Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 12 ಐಎಎಸ್, 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಶಿವಮೊಗ್ಗ ಡಿಸಿಯಾಗಿದ್ದಂತ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಎಸ್ಪಿಯಾಗಿದ್ದಂತ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ. ಇನ್ನೂ ಸಾಗರದ ಎಎಸ್ಪಿಯಾಗಿದ್ದಂತ ಯತೀಶ್ ಅವರನ್ನು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಕೋಲಾರದ ಎಸ್ಪಿಯಾಗಿದ್ದಂತ ನಿಖಿಲ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. ಹೀಗಿದೆ 12 ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಹೀಗಿದೆ 48 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ
“ಶ್ರೀ ಮಹಾಲಕ್ಷ್ಮೀ” ಪೂಜೆಯನ್ನು ಮಾಡುವ ಸ್ತ್ರೀಯರು “ತೆಂಗಿನಕಾಯಿ” ಯನ್ನು ಪುರುಷರಿಂದ ಒಡೆಸಿ, ನೀವು ಬೇಡ..! “ತೆಂಗಿನಕಾಯಿ” ಯನ್ನು ತಾಂಬೂಲದೊಡನೆ ದಾನ ಮಾಡಿದರೆ , ಅಷ್ಟನಿಧಿ ನವನಿಧಿಗಳು ಪ್ರಾಪ್ತಿಯಾಗುತ್ತದೆ..! ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ…
ಶಿವಮೊಗ್ಗ: ಎನ್ ಪಿ ಎಸ್ ರದ್ದುಗೊಳಿಸಬೇಕು. ಓಪಿಎಸ್ ಜಾರಿಗೊಳಿಸಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದೆ. ಸರ್ಕಾರ ಈ ನಿಟ್ಟಿನಲ್ಲಿಯೂ ಕ್ರಮವಹಿಸಿದೆ. ಒಂದು ವೇಳೆ ಜಾರಿಗೊಳಿಸದೇ ಹೋದರೇ ಓಪಿಎಸ್ ಜಾರಿಗೆ, ಕೇಂದ್ರದ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ವೇತನ ನೀಡುವುದಕ್ಕೆ ಹೋರಾಟ ರೂಪಿಸಲಿದೆ ಎಂಬುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಹೇಳಿದರು. ಮಂಗಳವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಂಡಿದ್ದಂತ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಸರ್ಕಾರಿ ನೌಕರರು ಒತ್ತಡದ ನಡುವೆಯೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೆಲವೊಮ್ಮೆ ಭಾಷೆ ಬಳಸಲು ಹಿಂದೆಮುಂದೆ ಆಗಬಹುದು. ಆದರೆ ಸರ್ಕಾರಿ ನೌಕರರ ಕನ್ನಡಾಭಿಮಾನ ಸದಾ ಸ್ಮರಣೀಯವಾದದ್ದು. ಸಾಗರದಲ್ಲಿ ಸಂಘಟನೆ ಇನ್ನಷ್ಟು ಗಟ್ಟಿಗೊಳ್ಳಬೇಕು ಎಂದರು. ಮಲೆನಾಡಿನಲ್ಲಿ ಕನ್ನಡ ಭಾಷೆಗೆ ಉತ್ತಮ ನೆಲೆಯಿದೆ. ಗಡಿಭಾಗದ ಪ್ರದೇಶಗಳಲ್ಲಿ ವಿವಿಧ ಭಾಷೆಗಳ ಹಾವಳಿಯಿಂದಾಗಿ ಕನ್ನಡಕ್ಕೆ ಹಿನ್ನಡೆಯಾಗಿದೆ. ಮಲೆನಾಡಿನಾದ್ಯಂತ ಕನ್ನಡ ನೆಲ, ಜಲ, ಭಾಷೆ ಕುರಿತು ಅಭಿಮಾನವಿದೆ. ಇಂತಹ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ…
ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ, ನಾಳೆಯಿಂದ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರವು ಆದೇಶ ಸಂಖ್ಯೆ: ಟಿಡಿ 45 ಟಿಸಿಎಸ್ 2020, ದಿನಾಂಕ:09-03-2021, ಟಿಡಿ 45 ಟಿಸಿಎಸ್ 2020, ದಿನಾಂಕ:23-03-2021 ಹಾಗೂ ಟಿಡಿ 45 ಟಿಸಿಎಸ್ 2020, ದಿನಾಂಕ:18-01-2025 ರನ್ವಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ನಿಗಮ, ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ. ತತ್ಸಂಬಂದ, ಕ.ರಾ.ರ.ಸಾ.ನಿಗಮವು ಸುತ್ತೋಲೆ ಸಂಖ್ಯೆ:1690 ದಿನಾಂಕ:26-03-2021 ಮತ್ತು ಸುತ್ತೋಲೆ ಸಂಖ್ಯೆ: 1736 ದಿನಾಂಕ: 18.06.2025 ರಲ್ಲಿ ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ದಿನಾಂಕ: 01-01-2026ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಲಿದ್ದು, ದಿನಾಂಕ: 31-01-2026ರ ಸಂಜೆ…
ಬೆಂಗಳೂರು: ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಚಿತ್ರಕಲಾವಿದರೂ ಆದ ಪ್ರೊ. ಎಂ ಜೆ ಕಮಲಾಕ್ಷಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಎಂ ಜೆ ಕಮಲಾಕ್ಷಿ ಅವರು ಈ ನಾಡು ಕಂಡ ಅತ್ಯಂತ ಪ್ರತಿಭಾನ್ವಿತ ಚಿತ್ರ ಕಲಾವಿದರಾಗಿದ್ದರು. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಅವರ ಕಲಾ ಕೃತಿಗಳಿಗೆ ಮನ್ನಣೆ ದೊರೆತಿತ್ತು. ಕರ್ನಾಟಕ ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾಗಿ ಅವರು ಅನೇಕ ಗಮನಾರ್ಹ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಪ್ರಿಯರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಶಸ್ತಿ ಹಾಗೂ ಪ್ರತಿಷ್ಠಿತ ವರ್ಣ ಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಭಾಜನರಾಗಿದ್ದ ಕಮಲಾಕ್ಷಿ ಅವರು ಚಿತ್ರಕಲೆಗೆ ತಮ್ಮ ಇಡೀ ಜೀವನ ಮುಡಿಪಿಟ್ಟಿದ್ದರು. ಅಂತಹ ಹಿರಿಯ ಕಲಾವಿದರ ಆಗಲಿಕೆ ನೋವನ್ನು ಉಂಟುಮಾಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿ ನೀಡಲಿ ಎಂದು…
ರಾಜಸ್ಥಾನ: ಹೊಸ ವರ್ಷದ ಮುನ್ನಾದಿನದಂದು ವಿಶೇಷ ವಾಹನ ತಪಾಸಣೆ ಕಾರ್ಯಾಚರಣೆಯ ಸಂದರ್ಭದಲ್ಲಿ ಟೋಂಕ್-ಜೈಪುರ ಹೆದ್ದಾರಿಯಲ್ಲಿ ಕಾರಿನಿಂದ ಸ್ಫೋಟಕ ವಸ್ತುಗಳ ದೊಡ್ಡ ಸಂಗ್ರಹವನ್ನು ಪೊಲೀಸರು ವಶಪಡಿಸಿಕೊಂಡರು, ಇದು ಭದ್ರತಾ ಎಚ್ಚರಿಕೆಯನ್ನು ನೀಡಿತು. ವಾಹನದಿಂದ ಸುಮಾರು 150 ಕೆಜಿ ಅಮೋನಿಯಂ ನೈಟ್ರೇಟ್, 200 ಸ್ಫೋಟಕ ಬ್ಯಾಟರಿಗಳು ಮತ್ತು 1,100 ಮೀಟರ್ ವಿದ್ಯುತ್ ತಂತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಬಂಡಿ ಕಡೆಗೆ ಹೋಗುತ್ತಿದ್ದ ಮಾರುತಿ ಸಿಯಾಜ್ ಕಾರನ್ನು ಅಧಿಕಾರಿಗಳು ತಡೆದ ನಂತರ ಬರೋನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ವಶಪಡಿಸಿಕೊಳ್ಳಲಾಗಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ನಂತರ ಬಂಧಿಸಲಾಯಿತು. “ಮಾರುತಿ ಸಿಯಾಜ್ ಕಾರಿನಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಯೂರಿಯಾ ಚೀಲಗಳಲ್ಲಿ ಅಡಗಿಸಿಟ್ಟಿದ್ದ 150 ಕೆಜಿ ಅಮೋನಿಯಂ ನೈಟ್ರೇಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ, ಪೊಲೀಸರು 200 ಸ್ಫೋಟಕ ಬ್ಯಾಟರಿಗಳು ಮತ್ತು 1,100 ಮೀಟರ್ ವೈರ್ ಅನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಒಬ್ಬರು ಸುರೇಂದ್ರ ಮತ್ತು ಇನ್ನೊಬ್ಬರು ಸುರೇಂದ್ರ ಮೋಚಿ. https://twitter.com/ANI/status/2006281613295104221 ಕಾರಿನೊಳಗೆ…
ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ, ಅಧಿಭೋಗ ಪ್ರಮಾಣ ಪತ್ರ ( Occupancy Certificate) ಪಡೆಯುವುದರಿಂದ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗುವ ಕಟ್ಟಡಗಳಿಗೆ ಅಥವಾ ಅಸ್ತಿತ್ವದಲ್ಲಿನ ಕಟ್ಟಡಗಳ ಬದಲಾವಣೆಗಳಿಗೆ ಸಂಬಂಧಿಸಿದಂತೆ ಕಾಮಗಾರಿ ಪೂರ್ಣಗೊಂಡ ನಂತರ ಪ್ರಾಧಿಕಾರಕ್ಕೆ ಅರ್ಹನಾದ ವಾಸ್ತುಶಿಲ್ಪಿ/ಪಟ್ಟಿಯಲ್ಲಿನ (empanelled) ಇಂಜಿನಿಯರ್/ ಮೇಲ್ವಿಚಾರಕರಿಂದ ಕಟ್ಟಡ ಪೂರ್ಣಗೊಂಡ ಪ್ರಮಾಣ ಪತ್ರವನ್ನು ಪಡೆದ ನಂತರ ಪಂಚಾಯತಿ ಅಭಿವೃದ್ಧಿ ಅಧಿಕಾರಿಯು ಸ್ವಾಧೀನ/ಅಧಿಭೋಗದಾರಿಕೆ ಪಮಾಣ ಪತ್ರ ವಿತರಿಸುವ ಪೂರ್ವದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಗ್ರಾಮ ಪಂಚಾಯತಿಯಿಂದ ವಿತರಣೆ ಮಾಡಲಾದ ಲೈಸನ್ಸ್ ಅನುಮೋದಿಸಲಾದ ಕಟ್ಟಡ ನಕ್ಷೆ ಹಾಗೂ ಅಂದಾಜು ಪಟ್ಟಿಗಳಂತೆ ಕಟ್ಟಡ ನಿರ್ಮಾಣವಾಗಿರುವ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಗಳೊಂದಿಗೆ ಜಂಟಿಯಾಗಿ ಪರಿಶೀಲಿಸಿ, ಸಂಬಂಧಿಸಿದ ಯೋಜನಾ ಪ್ರಾಧಿಕಾರದಿಂದ…
ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅದರ ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು. ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ. ಆದರೆ ನನಗೆ ತಿಳಿದ ಮಟ್ಟಿಗೆ, ಈ ಕಾಯಿಲೆಯಿಂದ ಬಳಲುತ್ತಿರುವ ಇನ್ನೂ ನಾಲ್ಕು ಜನರನ್ನು ಆಸ್ಪತ್ರೆಗಳಿಗೆ ಕರೆತರಲಾಯಿತು ಮತ್ತು ಅವರು ಸಹ ಸಾವನ್ನಪ್ಪಿದರು ಎಂದು ಅವರು ವರದಿಗಾರರಿಗೆ ತಿಳಿಸಿದರು. ಪ್ರಾಥಮಿಕ ಅಂದಾಜಿನ ಪ್ರಕಾರ ಸೋರಿಕೆಯಿಂದಾಗಿ ಒಳಚರಂಡಿ ನೀರು ಕುಡಿಯುವ ನೀರಿನ ಪೈಪ್ಲೈನ್ಗೆ ಪ್ರವೇಶಿಸಿದೆ, ಇದು ಭಾಗೀರಥಪುರ ಪ್ರದೇಶದಲ್ಲಿ ಅತಿಸಾರ ಮತ್ತು ವಾಂತಿ ಹರಡಲು ಕಾರಣವಾಯಿತು ಎಂದು ಭಾರ್ಗವ ಹೇಳಿದರು. ಏತನ್ಮಧ್ಯೆ, ಕಲುಷಿತ ಕುಡಿಯುವ ನೀರಿನಿಂದ ಉಂಟಾದ ಅತಿಸಾರದಿಂದ ನಾಲ್ಕು ಸಾವುಗಳು ಸಂಭವಿಸಿವೆ ಎಂದು ವೈದ್ಯರು ದೃಢಪಡಿಸಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿವಂ ವರ್ಮಾ ಹೇಳಿದರು. ಈ ಕಾಯಿಲೆಯಿಂದ ಬಳಲುತ್ತಿರುವ 149 ರೋಗಿಗಳನ್ನು ನಗರದಾದ್ಯಂತ 27 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ…
