Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಗ್ರಾಮದ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓಮ್ನಿ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹಿರಿಯೂರಿನಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಓಮ್ನಿ ಕಾರಿಗೆ ಎದುರಿನಿಂದ ಅತಿ ವೇಗವಾಗಿ ಬಂದ ಮತ್ತೊಂದು ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಓಮ್ನಿ ಕಾರು ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಓಮ್ನಿ ಕಾರಿನಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರು ಮೂಲತಃ ಆಂಧ್ರಪ್ರದೇಶದವರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.…

Read More

ಬೆಂಗಳೂರು : ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ‘ಬ್ರ್ಯಾಂಡ್ ಬೆಂಗಳೂರು’ ದೃಷ್ಟಿಕೋನವನ್ನು ಸಾಕಾರಗೊಳಿಸುವ ಹಾಗೂ ಬೆಂಗಳೂರು ನಗರದ ಭವಿಷ್ಯದ ಸವಾಲುಗಳನ್ನು ಎದುರಿಸಬಲ್ಲ ಮತ್ತು ಸುಸ್ಥಿರ ನಗರಾಭಿವೃದ್ಧಿಗೆ ಪೂರಕವಾದ ವ್ಯವಸ್ಥೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಮಹತ್ವಾಕಾಂಕ್ಷಿ ‘ಬೆಂಗಳೂರು ಗ್ಲೋಬಲ್ ವಾಟರ್ ಇನ್ನೋವೇಷನ್‌ ನೆಟ್‌ವರ್ಕ್’ (BGWIN – ಬಿ-ಗ್ವಿನ್) ಜಾಲ ಸ್ಥಾಪನೆಗೆ ಚಿಂತನೆ ನಡೆಸುತ್ತಿದೆ. ಜಾಗತಿಕ ಮಟ್ಟದ ಅತ್ಯಾಧುನಿಕ ವೇದಿಕೆಯಾಗಿ ರೂಪಿತಗೊಳ್ಳಲಿರುವ ಈ ‘ಬಿ-ಗ್ವಿನ್’, ಜಲ ಮತ್ತು ಒಳಚರಂಡಿ ವಲಯದ ಸವಾಲುಗಳನ್ನು ಎದುರಿಸಲು ವಿಶ್ವದ ಜಲ ನಿರ್ವಹಣಾ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು, ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳು, ಕೈಗಾರಿಕಾ ನಾಯಕರು, ಸ್ಟಾರ್ಟ್-ಅಪ್‌ಗಳು, ಇನ್‌ಕ್ಯುಬೇಟರ್‌ಗಳು ಹಾಗೂ ನಾಗರಿಕ ಸಮಾಜವನ್ನು ಒಂದೇ ಸೂರಿನಡಿ ತರುವ ಪ್ರಮುಖ ಕೇಂದ್ರೀಕೃತ ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ. ಬೆಂಗಳೂರನ್ನು ಜಾಗತಿಕವಾಗಿ ಮನ್ನಣೆ ಪಡೆದ ಜಲ ನಾವೀನ್ಯತೆಯ ಕೇಂದ್ರವನ್ನಾಗಿ ಮತ್ತು ಜಲ ಭದ್ರತೆಯ ಮಾದರಿ ನಗರವಾಗಿ ಪರಿವರ್ತಿಸುವುದು ಈ ಉಪಕ್ರಮದ ದೀರ್ಘಕಾಲದ ದೃಷ್ಟಿಕೋನವಾಗಿದೆ. ಹೊಸ ತಂತ್ರಜ್ಞಾನಗಳ ಅಳವಡಿಕೆಯನ್ನು…

