Author: kannadanewsnow09

ಹೈದರಾಬಾದ್: ಆಘಾತಕಾರಿ ಘಟನೆಯೊಂದರಲ್ಲಿ, ತೆಲಂಗಾಣದ ಮೇಡಕ್‌ನಲ್ಲಿ ಕೇವಲ 22 ರೂ. ಸಾಲದ ಆರೋಪದ ಮೇಲೆ ವ್ಯಕ್ತಿಯೊಬ್ಬನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಮೇಡಕ್ ಪೊಲೀಸರು ಮಂಗಳವಾರ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಉತ್ತರ ಪ್ರದೇಶದ ಇಬ್ಬರು ಪುರುಷರು ದಿನಗೂಲಿ ಕೆಲಸಕ್ಕಾಗಿ ಮೇಡಕ್‌ಗೆ ವಲಸೆ ಬಂದಿದ್ದರು. ಒಂದು ದಿನದ ಕೆಲಸದ ನಂತರ, ಅವರು ಸಂಜೆ ತಮ್ಮ ಸಂಪಾದನೆಯೊಂದಿಗೆ ಮದ್ಯವನ್ನು ಕುಡಿಯುತ್ತಿದ್ದರು. ಮೊಹಮ್ಮದ್ ಸಿರಾಜ್ ಮತ್ತು ಮಹೇಶ್ ಮತ್ತು ಇನ್ನೊಬ್ಬ ವ್ಯಕ್ತಿ ರವಿಕುಮಾರ್ ಒಂದೇ ಕೊಠಡಿಯನ್ನು ಹಂಚಿಕೊಂಡು ದಿನಗೂಲಿ ಕೆಲಸದಿಂದ ಜೀವನ ಸಾಗಿಸುತ್ತಿದ್ದರು. ಕಳೆದ ಗುರುವಾರ ಸಂಕ್ರಾಂತಿ ದಿನದಂದು, ಅವರು ಮದ್ಯವನ್ನು ಖರೀದಿಸಿ, ಮರದ ಕೆಳಗೆ ಕುಳಿತು ಕುಡಿಯಲು ಪ್ರಾರಂಭಿಸಿದರು. ನಂತರ ಮಹೇಶ್ ಸಿರಾಜ್‌ನ ಹಳೆಯ 22 ರೂ. ಸಾಲವನ್ನು ಮರುಪಾವತಿಸುವಂತೆ ಒತ್ತಾಯಿಸಿದಾಗ ತೀವ್ರ ವಾಗ್ವಾದ ನಡೆಯಿತು. ಕುಡಿತದ ಕೋಪದಲ್ಲಿ, ಮಹೇಶ್ ಸಿರಾಜ್‌ನ ತಲೆಯನ್ನು ಹಿಡಿದು ಮರಕ್ಕೆ ಹೊಡೆದನು. ನಂತರ ಅವನು ಹತ್ತಿರದ ಕಲ್ಲನ್ನು ತಂದು ಅವನ ತಲೆಗೆ ಬಲವಂತವಾಗಿ…

