Author: kannadanewsnow09

ಶಿವಮೊಗ್ಗ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ( NHM) ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೊಸ ಹೆಚ್ ಆರ್ ಪಾಲಿಸಿ ಜಾರಿಗೊಳಿಸೋದಕ್ಕೆ ಮುಂದಾಗಿತ್ತು. ಈ ಬಗ್ಗೆ ನೌಕರರು ಆತಂಕ ವ್ಯಕ್ತಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿದ್ದರು. ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ರಾಜ್ಯ ಆರೋಗ್ಯ ಇಲಾಖೆಯಿಂದ ಜಾರಿಗೆ ತರಲು ಹೊರಟಿರುವಂತ ನೂತನ ಹೆಚ್ ಆರ್ ಪಾಲಿಸಿ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದಂತ KSHCOEA BMS ಸಾಧಕ-ಬಾಧಕಗಳನ್ನು ಗಮನಿಸಿ ಜಾರಿಗೊಳಿಸುವಂತೆ ಮನವಿ ಮಾಡಲಾಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ವಿಷಯ ಪ್ರಸ್ತುತ ಪ್ರಸ್ತಾವನೆ (Proposal) ಹಂತದಲ್ಲಿದ್ದು, ಇದರ ಸಾಧಕ–ಬಾಧಕಗಳನ್ನು ಸಮಗ್ರವಾಗಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂಬುದಾಗಿ ತಿಳಿಸಿದ್ದಾರೆ. ಆ ಮೂಲಕ ನೌಕರರ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಸಮಿತಿಯವರು ಸುಮಾರು 18-20 ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕರಿಗೆ…

Read More

ಮಂಡ್ಯ : ಮದ್ದೂರು ನಗರದ ಪೇಟೆ ಬೀದಿ ರಸ್ತೆಯನ್ನು 80 ಅಡಿ ರಸ್ತೆಯಾಗಿ ವಿಸ್ತರಿಸಲು ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮದ್ದೂರು ನಗರದ ಪ್ರವಾಸಿ ಮಂದಿರದ ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಮಂಗಳವಾರ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಸಭೆಯ ಮುಖ್ಯಾಂಶಗಳು ಹೀಗಿವೆ; *2025 -26 ನೇ ಸಾಲಿನ ವಾರ್ಷಿಕ ಬಜೆಟ್ ನಲ್ಲಿ ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣಕ್ಕಾಗಿ ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲು ಘೋಷಿಸಲಾಗಿತ್ತು. ಅದರಂತೆ ಲೋಕೋಪಯೋಗಿ ಇಲಾಖೆಯಿಂದ ವಿಸ್ತೃತ ಯೋಜನಾ ವರದಿಯನ್ನೂ ತಯಾರಿಸಲಾಗಿದೆ. * ಮದ್ದೂರು ಪಟ್ಟಣದ ಟಿ.ಬಿ. ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆಯು ಜನನಿಬಿಡ ಹಾಗೂ ವಾಣಿಜ್ಯ ಚಟುವಟಿಕೆಯುಳ್ಳ ಜಿಲ್ಲಾ ಮುಖ್ಯರಸ್ತೆಯಾಗಿದ್ದು, ಅಧಿಕ ವಾಹನ ಸಂಚಾರವಿದ್ದು ಪುರಸಭೆಯ ಸುಪರ್ದಿಯಲ್ಲಿರುತ್ತದೆ. * ಬಿಎಂಐಸಿಪಿಎ ಅವರು ತಯಾರಿಸಿರುವ ಯೋಜನಾ ನಕ್ಷೆಯಲ್ಲಿ…

Read More

ಬೆಂಗಳೂರು: ರಾಜ್ಯದ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ಕಲ್ಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ಓದಲಾದ ಸರ್ಕಾರಿ ಆದೇಶದಲ್ಲಿ ಮಂಜೂರು ಮಾಡಲಾಗಿದೆ ಎಂದಿದ್ದಾರೆ. ರಾಜ್ಯ ಮಹಿಳಾ ಸರ್ಕಾರಿ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲು…