Read More

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ನಗರದಲ್ಲಿ ಹಣ್ಣುಗಳ ರಾಜ ಮಾವು ಹಾಗೂ ಮಲೆನಾಡಿನ ಹೆಮ್ಮೆ ಹಲಸಿನ ಹಣ್ಣಿನ ವಿವಿಧ ತಳಿಗಳು ಮತ್ತು ವಿಶಿಷ್ಟ ಖಾದ್ಯಗಳ ಜಾಗತಿಕ ಸವಿಯನ್ನು ಪರಿಚಯಿಸಲು ಅದ್ಧೂರಿ ಮೇಳವೊಂದು ಸಜ್ಜಾಗಿದೆ. ಲಯನ್ಸ್ ಕ್ಲಬ್ ಸಾಗರ (ಮಾದರಿ ಕ್ಲಬ್) ವಲಯ 1, ಪ್ರಾಂತ 8, ಜಿಲ್ಲೆ 317 ಸಿ ವತಿಯಿಂದ ‘ರಾಜರತ್ನ ಇವೆಂಟ್ಸ್’ ಹಾಗೂ ‘ಜನಸ್ನೇಹಿ ಇವೆಂಟ್ಸ್’ ಸಹಯೋಗದೊಂದಿಗೆ ಈ ವಿಶಿಷ್ಟ “ಹಲಸು ಮತ್ತು ಮಾವು ಮೇಳ”ವನ್ನು ನಾಳೆಯಿಂದ ಮೂರು ದಿನಗಳ ಕಾಲ ಆಯೋಜಿಸಲಾಗಿದೆ. ಜೂನ್ 5ರ ನಾಳೆಯಿಂದ ಜೂನ್.7ರವರೆಗೆ ಅಂದರೆ, ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಸಾಗರದ ಶ್ರೀ ರಾಘವೇಶ್ವರ ಭವನದಲ್ಲಿ ಈ ಮೇಳ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ. ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 9:30 ರವರೆಗೆ ಸಾರ್ವಜನಿಕರು ಮೇಳಕ್ಕೆ ಭೇಟಿ ನೀಡಿ ವಿವಿಧ ಉತ್ಪನ್ನಗಳ ಸವಿಯನ್ನು ಸವಿಯಬಹುದಾಗಿದೆ. ವೈವಿಧ್ಯಮಯ ಮೇಳಗಳ ಸಂಗಮ ಈ ಬಾರಿಯ ಪ್ರದರ್ಶನವು ಕೇವಲ ಹಣ್ಣುಗಳಿಗಷ್ಟೇ ಸೀಮಿತವಾಗಿರದೆ, ಗ್ರಾಹಕರನ್ನು ಕೈಬೀಸಿ ಕರೆಯುವ ಹಲವು…

Read More

ಬೆಂಗಳೂರು : ಒಳ್ಳೆಯ ಆಡಳಿತ ನೀಡುವುದಾಗಿ ರಾಜ್ಯದ ಜನತೆಗೆ ಭರವಸೆ ನೀಡಿದ್ದೇವೆ. ಸರ್ಕಾರದ ಯೋಜನೆಗಳು ನಿಗದಿತ ಸಮಯದೊಳಗೆ ಜನರಿಗೆ ತಲುಪಲು ಜವಬ್ದಾರಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಉಪ‌ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ‌ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಮೂರು ವರ್ಷಗಳಲ್ಲಿ ಎಲ್ಲ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತಂದಿದ್ದೀರಿ. ಅನೇಕ ಭರವಸೆಗಳನ್ನು ಈಡೇರಿಸಲಾಗಿದೆ. ನೂತನ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರವೂ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜನಸಮುದಾಯಕ್ಕೆ ಹತ್ತಿರವಾಗಿ ಕೆಲಸ ಮಾಡಬೇಕು. ನಿಮ್ಮ ಸೇವೆ ಜನಸಮುದಾಯಕ್ಕೆ ಅನುಕೂಲವಾಗಬೇಕು ಎಂದು ಅವರು ಹೇಳಿದರು. ಯುವ ಸಮುದಾಯ ಸೂಕ್ಷ್ಮವಾಗಿ ನೋಡುತ್ತಿದೆ. ಯುವಕರ ಆಪೇಕ್ಷೆಯಂತೆ ಆಡಳಿತ ನೀಡಬೇಕು ಎಂಬುದು ಸರ್ಕಾರದ ದೃಷ್ಟಿಕೋನವಾಗಿದೆ. ಬರೀ ಭರವಸೆಗಳನ್ನು ಪೂರ್ಣಗೊಳಿಸುವುದಷ್ಟೆ ಅಲ್ಲ. ರಾಜ್ಯದ ಅಭಿವೃದ್ಧಿಗೆ ದೃಷ್ಟಿಕೋನ ನೀಡಬೇಕಿದೆ. ಕರ್ನಾಟಕ ಪ್ರಗತಿಪರ ರಾಜ್ಯ. ಎಲ್ಲರೂ ಕರ್ನಾಟಕದತ್ತ ಗಮನ ಹರಿಸುತ್ತಾರೆ. ಇದನ್ನು ನಾವು…