Read More

ಬೆಂಗಳೂರು: ಆನ್ ಲೈನ್ ವಂಚಕರು ಜನರನ್ನು ವಂಚಿಸೋದಕ್ಕೆ ವಿವಿಧ ದಾರಿಗಳನ್ನು ಹಿಡಿಯುತ್ತಿದ್ದಾರೆ. ಈಗ ಹೊಸದೊಂದು ದಾರಿ ಕಂಡುಕೊಂಡಿರುವಂತ ವಂಚಕರು, ನಿಮ್ಮ ಮೊಬೈಲ್ ಗಳಿಗೆ ಮೆಸೇಜ್ ಕಳಿಸ್ತಾ ಇದ್ದಾರೆ. ಒಂದು ವೇಳೆ ನೀವು ಓಪನ್ ಮಾಡಿದ್ದೇ ಆದಲ್ಲಿ, ನಿಮ್ಮ ಬ್ಯಾಂಕ್ ಖಾತೆ ಸೈಬರ್ ವಂಚಕರ ಪಾಲಾಗೇ ಬಿಡುತ್ತೆ. ಅದು ಹೇಗೆ.? ಪೊಲೀಸರ ಎಚ್ಚರಿಕೆ ಏನು ಅಂತ ಮುಂದೆ ಓದಿ. ಆನ್ ಲೈನ್ ವಂಚನೆ ಬಗ್ಗೆ ಕರ್ನಾಟಕ ಪೊಲೀಸರು ಮಹತ್ವದ ಮಾಹಿತಿಯನ್ನು ಜನರಿಗಾಗಿ ಬಿಡುಗಡೆ ಮಾಡಿದ್ದಾರೆ. ಆ ಪತ್ರಿಕಾ ಪ್ರಕಟಣೆಯಲ್ಲಿ ವಂಚಕರು RAT(Remote access tool) ಗಳ ಸಹಾಯದಿಂದ APK file ಅಥವಾ App ಸಿದ್ಧಪಡಿಸಿ, What’sApp ಅಥವಾ text message ಮುಖಾಂತರ ಬ್ಯಾಂಕ್‌ ಖಾತೆಗಳಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗಳಿಗೆ ಕಳುಹಿಸಿಕೊಡುತ್ತಿದ್ದು, ಅದನ್ನು ಓಪನ್ ಮಾಡಿದಲೆ ಸಾರ್ವಜನಿಕರಿಗೆ ಬರುವ ಎಲ್ಲಾ Text message ಗಳು ವಂಚಕರ ಮೊಬೈಲ್ ಗಳಿಗೆ Automatically, Message forwarding ಆಗುತ್ತಿವೆ ಎಂಬ ಆಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ಇನ್ನೂ…

Read More

ಕೊಪ್ಪಳ: ನಿನ್ನೆ ಜನಸಂಪರ್ಕ ಸಭೆಯ ವೇಳೆಯಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮೇಲೆ ಕಲ್ಲೆಸೆತ ಮಾಡಲಾಗಿತ್ತು. ಈ ಘಟನೆ ಸಂಬಂಧ ಬಸವರಾಜ ಮಡಿವಾಳರ ವಿರುದ್ಧ ಪ್ರಕರಣ ದಾಖಲಾಗಿದೆ. ನಿನ್ನೆ ಕೊಪ್ಪಳದ ಬೆಣಕಲ್ ಗ್ರಾಮದಲ್ಲಿ ಬಸವರಾಜ ರಾಯರೆಡ್ಡಿ ಅವರು ಜನಸಂಪರ್ಕ ಸಭೆ ನಡೆಸುತ್ತಿದ್ದಂತ ಸಂದರ್ಭದಲ್ಲಿ ಅವರ ಮೇಲೆ ಕಲ್ಲೆಸೆತ ಉಂಟಾಗಿತ್ತು. ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕು ಬೆಣಕಲ್ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಬೆಣಕಲ್ ಪಿಡಿಓ ಚನ್ನಬಸಪ್ಪ ದೂರಿನ ಅನ್ವಯ ಕೊಪ್ಪಳದ ಕುಕನೂರು ಠಾಣೆಯಲ್ಲಿ ಬಸವರಾಜ ಮಡಿವಾಳರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/nationwide-bank-employee-strike-tomorrow-disruptions-in-banking-services-possible/

