Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ನೌಕರರಿಗೆ ರಾಜ್ಯ ಸರ್ಕಾರ ಮತ್ತು ನಿಗಮವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಸುದೀರ್ಘ ದಿನಗಳ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆಯ ಹಿಂಬಾಕಿ (Arrears) ಮೊತ್ತವನ್ನು ಬಿಡುಗಡೆಗೊಳಿಸಲಾಗಿದ್ದು, ಸಾರಿಗೆ ನೌಕರರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಸರ್ಕಾರದ ಆದೇಶದನ್ವಯ ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ಮತ್ತು ನೌಕರರಿಗೆ 2020ರ ವೇತನ ಪರಿಷ್ಕರಣೆಯ ಅನ್ವಯ, ದಿನಾಂಕ 01.01.2021 ರಿಂದ 28.02.2023 ರವರೆಗಿನ ಒಟ್ಟು 26 ತಿಂಗಳ ಹಿಂಬಾಕಿ ಮೊತ್ತ ರೂ. 1,271.92 ಕೋಟಿಗಳನ್ನು ಪಾವತಿಸಲು ಅನುಮೋದನೆ ನೀಡಲಾಗಿತ್ತು. ಬಿಎಂಟಿಸಿಗೆ ರೂ. 137.24 ಕೋಟಿ ಮಂಜೂರು ಈ ಬೃಹತ್ ಮೊತ್ತದ ಪೈಕಿ, ಸರ್ಕಾರವು ಪ್ರಸ್ತುತ ಮೊದಲ ಹಂತವಾಗಿ ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿ/ನೌಕರರ ಹಿಂಬಾಕಿ ಮೊತ್ತಕ್ಕಾಗಿ ರೂ. 450.00 ಕೋಟಿಗಳನ್ನು ಬಿಡುಗಡೆಗೊಳಿಸಿದೆ. ಸರ್ಕಾರದ ಈ ಹಂಚಿಕೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಒಟ್ಟು ರೂ. 137.24 ಕೋಟಿಗಳ ಅನುದಾನ…

Read More

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಡಿಯಲ್ಲಿ ದೇಶದ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಇದರ ಭಾಗವಾಗಿ ಕರ್ನಾಟಕದಲ್ಲಿ ಜೂನ್ 20 ರಿಂದ ಒಟ್ಟು 5.55 ಕೋಟಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಯಾವುದೇ ಒಬ್ಬ ಅರ್ಹ ಮತದಾರನೂ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಮಹತ್ವದ ಪತ್ರವೊಂದನ್ನು ಬರೆದಿದ್ದಾರೆ. ಸಾಂವಿಧಾನಿಕ ಆಶಯದಂತೆ ಪಕ್ಷಪಾತವಿಲ್ಲದ ಪರಿಷ್ಕರಣೆ ನಡೆಯಲಿ ಸಂವಿಧಾನದ ಆರ್ಟಿಕಲ್ 326, ಪ್ರಜಾಪ್ರತಿನಿಧಿ ಕಾಯಿದೆ 1950 ಮತ್ತು ಮತದಾರರ ನೋಂದಾವಣಿ ನಿಯಮ 1960ರ ಅಡಿಯಲ್ಲಿ ಈ ವಿಶೇಷ ಪರಿಷ್ಕರಣೆ ಕಾರ್ಯ ನಡೆಯಬೇಕಿದೆ. ಕರ್ನಾಟಕದಲ್ಲಿ ಯಾವುದೇ ಅನಾಹುತಗಳಿಗೆ ಅಥವಾ ರಾಜಕೀಯ ಪ್ರೇರಿತ ಅಕ್ರಮಗಳಿಗೆ ಅವಕಾಶ ನೀಡದಂತೆ, ಪಕ್ಷಪಾತವಿಲ್ಲದೆ…

