Author: kannadanewsnow09

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಬೇಡಿಕೆಗೆ ಅನುಗುಣವಾಗಿ ರಸಗೊಪ್ಪರ ಪೂರೈಕೆ ಮಾಡುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದಂತ ಅವರು, ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ. 2025ರ ಮೇ, ಆಗಸ್ಟ್ ತಿಂಗಳಲ್ಲಿ ಸ್ವಲ್ಪ ಕೊರತೆಯಾಗಿತ್ತು. 2025-26ನೇ ಸಾಲಿನ ಹಿಂಗಾರು / ಬೇಸಿಗೆ ಹಂಗಾಮಿಗೆ 18.21 ಲಕ್ಷ ಮೆಟ್ರಿಕ್ ಟನ್ ವಿವಿಧ ಶ್ರೇಣಿಯ ರಸಗೊಬ್ಬರಗಳ ಬೇಡಿಕೆಯಿರುತ್ತದೆ ಎಂದರು. ಅಕ್ಟೋಬರ್ 2025 ರಿಂದ ಜನವರಿ 2026ರ ವರೆಗೆ 12.46 ಲಕ್ಷ ಮೆಟ್ರಿಕ್ ಟನ್ ಬೇಡಿಕೆಯಿದ್ದು, 2026ರ ಜನವರಿ 27ರ ವರೆಗೆ 21.89 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಗಳು ಸರಬರಾಜಾಗಿರುತ್ತದೆ. ಇದರಲ್ಲಿ 11.71 ಲಕ್ಷ ಮೆಟ್ರಿಕ್ ಟನ್ ಮಾರಾಟವಾಗಿ, 10.18 ಲಕ್ಷ ಮೆಟ್ರಿಕ್ ಟನ್ ದಾಸ್ತಾನಿನಲ್ಲಿರುತ್ತದೆ. ರಾಜ್ಯದ ಬೇಡಿಕೆಗನುಗುಣವಾಗಿ ಕೇಂದ್ರ ಸರ್ಕಾರದಿಂದ ರಸಗೊಬ್ಬರ ಸರಬರಾಜಾಗುತ್ತಿದೆ ಎಂದು ಅವರು ಹೇಳಿದರು. https://twitter.com/KarnatakaVarthe/status/2017560511576219932

Read More

ಬೆಂಗಳೂರು: ದೇಶೀಯ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರದಂದು ಕಡ್ಡಾಯವಾಗಿ ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದ್ದು, ಏಪ್ರಿಲ್ 24ರಿಂದ ಈ ನಿಯಮ ಜಾರಿಗೆ ಬರಲಿದೆ. ಸರ್ಕಾರಿ ಇಲಾಖೆಗಳು ಮಾತ್ರವಲ್ಲದೆ, ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿಗಳು, ಪ್ರಾಧಿಕಾರಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಸಂಸ್ಥೆಗಳ ನೌಕರರಿಗೂ ಈ ನಿಯಮ ಅನ್ವಯವಾಗಲಿದೆ. ಪ್ರಮುಖ ಅಂಶಗಳು: • ವಸ್ತ್ರ ಸಂಹಿತೆ: ಪುರುಷ ನೌಕರರು ಖಾದಿ ಶರ್ಟ್, ಪ್ಯಾಂಟ್ ಅಥವಾ ಓವರ್ ಕೋಟ್ ಧರಿಸಬಹುದು. ಮಹಿಳಾ ನೌಕರರು ಖಾದಿ ಅಥವಾ ಖಾದಿ ರೇಷ್ಮೆ ಸೀರೆ, ಚೂಡಿದಾರ್ ಧರಿಸಲು ಸೂಚಿಸಲಾಗಿದೆ. • ರಿಯಾಯಿತಿ: ನೌಕರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ, ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಅವರು ಖರೀದಿಸುವ ಬಟ್ಟೆಗಳಿಗೆ ಹಾಲಿ ಇರುವ…

