Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಹೊಸ ಶಆಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಾಧ್ಯಂತ 2,200 ಸರ್ಕಾರಿ ಶಾಲೆಗಳಿಗೆ ತರಗತಿ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಮುಖ್ಯಮಂತ್ರಿಗಳು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ. 2025-26ನೇ ಸಾಲಿನ ಬಜೆಟ್ ಸಂಖ್ಯೆ 116 ರ ಅಡಿಯಲ್ಲಿ ಘೋಷಣೆಯ ಪುಕಾರ, “ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ರೂ. 125.00 ಕೋಟಿ ಮತ್ತು ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ರೂ.50.00 ಕೋಟಿಗಳನ್ನು ನಿಗದಿಪಡಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2025-26ನೇ ಸಾಲಿನ…
ಬೆಂಗಳೂರು: ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಹೊಸದಾಗಿ ಮುಖ; ಇಂಜಿನಿಯರ್ ಹಾಗೂ ಅಧೀಕ್ಷಕ ಇಂಜಿನಿಯರ್ ಕಛೇರಿಗಳನ್ನು ಸೃಜಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಉಪ ಮಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ದಿನಾಂಕ: 18.11.2025 ರಂದು ಜರುಗಿದ ಸಭೆಯಲ್ಲಿ ನೀಡಿದ ನಿರ್ದೇಶನದಂತೆ ಮೇಕೆದಾಟು ಯೋಜನೆಯನ್ನು ಯಾವುದೇ ಅಡೆತಡೆ ಇಲ್ಲದೇ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರಸ್ಥಾನವನ್ನಾಗಿಸಿ, ಅಲ್ಲಿ ಒಂದು ಪ್ರತ್ಯೇಕ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಹೊಸದಾಗಿ ಒಂದು ವಲಯ ಕಛೇರಿಯನ್ನು ಮತ್ತು ಅಧೀಕ್ಷಕ ಇಂಜಿನಿಯರ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ಹೊಸದಾಗಿ ಒಂದು ವೃತ್ತ ಕಛೇರಿಯನ್ನು ಸೃಜಿಸಿ ಕಾರ್ಯನಿರ್ವಹಿಸಲು ಸೂಕ್ತ ಕ್ರಮವಹಿಸುವಂತೆ ನಿರ್ಣಯಿಸಲಾಗಿರುತ್ತದೆ. ದಿನಾಂಕ: 10.12.2025 ರ ಪತ್ರದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಕಾವೇರಿ ನೀರಾವರಿ ನಿಗಮ ನಿಯಮಿತ ಇವರು ಸರ್ಕಾರಕ್ಕೆ ಪುಸ್ತಾವನೆ ಸಲ್ಲಿಸಿ, ಮಾನ್ಯ ಉಪ ಮಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ದಿನಾಂಕ: 18.11.2025ರ ಸಭೆಯ ನಿರ್ಣಯದಂತೆ…
ಹಾವೇರಿ : ಶಿಗ್ಗಾಂವ ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ನಾನು ಕಂಡ ಕನಸು ಇಂದು ಬಹುತೇಕ ಸಾಕಾರಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಶಿಗ್ಗಾಂವಿ ತಾಲೂಕಿಗೊಂದು ಸಾರಿಗೆ ಇಲಾಖೆಯ ನೂತನ ಬಸ್ ಘಟಕ ಹಾಗೂ ವಾಹನ ಚಾಲನಾ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಅತ್ಯಂತ ಅಗತ್ಯ ಎಂದು ಭಾವಿಸಿ, ನಾನು ಸಿಎಂ ಆಗಿದ್ದ ಅವಧಿಯಲ್ಲಿ 28 ಕೋಟಿ ರೂ. ಬಿಡುಗಡೆಗೊಳಿಸಿದ ಕಾರಣ, ಇದೀಗ ಆ ಘಟಕ ಲೋಕಾರ್ಪಣೆಯಾಗಿದೆ. ಈ ಘಟಕ ಲೋಕಾರ್ಪಣೆಯಾದ ಕಾರಣದಿಂದ, ಕ್ಷೇತ್ರದ ಜನಸಾಮಾನ್ಯರು ಮತ್ತು ವಿದ್ಯಾರ್ಥಿಗಳಿಗೆ ಸುಗಮ ಬಸ್ ಸಂಚಾರದ ಅನುಕೂಲವನ್ನು ಒದಗಿಸಲಿದೆ. ವಾಹನ ಚಾಲನಾ ತರಬೇತಿ ಕೇಂದ್ರದ ಮೂಲಕ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ದೊಡ್ಡ ಮಟ್ಟದ ನೆರವು ನೀಡಲಿದೆ. ಶಿಗ್ಗಾಂವಿ ಕ್ಷೇತ್ರದ ಪ್ರಗತಿಯಲ್ಲಿ ಇದೊಂದು ಮಹತ್ವದ ಹೆಜ್ಜೆ. ಈ ಅಭಿವೃದ್ಧಿ ಕಾರ್ಯ ಜನರಿಗೆ ತಲುಪಿದಾಗ ಮಾತ್ರ ನನ್ನ ಶ್ರಮ ಸಾರ್ಥಕ ಎಂದು ತಿಳಿಸಿದ್ದಾರೆ. https://kannadanewsnow.com/kannada/development-of-spice-park-on-ppp-model-in-chikkamagalur-minister-ramalingareddy/ https://kannadanewsnow.com/kannada/big-news-attention-state-government-employees-just-apply-for-the-arogya-sanjeevini-yojana-like-this/
ಬೆಳಗಾವಿ ಸುವರ್ಣ ವಿಧಾನಸೌಧ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕ ಸಚಿವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಟಿ.ಡಿ ಇವರು ಸಾಂಬಾರು ಪದಾರ್ಥಗಳ ರಫ್ತು ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸೂಕ್ತವಾದ ಮೂಲ ಸೌಕರ್ಯಕ್ಕೆ ಸ್ಪೈಸ್ ಪಾರ್ಕ್ ಅಗತ್ಯವಾಗಿದ್ದು, ಆದಷ್ಟು ಬೇಗ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಬೇಕೆಂದು ವಿಧಾನಸಭೆಯಲ್ಲಿ ಮನವಿ ಮಾಡಿದರು. ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಗುರುತಿಸಲಾಗಿದ್ದ ಜಾಗದ ಭೌತಿಕ ಪರಿಶೀಲನೆಯನ್ನು ಸಾಂಬಾರು ಮಂಡಳಿ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಕೈಗೊಂಡಾಗ, ಸದರಿ ಜಾಗವು ಸ್ಪೈಸ್ ಪಾರ್ಕ್ ನಿರ್ಮಾಣ ಮಾಡಲು ಸೂಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸೂಕ್ತವಾದ ಪರ್ಯಾಯ ಜಾಗವನ್ನು ನೀಡಲು ಕೋರಲಾಗಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಹೋಬಳಿ…
ಬೆಳಗಾವಿ ಸುವರ್ಣ ವಿಧಾನಸೌಧ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ, ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಅಬ್ಬಯ್ಯ ಪ್ರಸಾದ್ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಮತ್ತು ಇನ್ನುಳಿದ ಪ್ರದೇಶವನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆ ಎಂಬುದಾಗಿ ಮುಂದುವರೆಸಲು ದಿನಾಂಕ: 21-01-2025ರಂದು ಪ್ರಾಥಮಿಕ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಲಾಗಿರುತ್ತದೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಆಗಿರುವುದಿಲ್ಲ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಆಕ್ಷೇಪಣೆ/ಸಲಹೆಗಳ ಕುರಿತ ವರದಿಯನ್ನು ಪೌರಾಡಳಿತ ನಿರ್ದೇಶಕರಿಂದ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ವರದಿ ಸಿದ್ದಪಡಿಸಿ ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಲಾಗಿದೆ. ಆದರೆ ಇದೂವರೆಗೂ ರಾಜ್ಯಪಾಲರಿಂದ ಅನುಮೋದನೆ ಬಂದಿರುವುದಿಲ್ಲ.…
ಬೆಳಗಾವಿ ಸುವರ್ಣವಿಧಾನಸೌಧ : ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಡಿ.12ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತ ಪಡಿಸಿಕೊಳ್ಳತಕ್ಕದ್ದು” ಎಂದಿದ್ದು ಕಾಯ್ದೆಯ ಅನುಷ್ಠಾನ ಜವಾಬ್ದಾರಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ. ಇದು ನಿರಂತರ…