Read More

ನವದೆಹಲಿ: ಜಾಗತಿಕವಾಗಿ ತಲ್ಲಣ ಮೂಡಿಸಿರುವ ಪಶ್ಚಿಮ ಏಷ್ಯಾ ಬಿಕ್ಕಟ್ಟು (ಭೂರಾಜಕೀಯ ಸಂಘರ್ಷ) ಹಾಗೂ ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮತ್ತೊಂದು ಮಹತ್ವದ ಆರ್ಥಿಕ ನಿರ್ಧಾರ ಕೈಗೊಂಡಿದೆ. ದೇಶದಿಂದ ವಿದೇಶಿ ವಿನಿಮಯದ ಹೊರಹರಿವನ್ನು ತಡೆಯಲು ಮತ್ತು ಚಾಲ್ತಿ ಖಾತೆ ಕೊರತೆಯನ್ನು (Current Account Deficit) ನಿಯಂತ್ರಿಸಲು ಬೆಳ್ಳಿ ಬಾರ್ (Silver Bars) ಆಮದಿನ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗಿದೆ. ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ (DGFT) ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ, ಇನ್ಮುಂದೆ ಅತ್ಯಂತ ಉನ್ನತ ದರ್ಜೆಯ 99.9% (999 Purity) ಶುದ್ಧತೆಯ ಬೆಳ್ಳಿ ಬಾರ್‌ಗಳ ಮುಕ್ತ ಆಮದನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, ಅವುಗಳನ್ನು ‘ನಿಯಂತ್ರಿತ’ (Restricted) ವಲಯಕ್ಕೆ ಸೇರಿಸಲಾಗಿದೆ. ಏನಿದು ಹೊಸ ನಿಯಮ? ಲೈಸೆನ್ಸ್ ಕಡ್ಡಾಯ ಇಲ್ಲಿಯವರೆಗೆ 99.9% ಶುದ್ಧತೆಯ ಬೆಳ್ಳಿ ಬಾರ್‌ಗಳನ್ನು ಯಾವುದೇ ಕಠಿಣ ನಿಯಮಗಳಿಲ್ಲದೆ ಮುಕ್ತವಾಗಿ ಭಾರತಕ್ಕೆ ಆಮದು ಮಾಡಿಕೊಳ್ಳಲು ಅವಕಾಶವಿತ್ತು. ಆದರೆ ಇನ್ಮುಂದೆ ಇಂತಹ ಬೆಳ್ಳಿ ಬಾರ್‌ಗಳನ್ನು ವಿದೇಶದಿಂದ ತರಿಸಿಕೊಳ್ಳಬೇಕಾದರೆ ಆಮದುದಾರರು…

Read More

ಬೆಂಗಳೂರು: ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷದ ಸಂಭ್ರಮ ಆರಂಭವಾಗುತ್ತಿದ್ದು, ಮುಂಬರುವ ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಸಜ್ಜಾಗಿದೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಶಾಲೆಗೆ ಬರಮಾಡಿಕೊಳ್ಳುವ ಮೂಲಕ ಈ ಸಂಭ್ರಮಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಹೊಸ ಶೈಕ್ಷಣಿಕ ವರ್ಷದ ಪೂರ್ವಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಇತ್ತೀಚೆಗೆ ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಹಲವು ಮಾರ್ಗಸೂಚಿಗಳನ್ನು ನೀಡಿದ್ದಾರೆ. ಇತಿಹಾಸದಲ್ಲೇ ಮೊದಲು: ಮುಖ್ಯಮಂತ್ರಿಗಳಿಂದ ‘ಮಹಾ ಪೋಷಕ-ಶಿಕ್ಷಕರ ಸಭೆ’ (Mega PTM) ಈ ಬಾರಿಯ ಶಾಲಾ ಪ್ರಾರಂಭೋತ್ಸವದ ಪ್ರಮುಖ ಆಕರ್ಷಣೆ ಎಂದರೆ ರಾಜ್ಯಮಟ್ಟದಲ್ಲಿ ಏಕಕಾಲಕ್ಕೆ ನಡೆಯಲಿರುವ ‘ಮಹಾ ಪೋಷಕ-ಶಿಕ್ಷಕರ ಸಭೆ’ (Mega PTM). ಈ ವಿಶೇಷ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ…