Read More

ನವದೆಹಲಿ: ಐದು ದಿನಗಳ ಕೆಲಸದ ವಾರವನ್ನು ತಕ್ಷಣ ಜಾರಿಗೆ ತರುವಂತೆ ಒತ್ತಾಯಿಸಲು ಜನವರಿ 27 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಿರ್ಧರಿಸಿರುವುದರಿಂದ ಮಂಗಳವಾರ ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕುಗಳ ಬ್ಯಾಂಕಿಂಗ್ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಜನವರಿ 23 ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆಯು ಸಕಾರಾತ್ಮಕ ಫಲಿತಾಂಶವನ್ನು ನೀಡದ ನಂತರ ಅಧಿಕಾರಿಗಳು ಮತ್ತು ಉದ್ಯೋಗಿಗಳನ್ನು ಪ್ರತಿನಿಧಿಸುವ ಒಂಬತ್ತು ಒಕ್ಕೂಟಗಳ ಒಕ್ಕೂಟವಾದ UFBU ಮುಷ್ಕರಕ್ಕೆ ಕರೆ ನೀಡಿದೆ. ಜನವರಿ 25 (ಭಾನುವಾರ) ಮತ್ತು ಜನವರಿ 26 (ಗಣರಾಜ್ಯೋತ್ಸವ) ರಂದು ಬ್ಯಾಂಕುಗಳು ಮುಚ್ಚಲ್ಪಟ್ಟಿರುವುದರಿಂದ, ಮಂಗಳವಾರದ ಮುಷ್ಕರವು ಸತತ ಮೂರು ದಿನಗಳವರೆಗೆ ಶಾಖಾ ಮಟ್ಟದ ಸೇವೆಗಳಲ್ಲಿ ವ್ಯತ್ಯಯಕ್ಕೆ ಕಾರಣವಾಗುತ್ತದೆ. ಸಂಧಾನ ಪ್ರಕ್ರಿಯೆಯ ಸಮಯದಲ್ಲಿ ವಿವರವಾದ ಚರ್ಚೆಗಳ ಹೊರತಾಗಿಯೂ, ನಮ್ಮ ಬೇಡಿಕೆಯ ಬಗ್ಗೆ ಯಾವುದೇ ಭರವಸೆ ಇರಲಿಲ್ಲ. ಆದ್ದರಿಂದ, ನಾವು ಮುಷ್ಕರವನ್ನು ಮುಂದುವರಿಸಲು ಒತ್ತಾಯಿಸಲಾಗಿದೆ ಎಂದು UFBU ನ ಘಟಕವಾದ ಅಖಿಲ ಭಾರತ…

