂದೇಕಡೆ ಸೇರಿದರೆ ಅನಾಹುತ ಆಗುತ್ತದೆ. ಹೀಗಾಗಿ ನಿಯಂತ್ರಣ ಕ್ರಮ ಕೈಗೊಂಡು ಪ್ರತಿನಿತ್ಯ 150 ಜನರಿಗೆ ಮಾತ್ರ ಚಾರಣಕ್ಕೆ ಅವಕಾಶ ನೀಡಲಾಗುತ್ತಿದೆ. ಮಳೆಗಾಲದಲ್ಲಿ ಚಾರುವ ಕಾರಣ, ಬೇಸಿಗೆಯಲ್ಲಿ ಕಾಡ್ಗಿಚ್ಚಿನ ಭೀತಿ ಎದುರಾಗುವ ಕಾರಣ ಚಾರಣ ಇರುವುದಿಲ್ಲ ಎಂದು ವಿವರಿಸಿದರು. ಸುಬ್ರಹ್ಮಣ್ಯದಿಂದ ಕುಮಾರಪರ್ವತಕ್ಕೆ 24 ಕಿ.ಮೀ ಚಾರಣ ಪಥವಿದ್ದು, ಹೋಗಿ, ಮರಳಿ ಬರಲು 2 ದಿನ ಆಗುತ್ತಿತ್ತು, ರಾತ್ರಿ ಅಲ್ಲೇ ಉಳಿಯಬೇಕಿತ್ತು. ಅಲ್ಲಿ ವನ್ಯಜೀವಿಗಳ ಸಂಚಾರವೂ ಇರುವ ಕಾರಣ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ 2024ರ ಜೂನ್ 5ರಂದು ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮಾನವ-ವನ್ಯಜೀವಿ…

Read More

ಮಂಡ್ಯ: ಜಿಲ್ಲಾ ನ್ಯಾಯಾಲಯಕ್ಕೆ ಗುರುವಾರ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ನ್ಯಾಯಾಲಯದ ಆವರಣದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾ ನ್ಯಾಯಾಧೀಶರ ಅಧಿಕೃತ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ನ್ಯಾಯಾಲಯದ ಕಲಾಪಗಳನ್ನು ಸ್ಥಗಿತಗೊಳಿಸಿ ಎಲ್ಲರನ್ನೂ ಹೊರಗೆ ಕಳುಹಿಸಲಾಗಿದೆ. ​ಘಟನೆಯ ವಿವರ: ಇಂದು ಬೆಳಗ್ಗೆ ನ್ಯಾಯಾಧೀಶರ ಇ-ಮೇಲ್‌ಗೆ ಬೆದರಿಕೆ ಸಂದೇಶ ಬಂದ ಕೂಡಲೇ ಎಚ್ಚೆತ್ತ ಸಿಬ್ಬಂದಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್ ಪತ್ತೆ ದಳ (BDDS) ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ನ್ಯಾಯಾಲಯದ ಆವರಣಕ್ಕೆ ಆಗಮಿಸಿ ಜಾಲಾಡುತ್ತಿದ್ದಾರೆ. ನ್ಯಾಯಾಧೀಶರು, ವಕೀಲರು ಹಾಗೂ ನೂರಾರು ಸಂಖ್ಯೆಯಲ್ಲಿದ್ದ ಕಕ್ಷಿದಾರರನ್ನು ಸುರಕ್ಷಿತವಾಗಿ ನ್ಯಾಯಾಲಯದ ಸಂಕೀರ್ಣದಿಂದ ಹೊರಗೆ ಕಳುಹಿಸಲಾಗಿದೆ. ​ಪುನರಾವರ್ತಿತ ಕೃತ್ಯ: ಗಮನಾರ್ಹ ಸಂಗತಿಯೆಂದರೆ, ಕಳೆದ ಫೆಬ್ರವರಿ 16 ರಂದು ಕೂಡ ಇದೇ ಮಾದರಿಯಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಇದೀಗ ಮತ್ತೆ ಅದೇ ರೀತಿ ಬೆದರಿಕೆ ಸಂದೇಶ ಬಂದಿರುವುದು ವಕೀಲರ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.…

