Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ: “ಆರೋಗ್ಯವೇ ಭಾಗ್ಯ. ವಯಸ್ಸಾದ ಮೇಲೆ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆಗಳ ಬಗ್ಗೆ ಆತಂಕ ಪಡದೆ, ಕಾಲಕಾಲಕ್ಕೆ ತಪಾಸಣೆಗೆ ಒಳಪಡುವ ಮೂಲಕ ಆರೋಗ್ಯವಂತರಾಗಿರಲು ಸಾಧ್ಯವಿದೆ,” ಎಂದು ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉರ್ದು ಪ್ರೌಢಶಾಲೆಯಲ್ಲಿ ನಡೆದ ಶ್ರವಣ ದೋಷ ತಪಾಸಣೆ ಹಾಗೂ ಸಾಧನಾ ಸಲಕರಣೆಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಸಾಗರ ಶ್ರೀಗಂಧ, ಸರ್ಕಾರಿ ನೌಕರರ ಸಂಘ, ನಿವೃತ್ತ ನೌಕರರ ಸಂಘ ಹಾಗೂ ಟೀಂ ಈಶ್ವರ ಮಲ್ಪೆ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಚೈತನ್ಯಶೀಲ ಬದುಕಿಗೆ ಆರೋಗ್ಯವೇ ಅಡಿಪಾಯ ವಯೋಸಹಜವಾಗಿ ಕಣ್ಣಿನ ದೋಷ ಅಥವಾ ಶ್ರವಣದೋಷ ಕಾಣಿಸಿಕೊಳ್ಳುವುದು ಸಹಜ. ಇಂತಹ ಸಮಸ್ಯೆಗಳನ್ನು ಆರಂಭದಲ್ಲೇ ವೈದ್ಯರ ಸಲಹೆ ಮತ್ತು ಆಧುನಿಕ ಸಾಧನಗಳ ಮೂಲಕ ಸರಿಪಡಿಸಿಕೊಳ್ಳಬಹುದು. ಮನುಷ್ಯ ಚೈತನ್ಯಶೀಲನಾಗಿದ್ದರೆ ಮಾತ್ರ ಎಲ್ಲ ಕೆಲಸಗಳನ್ನು ಉತ್ಸಾಹದಿಂದ ಮಾಡಲು ಸಾಧ್ಯ. ಇಂತಹ ಉಚಿತ ಹಾಗೂ ರಿಯಾಯಿತಿ ದರದ ಶಿಬಿರಗಳು ಸಾಮಾನ್ಯ ಜನರಿಗೆ ವರದಾನವಾಗಿವೆ ಎಂದು…

Read More

ಶಿವಮೊಗ್ಗ: ಪಟ್ಟಣದ ಹೃದಯಭಾಗದಲ್ಲಿರುವ ಮಾರ್ಕೆಟ್ ರಸ್ತೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಸಾರ್ವಜನಿಕರ ಸಂಚಾರದ ದಟ್ಟಣೆಯನ್ನು ನಿಯಂತ್ರಿಸಲು ರಸ್ತೆ ಅಗಲೀಕರಣ ಮಾಡುವುದು ಅನಿವಾರ್ಯವಾಗಿದೆ ಎಂದು ಉಪವಿಭಾಗಾಧಿಕಾರಿ ವಿರೇಶ ಕುಮಾರ್ ಪ್ರತಿಪಾದಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸ್ಥಳೀಯ ನಿವಾಸಿಗಳ ಹಾಗೂ ಮಾಲೀಕರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಶಾಸಕರ ವಿಶೇಷ ಆಸಕ್ತಿ ಮತ್ತು ಅಭಿವೃದ್ಧಿ ಸಂಕಲ್ಪ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಈ ಯೋಜನೆಯಲ್ಲಿ ವಿಶೇಷ ಆಸಕ್ತಿ ವಹಿಸಿದ್ದಾರೆ. ಕೂಡಲೇ ಭೂ-ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸುವಂತೆ ಅವರು ಸೂಚನೆ ನೀಡಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಹಲವು ಸುತ್ತಿನ ಸಭೆಗಳು ನಡೆದಿದ್ದು, ಸ್ಥಳೀಯರ ಹಿತರಕ್ಷಣೆಯೊಂದಿಗೆ ಊರಿನ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಪರಿಹಾರ ಧನ ಮತ್ತು ಏಕಗವಾಕ್ಷಿ ಸೌಲಭ್ಯ ರಸ್ತೆ ಅಗಲೀಕರಣಕ್ಕೆ ಜಾಗ ಬಿಟ್ಟುಕೊಡುವವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದ ಉಪವಿಭಾಗಾಧಿಕಾರಿಗಳು ಈ ಕೆಳಗಿನ ಅಂಶಗಳನ್ನು ಪ್ರಸ್ತಾಪಿಸಿದರು:…