Read More

ಶಿವಮೊಗ್ಗ: ಜನರ ಸಮಸ್ಯೆ ಸರಿ ಪಡಿಸೋ ನಿಟ್ಟಿನಲ್ಲಿ ಜನರ ಬಳಿಗೆ ಸರ್ಕಾರ ಕೊಂಡೊಯ್ಯುವಂತ ಕೆಲಸವನ್ನು ಶಾಸಕ ಗೋಬಾಲಕೃಷ್ಣ ಬೇಳೂರು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಡಿಸೆಂಬರ್.4ರಂದು ಜನ ಸಂಪರ್ಕ ಸಭೆಯನ್ನು ನಿಗದಿ ಪಡಿಸಿದ್ದಾರೆ. ಈ ಕುರಿತಂತೆ ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಿಸೆಂಬರ್.4, 2024ರಂದು ಬೆಳಗ್ಗೆ 11 ಗಂಟೆಗೆ ಸಾಗರನ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಾಗರ ನಗರದ ಜನತೆಯ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹರಿಸುವಂತ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ. ಬೆಳಗ್ಗೆ 9.30ರಿಂದಲೇ ಸಾರ್ವಜನಿಕರ ಅಹವಾಲುಗಳಿಗೆ ಅರ್ಜಿ ಸ್ವೀಕಾರ ನಡೆಯಲಿದೆ. ಸಾಗರ ನಗರದ ಜನರು ಸ್ವಚ್ಛತೆ, ನೈರ್ಮಲ್ಯ, ವಿದ್ಯುತ್, ಕುಡಿಯುವ ನೀರು, ಮೂಲಭೂತ ಸೌಕರ್ಯ ಮತ್ತು ನಾಗರೀಕ ಸೇವೆಗಳು, ಇ-ಆಸ್ತಿ ಮತ್ತು ಇತರೆ ಯೋಜನೆಗಳು, ನಗರ ಪ್ರದೇಶಕ್ಕೆ ಸಂಬಂಧಿಸಿದ ಇತರೆ ಸಾರ್ವಜನಿಕ ಸಮಸ್ಯೆ ಬಗ್ಗೆ ಅರ್ಜಿಯನ್ನು ನೀಡಬಹುದು. ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಪರಿಶೀಲಿಸಿ ಪರಿಹರಿಸುವಂತ ಕೆಲಸವನ್ನು…

Read More

ಬೆಂಗಳೂರು : ಬೆಂಗಳೂರಿನಾದ್ಯಂತ 1,400ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ ಮತ್ತು ವಿಲ್ಲಾ ನಿವಾಸಿ ಕಲ್ಯಾಣ ಸಂಘಗಳನ್ನು (RWAs) ಪ್ರತಿನಿಧಿಸುವ ಬೆಂಗಳೂರು ಅಪಾರ್ಟ್ಮೆಂಟ್ ಫೆಡೆರೇಷನ್ (BAF), ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಿದ್ದಪಡಿಸಲಾಗಿರುವಂತಹ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ, ಕಾನೂನನ್ನು ತಕ್ಷಣವೇ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ. 3,50,000ಕ್ಕೂ ಹೆಚ್ಚು ಕುಟುಂಬಗಳು ಮತ್ತು ಸುಮಾರು ಒಂದೂವರೆ ದಶಲಕ್ಷ (15 ಲಕ್ಷ) ನಾಗರಿಕರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ BAF, ದೀರ್ಘಕಾಲದಿಂದ ಬಾಕಿ ಇರುವ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಕಾಯ್ದೆ 1972 ಅನ್ನು ನವೀಕರಿಸಿ, ಸಮಗ್ರ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಅನ್ನು ಜಾರಿಗೆ ತರಲು ಒತ್ತಾಯಿಸಿದೆ. ವಿಳಂಬದಿಂದ ಲಕ್ಷಾಂತರ ಮಾಲೀಕರಿಗೆ ತೊಂದರೆ BAF ಅಧ್ಯಕ್ಷರಾದ ಸತೀಶ್ ಮಲ್ಯ ಅವರು ಮಾತನಾಡಿ, “ಅಪಾರ್ಟ್‌ಮೆಂಟ್ ಮಾಲೀಕರಿಗೆ ಸಮಗ್ರ ಕಾನೂನು ಚೌಕಟ್ಟನ್ನು ಜಾರಿಗೊಳಿಸುವುದು BAF ನ ಹಲವು ವರ್ಷಗಳ ಮುಖ್ಯ ಬೇಡಿಕೆಯಾಗಿದೆ.…

