Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯುವ ಆಕಾಂಕ್ಷಿಗಳಿಗೆ ಸಂಬಂಧಿಸಿದಂತೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಮೃತ ನೌಕರರ ಅವಲಂಬಿತ ಹೆಣ್ಣುಮಕ್ಕಳು ಅಥವಾ ಸಹೋದರಿಯರ ನೇಮಕಾತಿಗೆ ಸಂಬಂಧಿಸಿದ ನಿಯಮಗಳಲ್ಲಿ ಸಡಿಲಿಕೆ ಮತ್ತು ಸ್ಪಷ್ಟತೆಯನ್ನು ನೀಡಲಾಗಿದೆ. ಏನೆಲ್ಲ ಪ್ರಮುಖ ಬದಲಾವಣೆ?: ನಿಗಮವು ಹೊರಡಿಸಿರುವ ಹೊಸ ಸುತ್ತೋಲೆ (ಸಂಖ್ಯೆ: 1749) ಪ್ರಕಾರ, ‘ಕುಟುಂಬ’ ಎಂಬ ಪದದ ವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಈ ಕೆಳಗಿನ ಅಂಶಗಳನ್ನು ಪರಿಗಣಿಸಲು ನಿರ್ಧರಿಸಲಾಗಿದೆ: ವೈವಾಹಿಕ ಸ್ಥಿತಿಯ ನಿರ್ಬಂಧವಿಲ್ಲ: ಮೃತ ನೌಕರರ ಅವಲಂಬಿತ ಅವಿವಾಹಿತ, ವಿವಾಹಿತ, ವಿಚ್ಛೇದಿತ ಅಥವಾ ವಿಧವೆ ಪುತ್ರಿ/ಸಹೋದರಿಯರಿಗೂ ಇನ್ನು ಮುಂದೆ ಅನುಕಂಪದ ಆಧಾರದ ನೇಮಕಾತಿಗೆ ಅವಕಾಶವಿರುತ್ತದೆ. ಅವಲಂಬಿತರಾಗಿರುವುದು ಕಡ್ಡಾಯ: ಮೃತ ನೌಕರರು ಜೀವಂತವಾಗಿದ್ದಾಗ ಈ ಮೇಲಿನ ಸದಸ್ಯರು ಸಂಪೂರ್ಣವಾಗಿ ಅವರನ್ನೇ ಅವಲಂಬಿಸಿರಬೇಕು ಮತ್ತು ಅವರೊಂದಿಗೆ ವಾಸವಾಗಿರಬೇಕು ಎಂಬುದು ಕಡ್ಡಾಯವಾಗಿದೆ. ತಹಶೀಲ್ದಾರ್ ಪ್ರಮಾಣಪತ್ರ: ಅಭ್ಯರ್ಥಿಗಳು ಮೃತ ನೌಕರರ ಜೀವಿತಾವಧಿಯಲ್ಲಿ ಅವರ ಜೊತೆಗೇ ವಾಸವಿದ್ದರು ಎಂಬುದನ್ನು ದೃಢೀಕರಿಸುವ ‘ವಾಸ್ತವ್ಯ ಪ್ರಮಾಣ ಪತ್ರ’ವನ್ನು (Residence Certificate)…
ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇಂದು ನಗರದಲ್ಲಿ ನಡೆಯಲಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಖೇಲೋ ಇಂಡಿಯಾ’ ಯೋಜನೆಯಡಿ ಸುಸಜ್ಜಿತ ಕ್ರೀಡಾಂಗಣದ ಶಂಕುಸ್ಥಾಪನೆ ಕಾರ್ಯಕ್ರಮವು ಈಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಜೆಡಿಎಸ್ ಸಮಾವೇಶದಂತಾದ ಸರ್ಕಾರಿ ಕಾರ್ಯಕ್ರಮ! ಕೇಂದ್ರ ಸರ್ಕಾರದ ಯೋಜನೆಯ ಕಾರ್ಯಕ್ರಮವಾಗಿದ್ದರೂ, ಮಂಡ್ಯ ಜಿಲ್ಲೆಯಾದ್ಯಂತ ಜೆಡಿಎಸ್ ನಾಯಕರದ್ದೇ ಅಬ್ಬರ ಕಂಡುಬರುತ್ತಿದೆ. ಮಂಡ್ಯ ನಗರದ ಮೈಸೂರು-ಬೆಂಗಳೂರು ರಸ್ತೆಯುದ್ದಕ್ಕೂ ಜೆಡಿಎಸ್ ನಾಯಕರ ಬೃಹತ್ ಫ್ಲೆಕ್ಸ್ ಮತ್ತು ಕಟೌಟ್ಗಳು ರಾರಾಜಿಸುತ್ತಿವೆ. ಇದನ್ನು ಕಂಡ ಸಾರ್ವಜನಿಕರು ಇದು ಸರ್ಕಾರಿ ಕಾರ್ಯಕ್ರಮವೋ ಅಥವಾ ಜೆಡಿಎಸ್ ಪಕ್ಷದ ಸಮಾವೇಶವೋ ಎಂಬ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ‘ನೋ ಎಂಟ್ರಿ’? ಮೈತ್ರಿ ಧರ್ಮದ ನಡುವೆಯೂ ಜಿಲ್ಲೆಯ ಬಿಜೆಪಿ ನಾಯಕರನ್ನು ಈ ಕಾರ್ಯಕ್ರಮದಿಂದ ಸಂಪೂರ್ಣವಾಗಿ ದೂರ ಇಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಾಗಲಿ ಅಥವಾ ಹಾಕಲಾಗಿರುವ ಫ್ಲೆಕ್ಸ್ಗಳಲ್ಲಾಗಲಿ ಸ್ಥಳೀಯ ಬಿಜೆಪಿ ನಾಯಕರ ಹೆಸರುಗಳಿಲ್ಲದಿರುವುದು ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಸುಮಲತಾ…
ಶಿವಮೊಗ್ಗ: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ದೇಶಾದ್ಯಂತ ಎದುರಾಗಿರುವ ಅಡುಗೆ ಅನಿಲ (LPG) ಅಭಾವದ ಹಿನ್ನೆಲೆಯಲ್ಲಿ, ಸಾಗರ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಈ ಕುರಿತು ಅಧಿಕಾರಿಗಳು ಹಾಗೂ ಗ್ಯಾಸ್ ಏಜೆನ್ಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೆಳಗಿನ ಪ್ರಮುಖ ಅಂಶಗಳನ್ನು ಹಂಚಿಕೊಂಡರು: ವಾಣಿಜ್ಯ ಬಳಕೆಯ ಸಿಲಿಂಡರ್ ಕೊರತೆ ಕಳೆದ ಒಂದು ವಾರದಿಂದ ವಾಣಿಜ್ಯ ಬಳಕೆಯ (Commercial) ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಆದರೆ ಗೃಹ ಬಳಕೆಯ (Domestic) ಸಿಲಿಂಡರ್ಗಳು ಸದ್ಯಕ್ಕೆ ಲಭ್ಯವಿವೆ. ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಮನೆಗೆ ಬಳಸುವ ಸಿಲಿಂಡರ್ಗಳನ್ನು ಹೋಟೆಲ್ ಅಥವಾ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸಬಾರದು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕಠಿಣ ಕಾನೂನು ಕ್ರಮದ ಎಚ್ಚರಿಕೆ ”ಮನೆ ಬಳಕೆಯ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಅಥವಾ ಗ್ಯಾಸ್ ರೀಫಿಲ್ಲಿಂಗ್ನಂತಹ ಅಪಾಯಕಾರಿ ಕೃತ್ಯಗಳಲ್ಲಿ ತೊಡಗಿದರೆ ಅವರ ಮೇಲೆ…
ನವದೆಹಲಿ: ಜಾಗತಿಕ ತಂತ್ರಜ್ಞಾನ ದೈತ್ಯ ಸಂಸ್ಥೆಯಾದ ‘ಗೂಗಲ್’ (Google) ವಿದ್ಯಾರ್ಥಿಗಳಿಗಾಗಿ ವಿಶೇಷ ಫೆಲೋಶಿಪ್ ಪ್ರೋಗ್ರಾಂ ಅನ್ನು ಪ್ರಕಟಿಸಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಗೂಗಲ್ನಂತಹ ಸಂಸ್ಥೆಯಲ್ಲಿ ಕೆಲಸ ಮಾಡುವ ಅನುಭವ ಪಡೆಯುವುದಲ್ಲದೆ, ಬರೋಬ್ಬರಿ 10 ಲಕ್ಷ ರೂಪಾಯಿಗಳವರೆಗೆ ಸ್ಟೈಫಂಡ್ ಪಡೆಯುವ ಅವಕಾಶವನ್ನೂ ಹೊಂದಿದ್ದಾರೆ. ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಈ ಫೆಲೋಶಿಪ್ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಪದವಿ (UG), ಸ್ನಾತಕೋತ್ತರ ಪದವಿ (PG) ಹಾಗೂ ಪಿಎಚ್ಡಿ (PhD) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರು. ವ್ಯಾಸಂಗದ ವಿಧ: ಪೂರ್ಣ ಸಮಯ (Full-time) ಅಥವಾ ಅರೆಕಾಲಿಕ (Part-time) ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು. ವಯೋಮಿತಿ: ಜನವರಿ 1, 2026ರ ವೇಳೆಗೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಪ್ರವೇಶದ ಷರತ್ತು: ಆಗಸ್ಟ್ 30, 2026ರ ವೇಳೆಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿ ದಾಖಲಾಗಿರುವುದು ಕಡ್ಡಾಯ. ಅಗತ್ಯವಿರುವ ಕೌಶಲ್ಯಗಳು: ಇಂಟರ್ನೆಟ್ ತಂತ್ರಜ್ಞಾನ ಮತ್ತು ಅದಕ್ಕೆ ಸಂಬಂಧಿಸಿದ ನೀತಿಗಳ…
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಪಿಎಂ ಕಿಸಾನ್ ಸಮ್ಮಾನ್ ನಿಧಿ’ಯ (PM-Kisan) 22ನೇ ಕಂತಿನ ಹಣ ಬಿಡುಗಡೆಗೆ ರೈತರು ಕಾತರದಿಂದ ಕಾಯುತ್ತಿದ್ದಾರೆ. ದೇಶದ ಕೋಟ್ಯಂತರ ಅರ್ಹ ರೈತರಿಗೆ ಆರ್ಥಿಕ ನೆರವು ನೀಡುವ ಈ ಯೋಜನೆಯಡಿ, ಮುಂದಿನ ಕಂತಿನ ಹಣವು ಶೀಘ್ರದಲ್ಲೇ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆಯಾಗುವ ನಿರೀಕ್ಷೆಯಿದೆ. ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ರೈತರು ತಮ್ಮ 22ನೇ ಕಂತಿನ ಹಣದ ಸ್ಥಿತಿಗತಿಯನ್ನು (Beneficiary Status) ಈ ಕೆಳಗಿನ ಸರಳ ಹಂತಗಳ ಮೂಲಕ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು: ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: ಮೊದಲು pmkisan.gov.in ಅಧಿಕೃತ ಪೋರ್ಟಲ್ಗೆ ಹೋಗಿ. ‘ಫಲಾನುಭವಿ ಸ್ಥಿತಿ’ (Beneficiary Status) ಮೇಲೆ ಕ್ಲಿಕ್ ಮಾಡಿ: ಮುಖಪುಟದಲ್ಲಿರುವ ‘ಫಾರ್ಮರ್ಸ್ ಕಾರ್ನರ್’ (Farmers Corner) ವಿಭಾಗದಲ್ಲಿ ‘Know Your Status’ ಆಯ್ಕೆಯನ್ನು ಆರಿಸಿ. ವಿವರಗಳನ್ನು ನಮೂದಿಸಿ: ನಿಮ್ಮ ನೋಂದಣಿ ಸಂಖ್ಯೆ (Registration Number) ಅಥವಾ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ಕ್ಯಾಪ್ಚಾ ಕೋಡ್ ಹಾಕಿ: ಪರದೆಯ…