Read More

ವಿಧಾನಸಭೆ : ಮುಂದಿನ ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆ ಆಗುವುದು ವಿಳಂಬವಾಗಿದ್ದರಿಂದ ಸಹಾಯಧನ ಪಾವತಿಗೆ ತಡವಾಗಿದೆ. ಈ ಸಂಬಂಧ ಸಮಿತಿ ಸಭೆಗಳನ್ನು ತುರ್ತಾಗಿ ನಡೆಸಿ,‌ ಶಾಸಕರನ್ನು ಖುದ್ದಾಗಿ ಭೇಟಿ ಮಾಡಿ ಆಯ್ಕೆ ಸಮಿತಿ ಸಭೆಯನ್ನು ನಡೆಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.‌ ಈ ವರ್ಷದ ಉದ್ಯೋಗಿನಿ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಉದ್ಯೋಗಿನಿ ಯೋಜನೆಯನ್ನು ಜಾರಿಗೆ ತಂದಿರುವುದೇ ಮಹಿಳಾ ಸಬಲೀಕರಣಕ್ಕಾಗಿ. ಜೊತೆಗೆ ಗೃಹಲಕ್ಷ್ಮೀ, ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.‌ ಉದ್ಯೋಗಿ‌ನಿ ಯೋಜನೆಯ ಸಹಾಯಧನ ತಲುಪಲು ಬ್ಯಾಂಕ್‌ಗಳು ಕೂಡ ಸರಿಯಾಗಿ ಸಹಕರಿಸುತ್ತಿಲ್ಲ. ಶಾಸಕರು ಆಯ್ಕೆ ಮಾಡಿದ ಫಲಾನುಭವಿಗಳಲ್ಲಿ ಸಿಬಿಲ್‌ ಸ್ಕೋರ್‌…

Read More

ವಿಧಾನಸಭೆ : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು. ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂಥ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಸಚಿವರು ಮಾಹಿತಿ ಮಾಡಿದರು. ಇನ್ನು ಉಡುಪಿ…

Read More

ಬೆಂಗಳೂರು: ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ ಬೇರೆ ಉದ್ದೇಶಗಳಿಗೆ ಬಳಸಬಾರದು ಎಂದು ಬೆಸ್ಕಾಂ ತನ್ನ ಗ್ರಾಹಕರಿಗೆ ಮನವಿ ಮಾಡಿದೆ. ಗೃಹ ಬಳಕೆಗೆ ಪಡೆದ (ಎಲ್‌ಟಿ 1) ವಿದ್ಯುತ್‌ ಸಂಪರ್ಕವನ್ನು ಕೆಲವು ಗ್ರಾಹಕರು ಅಂಗಡಿ-ಮುಂಗಟ್ಟು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅತಿಥಿ ಗೃಹಗಳು, ಮೆಸ್‌, ಸರ್ವೀಸ್ ಅಪಾರ್ಟ್‌ ಮೆಂಟ್‌, ಪೇಯಿಂಗ್‌ ಗೆಸ್ಟ್‌, ಕಚೇರಿ ಮುಂತಾದ ಉದ್ದೇಶಗಳಿಗೆ (ಎಲ್‌ಟಿ 1 ಸಂಪರ್ಕ) ಅನಧಿಕೃತವಾಗಿ ಬಳಸುತ್ತಿರುವುದು ಬೆಸ್ಕಾಂ ಗಮನಕ್ಕೆ ಬಂದ್ದಿದ್ದು, ಇಂತಹ ಸಂಪರ್ಕಗಳನ್ನು ತಕ್ಷಣವೇ ಕಡಿತಗೊಳಿಸಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ. ಗೃಹ ಬಳಕೆಯ ಉದ್ದೇಶಕ್ಕೆ ಪಡೆದ ವಿದ್ಯುತ್‌ ಸಂಪರ್ಕವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವ ಗ್ರಾಹಕರು, ತಕ್ಷಣವೇ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಭೇಟಿ ನೀಡಿ ಸಮರ್ಪಕ ವಿದ್ಯುತ್‌ ದರ ವರ್ಗದ (tariff category) ಬದಲಾವಣೆಗೆ ಅರ್ಜಿ ಸಲ್ಲಿಸಿ ಸಂಪರ್ಕವನ್ನು ನಿಯಮಾನುಸಾರ ಪಡೆಯುವಂತೆ ಬೆಸ್ಕಾಂ ವಿನಂತಿಸಿದೆ. ಉತ್ಸವ, ಹಬ್ಬ, ಧಾರ್ಮಿಕ ಆಚರಣೆ ಸಂದರ್ಭದಲ್ಲಿ ಕೂಡ ಗೃಹ ಬಳಕೆಯ ವಿದ್ಯುತ್‌ ಸಂಪರ್ಕವನ್ನು…