Read More

ಮಂಡ್ಯ : ಮದ್ದೂರು ನಗರದ ಸೋಮೇಗೌಡರ ಬೀದಿಯಲ್ಲಿ ಭಾನುವಾರ ತಡರಾತ್ರಿ ಮನೆಗಳ್ಳತನವೊಂದು ನಡೆದಿದ್ದು, ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ 1 ಲಕ್ಷ ರೂ ಹಣದೊಂದಿಗೆ ಕಳ್ಳರು ಪರಾರಿಯಾಗಿದ್ದಾರೆ. ಸೋಮೇಗೌಡರ ಬೀದಿಯ ಪೂರ್ಣಿಮ ಬಸವಯ್ಯ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮಂಗಳೂರಿನಲ್ಲಿ ತಮ್ಮ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಯೋಗಕ್ಷೇಮ ವಿಚಾರಿಸಲು ತೆರಳಿದ್ದ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಭಾನುವಾರ ತಡರಾತ್ರಿ ಮನೆಗೆ ನುಗ್ಗಿ ಕಳ್ಳರು ಸುಮಾರು 60 ಗ್ರಾಂ ಚಿನ್ನಾಭರಣ 1 ಲಕ್ಷ ರೂ ಹಣದೊಂದಿಗೆ ಪರಾರಿಯಾಗಿದ್ದಾರೆ. ಸೋಮವಾರ ಬೆಳಿಗ್ಗೆ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಮದ್ದೂರು ಠಾಣೆಯ ಪೋಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಯಶವಂತ್ ಕುಮಾರ್, ಮದ್ದೂರು ಪೋಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ನವೀನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವರದಿ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿವಿಧ ಯೋಡನೆಗಳಡಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರ ಪೌಷ್ಠಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣುಗಳನ್ನು ನೀಡಲುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ಪಬ್ಲಿಕ್ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಆಹಾರದ ಪ್ರಮಾಣ ಮತ್ತು ಘಟಕ ವೆಚ್ಚಕ್ಕೆ ಅನುಗುಣವಾಗಿ 2019-20ನೇ ಸಾಲಿನಿಂದ ಮಧ್ಯಾಹ್ನದ ಉಪಹಾರ ಯೋಜನೆಯಿ ಬೆಳಗಿನ ಉಪಹಾರ, ಬಿಸಿಹಾಲು ಮತ್ತು ಮಧ್ಯಾಹ್ನ ಬಿಸಿಯೂಟ ಒದಗಿಸಲು ಅನುಮೋದನೆ ನೀಡಲಾಗಿರುತ್ತದೆ ಎಂದಿದ್ದಾರೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ವತಿಯಿಂದ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ಶಾಲೆಗಳನ್ನು ಒಳಗೊಂಡಂತೆ ಪಿಎಂಶ್ರೀ ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 2018-19ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ…

