Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸಾಗರದಲ್ಲಿ ದಿನೇ ದಿನೇ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ಪತ್ರಕರ್ತರೆಂದು ಹೆಸರೇಳಿಕೊಂಡು ವಸೂಲಿಗೆ ಇಳಿದಿದ್ದವರು, ಈಗ ರಾಜ್ಯದ ಪ್ರತಿಷ್ಠಿತ ಪತ್ರಿಕೆಯ ಹೆಸರೇಳಿಕೊಂಡು ವಸೂಲಿಗೆ ಇಳಿದಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾಗರ ಡಿವೈಎಸ್ಪಿಗೆ ಟೌನ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪುಲ್ಲಯ್ಯ ರಾಥೋಡ್ ಮೂಲಕ ಸಾಗರ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ದೂರು ನೀಡಲಾಯಿತು. ಈ ವೇಳೆ ಮಾತನಾಡಿದಂತ ಸಾಗರ ಪ್ರಜಾವಾಣಿ ಪತ್ರಿಕೆಯ ವರದಿಗಾರ ಎಂ.ರಾಘವೇಂದ್ರ ಅವರು, ಈ ಹಿಂದೆ ಯೂಟ್ಯೂಬ್ ಹೆಸರು ಹೇಳಿಕೊಂಡು ವಸೂಲಿ ಮಾಡಲಾಗುತ್ತಿತ್ತು. ಈಗ ಪ್ರತಿಷ್ಠಿತ ಪತ್ರಿಕೆಯ ಹೆಸರೇಳಿಕೊಂಡು ಸಾಗರದಲ್ಲಿ ಕೆಲವರು ವಸೂಲಿಗೆ ಇಳಿದಿದ್ದಾರೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದರು. ಸಾಗರ ತಾಲ್ಲೂಕು ಕೆಯುಡಬ್ಲೂಜೆ ಸಂಘದ ಅಧ್ಯಕ್ಷ ಮಹೇಶ್ ಹೆಗಡೆ ಮಾತನಾಡಿ ಈ ಹಿಂದೆ ಯೂಟ್ಯೂಬ್ ವಿರುದ್ಧ ಕ್ರಮಕ್ಕೆ ದೂರು ನೀಡಲಾಗಿತ್ತು. ಅದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ ಪತ್ರಿಕೆಯ ಹೆಸರೇಳಿಕೊಂಡು ವಸೂಲಿ ಮಾಡುತ್ತಿದ್ದಾರೆ. ಈ…
ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಗ್ರಾಮ ಪಂಚಾಯ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲೇ 11ಇ ಸೇರಿದಂತೆ ಹಲವಾರು ಭೂ ದಾಖಲೆಗಳು ಲಭ್ಯವಾಗಲಿವೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯ ಅಡಿಯಲ್ಲಿನ ಸೇವೆಗಳನ್ನು ಗ್ರಾಮ ಪಂಚಾಯ್ತಿಗಳ ಬಾಪೂಜಿ ಸೇವಾ ಕೇಂದ್ರಗಳಿಗೂ ಸರ್ಕಾರ ವಿಸ್ತರಿಸಿರುವುದರಿಂದ, ಈಗ ಹಲವು ಭೂ ದಾಖಲೆಗಳು ಗ್ರಾಮ ಪಂಚಾಯ್ತಿ ಮಟ್ಟದಲ್ಲೇ ಜನತೆಗೆ ದೊರೆಯಲಿವೆ. ಯಾವ ಭೂ ದಾಖಲೆಗಳು ಬಾಪೂಜಿ ಸೇವಾ ಕೇಂದ್ರದಲ್ಲಿ ಲಭ್ಯ? 11ಇ ನಕ್ಷೆ ಭೂ ಪರಿವರ್ತನೆಗಾಗಿ ಅರ್ಜಿ ತತ್ಕಾಲ್ ಪೋಡಿ ಹದ್ದು ಬಸ್ತು ಯಾವ ಭೂ ದಾಖಲೆಗಳಿಗೆ ಎಷ್ಟು ಅರ್ಜಿ ಶುಲ್ಕ ನಿಗದಿ? 11ಇ ನಕ್ಷೆಯನ್ನು 2 ಎಕರೆವರೆಗೆ ಪಡೆಯೋದಕ್ಕೆ ರೂ.1,500 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. 