ಶಿವಮೊಗ್ಗ: ನಮ್ಮ ಸಮಾಜದಲ್ಲಿ ಮನುಷ್ಯ ಬದುಕಿರುವಾಗ ಬೇಕಾಗುವ ಗೌರವಕ್ಕಿಂತ, ಅವನ ಸಾವಿನ ನಂತರ ತೋರಿಸುವ ಅನುಕಂಪವೇ ಹೆಚ್ಚು ಎಂಬ ಮಾತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಗೌಟೂರು ಗ್ರಾಮದ ಜರೀನಾ ಬೇಗಂ ಎಂಬ ಮಹಿಳೆಯ ಬದುಕು ಇಂದು ವ್ಯವಸ್ಥೆಯ ನಿರ್ಲಕ್ಷ್ಯದ ನಡುವೆ ಹೋರಾಡುತ್ತಿದೆ. ಎರಡು ವರ್ಷಗಳಿಂದ ದೇಹವನ್ನು ಕೊರೆಯುತ್ತಿರುವ ಕ್ಯಾನ್ಸರ್ ಒಂದು ಕಡೆಯಾದರೆ, ಸಕಾಲಕ್ಕೆ ಸಿಗದ ಪಡಿತರ ಚೀಟಿಗಾಗಿ ಅಧಿಕಾರಿಗಳ ದಬಾರಿ ಕಚೇರಿಗಳ ನಡುವೆ ಅಲೆದಾಡುತ್ತಿರುವ ಮಾನಸಿಕ ನೋವು ಮತ್ತೊಂದು ಕಡೆ. ಆ ಕ್ಯಾನ್ಸರ್ ಪೀಡಿತ ಜರೀನಾ ಬೇಗಂ ಎಂಬ ಸಂತ್ರಸ್ತೆಯ ಹೋರಾಟದ ಕಣ್ಣೀರಿನ ಕತೆಯು ಮುಂದಿದೆ ಓದಿ.. ಹಸನ್ಮುಖಿ ಬದುಕಿಗೆ ಕಹಿಯಾದ ಕಾಯಿಲೆ ಯಾವಾಗಲೂ ಹಸನ್ಮುಖಿಯಾಗಿ, ನೆರೆಹೊರೆಯವರ ಜೊತೆ ನಗುನಗುತ್ತಾ ಮಾತನಾಡುತ್ತಾ, ಅಡುಗೆ ಕೆಲಸ ಹಾಗೂ ಕೂಲಿ ಮಾಡುತ್ತಾ ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದವರು ರಿಪ್ಪನ್ ಪೇಟೆಯ ಗೌಟೂರಿನ ಜರೀನಾ ಬೇಗಂ. ಆದರೆ ಎರಡು ವರ್ಷಗಳ ಹಿಂದೆ ವಕ್ಕರಿಸಿದ ಕ್ಯಾನ್ಸರ್ ಇಡೀ ಬದುಕನ್ನೇ ತಲೆಕೆಳಗು…
ಬೆಂಗಳೂರು: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಮಾರ್ಚ್.18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದಿದ್ದಾರೆ. ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು…
ಬೆಂಗಳೂರು: ಮುಂಬರುವ ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕದ ವಿವಿಧ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರ ಹೀಗಿದೆ: 1. ರೈಲು ಸಂಖ್ಯೆ 06503/06504 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (1 ಟ್ರಿಪ್): ರೈಲು ಸಂಖ್ಯೆ 06503 ಮಾರ್ಚ್ 18ರಂದು ಸಂಜೆ 7ಕ್ಕೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 7.35ಕ್ಕೆ ಬೆಳಗಾವಿ ತಲುಪಲಿದೆ. ಹಾಗೆಯೇ, ರೈಲು ಸಂಖ್ಯೆ 06504 ಮಾರ್ಚ್ 22ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಈ ರೈಲು 2 ಎಸಿ 2-ಟೈರ್, 4 ಎಸಿ 3-ಟೈರ್, 7…
ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರ ಸೇವಾ ವಿವರಗಳನ್ನು ಹೆಚ್ ಆರ್ ಎಂ ಎಸ್ ತಂತ್ರಾಂಶದ Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಿ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ಸರ್ಕಾರಿ ಆದೇಶಗಳು, ಸುತ್ತೋಲೆಗಳು ಹಾಗೂ ನಿರ್ದೇಶನಗಳನ್ವಯ, ರಾಜ್ಯ ಸರ್ಕಾರದ ಸೇವೆಗೆ ದಿನಾಂಕ: 01.04.2021 ರ ಮೊದಲು ಹಾಗೂ ನಂತರ ನೇಮಕಗೊಂಡಿರುವ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ಸೇವಾ ವಹಿಯನ್ನು HRMS-2.0 ತಂತ್ರಾಂಶದ ಅಂಗವಾಗಿರುವ ವಿದ್ಯುನ್ಮಾನ ಸೇವಾ ವಹಿ (Electronic Service Register-ESR) ಯಲ್ಲಿಯೇ ಕಡ್ಡಾಯವಾಗಿ ದಾಖಲಿಸಿ ಹಾಗೂ ನಿರ್ವಹಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಪ್ರಧಾನ ಮಹಾಲೇಖಪಾಲರ (CAG) ಮಾರ್ಗಸೂಚಿಗಳಂತೆ, ಪಿಂಚಣಿ ಪ್ರಕ್ರಿಯೆಯನ್ನು ಸಂಪೂರ್ಣ ಕಾಗದರಹಿತ (Paperless) ಹಾಗೂ ಅಂತ್ಯದಿಂದ ಅಂತ್ಯಕ್ಕೆ (End-to-End) ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಪಿಂಚಣಿ ಪ್ರಕರಣಗಳನ್ನು ಸಂಪೂರ್ಣವಾಗಿ ಆನ್-ಲೈನ್ ಮೂಲಕ ಪ್ರಕ್ರಿಯೆಗೊಳಿಸುವ ವ್ಯವಸ್ಥೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಖಜಾನೆ-2 ತಂತ್ರಾಂಶದ ಮುಖಾಂತರ ರಾಜ್ಯದ ಎಲ್ಲಾ ಹಣ ಸೆಳೆಯುವ…
ನವದೆಹಲಿ: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಮನೆಯ ಅಡುಗೆಗೆ ಮತ್ತೆ ಸೀಮೆಎಣ್ಣೆ ಬಳಸಲು ಅನುಮತಿ ನೀಡಿದೆ. ಈ ಕುರಿತು ಗುರುವಾರ ಮಹತ್ವದ ಆದೇಶ ಹೊರಡಿಸಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ, ರಾಜ್ಯಗಳಿಗೆ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆ: ರಾಜ್ಯಗಳಿಗೆ ಪಡಿತರ ಅಂಗಡಿಗಳ (PDS) ಮೂಲಕ ವಿತರಿಸಲು 1 ಲಕ್ಷ ಕಿಲೋಲೀಟರ್ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. ಪ್ರಾಥಮಿಕವಾಗಿ ಬಡ ಕುಟುಂಬಗಳಿಗೆ ಅಡುಗೆ ಇಂಧನವಾಗಿ ಇದನ್ನು ವಿತರಿಸಲಾಗುವುದು ಎಂದು ತಿಳಿಸಲಾಗಿದೆ. ಹೋಟೆಲ್ಗಳಿಗೆ ಪರ್ಯಾಯ ಇಂಧನ ಬಳಸಲು ಅನುಮತಿ: ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ಪರ್ಯಾಯ ಇಂಧನವಾಗಿ ಬಯೋಮಾಸ್, ಆರ್ಡಿಎಫ್ ಪೆಲೆಟ್ಗಳು ಮತ್ತು ಕಲ್ಲಿದ್ದಲನ್ನು (Coal) ಒಂದು ತಿಂಗಳ ಕಾಲ ಬಳಸಲು ಅನುಮತಿ ನೀಡುವಂತೆ ಪರಿಸರ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಕೇಳಿದೆ. ಇದು ಎಲ್ಪಿಜಿ ಮೇಲಿನ ಒತ್ತಡವನ್ನು…














