Author: kannadanewsnow09

ಶಿವಮೊಗ್ಗ: ಇಂದಿನ ಒತ್ತಡದ ಜೀವನಶೈಲಿ ಹಾಗೂ ವಯೋಸಹಜ ಕಾರಣಗಳಿಂದ ಅನೇಕರು ಶ್ರವಣ ದೋಷಕ್ಕೆ (ಕೇಳಿಸಿಕೊಳ್ಳುವ ಸಮಸ್ಯೆ) ಒಳಗಾಗುತ್ತಿದ್ದಾರೆ. ಇಂತಹವರಿಗೆ ನೆರವಾಗುವ ನಿಟ್ಟಿನಲ್ಲಿ ಸಾಗರ ನಗರದಲ್ಲಿ ಒಂದು ಮಹತ್ವದ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಲಯನ್ಸ್ ಕ್ಲಬ್ ಸಾಗರ ಶ್ರೀಗಂಧ, ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘ ಹಾಗೂ ನಿವೃತ್ತ ನೌಕರರ ಸಂಘ ಸಾಗರ ಇವರ ಸಂಯುಕ್ತ ಆಶ್ರಯದಲ್ಲಿ, ‘ಟೀಮ್ ಈಶ್ವರ್ ಮಲ್ಪೆ’ ಅವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವಿವರಗಳು: ದಿನಾಂಕ: 12.05.2026, ಮಂಗಳವಾರ. ಸಮಯ: ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ. ಸ್ಥಳ: ಸರ್ಕಾರಿ ಉರ್ದು ಪ್ರೌಢಶಾಲೆ, ಬಿ.ಇ.ಒ (BEO) ಕಚೇರಿ ಎದುರು, ನೆಹರೂ ಮೈದಾನ, ಸಾಗರ. ಶ್ರವಣ ದೋಷವುಳ್ಳವರಿಗೆ ಭರ್ಜರಿ ರಿಯಾಯಿತಿ: ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ‘ಟೀಮ್ ಈಶ್ವರ್ ಮಲ್ಲೆ’ ಅವರು, ಶ್ರವಣ ದೋಷದಿಂದ ಬಳಲುತ್ತಿರುವ ರೋಗಿಗಳಿಗೆ ನೆರವಾಗಲು ಮುಂದೆ ಬಂದಿದ್ದಾರೆ. ಈ ಶಿಬಿರದಲ್ಲಿ ಆಯ್ಕೆಯಾಗುವ ಫಲಾನುಭವಿಗಳಿಗೆ…

Read More

ಬೆಂಗಳೂರು: ನಗರದಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ನಗರದಲ್ಲಿ ಕರೆಂಟ್ ಶಾಕ್ ಹೊಡೆದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ನಗರದಾಧ್ಯಂತ ವರುಣ ಆರ್ಭಟಿಸಿದ್ದಾನೆ. ಇಂದು ಸುರಿದಂತ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳನ್ನು ಭೇಟಿಯಾದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರೋಗ್ಯ ವಿಚಾರಿಸಿದರು. ಅಲ್ಲದೇ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಜೊತೆಗೆ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ತಿಳಿಸಿದರು. ಅಲ್ಲದೇ ಮೃತ 7 ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು. ಮತ್ತೊಂದೆಡೆ ಬೆಂಗಳೂರಿನ ಯಾರಬ್ ನಗರದಲ್ಲಿ ಬೈಕ್ ಪಾರ್ಕ್ ಮಾಡುವಾಗ ದುರಂತವೊಂದು ಸಂಭವಿಸಿದೆ. ವಿದ್ಯುತ್ ಶಾಕ್ ನಿಂದಾಗಿ ಸೈಯದ್ ಸೂಫಿಯಾನ್ ಎನ್ನುವ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಇದೀಗ ಮೃತನ…

