Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಕಳೆದ ಎರಡೂ ಮುಕ್ಕಾಲು ವರ್ಷದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ವಿವಿಧ ಯೋಜನೆಯಡಿ ತಾಲ್ಲೂಕಿನ ಅಭಿವೃದ್ದಿಗೆ 667.42 ಕೋಟಿ ರೂ. ಅನುದಾನ ತಂದಿದ್ದಾರೆ. ಶಾಸಕರ ಅಭಿವೃದ್ದಿಪರ ಕೆಲಸಗಳನ್ನು ನೋಡಲಾಗದೆ ಬಿಜೆಪಿಯವರು ಹೊಟ್ಟೆಕಿಚ್ಚು ಪಟ್ಟುಕೊಂಡು, ಸುಳ್ಳು ಫ್ಲೆಕ್ಸ್ಗಳನ್ನು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಾಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ತಿಳಿಸಿದರು. ಇಂದು ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮಗೆ ಅಧಿಕಾರ ಸಿಕ್ಕಿದಾಗ ಅಭಿವೃದ್ದಿ ಮಾಡದೆ ಜನರಿಂದ ತಿರಸ್ಕಾರಕ್ಕೆ ಒಳಗಾಗಿ ಸೋತು ಮೂಲೆ ಸೇರಿರುವ ಹರತಾಳು ಹಾಲಪ್ಪ ತಮ್ಮ ಚೇಲಾಗಳ ಮೂಲಕ ಅನುದಾನದ ಫ್ಲೆಕ್ಸ್ಗಳನ್ನು ಹಾಕಿ ಕೀಳುಮಟ್ಟದ ರಾಜಕಾರಣ ಮಾಡುತ್ತಿರುವುದನ್ನು ಕಾಂಗ್ರೇಸ್ ಪಕ್ಷ ಪ್ರಬಲವಾಗಿ ಖಂಡಿಸುತ್ತದೆ ಎಂದು ಹೇಳಿದರು. ತಾಲ್ಲೂಕಿನಲ್ಲಿ ಬೇಳೂರು ಶಾಸಕರಾದ ಮೇಲೆ ಬೇರೆಬೇರೆ ಯೋಜನೆಗೆ ಸರ್ಕಾರದಿಂದ ಸಾಕಷ್ಟು ಅನುದಾನ ಬಂದಿದೆ. ಅದಕ್ಕೆ ಸಂಬಂಧಿಸಿದ ಆದೇಶ ಪ್ರತಿಯನ್ನು ನಾವು ಬಿಡುಗಡೆ ಮಾಡಲು ಸಿದ್ದರಿದ್ದೇವೆ. ರಂಗಮAದಿರ ನಿರ್ಮಾಣಕ್ಕೆ 4.80 ಕೋಟಿ…
ಶಿವಮೊಗ್ಗ : ಮಾರಿಕಾಂಬಾ ಜಾತ್ರೆ ಅಂಗವಾಗಿ ಹೆಲಿ ಟೂರಿಸಂ ಹಾಗೂ ಗಣಪತಿ ಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಜಾತ್ರೆಗೆ ಬರುವ ಭಕ್ತಾದಿಗಳಿಗೆ ಇದು ಹೊಸ ಮನರಂಜನೆ ನೀಡಲಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರೆ ಅಂಗವಾಗಿ ಹೊರತರಲಾಗಿರುವ ಮೂರು ವರ್ಷದ ಮಾಹಿತಿಯನ್ನು ಒಳಗೊಂಡ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಜಾತ್ರೆಯಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ಜೊತೆಗೆ ಇಂತಹ ಜನಾಕರ್ಷಕ ಚಟುವಟಿಕೆಗಳನ್ನು ಆಯೋಜಿಸುವ ಉದ್ದೇಶ ಹೊಂದಲಾಗಿದೆ ಎಂದರು. ಸಾಗರದ ಮಾರಿಕಾಂಬ ದೇವಿ ಜಾತ್ರೆ ತಯಾರಿ ಭರದಿಂದ ನಡೆಯುತ್ತಿದ್ದು ಎಲ್ಲ ಸಮಿತಿಗಳು ತಮ್ಮ ಕೆಲಸವನ್ನು ನಿರ್ವಹಿಸಿ ಜಾತ್ರೆ ಯಶಸ್ಸಿಗೆ ಟೊಂಕ ಕಟ್ಟಿ ಕೆಲಸ ಮಾಡುತ್ತಿವೆ. ಜಾತ್ರೆ ಹಿನ್ನೆಲೆಯಲ್ಲಿ ಸರ್ಕಾರಿ ಕಟ್ಟಡ ಹಾಗೂ ಖಾಸಗಿ ಕಟ್ಟಡಗಳ ಕಾಂಪೋಡ್ಗಳಿಗೆ ಸುಣ್ಣಬಣ್ಣ ಮಾಡಲಾಗುತ್ತಿದೆ. ಸಾರ್ವಜನಿಕರು ಸಹ ನಮ್ಮೊಂದಿಗೆ ಎಲ್ಲ ಕೆಲಸಗಳಿಗೆ ಸಹಕಾರ ನೀಡುತ್ತಿದ್ದಾರೆ. ಊರು ಪ್ರವೇಶ ಮಾಡುವ ಕಡೆಗಳಲ್ಲಿ…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಕಾರವಾರ ತಾಲ್ಲೂಕಿನ ಕದ್ರಾ ಗ್ರಾಮದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಕದ್ರಾ ಗ್ರಾಮದಲ್ಲಿ ಜೆಡಿಎಸ್ ಸ್ಥಳೀಯ ನಾಯಕಿಯ ಪುತ್ರ ಚಿರಾಗ್ ಚಂದ್ರಹಾಸ ಕೋಠಾರಕರ ಎಂಬಾತ ಹಿಂದೆ ಬಿದ್ದಿದ್ದನಂತೆ. ಆತ ಪ್ರೀತಿಯನ್ನು ರಿಶಾಲ್(20) ನಿರಾಕರಿಸಿದ್ದಳು. ಆದರೂ ರಿಶಾಲ್ ಹಿಂದೆ ಚಂದ್ರಹಾಸ ಬಿದ್ದಿದ್ದನಂತೆ. ಈ ಹಿನ್ನಲೆಯಲ್ಲಿ ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿಯ ನಿವಾಸದಲ್ಲಿ ರಿಶಾಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ ಚಂದ್ರಹಾಸ ವಿರುದ್ಧ ಪ್ರಕರಣ ದಾಖಲಾಗಿದೆ. ಯುವಕ ಚಂದ್ರಹಾಸ್ ಜೆಡಿಎಸ್ ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ ಪುತ್ರನಾಗಿದ್ದಾನೆ. ರಿಶಾಲ್ ತಂದೆ ಕ್ರಿಸ್ತೋದ್ ಫ್ರಾನ್ಸಿಸ್ ದೂರಿನ ಮೇರೆಗೆ ಕೇಸ್ ದಾಖಲಾಗಿದೆ. ದೂರಿನಲ್ಲಿ ಮನೆ ಬಳಿ ಬಂದು ತನ್ನನ್ನು ಪ್ರೀತಿಸುವಂತೆ ಚಿರಾಗ್ ಪ್ರೀಡಿಸುತ್ತಿದ್ದ. ಪ್ರೀತಿ ನಿರಾಕರಿಸಿದ್ದಕ್ಕೆ ಬೇಗ ಸತ್ತು ಹೋಗು ಎಂದಿದ್ದ. ಇದರಿಂದ ನೊಂದು ಮನೆಯಲ್ಲೇ ರಿಶಾಲ್ ನೇಣಿಗೆ ಶರಣಾಗಿರುವುದಾಗಿ ಉಲ್ಲೇಖಿಸಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಕದ್ರಾ…
ಕಲಬುರ್ಗಿ: ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಇಂಗ್ಲೀಷ್ ಪತ್ರಿಕೆ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಡಿಡಿಪಿಐ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ದ್ವಿತೀಯ ಪಿಯುಸಿ ಇಂಗ್ಲೀಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಕಲಬುರ್ಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಿಡಿಪಿಐ ಸುರೇಶ್ ಅಕ್ಕಣ್ಣ ನೀಡಿದಂತ ದೂರಿನನ್ವಯ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂದಹಾಗೆ ಜನವರಿ.8ರಂದು ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆದಿತ್ತು. ಪರೀಕ್ಷೆಯ ಹಿಂದಿನ ದಿನ ಇಂಗ್ಲೀಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. https://kannadanewsnow.com/kannada/bjp-is-playing-retail-politics-by-implementing-flex-in-the-name-of-grants-mla-gopalakrishna-belur-kidi/
ಶಿವಮೊಗ್ಗ : ಬಿಜೆಪಿಯವರು ಅತ್ಯಂತ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಅನುದಾನದ ಹೆಸರಿನಲ್ಲಿ ಫ್ಲೆಕ್ಸ್ ಅಳವಡಿಸಿ ಚಿಲ್ಲರೆ ರಾಜಕಾರಣ ಮಡುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಜೋಸೆಫ್ ನಗರದಲ್ಲಿ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ನಗರವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ರಸ್ತೆ ಕಾಮಗಾರಿಗಳು ನಡೆಯುತ್ತಿದೆ. ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ವಿಶೇಷ ಅನುದಾನ ತಂದಿದ್ದೇನೆ. ಹಣ ಬಂದಿಲ್ಲ ಎಂದು ಬಿಜೆಪಿಯವರು ಬೊಗಳೆ ಬಿಡುತ್ತಿದ್ದಾರೆ. ಯಾರು ಶಾಸಕರು ಇರುತ್ತಾರೋ ಅವರ ಅವಧಿಯಲ್ಲಿ ಒಂದಷ್ಟು ಅನುದಾನ ಬಿಡುಗಡೆಯಾಗಿರುತ್ತದೆ. ಅವರ ನಂತರ ಬರುವ ಮತ್ತೊಬ್ಬ ಶಾಸಕರು ಅದನ್ನು ವಿನಿಯೋಗ ಮಾಡುತ್ತಾರೆ. ಕಾಗೋಡು ತಿಮ್ಮಪ್ಪ ಅವರು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಆಡಳಿತ ಸೌಧವನ್ನು ಹಾಲಪ್ಪ ಶಾಸಕರಾಗಿದ್ದಾಗ ಉದ್ಘಾಟನೆ ಮಾಡಿದ್ದಾರೆ. ಅವರ ಅವಧಿಯಲ್ಲಿ ಉಳಿದ ಸಣ್ಣಪುಟ್ಟ ಅನುದಾನದ ಕಾಮಗಾರಿ ಈಗ…
ಮಿಸ್ಸಿಸ್ಸಿಪ್ಪಿ (ಯುಎಸ್): ಪೂರ್ವ ಮಿಸ್ಸಿಸ್ಸಿಪ್ಪಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ 6 ಜನರು ಸಾವನ್ನಪ್ಪಿದ ನಂತರ ಶನಿವಾರ ಒಬ್ಬ ಶಂಕಿತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲಬಾಮಾ ಗಡಿಯ ಸಮೀಪದಲ್ಲಿರುವ ವೆಸ್ಟ್ ಪಾಯಿಂಟ್ ಪಟ್ಟಣದಲ್ಲಿ ಹಿಂಸಾಚಾರದಿಂದಾಗಿ ಹಲವಾರು ಅಮಾಯಕ ಜೀವಗಳು ಬಲಿಯಾಗಿವೆ ಎಂದು ಕ್ಲೇ ಕೌಂಟಿ ಶೆರಿಫ್ ಎಡ್ಡಿ ಸ್ಕಾಟ್ ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ. WTVA ಜೊತೆ ಮಾತನಾಡಿದ ಶೆರಿಫ್, 3 ವಿಭಿನ್ನ ಸ್ಥಳಗಳಲ್ಲಿ 6 ಸಾವುಗಳು ಸಂಭವಿಸಿವೆ ಎಂದು ಹೇಳಿದರು. ಶಂಕಿತನೊಬ್ಬ ಬಂಧನದಲ್ಲಿದ್ದಾನೆ ಮತ್ತು ಸಮುದಾಯಕ್ಕೆ ಯಾವುದೇ ಬೆದರಿಕೆ ಇಲ್ಲ ಎಂದು ಶೆರಿಫ್ ದೃಢಪಡಿಸಿದರು. ನಿಮ್ಮ ಪ್ರಾರ್ಥನೆಯಲ್ಲಿ ನಮ್ಮ ಮೃತರುಗಳು ಮತ್ತು ಅವರ ಕುಟುಂಬಗಳನ್ನು ಕರೆತರುವಂತೆ ನಾನು ಕೇಳುತ್ತೇನೆ. ಕಾನೂನು ಜಾರಿ ಸಂಸ್ಥೆಗಳು ತನಿಖೆಯಲ್ಲಿ ನಿರತವಾಗಿವೆ ಮತ್ತು ಸಾಧ್ಯವಾದಷ್ಟು ಬೇಗ ನವೀಕರಣವನ್ನು ಬಿಡುಗಡೆ ಮಾಡುತ್ತವೆ ಎಂದು ಸ್ಕಾಟ್ ಬರೆದಿದ್ದಾರೆ. ಶೆರಿಫ್ ಕಚೇರಿ ಶನಿವಾರ ಮುಂಜಾನೆ ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡಲಿಲ್ಲ ಆದರೆ ಬೆಳಿಗ್ಗೆ ನಂತರ ಪತ್ರಿಕಾಗೋಷ್ಠಿಯನ್ನು ಯೋಜಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು: ಈಗ ಇರುವಂತ ತೆನೆ ಹೊತ್ತ ಮಹಿಳೆಯು ರಾಜ್ಯ ಜಾತ್ಯಾತೀತ ಜನತಾ ದಳದ ಚಿಹ್ನೆಯಾಗಿದೆ. ಇಂತಹ ಚಿಹ್ನೆಯಲ್ಲಿ ಕೆಲ ಬದಲಾವಣೆ ಮಾಡೋದಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದಂತ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಪ್ರಸ್ತಾಪವನ್ನು ಮಾಡಿರೋದಾಗಿ ಹೇಳಲಾಗುತ್ತಿದೆ. ಪ್ರಸ್ತುತ ಇರುವಂತ ಜೆಡಿಎಸ್ ಪಕ್ಷದ ತೆನೆ ಹೊತ್ತ ಮಹಿಳೆಯ ಚಿತ್ರದ ಜೊತೆಗೆ ಚಕ್ರದ ಗುರುತನ್ನು ಸೇರಿಸೋದಕ್ಕೆ ಗಂಭೀರ ಚರ್ಚೆಯನ್ನು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಜನತಾದಳ ಅವಿಭಜಿತವಾಗಿದ್ದಾಗ ಚಕ್ರವು ಪಕ್ಷದ ಪ್ರಮುಖ ಗುರುತಾಗಿತ್ತು. ಇದೇ ಗುರುತನ್ನು ಈಗಿನ ತೆನೆ ಹೊತ್ತ ಮಹಿಳೆಯ ಜೊತೆಗೆ ಸೇರಿಸೋದಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಇದರಿಂದ ರೈತ ಮತ್ತು ಪ್ರಗತಿಯ ಸಂಕೇತಗಳನ್ನು ಒಟ್ಟುಗೂಡಿಸಿದಂತೆ ಆಗಲಿದೆ ಎಂಬುದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಚಿಂತನೆ ಎನ್ನಲಾಗಿದೆ. ಅಂದಹಾಗೇ ಜೆಡಿಎಸ್ ಪಕ್ಷದ ತೆನೆ ಹೊತ್ತ ಮಹಿಳೆಯ ಚಿಹ್ನೆಯ ಜೊತೆಗೆ ಚಕ್ರವನ್ನು ಸೇರಿಸುವುದರಿಂದ ಪಕ್ಷದ ಇತಿಹಾಸ, ಸಿದ್ಧಾಂತವನ್ನು ಜನರಿಗೆ ತಿಳಿಸಿಕೊಟ್ಟಂತೆ…
ಬೆಂಗಳೂರು: ದ್ವೇಷಭಾಷಣ ಪ್ರತಿಬಂಧಕ ಮಸೂದೆ ವಾಕ್ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ. ಕೇರಳದಲ್ಲಿ ಕನ್ನಡ ಭಾಷೆಗೆ ಧಕ್ಕೆ, ಇದು ಮೊದಲೇ ಆಗಿರುವ ಮ್ಯಾಚ್ ಫಿಕ್ಸಿಂಗ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವೇಷಭಾಷಣ ಪ್ರತಿಬಂಧಕ ಮಸೂದೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕಿತ್ತು. ಇಂತಹ ಮಸೂದೆ ತರುವಾಗ ಅದು ಜನರ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನೋಡಬೇಕಾಗುತ್ತದೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಮಸೂದೆ ಬಗ್ಗೆ ಚರ್ಚೆ ನಡೆಸಲು ಅವಕಾಶವಿದೆ. ವಿಧಾನಸಭೆ ಇರುವುದು ಮಸೂದೆ ಮಂಡನೆ ಹಾಗೂ ಚರ್ಚೆಗೇ ಹೊರತು ಗಲಾಟೆ ಮಾಡುವುದಕ್ಕಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಇದರ ಚರ್ಚೆಗೆ ಅವಕಾಶ ನೀಡಲಿಲ್ಲ. ನಾನು ಮಸೂದೆಯ ಬಗ್ಗೆ ಚರ್ಚೆ ಮಾಡಲು ಮುಂದಾದಾಗ ಕಾಂಗ್ರೆಸ್ ಶಾಸಕರು, ಸಚಿವರು ಭಯಗೊಂಡು ತರಾತುರಿಯಲ್ಲಿ ಮಸೂದೆ ಮಂಡನೆ ಮಾಡಿದರು. ಈ ವಿಚಾರದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ನಡೆಯೂ ನನಗೆ ಬೇಸರ ತಂದಿದೆ ಎಂದರು. ಬಿಜೆಪಿಯಲ್ಲಿ 15 ಶಾಸಕರು…
ಬೆಂಗಳೂರು : ತಲಾ ಆದಾಯದಲ್ಲಿ ನಮ್ಮ ರಾಜ್ಯವು ದೇಶದಲ್ಲೇ ಮೊದಲ ಸ್ಥಾನದಲ್ಲಿರಲು ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಡಾ.ಬಿ.