Subscribe to Updates
Get the latest creative news from FooBar about art, design and business.
Author: kannadanewsnow09
ರಾಯಚೂರು: ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಮೂಲಕ ಜಾತಿಗಣತಿ ವರದಿ ಬಿಡುಗಡೆ ಶೀಘ್ರವೇ ಆಗಲಿದೆ ಎಂಬುದಾಗಿ ತಿಳಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ಮಾತನಾಡಿದಂತ ಅವರು, ನಾನು ಯಾವತ್ತೂ ಅಧಿಕಾರದ ಹಿಂದೆ ಬಿದ್ದವನಲ್ಲ. ನಾನು ಹೋರಾಟದ ಮೂಲಕ ರಾಜಕೀಯ ಮಾಡುತ್ತಾ ಬಂದವನು. ಮುಂದೆಯೂ ಶಕ್ತಿ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಅವರ ಪರ ಹೋರಾಟ ಮಾಡುತ್ತೇನೆ ಎಂದರು. ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಅಂದ್ರೆ ಎರಡು ತಿಂಗಳಿಲ್ಲಿ ವರದಿ ಬಿಡುಗಡೆ ಮಾಡುತ್ತೇವೆ. ಸರ್ವೆ ಆಗಿದೆ. ಆ ಬಗ್ಗೆ ವರದಿ ಕೊಟ್ಟ ಮೇಲೆ ಅಂಗೀಕರಿಸಿ ಬಿಡುಗಡೆ ಮಾಡಲಾಗುತ್ತದೆ. ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. https://kannadanewsnow.com/kannada/budget-2026-no-tax-on-bike-accident-compensation-insurance-money-central-government-makes-important-announcement/ https://kannadanewsnow.com/kannada/amusement-park-in-sagara-closed-due-to-flexing-problem-tender-process-in-trouble/
ಶಿವಮೊಗ್ಗ: ಸಾಗರದಲ್ಲಿ ಫೆಬ್ರವರಿ 3ರಿಂದ 11ರವರೆಗೆ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಇದಕ್ಕೆ ಶುಭಕೋರಿ ನೆಹರೂ ಮೈದಾನದಲ್ಲಿ ಹಾಕಿರುವಂತ ಫ್ಲೆಕ್ಸ್ ಗಳೇ, ಅಮ್ಯೂಸ್ಮೆಂಟ್ ಪಾರ್ಕ್ ಟೆಂಡರ್ ಇಡಿದವರನ್ನು ಸಂಕಷ್ಟಕ್ಕೆ ಸಿಲುಕಿಸಿದಂತೆ ಆಗಿದೆ ಎನ್ನಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಬ್ರಾಸಂ ಎದುರಿನ ನೆಹರೂ ಮೈದಾನದಲ್ಲಿ ಮಾರಿ ಜಾತ್ರೆಯ ಪ್ರಯುಕ್ತ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸಲಾಗುತ್ತಿದೆ. ಈ ಅಮ್ಯೂಸ್ಮೆಂಟ್ ಟೆಂಡರ್ ಪಡೆಯಲು ಬರೋಬ್ಬರಿ 1.34 ಕೋಟಿ ಬಿಡ್ ಮಾಡಲಾಗಿತ್ತು. ಇದು ಸಾಗರದ ಮಾರಿ ಜಾತ್ರೆ ಇತಿಹಾಸದಲ್ಲೇ ಅತೀ ಹೆಚ್ಚಿನ ಬಿಡ್ ಕೂಡ ಎನ್ನಲಾಗುತ್ತಿದೆ. ಆದರೇ ಅಷ್ಟು ದೊಡ್ಡಮಟ್ಟಕ್ಕೆ ಟೆಂಡರ್ ಇಡಿದು, ಅಷ್ಟೇ ಮಟ್ಟದಲ್ಲಿ ಬಂಡವಾಳ ಹಾಕಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸಿದ್ದರೂ, ಸಾರ್ವಜನಿಕರಿಗೆ ಮಾತ್ರ ಕಾಣದಂತೆ ಫ್ಲೆಕ್ಸ್ ಹಾವಳಿಯಲ್ಲಿ ಮುಚ್ಚಿಹೋದಂತೆ ಕಾಣುತ್ತಿದೆ. ಸಾಗರದ ಬ್ರಾಸಂ ಎದುರಿನ ನೆಹರೂ ಮೈದಾನದ ದಾರಿಯುದ್ಧಕ್ಕೂ ಮಾರಿಕಾಂಬ ಜಾತ್ರೆಗೆ ಶುಭಕೋರಿ ಹಲವರು ಫ್ಲೆಕ್ಸ್ ಅಳವಡಿಸಲಾಗಿದೆ. ಈ ಫ್ಲೆಕ್ಸ್ ಅಳವಡಿಸಿರೋದರಿಂದ ನೆಹರೂ ಮೈದಾನದಲ್ಲಿನ ಅಮ್ಯೂಸ್ಮೆಂಟ್ ಪಾರ್ಕ್ ನಲ್ಲಿನ ಆಟಿಕೆಗಳೇ…
ಕೊಪ್ಪಳ : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೆ ಪದೇ ಅನ್ಯಾಯ ಆಗುತ್ತಿದೆ. ಈ ಬಾರಿಯ ಬಜೆಟ್ನಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ. ಕೊಪ್ಪಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕಕ್ಕೆ ಬರಬೇಕಿದ್ದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಚೆಯಂಥ ಹಿರಿಯ ನಾಯಕರು ಆಯ್ಕೆಯಾಗಿದ್ದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡುತ್ತಿಲ್ಲ ಎಂದು ಸಚಿವರು ಹೇಳಿದರು. ಮಹೇಶ್ ಟೆಂಗಿನಕಾಯಿ ಒಂಥರ ಬಲೂನ್ ಇದ್ದಂಗೆ ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಇನ್ನಿಲ್ಲದ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಒಂಥರ ಬಲೂನ್ ಇದ್ದಂಗೆ, ಯಾವಾಗ ಗಾಳಿ ಹೋಗುತ್ತದೆ ಗೊತ್ತಿಲ್ಲ. ಅವರಿಗೆ ಬೇರೆ ಯಾವುದೇ ಕೆಲಸವಿಲ್ಲದೇ…
ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು- ಚೆನ್ನೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಅಭಿವೃದ್ಧಿ ಘೋಷಣೆ ಮಾಡಿರುವುದು ಸ್ವಾಗತಾರ್ಹವಾದರೂ ಇದರಿಂದ ರಾಜ್ಯಕ್ಕೆ ಹೆಚ್ಚು ಪ್ರಯೋಜನವೇನೂ ಇಲ್ಲ. ಇದರ ಬದಲು ಬೆಂಗಳೂರು-ಪುಣೆ ನಡುವೆ ಇಂಥ ಕಾರಿಡಾರ್ ಬರಬೇಕು. ಇದಕ್ಕಾಗಿ ರಾಜ್ಯದ ಮತ್ತು ಮಹಾರಾಷ್ಟ್ರದ ಸಂಸದರು ಪಕ್ಷಾತೀತವಾಗಿ ಧ್ವನಿ ಎತ್ತಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿದ 2026-27ನೇ ಸಾಲಿನ ಬಜೆಟ್ ಬಗ್ಗೆ ಅವರು ಸುದ್ದಿ ಮಾಧ್ಯಮಗಳ ಜತೆ ಮಾತನಾಡಿದ್ದಾರೆ. ಈಗ ಘೋಷಿಸಿರುವ ಎರಡೂ ಮಾರ್ಗಗಳಲ್ಲಿ ರೈಲುಗಳು ಕರ್ನಾಟಕದೊಳಗೆ ನೂರು ಕಿಲೋಮೀಟರ್ ಕೂಡ ಓಡುವುದಿಲ್ಲ. ಇದನ್ನು ಮೋದಿ ಸರಕಾರವು ಪರಿಗಣಿಸಿಲ್ಲದೆ ಇರುವುದು ದುರ್ದೈವದ ಸಂಗತಿ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಘೋಣಿಸಿರುವ 5,600 ಕೋಟಿ ರೂಪಾಯಿ ನೆರವನ್ನು…
