Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ (ಮಡಿವಾಳ, ಅಗಸ, ದೋಬಿ ) ಸೌಲಭ್ಯ ಪಡೆಯಬಯಸುವವರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದು. ನಗರ ಪ್ರದೇಶದ ವಿಧಾನ ಸಭಾಕ್ಷೇತ್ರಗಳಾದ ಹುಬ್ಬಳ್ಳಿ ಧಾರವಾಡ ಪೂರ್ವ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ಗಳಲ್ಲಿ ಯೋಜನೆಯ ಸೌಲಭ್ಯ ಪಡೆಯಬಯಸುವವರು ಮಡಿವಾಳ ಸಮುದಾಯಕ್ಕೆ ಸೇರಿದವರಾಗಿರಬೇಕು. ಮಡಿವಾಳ ಸಮುದಾಯದ ಅರ್ಜಿದಾರರು ಮಾರ್ಚ್ 6, 2026 ರೊಳಗಾಗಿ ನಿಗಮದ ಜಾಲತಾಣ https://Kmmdc.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 0836-2957829 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು…
ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ರಲ್ಲಿ ಬರುವ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಜನರ (ವಿಶ್ವಕರ್ಮ, ಬಡಿಗೇರ, ಪತ್ತಾರ, ಕಮ್ಮಾರ) ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದು. ನಗರ ಪ್ರದೇಶದ ವಿಧಾನ ಸಭಾಕ್ಷೇತ್ರಗಳಾದ ಹುಬ್ಬಳ್ಳಿ ಧಾರವಾಡ ಪೂರ್ವ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ಗಳಲ್ಲಿ ಯೋಜನೆಯ ಸೌಲಭ್ಯ ಪಡೆಯಬಯಸುವವರು ವಿಶ್ವಕರ್ಮ ಸಮುದಾಯಕ್ಕೆ ಸೇರಿದವರಾಗಿರಬೇಕು. ವಿಶ್ವಕರ್ಮ ಸಮುದಾಯದ ಅರ್ಜಿದಾರರು ಮಾರ್ಚ 7, 2026 ರೊಳಗಾಗಿ ನಿಗಮದ ಜಾಲತಾಣ https://Kmcdc.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 0836-2957829 ಗೆ ಸಂಪರ್ಕಿಸಬಹುದು ಎಂದು ನಿಗಮದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ರ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ, ಬಿ.ಎಸ್.ಡಬ್ಲೂö್ಯ, ಎಂ.ಎ, ಎಂ.ಕಾA, ಎಂ.ಎಸ್ಸಿ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂö್ಯ, ಎಂ.ಲಿಬ್.ಐ.ಎಸ್ಸಿ, ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್, ಎಕ್ಸ್ ಸರ್ವೀಸ್ ಮನ್ ವಿದ್ಯಾರ್ಥಿಗಳು, ಆಟೋ, ಕ್ಯಾಬ್ ಡ್ರೆöÊವರ್ಸ್ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರಲಿದೆ. ಕೋವಿಡ್ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಪೂರ್ಣಶುಲ್ಕ ವಿನಾಯಿತಿ ಇರಲಿದೆ. ಮಾ.30 ಪ್ರವೇಶಾತಿ ಪಡೆಯಲು ಕೊನೆಯ ದಿನ. ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಎಲ್ಲಾ ವಿವರಗಳನ್ನು ನೀಡಿದೆ. ವಿದ್ಯಾರ್ಥಿಗಳು ಅದರನ್ವಯ ಆನ್ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವಾಗ ತೊಂದರೆಯಾದಲ್ಲಿ ಆನ್-ಲೈನ್ ಸಹಾಯವಾಣಿ…