Read More

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿದಂತೆ ಯಾವುದೇ ರೀತಿಯ ಬಾಹ್ಯ ಪ್ರಭಾವಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಧಿಕಾರಿಗಳು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ಯಾವುದೇ ಒತ್ತಡಗಳಿಗೆ ಮಣಿಯದೆ ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. ಉನ್ನತಾಧಿಕಾರಿಗಳ ಮಹತ್ವದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದರು. ಅಧಿಕಾರಿಗಳಿಗೆ 15 ದಿನಗಳ ಗಡುವು ಮತ್ತು ದಕ್ಷತೆಯ ನಿರೀಕ್ಷೆ ಸರ್ಕಾರದಲ್ಲಿ ಯಾವುದೇ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವಗಳು ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು, ಅರ್ಹತೆ ಮತ್ತು ಪಾರದರ್ಶಕತೆಗೆ ಮಾತ್ರ ಮೊದಲ ಆದ್ಯತೆ ನೀಡಲಾಗುವುದು ಎಂದರು. ಇಲಾಖೆಗಳ ಪ್ರಗತಿ ಮತ್ತು ಮುಂದಿನ ಕಾರ್ಯಯೋಜನೆಗಳ ಕುರಿತು ಮುಂದಿನ 15 ದಿನಗಳ ಒಳಗಾಗಿ ಕಡ್ಡಾಯವಾಗಿ ‘ಆಕ್ಷನ್ ಕಾರ್ಡ್’ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಗಡುವು ವಿಧಿಸಲಾಗಿದೆ. ಅಧಿಕಾರಿಗಳು ಯಾರದೇ ಒತ್ತಡಕ್ಕೆ ಒಳಗಾಗದೆ, ಸಾರ್ವಜನಿಕರ ಹಿತದೃಷ್ಟಿಯಿಂದ ಮುಕ್ತವಾಗಿ ಮತ್ತು…

Read More

ಬೆಂಗಳೂರು: “ರಾಜ್ಯದ ಆಡಳಿತ ಯಂತ್ರದಲ್ಲಿ ಯಾವುದೇ ಸಚಿವರು ಅಥವಾ ಶಾಸಕರ ರಾಜಕೀಯ ಒತ್ತಡಗಳಿಗೆ ಮಣಿಯುವ ಅಗತ್ಯವಿಲ್ಲ. ಅಧಿಕಾರಿಗಳು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ, ಪಾರದರ್ಶಕವಾಗಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಕೆಲಸ ಮಾಡಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ನಂತರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತದಲ್ಲಿ ಪ್ರಭಾವಿಗಳಿಗೆ ಮಣೆ ಹಾಕುವ ಸಂಸ್ಕೃತಿಗೆ ಬ್ರೇಕ್ ಹಾಕುವ ಸ್ಪಷ್ಟ ಸಂದೇಶ ರವಾನಿಸಿದರು. ಸುದ್ದಿಯ ಪ್ರಮುಖ ಮುಖ್ಯಾಂಶಗಳು: ರಾಜಕೀಯ ಪ್ರಭಾವಕ್ಕೆ ಆಸ್ಪದವಿಲ್ಲ: ಯಾವುದೇ ಜನಪ್ರತಿನಿಧಿಗಳ ಒತ್ತಡಕ್ಕೆ ಬಲಿಯಾಗದೆ ಕಾನೂನುಬದ್ಧವಾಗಿ ಕೆಲಸ ಮಾಡಿ. ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಅಥವಾ ಬೇರಾವುದೇ ಬಾಹ್ಯ ಪ್ರಭಾವಗಳು ನಡೆಯುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. 15 ದಿನಗಳ ಗಡುವು (Action Card): ಆಡಳಿತದ ವೇಗವನ್ನು ಹೆಚ್ಚಿಸಲು ಮುಂದಿನ 15 ದಿನಗಳಲ್ಲಿ ಎಲ್ಲಾ ಇಲಾಖೆಗಳು ತಮ್ಮ ಕಾರ್ಯಯೋಜನೆಯ ‘ಆಕ್ಷನ್ ಕಾರ್ಡ್’ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರ ಕುಂದುಕೊರತೆಗೆ ಹೊಸ ಸಚಿವಾಲಯ: ಜನಸಾಮಾನ್ಯರ…

