Author: kannadanewsnow09

ಬೆಂಗಳೂರು: ಕನ್ನಡ ಚಿತ್ರರಂಗದ ಇತ್ತೀಚಿನ ಸಿನಿಮಾಗಳಲ್ಲಿ ಮಹಿಳೆಯರ ಘನತೆಗೆ ಕುಂದು ತರುವಂತಹ ಅಶ್ಲೀಲ ಸಾಹಿತ್ಯ ಹಾಗೂ ಸಂಭಾಷಣೆಗಳ ಬಳಕೆ ಹೆಚ್ಚಾಗುತ್ತಿರುವುದಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ಆಯೋಗವು ಪತ್ರ ಬರೆದಿದೆ. ಮುಖ್ಯ ಅಂಶಗಳು: ‘ಕೆಡಿ’ ಚಿತ್ರದ ಹಾಡಿನ ಬಗ್ಗೆ ಆಕ್ಷೇಪ: ‘ಕೆಡಿ-ದ ಡೆವಿಲ್’ ಚಿತ್ರದ ‘ಸರ್ಸೇ ಸರ್ಸೇ…’ ಎಂಬ ಹಾಡಿನ ಸಾಹಿತ್ಯದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಗಳು ಕೇಳಿಬರುತ್ತಿವೆ. ಇಂತಹ ಸಾಹಿತ್ಯವು ಕೇವಲ ಅಶ್ಲೀಲತೆಯಿಂದ ಕೂಡಿದ್ದಲ್ಲದೆ, ಸಮಾಜದಲ್ಲಿ ಮಹಿಳೆಯರ ಬಗ್ಗೆ ತಪ್ಪು ಕಲ್ಪನೆಗಳನ್ನು ಮೂಡಿಸುತ್ತಿದೆ ಎಂದು ಆಯೋಗ ತಿಳಿಸಿದೆ. ಸಾಮಾಜಿಕ ದುಷ್ಪರಿಣಾಮ: ಸಿನಿಮಾ ಮಾಧ್ಯಮವು ಸಮಾಜದ ಮೇಲೆ ಬಲವಾದ ಪ್ರಭಾವ ಬೀರುತ್ತದೆ. ಇಂತಹ ಪ್ರಚೋದನಾಕಾರಿ ಸಾಹಿತ್ಯವು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕೆಲಸಕ್ಕೆ ಹೋಗುವ ಮಹಿಳೆಯರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪುಂಡಾಟಿಕೆ ಅಥವಾ ಚುಡಾವಣೆಗೆ (Eve-teasing) ಪ್ರೇರಣೆ ನೀಡುವ ಸಾಧ್ಯತೆಯಿದೆ…