Read More

ನವದೆಹಲಿ: ಮುಕ್ತ ವ್ಯಾಪಾರ ಒಪ್ಪಂದಗಳ (FTAs) ದುರುಪಯೋಗವನ್ನು ತಡೆಯುವ ಮತ್ತು ದೇಶೀಯ ಉದ್ಯಮವನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮತ್ತೊಂದು ಮಹತ್ತರ ಹೆಜ್ಜೆ ಇಟ್ಟಿದೆ. ಚಿನ್ನ ಮತ್ತು ಪ್ಲಾಟಿನಂ ಆಭರಣಗಳ ಬೆನ್ನಲ್ಲೇ, ಬೆಳ್ಳಿ ಆಭರಣಗಳು ಹಾಗೂ ಬೆಳ್ಳಿಯ ಕರಕುಶಲ ವಸ್ತುಗಳ ಮುಕ್ತ ಆಮದಿನ ಮೇಲೂ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಕಟ್ಟುನಿಟ್ಟಿನ ನಿಯಂತ್ರಣಗಳನ್ನು (Import Curbs) ಹೇರಿದೆ. ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ (DGFT) ಹೊರಡಿಸಿರುವ ಅಧಿಕೃತ ಜ್ಞಾಪನಾ ಪತ್ರದ ಪ್ರಕಾರ, ಬೆಳ್ಳಿಯ ಆಭರಣಗಳ ಆಮದು ನೀತಿಯನ್ನು ಇನ್ಮುಂದೆ ‘ಮುಕ್ತ’ (Free) ವಲಯದಿಂದ ‘ನಿಯಂತ್ರಿತ’ (Restricted) ವಲಯಕ್ಕೆ ಬದಲಾಯಿಸಲಾಗಿದೆ. https://twitter.com/PTI_News/status/2055648404236316987 ಏನಿದು ಹೊಸ ನಿಯಮ? ಪರವಾನಗಿ ಕಡ್ಡಾಯ! ಈ ನೂತನ ನಿಯಂತ್ರಣದ ಪ್ರಕಾರ, ಇನ್ಮುಂದೆ ಯಾವುದೇ ವ್ಯಾಪಾರಿ ಅಥವಾ ಆಮದುದಾರರು ವಿದೇಶಗಳಿಂದ ಬೆಳ್ಳಿ ಅಥವಾ ಬೆಳ್ಳಿಯ ಆಭರಣಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಬೇಕಾದರೆ ಸರ್ಕಾರದ (DGFT) ಪೂರ್ವ ಅನುಮತಿ ಅಥವಾ ಅಧಿಕೃತ ಆಮದು ಪರವಾನಗಿಯನ್ನು (Import License) ಪಡೆಯುವುದು ಕಡ್ಡಾಯವಾಗಿದೆ. ಈ ಹಿಂದೆ ಇದ್ದ…

Read More

ಬ್ಯಾಂಕಾಕ್: ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ಶನಿವಾರ ಮಧ್ಯಾಹ್ನ ಅತ್ಯಂತ ಭೀಕರ ರೈಲು ಅಪಘಾತವೊಂದು ಸಂಭವಿಸಿದೆ. ಸರಕು ಸಾಗಣೆ (ಕಂಟೈನರ್) ರೈಲೊಂದು ಸಾರ್ವಜನಿಕ ಸಾರಿಗೆ ಬಸ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಭಸ್ಮವಾಗಿದೆ. ಈ ಭೀಕರ ದುರಂತದಲ್ಲಿ ಕನಿಷ್ಠ 8 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬ್ಯಾಂಕಾಕ್ ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ದೃಢಪಡಿಸಿದ್ದಾರೆ. ವಾಹನಗಳ ಸರಣಿ ಅಪಘಾತ (Multi-Vehicle Pile-up) ಬ್ಯಾಂಕಾಕ್‌ನ ಅತಿ ಜನನಿಬಿಡ ಅಶೋಕ್-ದಿನ್ ಡೇಂಗ್ ರಸ್ತೆಯ ರೈಲ್ವೆ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ. ಹಳಿಗಳ ಮೇಲೆ ಸಿಲುಕಿದ್ದ ಬಸ್‌ಗೆ ಭಾರಿ ವೇಗದಲ್ಲಿ ಬಂದ ಸರಕು ಸಾಗಣೆ ರೈಲು ಡಿಕ್ಕಿ ಹೊಡೆದ ತಕ್ಷಣ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ. ಅಪಘಾತದ ತೀವ್ರತೆಗೆ ಬಸ್‌ನ ಸುತ್ತಮುತ್ತಲಿದ್ದ ಹಲವು ಕಾರುಗಳು ಹಾಗೂ ಮೋಟಾರ್ ಸೈಕಲ್‌ಗಳಿಗೂ ಬೆಂಕಿ ಆವರಿಸಿದ್ದು, ಸರಣಿ ಅಪಘಾತ ಸಂಭವಿಸಿದೆ. https://twitter.com/Reuters/status/2055629336590578038 ರೆಡ್ ಸಿಗ್ನಲ್‌ನಲ್ಲಿ…