2 ಎಕರೆಗಿಂತ ಹೆಚ್ಚಿದ್ದರೇ ಪ್ರತಿ ಎಕರೆಗೆ ರೂ.400 ಹೆಚ್ಚುವರಿ ಶುಲ್ಕ ಪಾವತಿಸಬೇಕು. ಅಲ್ಲದೇ ಗ್ರಾಮ ಪಂಚಾಯ್ತಿ ಸೇವಾ ಶುಲ್ಕ ರೂ.25 ಪಾವತಿಸಿದರೇ 11ಇ ನಕ್ಷೆ ದೊರೆಯಲಿದೆ. ಭೂ ಪರಿವರ್ತೆನೆಗಾಗಿ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಭಾರತದ ಅನುಭವಿ ಓಪನರ್ ರೋಹಿತ್ ಶರ್ಮಾ, ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 301 ರನ್ಗಳನ್ನು ಬೆನ್ನಟ್ಟಲು ಮಾಡಿದ ಪ್ರಯತ್ನದ ಮೂಲಕ, ಎಲ್ಲಾ ಮಾದರಿಗಳಲ್ಲಿ 650 ಸಿಕ್ಸರ್ಗಳನ್ನು ಬಾರಿಸಿದ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ಸೃಷ್ಟಿಸಿದರು. ಅತ್ಯಂತ ಸೂಕ್ಷ್ಮ ಮತ್ತು ನಿರ್ಣಾಯಕ ಹಂತದಲ್ಲಿ ಬಂದ ಈ ಮೈಲಿಗಲ್ಲಿನ ಮೂಲಕ ರೋಹಿತ್ ಅವರ ಸಿಕ್ಸರ್ಗಳೊಂದಿಗಿನ ಪರಾಕ್ರಮವನ್ನು ಮತ್ತೊಮ್ಮೆ ಪ್ರಶಂಸಿಸಲಾಯಿತು. ಶುಭಮನ್ ಗಿಲ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ನಿಧಾನಗತಿಯ ಆರಂಭವನ್ನು ಪಡೆದರು ಮತ್ತು ಎರಡು ಎಸೆತಗಳನ್ನು ತೆಗೆದುಕೊಂಡು ಮೈದಾನದಲ್ಲಿ ನೆಲೆಗೊಂಡರು. ಬಹಳ ಬೇಗನೆ ಸ್ಟ್ರೈಕ್ ಅನ್ನು ತಿರುಗಿಸಿದ ಅವರು ಐದನೇ ಓವರ್ಗಳಲ್ಲಿ ಭುಜಗಳಿಂದ ಓಪನರ್ ಮಾಡಿದರು, ಜಕಾರಿ ಫೌಲ್ಕ್ಸ್ ಅವರನ್ನು ಸ್ಕ್ವೇರ್ ಲೆಗ್ನಲ್ಲಿ ಸಿಕ್ಸ್ ಎಸೆದರು. ಇದಾದ ಸ್ವಲ್ಪ ಸಮಯದ ನಂತರ, ಎಲ್ಲರೂ ಕಾಯುತ್ತಿದ್ದ ಕ್ಷಣ ಬಂದಿತು, ರೋಹಿತ್ ಕೈಲ್ ಜೇಮಿಸನ್ ಅವರನ್ನು ಇನ್ನಿಂಗ್ಸ್ನ ಎರಡನೇ ಗರಿಷ್ಠ ಮೊತ್ತಕ್ಕೆ ಬಿಡುಗಡೆ ಮಾಡಿದರು…
ಹಾವೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೈಸರ್ಗಿಕ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ರೈತರು ಮತ್ತೆ ನಮ್ಮ ಪೂರ್ವಜರ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಉತ್ಪಾದನೆ ಮಾಡಬೇಕು. ಅಗ್ರೊ ಕಂಪನಿ ರೈತರನ್ನು ಗಮನದಲ್ಲಿ ಇಟ್ಟುಕೊಂಡು ನೈಸರ್ಗಿಕ ಕೃಷಿಯಿಂದ ರೈತರಿಗೆ ಲಾಭವಾಗುವಂತೆ ನೋಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಇಂದು ವೆಂಕಟೇಶ್ವರ ಕೋ ಆಪರೇಟಿವ್ ಪವರ್ ಆಂಡ್ ಅಗ್ರೊ ಪ್ರೊಸೆಸ್ಸಿಂಗ್ ಸಂಸ್ಥೆ ಏರ್ಪಡಿಸಿದ್ದ ಕೃಷಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಕೃಷಿಯಲ್ಲಿ ಬಹಳಷ್ಟು ಪ್ರಯೋಗಗಳು ನಡೆಯುತ್ತಿವೆ. ಅತ್ಯಂತ ಹೆಚ್ಚು ಪ್ರಯೋಗಕ್ಕೆ ಒಳಗಾಗಿರುವುದು ಭೂಮಿ ಮತ್ತು ರೈತ. ಒಂದು ಕಡೆ ಭೂಮಿಯ ಶಕ್ತಿಯನ್ನು ಸಾರವನ್ನು ಉಳಿಸುವಂತ ಪ್ರಯೋಗ ನಡೆಯುತ್ತಿದೆ. ಇನ್ನೊಂದು ಕಡೆ ಆ ಭೂಮಿಯ ಶಕ್ತಿಯ ಸಾರವನ್ನು ನಶಿಸುವಂತ ಕೆಲಸಗಳು ಆಗುತ್ತಿವೆ, ರೈತ ಹೀಗಾಗಿ ಬಹಳಷ್ಟು ಗೊಂದಲಕ್ಕೆ ಬಿದ್ದಿದ್ದಾನೆ. ಯಾವುದನ್ನು ಬಳಕೆ ಮಾಡಬೇಕು. ಯಾವುದನ್ನು ಬಳಕೆ ಮಾಡಬಾರದು ಯಾವುದನ್ನು ಮಾಡಿದರೆ ತುರ್ತು ಲಾಭ. ಯಾವುದನ್ನು ಮಾಡಿದರೆ ದೀರ್ಘ…
ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಬೀದರ್ ನಲ್ಲಿ ನಡೆಸಲು ಬೀದರ್ ಪತ್ರಕರ್ತರ ಭವನದಲ್ಲಿ ರಾಜ್ಯ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಜಿಲ್ಲಾ ಕಾರ್ಯನಿರತ ಸಂಘದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ರಾಜ್ಯ ಸಮ್ಮೇಳನದ ಜವಾಬ್ದಾರಿ ಹೊತ್ತ ಬೀದರ್ ಜಿಲ್ಲಾ ಸಂಘಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ಅಭಿನಂದನೆಗಳನ್ನು ಸಲ್ಲಿಸಿದೆ. ಫೆಬ್ರವರಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಸಮ್ಮೇಳನ ಆಯೋಜನೆ ಮಾಡಲಾಗುವುದು ಎಂದು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ್ ದೇವಪ್ಪ ಅವರು ತಿಳಿಸಿದ್ದಾರೆ. https://kannadanewsnow.com/kannada/shivamogga-veterinarian-dr-sunil-dies-after-drowning-in-sharavati-backwaters-in-sagara/ https://kannadanewsnow.com/kannada/now-these-land-records-including-11e-map-will-be-available-at-the-gram-panchayat-itself-this-is-the-fee-fixed/
ಶಿವಮೊಗ್ಗ: ಜಿಲ್ಲೆಯಲ್ಲಿ ಕುಟುಂಬ ಸಮೇತ ಶರಾವತಿ ಹಿನ್ನೀರಿಗೆ ಔಟಿಂಗ್ ಹೋಗಿದ್ದ ವೇಳೆಯಲ್ಲಿ, ಈಜಲು ತೆರಳಿದ್ದಂತ ಪಶು ವೈದ್ಯಾಧಿಕಾರಿ ಡಾ.ಸುನೀಲ್ ನೀರಲ್ಲಿ ಮುಳುಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಕ್ರೆಯ ಬಾಳೇಗೆರೆ ಗ್ರಾಮದ ಬಳಿಗೆ ಕುಟುಂಬ ಸಮೇತರಾಗಿ ಮಾಸೂರಿನಲ್ಲಿ ಹಿರಿಯ ಪಶು ವೈದ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ಡಾ.ಸುನೀಲ್(38) ಔಟಿಂಗ್ ಗೆ ತೆರಳಿದ್ದರು. ಈಜು ಬರುತ್ತಿದ್ದರಿಂದ ಶರಾವತಿ ಹಿನ್ನೀರಿನಲ್ಲಿ ಈಜಾಡೋದಕ್ಕೆ ಇಳಿದಿದ್ದರು. ಸುಮಾರು 20 ಮೀಟರ್ ದೂರ ಈಜಿ ಹೋಗಿದ್ದಂತ ಪಶು ವೈದ್ಯ ಡಾ.ಸುನೀಲ್, ಹಿಂದಿರುಗಿ ಬರೋದಕ್ಕೆ ಪ್ರಯತ್ನಿಸಿದಾಗ ಆಯಾಸದಿಂದ ಸಾಧ್ಯವಾಗಿಲ್ಲ ಎನ್ನಲಾಗಿದೆ. ಡಾ.ಸುನೀಲ್ ನೀರಿನ ಮಧ್ಯದಲ್ಲೇ ನೀರಲ್ಲಿ ಮುಳುಗುತ್ತಿರೋದನ್ನು ಕಂಡಂತ ಕುಟುಂಬಸ್ಥರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರೆ ಮಾಡಿ ಸಹಾಯಕ್ಕೆ ಕೋರಿದ್ದಾರೆ. ಆದರೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ಮುಳುಗಿ ಕುಟುಂಬಸ್ಥರ ಕಣ್ಣೆದುರಿಗೆ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಪಶು ವೈದ್ಯ ಡಾ.ಸುನೀಲ್ ಮೃತದೇಹವನ್ನು ಹೊರ ತೆಗೆದಿದ್ದಾರೆ. ಪಾರ್ಥೀವ ಶರೀರವನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ…