Read More

ಚಿಕ್ಕಮಗಳೂರು: ಸಂಚಾರ ನಿಯಮಗಳನ್ನು ಪದೇ ಪದೇ ಉಲ್ಲಂಘಿಸುತ್ತಿದ್ದ ಯುವಕನಿಗೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯವು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿಭಿನ್ನ ಶಿಕ್ಷೆಯನ್ನು ವಿಧಿಸುವ ಮೂಲಕ ಗಮನ ಸೆಳೆದಿದೆ. ಘಟನೆಯ ವಿವರ: ಜಿಲ್ಲೆಯ ಕಡೂರು ತಾಲೂಕಿನ ಬಿಸಿಲೇಹಳ್ಳಿ ಗ್ರಾಮದ ರಂಜಿತ್ ಎಂಬ ಯುವಕ ಹಲವಾರು ಬಾರಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಲಾಯಿಸಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಯುವಕನಿಗೆ ದಂಡ ವಿಧಿಸುವ ಬದಲಿಗೆ ಸಮಾಜಕ್ಕೆ ಮಾದರಿಯಾಗುವಂತಹ ಶಿಕ್ಷೆಯನ್ನು ನೀಡಿದ್ದಾರೆ. ನ್ಯಾಯಾಲಯದ ಆದೇಶ: ನ್ಯಾಯಾಧೀಶರ ಆದೇಶದಂತೆ, ರಂಜಿತ್ ಇಂದು (ಮಾರ್ಚ್ 17) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಡೂರು ಪಟ್ಟಣದ ಪ್ರಮುಖ ವೃತ್ತಗಳಾದ ಮರವಂಜಿ ಸರ್ಕಲ್‌ ಹಾಗೂ ಮಲ್ಲೇಶ್ವರ ಸರ್ಕಲ್‌ನಲ್ಲಿ ಕೈಯಲ್ಲಿ ಸಂಚಾರ ನಿಯಮಗಳ ಜಾಗೃತಿ ಫಲಕ (Board) ಹಿಡಿದು ನಿಲ್ಲಬೇಕಾಯಿತು. ಶಿಕ್ಷೆಯ ಉದ್ದೇಶ: ತಪ್ಪು ಮಾಡಿದ ಯುವಕನಿಗೆ ನಿಯಮಗಳ ಅರಿವು ಮೂಡಿಸುವುದು. ಸಾರ್ವಜನಿಕರಲ್ಲಿ ಸಂಚಾರ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವುದು. ಈ ಶಿಕ್ಷೆಯನ್ನು ಯುವಕ ಸರಿಯಾಗಿ ಪಾಲಿಸುತ್ತಿದ್ದಾನೆಯೇ…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಏಪ್ರಿಲ್ 25 ರಿಂದ ಮೇ 08 ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯ ವಿವರಗಳು: ಹೆಚ್ಚಿನ ಪರೀಕ್ಷೆಗಳು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿವೆ. ಕೆಲವು ವೃತ್ತಿಪರ ಹಾಗೂ ತಾಂತ್ರಿಕ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಿಗದಿಯಾಗಿವೆ. ಪರಿಷ್ಕೃತ ವೇಳಾಪಟ್ಟಿ ಹೀಗಿದೆ: ದಿನಾಂಕ ದಿನ ವಿಷಯಗಳು (ಬೆಳಿಗ್ಗೆ 10:00 – 1:00) 25/04/2026 ಶನಿವಾರ ಕನ್ನಡ, ಅರೇಬಿಕ್ 27/04/2026 ಸೋಮವಾರ ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ 28/04/2026 ಮಂಗಳವಾರ ಇಂಗ್ಲಿಷ್ 29/04/2026 ಬುಧವಾರ ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣಶಾಸ್ತ್ರ 30/04/2026 ಗುರುವಾರ ಅರ್ಥಶಾಸ್ತ್ರ, ಜೀವಶಾಸ್ತ್ರ 02/05/2026 ಶನಿವಾರ ಇತಿಹಾಸ, ಗಣಿತ, ಗೃಹವಿಜ್ಞಾನ 04/05/2026 ಸೋಮವಾರ ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ 05/05/2026 ಮಂಗಳವಾರ ಹಿಂದಿ 06/05/2026 ಬುಧವಾರ…

Read More

ನವದೆಹಲಿ” 2026 ರ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮಂಗಳವಾರ 55 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸನ್ನಿ ಜೋಸೆಫ್ ಅವರನ್ನು ಪೆರಾವೂರ್ ಸ್ಥಾನದಿಂದ, ವಿ ಡಿ ಸತೀಶನ್ ಅವರನ್ನು ಪರವೂರಿನಿಂದ, ಚಾಂಡಿ ಉಮ್ಮನ್ ಅವರನ್ನು ಪುತುಪ್ಪಳ್ಳಿಯಿಂದ, ರಮೇಶ್ ಚೆನ್ನಿತ್ತಲ ಅವರನ್ನು ಹರಿಪಾದ್ ನಿಂದ, ರಮ್ಯಾ ಹರಿದಾಸ್ ಅವರನ್ನು ಚಿರಯಿನ್‌ಕೀಜು ನಿಂದ ಮತ್ತು ಕೆ ಮುರಳೀಧರನ್ ಅವರನ್ನು ವಟ್ಟಿಯೂರ್ಕಾವು ಸ್ಥಾನದಿಂದ ಕಣಕ್ಕಿಳಿಸಲಾಗಿದೆ. https://twitter.com/ANI/status/2033884531170939268 ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ನಿರ್ಧರಿಸಲಾಯಿತು. ಕಳೆದ ಒಂದು ದಶಕದಿಂದ ದಕ್ಷಿಣ ರಾಜ್ಯವನ್ನು ಆಳುತ್ತಿರುವ ಎಲ್‌ಡಿಎಫ್ ಮೈತ್ರಿಕೂಟದಿಂದ ಅಧಿಕಾರವನ್ನು ಮರಳಿ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. 140 ಸದಸ್ಯರ ಕೇರಳ ವಿಧಾನಸಭೆಗೆ ಚುನಾವಣೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮತ ಎಣಿಕೆ ಮೇ 4 ರಂದು ನಡೆಯಲಿದೆ. https://kannadanewsnow.com/kannada/e-bike-speeds-up-rural-healthcare-medical-aid-will-reach-doorsteps-of-villages/ https://kannadanewsnow.com/kannada/breaking-ekyc-aadhaar-authentication-not-required-for-all-customers-central-government-clarifies/