Read More

ಮಂಡ್ಯ: ದಿನಬಳಕೆ ವಸ್ತುಗಳ ಅತಿಯಾದ ಬೆಲೆ ಏರಿಕೆ ಹಾಗೂ ಪೆಟ್ರೋಲ್-ಡೀಸೆಲ್ ದರ ಹೆಚ್ಚಳವನ್ನು ಖಂಡಿಸಿ ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ಮಂಡ್ಯದಲ್ಲಿ ಎತ್ತಿನಗಾಡಿ ಓಡಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಪ್ರಮುಖ ರಸ್ತೆಗಳ ಮೂಲಕ ಸಂಜಯ್ ವೃತ್ತದವರೆಗೂ ಕಾರ್ಯಕರ್ತರೊಂದಿಗೆ ಎತ್ತಿನಗಾಡಿ ಮೆರವಣಿಗೆ ನಡೆಸಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ಜನರಿಗೆ ನರಕದ ಪರಿಸ್ಥಿತಿ ಬಂದಿದೆ: ವಾಟಾಳ್ ಆಕ್ರೋಶ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್, “ದೇಶದಲ್ಲಿ ಮತ್ತು ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಬೆಲೆಗಳಿಂದಾಗಿ ಸಾಮಾನ್ಯ ಜನರಿಗೆ ಬದುಕು ನರಕಸದೃಶವಾಗಿದೆ. ಪೆಟ್ರೋಲ್, ಡೀಸೆಲ್ ಮಾತ್ರವಲ್ಲದೆ ಅಡುಗೆ ಗ್ಯಾಸ್ ಬೆಲೆಯೂ ಗಗನಕ್ಕೇರಿದೆ. ಗ್ಯಾಸ್ ಸಿಗದೆ, ಕೊಳ್ಳಲಾಗದೆ ಬಡ ಜನರು ಊಟ ಮಾಡುವುದಕ್ಕೂ ಪರದಾಡುವಂತಹ ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಗಳು ಕಣ್ಣು ಮುಚ್ಚಿ ಕುಳಿತಿವೆ” ಎಂದು ಧಿಕ್ಕಾರ ಕೂಗಿದರು. ಸಚಿವರಿಗೆ ಮುತ್ತಿಗೆ ಹಾಗೂ ‘ಕರ್ನಾಟಕ ಬಂದ್’ ಎಚ್ಚರಿಕೆ…

Read More

ಮಂಡ್ಯ : ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವುದನ್ನು ಕೈ ಬಿಡುವಂತೆ ಶಾಸಕ ಕೆ.ಎಂ.ಉದಯ್ ಅವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಮಧ್ಯಾಹ್ನ ರೈತಪರ ಹೋರಾಟಗಾರ್ತಿ ಸುನಂದ ಜಯರಾಮ್ ಅವರ ನೇತೃತ್ವದಲ್ಲಿ ಗ್ರಾಮದ ಪ್ರಮುಖ ಮುಖಂಡರು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ಸುನಂದ ಜಯರಾಮು ಮಾತನಾಡಿ, ಮದ್ದೂರು ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ನೀವು ನಿರೀಕ್ಷೆಗೂ ಮೀರಿ ಜನಪರವಾಗಿ ಕೆಲಸ ಮಾಡುತ್ತಿದ್ದೀರಿ. ಆದರೆ, ನಮ್ಮ ಗ್ರಾಮವನ್ನು ಅಭಿವೃದ್ಧಿ ಮಾಡುವ ಜೊತೆಗೆ ಗ್ರಾಮವನ್ನಾಗಿಯೇ ಉಳಿಸಿಕೊಡಿ ಇದು ನಿಮ್ಮಿಂದಲ್ಲೆ ಸಾಧ್ಯವಿದೆ ಎಂದು ಒತ್ತಾಯಿಸಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಉದಯ್ 146 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ಗ್ರಾಮಸ್ಥರು ನಡೆಸುತ್ತಿರುವುದು ನಿನಗೆ ತಿಳಿದ ವಿಷಯವಾಗಿದ್ದು, ಈ ಹಿಂದೆ ನಿಮ್ಮ ಗ್ರಾಮ ಪಂಚಾತಿಯಲ್ಲಿಯೇ ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸುವ ಸಂಬಂಧ ಅನುಮೋದಿಸಿ ಚುನಾಯಿತ ಪ್ರತಿನಿಧಿಗಳೇ ನಿರ್ಧಾರ ಕೈಗೊಂಡಿದ್ದಾರೆ. ಆದಾಗಿಯೂ ಸರ್ಕಾರದಿಂದ ರಾಜ್ಯ ಪತ್ರ ಬರುವ ಮೊದಲೇ ನನ್ನ ಗಮನಕ್ಕೆ ತರಬಹುದಾಗಿತ್ತು. ಇಷ್ಟಾಗಿಯೂ ನಿಮ್ಮ…