ಬೆಂಗಳೂರು: ನಗರದಲ್ಲಿ ದಂತ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಲೇಜು ಪ್ರಾಂಶುಪಾಲರು ಸೇರಿದಂತೆ ಐವರು ಲೆಕ್ಚರರ್ಸ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೃತ ಯಶಸ್ವಿನಿ ತಾಯಿ ದೂರಿನ ಮೇರೆಗೆ ಸೂರ್ಯ ನಗರದ ಪೊಲೀಸ್ ಠಾಣೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಐವರು ಉಪನ್ಯಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜನವರಿ.8ರಂದು ಚಂದಾಪುರದ ಮನೆಯಲ್ಲಿ ಡೆಂಟಲ್ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಡೆತ್ ನೋಟ್ ನಲ್ಲಿ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದರು ಎನ್ನಲಾಗಿದೆ. https://kannadanewsnow.com/kannada/union-minister-h-d-kumaraswamy-promises-inclusion-of-named-vokkaligas-in-2a-category/ https://kannadanewsnow.com/kannada/attention-state-ration-card-holders-name-addition-and-correction-allowed-again-on-ration-card/
ಕೆ.ಆರ್. ನಗರ: ಅತ್ಯಂತ ಸಣ್ಣ ಪ್ರಮಾಣದಲ್ಲಿರುವ ನಾಮಧಾರಿ ಒಕ್ಕಲಿಗ ಸಮುದಾಯವನ್ನು 2ಎ ಪ್ರವರ್ಗಕ್ಕೆ ಸೇರಿಸುವ ಪ್ರಯತ್ನಕ್ಕೆ ನಾನು ಪ್ರಾಮಾಣಿಕವಾಗಿ ಬೆಂಬಲ ನೀಡುತ್ತೇನೆ. ನಿಮ್ಮೊಂದಿಗೆ ನಾನು ಪ್ರಯತ್ನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಕೆ.ಆರ್. ನಗರದಲ್ಲಿ ಭಾನುವಾರ ನಾಮಧಾರಿ ಸಮುದಾಯ ಭವನದ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವರು; ಈ ಬಗ್ಗೆ ನೀವು ಸಂಪೂರ್ಣ ಮಾಹಿತಿ ತೆಗೆದುಕೊಂಡು ಬನ್ನಿ. ಹಿಂದುಳಿದ ವರ್ಗಗಳ ಆಯೋಗಕ್ಕೆ, ರಾಜ್ಯ ಸರಕಾರಕ್ಕೆ ನೀಡಿರುವ ಅರ್ಜಿ, ಇನ್ನಿತರ ಬೇಡಿಕೆಗಳ ಮಾಹಿತಿ ಜತೆ ನನ್ನ ಬಳಿಗೆ ಬನ್ನಿ. ನಾನು ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದರು. ಅಲ್ಲದೆ, ಸಣ್ಣ ಪ್ರಮಾಣದ ಜನಸಂಖ್ಯೆ ಹೊಂದಿರುವ ನಾಮಧಾರಿ ಸಮುದಾಯವು ರಾಜಕೀಯ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕಿದೆ. ನಮ್ಮನ್ನು ಗುರುತಿಸಬೇಕು ಎಂದು ಸಮುದಾಯದ ಜನರು ಕೇಳುತ್ತಲೇ ಇದ್ದಾರೆ. ಮೊದಲು ನಿಮಗೆ ಈ ನೋವು ಬಿಡಿ. ಅಂತಹ ಆತಂಕ ಬಿಡಿ.…