Read More

ನವದೆಹಲಿ: ಮೇ 3 ರಂದು ನಡೆದಿದ್ದ ನೀಟ್ (NEET-UG 2026) ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಕುರಿತು ಕೇಂದ್ರ ತನಿಖಾ ದಳ (CBI) ಮಂಗಳವಾರ ಅಧಿಕೃತವಾಗಿ ಎಫ್‌ಐಆರ್ (FIR) ದಾಖಲಿಸಿಕೊಂಡಿದೆ. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಈ ಹಗರಣದ ಸಮಗ್ರ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ರದ್ದು, ಮರುಪರೀಕ್ಷೆಗೆ ನಿರ್ಧಾರ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮೇ 3 ರಂದು ನಡೆದಿದ್ದ ಪರೀಕ್ಷೆಯನ್ನು ರದ್ದುಗೊಳಿಸಿದೆ. ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮೇ 7 ರ ಸಂಜೆ ಎನ್‌ಟಿಎಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಏಜೆನ್ಸಿ, ಮೇ 8 ರಂದು ಸ್ವತಂತ್ರ ತನಿಖೆ ಮತ್ತು ಪರಿಶೀಲನೆಗಾಗಿ ಕೇಂದ್ರ ತನಿಖಾ ಸಂಸ್ಥೆಗಳಿಗೆ ವರದಿಯನ್ನು ಹಸ್ತಾಂತರಿಸಿತ್ತು. ತನಿಖಾ ಸಂಸ್ಥೆಗಳು ನೀಡಿದ ವರದಿ ಮತ್ತು ಲಭ್ಯವಿರುವ ಸಾಕ್ಷ್ಯಗಳನ್ನು ಆಧರಿಸಿ, ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವ…

Read More

ಧಾರವಾಡ: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಚಿವ ಸಂತೋಷ್ ಲಾಡ್, “ಕೇಂದ್ರ ಸರ್ಕಾರ ಏನು ಮಾಡಿದರೂ ನಡೆಯುತ್ತದೆ, ಅವರನ್ನು ಕೇಳುವವರು ಯಾರೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಚುನಾವಣಾ ವ್ಯವಸ್ಥೆ ಮತ್ತು ಶೈಕ್ಷಣಿಕ ಪರೀಕ್ಷೆಗಳ ಪಾರದರ್ಶಕತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದರು. ನೀಟ್ ಪರೀಕ್ಷೆ ಸೋರಿಕೆ ಕುರಿತು ಟೀಕೆ ಕೇಂದ್ರ ಸರ್ಕಾರದ ಅಡಿಯಲ್ಲಿ ನಡೆಯುವ ಪರೀಕ್ಷೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ಕೇಂದ್ರ ಸರ್ಕಾರದಲ್ಲಿ ಏನು ಸೋರಿಕೆಯಾದರೂ ಅದಕ್ಕೆ ಲೆಕ್ಕವಿಲ್ಲ, ಬುಕ್ಕಿಲ್ಲ. ಅವರ ಅವಧಿಯಲ್ಲಿ ನಡೆಯುತ್ತಿರುವ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಗೆ ಯಾವುದೇ ಮಿತಿ ಇಲ್ಲದಂತಾಗಿದೆ. ಕಳೆದ 12 ವರ್ಷಗಳಿಂದ ಅವರ ಬಳಿ ಯಾವ ವಿಚಾರವನ್ನು ಕೇಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಟೀಕಿಸಿದರು. ಮತದಾರರ ಪಟ್ಟಿ ಅಕ್ರಮದ ಗಂಭೀರ ಆರೋಪ ದೇಶದ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ವ್ಯತ್ಯಾಸಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ ಸಂತೋಷ್…