Read More

ಬೆಂಗಳೂರು: “ರಾಜ್ಯದ ಆಡಳಿತ ಯಂತ್ರದಲ್ಲಿ ಯಾವುದೇ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವಕ್ಕೆ ಆಸ್ಪದವಿಲ್ಲ. ಅಧಿಕಾರಿಗಳು ಯಾವುದೇ ಸಚಿವರು ಅಥವಾ ಶಾಸಕರ ಒತ್ತಡಕ್ಕೆ ಮಣಿಯದೆ, ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಾರದರ್ಶಕವಾಗಿ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉನ್ನತ ಮಟ್ಟದ ಅಧಿಕಾರಿಗಳ ಮಹತ್ವದ ಸಭೆಯ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಆಡಳಿತದಲ್ಲಿ ಆಮೂಲಾಗ್ರ ಬದಲಾವಣೆ ತರಲು ಹದಿನೈದು ದಿನಗಳ ಗಡುವು ನೀಡಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಆಡಳಿತ ಸುಧಾರಣೆಯ ಪ್ರಮುಖ ಘೋಷಣೆಗಳು: ಒತ್ತಡಕ್ಕೆ ಮಣಿಯುವಂತಿಲ್ಲ: ಅಧಿಕಾರಿಗಳು ಯಾವುದೇ ರಾಜಕೀಯ ಪ್ರಭಾವ, ಸಚಿವರು ಅಥವಾ ಶಾಸಕರ ಒತ್ತಡಕ್ಕೆ ಮಣಿಯಬಾರದು. ಧರ್ಮ, ಜಾತಿಯ ಭೇದವಿಲ್ಲದೆ ಕೇವಲ ಜನರ ಸಮಸ್ಯೆಗಳನ್ನು ಬಗೆಹರಿಸುವುದೇ ಅಧಿಕಾರಿಗಳ ಆದ್ಯತೆಯಾಗಬೇಕು. 15 ದಿನಗಳಲ್ಲಿ ಆಕ್ಷನ್ ಕಾರ್ಡ್: ಇಲಾಖೆಗಳ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಮುಂದಿನ 15 ದಿನಗಳ ಒಳಗಾಗಿ ಕಡ್ಡಾಯವಾಗಿ ‘ಆಕ್ಷನ್ ಕಾರ್ಡ್’…

Read More

ಬೆಂಗಳೂರು: ದೇಶದ ರೈತಾಪಿ ವರ್ಗದ ಜೀವನಾಡಿಯಾಗಿರುವ ನೈಋತ್ಯ ಮಾನ್ಸೂನ್ (ಮುಂಗಾರು ಮಳೆ) ಕೊನೆಗೂ ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ನಿಗದಿತ ಸಮಯಕ್ಕಿಂತ ಸುಮಾರು 4 ದಿನಗಳಷ್ಟು ತಡವಾಗಿ ಮುಂಗಾರು ಆಗಮನವಾಗಿದ್ದು, ಇದೀಗ ವೇಗವಾಗಿ ಕರ್ನಾಟಕದತ್ತ ಮುನ್ನಡೆಯುತ್ತಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಯ ಪ್ರಕಾರ, ಕೇರಳದಲ್ಲಿ ಮುಂಗಾರು ಆರಂಭವಾಗುತ್ತಿದ್ದಂತೆಯೇ ಕರ್ನಾಟಕದಾದ್ಯಂತ ವಾತಾವರಣದಲ್ಲಿ ಭಾರಿ ಬದಲಾವಣೆಯಾಗಿದೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಮುಂಗಾರು ಪ್ರವೇಶದ ಪ್ರಮುಖ ಮುಖ್ಯಾಂಶಗಳು: ಕೇರಳಕ್ಕೆ ತಡವಾಗಿ ಲಗ್ಗೆ: ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳ ತಲುಪಬೇಕಿದ್ದ ಮಾನ್ಸೂನ್, ಈ ಬಾರಿ ಜೂನ್ 4ರಂದು ಅಧಿಕೃತವಾಗಿ ಪ್ರವೇಶಿಸಿದೆ. ದಕ್ಷಿಣ-ಪೂರ್ವ ಅರಬ್ಬಿ ಸಮುದ್ರ, ಲಕ್ಷದ್ವೀಪ ಮತ್ತು ಕೇರಳದ ಬಹುತೇಕ ಭಾಗಗಳಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ. ಕರ್ನಾಟಕಕ್ಕೆ ಮುನ್ನಡೆ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದ ಸುಳಿ ಹಾಗೂ ಟ್ರಫ್ ಪ್ರಭಾವದಿಂದಾಗಿ ಮುಂಗಾರು ಮಾರುತಗಳು ಕರ್ನಾಟಕದ ಕರಾವಳಿ ಮತ್ತು…