Read More

ಮಂಡ್ಯ : ಮದ್ದೂರು ನಗರದ ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯನ್ನು ಅಂದಾಜು 30 ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಮಾದರಿಯಲ್ಲಿ ಆಧುನೀಕರಣ ಮಾಡಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲೇ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಬುಧವಾರ ಹೇಳಿದರು. ನಗರದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 2.25 ಕೋಟಿ ರೂ ಗಳ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು. ಸರ್ಕಾರಿ ಆಸ್ಪತ್ರೆಯಲ್ಲಿನ ಅಗತ್ಯ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಔಷಧ ವಿತರಣಾ ಕೊಠಡಿ, ಅಡುಗೆ ಮನೆ, ಲಾಂಡ್ರಿ ಕಟ್ಟಡ, ಆವರಣ ಗೋಡೆ ಹಾಗೂ ಹೈಟೆಕ್ ಶವಾಗಾರ ಸೇರಿದಂತೆ ಇತರೆ 2.25 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು. ಇದನ್ನು ಸೇರಿದಂತೆ ಈಗಾಗಲೇ ಸುಮಾರು 4 ರಿಂದ 5 ಕೋಟಿ ರೂ ಗಳ ವೆಚ್ಚದಲ್ಲಿ ಕಾಮಗಾರಿಗಳು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಕೇಂದ್ರ ಸೇರಿದಂತೆ, ವೈದ್ಯರು ಹಾಗೂ ದಾದಿಯರ ವಸತಿ…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಹಳೆಯ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ದುರಂತದ ವಿವರ: ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ದಿಢೀರನೆ ಕುಸಿದಿದೆ. ಮಳೆಗೆ ಆಶ್ರಯ ಪಡೆಯುತ್ತಿದ್ದವರು ಮತ್ತು ಹತ್ತಿರದಲ್ಲಿದ್ದವರು ಗೋಡೆಯ ಅವಶೇಷಗಳಡಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರಲ್ಲಿ ಐದು ವರ್ಷದ ಮಗು ಕೂಡ ಸೇರಿರುವುದು ದುರಂತದ ತೀವ್ರತೆಯನ್ನು ಹೆಚ್ಚಿಸಿದೆ. ಮೃತರ ಪಟ್ಟಿ: ತಬೀನ್ ತಾಜ್ (47 ವರ್ಷ) ಮುಬಿನ್ ತಾಜ್ (49 ವರ್ಷ) ಮಾಯ (51 ವರ್ಷ) ಸಾಜಿದ್ (20 ವರ್ಷ) ಅಜು (35 ವರ್ಷ) ಪ್ರೀತಿ (5 ವರ್ಷ) ಸಿಜಿ (47 ವರ್ಷ) ಸ್ಥಳಕ್ಕೆ ಸಿಎಂ ಭೇಟಿ – ಅಧಿಕಾರಿಗಳಿಗೆ ತರಾಟೆ: ಘಟನಾ ಸ್ಥಳಕ್ಕೆ ತಡರಾತ್ರಿ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ…

