Author: kannadanewsnow09

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘಕ್ಕೆ ನವೆಂಬರ್ 9ರಂದು ನಡೆಯಲಿರುವ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನವಾದ ಇಂದು 41 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. ಈ ಕುರಿತು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ವಿ.ನಂಜುಂಡಪ್ಪ ಮಾಹಿತಿ ನೀಡಿದ್ದು, ಒಟ್ಟು 25 ಸ್ಥಾನಗಳ ಪೈಕಿ 3 ಕಾರ್ಯದರ್ಶಿ ಹುದ್ದೆಗಳಿಗೆ ಕೆ. ಹರೀಶ್, ಕೆ ಎಲ್ ಲೋಕೇಶ್, ಗೋದಾವರಿ ಡಿ ಎಸ್ ಅವರು ಕಣದಲ್ಲಿ ಉಳಿದಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಎಸ್.ಸೋಮಶೇಖರ್ (ಗಾಂಧಿ), ಮು. ವೆಂಕಟೇಶಯ್ಯ, ಎ. ಬಿ. ಶಿವರಾಜ್ ಅವರು ಸ್ಪರ್ಧೆಯಲ್ಲಿದ್ದಾರೆ. 3 ಉಪಾಧ್ಯಕ್ಷ ಸ್ಥಾನಗಳಿಗೆ ಡಾ. ಕೆ. ಎಸ್. ಸ್ವಾಮಿ, ಎಚ್ ಕೆ ಬಸವರಾಜ್, ಬಿ. ಟಿ ಶ್ರೀನಿವಾಸ್, ಪರಿಮಳ ಎಚ್ಎಸ್, ಕೆ ಎಂ. ಜಕ್ರಿಯ ಕಣದಲ್ಲಿದ್ದಾರೆ. ಪ್ರಧಾನ ಕಾರ್ಯ ದರ್ಶಿ ಸ್ಥಾನಕ್ಕೆ ಕೆ.ಸಿ. ವೇದಮೂರ್ತಿ, ಎನ್ ಶ್ರೀನಾಥ್, ಆರ್ ಜಯಕುಮಾರ್, ಖಜಾಂಚಿ ಸ್ಥಾನಕ್ಕೆ ಎಸ್ ಡಿ. ಚಿಕ್ಕಣ್ಣ, ಟಿ.…

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಗ್ಗನಹಳ್ಳಿಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರ ಸ್ಥಿತಿ ಗಂಭೀರಗೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/public-awareness-raised-through-garbage-dumping-festival-in-bengaluru-2-80-lakh-fines-collected/ https://kannadanewsnow.com/kannada/k-hanumantharayappa-elected-as-district-president-of-bangalore-rural-government-employees-association/