Read More

ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರಿನ ಬಳಕೆ ಕಟ್ಟು ನಿಟ್ಟಾಗಿ ನಿಷೇಧಿಸಿ ಸರ್ಕಾರ ಮತ್ತೊಮ್ಮೆ ಆದೇಶ ಹೊರಡಿಸಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿನಾಂಕ 28-10-2025ರಂದು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ, ನಂದಿನಿ ತಿನಿಸುಗಳನ್ನು ಬಳಕೆ ಮಾಡುವಂತೆ ಟಿಪ್ಪಣಿ ಹೊರಡಿಸಿದ್ದರು. ಹೀಗಿದ್ದರೂ ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿರಲಿಲ್ಲ. ಈ ಎಲ್ಲಾ ಕಾರಣದಿಂದಾಗಿ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿರಾಜ್ಯಾದ್ಯಂತ ಸರ್ಕಾರಿ ಕಛೇರಿಗಳಲ್ಲಿ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ದೃಷ್ಟಿಯಿಂದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಸುವಂತೆ ಹಾಗೂ ಕರ್ನಾಟಕ ಸರ್ಕಾರದ ಎಲ್ಲಾ ಕಾರ್ಯಕ್ರಮ / ಕಚೇರಿಗಳ ಸಭೆಗಳಲ್ಲಿ ಕರ್ನಾಟಕ ಮಿಲ್‌, ಫೆಡರೇಶನ್ (KMF) ನ ‘ನಂದಿನಿ’ ತಿನಿಸುಗಳನ್ನು…

Read More

ಬೆಂಗಳೂರು: 2026ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಅಧಿಕಾರಿ/ನೌಕರರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಯೋಜನೆಯನ್ನು 2012 ರಿಂದ ಜಾರಿಗೆ ತರಲಾಗಿದೆ. ಪ್ರಸ್ತುತ 2026 ನೇ ಸಾಲಿನಲ್ಲಿ ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ” ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. “ಸರ್ವೋತ್ತಮ ಸೇವಾ ಪ್ರಶಸ್ತಿ”ಯ ಎರಡು ಹಂತದ ಪ್ರಶಸ್ತಿಗಳಿಗೂ ಅರ್ಜಿ ಸಲ್ಲಿಸಬಯಸುವವರು, ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮ ನಿರ್ದೇಶನವನ್ನು ಸಲ್ಲಿಸತಕ್ಕದ್ದು. ನಾಮನಿರ್ದೇಶನವನ್ನು ಸಲ್ಲಿಸಬಯಸುವವರು ಜಾಲತಾಣ https://dparar.karnataka.gov.in/ ಅಥವಾ https://sarvothamaawards.karnataka.gov.in ದ ಮೂಲಕ ದಿನಾಂಕ: 03-02-2026 ರಿಂದ 25-02-2026 ರೊಳಗಾಗಿ ಸಲ್ಲಿಸುವುದು. ಉಲ್ಲೇಖಿತ ಆದೇಶದ ಪ್ರತಿಗಳನ್ನು ಜಾಲತಾಣ https://dparar.karnataka.gov.in/ ರ ಸರ್ಕಾರದ ಆದೇಶಗಳು-ತರಬೇತಿ ಇಲ್ಲಿ ಅವಲೋಕಿಸಬಹುದಾಗಿದೆ. ರಾಜ್ಯ / ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ನಾಮನಿರ್ದೇಶನವನ್ನು ಕನ್ನಡ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ಭಾಗ್ಯ ಕರುಣಿಸುವಂತ ನಿರ್ಧಾರವನ್ನು ಕೈಗೊಂಡಿದೆ. ಆ ಮೂಲಕ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿತ್ತು. ಹಾಗಾದ್ರೇ ಬಿ-ಖಾತಾ ಹೊಂದಿರುವ ಆಸ್ತಿಗಳಿಗೆ ಎ-ಖಾತಾ ಭಾಗ್ಯದ ಬಗ್ಗೆ ಜನರು ತಿಳಿಯಲೇಬೇಕಾದಂತ ವಿಚಾರಗಳೇನು ಅಂತ ಮುಂದೆ ಓದಿ.. ಜೊತೆಗೆ ವೀಡಿಯೋದಲ್ಲಿ ವಿವರವಾದ ಮಾಹಿತಿ ಇದೆ ನೋಡಿ. ನಿಮ್ಮ ಪ್ರಾಪರ್ಟಿ ಇನ್ನೂ ಬಿ-ಖಾತಾದಲ್ಲಿದೆ ಎಂಬ ಆತಂಕ ಕಾಡುತ್ತಿದೆಯೇ? ಚಿಂತೆ ಬಿಡಿ, ಕಷ್ಟಪಟ್ಟು ದುಡಿದು ಗಳಿಸಿದ ಆಸ್ತಿಗೆ ಸಂಬಂಧಿಸಿದ ಆತಂಕಗಳನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ಸೂಕ್ತ ದಾಖಲೆಗಳನ್ನು ಹೊಂದಿದ್ದರೆ ಬಿ-ಖಾತಾವನ್ನು ಎ-ಖಾತಾಗೆ ಪರಿವರ್ತಿಸಿಕೊಳ್ಳಬಹುದಾಗಿದೆ. ಬಿ-ಖಾತಾದಿಂದ ಎ-ಖಾತಾ ಪಡೆಯಲು ಇವುಗಳು ಕಡ್ಡಾಯ ಬಿ-ಖಾತಾದಿಂದ ಎ-ಖಾತಾ ಪಡೆಯಲು ಸಾರ್ವಜನಿಕ ರಸ್ತೆ ಸಂಪರ್ಕ ಕಡ್ಡಾಯಲಾಗಿದೆ. ನಿವೇಶನ, ಮನೆಯಿರುವ ಜಾಗಕ್ಕೆ ಸಾರ್ವಜನಿಕ ರಸ್ತೆಯಿರಬೇಕು. ಒಂದು ವೇಳೆ ಓಡಾಡುವ ರಸ್ತೆ ಖಾಸಗಿಯಾಗಿದ್ದರೇ, ಅದನ್ನು ಮೊದಲು ಸಾರ್ವಜನಿಕ ರಸ್ತೆಯಂದು ಘೋಷಿಸಿಕೊಳ್ಳಬೇಕಾಗಿದೆ. ಎ-ಖಾತಾ ಪಡೆಯಲು ಭೂಪರಿವರ್ತನೆ ಅತ್ಯಗತ್ಯವಾಗಿದೆ. ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಕಲಂ 95ರ…

