Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ: ಶಾಲೆಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಜ್ಞಾನ ದೇಗುಲಗಳಾಗಿವೆ ಎಂದು ಸಾಗರ ತಾಲ್ಲೂಕು ಅಕ್ಷರ ದಾಸೋಹ ವಿಭಾಗದ ಸಹಾಯಕ ನಿರ್ದೇಶಕರಾದ ಭೂಮೇಶ್ ಅವರು ಅಭಿಪ್ರಾಯಪಟ್ಟರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಯಡಜಿಗಳೇಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕೆಗೆ ಪೂರಕವಾದ ಅತ್ಯುತ್ತಮ ವಾತಾವರಣವನ್ನು ನಿರ್ಮಾಣ ಮಾಡಲಾಗಿದೆ. ಸರ್ಕಾರದಿಂದ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಶೂ ಹಾಗೂ ಸಾಕ್ಸ್‌ಗಳನ್ನು ನೀಡಲಾಗುತ್ತಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಈ ಎಲ್ಲಾ ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಂಡು, ಉತ್ತಮವಾಗಿ ಕಲಿಯುವ ಮೂಲಕ ಉನ್ನತ ಮಟ್ಟಕ್ಕೆ ಬೆಳೆಯಬೇಕು ಎಂದು ಕರೆ ನೀಡಿದರು. ಸರ್ಕಾರಿ ಶಾಲೆಗಳ ಸೌಲಭ್ಯ ಬಳಸಿ: ವಿ.ಟಿ.ಸ್ವಾಮಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿಕ್ಷಣ ಸಂಯೋಜಕರಾದ ವಿ.ಟಿ.ಸ್ವಾಮಿ ಮಾತನಾಡಿ, “ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಈ ಹಂತದಲ್ಲೇ ಶಿಕ್ಷಣದ ಬಗ್ಗೆ ಮಕ್ಕಳಲ್ಲಿ ವಿಶೇಷ ಆಸಕ್ತಿ ಮತ್ತು ಜಿಜ್ಞಾಸೆಯನ್ನು…

Read More

ಮಂಡ್ಯ : ವಿಶ್ವ ಹಾಲು ದಿನಾಚರಣೆ ಅಂಗವಾಗಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು (ಮನ್ ಮುಲ್) ಮದ್ದೂರು ಉಪ ಕಛೇರಿ ವತಿಯಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಉಚಿತವಾಗಿ ಸೋಮವಾರ ವಿತರಣೆ ಮಾಡಿತು. ಮನ್ ಮುಲ್ ನಿರ್ದೇಶಕ ಹರೀಶ್ ಬಾಬು ಹಾಗೂ ಉಪ ಕಛೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗುಡ್ ಲೈಫ್ ಹಾಲು, ಸುವಾಸಿತ ಹಾಲಿನ ಬಾಟಲಿಗಳು, ರಸ್ಕ್, ಬಿಸ್ಕತ್, ಮೈಸೂರು ಪಾಕ್ ಸೇರಿದಂತೆ ಆಸ್ಪತ್ರೆಯ ವಿವಿಧ ವಾರ್ಡ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ನಂದಿನಿ ಉತ್ಪನ್ನಗಳನ್ನು ವಿತರಿಸಿದರು. ಇದೇ ವೇಳೆ ನಿರ್ದೇಶಕ ಹರೀಶ್ ಬಾಬು ಮಾತನಾಡಿ, ವಿಶ್ವ ಹಾಲು ದಿನಾಚರಣೆ ಅಂಗವಾಗಿ ಪ್ರತಿ ವರ್ಷವೂ ವೃದ್ಧರು, ರೋಗಿಗಳಿಗೆ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಂಡ್ಯ ಜಿಲ್ಲಾ ಹಾಲು ಒಕ್ಕೂಟವು ವಿತರಣೆ ಮಾಡುತ್ತಿದ್ದು, ಈ ಮೂಲಕ ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಧೋರಣೆ ಅನುಸರಿಸುತ್ತ ಬಂದಿದೆ. 2001ರಲ್ಲಿ ವಿಶ್ವಸಂಸ್ಥೆಯ ಅಂಗ ಸಂಸ್ಥೆಯಾದ ಆಹಾರ ಮತ್ತು ಕೃಷಿ…