Read More

ಬೆಂಗಳೂರು: ಗ್ರಾಮೀಣ ಭಾಗದ ಆರೋಗ್ಯ ವ್ಯವಸ್ಥೆಯಲ್ಲಿ ಹೊಸ ಸಂಚಲನ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಹಳ್ಳಿಗಳ ಕಿರಿದಾದ ದಾರಿಗಳಲ್ಲಿ, ಕುಗ್ರಾಮಗಳ ಮನೆಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗೆ 69 ಇ-ಬೈಕ್‌ಗಳನ್ನು ವಿತರಿಸುವ ಮೂಲಕ ಸಾರಿಗೆ ಕ್ರಾಂತಿಗೆ ನಾಂದಿ ಹಾಡಲಾಗಿದೆ. ಪರಿಸರ ಸ್ನೇಹಿ ಸಾರಿಗೆಯೊಂದಿಗೆ ‘ಲಾಸ್ಟ್ ಮೈಲ್’ ಕನೆಕ್ಟಿವಿಟಿ ಇಂದು ಬೆಂಗಳೂರಿನ ಆರೋಗ್ಯ ಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಈ ಇ-ಬೈಕ್‌ಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, “ಆರೋಗ್ಯ ಸೇವೆ ಎನ್ನುವುದು ಕೇವಲ ಆಸ್ಪತ್ರೆಯ ನಾಲ್ಕು ಗೋಡೆಗಳ ಮಧ್ಯೆ ಸೀಮಿತವಾಗಬಾರದು. ಅದು ಜನರ ಮನೆಬಾಗಿಲಿಗೆ ತಲುಪಬೇಕು ಎನ್ನುವುದು ನಮ್ಮ ಸರ್ಕಾರದ ಆಶಯ,” ಎಂದು ತಿಳಿಸಿದರು. ಈ ಯೋಜನೆಯು ಪ್ರಮುಖವಾಗಿ ತುಮಕೂರು, ಬೆಂಗಳೂರು ದಕ್ಷಿಣ (ರಾಮನಗರ), GBA ಮತ್ತು ಬೆಂಗಳೂರು ನಗರ ಜಿಲ್ಲೆಗಳ ಆಯ್ದ ಆರೋಗ್ಯ ಕೇಂದ್ರಗಳಿಗೆ ಅನ್ವಯಿಸಲಿದೆ. ಆಶಾ ಕಾರ್ಯಕರ್ತೆಯರು…

Read More

ಮಂಗಳೂರು: ರಕ್ಷಣೆ ನೀಡಬೇಕಾದ ಪೊಲೀಸರೇ ಭಕ್ಷಕರಾದರೇ ಎಂಬ ಅನುಮಾನ ಮೂಡಿಸುವಂತಹ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದೂರು ನೀಡಲು ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಘಟನೆಯ ಹಿನ್ನೆಲೆ: ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪಗಳು ಕೇಳಿಬಂದಿವೆ. ದೂರು ನೀಡಲು ಬಂದ ಮಹಿಳೆಯೊಬ್ಬರನ್ನು ಬ್ಲಾಕ್‌ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಮತ್ತೊಬ್ಬ ಸಂತ್ರಸ್ತ ಮಹಿಳೆಯ ಪತಿಯನ್ನು ಪ್ರಕರಣವೊಂದರಲ್ಲಿ ಸಿಲುಕಿಸಿ ಬೆದರಿಕೆ ಹಾಕಿದ್ದ ಎಂಬ ಆರೋಪ ಕೇಳಿಬಂದಿದೆ. “ಪತಿಯನ್ನು ಬಿಡುಗಡೆ ಮಾಡಲು 25 ಲಕ್ಷ ರೂಪಾಯಿ ನೀಡಬೇಕು ಅಥವಾ ನನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಬೇಕು” ಎಂದು ಆತ ಬೇಡಿಕೆಯಿಟ್ಟಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಸಂತ್ರಸ್ತೆಯ ಅಪ್ರಾಪ್ತ ಪುತ್ರಿಯ ಮೇಲೆಯೂ ಈತ ಕಣ್ಣು ಹಾಕಿದ್ದ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಕಮಿಷನರ್ ಕಡಕ್ ಆ್ಯಕ್ಷನ್: ಈ ಘೋರ ಕೃತ್ಯದ…

