Author: kannadanewsnow09

ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ ಶೀಟರ್ ಗಳು ಬಾರದೇ ಇದ್ದರೇ ಮನೆಗೆ ಪೊಲೀಸರು ತೆರಳಬಹುದು. ಸರ್ಕಾರ ಕಾನೂನು ರೂಪಿಸುವವರೆಗೂ…

Read More

ದಕ್ಷಿಣ ಕನ್ನಡ: ದೀಪಾವಳಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದ ಆರೋಪದಲ್ಲಿ ದಾಖಲಾಗಿದ್ದಂತ ಕೇಸಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಕೇಸ್ ದಾಖಲಾದ ಸಂದರ್ಭದಲ್ಲಿ ಬಲವಂತದ ಕ್ರಮ ಬೇಡವೆಂದಿತ್ತು. ನಂತರ ಪ್ರಭಾಕರ ಭಟ್ ಗೆ ಮಧ್ಯಂತರ ಜಾಮೀನು ನೀಡಿತ್ತು. ಇಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ದ್ವೇಷ ಭಾಷಣ ಪ್ರಕರಣದಲ್ಲಿ ಪೂರ್ಣ ಪ್ರಮಾಣದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನನ್ನು ಪುತ್ತೂರಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಂಜೂರು ಮಾಡಿದೆ. https://kannadanewsnow.com/kannada/japan-hit-by-another-7-6-magnitude-earthquake-after-a-few-days/ https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/

Read More

ಜಪಾನ್‌ನಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದು ಸತತ ಮೂರನೇ ದಿನವೂ ಆಗ್ನೇಯ ಏಷ್ಯಾದ ದೇಶದಲ್ಲಿ ಸಂಭವಿಸಿದ ಭೂಕಂಪವಾಗಿದೆ. ಜಪಾನಿನ ಮಾಪನದ ಪ್ರಕಾರ, ಭೂಕಂಪವು 5.9 ತೀವ್ರತೆಯದ್ದಾಗಿತ್ತು. ಇತ್ತೀಚಿನ ಭೂಕಂಪದ ನಂತರ ಯಾವುದೇ ಸುನಾಮಿ ಬೆದರಿಕೆಯನ್ನು ನೀಡಲಾಗಿಲ್ಲ. ಬುಧವಾರದ ಭೂಕಂಪವು ಮುಖ್ಯವಾಗಿ ಪೂರ್ವ ಅಮೋರಿ ಮತ್ತು ಹೊಕ್ಕೈಡೊ ಪ್ರಾಂತ್ಯಗಳಲ್ಲಿ ಕಂಡುಬಂದಿದೆ. ಭೂಕಂಪದ ಆಳ 30 ಕಿಲೋಮೀಟರ್ ಆಗಿತ್ತು. ಸೋಮವಾರ, ಜಪಾನ್‌ನಲ್ಲಿ 7.6 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದರೆ, ಮಂಗಳವಾರ, ದೇಶದ ಹೊಂಚೋ ಪಟ್ಟಣದಲ್ಲಿ 6.7 ತೀವ್ರತೆಯ ಕಂಪನಗಳು ಅನುಭವಿಸಿವೆ. https://kannadanewsnow.com/kannada/bmtc-to-purchase-4500-electric-buses-under-central-governments-pm-e-drive-scheme/ https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/