ಬೆಂಗಳೂರು : ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್ ನಲ್ಲಿ ಯಾವುದೇ ಗಣನೀಯ ಸುಧಾರಣೆ ಆಗಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ಯಾವುದೇ ನಿಯಂತ್ರಣವೂ ಇಲ್ಲ. ಕರ್ನಾಟಕಕ್ಕಂತೂ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್ ನಲ್ಲಿ ಆಗಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಹೈದ್ರಾಬಾದ್ – ಬೆಂಗಳೂರು ಹೈಸ್ಪೀಡ್ ರೈಲು ಸಮಾಧಾನಕರ ಬಹುಮಾನದಂತಿದೆ. ರೈತರು ಬೆಳೆಯುವ ಎಲ್ಲ ಬೆಳೆಗಳಿಗೂ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ನೀಡುವಲ್ಲಿ ಈ ಬಾರಿಯೂ ವಿಫಲವಾಗಿದೆ ಎಂದು ತಿಳಿಸಿದ್ದಾರೆ. ಶ್ರೀಗಂಧದ ಬೆಳೆಗೆ ಉತ್ತೇಜನ: ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಶ್ರೀಗಂಧ ಬೆಳೆಗೆ ಉತ್ತೇಜನದ ಮಾತುಗಳನ್ನಾಡಿದೆ. ಆದರೆ ಅದು ಹೇಗೆ ಕಾರ್ಯಗತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸ್ವಾಭಾವಿಕವಾಗಿ ಬೆಳೆಯುವ ಶ್ರೀಗಂಧದಲ್ಲಿ ತೈಲದ ಅಂಶ ಇರುತ್ತದೆ. ಆದರೆ ರೈತರು ಜಮೀನಿನಲ್ಲಿ…
ನವದೆಹಲಿ: ಆದಾಯ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ಮಾರ್ಚ್.31ರವರೆಗೆ ಐಟಿಆರ್ ಪಾವತಿಗೆ ಗಡುವನ್ನು ವಿಸ್ತರಿಸಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಶೇ.2ರಷ್ಟು ಟಿಸಿಎಸ್ ಕಡಿತಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ನಾರೀ ಶಕ್ತಿಗೆ ಹೆಚ್ಚಿನ ಆದ್ಯತೆಗಾಗಿ ಪಣ ತೊಡಲಾಗಿದೆ. ಏಪ್ರಿಲ್.1ರಿಂದಲೇ ಹೊಸ ಆದಾಯ ತೆರಿಗೆ ಜಾರಿಗೆ ಬರಲಿದೆ. ತೆರಿಗೆ ವಂಚಿಸುವವರಿಗೆ ಶಿಕ್ಷೆ ಬಗ್ಗೆ ಕೋರ್ಟ್ ತೀರ್ಮಾನಿಸಲಿದೆ. ಸಣ್ಣ ತೆರಿಗೆ ಅಪರಾಧಗಳಿಗೆ ಕೇವಲ ದಂಡಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಆದಾಯ ತೆರಿಗೆಯಲ್ಲಿ ಅಪರಾಧ ಮಾಡಿದ್ರೆ ಶಿಕ್ಷೆ ಇಲ್ಲ ದಂಡವೆಂದು ತಿಳಿಸಿದರು. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್: ಶೇ.100ರಷ್ಟು ಹೆಚ್ಚು ದಂಡ ಕೇಂದ್ರ ಸರ್ಕಾರದಿಂದ ಆದಾಯ ತೆರಿಗೆ ಪಾವತಿಗೆ ಮಹತ್ವದ ಕ್ರಮ ವಹಿಸಲಾಗಿದೆ. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ ಎನ್ನುವಂತೆ ಇನ್ನುಂದೆ ಶೇ.100ರಷ್ಟು ಹೆಚ್ಚು ದಂಡ ವಿಧಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಕೇಂದ್ರ ಹಣಕಾಸು…