Read More

ನವದೆಹಲಿ: ಭಾರತದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಅಂತಿಮ ಹಂತದ ಮತದಾನ ಬುಧವಾರ ಮುಕ್ತಾಯಗೊಂಡಿದೆ. ಮತದಾನ ಮುಕ್ತಾಯ ಬೆನ್ನಲ್ಲೇ ಹೊರಬಿದ್ದಿರುವ ವಿವಿಧ ಎಕ್ಸಿಟ್ ಪೋಲ್ ಸಮೀಕ್ಷೆಗಳು ದೇಶದ ಗಮನ ಸೆಳೆದಿದ್ದು, ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಬದಲಾವಣೆಯ ಮುನ್ಸೂಚನೆ ನೀಡಿವೆ. 1. ಪಶ್ಚಿಮ ಬಂಗಾಳ: ಮಮತಾ ಕೋಟೆಗೆ ಲಗ್ಗೆ ಇಡಲಿದೆಯೇ ಬಿಜೆಪಿ? ಬಂಗಾಳದಲ್ಲಿ ಈ ಬಾರಿ ‘ದೀದಿ’ ವರ್ಸಸ್ ‘ಮೋದಿಯವರ ಬಿಜೆಪಿ’ ನಡುವೆ ನಡೆದ ಹೈವೋಲ್ಟೇಜ್ ಕದನದಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ಸಾಧ್ಯತೆ ದಟ್ಟವಾಗಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಚಾಣಕ್ಯ ಸ್ಟ್ರಾಟಜೀಸ್: ಬಿಜೆಪಿ (150-160), ಟಿಎಂಸಿ (130-140), ಇತರರು (6-10). ಮ್ಯಾಟ್ರಿಜ್ (Matrize): ಬಿಜೆಪಿ (146-161), ಟಿಎಂಸಿ (125-140). ಪೋಲ್ ಡೈರಿ: ಬಿಜೆಪಿ (142-171), ಟಿಎಂಸಿ (99-127). ಬುಧವಾರ ನಡೆದ ಅಂತಿಮ ಹಂತದ ಮತದಾನದಲ್ಲಿ ಬರೋಬ್ಬರಿ 90% ರಷ್ಟು ದಾಖಲೆ ಪ್ರಮಾಣದ ಮತದಾನವಾಗಿದ್ದು, ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಅತಿ ಹೆಚ್ಚು…

Read More

ನವದೆಹಲಿ/ಒಡಿಶಾ: ಭಾರತದ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯತ್ತ ಮತ್ತೊಂದು ಮಹತ್ವದ ಹೆಜ್ಜೆ ಇರಿಸಲಾಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಭಾರತೀಯ ನೌಕಾಪಡೆಯು ಒಡಿಶಾ ಕರಾವಳಿಯ ಬಂಗಾಳ ಕೊಲ್ಲಿಯಲ್ಲಿ ನೌಕಾ ನಿರೋಧಕ ಕ್ಷಿಪಣಿ-ಸಣ್ಣ ಶ್ರೇಣಿಯ (NASM-SR) ಚೊಚ್ಚಲ ‘ಸಾಲ್ವೋ’ (Salvo) ಉಡಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮುಖ್ಯಾಂಶಗಳು: ಮೊದಲ ಸಾಲ್ವೋ ಉಡಾವಣೆ: ನೌಕಾಪಡೆಯ ಹೆಲಿಕಾಪ್ಟರ್‌ನಿಂದ ಎರಡು ಕ್ಷಿಪಣಿಗಳನ್ನು ಅತ್ಯಲ್ಪ ಕಾಲದ ಅಂತರದಲ್ಲಿ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಗಾಳಿಯಿಂದ ಉಡಾಯಿಸುವ ಸುಧಾರಿತ ಆಂಟಿ-ಶಿಪ್ ಕ್ಷಿಪಣಿ ವ್ಯವಸ್ಥೆಯ ಇಂತಹ ಉಡಾವಣೆ ಭಾರತದಲ್ಲಿ ಇದೇ ಮೊದಲು. ಯುದ್ಧನೌಕೆ ವಿನ್ಯಾಸದಲ್ಲಿ ಸ್ವಾವಲಂಬನೆ: ನೌಕಾ ವಿಜ್ಞಾನ ಮತ್ತು ತಾಂತ್ರಿಕ ಪ್ರಯೋಗಾಲಯವು (NSTL) ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋದೊಂದಿಗೆ ಸೇರಿ ಫ್ರಂಟ್‌ಲೈನ್ ಯುದ್ಧನೌಕೆ ಯೋಜನೆಯ ಹೈಡ್ರೋಡೈನಾಮಿಕ್ ಕಾರ್ಯಕ್ಷಮತೆ ಮತ್ತು ಮಾದರಿ ಪರೀಕ್ಷೆಯನ್ನು ಪೂರ್ಣಗೊಳಿಸಿದೆ. ಇದು ಹಡಗುಗಳ ವೇಗ, ಚಲನಶೀಲತೆ ಮತ್ತು ಸಮುದ್ರದಲ್ಲಿನ ಸ್ಥಿರತೆಯನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣವಾಗಿ ಖಚಿತಪಡಿಸಿದೆ. ಸುಧಾರಿತ ಶಸ್ತ್ರಸಜ್ಜಿತ ವಾಹನಗಳ ಅನಾವರಣ: ಅಹಲ್ಯಾನಗರದಲ್ಲಿ (ಮಹಾರಾಷ್ಟ್ರ) ನಡೆದ ಸಮಾರಂಭದಲ್ಲಿ…