ಅರ್. ಅಂಬೇಡ್ಕರ್ ವೈದ್ಯಕೀಯ ಮತ್ತು ಆಸ್ಪತ್ರೆ ಸಮೂಹ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಸಂಸ್ಥಾಪಕರ ದಿನಾಚರಣೆಯಲ್ಲಿ ಭಾಗವಹಿಸಿ ಸಚಿವರು ಮಾತನಾಡಿದರು. “ತ್ಯಾಗ ಮತ್ತು ಮಮತೆಯ ಪ್ರತೀಕ ಎನಿಸಿರುವ ಮಹಿಳೆಯರಿಗೆ ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಶಕ್ತಿ ತುಂಬಿದೆ. ಇದರಿಂದಾಗಿಯೇ ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೇರಿದ್ದೇವೆ ಎಂದು ಹೇಳಲು ಹೆಮ್ಮೆಯಾಗುತ್ತದೆ. ಯೋಜನೆಗಳಿಂದ ಒಂದು ಕುಟುಂಬಕ್ಕೆ ಸುಮಾರು ಐದು ಸಾವಿರದ ಐನೂರು ರೂಪಾಯಿ ಸಂದಾಯ ಆಗಲಿದೆ. ಇದರಿಂದ ಕುಟುಂಬಗಳು ಸಬಲವಾಗುವ ಜತೆಗೆ ರಾಜ್ಯದ ಆರ್ಥಿಕ ವಹಿವಾಟಿನಲ್ಲೂ ಏರಿಕೆ ಕಂಡಿದೆ. ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಿವೆ. ಮುಖ್ಯವಾಗಿ ಜನರ ಖರೀದಿ ಶಕ್ತಿ ಹೆಚ್ಚಿದೆ,”ಎಂದು ಹೇಳಿದರು. “ಇಂದಿರಾ ಗಾಂಧಿ ಅವರು ಹೇಳಿದಂತೆ ಸರ್ಕಾರವು ಎಲ್ಲರನ್ನೊಳಗೊಳ್ಳುವ ಸರ್ಕಾರವಾಗಬೇಕು. ಸಂಪತ್ತು ಕೇವಲ ಒಂದು ವರ್ಗದ ಸ್ವತ್ತಾಗದೆ, ಸಮರ್ಪಕವಾಗಿ…
ಬೆಂಗಳೂರು: ಅಮೃತ ಮಹೋತ್ಸವ ಪ್ರಯುಕ್ತ ಬೆಂಗಳೂರಿನ ಬಡ ಕುಟುಂಬಗಳಿಗೆ ವಸತಿ ಕಲ್ಪಿಸಲು ಜಿಬಿ ಎ (ಹಿಂದಿನ ) ಬಿಬಿಎಂಪಿ 550 ಫಲಾನುಭವಿಗಳಿಗೆ ತಲಾ ಐದು ಲಕ್ಷ ರೂ. ನಂತೆ ರಾಜೀವ್ ಗಾಂಧಿ ವಸತಿ ನಿಗಮದ ಖಾತೆಗೆ ಜಮೆ ಮಾಡಿದೆ. ಆದರೆ ಫಲಾನುಭವಿಗಳ ಪಟ್ಟಿ ಕೊಡದ ಕಾರಣ ಮನೆ ಹಂಚಿಕೆ ಮಾಡಿಲ್ಲ ಎಂದು ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಶಿನ್ನಾಳ್ಕರ್ ಸ್ಪಷ್ಟ ಪಡಿಸಿದ್ದಾರೆ. ಜಿಬಿಎ ಜಮೆ ಮಾಡಿರುವ ಮೊತ್ತ ಸುರಕ್ಷಿತ ವಾಗಿದ್ದು ಯಾವುದೇ ಆತಂಕ ಪಡಬೇಕಿಲ್ಲ. ಪಾಲಿಕೆ ವತಿಯಿಂದ ಫಲಾನುಭವಿಗಳ ಪಟ್ಟಿ ಕೊಟ್ಟ ತಕ್ಷಣ ಮುಖ್ಯಮಂತ್ರಿ ಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು. 19 ಸಾವಿರ ಮನೆಗಳು ಈಗಾಗಲೇ ಹಂಚಿಕೆಗೆ ಸಿದ್ದವಿದೆ ಎಂದು ಹೇಳಿದ್ದಾರೆ. ಈಗಾಗಲೇ ಫಲಾನುಭವಿಗಳ ಪಟ್ಟಿ ನೀಡುವ ಸಂಬಂಧ ಹಲವಾರು ಬಾರಿ ಪತ್ರ ಬರೆಯಲಾಗಿದೆ. ಆದರೂ ಪಾಲಿಕೆ ವತಿಯಿಂದ ಪಟ್ಟಿ ಬಂದಿಲ್ಲ. ಫಲಾನುಭವಿಗಳ ಪಟ್ಟಿ ಕಳುಹಿಸುವವರೆಗೂ ಈ ಹಣ ಬಳಕೆ ಮಾಡುವಂತಿಲ್ಲ…














