Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ನಡೆದು 36 ಮಂದಿ ಆಯ್ಕೆಯಾಗಿದ್ದಾರೆ. ಇವರಲ್ಲಿ ಅಧ್ಯಕ್ಷರ ಆಯ್ಕೆಗಾಗಿ ನಾಳೆ ಚುನಾವಣೆ ನಿಗದಿಯಾಗಿದೆ. ತೀವ್ರ ಕುತೂಹಲ ಮೂಡಿಸಿರುವಂತ ಅಧ್ಯಕ್ಷರ ಆಯ್ಕೆಯ ಚುನಾವಣೆಗೂ ಮುನ್ನವೇ, ಕನ್ನಡ ನ್ಯೂಸ್ ನೌ ಗೆ ಯಾರಾಗಲಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿದೆ. ಆ ಮಾಹಿತಿಯಂತೆ ಸಾಗರದ ಮಾರಿಗುಡಿ ಸಮಿತಿಯ ಅಧ್ಯಕ್ಷರಾಗಿ ಪವಿತ್ರ ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ ಆನಂದ್ ಆಯ್ಕೆಯಾಗೋದು ಫಿಕ್ಸ್ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಐತಿಹಾಸಿಕ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಅಧ್ಯಕ್ಷರು ಸೇರಿದಂತೆ ಇತರೆ ಪದಾಧಿಕಾರಿಗಳ ಆಯ್ಕೆ ನಾಳೆ ನಡೆಯಲಿದೆ. ಇಂದು ತೀವ್ರ ಕುತೂಹಲ ಕೆರಳಿಸಿದ್ದಂತ ಅಧ್ಯಕ್ಷರ ಹುದ್ದೆಯ ಆಕಾಂಕ್ಷೆಯಿಂದ ಹಿರಿಯ ಮುಖಂಡ ಟಿ.ವಿ ಪಾಂಡುರಂಗ ಹಿಂದೆ ಸರಿದಿದ್ದಾರೆ. ಸ್ವತಹ ಶಾಸಕ ಗೋಪಾಲಕೃಷ್ಣ ಬೇಳೂರು ಅವರೇ ಟಿ.ವಿ ಪಾಂಡುರಂಗ ಅವರಿಗೆ ಗಣಪತಿ ದೇವಸ್ಥಾನದ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಅವರು ಮಾರಿಗುಡಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲ್ಲ ಎಂದರು. ಶಾಸಕರ…
ಮಂಗಳೂರು: ಮೀನುಗಾರರ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಆರೋಪದ ಮೇಲೆ, ಮಂಗಳೂರಿನ ಉಪ ಜಾರಿ ನಿರ್ದೇಶನಾಲಯ (ED) ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಮತ್ತು ಅದರ ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಈ ದೂರು ದಾಖಲಾಗಿದ್ದು, ಸುಮಾರು 1.66 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ವಂಚಿಸಿರುವ ಗಂಭೀರ ಆರೋಪ ಟ್ರಸ್ಟ್ ಮೇಲಿದೆ. ವಂಚನೆ ನಡೆದಿದ್ದು ಹೇಗೆ? ಸರ್ಕಾರವು ಮೀನುಗಾರರ ಆರ್ಥಿಕ ಸಬಲೀಕರಣಕ್ಕಾಗಿ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ಸೌಲಭ್ಯವನ್ನು ಮೂಕಾಂಬಿಕಾ ಟ್ರಸ್ಟ್ನ ಪದಾಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಅರ್ಹವಲ್ಲದ ವ್ಯಕ್ತಿಗಳ ಹೆಸರಿನಲ್ಲಿ ಸಾಲ ಮನ್ನಾ ಸೌಲಭ್ಯ ಪಡೆದಿರುವುದು. ನಕಲಿ ಗುಂಪುಗಳನ್ನು ತೋರಿಸಿ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇಡಿ ತನಿಖೆ ಚುರುಕು: ಈ ಹಿಂದೆ…