Read More

ಬೆಂಗಳೂರು: ಜೀವನಾಂಶ ಎನ್ನುವುದು ಕೇವಲ ಹಣಕಾಸಿನ ನೆರವಲ್ಲ, ಅದು ಮಹಿಳೆಯ ಶಾಸನಬದ್ಧ ಹಕ್ಕಾಗಿದೆ. ಕೇವಲ ತಾಂತ್ರಿಕ ಕಾರಣಗಳನ್ನು ಒಡ್ಡಿ ಅಥವಾ ಪತ್ನಿ ಪತಿಯೊಂದಿಗೆ ವಾಸಿಸುತ್ತಿಲ್ಲ ಎಂಬ ನೆಪದಲ್ಲಿ ಈ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ: ಕೌಟುಂಬಿಕ ನ್ಯಾಯಾಲಯದ ಆದೇಶವೇನಾಗಿತ್ತು? ಕೇಂದ್ರ ಸರ್ಕಾರಿ ನೌಕರರಾಗಿರುವ ಪತಿ ಮತ್ತು ಅವರ ಪತ್ನಿಯ ನಡುವಿನ ಈ ಪ್ರಕರಣದಲ್ಲಿ, 2024ರ ಜುಲೈನಲ್ಲಿ ಕೌಟುಂಬಿಕ ನ್ಯಾಯಾಲಯವು ತೀರ್ಪು ನೀಡಿತ್ತು. ಅಂದು ನ್ಯಾಯಾಲಯವು ಇಬ್ಬರು ಮಕ್ಕಳಿಗೆ ತಲಾ 8,000 ರೂ. ಜೀವನಾಂಶ ನಿಗದಿಪಡಿಸಿತ್ತಾದರೂ, ಪತ್ನಿ ಪತಿಯೊಂದಿಗೆ ವಾಸಿಸಬೇಕು ಎಂಬ ಆದೇಶವನ್ನು ಪಾಲಿಸದ ಕಾರಣ ಆಕೆಗೆ ಜೀವನಾಂಶ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ 40 ವರ್ಷದ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನೀಡಿದ ಸ್ಪಷ್ಟನೆ ಮತ್ತು ತರ್ಕ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ. ಕೆ. ಮನ್ಮಥ ರಾವ್ ಅವರಿದ್ದ ಪೀಠವು ಕೆಳಹಂತದ ನ್ಯಾಯಾಲಯದ ಆದೇಶವನ್ನು ಮಾರ್ಪಡಿಸಿ ಈ ಕೆಳಗಿನ ಪ್ರಮುಖ…

Read More

ಬೆಂಗಳೂರು : ಕೇಂದ್ರ ಸರ್ಕಾರವು ನೀಟ್ ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿರುವ ಹಾಗೂ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯು ಪದೇ ಪದೇ ಹಳ್ಳ ಹಿಡಿಯುತ್ತಿರುವುದು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆ ಬರೆದಿದ್ದ ಲಕ್ಷಾಂತರ ಮಕ್ಕಳ ಮೇಲೆ ಈ ದಿಢೀರ್ ‘ಮರುಪರೀಕ್ಷೆ’ಯ ನಿರ್ಧಾರವು ಗದಾಪ್ರಹಾರದಂತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ನಾವು ಶಾಲಾ ಮಟ್ಟದಲ್ಲಿ ಮಕ್ಕಳ ಶೈಕ್ಷಣಿಕ ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರದ ಇಂತಹ ಬೇಜವಾಬ್ದಾರಿಯುತ ನಿರ್ಧಾರಗಳು ಮಕ್ಕಳನ್ನು ಮತ್ತು ಪೋಷಕರನ್ನು ಹತಾಶೆಯ ಕೂಪಕ್ಕೆ ತಳ್ಳುತ್ತಿವೆ,” ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಆದ್ಯತೆಗಳ ಕುರಿತು…