Read More

ಬೆಂಗಳೂರು: ಬೆಂಗಳೂರು ನಗರದಲ್ಲಿ “ಕಸ ಸುರಿಯುವ ಹಬ್ಬ” ದ ಮೂಲಕ 218 ಮನೆಗಳ ಮುಂದೆ ಕಸ ಸುರಿದು 2.80 ಲಕ್ಷ ರೂ. ಗಳ ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರು ತಿಳಿಸಿದರು.  ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಪ್ರತಿ ಮನೆಗೆ ಬೆಳಿಗ್ಗೆ ಆಟೋ ಟಿಪ್ಪರ್ ಗಳಲ್ಲಿ ಹೋಗಿ ಕಸವನ್ನು ಸಂಗ್ರಹಿಸಲಾಗುತ್ತಿದೆ. ಆದರೂ ಕೆಲ ಸಾರ್ವಜನಿಕರು ಕಸವನ್ನು ರಸ್ತೆ ಬದಿ, ಪಾದಚಾರಿ ಮಾರ್ಗ ಹಾಗೂ ಖಾಲಿ ಜಾಗಗಳಲ್ಲಿ ಎಸೆಯುತ್ತಿದ್ದಾರೆ. ರಸ್ತೆ ಬದಿ ಕಸ ಸುರಿಯುವುದರಿಂದ ನಗರ ನೈರ್ಮಲ್ಯ ಹಾಳಾಗುತ್ತಿದೆ. ಇಂತಹ ಪ್ರಕರಣಗಳನ್ನು ತಪ್ಪಿಸುವ ಉದ್ದೇಶದಿಂದ  ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದಿಂದ ರಸ್ತೆ ಬದಿ ಕಸ ಬಿಸಾಡುವವರನ್ನು ಗುರುತಿಸಿ ಅವರ ಮನೆ ಮುಂದೆ ಕಸ ಬಿಸಾಡುವಂತಹ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಆಟೋ ಟಿಪ್ಪರ್ ಗಳಿಗೆ ಕಸ ಕೊಡದೆ ರಾತ್ರಿ ವೇಳೆ ರಸ್ತೆ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆ.ಹನುಮಂತರಾಯಪ್ಪ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ಕಾರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿಲೀಪ್ ಕುಮಾರ್ ಮತ್ತು ದೇವನಹಳ್ಳಿ ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಕೆ.ಹನುಮಂತರಾಯಪ್ಪ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಪರಿಶೀಲನೆ ನಂತರ ಚುನಾವಣೆ ನಡೆಯಿತು. ಸಂಘದಲ್ಲಿ ಒಟ್ಟು 52 ಮತದಾರರಿದ್ದು, ಈ ಪೈಕಿ ದಿಲೀಪ್ ಕುಮಾರ್ 16 ಮತಗಳನ್ನು ಪಡೆದರೆ, ಕೆ.ಹನುಮಂತರಾಯಪ್ಪ 36 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಚುನಾವಣಾ ಅಧಿಕಾರಿಯಾದ ಡಾ. ನೆಲ್ಕುದ್ರಿ ಸದಾನಂದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೆ.ಹನುಮಂತರಾಯಪ್ಪ ಅವರಿಗೆ ಪ್ರಮಾಣಪತ್ರ ವಿತರಿಸಿದರು. ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕೆ.ಹನುಮಂತರಾಯಪ್ಪ ಮಾತನಾಡಿ, ತಮ್ಮನ್ನು ಅತೀ ಹೆಚ್ಚು ಮತಗಳಿಂದ ಆಯ್ಕೆ ಮಾಡಲು ಹಗಲಿರುಳು ಶ್ರಮಿಸಿದ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ನಿರ್ದೇಶಕರು, ಸರ್ಕಾರಿ ನೌಕರರು ಮತ್ತು ಪದಾಧಿಕಾರಿಗಳಿಗೆ…

Read More

ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಅದರೊಟ್ಟಿಗೆ ಖಾಲಿಯಾಗಿರುವಂತ ಗ್ರಾಮ ಪಂಚಾಯ್ತಿ ಸ್ಥಾನಗಳಿಗೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೇ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಗೆ ನಾಮ ಪತ್ರದೊಂದಿಗೆ ಸಲ್ಲಿಸಬೇಕಾದಂತ ಅಗತ್ಯ ದಾಖಲೆಗಳು ಯಾವುವು ಎನ್ನುವ ಬಗ್ಗೆ ಮುಂದಿವೆ ಓದಿ. ಸಾಮಾನ್ಯ ಕ್ಷೇತ್ರಕ್ಕೆ 1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಥಾಗಿರಬೇಕು. 2. ನಾಮಪತ್ರ ನಮೂನೆ –5ರಲ್ಲಿ ನೀಡಬೇಕು. 3. ಠೇವಣಿ ಹಣ 200/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು, ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಠೇವಣಿ ಹಣ 100/- ರೂಗಳನ್ನು ನೀಡುವುದು. 4. ಇಸ್ತಿ ಬಿವಧಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು. 5. ಅಭ್ಯರ್ಥಿಯಿಂದ ಘೋಷಣೆ ಪತ್ರ 6. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ ‘ಬೇ-ಬಾಕಿಪತ್ರ’ ಅನುಸೂಚಿತ ಜಾತಿ/ಅ.ಪಂಗಡ ಮೀಸಲು ಕ್ಷೇತ್ರಕ್ಕೆ 1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು. 2. ತಹಶಿಲ್ದಾ‌ರವರಿಂದ ಜಾತಿ ಪ್ರಮಾಣ ಪತ್ರ ಪಡೆದು…