ಬೆಂಗಳೂರು: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ ಕೊಡಲಾಗಿದೆ. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಲಾಗಿದೆ. ವೈಯಕ್ತಿಕ ಇನ್ಟಾ ಗ್ರಾಮ್ ಖಾತೆಯಲ್ಲಿನ ಪೋಸ್ಟ್ ಗೆ ಅಶ್ಲೀಲ ಕಾಮೆಂಟ್ ಮಾಡಲಾಗಿದೆ. ವೇಶ್ಯ ಎಂದು ಕಾಮೆಂಟ್ ಮಾಡಿದ್ದಾರೆಂದು ನಯನಾ ಮೋಟಮ್ಮ ಆರೋಪಿಸಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಎರಡು ಅಧಿಕೃತ ಖಾತೆ ಹೊಂದಿರುವ ನಯನಾ ಮೋಟಮ್ಮಗೆ ಈ ರೀತಿಯಾಗಿ ಅಶ್ಲೀಲ ಕಾಮೆಂಟ್ ಮಾಡಿ ಕಾಟ ಕೊಡಲಾಗಿದೆ. ರಾಜಕೀಯ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಪ್ರತ್ಯೇಕ ಖಾತೆ, ವೈಯಕ್ತಿಕ ವಿಚಾರ ಹಂಚಿಕೊಳ್ಳಲು ಮತ್ತೊಂದು ಖಾತೆಯನ್ನು ನಯನಾ ಹೊಂದಿದ್ದಾರೆ. ಪ್ರವಾಸ, ವೈಯಕ್ತಿಕ ವಿಚಾರ ಹಂಚಿಕೊಳ್ಳುವ ಖಾತೆಯಲ್ಲಿ ಅಶ್ಲೀಲ ಕಾಮೆಂಟ್ ಮಾಡಲಾಗಿದೆ. ಈ ಬಗ್ಗೆ ಬೇಸರ ವ್ಯಕ್ತ ಪಡಿಸಿರುವಂತ ನಯನಾ ಮೋಟಮ್ಮ ಅವರು ಮಹಿಳಾ ವಿರೋಧಿ ಮನೋಭಾವವನ್ನು ನಾನು ವಿರೋಧಿಸುತ್ತಿದ್ದೇನೆ ಎಂದಿದ್ದಾರೆ. ಸ್ಲೀವ್ ಲೆಸ್ ಬಟ್ಟೆ ಹಾಕಿದ್ರೆ ಕೆಲಸ ಮಾಡದ ರಾಜಕಾರಣಿ ಎನ್ನುತ್ತಾರೆ. ವೇಶ್ಯೆ ಎನ್ನುವ ಮಟ್ಟಕ್ಕೂ ಇಳಿಯುತ್ತಾರೆ ಎಂಬುದಾಗಿ ಶಾಸಕಿ…
ಬೆಂಗಳೂರು; ನಗರದಲ್ಲಿ ತಾಯಿ ಮೇಲಿನ ಸಿಟ್ಟಿಗೆ 6 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವಂತ ಆಘಾತಕಾರಿ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ತಾಯಿಯ ಮೇಲಿನ ಸಿಟ್ಟಿಗೆ ಆಕೆಯ 6 ವರ್ಷದ ಬಾಲಕಿಯನ್ನು ಚಾಕೋಲೇಟ್ ಕೊಡಿಸ್ತೀನಿ ಎಂಬುದಾಗಿ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಮೋರಿಗೆ ಎಸೆದಿದ್ದು ಆರೋಪಿ ಯೂಸೂಫ್ ಪರಾರಿಯಾಗಿದ್ದನು. ಆರೋಪಿ ಯೂಸೂಫ್ ಹತ್ಯೆ ಬಳಿಕ ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದನು. ಆತನನ್ನು ಬಂಧಿಸಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಂತ ಸಂದರ್ಭದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ, ಬಳಿಕ ಹತ್ಯೆಗೈದು ಶವವನ್ನು ಮೋರಿಗೆ ಎಸೆದಿದ್ದಾಗಿ ಬಾಯಿ ಬಿಟ್ಟಿದ್ದಾನೆ. ಇನ್ನೂ ತಾಯಿ ಜೊತೆಗಿನ ಜಗಳಕ್ಕೆ ಮಗಳನ್ನು ಕೊಲೆ ಮಾಡಿರೋದಾಗಿ ಹೇಳಲಾಗಿತ್ತು. ಮರಣೋತ್ತರ ಪರೀಕ್ಷೆ ವೇಳೆ ಅತ್ಯಾಚಾರ ನಡೆಸಿರುವುದಾಗಿ ತಿಳಿದು ಬಂದಿದೆ. ವಿಚಾರಣೆ ವೇಳೆಯಲ್ಲಿ ಅತ್ಯಾಚಾರ ಮಾಡೋದಕ್ಕೆ ಚಾಕೋಲೇಟ್ ಕೊಡಿಸೋದಾಗಿ ಕರೆದೊಯ್ಯಿದ್ದೆ. ಆ ಬಳಿಕ ಹತ್ಯೆ ಮಾಡೋದಾಗಿ…