Read More

ಬೆಳಗಾವಿ ಸುವರ್ಣಸೌಧ: ಬಿಎಂಟಿಸಿಗೆ ಕೇಂದ್ರ ಸರ್ಕಾರದ PM e- DRIVE ಯೋಜನೆಯಡಿ 4,500 ವಿದ್ಯುತ್ ಚಾಲಿತ ಬಸ್‍ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ಜಾರಿಯಲ್ಲಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್. ಎಸ್. ಗೋಪಿನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದ್ದಾರೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 25 ಕಿ.ಮೀ.ವರೆಗೆ ಕಾರ್ಯಾಚರಣೆ ವ್ಯಾಪ್ತಿಯನ್ನು ಹೊಂದಿದ್ದು, ಬೆಂಗಳೂರು ನಗರ ಹಾಗೂ ಹೊರ ವಲಯದ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುಲಭ, ಸುರಕ್ಷಿತ ಸಾರಿಗೆ ಸೇವೆಯನ್ನು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ ಎಂದಿದ್ದಾರೆ. ಪ್ರತಿದಿನ ಹವಾನಿಯಂತ್ರಿತ ಸಾರಿಗೆಗಳನ್ನು ಒಳಗೊಂಡಂತೆ 1,817 ಮಾರ್ಗಗಳಲ್ಲಿ 6,274 ಅನುಸೂಚಿಗಳನ್ನು 65,934 ಸುತ್ತುವಳಿಗಳೊಂದಿಗೆ 13 ಲಕ್ಷ ಕಿ.ಮೀ.ಗಳಲ್ಲಿ ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ದಟ್ಟಣೆ / ಅವಶ್ಯಕತೆಗನುಗುಣವಾಗಿ ಕಾರ್ಯಾಚರಣೆ ಮಾಡುತ್ತಿದ್ದು, ಸರಾಸರಿ 44…

Read More

ಬೆಳಗಾವಿ ಸುವರ್ಣಸೌಧ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಉತ್ತರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದರು. ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟ್‍ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ…

Read More

ಬೆಳಗಾವಿ ಸುವರ್ಣಸೌಧ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಉತ್ತಮ ವ್ಯಾಸಂಗದ ಹಿತದೃಷ್ಟಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಅಂತ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.  ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹೆಚ್.ಡಿ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರ ಉತ್ತರಿಸಿದರು. 2024-25ನೇ ಸಾಲಿನಲ್ಲಿ ಮಂಜೂರಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡ ನಿರ್ಮಾಣವನ್ನು ಲೋಕೋಪಯೋಗಿ ಇಲಾಖೆ, ಹಾಸನ ಇವರ ಮೂಲಕ ಕೈಗೊಳ್ಳಲಾಗಿದೆ. ಈಗಾಗಲೇ 2.50ಕೋಟಿ ರೂ.ಗಳನ್ನು ಹಾಸನ ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡಲಾಗಿರುತ್ತದೆ. ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಆದಷ್ಟು ಶೀಘ್ರವಾಗಿ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗುವುದು. https://twitter.com/KarnatakaVarthe/status/1998745244163260681 https://kannadanewsnow.com/kannada/finance-department-approves-filling-of-24300-vacant-posts-in-the-state-cm-siddaramaiah/ https://kannadanewsnow.com/kannada/this-is-a-true-incident-that-happened-in-the-presence-of-the-king-the-miracle-that-happened-that-night-in-the-mantralaya/

Read More

ಬೆಳಗಾವಿ ಸುವರ್ಣಸೌಧ: ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಸರ್ಕಾರ ಉದ್ದೇಶ ಹೊಂದಿದೆಯೇ ಎಂಬ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಶ್ನೆಗೆ ಸಿಎಂ ಲಿಖಿತ ಉತ್ತರ ನೀಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ 79694, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37572, ಒಳಾಡಳಿತದಲ್ಲಿ 28188 ಹುದ್ದೆಗಳು ಗರಿಷ್ಠ ಪ್ರಮಾಣದಲ್ಲಿ ಖಾಲಿ ಇವೆ. ಈ ರೀತಿ 2025-26ನೇ ಸಾಲಿನಲ್ಲಿ ಒಟ್ಟು 43 ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಭರ್ತಿ ಮಾಡಲು ಆರ್ಥಿಕ ಇಲಾಖೆಯಿಂದ ಅನುಮೋದಿತವಾದ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಲು ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. https://twitter.com/KarnatakaVarthe/status/1998744724971114638 https://kannadanewsnow.com/kannada/here-is-the-list-of-bills-passed-in-the-belgaum-legislative-assembly-today/ https://kannadanewsnow.com/kannada/this-is-a-true-incident-that-happened-in-the-presence-of-the-king-the-miracle-that-happened-that-night-in-the-mantralaya/