Read More

ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಸಾಗರದ ಆರ್.ಬಿ.ಡಿ. ಸೌಹಾರ್ದ ಸಹಕಾರಿ ಸಂಘ ನಿಯಮಿತದ ಆಡಳಿತ ಮಂಡಳಿಯ 2026-2031ರ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆರ್ ಬಿಡಿ ಸೌಹಾರ್ದ ಸಹಕಾರಿ ಸಂಘ​ದ ನೂತನ ಅಧ್ಯಕ್ಷರಾಗಿ ಮಹಾಬಲೇಶ್ವರ ಎಂ.ಪಿ. ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಎಂ. ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ​ಹೀಗಿದೆ ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರ ಪಟ್ಟಿ: ಸಹಕಾರ ಸಂಘಗಳ ನಿಯಮದಂತೆ ವಿವಿಧ ವರ್ಗಗಳಿಂದ ಈ ಕೆಳಗಿನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ: ​ಸಾಮಾನ್ಯ ವರ್ಗ: ಮಹೇಶ್ ಡಿ., ಅಬ್ದುಲ್ ಜಲೀಲ್, ಮಂಜುನಾಥ ಕೆ.ಎಸ್., ಶ್ರೀಕಾಂತ್ ಎಲ್.ಆರ್., ರವೀಂದ್ರ ಎ. ಶೇಟ್, ಹೆಚ್.ಎಲ್. ಶ್ರೀಧರ ಮತ್ತು ಜಗದೀಶ. ​ಹಿಂದುಳಿದ ವರ್ಗ (ಅ): ಮಹಾಬಲೇಶ್ವರ ಎಂ.ಪಿ. ಮತ್ತು ಗಣೇಶ್ ಎಂ. ಶೆಟ್ಟಿ. ​ಪರಿಶಿಷ್ಟ ಜಾತಿ: ಆಶಾರಾಣಿ. ​ಪರಿಶಿಷ್ಟ ಪಂಗಡ: ವಸಂತ ಕುಮಾರ್ ಕೆ.ಬಿ. ​ಮಹಿಳಾ ಮೀಸಲು: ಕೆ.ಬಿ. ಪೂಜಾ ಮತ್ತು ಎಂ. ಯಮುನಾ. ​ಮಾರ್ಚ್ 8, 2026…

Read More

ಬೆಂಗಳೂರು: ಮಳವಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆ ಹಾಗೂ ಚಿರತೆಗಳ ಹಾವಳಿ ಹೆಚ್ಚಾಗುತ್ತಿದ್ದು, ಜನವಸತಿ ಪ್ರದೇಶಗಳಿಗೆ ವನ್ಯಜೀವಿಗಳು ನುಗ್ಗದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮತ್ತು ಚಿರತೆ ಕಾರ್ಯಪಡೆ ರಚನೆಗೆ ಸರ್ಕಾರ ಮುಂದಾಗಿದೆ. ​ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, ಕಾವೇರಿ ನದಿ ತೀರದ ಮಳವಳ್ಳಿ ಮತ್ತು ಕನಕಪುರ ಭಾಗದಲ್ಲಿ ಆನೆಗಳ ಹಾವಳಿ ವಿಪರೀತವಾಗಿದೆ. ರೈಲ್ವೆ ಬ್ಯಾರಿಕೇಡ್ ಮತ್ತು ಸೋಲಾರ್ ಟೆಂಟಕಲ್ ಫೆನ್ಸಿಂಗ್ ಹಾಕದಿದ್ದರೆ ರೈತರ ಬೆಳೆ ಹಾನಿ ತಪ್ಪಿಸಲು ಸಾಧ್ಯವಿಲ್ಲ ಎಂದು ಸದನದ ಗಮನ ಸೆಳೆದರು. ಅಲ್ಲದೆ, ಕಳೆದ ಮೂರು ವರ್ಷಗಳಿಂದ ಈ ಭಾಗದಲ್ಲಿ ಆರ್‌ಎಫ್‌ಒ (RFO) ಹುದ್ದೆಗಳು ಖಾಲಿಯಿದ್ದು, ತಕ್ಷಣ ನೇಮಕಾತಿ ಮಾಡುವಂತೆ ಆಗ್ರಹಿಸಿದರು. ​ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ: ​ಶಾಸಕರ ಪ್ರಶ್ನೆಗೆ ಉತ್ತರಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ರಾಜ್ಯಾದ್ಯಂತ ಆನೆಗಳ ಹಾವಳಿ ತಡೆಗೆ ಪ್ರಸಕ್ತ ವರ್ಷ ಸುಮಾರು 201 ಕೋಟಿ ರೂ. ವೆಚ್ಚದಲ್ಲಿ 116 ಕಿ.ಮೀ.…