Read More

ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮತ್ತೆ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2026ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ 01-01-2026ರ ಬೆಳಗ್ಗೆ 11 ಗಂಟೆಯಿಂದ ಪ್ರಾರಂಭವಾಗಿದೆ ಎಂದಿದೆ. ದಿನಾಂಕ 31-01-2026ರ ಸಂಜೆ 5.30ರವರೆಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. ಆದರೇ ಅನೇಕರು ವರ್ಗಾವಣೆ ದಿನಾಂಕ ವಿಸ್ತರಣೆಗೆ ಕೋರಿದ್ದರ ಹಿನ್ನಲೆಯಲ್ಲಿ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 28-02-2026ರ ಸಂಜೆ 5.30ರವರೆಗೆ ಅವಧಿಯನ್ನು ವಿಸ್ತರಿಸಿರುವುದಾಗಿ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಜವಾಬ್ದಾರಿಯುತ ವರ್ತನೆ ಹಾಗೂ ಪ್ರಯಾಣದಲ್ಲಿ ಪಾಲಿಸಬೇಕಾದ ನಿಯಮಗಳನ್ನು ಬಲಪಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಅಭಿಯಾನವನ್ನು ಕೈಗೊಂಡಿದೆ. ಮೆಟ್ರೋ ರೈಲುಗಳು ಸಾರ್ವಜನಿಕರ ಸಂಚಾರಕ್ಕಿದ್ದು, ಸುರಕ್ಷಿತ, ಆರಾಮದಾಯಕ ಮತ್ತು ಸುಖಕರ ಪ್ರಯಾಣಕ್ಕಾಗಿ ಎಲ್ಲಾ ಪ್ರಯಾಣಿಕರ ಸಹಭಾಗಿತ್ವ ಅಗತ್ಯವಿದೆ. ಮೆಟ್ರೋ ರೈಲುಗಳಲ್ಲಿ ಹೆಡ್ ಫೋನ್ ಇಲ್ಲದೆ ಸಂಗೀತ ಕೇಳುವುದು, ಆಹಾರ ಸೇವಿಸುವುದು ಅಥವಾ ತಂಬಾಕು ಸೇವನೆ ಮಾಡುವುದು ಸಹ ಪ್ರಯಾಣಿಕರಿಗೆ ತೊಂದರೆಯನ್ನು ಉಂಟುಮಾಡುತ್ತದೆ. ಅದೇ ರೀತಿ, ಹಿರಿಯ ನಾಗರಿಕರಿಗೆ, ಗರ್ಭಿಣಿ ಮಹಿಳೆಯರಿಗೆ, ಅಂಗವಿಕಲರಿಗೆ ಮತ್ತು ಅಗತ್ಯವಿರುವವರಿಗೆ ಮೀಸಲು ಆಸನಗಳನ್ನು ಬಿಟ್ಟುಕೊಡುವುದು ಎಲ್ಲರ ಕರ್ತವ್ಯವಾಗಿದೆ. ಈ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು, ಬಿಎಂಆರ್‌ಸಿಎಲ್ ವಿಶೇಷ ಜಾಗೃತಿ ಅಭಿಯಾನವನ್ನು, ಇಬ್ಬರು ಗೃಹ ರಕ್ಷಕರನ್ನೊಳಗೊಂಡ (ಹೋಮ್ ಗಾರ್ಡ್‌ಗಳು) ವಿಶೇಷ ತಂಡಗಳನ್ನು ಮೆಟ್ರೋ ರೈಲುಗಳಲ್ಲಿ ನಿಯೋಜಿಸಿ, ಪ್ರಯಾಣಿಕರಿಗೆ ತಿಳುವಳಿಕೆ ನೀಡುವ ಹಾಗೂ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗಿದೆ. ಒಂದು ವರ್ಷದ ಈ ಅಭಿಯಾನದ ವಿಶ್ಲೇಷಣೆಯಲ್ಲಿ ಕೆಳಕಂಡ ಅಂಶಗಳು ಕಂಡುಬಂದಿವೆ: 57,538 ಪ್ರಯಾಣಿಕರು,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಬಿಗ್ ಶಾಕ್ ಎನ್ನುವಂತೆ, ಇನ್ ಹೌಸ್ ಮಾದರಿಯ ಡಯಾಲಿಸಿಸ್ ಸೇವೆಗಳ ಪ್ರತಿ ಡಯಾಲಿಸಿಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು,  ದಿನಾಂಕ:17.09.2024ರ ಸಚಿವ ಸಂಪುಟದ ತೀರ್ಮಾನದಂತೆ ಪ್ರಧಾನಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ವಿಭಾಗವನ್ನು ಒಳಗೊಂಡಂತೆ ಪಿ.ಪಿ.ಪಿ. ಮಾದರಿಗೆ ಒಳಪಡದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಸ್ವಯಂ ಚಾಲನೆಯ ಆಧಾರದ ಮೇಲೆ ಡಯಾಲಿಸಿಸ್ ಸೇವೆಯನ್ನು ಒದಗಿಸಲು, ಡಯಾಲಿಸಿಸ್ ಸೇವೆಯನ್ನು SAST ಸಂಸ್ಥೆಯ ಮುಖಾಂತರ ಅನುಷ್ಠಾನಗೊಳಿಸಲು ಹಾಗೂ PHH ಕಾರ್ಡ್‌ದಾರರಿಗೆ ಉಚಿತವಾಗಿ ಮತ್ತು PHH ಕಾರ್ಡ್ ದಾರರಲ್ಲದ ಫಲಾನುಭವಿಗಳಿಗೆ ಸಬ್ಸಿಡಿ ದರದಲ್ಲಿ ನೀಡಲಾಗಿದ್ದು, ಪ್ರತಿ ಡಯಾಲಿಸಿಸ್ ಸೈಕಲ್ ಕಾರ್ಯಾಚರಣೆಯ ವೆಚ್ಚವನ್ನು ರೂ. 1000/- ದಂತೆ ಮರುಪಾವತಿಗೆ ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ. ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ, ರವರ ಏಕಕಡತದಲ್ಲಿ ಕಲ್ಬುರ್ಗಿ ವಿಭಾಗದ 46 ಆರೋಗ್ಯ ಕೇಂದ್ರಗಳಲ್ಲಿ 25 ಆರೋಗ್ಯ ಕೇಂದ್ರಗಳು M/s DCDC…