Read More

ಮುಂಬೈ : ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್‌ ಸ್ವಾಮ್ಯದ ಅಂಗಸಂಸ್ಥೆಯಾದ ಜಿಯೋ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಜೆಪಿಬಿಎಲ್) ತನ್ನ ಬಿಸಿನೆಸ್ ಕರೆಸ್ಪಾಂಡೆಂಟ್ (ಬಿಸಿ) ಟಚ್ ಪಾಯಿಂಟ್‌ಗಳ ಮೂಲಕ ಯುಪಿಐ ಆಧಾರಿತ ನಗದು ಹಿಂಪಡೆಯುವಿಕೆಯನ್ನು ಪರಿಚಯಿಸಿದೆ. ಇದು ಭಾರತದ ಡಿಜಿಟಲ್ ಪಾವತಿ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ದೇಶದಲ್ಲಿ ಆರ್ಥಿಕ ಸೇರ್ಪಡೆಯನ್ನು ಮುನ್ನಡೆಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ವೈಶಿಷ್ಟ್ಯವು ಗ್ರಾಹಕರು, ವಿಶೇಷವಾಗಿ ಗ್ರಾಮೀಣ ಮತ್ತು ಅರೆ-ನಗರ ಪ್ರದೇಶಗಳಲ್ಲಿ, ಯುಪಿಐ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಮತ್ತು ಅವರ ಯುಪಿಐ ಅಪ್ಲಿಕೇಶನ್ ಮೂಲಕ ವಹಿವಾಟನ್ನು ಅಧಿಕೃತಗೊಳಿಸುವ ಮೂಲಕ ಹಣವನ್ನು ಸುಲಭವಾಗಿ ಹಿಂಪಡೆಯಲು ಸಹಾಯ ಮಾಡುತ್ತದೆ. ಡೆಬಿಟ್ ಕಾರ್ಡ್‌ಗಳ ಅಗತ್ಯವನ್ನು ಅಥವಾ ಎಟಿಎಂ ಬಳಕೆ ಮಾಡುವುದನ್ನು ತಪ್ಪಿಸುತ್ತದೆ. ಬಿ.ಸಿ. ಟಚ್ಪಾಯಿಂಟ್‌ಗಳಲ್ಲಿ ಕಾರ್ಡ್ ರಹಿತ ನಗದು ಹಿಂಪಡೆಯುವಿಕೆಯನ್ನು ಸಕ್ರಿಯಗೊಳಿಸುವ ಮೂಲಕ, ಈ ಉಪಕ್ರಮವು ಡಿಜಿಟಲ್ ಪಾವತಿಗಳು ಮತ್ತು ಭೌತಿಕ ನಗದು (ಫಿಸಿಕಲ್ ಕ್ಯಾಷ್) ಪ್ರವೇಶದ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ. ಇದೇ…

Read More

ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಮತ್ತು ತುಮಕೂರು ಜಿಲ್ಲೆಗಳ 277 ಎಕರೆ (111 ಹೆಕ್ಟೇರ್) ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರವು ಷರತ್ತುಬದ್ಧ ಅನುಮತಿ ನೀಡಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಇದೇ ಮಾರ್ಚ್ 9ರಂದು ರಾಜ್ಯಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಮನವಿ ಮಾಡಿದ್ದರು. ಎರಡು ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಒಪ್ಪಿಗೆ ನೀಡಿದ್ದು, ದೇವೇಗೌಡರ ಪಯತ್ನದ ಫಲವಾಗಿ ಇದು ಸಾಧ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ಎತ್ತಿನಹೊಳೆ ಯೋಜನೆಯ ವಿಳಂಬಕ್ಕೆ ಕಾರಣಗಳೇನು ಎಂಬ ಬಗ್ಗೆ ಇದೇ ಮಾರ್ಚ್ 9ರಂದು ದೇವೇಗೌಡರು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರದ ತಪ್ಪುಗಳಿಂದಾಗಿಯೇ ಈ ಯೋಜನೆ ವಿಳಂಬವಾಗಲು ಕಾರಣ ಎಂದು ಕಳವಳ ವ್ಯಕ್ತಪಡಿಸಿದ್ದರು. ರಾಜ್ಯ ಸರ್ಕಾರವು ತನ್ನ ತಪ್ಪುಗಳನ್ನು ಮರೆ ಮಾಚಿಕೊಳ್ಳಲು ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಸತತ ಆರೋಪಗಳನ್ನು ಮಾಡುತ್ತಿದೆ. ಯೋಜನೆಯ ವಿಳಂಬದಿಂದ ನುಣಚಿಕೊಳ್ಳುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರವು ಮಧ್ಯ…

