Subscribe to Updates
Get the latest creative news from FooBar about art, design and business.
Author: kannadanewsnow09
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಕ್ಷಣಕ್ಕೊಂದು ತಿರುವು ಸಿಗುತ್ತಿದೆ. ನಾಳೆ (ಶನಿವಾರ) ಮುಖ್ಯಮಂತ್ರಿಯಾಗಿ ನಟ ವಿಜಯ್ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬ ನಿರೀಕ್ಷೆಗಳ ನಡುವೆಯೇ, ಈಗ ಲೋಕಭವನ (ರಾಜಭವನ) ಮೂಲಗಳಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಸಂಖ್ಯಾಬಲದ ಕೊರತೆಯಿಂದಾಗಿ ನಾಳಿನ ಪದಗ್ರಹಣ ಕಾರ್ಯಕ್ರಮ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಟ್ವಿಸ್ಟ್ ಮೇಲೆ ಟ್ವಿಸ್ಟ್: ಕೈತಪ್ಪಿದ ಬೆಂಬಲದ ಪತ್ರ ಸರ್ಕಾರ ರಚನೆಗೆ ಅಗತ್ಯವಿರುವ 118 ಶಾಸಕರ ಮ್ಯಾಜಿಕ್ ಸಂಖ್ಯೆಯನ್ನು ತಲುಪಲು ಟಿವಿಕೆ (TVK) ಪಕ್ಷಕ್ಕೆ ಈಗ ಸಂಕಷ್ಟ ಎದುರಾಗಿದೆ. ವರದಿಗಳ ಪ್ರಕಾರ, ವಿಜಯ್ ಅವರ ಬಳಿ ಸದ್ಯಕ್ಕೆ ಕೇವಲ 116 ಶಾಸಕರ ಬೆಂಬಲವಷ್ಟೇ ಇದೆ. ಪ್ರಮುಖವಾಗಿ: ವಿಸಿಕೆ (VCK) ಮತ್ತು ಐಯುಎಂಎಲ್ (IUML) ಪಕ್ಷಗಳಿಂದ ಅಧಿಕೃತ ಬೆಂಬಲದ ಪತ್ರಗಳು ಇನ್ನು ಲಭ್ಯವಾಗಿಲ್ಲ ಎನ್ನಲಾಗಿದೆ. ಸಂಖ್ಯಾಬಲದ ಸ್ಪಷ್ಟ ಪುರಾವೆ ಇಲ್ಲದ ಹೊರತು ಪ್ರಮಾಣವಚನಕ್ಕೆ ಅವಕಾಶ ನೀಡುವುದಿಲ್ಲ ಎಂಬ ಕಠಿಣ ನಿಲುವಿಗೆ ರಾಜ್ಯಪಾಲರು ಬದ್ಧರಾಗಿದ್ದಾರೆ ಎನ್ನಲಾಗುತ್ತಿದೆ. ಮುಸ್ಲಿಂ ಲೀಗ್ ಶಾಕ್: ಡಿಎಂಕೆಗೆ ಜೈ ಎಂದ ಮೊಯ್ದೀನ್ ವಿಜಯ್ ಅವರಿಗೆ ದೊಡ್ಡ ಹಿನ್ನಡೆಯಾಗಿ…
ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಮರಗಳನ್ನು ತುಂಬಿದ್ದ ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಟಾಟಾ ಏಸ್ ನಲ್ಲಿದ್ದಂತ ಯುವಕನಿಗೆ ಗಂಭೀರ ಗಾಯವಾಗಿರೋದಾಗಿ ತಿಳಿದು ಬಂದಿದೆ. ಶಿರಾಳಕೊಪ್ಪದ ಕಡೆಯಿಂದ ಮರದ ದಿಮ್ಮಿಗಳನ್ನು ತುಂಬಿಕೊಂಡು ಸಾಗರದ ಕಡೆಗೆ ತೆರಳುತ್ತಿದ್ದಂತ ಲಾರಿಯೊಂದು ಉಳವಿಯ ಕೆರೆ ಬಳಿಯಲ್ಲಿನ ಮಾರಿಕಾಂಬ ದೇವಸ್ಥಾನದ ತಿರುವಿನಲ್ಲಿ ಉಳವಿ ಕಡೆಯಿಂದ ತೆರಳುತ್ತಿದ್ದಂತ ಟಾಟಾ ಏಸ್ ಗೆ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಟಾಟಾ ಏಸ್ ಮುಂಭಾಗ ನಜ್ಜುಗುಜ್ಜಾಗಿದೆ. ಲಾರಿ ಡಿಕ್ಕಿಯಾಗಿ ಉಂಟಾದಂತ ಅಪಘಾತದಲ್ಲಿ ಉಳವಿಯ ಐಡಿಯಲ್ ಶಾಮಿಯಾನದ ಆಫ್ರಿದ್(28) ಎಂಬ ಯುವಕನ ಕಾಲುಗಳು ಮುರಿದಿವೆ ಎಂಬುದಾಗಿ ಹೇಳಲಾಗುತ್ತಿದೆ. ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ, ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ದಿರುವುದಾಗಿ ಹೇಳಲಾಗುತ್ತಿದೆ. ಈ ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಸೊರಬ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನವೀನ್ ಭೇಟಿ ನೀಡಿ, ಪರಿಶೀಲಿಸಿ…
ಚೆನ್ನೈ: ದ್ರಾವಿಡ ರಾಜಕಾರಣದ ಭದ್ರಕೋಟೆ ತಮಿಳುನಾಡಿನಲ್ಲಿ ದಶಕಗಳ ನಂತರ ಹೊಸ ಇತಿಹಾಸ ಸೃಷ್ಟಿಯಾಗಿದೆ. ಕಳೆದ ಕೆಲವು ದಿನಗಳಿಂದ ತಮಿಳುನಾಡು ರಾಜಕೀಯದಲ್ಲಿ ಮನೆಮಾಡಿದ್ದ ತೀವ್ರ ಕುತೂಹಲ, ಕಾನೂನು ಹೋರಾಟ ಮತ್ತು ರಾಜಕೀಯ ಹಗ್ಗಜಗ್ಗಾಟಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದ್ದಾರೆ. ಈ ಮೂಲಕ ಬೆಳ್ಳಿತೆರೆಯ ‘ದಳಪತಿ’ ಈಗ ಅಧಿಕೃತವಾಗಿ ರಾಜ್ಯದ ಸಾರಥಿಯಾಗಲು ಸಜ್ಜಾಗಿದ್ದಾರೆ. https://twitter.com/ANI/status/2052748566943469801 ರಾಜಭವನದಿಂದ ಸಿಕ್ಕಿತು ಗ್ರೀನ್ ಸಿಗ್ನಲ್ ಚುನಾವಣಾ ಫಲಿತಾಂಶದ ನಂತರ ಮ್ಯಾಜಿಕ್ ಸಂಖ್ಯೆಯ ಬಲದ ಬಗ್ಗೆ ಸಾಂವಿಧಾನಿಕ ಚರ್ಚೆಗಳು ನಡೆದಿದ್ದವು. ಆದರೆ, ಟಿವಿಕೆ ಪಕ್ಷವು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದಲ್ಲದೆ, ಮಿತ್ರಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಅಗತ್ಯವಿರುವ ಸಂಖ್ಯಾಬಲವನ್ನು (118+) ಸಾಬೀತುಪಡಿಸುವಲ್ಲಿ ಯಶಸ್ವಿಯಾಯಿತು. ವಿಜಯ್ ಅವರು ಸಲ್ಲಿಸಿದ ಹಕ್ಕು ಮಂಡನೆ ಮತ್ತು ಶಾಸಕರ ಬೆಂಬಲ ಪತ್ರವನ್ನು ಕೂಲಂಕಷವಾಗಿ ಪರಿಶೀಲಿಸಿದ ತಮಿಳುನಾಡು ರಾಜ್ಯಪಾಲರು, ಸರ್ಕಾರ ರಚನೆಗೆ ಅಧಿಕೃತ ಆಹ್ವಾನ ನೀಡಿದ್ದಾರೆ.…
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮನೆಮಾಡಿದ್ದ ಕುತೂಹಲ ಮತ್ತು ಕಾನೂನು ಹೋರಾಟಕ್ಕೆ ತೆರೆ ಬಿದ್ದಿದೆ. ನಟ, ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರಿಗೆ ಸರ್ಕಾರ ರಚಿಸಲು ತಮಿಳುನಾಡು ರಾಜ್ಯಪಾಲರು ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದ್ದಾರೆ. ಈ ಮೂಲಕ ದಕ್ಷಿಣದ ಈ ರಾಜ್ಯದಲ್ಲಿ ಹೊಸ ರಾಜಕೀಯ ಪರ್ವ ಆರಂಭವಾಗುವುದು ಈಗ ಖಚಿತವಾಗಿದೆ. ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್ ಮ್ಯಾಜಿಕ್ ಸಂಖ್ಯೆಯ ಬಲ ಮತ್ತು ಮಿತ್ರಪಕ್ಷಗಳ ಬೆಂಬಲದ ಹಿನ್ನೆಲೆಯಲ್ಲಿ ವಿಜಯ್ ಅವರು ಸಲ್ಲಿಸಿದ್ದ ಹಕ್ಕು ಮಂಡನೆಯನ್ನು ಪರಿಶೀಲಿಸಿದ ರಾಜ್ಯಪಾಲರು, ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. ಈ ನಿರ್ಧಾರದೊಂದಿಗೆ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ವಿಜಯ್ ಅಧಿಕಾರಕ್ಕೇರುವುದು ನಿಶ್ಚಿತವಾಗಿದೆ. ನಾಳೆ ನೆಹರೂ ಸ್ಟೇಡಿಯಂನಲ್ಲಿ ಪದಗ್ರಹಣ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಅವರು ನಾಳೆ (ಶನಿವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚೆನ್ನೈನ ಐತಿಹಾಸಿಕ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಈ ಭವ್ಯ ಪದಗ್ರಹಣ ಸಮಾರಂಭ ನಡೆಯಲಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆಗಳು ಸಾಗಿವೆ. ಲಕ್ಷಾಂತರ ಅಭಿಮಾನಿಗಳು ಮತ್ತು ವಿವಿಧ…
ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯದಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ವಿಜಯ್ ಅವರನ್ನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸದ ತಮಿಳುನಾಡು ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ, ಟಿವಿಕೆ ಪದಾಧಿಕಾರಿಯೊಬ್ಬರು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿವಾದದ ಹಿನ್ನೆಲೆ ಏನು? ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಬಹುಮತಕ್ಕೆ ಬೇಕಾದ 118ರ ಮ್ಯಾಜಿಕ್ ಸಂಖ್ಯೆಗಿಂತ 10 ಸ್ಥಾನಗಳು ಕಡಿಮೆ ಇವೆ. ಕಾಂಗ್ರೆಸ್ (5 ಸ್ಥಾನ), ವಿಸಿಕೆ ಮತ್ತು ಎಡಪಕ್ಷಗಳ ಬೆಂಬಲದೊಂದಿಗೆ ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ, ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಪ್ರಮಾಣವಚನಕ್ಕೆ ಅವಕಾಶ ನೀಡಲು ನಿರಾಕರಿಸಿದ್ದಾರೆ. “ಮೊದಲು 118 ಶಾಸಕರ ಬೆಂಬಲವಿರುವ ಅಧಿಕೃತ ಪತ್ರವನ್ನು ಸಲ್ಲಿಸಿ, ನಂತರವಷ್ಟೇ ಪ್ರಮಾಣವಚನಕ್ಕೆ ಆಹ್ವಾನಿಸಲಾಗುವುದು” ಎಂಬುದು ರಾಜ್ಯಪಾಲರ…
ಶಿವಮೊಗ್ಗ: ವಿಶ್ವವಿಖ್ಯಾತ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ಎಸ್. ರಾಮಪ್ಪ ಅವರ 74ನೇ ಜನ್ಮದಿನವನ್ನು ಮೇ 13ರಂದು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಾಗರದ ಸಿಗಂದೂರು ಚೌಡಮ್ಮ ಎಜ್ಯುಕೇಷನಲ್ ಚಾರಿಟೆಬಲ್ ಟ್ರಸ್ಟ್ನ ವಿಜಯಕುಮಾರ್ ಹೆರಬೆಟ್ಟು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಜನ್ಮದಿನವನ್ನು ಆಡಂಬರವಿಲ್ಲದೆ, ಬಡವರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಸೇವಾ ಕಾರ್ಯಗಳ ಮೂಲಕ ಆಚರಿಸಲಾಗುವುದು ಎಂದರು. ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು: ಆರೋಗ್ಯ ಶಿಬಿರ: ಸಹ್ಯಾದ್ರಿ ನಾರಾಯಣ ಆಸ್ಪತ್ರೆ ವತಿಯಿಂದ ಹೃದಯ ರೋಗ ತಪಾಸಣೆ ಮತ್ತು ಶ್ರವಣ ತಪಾಸಣೆ ಶಿಬಿರ. ರಕ್ತದಾನ ಶಿಬಿರ: ರೋಟರಿ ರೆಡ್ಕ್ರಾಸ್ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಸ್ವಯಂಪ್ರೇರಿತ ರಕ್ತದಾನ. ಶಾಲಾ ದತ್ತು ಮತ್ತು ಅಭಿವೃದ್ಧಿ: ‘ಶ್ರೀಕ್ಷೇತ್ರ ಸಿಗಂದೂರಿನ ಚಿತ್ತ ಸರ್ಕಾರಿ ಶಾಲೆಯತ್ತ’ ಯೋಜನೆಯಡಿ ಬೇರಾಳ ಸರ್ಕಾರಿ ಶಾಲೆಗೆ ‘ಬಣ್ಣ…
ಶಿವಮೊಗ್ಗ: “ನಗರಸಭೆಯಲ್ಲಿ ಚುನಾಯಿತ ಸದಸ್ಯರು ಇಲ್ಲ ಎಂದು ಅಧಿಕಾರಿಗಳು ಬೀಗಬಾರದು. ಬಡವರ ಕೆಲಸಗಳನ್ನು ಮಾಡಿಕೊಡಲು ವಿಳಂಬ ಮಾಡಿದರೆ ಅಥವಾ ಜನರನ್ನು ಪದೇಪದೇ ಅಲೆಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು” ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಲಸದಲ್ಲಿ ವಿಳಂಬ: ಕಂದಾಯ ನಿರೀಕ್ಷಕಿಗೆ ತರಾಟೆ ಕಳೆದ ಎರಡೂವರೆ ವರ್ಷಗಳಿಂದ ಸಾರ್ವಜನಿಕರಿಗೆ ‘ಈ-ಸ್ವತ್ತು’ ಮಾಡಿಕೊಡದೆ ಸತಾಯಿಸುತ್ತಿದ್ದ ಕಂದಾಯ ನಿರೀಕ್ಷಕಿ ಮಮತಾ ಅವರನ್ನು ಶಾಸಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. “ಬಡವರ ಕೆಲಸಗಳನ್ನು ಮಾಡುವಲ್ಲಿ ಇಂತಹ ವಿಳಂಬ ನೀತಿ ಅನುಸರಿಸಿದರೆ ಸುಮ್ಮನಿರುವುದಿಲ್ಲ” ಎಂದು ಎಚ್ಚರಿಸಿದರು. ರಸ್ತೆ ಅಗಲೀಕರಣಕ್ಕೆ ಕಟ್ಟುನಿಟ್ಟಿನ ಸೂಚನೆ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಹಣ ಬಿಡುಗಡೆಯಾಗಿದ್ದರೂ ಜಾಗ ಬಿಟ್ಟುಕೊಡಲು ಕೆಲವರು ಹಿಂದೇಟು ಹಾಕುತ್ತಿರುವ ಬಗ್ಗೆ ಅಧಿಕಾರಿಗಳು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು: ಕಾನೂನು ಪ್ರಕಾರ ತಕ್ಷಣವೇ ನೋಟಿಸ್…
ಬೆಂಗಳೂರು: ಸಕಾಲ ಯೋಜನೆಯಡಿ ನೀಡಲಾಗುತ್ತಿರುವ ಕೃಷಿ, ಸಾರಿಗೆ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಸೇವೆಗಳಿಗೆ ಇ-ಆಡಳಿತದ ಮೂಲಕ ಮತ್ತಷ್ಟು ವೇಗ ತುಂಬಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡರು, ಸಕಾಲ ಸೇವೆಗಳನ್ನು ಲಂಚಮುಕ್ತಗೊಳಿಸಲು ಮತ್ತು ವಿಳಂಬಕ್ಕೆ ವಿರಾಮ ಹಾಡಲು ಹಲವು ಕ್ರಾಂತಿಕಾರಿ ಬದಲಾವಣೆಗಳನ್ನು ಘೋಷಿಸಿದ್ದಾರೆ. ಡೇಟಾಬೇಸ್ ಅಪ್ಡೇಟ್ ಮತ್ತು ಆಟೋಮೇಷನ್: ಸಕಾಲದ ಗ್ಯಾರಂಟಿ ಸೇವೆಗಳು ನಿಗದಿತ ಸಮಯಕ್ಕೆ ಜನರಿಗೆ ತಲುಪಬೇಕೆಂದರೆ ಪ್ರತಿಯೊಂದು ಇಲಾಖೆಯ ಮಾಹಿತಿಯು ಬೆರಳ ತುದಿಯಲ್ಲಿರಬೇಕು. ಈ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷಗಳಿಂದ ‘ಸಕಾಲ ಕುಟುಂಬ’ ಡೇಟಾಬೇಸ್ ಅನ್ನು ನಿರಂತರವಾಗಿ ಅಪ್ಡೇಟ್ ಮಾಡಲಾಗುತ್ತಿದೆ. ಶೋಷಣೆಯಿಂದ ಮುಕ್ತಿ: ಆಯ್ದ ಸೇವೆಗಳನ್ನು ‘ಆಟೋಮೇಷನ್’ ಮಾಡುವುದರಿಂದ ಜನರ ಶೋಷಣೆ ತಪ್ಪಲಿದೆ ಮತ್ತು ಲಂಚದ ಹಾವಳಿಗೆ ಮುಕ್ತಿ ಸಿಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ‘ಕುಟುಂಬ’ ಆ್ಯಪ್ಗೆ ಹೊಸ ಸೇರ್ಪಡೆಗಳು: ಸಕಾಲದಲ್ಲಿ ಹತ್ತಾರು ಇಲಾಖೆಗಳಿದ್ದು, ಅನೇಕ ಸೇವೆಗಳನ್ನು ಹೊರಗುತ್ತಿಗೆ ನೀಡಲಾಗಿದೆ. ಆಡಳಿತದಲ್ಲಿ ಶಿಸ್ತು ತರಲು ಈ…