Read More

ಮಂಡ್ಯ : ಕೆ.ಎಂ.ಉದಯ್ ಅವರು ಸಮೂಜಮುಖಿ ಕೆಲಸಗಳ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಮುಂದೆಯೂ ಶಾಸಕರಾಗಿ ಆಯ್ಕೆಯಾಗಿ ಸಚಿವ ಸ್ಥಾನವನ್ನು ಅಲಂಕರಿಸಲಿ ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮದ್ದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕ ಕೆ.ಎಂ.ಉದಯ್ ಅವರ 52 ನೇ ಹುಟ್ಟುಹಬ್ಬದ ಅಂಗವಾಗಿ ಸೋಮವಾರ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯೇ ನಗರದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ ಕೆ.ಎಂ.ಉದಯ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಹಮ್ಮಿಕೊಂಡು ಭಕ್ತಾಧಿಗಳಿಗೆ ಪ್ರಸಾದ ಹಾಗೂ ಸಿಹಿ ವಿತರಣೆ ಮಾಡಲಾಯಿತು. ಬಳಿಕ ನಗರದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ವಿವಿಧ ವಿಭಾಗಗಳ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬಾದಾಯಿ ಹಾಲು ವಿತರಿಸಲಾಯಿತು. ತಾಲೂಕಿನ ನಿಡಘಟ್ಟದಲ್ಲಿರುವ ಶ್ರೀ ಗುರುದತ್ತ ಆಶ್ರಮ ಬಾಲಕರ ಬಾಲ ಮಂದಿರದ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಬಾದಾಮಿ ವಿತರಣೆ ಸೇರಿದಂತೆ ಇನ್ನಿತರ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹಾಗೂ…

Read More

ಮಂಡ್ಯ: ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಣೆ ಮಾಡುತ್ತಿರುವುದು ಮೆಚ್ಚುಗೆಯ ಸಂಗತಿಯಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು. ಮದ್ದೂರು ತಾಲೂಕಿನ ಕೊಪ್ಪದ ಶ್ರೀ ಪಟ್ಟಲದಮ್ಮ ದೇವಸ್ಥಾನದ ಆವರಣದಲ್ಲಿ ಕೊಪ್ಪ 1 ನೇ ಹಾಗೂ 2 ನೇ ವೃತ್ತದ ಅಭಿಮಾನಿ ಬಳಗದವರ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಎನ್. ಚಲುವರಾಯಸ್ವಾಮಿ ರವರ 66 ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಕೃಷಿ ಸಚಿವರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜ್ಯದ ರೈತರಿಗೆ ಉತ್ತಮ ಯೋಜನೆಗಳನ್ನು ರೂಪಿಸುವುದು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಗುರಿಯನ್ನು ಹೊಂದಿದ್ದಾರೆ. 2023 ರಲ್ಲಿ ಕೃಷಿ ಸಚಿವರಾಗುತ್ತಿದ್ದಂತೆಯೇ ಜಿಲ್ಲೆಯ ಜೀವನಾಡಿಯಾಗಿರುವ ಮೈಷುಗರ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನ, ಕೃಷಿ ವಿಶ್ವವಿದ್ಯಾಲಯ, ನಾಲೆಗಳ ಆಧುನಿಕರಣ ಸೇರಿದಂತೆ ಹತ್ತು ಹಲವು…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಸಾಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ನಾಗರಾಜ್ ಕಲ್ಮನೆ ಅವರು ಪ್ರಬಲವಾಗಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮಲೆನಾಡು ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ, ಪಕ್ಷದ ಯಶಸ್ಸಿಗೆ ನಿರಂತರವಾಗಿ ಶ್ರಮಿಸುತ್ತಿರುವ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗಬೇಕಿರುವುದು ಅತ್ಯಂತ ನ್ಯಾಯಸಮ್ಮತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಲೆನಾಡಿನ ಅಭಿವೃದ್ಧಿಗೆ ಬೇಳೂರು ನಾಯಕತ್ವ ಅಗತ್ಯ “ಗೋಪಾಲಕೃಷ್ಣ ಬೇಳೂರು ಅವರು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾದ ನಾಯಕರಲ್ಲ. ಅವರು ಇಡೀ ಶಿವಮೊಗ್ಗ ಜಿಲ್ಲೆ ಹಾಗೂ ಮಲೆನಾಡು ಭಾಗದ ದೀನದಲಿತರ, ರೈತರ ಮತ್ತು ಶೋಷಿತರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಸಾಗರ ಕ್ಷೇತ್ರದಲ್ಲಿ ಅವರು ಕೈಗೊಂಡಿರುವ ಜನಪರ ಕಾರ್ಯಗಳು ಹಾಗೂ ಪಕ್ಷದ ಸಂಘಟನೆಗೆ ನೀಡಿರುವ ಕೊಡುಗೆಯನ್ನು ಹೈಕಮಾಂಡ್ ಗುರುತಿಸಬೇಕಿದೆ. ಸದ್ಯದ…