Read More

ಶಿವಮೊಗ್ಗ: ಇಲ್ಲಿನ ಲಯನ್ಸ್ ಕ್ಲಬ್ ಸಾಗರ ಮತ್ತು ಪಿನಾಕಿ ಸ್ಟುಡಿಯೋಸ್ ಸಹಯೋಗದಲ್ಲಿ ಸಾಗರದ ಯುವ ಪ್ರತಿಭೆಗಳು ಸೇರಿ ನಿರ್ಮಿಸಿರುವ ‘ಮೂವಿಂಗ್ ಫೋಟೋ’ (Moving Photo) ಎಂಬ ವಿಶೇಷ ಕಿರುಚಿತ್ರವನ್ನು ಜೂನ್.6ರಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡುವುದಾಗಿ ಲಯನ್ಸ್ ಕ್ಲಬ್ ಅಧ್ಯಕ್ಷರಾದಂತ ಡಾ.ಪ್ರಸನ್ನ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜೂನ್ 5, 6 ಮತ್ತು 7ರಂದು ಸಾಗರದ ಶ್ರೀ ರಾಘವೇಂದ್ರ ಸಭಾಭವನದಲ್ಲಿ ಹಲಸು ಮತ್ತು ಮಾವು ಮೇಳ ನಡೆಯಲಿದೆ. ಈ ಹಲಸು ಮತ್ತು ಮಾವಿನ ಮೇಳದ ಸಂದರ್ಭದ ಜೂನ್ 5, 2026 ರಂದು ಕಿರುಚಿತ್ರದ ಆಡಿಯೋ ಹಾಗೂ ಜೂನ್ 6, 2026 ರಂದು ಶಾರ್ಟ್ ಮೂವಿಯನ್ನು  ಅಧಿಕೃತವಾಗಿ Pinaki Studio ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ​ಇದೇ ವೇಳೆ, ಕ್ಲಬ್‌ನ ಕಾರ್ಯಕ್ರಮವೊಂದಕ್ಕಾಗಿ ಅತ್ಯುತ್ತಮ ಪ್ರೋಮೋ ಎಡಿಟ್ ಮಾಡಿಕೊಟ್ಟಿದ್ದ ಶ್ರವಣ್ ಅವರ ಕಾರ್ಯವನ್ನು ಶ್ಲಾಘಿಸಲಾಯಿತು ಹಾಗೂ ಯಕ್ಷಗಾನ ಕಲಾವಿದೆ ಲಕ್ಷ್ಮಿ…

Read More

ಬೆಂಗಳೂರು: ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಾರ್ವಜನಿಕರಿಗೆ ಹಾಗೂ ರಾಜ್ಯದ ಜನತೆಗೆ ಭರ್ಜರಿ ಕೊಡುಗೆಯನ್ನು ನೀಡಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಯಾದ ಬಳಿಕ ಡಿ.ಕೆ ಶಿವಕುಮಾರ್ ನಡೆಸಿದ ಮೊದಲ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಸರ್ಕಾರದ ವತಿಯಿಂದ ಮಹತ್ವದ ‘ಭೂ ಗ್ಯಾರಂಟಿ’ಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಕಾಂಗ್ರೆಸ್ ತನ್ನ 6ನೇ ಗ್ಯಾರಂಟಿಯನ್ನು ಅಧಿಕೃತವಾಗಿ ನಾಡಿನ ಜನತೆಯ ಮುಂದಿಟ್ಟಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರದ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು. ಅದರ ಪ್ರಮುಖ ಮುಖ್ಯಾಂಶಗಳು ಕೆಳಗಿನಂತಿವೆ: 3 ಅಂತಸ್ತಿನ ಮನೆಗಳಿಗೆ ಒಸಿ (OC) ವಿನಾಯ್ತಿ! ರಾಜಧಾನಿ ಸೇರಿದಂತೆ ರಾಜ್ಯದಾದ್ಯಂತ ಸ್ವಂತ ಮನೆ ಕಟ್ಟಿಕೊಳ್ಳುವ ಜನರಿಗೆ ಸರ್ಕಾರ ಅತಿ ದೊಡ್ಡ ರಿಲೀಫ್ ನೀಡಿದೆ. 3 ಅಂತಸ್ತಿನ ವರೆಗಿನ ಕಟ್ಟಡಗಳಿಗೆ ಹಾಗೂ 2,500 ಚದರ ಅಡಿ ವಿಸ್ತೀರ್ಣದವರೆಗೆ ಮನೆ ನಿರ್ಮಿಸಿ ಅರ್ಜಿ ಹಾಕಿದವರಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ (OC – Occupancy Certificate) ನಿಯಮದಿಂದ ಸಂಪೂರ್ಣ ವಿನಾಯ್ತಿ ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಇದರಿಂದಾಗಿ ಸಾವಿರಾರು…

Read More