Read More

ಆಧುನಿಕ ಜೀವನಶೈಲಿಯಲ್ಲಿ ಸಕ್ಕರೆಯು ನಮ್ಮ ಆಹಾರದ ಅವಿಭಾಜ್ಯ ಅಂಗವಾಗಿದೆ. ಆದರೆ, ಕೇವಲ ಎರಡು ವಾರಗಳ ಕಾಲ (14 ದಿನಗಳು) ಸಕ್ಕರೆಯನ್ನು ಸಂಪೂರ್ಣವಾಗಿ ತ್ಯಜಿಸುವುದರಿಂದ ಆರೋಗ್ಯದಲ್ಲಿ ಅದ್ಭುತ ಸುಧಾರಣೆಗಳನ್ನು ಕಾಣಬಹುದು ಎಂದು ಹಾರ್ವರ್ಡ್, ಸ್ಟ್ಯಾನ್‌ಫೋರ್ಡ್ ಮತ್ತು ಏಮ್ಸ್ (AIIMS) ತರಬೇತಿ ಪಡೆದ ಖ್ಯಾತ ಗ್ಯಾಸ್ಟ್ರೋಎಂಟರಾಲಜಿಸ್ಟ್ ವಿವರಿಸಿದ್ದಾರೆ. ಅದರ ವಿವರಗಳು ಇಲ್ಲಿವೆ: 1. ಹಸಿವು ಮತ್ತು ಹಂಬಲದ ನಿಯಂತ್ರಣ (Reduction in Cravings) ಸಕ್ಕರೆಯನ್ನು ಸೇವಿಸುವುದರಿಂದ ಮೆದುಳಿನಲ್ಲಿ ‘ಡೋಪಮೈನ್’ ಎಂಬ ರಾಸಾಯನಿಕ ಬಿಡುಗಡೆಯಾಗುತ್ತದೆ, ಇದು ಪದೇ ಪದೇ ಸಿಹಿ ತಿನ್ನುವ ಬಯಕೆಯನ್ನು ಉಂಟುಮಾಡುತ್ತದೆ. ನೀವು ಸಕ್ಕರೆ ಬಿಟ್ಟಾಗ, ರಕ್ತದಲ್ಲಿನ ಇನ್ಸುಲಿನ್ ಮಟ್ಟವು ಸ್ಥಿರವಾಗುತ್ತದೆ. ಇದರಿಂದ ಪದೇ ಪದೇ ಕಾಡುವ ಹಸಿವು ಮತ್ತು ಸಿಹಿ ತಿನ್ನುವ ಹಂಬಲ ಗಣನೀಯವಾಗಿ ಕಡಿಮೆಯಾಗುತ್ತದೆ. 2. ತೂಕ ಇಳಿಕೆ ಮತ್ತು ಹೊಟ್ಟೆಯ ಬೊಜ್ಜು ಇಳಿಕೆ ಸಕ್ಕರೆಯು ದೇಹದಲ್ಲಿ ಕೊಬ್ಬಿನ ರೂಪದಲ್ಲಿ ಸಂಗ್ರಹವಾಗುತ್ತದೆ, ವಿಶೇಷವಾಗಿ ಯಕೃತ್ತು (Liver) ಮತ್ತು ಹೊಟ್ಟೆಯ ಭಾಗದಲ್ಲಿ. ಸಕ್ಕರೆಯನ್ನು ತ್ಯಜಿಸಿದ 14 ದಿನಗಳಲ್ಲಿ, ದೇಹವು ಶಕ್ತಿಗಾಗಿ ಸಂಗ್ರಹವಾಗಿರುವ…