Read More

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಸದಸ್ಯತ್ವದ ನಿಯಮಗಳು ಮತ್ತು ಜವಾಬ್ದಾರಿಗಳನ್ನು ಗಂಭೀರವಾಗಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ‘ಕ್ರಿಕೆಟ್ ಕೆನಡಾ’ ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಭಾರತದ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಬೋರ್ಡ್ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ. ಆದಾಗ್ಯೂ, ಕೆನಡಾ ದೇಶದ ಕ್ರಿಕೆಟ್ ಆಟಗಾರರ ಹಿತಾಸಕ್ತಿಯನ್ನು ಕಾಯುವ ನಿಟ್ಟಿನಲ್ಲಿ ಐಸಿಸಿ ಒಂದು ಸಕಾರಾತ್ಮಕ ನಿರ್ಧಾರ ಕೈಗೊಂಡಿದೆ. ಅಮಾನತು ಅವಧಿಯಲ್ಲೂ ಕೆನಡಾ ರಾಷ್ಟ್ರೀಯ ಕ್ರಿಕೆಟ್ ತಂಡಗಳು ಐಸಿಸಿ ಆಯೋಜಿಸುವ ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಭ್ರಷ್ಟಾಚಾರದ ಆರೋಪ ಹಾಗೂ ತನಿಖೆ: ಕೆಲವು ವಾರಗಳ ಹಿಂದೆ ಕೆನಡಾದ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (CBC) ಪ್ರಸಾರ ಮಾಡಿದ್ದ ಸಾಕ್ಷ್ಯಚಿತ್ರವೊಂದರಲ್ಲಿ, ಕ್ರಿಕೆಟ್ ಕೆನಡಾ ಮಂಡಳಿಯ ಆಡಳಿತದಲ್ಲಿ ಪಂದ್ಯದ ಮೇಲೆ ಪ್ರಭಾವ ಬೀರುವುದು (ಮ್ಯಾಚ್ ಮ್ಯಾನಿಪ್ಯುಲೇಷನ್), ಭ್ರಷ್ಟಾಚಾರ ಮತ್ತು ಆಟಗಾರರಿಗೆ ಹಿಂಸೆಯ ಬೆದರಿಕೆ ಹಾಕಿರುವ ಬಗ್ಗೆ ಗಂಭೀರ ಆರೋಪಗಳನ್ನು ಮಾಡಲಾಗಿತ್ತು. ಇದರ ಬೆನ್ನಲ್ಲೇ ಐಸಿಸಿಯ ಭ್ರಷ್ಟಾಚಾರ ನಿರೋಧಕ ಘಟಕವು…