Read More

ಬೆಂಗಳೂರು: ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ತಾಂತ್ರಿಕವಾಗಿ ರದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಭಾಧ್ಯಕ್ಷರ ಪಾತ್ರ ಮತ್ತು ನಿಯಮಗಳ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆದರು. ನಿಯಮದಂತೆ ರದ್ಧತಿ ಸ್ವಯಂಚಾಲಿತ “ಯಾವುದೇ ಒಬ್ಬ ಜನಪ್ರತಿನಿಧಿಯು ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ತಕ್ಷಣ, ನಿಯಮಗಳ ಪ್ರಕಾರ ಅವರ ಶಾಸಕ ಸ್ಥಾನ ತಾನಾಗಿಯೇ ರದ್ದಾಗುತ್ತದೆ. ಇದನ್ನು ರದ್ದು ಮಾಡುವ ವಿಶೇಷ ಅಧಿಕಾರ ಸಭಾಧ್ಯಕ್ಷರಿಗಿಲ್ಲ. ಒಂದು ವೇಳೆ ನ್ಯಾಯಾಲಯವು ಈ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ ಮಾತ್ರ ಅವರ ಸದಸ್ಯತ್ವ ಮರುಸ್ಥಾಪನೆಯಾಗುತ್ತದೆ,” ಎಂದು ಯು.ಟಿ. ಖಾದರ್ ವಿವರಿಸಿದರು. ತಾರತಮ್ಯದ ಆರೋಪಕ್ಕೆ ತಿರುಗೇಟು ಶಾಸಕರನ್ನು ಅನರ್ಹಗೊಳಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಭಾಧ್ಯಕ್ಷರು ತಳ್ಳಿಹಾಕಿದರು. “ಅನರ್ಹತೆ ವಿಚಾರದಲ್ಲಿ ಪಕ್ಷಪಾತ ಮಾಡುವ ಪ್ರಶ್ನೆಯೇ ಇಲ್ಲ. ಶಾಸಕ…

Read More

ಬೆಂಗಳೂರು: ನಗರ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರಿಗೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅಲ್ಲದೇ ಮೃತರಾದಂತವರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ಕಾಂಪೌಂಡ್ ಗೋಡೆ ಕುಸಿತಕ್ಕೆ ಕಾರಣವೇನು ಎನ್ನುವ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಬೀದಿ ಬದಿಯ ವ್ಯಾಪಾರಿಗಳು ಮಳೆಯಿಂದಾಗಿ ಕಾಂಪೌಂಡ್ ಗೋಡೆಯ ಬಳಿಯಲ್ಲಿ ಆಶ್ರಯ ಪಡೆದುಕೊಳ್ಳಲು ನಿಂತಿದ್ದರು. ಈ ಸಂದರ್ಭದಲ್ಲಿ ಕುಸಿತಗೊಂಡು ದುರ್ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದರು. https://kannadanewsnow.com/kannada/udf-wins-power-in-kerala-congress-alliance-predicts-grand-comeback-after-10-years/…