Read More

ಬೆಂಗಳೂರು: ಸಂವಿಧಾನದ ಮುಖ್ಯಸ್ಥರಾದ ರಾಜ್ಯದ ಗೌರವಾನ್ವಿತ ರಾಜ್ಯಪಾಲರಿಗೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ನಾಳೆ (ಜ.27) ಬೆಳಿಗ್ಗೆ 10.30 ಗಂಟೆಗೆ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಬಿಜೆಪಿ ಮತ್ತು ಜೆಡಿಎಸ್, ಪ್ರತಿಪಕ್ಷದವರೆಲ್ಲ ಸೇರಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಂಟಿ ಅಧಿವೇಶನವನ್ನು ಮುಗಿಸಿ ವಾಪಸ್ ಹೋಗುವ ಸಂದರ್ಭದಲ್ಲಿ ವಿಧಾನಸೌಧದ ಅಸೆಂಬ್ಲಿ ಸಭಾಂಗಣದಲ್ಲಿ ಮಾನ್ಯ ರಾಜ್ಯಪಾಲರಿಗೆ ಬೆರಳು ತೋರಿಸಿ, ಎಚ್ಚರಿಕೆ ಸಂದೇಶ ನೀಡಿ ಅಪಮಾನ ಮಾಡಿದ್ದಾರೆ. ಅಲ್ಲದೇ ಅಗೌರವವನ್ನು ತೋರಿಸಿದ್ದಾರೆ. ಅವರಿಗೆ ಧಿಕ್ಕಾರ ಕೂಗಿದ್ದಾರೆ ಎಂದು ಟೀಕಿಸಿದರು. ಈ ಹಿನ್ನೆಲೆಯಲ್ಲಿ ಬಿ.ಕೆ.ಹರಿಪ್ರಸಾದ್, ಎಸ್.ರವಿ, ಶರತ್ ಬಚ್ಚೇಗೌಡ, ಪ್ರದೀಪ್ ಈಶ್ವರ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸುವುದಾಗಿ ತಿಳಿಸಿದರು. ಕರ್ನಾಟಕದಲ್ಲಿ ಪೌರಾಯುಕ್ತೆ ಅಮೃತಾ ಗೌಡರಿಗೆ ಅವಾಚ್ಯ ಶಬ್ದಗಳಿಂದ ಹೀಯಾಳಿಸಿದ, ಅವರ ಗೌರವಕ್ಕೆ ಕುಂದು ಬರುವ ರೀತಿ ಅಪಮಾನ ಮಾಡಿದ ಕಾಂಗ್ರೆಸ್ಸಿನ ನಾಯಕ ರಾಜೀವ್ ಗೌಡರನ್ನು 15 ದಿನಗಳಿಂದ ಬಂಧಿಸಿಲ್ಲ.…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಮಧುಮೇಹದೊಂದಿಗೆ ಜೀವನವನ್ನು ನ್ಯಾವಿಗೇಟ್ ಮಾಡುವುದು ವಿಶಿಷ್ಟ ಸವಾಲುಗಳನ್ನು ಒಡ್ಡುತ್ತದೆ. ಆದರೆ ಸರಿಯಾದ ವಿಧಾನದೊಂದಿಗೆ, ವ್ಯಕ್ತಿಗಳು ತಮ್ಮ ಆರೋಗ್ಯ ಮತ್ತು ಚೈತನ್ಯವನ್ನು ಕಾಪಾಡಿಕೊಳ್ಳಬಹುದು. ಯೋಗಕ್ಷೇಮ ಮತ್ತು ಸಂತೃಪ್ತಿದಾಯಕ ಜೀವನದ ಪ್ರಯಾಣದಲ್ಲಿ ಮಧುಮೇಹಿಗಳನ್ನು ಸಬಲೀಕರಣಗೊಳಿಸಲು ಹತ್ತು ನಿರ್ಣಾಯಕ ಸಲಹೆಗಳ ಬಗ್ಗೆ ಮುಂದೆ ಓದಿ. ನಿಯಮಿತವಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮೇಲ್ವಿಚಾರಣೆ ಮಾಡಿ ಮಧುಮೇಹವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ರಕ್ತದಲ್ಲಿನ ಸಕ್ಕರೆ ಮಟ್ಟ ಅತ್ಯಗತ್ಯ. ಆಹಾರ, ದೈಹಿಕ ಚಟುವಟಿಕೆ, ಔಷಧಿಗಳು ಮತ್ತು ಒತ್ತಡವು ರಕ್ತದಲ್ಲಿನ ಸಕ್ಕರೆ ಮಟ್ಟಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅದಕ್ಕೆ ಅನುಗುಣವಾಗಿ ಹೊಂದಾಣಿಕೆಗಳನ್ನು ಮಾಡಲು ಅನುವು ಮಾಡಿಕೊಡುತ್ತದೆ. ಹೀಗಾಗಿ ನೀವು ನಿಯಮಿತವಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮೂಲಕ ಮೇಲ್ವಿಚಾರಣೆ ಮಾಡಿದ್ರೆ ನಿಯಂತ್ರಣದಲ್ಲಿ ಇಡಲು ಸಹಾಯವಾಗುತ್ತದೆ. ಆರೋಗ್ಯಕರ ಆಹಾರವನ್ನು ಸೇವಿಸಿ ಮಧುಮೇಹವನ್ನು ನಿರ್ವಹಿಸಲು ಸಮತೋಲಿತ ಮತ್ತು ಪೌಷ್ಟಿಕ ಆಹಾರವನ್ನು ಅಳವಡಿಸಿಕೊಳ್ಳುವುದು ಮೂಲಭೂತವಾಗಿದೆ. ಸಂಸ್ಕರಿಸಿದ ಸಕ್ಕರೆಗಳು, ಸ್ಯಾಚುರೇಟೆಡ್ ಕೊಬ್ಬುಗಳು ಮತ್ತು ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಗಳು ಕಡಿಮೆ ಇರುವ ಆಹಾರವನ್ನು…

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಉಂಟಾದಾಗ ಅದನ್ನು ಪರಿಹರಿಸೋದಕ್ಕಾಗಿ ಬೆಸ್ಕಾಂನಿಂದ ತನ್ನ ಗ್ರಾಹಕರಿಗಾಗಿ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಗಾಳಿ-ಮಳೆಗೆ ವಿದ್ಯುತ್‌ ಕಂಬಗಳು ಮುರಿದು, ವಿದ್ಯುತ್‌ ಮೂಲ ಸೌಕರ್ಯಗಳು ಹಾನಿಗೊಳಗಾಗಿವೆ. ಹೀಗಾಗಿ ಬೆಸ್ಕಾಂ ಸಹಾಯವಾಣಿ 1912ಗೆ ದೂರುಗಳು ಹರಿದು ಬಂದಿದ್ದು, ಕರೆಗಳ ಒತ್ತಡದಿಂದಾಗಿ ಗ್ರಾಹಕರಿಗೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದಿದೆ. ಮಳೆಗಾಲದಲ್ಲಿ ಗ್ರಾಹಕರ ವಿದ್ಯುತ್‌ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ ಗ್ರಾಹಕರಿಗೆ ಈ ಕೆಳಕಂಡ ಪಯಾರ್ಯ ವಾಟ್ಸ್‌ ಆಪ್‌ ಸಂಖ್ಯೆಗಳನ್ನು ನೀಡಲಾಗಿದೆ. ವಾಟ್ಸ್‌ಪ್‌ ಸಂಖ್ಯೆಗಳಿಗೆ ಗ್ರಾಹಕರು ಸಂದೇಶ ಹಾಗೂ ಛಾಯಚಿತ್ರಗಳನ್ನು ತಮ್ಮ ವಿಳಾಸದೊಂದಿಗೆ ಕಳುಹಿಸಿ ತಮ್ಮ ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ. ಜೊತೆಗೆ ಎಸ್‌ ಎಂಎಸ್ ಗಳನ್ನು ಕಳುಹಿಸಲು ಬೆಸ್ಕಾಂ ಬೆಂಗಳೂರು ಮಹಾನಗರ ವ್ಯಾಪ್ತಿಯ ಗ್ರಾಹಕರಿಗೆ 12 ಮೊಬೈಲ್‌ ಸಂಖ್ಯೆಗಳನ್ನು ಕೂಡ ಒದಗಿಸಲಾಗಿದೆ ಎಂದು ತಿಳಿಸಿದೆ. ಹೀಗಿದೆ ಜಿಲ್ಲಾವಾರು ವಾಟ್ಸ್‌…