Read More

ಬೆಂಗಳೂರು: ಜರ್ಮನಿ ಸರ್ಕಾರದ ಫೆಡರಲ್ ಸಚಿವಾಲಯ ಇಕಾನಾಮಿಕ್ ಕೋಆಪರೇಶನ್ ಅಂಡ್ ಡೆವಲಪ್ಮೆಂಟ್ (BMZ) ನ ಉನ್ನತ ಮಟ್ಟದ ನಿಯೋಗವು ತಮ್ಮ ಭಾರತದ ಪ್ರವಾಸದ ಭಾಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಭೇಟಿ ನೀಡಿತು. ನಿಯೋಗದ ಸದಸ್ಯರು ದೃಷ್ಟಿ ದೋಷ ಹೊಂದಿದ ಪ್ರಯಾಣಿಕರ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ ಸಹಾಯಕ ಧ್ವನಿ-ನೇವಿಗೇಶನ್ ಪರಿಹಾರ “ಧ್ವನಿ ಸ್ಪಂದನ – ಆನ್‌ಬೋರ್ಡ್” ಬಗ್ಗೆ ಖುದ್ದು ಮಾಹಿತಿ ಪಡೆದರು. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ಅವರು ಧ್ವನಿ ಸ್ಪಂದನ ಯೋಜನೆಯ ಕುರಿತು ವಿವರವಾಗಿ ಮಾಹಿತಿ ನೀಡಿ, ಈ ಯೋಜನೆಗೆ ಭಾರತದ ಸರ್ಕಾರದಿಂದ ದೊರೆತ ಪ್ರಶಸ್ತಿಯನ್ನು ತೋರಿಸಿದರು. ಈ ನಿಯೋಗದಲ್ಲಿ BMZ ನ ಮಾನ್ಯ ಮಹಾ ನಿರ್ದೇಶಕಿ ಮಿಸ್. ಕ್ರಿಸ್ಟೀನ್ ಟೋಟ್‌ಝ್ಕೆ, ಮಿಸ್. ಬಾರ್ಬರಾ ಶಾಫರ್ ಮತ್ತು ಕ್ರಿಸ್ಟೋಫ್ ವಾನ್ ಸ್ಟೆಕೋವ್ ಉಪಸ್ಥಿತರಿದ್ದರು. ರೈಸ್‌ಡ್ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿದ ಮತ್ತು GIZ ನ ಗ್ರೀನ್ ಅರ್ಬನ್ ಮೊಬಿಲಿಟಿ ಇನೋವೇಶನ್ ಮುಂದಾಳತ್ವದಲ್ಲಿ ವಿಸ್ತರಿಸಲ್ಪಟ್ಟ ಆನ್‌ಬೋರ್ಡ್…

Read More

ಬೆಂಗಳೂರು: ರಾಜ್ಯದ ಜನರು ಗೊಂದಲಕ್ಕೆ ಒಳಗಾಗುವಂತೆ ಆಗಿದೆ. ರಾಜ್ಯದ ಜನತೆಗೆ ಸಿಎಂ ಯಾರು.? ಡಿಸಿಎಂ ಯಾರು ಎಂಬುದನ್ನು ಕಾಂಗ್ರೆಸ್ ನಾಯಕರು ಸ್ಪಷ್ಟ ಪಡಿಸುವಂತೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಇಂದು ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿ ನಡೆಯುತ್ತಿದೆ. ಸಿಎಂ ಒಮ್ಮೆ, ಡಿಸಿಎಂ ಒಮ್ಮೆ ಎರಡು ಬಾರಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಅದೇನೋ ನಾಟಿ ಕೋಳಿ ತಿಂದರು ಅಂತ ಮಾಧ್ಯಮಗಳಲ್ಲಿ ನೋಡಿದೆ ಎಂದರು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಾರು, ಉಪ ಮುಖ್ಯಮಂತ್ರಿ ಯಾರು ಎಂಬುದು ಗೊತ್ತಾಗುತ್ತಿಲ್ಲ. ರಾಜ್ಯದ ಜನರು ಈ ಗೊಂದಲದಲ್ಲಿ ಇದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ವೀಕ್ ಇದೆ. ಇದಕ್ಕೆ ಕಾರಣ ಕರ್ನಾಟಕದಿಂದ ಚೀಲ ಚೀಲ ಹಣ ಹೋಗುತ್ತದೆ ಎಂದು ಆರೋಪಿಸಿದರು. ಎಐಸಿಸಿ ಅಧ್ಯಕ್ಷರೇ ಸುಪ್ರೀಂ. ಆದರೆ ಸಿಎಂ, ಡಿಸಿಎಂ ಗೊಂದಲದ ಬಗ್ಗೆ ಹೈಕಮಾಂಡ್ ಕೇಳುತ್ತೇವೆ. ಚರ್ಚಿಸಿ ಹೇಳುತ್ತೇವೆ ಅಂತ ಹೇಳುತ್ತಿದ್ದಾರೆ. ಯಾಕೆ ಹೀಗೆ ಎಂಬುದೇ…