ನವದೆಹಲಿ: ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಶೇ.2ರಷ್ಟು ಟಿಸಿಎಸ್ ಕಡಿತಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ನಾರೀ ಶಕ್ತಿಗೆ ಹೆಚ್ಚಿನ ಆದ್ಯತೆಗಾಗಿ ಪಣ ತೊಡಲಾಗಿದೆ. ಏಪ್ರಿಲ್.1ರಿಂದಲೇ ಹೊಸ ಆದಾಯ ತೆರಿಗೆ ಜಾರಿಗೆ ಬರಲಿದೆ. ತೆರಿಗೆ ವಂಚಿಸುವವರಿಗೆ ಶಿಕ್ಷೆ ಬಗ್ಗೆ ಕೋರ್ಟ್ ತೀರ್ಮಾನಿಸಲಿದೆ. ಸಣ್ಣ ತೆರಿಗೆ ಅಪರಾಧಗಳಿಗೆ ಕೇವಲ ದಂಡಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಆದಾಯ ತೆರಿಗೆಯಲ್ಲಿ ಅಪರಾಧ ಮಾಡಿದ್ರೆ ಶಿಕ್ಷೆ ಇಲ್ಲ ದಂಡವೆಂದು ತಿಳಿಸಿದರು. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್: ಶೇ.100ರಷ್ಟು ಹೆಚ್ಚು ದಂಡ ಕೇಂದ್ರ ಸರ್ಕಾರದಿಂದ ಆದಾಯ ತೆರಿಗೆ ಪಾವತಿಗೆ ಮಹತ್ವದ ಕ್ರಮ ವಹಿಸಲಾಗಿದೆ. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ ಎನ್ನುವಂತೆ ಇನ್ನುಂದೆ ಶೇ.100ರಷ್ಟು ಹೆಚ್ಚು ದಂಡ ವಿಧಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಇಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ತಹೊಸ ತೆರಿಗೆ ಕಾನೂನು ಜುಲೈ 31ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ.…
ನವದೆಹಲಿ: ಕೇಂದ್ರ ಸರ್ಕಾರದಿಂದ ಆದಾಯ ತೆರಿಗೆ ಪಾವತಿಗೆ ಮಹತ್ವದ ಕ್ರಮ ವಹಿಸಲಾಗಿದೆ. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್ ಎನ್ನುವಂತೆ ಇನ್ನುಂದೆ ಶೇ.100ರಷ್ಟು ಹೆಚ್ಚು ದಂಡ ವಿಧಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಇಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ತಹೊಸ ತೆರಿಗೆ ಕಾನೂನು ಜುಲೈ 31ರವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಏಪ್ರಿಲ್.1ರಿಂದ ಹೊಸ ತೆರಿಗೆ ಕಾನೂನು ಜಾರಿಯಾಗಲಿದೆ. ತೆರಿಗೆ ಪಾವತಿಸದವರು ಅಪರಾಧಿಗಳೆಂದು ಪರಿಗಣಿಸಲಾಗುತ್ತದೆ ಎಂದರು. ಪ್ರವಾಸೋದ್ಯಮವನ್ನು ಉತ್ತೇಜಿಸಲು 15 ಪುರಾತತ್ವ ಸ್ಥಳಗಳನ್ನು ಅಭಿವೃದ್ಧಿ: ಹಣಕಾಸು ಸಚಿವೆ ಸೀತಾರಾಮನ್ ಪ್ರವಾಸೋದ್ಯಮವನ್ನು ಉತ್ತೇಜಿಸಲು 15 ಪುರಾತತ್ವ ಸ್ಥಳಗಳನ್ನು ರೋಮಾಂಚಕ, ಅನುಭವ-ಚಾಲಿತ ಸಾಂಸ್ಕೃತಿಕ ತಾಣಗಳಾಗಿ ಅಭಿವೃದ್ಧಿಪಡಿಸುವ ಪ್ರಸ್ತಾಪವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಏಪ್ರಿಲ್ 1 ರಿಂದ ನೂತನ ‘IT’ ಕಾಯ್ದೆ ಜಾರಿ : ನಿರ್ಮಲಾ ಸೀತಾರಾಮನ್ | Union Budget 2026 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು…