Read More

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಸದಸ್ಯರಿಂದ ಆಯ್ಕೆಯಾಗುವ ವಿಧಾನ ಪರಿಷತ್ತಿನ (Council) 7 ಸ್ಥಾನಗಳ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭಗೊಂಡಿದೆ. ಚುನಾವಣಾ ಆಯೋಗವು ಇತ್ತೀಚೆಗಷ್ಟೇ ಈ ಮಹತ್ವದ ಚುನಾವಣೆಗಳಿಗೆ ವೇಳಾಪಟ್ಟಿ ಪ್ರಕಟಿಸಿದ್ದು, ಇಂದಿನಿಂದ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ವಿಧಾನಸೌಧದಲ್ಲಿ ಸಿದ್ಧತೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಾಗಿ ವಿಧಾನಸೌಧದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಿಗದಿಪಡಿಸಿದ ಕೊಠಡಿಯಲ್ಲಿ ಚುನಾವಣಾಧಿಕಾರಿಗಳು ನಾಮಪತ್ರಗಳನ್ನು ಸ್ವೀಕರಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಅಭ್ಯರ್ಥಿಗಳ ಜೊತೆ ಎಷ್ಟು ಜನರಿಗೆ ಅವಕಾಶ ನೀಡಬೇಕು ಎಂಬುದು ಸೇರಿದಂತೆ ಭದ್ರತೆಯ ದೃಷ್ಟಿಯಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ: ವಿಧಾನಸಭೆಯಲ್ಲಿನ ಸಂಖ್ಯಾಬಲದ ಆಧಾರದ ಮೇಲೆ ಆಯಾ ರಾಜಕೀಯ ಪಕ್ಷಗಳಿಗೆ ಈ ಸ್ಥಾನಗಳು ಲಭಿಸಲಿವೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಾಳಯದಲ್ಲಿ ಟಿಕೆಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಯಾರಿಗೆ ಟಿಕೆಟ್…

Read More

ಬೆಂಗಳೂರು: ದಾವಣಗೆರೆ ಉಪಚುನಾವಣೆ ವೇಳೆ ಸ್ವಪಕ್ಷದ (ಕಾಂಗ್ರೆಸ್) ವಿರುದ್ಧವೇ ಒಳಸಂಚು ನಡೆಸಲಾಗಿದೆ ಎಂಬ ಆರೋಪಕ್ಕೆ ಕಾರಣವಾಗಿದ್ದ ‘ಲೀಕ್ಡ್ ಆಡಿಯೋ ಕ್ಲಿಪ್’ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ತಳ್ಳಿಹಾಕಿರುವ ಅವರು, ಇದೊಂದು ರಾಜಕೀಯ ಪಿತೂರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ವೈರಲ್ ಆಡಿಯೋದಲ್ಲೇನಿದೆ? ದಾವಣಗೆರೆ ಉಪಚುನಾವಣೆಯ ಸಂದರ್ಭದಲ್ಲಿ ಜಮೀರ್ ಅಹ್ಮದ್ ಹಾಗೂ ಅವರ ಆಪ್ತ ಸಿರಾಜ್ ಎಂಬುವರ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ಆಡಿಯೋದಲ್ಲಿ, “ಇದು ನನ್ನ ಇಜ್ಜತ್ (ಗೌರವ) ಸವಾಲು” ಎಂದು ಜಮೀರ್ ಹೇಳಿರುವುದು ಮತ್ತು ಮುಸ್ಲಿಂ ಮತದಾರರು ಕಾಂಗ್ರೆಸ್ ಬದಲಿಗೆ ಎಸ್‌ಡಿಪಿಐ (SDPI) ಅಭ್ಯರ್ಥಿಯ ‘ಕುಕ್ಕರ್’ ಗುರುತಿಗೆ ಮತ ಚಲಾಯಿಸುವಂತೆ ಪ್ರೇರೇಪಿಸಿರುವ ಕುರಿತು ಚರ್ಚೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದು ಕಾಂಗ್ರೆಸ್ ಒಳಗಿನ ಬಂಡಾಯ ಹಾಗೂ ಒಳಸಂಚಿನ ಮುಖವನ್ನು ಬಹಿರಂಗಪಡಿಸಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು. ಇದು ಎಐ…