Read More

ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಮದುವೆ ಎನ್ನುವುದು ಬಹಳ ಮಹತ್ತರವಾದಂತಹ ಘಟ್ಟ ಅಥವಾ ಸಮಯ ಎಂದೇ ಹೇಳಬಹುದು. ಕೆಲವೊಂದಷ್ಟು ಜನ ಇದನ್ನು ಎರಡನೇ ಜನ್ಮ ಎಂದು ಸಹ ಹೇಳುತ್ತಾರೆ. ನೀವು ಹುಟ್ಟಿದಂತಹ ದಿನಾಂಕ ನಿಮಗೆ ಎಷ್ಟು ಶುಭಫಲಗಳನ್ನು ಕೊಡುತ್ತದೆಯೋ ಅದೇ ರೀತಿಯಾಗಿ ನೀವು ಮದುವೆಯಾದಂತಹ ದಿನಾಂಕವು ಕೂಡ ನಿಮಗೆ ಅಷ್ಟೇ ಶುಭಫಲಗಳನ್ನು ತಂದುಕೊಡುತ್ತದೆ ಎಂದು ಸಂಖ್ಯಾಶಾಸ್ತ್ರ ತಿಳಿಸುತ್ತದೆ. ಹಾಗಾಗಿ ಮದುವೆಯ ದಿನಾಂಕ ವನ್ನು ಬಹಳ ಗಮನದಲ್ಲಿಟ್ಟುಕೊಂಡು ಯಾವ ದಿನಾಂಕದಂದು ಮದುವೆಯಾದರೆ ಅದು ನಮಗೆ ಶುಭಫಲವಾಗಿ ಪರಿವರ್ತನೆಯಾಗು ತ್ತದೆ ಹಾಗೂ ಯಾವ ದಿನಾಂಕದಂದು ಮದುವೆಯಾದರೆ ನಮಗೆ ಕಷ್ಟಗಳು ತಪ್ಪಿದ್ದಲ್ಲ ಎನ್ನುವಂತಹ ಮಾಹಿತಿಗಳನ್ನು ತಿಳಿದುಕೊಂಡಿರು ವುದು ಬಹಳ ಮುಖ್ಯವಾಗಿರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ…