ಬೆಂಗಳೂರು: ವೈವಾಹಿಕ ಜೀವನದಲ್ಲಿ ಉಂಟಾಗುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮತ್ತು ದೈನಂದಿನ ಜೀವನದ ಸಾಮಾನ್ಯ ಘರ್ಷಣೆಗಳನ್ನು ‘ವರದಕ್ಷಿಣೆ ಕಿರುಕುಳ’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್, ಮಹಿಳೆಯೊಬ್ಬರು ತನ್ನ ಅತ್ತೆ-ಮಾವ ಹಾಗೂ ಮೈದುನನ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದ್ದು, “ಐಪಿಸಿ ಸೆಕ್ಷನ್ 498A (ವರದಕ್ಷಿಣೆ ಕಿರುಕುಳ) ಎಂಬುದು ದಾಂಪತ್ಯದ ಎಲ್ಲಾ ಸಮಸ್ಯೆಗಳಿಗೂ ರಾಮಬಾಣವಲ್ಲ” ಎಂದು ಮಾರ್ಮಿಕವಾಗಿ ನುಡಿದಿದೆ. ಪ್ರಕರಣದ ಹಿನ್ನೆಲೆ ಏನು? ದೂರುದಾರೆ ಮಹಿಳೆ ಮತ್ತು ಆಕೆಯ ಪತಿ 2017 ರಲ್ಲಿ ವಿವಾಹವಾಗಿ ಅಮೆರಿಕಾದ ಟೆಕ್ಸಾಸ್ನಲ್ಲಿ ವಾಸವಾಗಿದ್ದರು. ಅಲ್ಲಿ ಸುಮಾರು ಆರು ವರ್ಷಗಳ ಕಾಲ ದಾಂಪತ್ಯ ನಡೆಸಿದ ನಂತರ, ದಂಪತಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಭಾರತಕ್ಕೆ ಮರಳಿದ ಮಹಿಳೆ, ತನ್ನ ಪತಿ, ಅತ್ತೆ, ಮಾವ ಮತ್ತು ಮೈದುನನ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು…
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಸೋನ್ಮಾರ್ಗ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಹಿಮಪಾತವು ದೊಡ್ಡ ಮಟ್ಟದ ದುರಂತಕ್ಕೆ ಕಾರಣವಾಗಿದ್ದು, ಈ ಘಟನೆಯಲ್ಲಿ ಕನಿಷ್ಠ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಹಿಮ ಮತ್ತು ಹಠಾತ್ ಸಂಭವಿಸಿದ ಈ ನೈಸರ್ಗಿಕ ವಿಕೋಪದಿಂದಾಗಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಹತ್ತಾರು ವಾಹನಗಳು ಸಂಪೂರ್ಣವಾಗಿ ಹಿಮದ ಅಡಿಯಲ್ಲಿ ಹೂತುಹೋಗಿವೆ. ಸೋಮವಾರ ಮಧ್ಯಾಹ್ನದ ವೇಳೆಗೆ ಸೋನ್ಮಾರ್ಗ್ ಮತ್ತು ಜೋಜಿಲಾ ಪಾಸ್ ನಡುವಿನ ಆಯಕಟ್ಟಿನ ಜಾಗದಲ್ಲಿ ಈ ಹಿಮಪಾತ ಸಂಭವಿಸಿದ್ದು, ಪ್ರವಾಸಿಗರು ಮತ್ತು ಸ್ಥಳೀಯರು ಪ್ರಯಾಣಿಸುತ್ತಿದ್ದ ವಾಹನಗಳು ಹಿಮದ ರಾಶಿಯ ಅಡಿಯಲ್ಲಿ ಸಿಲುಕಿಕೊಂಡಿವೆ. ಘಟನೆ ಸಂಭವಿಸಿದ ತಕ್ಷಣವೇ ಸ್ಥಳೀಯ ಆಡಳಿತ, ಪೊಲೀಸ್ ಪಡೆ ಮತ್ತು ಸೇನೆಯ ವಿಪತ್ತು ನಿರ್ವಹಣಾ ತಂಡಗಳು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿವೆ. ಹಿಮದಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಜೆಸಿಬಿ ಮತ್ತು ಆಧುನಿಕ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಸದ್ಯ ಹೆದ್ದಾರಿಯಲ್ಲಿ…
ಬೆಂಗಳೂರಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶಾಕ್: 33 ಸ್ವತ್ತುಗಳು ಕೇಂದ್ರ ನಗರ ಪಾಲಿಕೆ ವಶಕ್ಕೆ
ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 33 ಸ್ವತ್ತುಗಳು ಕೇಂದ್ರ ನಗರ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಸ್ವತ್ತು ಮಾಲೀಕರು ತಕ್ಷಣವೇ ಬಾಕಿ ತೆರಿಗೆ ಪಾವತಿಸಿದಲ್ಲಿ ಕಾನೂನು ಕ್ರಮಗಳಿಂದ ಕೈಬಿಡಲಾಗುವುದು ಎಂಬುದಾಗಿ ಜಿಪಿಎ ತಿಳಿಸಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಭಾಗವಾಗಿ, ದಿನಾಂಕ: 21-02-2026 ರಂದು ಸಾರ್ವಜನಿಕ ಹರಾಜು ಮೂಲಕ ಸ್ವತ್ತುಗಳನ್ನು ಮಾರಾಟ ಮಾಡಲು ಪ್ರಕಟಣೆ ಹೊರಡಿಸಲಾಗಿತ್ತು. ಆದರೆ, ನಿಗದಿತ ದಿನಾಂಕದಂದು ಹರಾಜು ಪ್ರಕ್ರಿಯೆಯಲ್ಲಿ ಯಾವುದೇ ವ್ಯಕ್ತಿಗಳು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸದ ಕಾರಣ, ಸಂಬಂಧಿತ ನಿಯಮಾವಳಿಗಳ ಪ್ರಕಾರ ಕ್ರಮ ಕೈಗೊಂಡು, ವಲಯ-1 ವ್ಯಾಪ್ತಿಯ 19 ಸ್ವತ್ತುಗಳ ಖಾತೆಗಳನ್ನು ಹಾಗೂ ವಲಯ-2 ವ್ಯಾಪ್ತಿಯ 14 ಸ್ವತ್ತುಗಳ ಖಾತೆಗಳನ್ನು ಒಟ್ಟು 33 ಸ್ವತ್ತುಗಳು ಬೆಂಗಳೂರು ಕೇಂದ್ರ ನಗರ ಪಾಲಿಕೆ ಹೆಸರಿನಲ್ಲಿ ದಾಖಲಿಸಿಕೊಳ್ಳಲು ಆದೇಶಿಸಲಾಗಿದೆ. (ಪಟ್ಟಿ ಲಗತ್ತಿಸಲಾಗಿದೆ). ಆಸ್ತಿ ತೆರಿಗೆ…
ಬೆಂಗಳೂರು: ರಾಜ್ಯದ ಕುತೂಹಲಕಾರಿ ಕಣಗಳಾದ ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ ತನ್ನ ‘ಸ್ಟಾರ್ ಪ್ರಚಾರಕರ’ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆಯಲ್ಲಿ ಗೆಲುವಿನ ನಗೆ ಬೀರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಪ್ರಚಾರಕರ ಪಟ್ಟಿಯಲ್ಲಿರುವ ಪ್ರಮುಖರು: ಕಾಂಗ್ರೆಸ್ ಬಿಡುಗಡೆ ಮಾಡಿರುವ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಮುಖ ನಾಯಕರ ಹೆಸರುಗಳಿವೆ: ಸಿದ್ದರಾಮಯ್ಯ: ಮುಖ್ಯಮಂತ್ರಿಗಳು ಡಿ.ಕೆ. ಶಿವಕುಮಾರ್: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಮಲ್ಲಿಕಾರ್ಜುನ ಖರ್ಗೆ: ಎಐಸಿಸಿ ಅಧ್ಯಕ್ಷರು ರಣದೀಪ್ ಸಿಂಗ್ ಸುರ್ಜೆವಾಲಾ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿವರು: ಪರಮೇಶ್ವರ್, ಎಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ ಸೇರಿದಂತೆ ಸಚಿವ ಸಂಪುಟದ ಪ್ರಮುಖ ಸದಸ್ಯರು ಪ್ರಚಾರದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಹೀಗಿದೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ (ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ) ಕ್ರಮ…