Read More

ಬೆಳಗಾವಿ ಸುವರ್ಣಸೌಧ: ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದರೆ ಆರ್‌ಟಿಒ ಕಚೇರಿಗಳ ಅಧಿಕಾರಿಗಳನ್ನೇ ಹೊಣೆಯಾಗಿಸಿ, ಶಿಸ್ತುಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿ ಕ್ರಮವಹಿಸಲಾಗುತ್ತಿದೆ. ಆರ್ ಟಿ ಓ ಕಚೇರಿಗಳಲ್ಲಿ ಬ್ರೋಕರ್ ಗಳು ಕಾಣಿಸಿಕೊಂಡರೇ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದರು. ಆರ್‌ಟಿಒ ಕಚೇರಿಗಳಲ್ಲಿ ಶಿಸ್ತು ತರಲು ಅನೇಕ ಕ್ರಮವಹಿಸಲಾಗಿದೆ. ಕಚೇರಿಯಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿ/ಸ್ವೀಕೃತಿಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ಕಡ್ಡಾಯವಾಗಿ ವಹಿಗಳನ್ನು ವಿಷಯ ನಿರ್ವಾಹಕರು ನಿರ್ವಹಿಸುವುದು. ಅಧೀಕ್ಷಕರುಗಳು ಪ್ರತಿ ವಾರಕ್ಕೊಮ್ಮೆ ವಹಿಗಳನ್ನು ಪರಿಶೀಲಿಸುವುದು ಹಾಗೂ ತಿಂಗಳಿಗೊಮ್ಮೆ ಮೇಜು ತಪಾಸಣೆಯನ್ನು ನಡೆಸಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವಂತೆ ಸಾರಿಗೆ ಆಯುಕ್ತರು ಸುತ್ತೋಲೆ ಹೊರಡಿಸಿ ಸೂಚನೆ ನೀಡಿದ್ದಾರೆ. ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಯಾವುದೇ ರೀತಿಯ ಅವಕಾಶ ಕಲ್ಪಿಸದಂತೆ ಕರ್ತವ್ಯ ನಿರ್ವಹಿಸುವಂತೆ ಒಂದು ವೇಳೆ ಯಾವುದೇ ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಸ್ಮರಣಿಕೆ ಮತ್ತು ಟ್ರೋಫಿಗಳನ್ನು ಕಡ್ಡಾಯವಾಗಿ ನಿಷೇಧಿಸಿ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಸದರಿ ಸುತ್ತೋಲೆಗೆ ಹಲವು ಅಂಶಗಳನ್ನು ಸೇರ್ಪಡೆಗೊಳಿಸಬೇಕಿರುವ ಅವಶ್ಯಕತೆಯನ್ನು ಮನಗಂಡು ಈ ಸುತ್ತೋಲೆಯನ್ನು ಕೆಳಂಕಂಡಂತೆ ಸೇರಿಸಲಾಗಿದೆ ಎಂದಿದ್ದಾರೆ. ಸರ್ಕಾರಿ ಪ್ರಾಯೋಜಿತ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗಣ್ಯರಿಗೆ ಸ್ಮರಣಿಕೆ, ಟ್ರೋಫಿ ಮತ್ತು ಇನ್ನಿತರೇ ಸ್ಮರಣಾರ್ಥ ವಸ್ತುಗಳನ್ನು ನೀಡುವುದು ನಿಯಮಿತ ಅಭ್ಯಾಸವಾಗಿರುತ್ತದೆ. ಈ ಪದ್ಧತಿಯು ಆರಂಭದಲ್ಲಿ ಸದ್ಭಾವನೆ ಮತ್ತು ಮೆಚ್ಚುಗೆಯ ಸಂಕೇತದ ಉದ್ದೇಶವಾಗಿದ್ದರೂ ಸಹ ಗಣ್ಯರನ್ನು ಸನ್ಮಾನಿಸುವ ಇಂತಹ ಅಭ್ಯಾಸವು ಆರ್ಥಿಕ ಮಿತವ್ಯಯ, ಪರಿಸರ…