ನವದೆಹಲಿ: ಪ್ರವಾಸೋದ್ಯಮವನ್ನು ಉತ್ತೇಜಿಸಲು 15 ಪುರಾತತ್ವ ಸ್ಥಳಗಳನ್ನು ರೋಮಾಂಚಕ, ಅನುಭವ-ಚಾಲಿತ ಸಾಂಸ್ಕೃತಿಕ ತಾಣಗಳಾಗಿ ಅಭಿವೃದ್ಧಿಪಡಿಸುವ ಪ್ರಸ್ತಾಪವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಏಪ್ರಿಲ್ 1 ರಿಂದ ನೂತನ ‘IT’ ಕಾಯ್ದೆ ಜಾರಿ : ನಿರ್ಮಲಾ ಸೀತಾರಾಮನ್ | Union Budget 2026 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ಈ ವೇಳೆ ಏಪ್ರಿಲ್ 1 ರಿಂದ ನೂತನ ಐಟಿ ಕಾಯ್ದೆ ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು. ವಿದೇಶಿ ವಿನಿಮಯ ಕಾನೂನು ಪರಿಷ್ಕರಣೆಯ ನಿರ್ಧಾರದಿಂದ ವಿದೇಶಿ ಹೂಡಿಕೆದಾರರಿಗೆ ಅನುಕೂಲವಾಗಲಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಆಗಲಿದೆ ಇದರಿಂದ ವಿದೇಶಿ ಹೂಡಿಕೆದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮಹಿಳಾ ಉದ್ಯಮಿಗಳಿಗೆ ಕೇಂದ್ರ ಸರ್ಕಾರದಿಂದ…
ನವದೆಹಲಿ: 2026-27ರ ಕೇಂದ್ರ ಬಜೆಟ್ನಲ್ಲಿ, ಸಮಗ್ರ ಮತ್ತು ಸಮಗ್ರ ಆರೋಗ್ಯ ಸೇವೆಯನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಐದು ಪ್ರಾದೇಶಿಕ ವೈದ್ಯಕೀಯ ಕೇಂದ್ರಗಳನ್ನು ಸ್ಥಾಪಿಸುವಲ್ಲಿ ರಾಜ್ಯಗಳಿಗೆ ಬೆಂಬಲ ನೀಡುವ ಹೊಸ ಯೋಜನೆಯ ಮೂಲಕ ಆಯುಷ್ ವಲಯಕ್ಕೆ ಉದ್ದೇಶಿತ ಉತ್ತೇಜನವನ್ನು ಸರ್ಕಾರ ಪ್ರಸ್ತಾಪಿಸಿದೆ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ವಿತ್ತ ಸಚಿವ ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು ಸ್ಥಾಪಿಸಲು ಸಹ ಪ್ರಸ್ತಾಪಿಸಿದ್ದಾರೆ. ಈ ಕೇಂದ್ರಗಳು ಆಧುನಿಕ ರೋಗನಿರ್ಣಯ ಮೂಲಸೌಕರ್ಯ ಮತ್ತು ಆರೈಕೆಯ ನಂತರದ ಪುನರ್ವಸತಿ ಸೌಲಭ್ಯಗಳ ಜೊತೆಗೆ ಆಯುಷ್ ಕೇಂದ್ರಗಳನ್ನು ಹೊಂದಿದ್ದು, ಸಮಗ್ರ ರೋಗಿಗಳ ಆರೈಕೆಯನ್ನು ಸಕ್ರಿಯಗೊಳಿಸುತ್ತವೆ. ಈ ಉಪಕ್ರಮವು ವೈದ್ಯಕೀಯ ಮತ್ತು ಸಂಬಂಧಿತ ಆರೋಗ್ಯ ವೃತ್ತಿಪರರಿಗೆ ವೈವಿಧ್ಯಮಯ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ, ಸಾಂಪ್ರದಾಯಿಕ ಔಷಧ ವ್ಯವಸ್ಥೆಗಳನ್ನು ಉತ್ತೇಜಿಸುತ್ತದೆ ಮತ್ತು ಪ್ರಾದೇಶಿಕ ಆರೋಗ್ಯ ಪರಿಸರ ವ್ಯವಸ್ಥೆಗಳನ್ನು ಬಲಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.