ಬೆಳಗಾವಿ ಸುವರ್ಣಸೌಧ: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ, ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿ ಮಾಡುವುದಾಗಿ ಹೇಳಿ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್ ನೀಡಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಲಿಖಿತ ಉತ್ತರ ನೀಡಿದರು. ರಾಜ್ಯದ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಮೇಲ್ವಿಚಾರಕರಿಗೆ ನಿಗದಿತ ಸಮಯಕ್ಕೆ ವೇತನ ಪಾವತಿಸಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳೆದ ನವೆಂಬರ್ ಮಾಹೆಯಲ್ಲಿ ನಿರ್ದೇಶನ ನೀಡಲಾಗಿದೆ. ಅದರಂತೆ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿ ತೆರಿಗೆ ಬೇಡಿಕೆ ಕಡಿಮೆ ಇರುವುದರಿಂದ ಗ್ರಂಥಾಲಯ ಮೇಲ್ವಿಚಾರಕರಿಗೆ ವೇತನ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಕೊರತೆ ಇರುವುದರಿಂದ ಅಂತಹ ಜಿಲ್ಲೆಗಳಲ್ಲಿ ಬಾಕಿ ವೇತನವನ್ನು ಪಾವತಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿಗೆ ಸಂಬಂಧಿಸಿದಂತೆ 2025-26…
ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಹೊಸ ಶಆಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಾಧ್ಯಂತ 2,200 ಸರ್ಕಾರಿ ಶಾಲೆಗಳಿಗೆ ತರಗತಿ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಮುಖ್ಯಮಂತ್ರಿಗಳು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ. 2025-26ನೇ ಸಾಲಿನ ಬಜೆಟ್ ಸಂಖ್ಯೆ 116 ರ ಅಡಿಯಲ್ಲಿ ಘೋಷಣೆಯ ಪುಕಾರ, “ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿಗಳು, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿಗಾಗಿ ರೂ. 125.00 ಕೋಟಿ ಮತ್ತು ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ರೂ.50.00 ಕೋಟಿಗಳನ್ನು ನಿಗದಿಪಡಿಸಲಾಗಿದೆ. ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2025-26ನೇ ಸಾಲಿನ…
ಬೆಳಗಾವಿ : “ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, “ಅದರ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ” ಎಂದು ತಿಳಿಸಿದರು. ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ ನಿನ್ನೆ ಡಿನ್ನರ್ ಸಭೆ ಮಾಡಿದ್ದೀರಿ ಎಂದು ಕೇಳಿದಾಗ, “ನಾನು ಯಾವುದೇ ಡಿನ್ನರ್ ಮೀಟಿಂಗ್ ಮಾಡಿಲ್ಲ. ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ…
1)ಸಾಮಾನ್ಯವಾಗಿ ನಾವೆಲ್ಲರೂ ಕೂಡ ಯಾವುದೇ ಒಂದು ಒಳ್ಳೆಯ ಕೆಲಸ ಮಾಡಬೇಕು ಎಂದರೆ ನೀವು ದೇವರ ಮೊರೆ ಹೋಗುವುದು ಸತ್ಯ ಹೌದು ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಬ್ಬರು ಎಲ್ಲ ದೇವಾನುದೇವತೆ ಗಳನ್ನು ಅಷ್ಟೇ ಭಕ್ತಿಯಿಂದ ಆರಾಧನೆ ಮಾಡುತ್ತಾರೆ. 2)ಅವರು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಅಭಿವೃದ್ಧಿ ಯಶಸ್ಸು ಸಿಗುತ್ತದೆ ಎನ್ನುವ ನಂಬಿಕೆ ಅವರಲ್ಲಿ ಇದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ,…