ಬೆಂಗಳೂರು: ಐಪಿಎಲ್ ಪಂದ್ಯಗಳ ವೀಕ್ಷಣೆಗೆ ಟಿಕೆಟ್ ಹಾಗೂ ಪಾಸ್ಗಳಿಗಾಗಿ ಶಾಸಕರು ಮತ್ತು ಕೆಎಸ್ಸಿಎ (KSCA) ನಡುವೆ ಉಂಟಾಗಿದ್ದ ಅಸಮಾಧಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಧ್ಯಸ್ಥಿಕೆಯಲ್ಲಿ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಶನಿವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಪ್ರತಿ ಶಾಸಕರಿಗೆ ತಲಾ ಎರಡು ಟಿಕೆಟ್ ನೀಡಲು ಕ್ರಿಕೆಟ್ ಸಂಸ್ಥೆ ಒಪ್ಪಿಗೆ ಸೂಚಿಸಿದೆ. ಸುದ್ದಿಯ ಮುಖ್ಯಾಂಶಗಳು: ಸಭೆಯ ಸಾರಾಂಶ: ಶಾಸಕರ ಟಿಕೆಟ್ ಬೇಡಿಕೆಯ ಕುರಿತು ಡಿ.ಕೆ. ಶಿವಕುಮಾರ್ ಅವರು ಕೆಎಸ್ಸಿಎ ಪದಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಕೇವಲ ಒಂದು ಟಿಕೆಟ್ ನೀಡುತ್ತಿರುವುದಕ್ಕೆ ಶಾಸಕರು ವ್ಯಕ್ತಪಡಿಸಿದ್ದ ಅಸಮಾಧಾನವನ್ನು ಅಧಿಕಾರಿಗಳ ಗಮನಕ್ಕೆ ತಂದರು. ತಲಾ 2 ಟಿಕೆಟ್ ಗ್ಯಾರಂಟಿ: “ಒಬ್ಬ ಶಾಸಕರಿಗೆ ಕೇವಲ ಒಂದು ಸೀಟು ಕೊಡುವುದು ಸರಿಯಲ್ಲ. ಕುಟುಂಬ ಸದಸ್ಯರ ಜೊತೆ ಹೋಗಲು ಕನಿಷ್ಠ ಎರಡು ಟಿಕೆಟ್ ಬೇಕು ಎಂದು ಮನವಿ ಮಾಡಿದ್ದೆವು. ನಾಳೆಯ ಪಂದ್ಯಕ್ಕೆ ಅಧಿಕಾರಿಗಳು ಎರಡು ಟಿಕೆಟ್ ನೀಡಲು ಸಮ್ಮತಿಸಿದ್ದಾರೆ,” ಎಂದು ಡಿಸಿಎಂ ತಿಳಿಸಿದರು. ಮುಂದಿನ ಪಂದ್ಯಗಳಿಗೆ 4 ಟಿಕೆಟ್?: ಶಾಸಕರು ಪ್ರತಿ…
ಮಂಡ್ಯ : ಕುಡಿಯುವ ನೀರಿಗೆ ನಗರ ಸೇರಿದಂತೆ ಕ್ಷೇತ್ರದಲ್ಲಿ ಎಲ್ಲಿಯೂ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ತಲೆದಂಡ ಮಾಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕುಡಿಯುವ ನೀರಿನ ಸಮಸ್ಯೆ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಬೇಸಿಗೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ತಾಲೂಕಿನ ಕೆಲವು ಗ್ರಾಮಗಳಲ್ಲಿ ಸಾಕಷ್ಟು ಕುಡಿಯುವ ನೀರಿನ ಸಮಸ್ಯೆ ಕಂಡು ಬರುತ್ತಿದ್ದು, ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಬೇಕೆಂದರು. ಕೊಪ್ಪ, ಆತಗೂರು ಹಾಗೂ ಕಸಬಾ ಹೋಬಳಿಯ ಕೆಲವು ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಅಭಾವ ಕಂಡು ಬಂದಿದೆ. ಕೆಲ ಗ್ರಾಮಗಳ ಕೊಳವೆ ಬಾವಿಗಳಲ್ಲಿ ನೈಟ್ರೈಟ್, ಪ್ಲೋರೆಡ್ ಅಂಶ ಸೇರಿದಂತೆ ಕಲುಷಿತ ನೀರು ಬರುತ್ತಿದ್ದು, ಇದರಿಂದ…