Read More

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ನಾಳೆ ಕೊನೆಗೊಳ್ಳಲಿದೆ. ಆದರೇ ವಿವರ ದಾಖಲಿಸದೇ ಇರುವವರು ದಿನಾಂಕ 10-11-2025ರವರೆಗೆ ಆನ್ ಲೈನ್ ಮೂಲಕ ದಾಖಲಿಸಲು ಅವಕಾಶ ನೀಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 22.09.2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ:31.10.2025 ರಂದು ಮುಕ್ತಾಯಗೊಳ್ಳಲಿದೆ ಎಂದಿದ್ದಾರೆ. ಇನ್ನೂ ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಅವಕಾಶ ನೀಡುವ ಹಿನ್ನೆಲೆಯಲ್ಲಿ Online ಮೂಲಕ https://kscbcselfdeclaration.karnataka.gov.in ಲಿಂಕ್ ಬಳಸಿಕೊಂಡು ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ:10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/bjps-internal-strife-is-the-reason-for-the-dharmasthala-incident-dcm-d-k-shivakumar/…

Read More

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲದೇ ಹೋದರೇ, ನೀವು ಜಸ್ಟ್ ಈ ಕ್ಯೂ ಆರ್ ಕೋಟ್ ಸ್ಕ್ಯಾನ್ ಮಾಡಿ, ನಿಮ್ಮ ವಿವರಗಳನ್ನು ದಾಖಲಿಸುವಂತೆ ಸರ್ಕಾರ ತಿಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಸೆಪ್ಟೆಂಬರ್‌ 22 ರಿಂದ ಆರಂಭಿಸಲಾದ ಸಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅಕ್ಟೋಬರ್‌ 31 ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ. ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಲ್ಲಿ, ಆನ್‌ಲೈನ್‌ ಮೂಲಕವೂ ನಿಮ್ಮ ವಿವರಗಳನ್ನು ದಾಖಲಿಸಲು ನವೆಂಬರ್‌ 10ರ ವರೆಗೆ ಅವಕಾಶ ಕಲ್ಪಿಸಲಾಗಿದೆ. https://kscbcselfdeclaration.karnataka.gov.in ಲಿಂಕ್‌ಗೆ ಭೇಟಿ ನೀಡಿ, ಕೇಳಿರುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವ ಮೂಲಕ ಸಮೀಕ್ಷೆ ಯಶಸ್ವಿಯಾಗುವಲ್ಲಿ ನಮ್ಮೊಂದಿಗೆ ಸಹಕರಿಸಿ ಎಂದು ತಿಳಿಸಿದೆ. https://twitter.com/KarnatakaVarthe/status/1983897274926202979 https://kannadanewsnow.com/kannada/bjps-internal-strife-is-the-reason-for-the-dharmasthala-incident-dcm-d-k-shivakumar/ https://kannadanewsnow.com/kannada/one-worker-dies-three-injured-after-falling-from-building-during-repairs-in-bengaluru/

Read More

ಬೆಂಗಳೂರು: “ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ ಪ್ರಕರಣ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಕುರಿತು ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು, “ಧರ್ಮಸ್ಥಳ ಪ್ರಕರಣ ವಿಚಾರದಲ್ಲಿ ವ್ಯಕ್ತಿ, ಕುಟುಂಬ ಮತ್ತು ಸಂಸ್ಥೆಗೆ ಎಷ್ಟು ಹಾನಿ ಮಾಡಬೇಕೋ ಅದನ್ನು ಈಗಾಗಲೇ ಮಾಡಲಾಗಿದೆ. ಒಟ್ಟಿನಲ್ಲಿ ಧರ್ಮ ಮತ್ತು ನ್ಯಾಯ ಉಳಿಯಬೇಕು ಎಂಬುದು ನಮ್ಮ ಅಭಿಲಾಷೆ” ಎಂದರು. ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ “ವೀರೇಂದ್ರ ಹೆಗ್ಗಡೆಯವರ ವ್ಯಕ್ತಿತ್ವವೇ ಬೇರೆ. ಆ ಸಂಸ್ಥೆಯ ಹೆಸರಿಗೆ ಹಾನಿಯಾಗುತ್ತಿದೆಯಲ್ಲ ಎಂದು ಬೇಸರವಾಗಿತ್ತು. “ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ”. ತಿರುಪತಿಯಲ್ಲಿ ಕಾಸಿನ ಹರಕೆ, ಧರ್ಮಸ್ಥಳದಲ್ಲಿ ಮಾತಿನ ಹರಕೆ ಕಟ್ಟಿಕೊಂಡರೆ ಬಿಡುವಂತಿಲ್ಲ. ಇಂತಹ ಪದ್ಧತಿಯಲ್ಲಿ ನಡೆದುಕೊಂಡು ಹೋಗುವ ಕಡೆ…