Read More

ಚಂಡೀಗಢ: ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಶನಿವಾರ ಪಕ್ಷವನ್ನು ತೊರೆದಿದ್ದಾಗಿ ಹೇಳಿದ್ದು, ಪಕ್ಷದ ಪಂಜಾಬ್ ಘಟಕದ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರನ್ನು ಇದುವರೆಗಿನ ಅತ್ಯಂತ ಅಸಮರ್ಥ, ಭ್ರಷ್ಟ ಅಧ್ಯಕ್ಷ ಎಂದು ಕರೆದಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಕುರ್ಚಿಗೆ 500 ಕೋಟಿ ರೂ ಎಂಬ ಹೇಳಿಕೆಯೊಂದಿಗೆ ರಾಜಕೀಯ ವಿವಾದಕ್ಕೆ ಕಾರಣವಾದ ನಂತರ, ಕಳೆದ ತಿಂಗಳು ಕೌರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು. ಕೌರ್ ಪಂಜಾಬ್‌ನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಮತ್ತು ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರ ಪತ್ನಿ. ಪಂಜಾಬ್‌ನಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಒಪ್ಪಂದದ ಮೂಲಕ ವಾರಿಂಗ್ ಪಕ್ಷವನ್ನು ಸಣ್ಣ ಲಾಭಕ್ಕಾಗಿ ಮಾರಾಟ ಮಾಡಿದ್ದಾರೆ ಎಂದು ಮಾಜಿ ಶಾಸಕಿ ಆರೋಪಿಸಿದ್ದಾರೆ. ರಾಜಾ ವಾರಿಂಗ್, ಇದುವರೆಗಿನ ಅತ್ಯಂತ ಅಸಮರ್ಥ, ಭ್ರಷ್ಟ ಅಧ್ಯಕ್ಷ. ಕಾಂಗ್ರೆಸ್ ಅನ್ನು ನಾಶಮಾಡಲು ಸಿಎಂ ಜೊತೆ ಪಾಲುದಾರಿಕೆ ಮಾಡಿಕೊಳ್ಳುವ ಮೂಲಕ ನೀವು ಜೈಲಿನಿಂದ ನಿಮ್ಮನ್ನು ರಕ್ಷಿಸಿಕೊಂಡಿದ್ದೀರಿ. ಎಎಪಿ…

Read More

ಬಳ್ಳಾರಿ : ಪೋಕ್ಸೋ ಘಟನೆ ನಡೆದ ಸಂದರ್ಭದಲ್ಲಿ ಪ್ರಕರಣ ದಾಖಲಿಸುವುದು ಕಡ್ಡಾಯವಾಗಿದ್ದು, ವಿಳಂಬ ತೋರಿದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಲು ಕಾನೂನಿನಡಿ ಅವಕಾಶವಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೊಸಂಬೆ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ನ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿ ತಿಳಿದಿರುವ ಯಾರೇ ವ್ಯಕ್ತಿ, ಪೋಷಕರು ಅಥವಾ ಶಾಲಾ ಸಿಬ್ಬಂದಿ ಕೂಡಲೇ ಪೊಲೀಸ್ ಠಾಣೆ ಅಥವಾ ಮಕ್ಕಳ ರಕ್ಷಣಾ ಘಟಕಕ್ಕೆ ವರದಿ ಮಾಡುವುದು ಕಡ್ಡಾಯವಾಗಿದೆ ಎಂದರು. ಮಕ್ಕಳ ರಕ್ಷಣಾ ನೀತಿ 2016 ಕಾಯ್ದೆ ಅನುಷ್ಠಾನಗೊಳಿಸಿ: ಜಿಲ್ಲೆಯ ಎಲ್ಲಾ ಶಾಲೆಗಳು, ವಸತಿ ನಿಲಯಗಳ ಮಕ್ಕಳಿಗೆ ಯಾವುದೇ ರೀತಿಯ ಹಿಂಸೆ, ದೌರ್ಜನ್ಯ, ಶೋಷಣೆಯಿಂದ ರಕ್ಷಣೆ ಒದಗಿಸುವ ಮೂಲಕ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಪ್ರತಿಯೊಂದು ಶಾಲೆ ಮತ್ತು ವಸತಿ ನಿಲಯಗಳಲ್ಲಿ ಮಕ್ಕಳ…

Read More