Read More

ಬೆಂಗಳೂರು: ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ವಾಲ್ ಅವರನ್ನು ವಜಾಗೊಳಿಸಲಾಗಿದೆ. ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಪ್ರಸ್ತುತ ವರ್ಷ ಕರ್ನಾಟಕ ತಂಡ ಕಳಪೆ ಪ್ರದರ್ಶನವನ್ನು ರಣಜಿ ಕ್ರಿಕೆಟ್ ನಲ್ಲಿ ತೋರಿತ್ತು. ಈ ಹಿನ್ನಲೆಯಲ್ಲಿ ತಂಡದ ನಾಯಕ ಸ್ಥಾನದಿಂದ ಮಯಾಂಕ್ ಅಗರ್ ವಾಲ್ ಅವರನ್ನು ವಜಾಗೊಳಿಸಿರೋದಾಗಿ ಹೇಳಲಾಗುತ್ತಿದೆ. ಮಧ್ಯಪ್ರದೇಶದ ವಿರುದ್ಧ ಹೀನಾಯ ಸೋಲಿನ ನಂತ್ರ ಕೆ ಎಸ್ ಸಿ ಎ ಈ ನಿರ್ಧಾರವನ್ನು ಕೈಗೊಂಡಿದೆ. ಕರ್ನಾಟಕ ರಣಜಿ ತಂಡದ ನೂತನ ನಾಯಕನಾಗಿ ದೇವದತ್ ಪಡಿಕ್ಕಲ್ ನೇಮಕ ಮಾಡಲಾಗಿದೆ. ಬ್ಯಾಟಿಂಗ್ ನಲ್ಲೂ ಮಯಾಂಕ್ ಅಗರ್ ವಾಲ್ ಕಳಪೆ ಪ್ರದರ್ಶನ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ರಣಜಿ ತಂಡದ ಆಟಗಾರನಾಗಿ ಮಯಾಂಕ್ ಮುಂದುವರೆಯಲಿದ್ದಾರೆ. https://kannadanewsnow.com/kannada/cant-your-kids-eat-without-their-mobile-phones-here-are-some-tips-to-get-rid-of-them/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಇಂದಿನ ಕಾಲದಲ್ಲಿ ಬಹುತೇಕ ಮಕ್ಕಳು ಮೊಬೈಲ್ ಗೀಳಿಗೆ ಬಿದ್ದಿರ್ತಾರೆ. ಊಟವಂತೂ ಮೊಬೈಲ್ ಇಲ್ಲದೇ ಮಾಡೋದೇ ಇಲ್ಲ. ಮೊಬೈಲ್ ನಲ್ಲಿ ವೀಡಿಯೋ ನೋಡುತ್ತ ಊಟ ಮಾಡುತ್ತಾ ಇರುತ್ತಾರೆ. ಆದ್ರೇ ಇದು ಮಕ್ಕಳ ಆರೋಗ್ಯ, ಕಣ್ಣಿನ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಊಟ ಮಾಡೋ ವೇಳೆ ಮಕ್ಕಳು ಮೊಬೈಲ್ ನೋಡದೇ ಊಟ ಮಾಡೋದಕ್ಕೆ ಕೆಲ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ. ಅವುಗಳ ಬಗ್ಗೆ ಮುಂದೆ ಓದಿ. ಮಕ್ಕಳು ಊಟ ಮಾಡುವಾಗ ಮೊಬೈಲ್ ನೋಡೋದ್ರಿಂದ ಕಣ್ಣಿಗೆ ಹಾನಿಯುಂಟಾಗಲಿದೆ. ಜೊತೆಗೆ ಮೆದುಳಿನ ಮೇಲೆ ಪ್ರಭಾವ ಬೀರಿ, ಬೆಳೆಯುವ ಕುಡಿ ಮೊಳಕೆಯಲ್ಲೇ ವಿವಿಧ ರೋಗಗಳಿಗೆ ಕಾರಣವಾಗಬಹುದು. ಹೀಗಾಗಿ ನೀವು ಮಕ್ಕಳ ಕೈಗೆ ಮೊಬೈಲ್ ಕೊಡೋದನ್ನು ತಪ್ಪಿಸಬೇಕಿದೆ. ಮಕ್ಕಳು ಮೊಬೈಲ್ ನೋಡೋದರಿಂದ ಉಂಟಾಗೋ ಸಮಸ್ಯೆಗಳು ತಲೆನೋವು ದೂರ ದೃಷ್ಠಿ ಅಸ್ಪಸ್ಟ ಗೋಚರತೆ ಕಣ್ಣುಗಳ ಆಯಾಸ ಕಣ್ಣಿನ ರಪ್ಪೆ ಹೆಚ್ಚಾಗಿ ಬಡಿಯೋದು ಕಣ್ಣಿನ ನೋವು ಕಣ್ಣು ಉರಿ ಈ ಸಮಸ್ಯೆಗಳನ್ನು ಪರಿಹಾರಕ್ಕೆ ಮಕ್ಕಳಿಗೆ ಮೊಬೈಲ್ ಕೊಡೋದನ್ನು ತಪ್ಪಿಸೋದು ಒಂದೇ…

Read More