Read More

ಬೆಂಗಳೂರು: ನಗರದಲ್ಲಿ ದುರಸ್ತಿ ವೇಳೆ ಕಟ್ಟಡದಿಂದ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟಿದ್ದರೇ, ಮತ್ತೆ ಮೂವರು ಗಾಯಗೊಂಡಿರುವಂತ ಘಟನೆ ಮಹದೇವಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿ ಮಹದೇವಪುರ ಮುಖ್ಯ ರಸ್ತೆಯಲ್ಲಿ ದುರಸ್ತಿ ವೇಳೆಯಲ್ಲಿ ಕಟ್ಟಡದ ಮೇಲಿನಿಂದ ಬಿದ್ದು ಹಾವೇರಿ ಮೂಲದ ಕಾರ್ಮಿಕ ಯೂಸೂಫ್(35) ಎಂಬುವರು ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಕಾರ್ಮಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ಕೆ.ಪರಶುರಾಮ್ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದಂತ ಅವರು, ಸಂಜೆ ಟಿನ್ ಫ್ಯಾಕ್ಟರಿ ಬಳಿಯಲ್ಲಿ ಅಬ್ದುಲ್ ವಾಜಿದ್ ಎಂಬುವರಿಗೆ ಸೇರಿದಂತ ಹಳೆಯ ಕಟ್ಟಡದ ರಿನೋವೇಷನ್ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದಿದ್ದಾರೆ. ರಿನೋವೇಶನ್ ಸಂದರ್ಭದಲ್ಲಿ ಕಟ್ಟಡಕ್ಕೆ ಹಾಕಿದ್ದಂತ ಸಾರುವೆ ಮರ ಮುರಿದು ಬಿದ್ದು ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಯೂಸೂಫ್ ಶರೀಫ್ ಎಂಬುವರು ಸಾವನ್ನಪ್ಪಿದ್ದಾರೆ. ತನುಜಾ, ಆಕಾಶ್ ಸೇರಿ ಮೂವರು ಗಾಯಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ…

Read More

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಶುಕ್ರವಾರಕ್ಕೆ ಅಂತ್ಯವಾಗಲಿದೆ. ಯಾವುದೇ ಕಾರಣಕ್ಕೂ ಅವಧಿ ಮುಂದುವರಿಸುವ ನಿರ್ಧಾರ ಆಗಿಲ್ಲ. ಆನ್‌ಲೈನ್‌ನಲ್ಲಿ ಮಾಹಿತಿ ನೀಡುವವರಿಗೆ ನವೆಂಬರ್ 10ರ ವರೆಗೆ ಅವಕಾಶ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ‌ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ತಿಳಿಸಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,‌ ಗುರುವಾರದ ಅಂತ್ಯಕ್ಕೆ ರಾಜ್ಯದಲ್ಲಿ (ಬೆಂಗಳೂರು ನಗರ ಹೊರತುಪಡಿಸಿ) 1,46,53,638 ಮನೆಗಳು ಮತ್ತು 5,52,57,205 ಜನರ ಅಂದರೇ ಶೇ.101.47 ಸಮೀಕ್ಷೆ ಮುಗಿದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಶೇ.48.32 ಸಮೀಕ್ಷೆ ಮುಗಿದೆ. ಇದಕ್ಕೆ ಕೆಲವು ತಾಂತ್ರಿಕ ಕಾರಣಗಳು ಕಂಡುಬಂದಿದೆ. ಬೆಂಗಳೂರಿನಲ್ಲಿ ವಾಸವಾಗಿರುವರು ಬಹುತೇಕರು ಹೊರ ಜಿಲ್ಲೆಯಿಂದ ಬಂದವರು ಇರುತ್ತಾರೆ. ಸ್ವಂತ ಊರಿನಲ್ಲಿ ಮಾಹಿತಿ ಕೊಟ್ಟಿದ್ದು, ಬಾಡಿಗೆ ಮನೆಯಲ್ಲಿ ಕೊಡಲು ನಿರಾಕರಿಸಿರುವುದು ಕಂಡು ಬಂದಿದೆ ಎಂದರು. ಅಲ್ಲದೆ, ವಿದ್ಯುತ್ ಮೀಟರ್‌ಗಳು ಸಹ ಹೆಚ್ಚಿಗೆ ಇರುವ ಪರಿಣಾಮ ಶೇಕಡಾವಾರು ಪ್ರಮಾಣ ಕಡಿಮೆ ತೋರಿಸುತ್ತಿದೆ. ಯಾಕೇ ಸಮೀಕ್ಷೆ…

Read More