ಬಳ್ಳಾರಿ : ಬೇಸಿಗೆ ಆರಂಭವಾಗಲಿದ್ದು, ಬಿಸಲಿನ ತಾಪಮಾನದ ಅಲೆ ಹೆಚ್ಚಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆಯ ಮುನ್ಸೂಚನೆ ಇರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಸಲಹೆ ನೀಡಿದ್ದಾರೆ. ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಕೆಳಕಂಡಂತೆ ತಿಳಿಸಿದ್ದಾರೆ. ಏನು ಮಾಡಬೇಕು: ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ್ಗೆ ನಿಧಾನವಾಗಿ ಧಾರಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಿರಿ. ಹಣ್ಣಿನ ರಸ, ಪಾನಕಗಳನ್ನು ಕುಡಿಯಿರಿ. ಹತ್ತಿಯ ನುಣುಪಾದ ಬಟ್ಟೆ, ಟಿಶ್ಯೂ ಕರವಸ್ತ್ರದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ, ಎಳೆನೀರು ಕುಡಿಯಬಹುದು. ಬೆಚ್ಚಗಿನ, ಮಸಾಲೆ ರಹಿತ, ಶುದ್ದ ಸಾತ್ವಿಕ ಆಹಾರ ಸೇವಿಸಬೇಕು. ಗಾಳಿಯಾಡುವಂತಹ ಪಾದರಕ್ಷೆ ಧರಿಸಿರಿ.…
ಶಿವಮೊಗ್ಗ: ದಿನಾಂಕ 22-02-2026ರಂದು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಕೈಗೊಳ್ಳುತ್ತಿರುವುದರಿಂದ ಸೊರಬ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10:00 ರಿಂದ ಸಂಜೆ 5:00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸೊರಬ ತಾಲ್ಲೂಕಿನ ಮೆಸ್ಕಾಂ ಎಇಇ ಅವರು, ದಿನಾಂಕ:22.02.2026 ರಂದು ಮವಿಸಕಂ, ಸೊರಬ ವತಿಯಿಂದ ಸೊರಬ ಪಟ್ಟಣದಲ್ಲಿ ಟೌನ್ ಫೀಡರ್ನ ಬೇರ್ಪಡಿಸುವ ಕಾಮಗಾರಿ ಹಾಗೂ ಇತರೆ ನಿರ್ವಹಣಾ ಕಾಮಗಾರಿಯನ್ನು ತುರ್ತಾಗಿ ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ ಸೊರಬ ಶಾಖಾ ವ್ಯಾಪ್ತಿಗೆ ಒಳಪಡುವ ಎಫ್ 21 ಸೊರಬ ಪಟ್ಟಣ ಸಂದಂತೆ ಎಫ್ 2 ಸಾಲೇ ಕೊಮ್ಮ, ಎಫ್-3 ಬಳ್ಳಿಬೈಲು, ಎಫ್ 4 ಓಟೂರು ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ ಚಿಕ್ಕಾವಲಿ, ಎಫ್15 ಕಲ್ಲಂಬಿ ಎನ್ಜೆ, ಎಫ್-16 ಕಡಸೂರು ಎನ್ಜೆ, ಎಫ್-17 ಯಲವಳ್ಳಿ, ಎನ್ಜೆವ್ರ, ಎಫ್-9 ಬಿಳಾಗಿ, ಎಫ್-11 ಮಂಚಿ, ಎಫ್-12 ಉರಗನಹಳ್ಳಿ,…
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಚಿತ್ರೀಕರಣಕ್ಕೆ ಅನುಮತಿ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆ ಮೂಲಕ ದೇವಸ್ಥಾನಗಳಲ್ಲಿ ಚಿತ್ರೀಕರಣ ಮಾಡಬೇಕೆಂದರೇ ಅನುಮತಿ ಪಡಯಲೇಬೇಕಿದೆ. ರಾಜ್ಯದ ಎಲ್ಲಾ ‘ಎ’ ಮತ್ತು ‘ಬಿ’ ಗ್ರೇಡ್ ದೇವಾಲಯಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ, ಸುದ್ದಿ ವಾಹಿನಿಗಳು ಹೀಗೆ ಯಾವುದೇ ತರಹದ ಚಿತ್ರೀಕರಣ ಮಾಡಬೇಕಾಗಿದ್ದಲ್ಲಿ, ಮುಜರಾಯಿ ಇಲಾಖೆಯ ಅನುಮತಿ ಪಡೆದು ಶುಲ್ಕ ಪಾವತಿಸುವುದು ಕಡ್ಡಾಯ ಎಂಬುದಾಗಿ ಸರ್ಕಾರ ಆದೇಶದಲ್ಲಿ ತಿಳಿಸಿದೆ. https://twitter.com/KarnatakaVarthe/status/2024833011049693681 https://kannadanewsnow.com/kannada/attention-state-government-employees-here-is-the-new-syllabus-for-computer-based-test-clt/ https://kannadanewsnow.com/kannada/drug-peddler-arrested-in-bengaluru-35-grams-of-narcotics-worth-rs-3-8-lakh-seized/
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬಡ್ತಿ, ಮುಂಬಡ್ತಿ ಸೇರಿದಂತೆ ವಿವಿಧ ಬಡ್ತಿಗಳನ್ನು ಪಡೆಯೋದಕ್ಕೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ( Computer Literacy Test-CLT) ತೇರ್ಗಡೆಯಾಗುವುದು ಕಡ್ಡಾಯವಾಗಿದೆ. ಹಾಗಾದ್ರೆ ಈ ಪರೀಕ್ಷೆಯ ಹೊಸ ಪಠ್ಯಕ್ರಮ ಏನು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಇಂದು ಈ ಕುರಿತಂತೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಅದರಲ್ಲಿ ಆದರೆ, ಕರ್ನಾಟಕ ನಾಗರಿಕ ಸೇವೆಗಳ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012 ರ ನಿಯಮ 5 ರ ಅಡಿಯಲ್ಲಿ, ಕರ್ನಾಟಕ ಸರ್ಕಾರವು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗೆ ಗರಿಷ್ಠ ಅಂಕಗಳೊಂದಿಗೆ ಅಂತಹ ಅವಧಿಯ ಪತ್ರಿಕೆಗಳ ಸಂಖ್ಯೆಯನ್ನು ಒಳಗೊಂಡಿರುವ ಪಠ್ಯಕ್ರಮವನ್ನು ಅಧಿಸೂಚನೆ ಮಾಡಬಹುದು. ಅಂತೆಯೇ, ಕರ್ನಾಟಕ ಸರ್ಕಾರವು ಹಿಂದಿನ ಅಧಿಸೂಚನೆ ಸಂಖ್ಯೆ: DPAR 43 SCR 2008, ದಿನಾಂಕ: 18.12.2012 ಅನ್ನು ರದ್ದುಗೊಳಿಸಿ, ಕರ್ನಾಟಕ ನಾಗರಿಕ ಸೇವೆಗಳ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು, 2012 ರ ಅಡಿಯಲ್ಲಿ ನಡೆಸಲಾದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಾಗಿ ಈ ಕೆಳಗಿನ ವೇಳಾಪಟ್ಟಿಯಲ್ಲಿ ನಿರ್ದಿಷ್ಟಪಡಿಸಿದಂತೆ ಪಠ್ಯಕ್ರಮವನ್ನು ಈ ಮೂಲಕ…
ಬೆಂಗಳೂರು: ಭಾರತ ದೇಶವು ಗಾಂಧೀಜಿಯವರ ಆದಿಯಾಗಿ ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯವನ್ನು ಪಡೆದರೂ ಸಹ ಇಂದಿಗೂ ಭ್ರಷ್ಟ ರಾಜಕಾರಣಿಗಳಿಂದ ಅತಂತ್ರರಾಗಿಯೇ ಉಳಿದಿದ್ದೇವೆ ಎಂಬುದಾಗಿ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯ ಪಟ್ಟಿದ್ದಾರೆ. ಇಂಂದು ಅವರು ಪಕ್ಷವು ಏರ್ಪಡಿಸಿದ್ದ ” ಜಿಬಿಎ ಚುನಾವಣೆಯಲ್ಲಿ ವಕೀಲರುಗಳ ಪಾತ್ರ ” ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಾಮಾಣಿಕ ರಾಜಕಾರಣದಲ್ಲಿ ವಕೀಲರುಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಭ್ರಷ್ಟಮುಕ್ತ , ಪಾರದರ್ಶಕ , ವಂಶ ಪಾರಂಪರ್ಯ ರಾಜಕಾರಣವನ್ನು ಹೊಡೆದೋಡಿಸಲು ಸಾಧ್ಯ ಎಂದರು. ದೇಶದಲ್ಲಿ ಪರ್ಯಾಯ ರಾಜಕಾರಣ ವ್ಯವಸ್ಥೆಯನ್ನು ತರಲೇಬೇಕೆಂಬ ಮಹಾದಾಶೆಯಿಂದ ಅರವಿಂದ್ ಕೇಜ್ರಿವಾಲ್ ರವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷವು ಸ್ಥಾಪನೆಯಾಗಿದೆ. ಬೆಂಗಳೂರಿನಲ್ಲಿ ಮುಂಬರುವ ಎಲ್ಲಾ ನಗರ ಪಾಲಿಕೆಗಳ ಚುನಾವಣೆಗಳಲ್ಲಿ ವಕೀಲರುಗಳು ಹೆಚ್ಚೆಚ್ಚು ಸಂಖ್ಯೆಯಲ್ಲಿ ಪಕ್ಷದ ಅಭ್ಯರ್ಥಿಗಳಾಗಿ, ಬೆಂಬಲಿಗರಾಗಿ, ಪೋಷಕರಾಗಿ ಕೈಜೋಡಿಸಬೇಕು . ಕಳೆದ ಹಲವು ದಶಕಗಳಿಂದ ಸಂಪೂರ್ಣ ಭ್ರಷ್ಟಾಚಾರದಿಂದ ಮುಳುಗಿ ಹೋಗಿರುವ ಬೆಂಗಳೂರಿನ ಮಹಾನಗರ ಪಾಲಿಕೆಯು ನಾಗರಿಕರಿಗೆ ಬದುಕಲು ಸಾಧ್ಯವೇ ಆಗದಂತಹ ಪರಿಸ್ಥಿತಿಗೆ ತಳ್ಳಿದ್ದಾರೆ.…
ಧಾರವಾಡ: ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 7 ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಸಬೇಕು. ರೈತರಿಗೆ ಅನುಕೂಲವಾಗುವಂತೆ, ಆದಷ್ಟೂ ಹಗಲು ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಹೆಸ್ಕಾಂ ಸಂಸ್ಥೆಯ ವಿವಿಧ ಕಾಮಗಾರಿಗಳ ಪ್ರಗತಿ ಹಾಗೂ ಬೇಸಿಗೆ ಅವಧಿಯ ವಿದ್ಯುತ್ ಪೂರೈಕೆ ಸಿದ್ದತೆ ಕುರಿತ ಹೆಸ್ಕಾಂ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 67 ಕೃಷಿ ವಿದ್ಯುತ್ ಫೀಡರ್ಗಳಿವೆ. ಇದರಲ್ಲಿ 41 ಫೀಡರ್ಗಳಿಂದ ಬೆಳಿಗ್ಗೆ 7 ರಿಂದ ಸಂಜೆ 4 ಗಂಟೆಯೊಳಗೆ, 12 ಫೀಡರ್ಗಳಿಗೆ ಸಂಜೆ 6 ರಿಂದ ರಾತ್ರಿ 9 ಗಂಟೆ ಹಾಗೂ ರಾತ್ರಿ 10 ರಿಂದ ಮಧ್ಯರಾತ್ರಿ 1 ಗಂಟೆಯೊಳಗೆ ಮತ್ತು 8 ಫೀಡರ್ಗಳಿಂದ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮತ್ತು…
ಸಾಕಷ್ಟು ಲಾಭ ಗಳಿಸಿ. ಕೆಲವರು ದೊಡ್ಡ ಉದ್ಯಮಿಯಾಗಬೇಕೆಂಬ ಆಸೆಯಿಂದ ಸ್ವಂತ ಉದ್ಯಮ ಆರಂಭಿಸುತ್ತಾರೆ. ಕೈತುಂಬಾ ಸಂಬಳದಲ್ಲಿ ಒಳ್ಳೆಯ ಕಾಲದಲ್ಲಿರುವವರೂ ಆ ಕೆಲಸ ಬಿಟ್ಟು ಸ್ವಂತ ವ್ಯಾಪಾರದಲ್ಲಿ ಕೋಟಿಗಟ್ಟಲೆ ಗಳಿಸುವ ಕನಸು ಹೊತ್ತು ಬರುತ್ತಾರೆ. ಆದರೆ, ಅವರ ಕೆಟ್ಟ ಸಮಯ ಅಥವಾ ಯಾವುದಾದರೂ ಕಾರಣ, ಅವರು ತಮ್ಮದೇ ಆದ ವ್ಯವಹಾರವನ್ನು ಪ್ರಾರಂಭಿಸುತ್ತಾರೆ ಮತ್ತು ತುಂಬಾ ಕಷ್ಟಪಡುತ್ತಾರೆ. ಅವರು ಪ್ರಾರಂಭಿಸಿದ ವ್ಯಾಪಾರದಿಂದ ಸಂಪೂರ್ಣವಾಗಿ ಹೊರಬರಲು ಸಾಧ್ಯವಾಗುತ್ತಿಲ್ಲ ಮತ್ತು ವ್ಯಾಪಾರವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ನಾವು ಅದರಲ್ಲಿ ಸಾಕಷ್ಟು ಹಣವನ್ನು ಬಂಡವಾಳವಾಗಿ ಹೂಡಿಕೆ ಮಾಡಿದ್ದೇವೆ. ಚಿನ್ನಾಭರಣಗಳನ್ನು ಅಡಮಾನವಿಟ್ಟು ವ್ಯಾಪಾರ ಆರಂಭಿಸಿದ್ದೇವೆ. ಆ ವ್ಯಾಪಾರದಲ್ಲಿ ಲಾಭ ಪಡೆದು ಸಾಲದ ಸಮಸ್ಯೆ ಬಗೆಹರಿಸಿದರೆ ಮಾತ್ರ ಸಮಾಧಾನದ ಪರಿಸ್ಥಿತಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ…