Read More

ಬೆಂಗಳೂರು: ಮಹಿಳಾ ಸಬಲೀಕರಣಕ್ಕೆ ಆಧ್ಯತೆ ನೀಡುತ್ತಿರುವ ಹಿನ್ನೆಲೆಯಲ್ಲಿಯೇ ಬೆಂಗಳೂರು ಮೂಲದ ಮಹಿಳಾ ಆಹಾರ ಉದ್ಯಮಿ ಸಾಹಿನಿರ್ಮಲ ಎಂಬುವವರು “ನಿರಾಗ್‌ ಫುಡ್ಸ್‌” ಶಾಖೆ ತೆರೆಯುವ ಮಲಕ ಕ್ವಿಕ್‌ ಕಾಮನ್ಸ್‌ ಕ್ಷೇತ್ರದಲ್ಲಿಯೂ ಯಶಸ್ಸು ಕಂಡಿದ್ದಾರೆ. ಈ ಕುರಿತು ಮಾತನಾಡಿದ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, ಮಹಿಳೆಯರು ಸ್ವಂತ ಉದ್ಯೋಗ ನಿರ್ಮಿಸಿ ಯಶಸ್ಸು ಕಾಣುವುದು ಅತ್ಯಂತ ಕಷ್ಟಕರ, ಆದಾಗ್ಯೂ, ಎಲ್ಲರ ಬೆಂಬಲದೊಂದಿಗೆ ಇಂದು ನಿರಾಗ್‌ ಫುಡ್ಸ್‌ ತೆರೆಯುವ ಮೂಲಕ ಮಹಿಳೆಯರು ಸಹ ಸ್ವಂತ ಉದ್ಯೋಗದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂಬುದು ನಿರೂಪಿಸಲಾಗಿದೆ. ನಿರಾಗ್‌ ಫುಡ್ಸ್‌ ಅಡಿಯಲ್ಲಿ, ಮಲ್ಲಿಗೆ ಇಡ್ಲಿ, ಪೆಸರಟ್ಟು ಮತ್ತು ಅದೈ ದೋಸೆಯಂತಹ ದಕ್ಷಿಣ ಭಾರತೀಯ ಶ್ರೇಷ್ಠ ಉತ್ಪನ್ನಗಳನ್ನು ನೀಡಲಾಗುತ್ತದೆ. ಬೆಂಗಳೂರು ಮೂಲದ ನಿರಾಗ್ ಫುಡ್ಸ್, ಮದ್ದೂರು ವಡ ಸೇರುದಂತೆ ಹಲವು ಖಾಧ್ಯಗಳಿಗೆ ಕ್ವಿಕ್‌ ಕಾಮರ್ಸ್‌ನಲ್ಲಿಯೂ ಉತ್ತಮ ಬೇಡಿಕೆ ಕಂಡು ಬರುತ್ತಿದೆ. ಹೆಚ್ಚುತ್ತಿರುವ ಬೇಡಿಕೆ ಹಿನ್ನೆಲೆಯಲ್ಲಿ ಇದೀಗ ಎರಡು ಪೂರ್ಣ ಪ್ರಮಾಣದ ಅಡುಗೆ ಮನೆಯ ಘಟಕಗಳನ್ನು ವಿಸ್ತರಿಸಲಾಗಿದೆ ಎಂದು ಹೇಳಿದರು. ಕಾರ್ಪೋರೇಟ್‌ ವೃತ್ತಿ ತ್ಯಜಿಸಿ,…

Read More