Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ನಗರದ ಹೃದಯ ಭಾಗ ಕಿತ್ತೂರು ಚೆನ್ನಮ್ಮ ಸರ್ಕಲ್ನಲ್ಲಿ ಅಕ್ಕಪಡೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸದ್ಯಕ್ಕೆ ಪ್ರಾಯೋಗಿಕವಾಗಿ ಕೆಲವು ಸ್ಥಳಗಳಲ್ಲಿ ಅಕ್ಕಪಡೆ ಆರಂಭಿಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಂಬರುವ ಬಜೆಟ್ನಲ್ಲಿ ಅಂಗೀಕಾರ ಪಡೆದು ತಾಲೂಕು ಮಟ್ಟಕ್ಕೂ ಅಕ್ಕಪಡೆ ವಿಸ್ತರಿಸಲಾಗುವುದು ಎಂದರು. ಅಕ್ಕಪಡೆ ಎಂದರೆ ಮಹಿಳೆಯರಿಗೆ ಹಾಗೂ ಮಕ್ಕಳ ಪಾಲಿಗೆ ಭರವಸೆ ಇದ್ದಂತೆ. ಜಿಲ್ಲೆಯಾದ್ಯಂತ ಮಹಿಳೆಯರು, ಮಕ್ಕಳು ಸುರಕ್ಷಿತವಾಗಿರಬೇಕು ಎಂಬ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದೀಗ ಅದರ ಮುಂದುವರಿದ ಭಾಗವಾಗಿ ಅಕ್ಕಪಡೆಯನ್ನು ರಚಿಸಲಾಗಿದೆ ಎಂದು ಸಚಿವರು ಹೇಳಿದರು. ಅಕ್ಕಪಡೆ ಸಿಬ್ಬಂದಿ ಸಾರ್ವಜನಿಕ ಸ್ಥಳಗಳಾದ ಮಾಲ್, ಜಾತ್ರಾ ಮಹೋತ್ಸವ, ಲೇಡಿಸ್ ಹಾಸ್ಟೆಲ್ಗಳು, ಕಾಲೇಜುಗಳು, ಸಮುದಾಯ ಭವನ ಸೇರಿದಂತೆ ಜನನಿಬೀಡ ಪ್ರದೇಶಗಳಿಗೆ ಭೇಟಿ ಕೊಡಲಿದ್ದಾರೆ. ಅಕ್ಕಪಡೆಯ ಉದ್ದೇಶ ಸಫಲವಾಗಬೇಕು ಎಂದರೆ ನಾಗರಿಕ…
ಕಲಬುರ್ಗಿ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇಳಿದಿದ್ದಂತ ಇಬ್ಬರು ಉಸಿರುಗಟ್ಟಿ ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿಯ ಹೀರಾಪುರ ಬಡವಾಣೆಯ ಮನೆಯೊಂದರ ಶೌಚಾಲಯದ ಗುಂಡಿಯನ್ನು ಸ್ವಚ್ಛಗೊಳಿಸುವ ವೇಳೆಯಲ್ಲಿ ಈ ದುರಂತ ಸಂಭವಿಸಿದೆ. ಮನೆ ಮಾಲೀಕ ಶಿವಕುಮಾರ(52) ಹಾಗೂ ರತನ್(60) ಎಂಬುವರು ಸಾವನ್ನಪ್ಪಿದ್ದಾರೆ. ತಮ್ಮ ಮನೆಯ ಶೌಚಾಲಯದ ಗುಂಡಿ ಕಟ್ಟಿಕೊಂಡಿದ್ದರಿಂದಾಗಿ ಸ್ವಚ್ಛಗೊಳಿಸೋದಕ್ಕೆ ಇಳಿದಿದ್ದರು. ಈ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/siddaramaiah-is-a-poor-chief-minister-mlas-foreign-tour-despite-government-being-bankrupt-r-ashok/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಣವಿಲ್ಲದೆ ಪಾಪರ್ ಆಗಿದೆ. ಸಿದ್ದರಾಮಯ್ಯ ಪಾಪರ್ ಮುಖ್ಯಮಂತ್ರಿಯಾಗಿದ್ದಾರೆ. ಆದರೂ ಶಾಸಕರು ಫಾರಿನ್ ಟೂರ್ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಸಮಯದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಲಹಲು ಕೇಂದ್ರ ಹಾಗೂ ರಾಜ್ಯದ ಸರ್ಕಾರದ ಸಹಯೋಗದಲ್ಲಿ ತಂದ ಯೋಜನೆಯಡಿ 26,334 ಮಕ್ಕಳಿದ್ದಾರೆ. ಪ್ರತಿ ತಿಂಗಳು ರಾಜ್ಯ ಸರ್ಕಾರದಿಂದ ಸಿಗುವ 4,000 ರೂ.ನಿಂದ ಮಕ್ಕಳು ಊಟ ಮಾಡುತ್ತಾರೆ. ಅಂದರೆ ಒಬ್ಬರಿಗೆ 10-15 ರೂ. ಸಿಗುತ್ತದೆ. ಕೊಪ್ಪಳದಲ್ಲಿ 2,220, ಬಳ್ಳಾರಿಯಲ್ಲಿ 1059, ಧಾರವಾಡದಲ್ಲಿ 2650 ಮಕ್ಕಳಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಅನ್ನ ಜಾಸ್ತಿಯಾಗಿ ಫಾರಿನ್ ಟೂರ್ ಮಾಡುತ್ತಿದ್ದಾರೆ. ಆದರೆ ಈ ಬಡ ಮಕ್ಕಳಿಗೆ 7 ತಿಂಗಳಿಂದ ಒಟ್ಟು 75 ಕೋಟಿ ರೂ. ನೀಡಿಲ್ಲ. ಬಡ ಮಕ್ಕಳು ಉಪವಾಸದಿಂದ ಸಾಯುವ ಸ್ಥಿತಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ರೂ.ಗೆ, ಅನ್ನಭಾಗ್ಯದ 750 ಕೋಟಿ ರೂ. ಗೆ ನಾಮ ಹಾಕಿದ್ದಾರೆ. ಈಗ ಅನಾಥ ಮಕ್ಕಳ ಹಣವನ್ನೂ…