Read More

ಶಿವಮೊಗ್ಗ: ಇತ್ತೀಚೆಗೆ ನಡೆದ ಸಾಗರ ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ, ಅಭ್ಯರ್ಥಿಯಾಗಿದ್ದ ತಾರಾಮೂರ್ತಿ ಅವರು ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ​ಗೆದ್ದವರಿಗೆ ಅಭಿನಂದನೆ: ವಿಡಿಯೋ ಸಂದೇಶದ ಮೂಲಕ ಮಾತನಾಡಿರುವ ಅವರು, “ಚುನಾವಣೆಯಲ್ಲಿ ವಿಜೇತರಾದ ಎಲ್ಲಾ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಲ್ಲರೂ ಸೇರಿ ದೇವಸ್ಥಾನದ ಅಭಿವೃದ್ಧಿಗೆ ಮತ್ತು ಸಮಾಜದ ಹಿತದೃಷ್ಟಿಯಿಂದ ಉತ್ತಮ ಕೆಲಸಗಳನ್ನು ಮಾಡಲಿ” ಎಂದು ಹಾರೈಸಿದರು. ​ಅಕ್ರಮಗಳ ಬಗ್ಗೆ ಆಕ್ರೋಶ: ತಾವೂ ಸಹ ಚುನಾವಣಾ ಕಣದಲ್ಲಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾಗಿ ತಿಳಿಸಿದ ಅವರು, ಸೋಲನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುವುದಾಗಿ ಹೇಳಿದರು. ಆದರೆ, ಧಾರ್ಮಿಕ ಕ್ಷೇತ್ರದ ಚುನಾವಣೆಯಲ್ಲಿ ಹಣ ಮತ್ತು ಹೆಂಡದ ಪ್ರಭಾವ ಹೆಚ್ಚಾಗಿರುವುದು ವಿಷಾದನೀಯ ಎಂದು ಮಾರ್ಮಿಕವಾಗಿ ನುಡಿದರು. ​”ರಾಜಕೀಯ ಚುನಾವಣೆಗಳಲ್ಲಿ ಹಣದ ಬಲ ನೋಡಿರುತ್ತೇವೆ, ಆದರೆ ಒಂದು ಪವಿತ್ರ ಧಾರ್ಮಿಕ ಕ್ಷೇತ್ರದ ಆಡಳಿತ ಮಂಡಳಿ ಆಯ್ಕೆಗೆ ಹಣ ಹಂಚಿ ಮತ ಪಡೆಯುವುದು ಬಹಳ ದೊಡ್ಡ ದುರಂತ. ಇದು ಒಳ್ಳೆಯ ಬೆಳವಣಿಗೆಯಲ್ಲ,”…

Read More

ಶಿವಮೊಗ್ಗ: ಇತ್ತೀಚೆಗೆ ನಡೆದ ಪ್ರತಿಷ್ಠಿತ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಸಾಧಿಸಿದ ಆನಂದ್ ಎಂ.ಡಿ ಅವರಿಗೆ ಹರಳಯ್ಯ ಸಮಾಜದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ​ನಗರದ ಸಮಾಜದ ಮುಖಂಡರು ಹಾಗೂ ಹಿರಿಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನಂದ್ ಅವರ ಜನಪರ ಕಾಳಜಿ ಮತ್ತು ಚುನಾವಣಾ ಯಶಸ್ಸನ್ನು ಶ್ಲಾಘಿಸಲಾಯಿತು. ಸಮಾಜದ ಪ್ರಮುಖರು ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ​ಕೃತಜ್ಞತೆ ಸಲ್ಲಿಸಿದ ಆನಂದ್ ಎಂ.ಡಿ ​ಸನ್ಮಾನ ಸ್ವೀಕರಿಸಿ ಮಾತನಾಡಿದ ಆನಂದ್ ಎಂ.ಡಿ ಅವರು, “ನನ್ನ ಮೇಲೆ ನಂಬಿಕೆಯಿಟ್ಟು ಮತ ನೀಡಿದ ಸಮಸ್ತರಿಗೂ ಹಾಗೂ ಈ ಯಶಸ್ಸಿಗೆ ಕಾರಣರಾದ ನನ್ನ ಹರಳಯ್ಯ ಸಮಾಜದ ಬಂಧುಗಳಿಗೆ ನಾನು ಚಿರಋಣಿ. ನನ್ನನ್ನು ಪ್ರೀತಿಯಿಂದ ಸನ್ಮಾನಿಸಿದ ಸಮಾಜದ ಎಲ್ಲಾ ಮುಖಂಡರುಗಳಿಗೆ ಮತ್ತು ಹಿರಿಯರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ದೇವಸ್ಥಾನದ ಅಭಿವೃದ್ಧಿ ಹಾಗೂ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ,” ಎಂದು ತಿಳಿಸಿದರು. ​ಈ…

Read More