ಮಂಡ್ಯ : ಖಾಸಗಿ ಶಾಲೆ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, 14 ವಿದ್ಯಾರ್ಥಿಗಳು 6 ಮಂದಿಗೆ ಗಾಯಗೊಂಡಿರುವ ಘಟನೆ ಸೋಮನಹಳ್ಳಿ ಕೆಸ್ತೂರು ಅಡ್ಡರಸ್ತೆಯ ಅಡಿಗಾಸ್ ಹೋಟೆಲ್ ಬಳಿ ಶುಕ್ರವಾರ ಸಂಜೆ ಜರುಗಿದೆ. ನಗರದ ಡಾ.ಶಾಂತಾ ಹೆಚ್.ಕೆ.ಮರಿಯಪ್ಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಶಶಾಂಕ್ ಗೌಡ, ಹಿತಾ, ನಂದಿನಿ, ವಿಕ್ರಾಂತ್ ವಂದನಾ, ನಿಖಿತ್, ಮನ್ವಿತ್, ಹರ್ಷಿತಾ, ಹಾಗೂ ಸಾಹಿತ್ಯ ಗಾಯಗೊಂಡ ವಿದ್ಯಾರ್ಥಿಗಳಾಗಿದ್ದಾರೆ. ಉದಯರಂಗ ಬಸ್ ನಲ್ಲಿದ್ದ ಸುಶೀಲಮ್ಮ, ಗೌರಮ್ಮ, ಶಿವರಾಂ, ಶೋಭಾ, ಶಿವಮಲ್ಲು, ಗಾಯಗೊಂಡ ವ್ಯಕ್ತಿ ಗಳಾಗಿದ್ದು, ವಿದ್ಯಾರ್ಥಿಗಳಾಗಿದ್ದು, ಪ್ರಯಾಣಿಕರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಿಕ್ರಾಂತ್, ಹರ್ಷಿತಾ ಸೇರಿದಂತೆ 6 ಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಎಂದಿನಂತೆ ಶಾಲೆಗೆ ಆಗಮಿಸಿದ್ದ ವಿದ್ಯಾರ್ಥಿಗಳು ಶಾಲೆ ಮುಗಿಸಿ ತಮ್ಮ ಗ್ರಾಮಗಳಿಗೆ ಶಾಲಾ ವಾಹನದ ಮೂಲಕ ತೆರಳುತ್ತಿದ ವೇಳೆ ಮದ್ದೂರು ಮಾರ್ಗವಾಗಿ ಆಗಮಿಸಿದ ಉದಯರಂಗ ಖಾಸಗಿ ಬಸ್ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕದಲೀಪುರ, ಹುಳಗನಹಳ್ಳಿ,…
ಬೆಂಗಳೂರು: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಂದು ನಡೆಯಲಿರುವ ಐಪಿಎಲ್ ಟಿ – 20 ಕ್ರಿಕೆಟ್ ವೀಕ್ಷಣೆಗೆ ಬರುವ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋದ 44 ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದ್ವಿಚಕ್ರ ವಾಹನಗಳಿಗೆ ₹30 ಹಾಗೂ ಕಾರುಗಳಿಗೆ ₹60 ಶುಲ್ಕ ನಿಗದಿ ಮಾಡಲಾಗಿದೆ. ನಿಲ್ದಾಣಗಳು : ವೈಟ್ಫೀಲ್ಡ್, ಹೋಪ್ ಫಾರ್ಮ್ ಚನ್ನಸಂದ್ರ, ಕಾಡುಗೋಡಿ ಟ್ರೀ ಪಾರ್ಕ್, ಪಟ್ಟಂದೂರು ಅಗ್ರಹಾರ, ನಲ್ಲೂರಳ್ಳಿ, ಕುಂದಲಹಳ್ಳಿ, ಸೀತಾರಾಮ ಪಾಳ್ಯ, ಹೂಡಿ, ಸಿಂಗಯ್ಯನಪಾಳ್ಯ, ನಾಯಂಡನಹಳ್ಳಿ, ಜ್ಞಾನ ಭಾರತಿ, ಚಲ್ಲಘಟ್ಟ, ಚಿಕ್ಕಬಿದರಕಲ್ಲು, ದೊಡ್ಡಕಲ್ಲಸಂದ್ರ, ಸೆಂಟ್ರಲ್ ಸಿಲ್ಕ್ ಬೋರ್ಡ್, ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಬೊಮ್ಮಸಂದ್ರ, ಕೆ.ಆರ್.ಪುರ, ಮಾದಾವರ, ಜಾಲಹಳ್ಳಿ, ನ್ಯಾಷನಲ್ ಕಾಲೇಜು, ಲಾಲ್ಬಾಗ್, ಜಯನಗರ, ಬನಶಂಕರಿ, ಯಲೇಚನಹಳ್ಳಿ, ಆರ್.ವಿ.ರಸ್ತೆ, ರಾಗಿಗುಡ್ಡ, ಬಿಟಿಎಂ ಲೇಔಟ್, ಹೆಬ್ಬಗೋಡಿ, ನಾಗಸಂದ್ರ, ಮಹಾಲಕ್ಷ್ಮಿ, ಮಹಾಕವಿ ಕುವೆಂಪು ರಸ್ತೆ, ಶ್ರೀರಾಂಪುರ, ಮೆಜೆಸ್ಟಿಕ್, ಚಿಕ್ಕಪೇಟೆ, ಮೈಸೂರು ರಸ್ತೆ, ಸಿಟಿ ರೈಲ್ವೆ ನಿಲ್ದಾಣ, ಬೈಯಪ್ಪನಹಳ್ಳಿ (ಒಎಂಆರ್ ಭಾಗ), ಬೈಯಪ್ಪನಹಳ್ಳಿ (ಎನ್ಜಿಇಎಫ್ ಭಾಗ), ಎಸ್.ವಿ.ರಸ್ತೆ, ಹೊಸಹಳ್ಳಿ,…