ಬೆಂಗಳೂರು : ಮೇಳ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಕೇಂದ್ರ ಉದ್ಯೋಗ ಮಹಾನಿರ್ದೇಶನಾಲಯ ಹಾಗೂ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರದ ವತಿಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ ನಂ.17, 1ನೇ ಕ್ರಾಸ್, 1ನೇ ಹಂತ, ಪೀಣ್ಯ, ಪೊಲೀಸ್ ಸ್ಟೇಷನ್ ಹಿಂಭಾಗ, ಬೆಂಗಳೂರು ಇಲ್ಲಿ ನಿರುದ್ಯೋಗಿ ವಿಶೇಷಚೇತನ ಯುವಕ – ಯುವತಿಯರಿಗೆ ಉದ್ಯೋಗ ಮೇಳವನ್ನು ಆಯೋಜಿಸಿದೆ. ಈ ಉದ್ಯೋಗಮೇಳದಲ್ಲಿ ಪ್ರತಿಷ್ಠಿತ ಲಾಡ್ವಾ ಸಲ್ಯೂಷನ್ಸ್ ಕಂಪನಿಯ ಉದ್ಯೋಗದಾತರು ಪಾಲ್ಗೊಳ್ಳುತ್ತಿದ್ದು, ಇಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಿದ್ದಾರೆ. ಉದ್ಯೋಗಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ಅಂದೇ ಸ್ಥಳದಲ್ಲಿ ನೋಂದಣಿ ಮಾಡಿಕೊಳ್ಳುವುದು. ಆಸಕ್ತ ಅಭ್ಯರ್ಥಿಗಳು ತಪ್ಪದೇ ತಮ್ಮ ವೈಯುಕ್ತಿಕ ವಿವರಗಳನ್ನೊಳಗೊಂಡ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು ಎಂದು ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರದ ಮುಖ್ಯಸ್ಥರಾದ ಶಿವಶಾಂತವೀರ್ ದಿವಾಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/government-post-recruitment-relaxation-of-5-years-state-government-official-order/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/
ಬೆಂಗಳೂರು : ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (As a one time messure) 5 ವರ್ಷಗಳ ಸಡಿಲಿಕೆ ನೀಡಿ ಸರ್ಕಾರವು 2026 ನೇ ಜನವರಿ 29 ರಂದು ಆದೇಶ ಹೊರಡಿಸಿದೆ. ಹಲವಾರು ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿಧಿಗಳು ಮತ್ತು ಸಂಘಸಂಸ್ಥೆಗಳು ಮನವಿ ಸಲ್ಲಿಸಿ, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿರುತ್ತಾರೆ. ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಕೆ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವಾ ನಿಯಮಗಳು-1) ಸರ್ಕಾರದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/take-immediate-action-to-fulfill-various-demands-of-ksrtc-employees-bjp-state-president-by-vijayendras-letter-to-cm/ https://kannadanewsnow.com/kannada/there-are-no-rules-for-marriage-hall-authorities-to-verify-the-age-records-of-the-bride-and-groom-high-court/