Read More

ರಾಯ್‌ಪುರ: ಬೇಸಿಗೆಯ ಬಿಸಿಲಿನಿಂದ ಪಾರಾಗಲು ಹಣ್ಣುಗಳನ್ನು ಸೇವಿಸುವುದು ಸಾಮಾನ್ಯ. ಆದರೆ, ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಕತ್ತರಿಸಿಟ್ಟ ಕಲ್ಲಂಗಡಿ ಹಣ್ಣನ್ನು ಸೇವಿಸಿದ ಒಂದೇ ಕುಟುಂಬದ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಎಂಟು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಏನಿದು ಘಟನೆ? ವರದಿಗಳ ಪ್ರಕಾರ, ಕುಟುಂಬದ ಸದಸ್ಯರು ಮಾರುಕಟ್ಟೆಯಿಂದ ತಂದಿದ್ದ ಕಲ್ಲಂಗಡಿ ಹಣ್ಣನ್ನು ಕತ್ತರಿಸಿ ಸೇವಿಸಿದ್ದರು. ಹಣ್ಣು ತಿಂದ ಕೆಲವೇ ಸಮಯದಲ್ಲಿ ಎಲ್ಲರಿಗೂ ವಾಂತಿ ಮತ್ತು ಭೇದಿ ಆರಂಭವಾಗಿದೆ. ಅಸ್ವಸ್ಥಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ದುರದೃಷ್ಟವಶಾತ್ ಎಂಟು ವರ್ಷದ ಬಾಲಕ ಚಿಕಿತ್ಸೆಯ ನಡುವೆಯೇ ಮೃತಪಟ್ಟಿದ್ದಾನೆ. ಬಾಲಕನ ತಾಯಿ ಮತ್ತು ಇತರ ಇಬ್ಬರು ಸದಸ್ಯರ ಸ್ಥಿತಿ ಕೂಡ ಚಿಂತಾಜನಕವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ಕಾರಣವೇನಿರಬಹುದು? ಆಹಾರ ತಜ್ಞರು ಮತ್ತು ವೈದ್ಯರ ಪ್ರಕಾರ, ಈ ಘಟನೆಗೆ ಪ್ರಮುಖವಾಗಿ ಎರಡು ಕಾರಣಗಳಿರಬಹುದು: ಬ್ಯಾಕ್ಟೀರಿಯಾ ಸೋಂಕು: ಕಲ್ಲಂಗಡಿ ಹಣ್ಣನ್ನು ಕತ್ತರಿಸಿ ದೀರ್ಘಕಾಲ ತೆರೆದಿಟ್ಟಾಗ ಅದರಲ್ಲಿ ಬ್ಯಾಕ್ಟೀರಿಯಾಗಳು (Salmonella ಅಥವಾ Listeria) ವೇಗವಾಗಿ…

Read More

ಬೆಂಗಳೂರು: ನಾಗಮಲೆಯಲ್ಲಿ ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ, ಯುಗಾದಿ ಜಾತ್ರೆ ವೇಳೆ ಮಾತ್ರವೇ ಕಾಲ್ನಡಿಗೆಯಲ್ಲಿ ಸಾಗಲು ಅವಕಾಶ ನೀಡವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಿರ್ದೇಶನ ನೀಡಿದ್ದಾರೆ. ವಿಕಾಸಸೌಧದಲ್ಲಿಂದು ಹಿರಿಯ ಅಧಿಕಾರಿಗಳು ಹಾಗೂ ಚಾಮರಾಜನಗರ ಅರಣ್ಯಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ ಅವರು, ನಾಗಮಲೆಗೆ 14 ಕಿ.ಮೀ. ನಡೆದು ಹೋಗಲು ಅವಕಾಶ ನೀಡದೆ, ಕೇವಲ 3 ಕಿ.ಮೀ. ಮಾತ್ರ ಅವಕಾಶ ನೀಡಿ, ವಾಕಿಟಾಕಿ ಮತ್ತು ಅಗತ್ಯ ಸುರಕ್ಷತಾ ಸಲಕರಣೆಯೊಂದಿಗೆ ಮಾರ್ಗದರ್ಶಕರ (ಗೈಡ್) ಸೇವೆ ಒದಗಿಸುವಂತೆ ತಿಳಿಸಿದರು. ಟಿಕೆಟ್ ಕೌಂಟರ್ ಬಳಿಯಿಂದ ನಾಗಮಲೆಯ ಭಕ್ತರು ಜೀಪ್ ನಲ್ಲಿ ಹೋಗುವುದನ್ನು ಕಡ್ಡಾಯ ಮಾಡಬೇಕು. ಉಳಿದ 3 ಕಿ.ಮೀ. ದುರ್ಗಮ ಅರಣ್ಯದ ಸಂಚಾರ ಪಥದ ಎರಡೂ ಬದಿಯಲ್ಲಿ ವನ್ಯಮೃಗಗಳು ಕಾಣುವಂತೆ ಗೋಚರರೇಖೆ (ವ್ಯೂ ಲೈನ್) ಅಂದರೆ ಕಳೆ ತೆಗೆಯುವಂತೆ ಸೂಚಿಸಿದರು. ಅದೇ ರೀತಿ ಮಾದಪ್ಪನ ದರ್ಶನಕ್ಕೆ 7 ಕಿಮೀ ಬೆಟ್ಟ ಹತ್ತಿ ಹೋಗಲು ವರ್ಷವಿಡೀ ಅವಕಾಶ…