ಬೆಂಗಳೂರು: ನಗರದ ಜಾಲಹಳ್ಳಿ ವಿಭಾಗದ ಸಬ್ ಸ್ಟೇಷನ್ಗಳಲ್ಲಿ ಕೆಪಿಟಿಸಿಎಲ್ (KPTCEL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ದಿನಾಂಕ 10.05.2026 (ಭಾನುವಾರ) ರಂದು ನಗರದ ಹಲವು ಪ್ರಮುಖ ಬಡಾವಣೆಗಳಲ್ಲಿ ಬೆಳಗ್ಗೆ 08:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: 1. ಕೆ.ಹೆಚ್.ಬಿ ಸಬ್ ಸ್ಟೇಷನ್ ವ್ಯಾಪ್ತಿ: ಗರುಡಾ ಮಾಲ್, ಪುಟ್ಟೇನಹಳ್ಳಿ, ಪಾವನಿ ರೆಸಿಡೆನ್ಸಿ, ಸಿಂಟಿಲ್ಲಾ ಅಪಾರ್ಟ್ಮೆಂಟ್, ಯಲಹಂಕ ಇಂಡಸ್ಟ್ರಿಯಲ್ ಏರಿಯಾ, ಪ್ರೆಸ್ಟೀಜ್ ಗಾರ್ಡನ್ ಬಾಯ್ ವಿಲ್ಲಾಸ್, ಚಿಕ್ಕಬೊಮ್ಮಸಂದರ, ಅಲ್ಲಾಳಸಂದ್ರ, ಯಲಹಂಕ ‘ಬಿ’ ಸೆಕ್ಷನ್, ಜೆಪಿಎನ್ ಕಾಲೋನಿ, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಐವಿಆರ್ಐ (IVRI), ಎಸ್ಎಫ್ಎಸ್ 7ನೇ ಹಂತದ ಕೈಗಾರಿಕಾ ಪ್ರದೇಶ, ಚಿತ್ರಾ ಲೇಔಟ್, ಅಟ್ಟೂರ ಲೇಔಟ್, CQAL ಲೇಔಟ್ ಮತ್ತು ಬಿಎಂಟಿಸಿ ಪುಟ್ಟೇನಹಳ್ಳಿ ಪರಿಸರ. 2. ಸೊಲ್ಲದೇವನಹಳ್ಳಿ ಉಪಕೇಂದ್ರ ವ್ಯಾಪ್ತಿ: ತರಬನಹಳ್ಳಿ, ಹುರುಳಿಚಿಕ್ಕನಹಳ್ಳಿ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ, ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೋನಿ,…
ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಹಾಜರಾತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇಲಾಖೆಯ ಎಲ್ಲಾ ನೌಕರರು ಇನ್ನು ಮುಂದೆ ‘ಕರ್ತವ್ಯ’ (Kartavya) ಮೊಬೈಲ್ ಅಪ್ಲಿಕೇಷನ್ ಮೂಲಕವೇ ತಮ್ಮ ದೈನಂದಿನ ಹಾಜರಾತಿಯನ್ನು ದಾಖಲಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAAMS): ಈ ಹೊಸ ವ್ಯವಸ್ಥೆಯು ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAAMS) ತಂತ್ರಾಂಶದ ಭಾಗವಾಗಿದ್ದು, ನೌಕರರ ಹಾಜರಾತಿಯನ್ನು ಡಿಜಿಟಲ್ ರೂಪದಲ್ಲಿ ನಿರ್ವಹಿಸಲು ಸಹಕಾರಿಯಾಗಲಿದೆ. ಅಭಿವೃದ್ಧಿ: ಈ ಆ್ಯಪ್ ಅನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ) ಇಲಾಖೆಯು ಸಿದ್ಧಪಡಿಸಿದೆ. ಮೇ 1 ರಿಂದ ಜಾರಿ: 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ, ಮೇ 1ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಸೌಲಭ್ಯವನ್ನು ಬಳಸಲು ಸರ್ಕಾರ ಆದೇಶಿಸಿದೆ. ನೌಕರರಿಗೆ ಸೂಚನೆ: ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು…