Read More

ಬೆಂಗಳೂರು: ಕೇಂದ್ರ ಸರ್ಕಾರವು ಸ್ಪ್ಯಾನ್ ಕರೆಗಳಿಗೆ ಬ್ರೇಕ್ ಹಾಕುವಂತ ನಿರ್ಧಾರ ಕೈಗೊಂಡಿತ್ತು. ಇದರ ಭಾಗವಾಗಿ ಟ್ರಾಯ್ಡ್ ಗೆ ಖಡಕ್ ಸೂಚನೆ ಕೂಡ ನೀಡಲಾಗಿತ್ತು. ಅದರಂತೆ ಈಗ ಸ್ಪ್ಯಾಮ್ ಕರೆಗಳಿಗೆ ಬ್ರೇಕ್ ಬಿದ್ದಿದ್ದು, ಈಗ ನಿಮಗೆ ಬರುವಂತ ಕರೆ ಯಾರದ್ದೆಂದು ಹೆಸರೇ ನಿಮ್ಮ ಪೋನಿನಲ್ಲಿ ಡಿಸ್ಪ್ಲೆ ಆಗುವಂತೆ ಆಗಿದೆ. ಹೌದು.. ಇದನ್ನು ಬರುತೇಕರು ಗಮನಿಸೇ ಇರೋದಿಲ್ಲ. ನಿಮ್ಮ ಮೊಬೈಲ್ ಕಾಂಟ್ಯಾಕ್ಟ್ ನಲ್ಲಿ ನಂಬರ್ ಸೇವ್ ಇರದ ಸಂಖ್ಯೆಗಳಿಂದ ಕರೆ ಬಂದರೇ, ಕರೆ ಮಾಡುತ್ತಿರುವಂತ ವ್ಯಕ್ತಿಯ ಹೆಸರು ಏನು ಎಂಬುದಾಗಿ ಪ್ರದರ್ಶಿಸಲ್ಪಡುತ್ತಿದೆ. ಟೆಲಿಕಾಂ ಕಂಪನಿಗಳಿಗೆ ಸಿಮ್ ಖರೀದಿಸುವಂತ ಸಂದರ್ಭದಲ್ಲಿ ಗ್ರಾಹಕರು ನೀಡಿದಂತ ದಾಖಲೆಯ ಆಧಾರದಲ್ಲಿ ಹೆಸರನ್ನು ನೋಂದಾಯಿಸಲಾಗಿರುತ್ತದೆ. ಗ್ರಾಹಕರ ದಾಖಲೆಯಲ್ಲಿ ಇರುವಂತ ಹೆಸರಿನಂತೆಯೇ ಈಗ ಅನಾಮದೇಯ ನಂಬರ್ ಗಳಿಂದ ಕರೆ ಬಂದರೂ, ಕರೆ ಮಾಡುತ್ತಿರುವಂತ ವ್ಯಕ್ತಿಯ ಹೆಸರು ಏನು ಎನ್ನುವುದನ್ನು ಮೊಬೈಲ್ ಡಿಸ್ಪ್ಲೆ ಮೇಲೆ ತೋರಿಸಲಾಗುತ್ತಿದೆ. ನಿಮ್ಮ ಮೊಬೈಲ್ ಗಳಲ್ಲಿ ನಂಬರ್ ಸೇವ್ ಮಾಡಿಕೊಳ್ಳದೇ ಇರುವಂತ ಸಂಖ್ಯೆಯಿಂದ ಕರೆ ಬಂದರೂ, ಅತ್ತಲಿಂದ ಕರೆ ಮಾಡುತ್ತಿರುವಂತ…

Read More