Read More

ಬೆಂಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಯು ರಾಜ್ಯದ ನಾಲ್ಕು ಪ್ರಮುಖ ಸಾರಿಗೆ ಸಂಸ್ಥೆಗಳ ಹಾಗೂ ಪೂರ್ವ ಕಿಂಕೋ ನೌಕರರ/ಅಧಿಕಾರಿಗಳ ವೇತನವನ್ನು ಪರಿಷ್ಕರಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಆದೇಶವು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ (NWKRTC) ಮತ್ತು ಕಲ್ಯಾಣ ಕರ್ನಾಟಕ (KKRTC) ಸಾರಿಗೆ ಸಂಸ್ಥೆಗಳಿಗೆ ಅನ್ವಯವಾಗಲಿದೆ. ಮುಖ್ಯಾಂಶಗಳು: ವೇತನ ಏರಿಕೆ ಪ್ರಮಾಣ: ದಿನಾಂಕ 31.03.2025 ರಂದು ಪಡೆಯುತ್ತಿದ್ದ ಮೂಲ ವೇತನಕ್ಕೆ ಶೇ. 12.50 ರಷ್ಟು ಹೆಚ್ಚಳವನ್ನು ನೀಡಲಾಗಿದೆ. ಜಾರಿಗೆ ಬರುವ ದಿನಾಂಕ: ಈ ವೇತನ ಪರಿಷ್ಕರಣೆಯು ಹಳೆಯ ದಿನಾಂಕವಾದ 01.04.2025 ರಿಂದಲೇ ಜಾರಿಗೆ ಬರಲಿದೆ. ನಗದು ಪಾವತಿ: ಪರಿಷ್ಕೃತ ವೇತನವನ್ನು ಜುಲೈ 2026ರ ಮಾಹೆಯ ವೇತನದಲ್ಲಿ ಜಾರಿಗೊಳಿಸಿ ಪಾವತಿಸಲಾಗುವುದು. ಅನ್ವಯಿಸುವಿಕೆ: ಈ ಹೆಚ್ಚಳವು ಎಲ್ಲಾ ಅರ್ಹ ಅಧಿಕಾರಿಗಳು ಮತ್ತು ನೌಕರರ ಉನ್ನತ ವೇತನ ಶ್ರೇಣಿ ಹಾಗೂ ಆಯ್ಕೆ ಶ್ರೇಣಿ (Selection Grade) ಸೇರಿದಂತೆ ಎಲ್ಲಾ ವೇತನ ಶ್ರೇಣಿಗಳಿಗೆ ಅನ್ವಯಿಸುತ್ತದೆ. ಹಿಂಬಾಕಿ (Arrears) ಪಾವತಿ ಕುರಿತು: ಸಾರಿಗೆ ಸಂಸ್ಥೆಗಳು ಕಳೆದ…

Read More