Read More

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (GBDA) ವತಿಯಿಂದ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಬೃಹತ್ ಟೌನ್‌ಶಿಪ್ ಯೋಜನೆಗೆ ಜೆಡಿಎಸ್ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ತೀಕ್ಷ್ಣ ವಾಗ್ದಾಳಿಯ ಬೆನ್ನಲ್ಲೇ, ಈಗ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಪತ್ರ ಬರೆದು ಈ ಯೋಜನೆಯನ್ನು ತಕ್ಷಣವೇ ಕೈಬಿಡುವಂತೆ ಬಲವಾಗಿ ಒತ್ತಾಯಿಸಿದ್ದಾರೆ. ರೈತರ ಹಿತದೃಷ್ಟಿಯಿಂದ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಿ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಹೆಚ್.ಡಿ. ದೇವೇಗೌಡರು ಬಿಡದಿ ಸುತ್ತಮುತ್ತಲಿನ ಗ್ರಾಮೀಣ ಭಾಗದ ಬಡ ಮತ್ತು ಅತಿ ಸಣ್ಣ ಹಿಡುವಳಿದಾರರ ಪರಿಸ್ಥಿತಿಯನ್ನು ವಿವರವಾಗಿ ಪ್ರಸ್ತಾಪಿಸಿದ್ದಾರೆ. “ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಹಳ್ಳಿಗಳಲ್ಲಿ ಸುಮಾರು 10,000 ಎಕರೆಗೂ ಅಧಿಕ ಕೃಷಿ ಭೂಮಿಯನ್ನು ಟೌನ್‌ಶಿಪ್ ಹೆಸರಿನಲ್ಲಿ ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಈ ಭಾಗದ ಬಹುಪಾಲು ರೈತರು ಜೀವನ ನಿರ್ವಹಣೆಗೆ ಕೃಷಿ, ರೇಷ್ಮೆ,…

Read More

ಬೆಂಗಳೂರು: ದೇಶಾದ್ಯಂತ ನೀಟ್ ಪರೀಕ್ಷೆಯ ಗೊಂದಲಗಳ ನಡುವೆಯೂ ವೈದ್ಯರಾಗಬೇಕೆಂಬ ಕನಸು ಹೊತ್ತಿರುವ ಕರ್ನಾಟಕದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ದೊಡ್ಡ ಯಶಸ್ಸು ಸಿಕ್ಕಿದ್ದು, ರಾಜ್ಯಕ್ಕೆ ಬರೋಬ್ಬರಿ 1,122 ಹೆಚ್ಚುವರಿ ಸರ್ಕಾರಿ ಮೆಡಿಕಲ್ ಸೀಟುಗಳು ಮಂಜೂರಾಗಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಪ್ರಕಟಿಸಿದ್ದಾರೆ. ದಾಖಲೆಯ ಮೈಲಿಗಲ್ಲು: ರಾಜ್ಯಕ್ಕೆ ಒಟ್ಟು 1,090 ಕೋಟಿ ರೂ. ಅನುದಾನ ಶನಿವಾರ ವಿಕಾಸಸೌಧದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವರು, “ಒಂದೇ ಬಾರಿಗೆ ಒಂದು ರಾಜ್ಯಕ್ಕೆ ಸಾವಿರಕ್ಕೂ ಅಧಿಕ ಮೆಡಿಕಲ್ ಸೀಟುಗಳು ಲಭಿಸಿರುವುದು ದೇಶದಲ್ಲೇ ಅತ್ಯಂತ ದೊಡ್ಡ ದಾಖಲೆಯಾಗಿದೆ. ಇದು ಕರ್ನಾಟಕದ ವೈದ್ಯಕೀಯ ಮೂಲಸೌಕರ್ಯದ ಸಾಧನೆಗೆ ಸಿಕ್ಕ ಐತಿಹಾಸಿಕ ಸಾಕ್ಷಿ” ಎಂದು ಹರ್ಷ ವ್ಯಕ್ತಪಡಿಸಿದರು. ಈ ಹೆಚ್ಚುವರಿ ಸೀಟುಗಳ ಮಂಜೂರಾತಿಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮೇ 15 ರಂದು ಅಂತಿಮ ಒಪ್ಪಿಗೆ ನೀಡಿದೆ. ಇದರ ಅನ್ವಯ ರಾಜ್ಯಕ್ಕೆ…

Read More