Read More

ಬೆಂಗಳೂರು: ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಆಧುನಿಕತೆ ಮತ್ತು ಪರಿಸರ ಸ್ನೇಹಿ ಕ್ರಮಗಳಿಗೆ ಹೆಸರಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ರಾಷ್ಟ್ರ ಮಟ್ಟದಲ್ಲಿ ಮತ್ತೊಮ್ಮೆ ತನ್ನ ಮುಕುಟಕ್ಕೆ ಮೂರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಹೈದರಾಬಾದ್‌ನಲ್ಲಿ ನಡೆದ ‘ನ್ಯಾಷನಲ್ ಮೊಬೈಲಿಟಿ ಅವಾರ್ಡ್ಸ್-2026’ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಾಧನೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಯಾವ ವಿಭಾಗಗಳಲ್ಲಿ ಪ್ರಶಸ್ತಿ? ಡಿಜಿಟಲೀಕರಣ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯತ್ತ ಬಿಎಂಟಿಸಿ ಇಟ್ಟಿರುವ ದಿಟ್ಟ ಹೆಜ್ಜೆಗಳನ್ನು ಪರಿಗಣಿಸಿ ಈ ಕೆಳಗಿನ ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ: ಅತ್ಯುತ್ತಮ ಸಾರ್ವಜನಿಕ ಸಾರಿಗೆ ಡಿಜಿಟಲೀಕರಣ ಉಪಕ್ರಮ: ತಂತ್ರಜ್ಞಾನದ ಬಳಕೆಯಲ್ಲಿ ಸಂಸ್ಥೆಯ ಮುನ್ನಡೆಗೆ ಸಂದ ಗೌರವ. ವರ್ಷದ ಅತ್ಯುತ್ತಮ ಇವಿ (EV) ಕ್ಲೀನ್ ಫ್ಲೀಟ್ ಪರಿವರ್ತನೆ: ವಿದ್ಯುತ್ ಚಾಲಿತ ಬಸ್‌ಗಳ ಅಳವಡಿಕೆಯಲ್ಲಿ ತೋರಿದ ಸಾಧನೆಗಾಗಿ. ನಾಗರೀಕರ ತೊಡಗಿಸಿಕೊಳ್ಳುವಿಕೆ – ಸಮಾವೇಶಿತ ಸಂಚಾರದಲ್ಲಿ ನವೀನತೆ: ಎಲ್ಲ ವರ್ಗದ ಜನರಿಗೆ ಸುಲಭ ಸಾರಿಗೆ ನೀಡುವಲ್ಲಿನ ಕ್ರಾಂತಿಕಾರಿ ಕ್ರಮಗಳಿಗಾಗಿ. ಪ್ರಶಸ್ತಿ ಪ್ರದಾನ: ದಿನಾಂಕ 17 ಮಾರ್ಚ್ 2026…

Read More

ಅಮಾವಾಸ್ಯೆ ತಿಥಿಯಂದು ನಿಮ್ಮ ಮನೆಯಲ್ಲಿ ಅರ್ಧ ಗಂಟೆ ಈ ದೀಪವನ್ನು ಹಚ್ಚಿದರೆ ಸಾಕು. ಪೂರ್ವಿಕರ ಶಾಪ, ಪಿತೃ ದೋಷ ನಿವಾರಣೆಯಾಗಿ ನೆಮ್ಮದಿಯಿಂದ ಬಾಳಬಹುದು. ಪಿತೃ ದೋಷ ನಿವಾರಣೆಗೆ ದೀಪದ ಆರಾಧನೆ ಮಾಡಿ ಅಮಾವಾಸ್ಯೆಯು ನಮ್ಮ ಪೂರ್ವಜರನ್ನು ಸ್ಮರಿಸುವುದಕ್ಕಾಗಿ ಮತ್ತು ಅವರಿಗೆ ಸರಿಯಾಗಿ ಆಚರಣೆಗಳನ್ನು ಮಾಡಲು ನಿಗದಿಪಡಿಸಿದ ದಿನವಾಗಿದೆ. ಈ ದಿನದಂದು ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಲ್ಲಿ ತಮ್ಮ ಪೂರ್ವಜರಿಗೆ ದೀಕ್ಷೆ ಮತ್ತು ಪೂಜೆಯನ್ನು ಮಾಡಬೇಕು. ಇದು ಕುಟುಂಬವು ಬದುಕಲು ಮಾಡುವ ಪ್ರಮುಖ ವಿಷಯ ಎಂದು ಹೇಳಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ,…

Read More