Read More

ಬೆಂಗಳೂರು: “ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ ಹೋಗುತ್ತಿಲ್ಲ. ಬದಲಿಗೆ ನನ್ನ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಅವುಗಳನ್ನು ಪರಿಹರಿಸಲು ಮಂಗಳೂರಿಗೆ ತೆರಳುತ್ತಿದ್ದೇನೆ” ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಕುರಿತಾದ ಚರ್ಚೆಗಳಿಗೆ ತೆರೆ ಎಳೆದರು. “ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷವೇ ನಿರ್ಧಾರ ಮಾಡುತ್ತದೆ. ಹಿಂದೆ ನನಗೆ ಸಚಿವ ಸ್ಥಾನ ಕೊಟ್ಟಾಗ ಉತ್ತಮವಾಗಿ ಕೆಲಸ ಮಾಡಿದ್ದೇನೆ. ಶಾಸಕನಾಗಿದ್ದಾಗ ‘ಸದನ ವೀರ’ ಪ್ರಶಸ್ತಿ ಪಡೆದಿದ್ದೆ, ಸಚಿವನಾಗಿದ್ದಾಗ ನನ್ನ ಕೆಲಸವನ್ನು ಗುರುತಿಸಿ ರಾಷ್ಟ್ರ ಪ್ರಶಸ್ತಿಯೂ ಒಲಿದು ಬಂದಿತ್ತು. ನನ್ನ ಕಾರ್ಯವೈಖರಿಯನ್ನು ನೋಡಿಯೇ ಸಿದ್ದರಾಮಯ್ಯನವರು ಈ ಹಿಂದೆ ನನ್ನನ್ನು ವಿರೋಧ ಪಕ್ಷದ ಉಪನಾಯಕನನ್ನಾಗಿ ಮಾಡಿದ್ದರು. ಈಗ ಸ್ಪೀಕರ್ ಜವಾಬ್ದಾರಿ ನೀಡಿದ್ದಾರೆ, ಅದನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ. ಮುಂದೆ ಪಕ್ಷ ಏನು ಜವಾಬ್ದಾರಿ ಕೊಡುತ್ತದೋ…

Read More

ಬೆಂಗಳೂರು: ಭಾರತದ ಯುವಜನರಿಗೆ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಪಿಎಂ-ಸೇತು’ ಯೋಜನೆಯಡಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ‘ಐಟಿಐ ಕ್ಲಸ್ಟರ್’ ಅನ್ನು ಉನ್ನತೀಕರಿಸಲು ಪ್ರಖ್ಯಾತ ಉಕ್ಕು ಕಂಪನಿ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ’ ಮಂಡಿಸಿದ್ದ ಸ್ಟ್ರಾಟೆಜಿಕ್ ಇನ್ವೆಸ್ಟ್‌ಮೆಂಟ್ ಪ್ಲ್ಯಾನ್ʼಗೆ ಕೇಂದ್ರದ ಸಮಿತಿ ಅಧಿಕೃತ ಅನುಮೋದನೆ ನೀಡಿದೆ. ಈ ಮೂಲಕ ‘ಪಿಎಂ-ಸೇತು’ ಯೋಜನೆಯಡಿ ಅನುಮೋದನೆ ಪಡೆದ ದೇಶದ ಮೊಟ್ಟಮೊದಲ ಖಾಸಗಿ ಕೈಗಾರಿಕಾ ಸಂಸ್ಥೆಯಾಗಿ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’ ಹೊರಹೊಮ್ಮಿದೆ. ಅಲ್ಲದೆ, ಖಾಸಗಿ ಕೈಗಾರಿಕೆಗಳ ಜೊತೆ ಒಪ್ಪಂದ ಮಾಡಿಕೊಂಡು ಈ ಯೋಜನೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿ ಆಂಧ್ರಪ್ರದೇಶ ಇತಿಹಾಸ ಬರೆದಿದೆ. ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ ತನ್ನ ಶೈಕ್ಷಣಿಕ ಪಾಲುದಾರ ಸಂಸ್ಥೆಯಾದ NAMTECH ಜೊತೆಗೂಡಿ ಈ ಐಟಿಐ ಕ್ಲಸ್ಟರ್ ಅನ್ನು ಅಭಿವೃದ್ಧಿಪಡಿಸಲಿದೆ. ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅನುಮೋದನೆ ನವದೆಹಲಿಯ ಕೌಶಲ್ ಭವನದಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ…

Read More