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಪಾವತಿ ಹಾಗೂ ವೇತನ ಪರಿಷ್ಕರಣೆ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ ಬರೆದು ಆಗ್ರಹಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ರಾಜ್ಯದ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಕಳೆದ 38 ತಿಂಗಳಿಂದ ತಮ್ಮ ನ್ಯಾಯಸಮ್ಮತ ವೇತನ ಹಿಂಬಾಕಿ ಪಡೆಯದೆ ಸಂಕಷ್ಟದ ಜೀವನ ನಡೆಸುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ. 01.01.2024800 ಜಾರಿಗೆ ಬರಬೇಕಾಗಿದ್ದ ವೇತನ ಪರಿಷ್ಕರಣೆಯನ್ನೂ ಉದ್ದೇಶಪೂರ್ವಕವಾಗಿ ವಿಳಂಬಗೊಳಿಸುತ್ತಿರುವುದು ಕಾರ್ಮಿಕ ವಿರೋಧಿ ಧೋರಣೆಯ ಸ್ಪಷ್ಟ ಉದಾಹರಣೆಯಾಗಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ರಸ್ತೆ ಸಾರಿಗೆ ಮದ್ದೂರ್ ಸಂಘ ಒಕ್ಕೂಟ (ರಿ) ಕೈಗೊಂಡಿರುವ “ಅಸಹಕಾರ ಚಳವಳಿ” ಸಂಪೂರ್ಣ ನ್ಯಾಯಸಮ್ಮತವಾಗಿದ್ದು, ಅವರ ಹೋರಾಟಕ್ಕೆ ಭಾರತೀಯ ಜನತಾ ಪಕ್ಷ ತನ್ನ ಪೂರ್ಣ ಬೆಂಬಲವನ್ನು ಘೋಷಿಸುತ್ತದೆ. ರಾಜ್ಯ ಸರ್ಕಾರವು ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವುದು ಕೇವಲ ಆಡಳಿತ ವೈಫಲ್ಯವಲ್ಲ,…
ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7 ರಿಂದ ಸ್ಥಗಿತಗೊಳಿಸಲಾಗಿದ್ದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿಯ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮದ ಧಾರಣಾ ಸಾಮರ್ಥ್ಯವನ್ನು (Eco-Tourism carrying capacity) ವೈಜ್ಞಾನಿಕವಾಗಿ ನಿಗದಿ ಪಡಿಸಲು ರಚಿಸಲಾಗಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಾಂತ್ರಿಕ ಸಮಿತಿ ನೀಡಿರುವ ಪ್ರಾಥಮಿಕ ವರದಿಯ ಪರಾಮರ್ಶೆ ನಡೆಸಿದರು. ಹೆಗ್ಗಡ ದೇವನಕೋಟೆಯಲ್ಲಿ ರೈತರೂ ಸೇರಿದಂತೆ ಸಾವಿರಾರು ಸ್ಥಳೀಯರು, ರೆಸಾರ್ಟ್ ಸಿಬ್ಬಂದಿ ಪ್ರತಿಭಟನೆ ನಡೆಸಿ ಸಫಾರಿ ನಿಲ್ಲಿಸಿರುವುದರಿಂದ ತಮ್ಮ ಜೀವನೋಪಾಯಕ್ಕೆ ಅಡ್ಡಿಯಾಗಿದ್ದು, ಸಫಾರಿ ಪುನಾರಂಭಿಸಬೇಕು ಎಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ಮಾಧ್ಯಮಗಳಲ್ಲಿ…
ಶಿವಮೊಗ್ಗ: ಕೇಂದ್ರ ಸಚಿವ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸಲು ಪಣ ತೊಟ್ಟಿದ್ದು, ಶೀಘ್ರದಲ್ಲೇ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸೊರಬಕ್ಕೆ ಕರೆತರುವ ಮೂಲಕ ತಾಲ್ಲೂಕಿನಲ್ಲಿ ಯುವಕರನ್ನು ಮತ್ತಷ್ಟು ಪಕ್ಷಕ್ಕೆ ಸೆಳೆಯಲು ಕಾರ್ಯತಂತ್ರ ರೂಪಿಸಲಾಗುವುದು ಎಂದು ಜೆಡಿಎಸ್ ಹಿರಿಯ ಮುಖಂಡ ಬಾಸೂರು ಚಂದ್ರೇಗೌಡ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜವಾಬ್ದಾರಿ ಮರೆತ ರಾಜಕೀಯ ಕ್ಷೇತ್ರದಲ್ಲಿ ರಾಜಕಾರಣವು ಇಂದು ವ್ಯಾಪಾರವಾಗಿ ಬದಲಾಗಿದೆ. ಕಳೆದ 40 ವರ್ಷಗಳಿಂದ ಜನರಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ನಮ್ಮಲ್ಲಿ ಆರ್ಥಿಕ ಶಕ್ತಿ ಇಲ್ಲದಿದ್ದರೂ ಜನರ ಪರವಾಗಿ ಕೆಲಸ ಮಾಡಿದ್ದೇವೆ. ಪಕ್ಷದ ಹಿರಿಯ ಮುಖಂಡರು ಭಿನ್ನಮತ ಮರೆತು ಒಗ್ಗೂಡಿ ಪಕ್ಷ ಸಂಘಟಿಸಬೇಕಿದೆ ಎಂದು ತಿಳಿಸಿದರು. ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಗಣಪತಿ ಮಾತನಾಡಿ, ಟಿ.ಎನ್.ರಾಮಕೃಷ್ಣ ಅವರು ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ತಾಲ್ಲೂಕು ಜೆಡಿಎಸ್ ವತಿಯಿಂದ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು. ಮುಂಬರುವ ಜಿಲ್ಲಾ, ತಾಲೂಕು,…
ಬೆಂಗಳೂರು : “ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ ಮುಂದೆ ಅಥವಾ ಬಿಜೆಪಿ ಕಚೇರಿ ಎದುರು ಲೋಡ್ ಕಸವನ್ನು ತೆಗೆದುಕೊಂದು ಹೋಗಿ ಹಾಕಬೇಕಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಮಹದೇವಪುರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸಿರುವ ಬಗ್ಗೆ ಕೇಳಿದಾಗ, “ಶಾಸಕರು ಕಸ ಹಾಕಬಾರದು ಹಾಗೂ ನಮಗೆ ಅನುದಾನ ಬೇಕು ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಮಂಗಳವಾರದಂದು ಅರವಿಂದ ಲಿಂಬಾವಳಿ, ಇಂದು ದೊಡ್ಡಬಳ್ಳಾಪುರ ಶಾಸಕರು ಬ್ಲಾಕ್ ಮೇಲ್ ಮಾಡಿದ್ದಾರೆ. ಹೀಗೆ ಮಾಡಿದರೆ ಕಸ ಎಲ್ಲಿಗೆ ಹೋಗಬೇಕು? ಕಸವು ಆರ್.ಅಶೋಕ್, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗೆ ಹೋಗಬೇಕಾಗುತ್ತದೆ. ಇವರುಗಳು ಯಾರಿಗೆ ಎಂದು ಬ್ಲಾಕ್ ಮೆಲ್ ಮಾಡುತ್ತಿದ್ದಾರೆ” ಎಂದರು. ಯಾವ ಉದ್ದೇಶಕ್ಕೆ ಶಾಸಕರುಗಳು ಬ್ಲಾಕ್ ಮೆಲ್…
ನವದೆಹಲಿ: ಇಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಅವರೊಂದಿಗಿನ ಉನ್ನತ ಮಟ್ಟದ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಜಾಗತಿಕ ಕೃತಕ ಬುದ್ಧಿಮತ್ತೆ ಭೂದೃಶ್ಯದಲ್ಲಿ ಭಾರತದ ಬೆಳೆಯುತ್ತಿರುವ ಪಾತ್ರವನ್ನು ಎತ್ತಿ ತೋರಿಸಿದರು. ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, “ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಶ್ರೀ ಸುಂದರ್ ಪಿಚೈ ಅವರನ್ನು ಭೇಟಿಯಾಗಲು ಸಂತೋಷವಾಯಿತು. ಎಐನಲ್ಲಿ ಭಾರತ ಮಾಡುತ್ತಿರುವ ಕೆಲಸ ಮತ್ತು ಈ ಕ್ಷೇತ್ರದಲ್ಲಿ ನಮ್ಮ ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವೃತ್ತಿಪರರೊಂದಿಗೆ ಗೂಗಲ್ ಹೇಗೆ ಕೆಲಸ ಮಾಡಬಹುದು ಎಂಬುದರ ಕುರಿತು ಮಾತನಾಡಿದರು.” ಜವಾಬ್ದಾರಿಯುತ ಮತ್ತು ಪ್ರಭಾವಶಾಲಿ ಎಐ ಅಭಿವೃದ್ಧಿಯಲ್ಲಿ ಪ್ರಮುಖ ಧ್ವನಿಯಾಗಲು ಭಾರತವು ಮುಂದಾಗುತ್ತಿದ್ದಂತೆ ಜಾಗತಿಕ ತಂತ್ರಜ್ಞಾನ ದೈತ್ಯರೊಂದಿಗೆ ಸಹಯೋಗವನ್ನು ಗಾಢಗೊಳಿಸುವ ಉದ್ದೇಶವನ್ನು ಈ ಸಂವಾದವು ಪ್ರತಿಬಿಂಬಿಸುತ್ತದೆ. ಫೆಬ್ರವರಿ 16 ರಿಂದ 21 ರವರೆಗೆ ಭಾರತ್ ಮಂಟಪದಲ್ಲಿ ನಡೆಯಲಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯು ಜಾಗತಿಕ ದಕ್ಷಿಣದಲ್ಲಿ ಇದುವರೆಗೆ…