ಬೆಂಗಳೂರು : ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ ‘ಟೇಲ್ಸ್ ಬೈ ಪರಿ’ ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರಳಾಗಿದ್ದಾಳೆ. ಬಸವನಗುಡಿಯ ಎನ್ಇಟಿ ಪಬ್ಲಿಕ್ ಶಾಲೆಯಲ್ಲಿ 4ನೇ ತರಗತಿ ಓದುತ್ತಿರುವ ಪರಿಣಿತಾ ಬರೆದಿರುವ ಪುಸಕ್ತ ‘ಟೇಲ್ಸ್ ಬೈ ಪರಿ’. ಈಗ ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸೇರ್ಪಡೆಗೊಂಡಿದ್ದು, “ಯುವ ಲೇಖಕಿ” ಎಂಬ ಮನ್ನಣೆಯನ್ನೂ ತಂದುಕೊಟ್ಟಿದೆ. ಪರಿಣಿತಾಳ ಮೊದಲ ಕಥಾ ಪುಸ್ತಕ ‘ಟೇಲ್ಸ್ ಬೈ ಪರಿ’ 2025ರ ಮಾರ್ಚ್ 8 ರಂದು ಲೋಕಾರ್ಪಣೆಗೊಂಡಿತ್ತು. ಸುಬ್ಬು ಪಬ್ಲಿಕೇಷನ್ಸ್ ಪ್ರಕಟಿಸಿದ್ದ ಪುಸ್ತಕವು ಪರಿಣಿತಾ ಅವರ ಪ್ರತಿಭೆ ಹಾಗೂ ಸಾಹಿತ್ಯ ಆಸಕ್ತಿಯನ್ನು ಗುರುತಿಸುವಂತೆ ಮಾಡಿತ್ತು, ಪರಿಣಿತಾ ಅವರನ್ನು ಶಿಕ್ಷಕರು ಹಾಗೂ ಅನೇಕ ಗಣ್ಯರು ಮೆಚ್ಚಿಕೊಂಡಿದ್ದಾರೆ. ಸಾಹಿತ್ಯ ಓದು, ಬರಹದಲ್ಲಿ ಬಾಲ್ಯದಿಂದಲೇ ಆಸಕ್ತಿ ಬೆಳೆಸಿಕೊಂಡಿರುವ ಪರಿಣಿತಾ, ಸ್ವಂತಿಕೆ, ಅಭಿವ್ಯಕ್ತಿ ಮತ್ತು ಕಥೆ ಹೆಣೆಯುವಿಕೆಯಲ್ಲಿ ತನ್ನದೇ ಶೈಲಿಯನ್ನು ರೂಪಿಸಿಕೊಂಡಿದ್ದಾಳೆ. ಕಥಾ…
ಸಾಗರ : ಹೊರರಾಜ್ಯಗಳಿಂದ ಬರುವ ಐಎಎಸ್ ಐಪಿಎಸ್ ಅಧಿಕಾರಿಗಳು ಕನ್ನಡ ಕಲಿತು ಚನ್ನಾಗಿ ಮಾತನಾಡುತ್ತಾರೆ. ಕನ್ನಡಿಗರೆ ಆಗಿರುವ ಅಧಿಕಾರಿಗಳು ಕನ್ನಡ ಮಾತನಾಡಲು ಹಿಂದೆಮುಂದೆ ನೋಡುತ್ತಾರೆ. ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಮಂಗಳವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ನೌಕರರ ಭವನದಲ್ಲಿ, ನೌಕರರ ಸಂಘದಿಂದ ಏರ್ಪಡಿಸಿದ್ದಂತ ಕನ್ನಡ ರಾಜ್ಯೋತ್ಸವ, ನೌಕರರ ಸಮಾವೇಶ, ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಅವರು, ಕನ್ನಡ ಸುಂದರ ಭಾಷೆ. ಕಚೇರಿಗಳಲ್ಲಿ ಕನ್ನಡ ಭಾಷೆ ಬಳಕೆ ಕಡ್ಡಾಯವಾದರೆ ರಾಜ್ಯದಲ್ಲಿ ಕನ್ನಡ ಭಾಷೆ ವಿಜೃಂಭಿಸುತ್ತಿದೆ. ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು. ಸರ್ಕಾರಿ ನೌಕರ ಸಂಘ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುವುದು ಕಾರ್ಯಾಂಗ ಮತ್ತು ಶಾಸಕಾಂಗ ಒಟ್ಟಾಗಿ ನಡೆದರೆ ಸರ್ಕಾರದ ಯೋಜನೆಗಳನ್ನು ತಳಮಟ್ಟದ ಜನರಿಗೆ ತಲುಪಿಸಲು ಸಾಧ್ಯ ಎಂದರು. ಸಾಗರ ತಾಲ್ಲೂಕಿನ ಅಧಿಕಾರಿ ನೌಕರರು ಜನರಿಗೆ ಉತ್ತಮ ಸೇವೆ ಕೊಡಿ. ಜನರ…