Read More

ಶಿವಮೊಗ್ಗ: ಆಧ್ಯಾತ್ಮಿಕ ಚೈತನ್ಯದ ನೆಲೆವೀಡು, ಸೊರಬ ತಾಲ್ಲೂಕಿನ ಕ್ಯಾಸನೂರಿನ ಖೇಚರಯೋಗಿ ಶ್ರೀ ಗುರುಬಸವದೇವರ ಸಂಸ್ಥಾನಮಠದಲ್ಲಿ ಬುಧವಾರ ಒಂದು ಐತಿಹಾಸಿಕ ಧಾರ್ಮಿಕ ಘಟ್ಟಕ್ಕೆ ಸಾಕ್ಷಿಯಾಯಿತು. ಶ್ರೀ ಗುರುಬಸವ ಸ್ವಾಮಿಗಳ ಕರ್ತೃಗದ್ದುಗೆ, ಶ್ರೀ ಚೌಡೇಶ್ವರಿ ದೇವಿಯ ಗುಡಿ ಹಾಗೂ ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭವು ಅತ್ಯಂತ ಭಕ್ತಿಭಾವದಿಂದ ಜರುಗಿತು. ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಸಂಸ್ಕಾರ ಅನಿವಾರ್ಯ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಶೈಲ ಜಗದ್ಗುರು ಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ವೀರಶೈವ ಧರ್ಮದ ನೈಜ ಅರ್ಥವನ್ನು ಭಕ್ತರಿಗೆ ಮನವರಿಕೆ ಮಾಡಿಕೊಟ್ಟರು. “ವೀರಶೈವ ಎಂದರೆ ಕೇವಲ ಹೆಸರಿಗೆ ಲಿಂಗಧಾರಣೆ ಮಾಡಿದರೆ ಸಾಲದು. ಪ್ರತಿದಿನ ಇಷ್ಟಲಿಂಗ ಪೂಜೆಯನ್ನು ನಿಷ್ಠೆಯಿಂದ ಮಾಡುವವರೇ ನಿಜವಾದ ವೀರಶೈವರು. ಈ ಆಚಾರ ಮತ್ತು ಸಂಸ್ಕಾರವನ್ನು ನಾವು ಇಂದಿನ ಮಕ್ಕಳಲ್ಲಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಧರ್ಮವನ್ನು ಹಸ್ತಾಂತರಿಸಬೇಕು,” ಎಂದು ಕರೆ ನೀಡಿದರು. ಧರ್ಮ ಮತ್ತು ಸಮಾಜದ ನಡುವಿನ ಸಂಬಂಧದ ಕುರಿತು ಮಾತನಾಡಿದ ಅವರು, ಧರ್ಮವನ್ನು ನಾವು…

Read More

ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯ ಬಳಿಯಲ್ಲಿನ ಕಾಂಪೌಂಡ್ ಭಾರೀ ಮಳೆಯಿಂದಾಗಿ ಕುಸಿದು ಬಿದ್ದಿತ್ತು. ಈ ಕಾಂಪೌಂಡ್ ಬಳಿಯಲ್ಲಿ ಆಶ್ರಯ ಪಡೆದಿದ್ದಂತ ಬೀದಿ ಬದಿಯ 8 ಮಂದಿ ವ್ಯಾಪಾರಿಗಳು ಸಾವನ್ನಪ್ಪಿದ್ದರು. ಈ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಿದರು. ಅಲ್ಲದೇ ಕಾಂಪೌಂಡ್ ಕುಸಿತ ದುರಂತಕ್ಕೆ ಆಘಾತವನ್ನು ವ್ಯಕ್ತ ಪಡಿಸಿದರು. ಇಂದು ಬೆಂಗಳೂರು ನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ನಗರದ ವಿವಿಧೆಡೆಯಲ್ಲಿ ಸುರಿದಂತ ಭಾರೀ ಮಳೆಯಿಂದಾಗಿ ಬಹುದೊಡ್ಡ ಅನಾಹುತವೇ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಶಿವಾಜಿನಗರ ಬಳಿಯಲ್ಲಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತಗೊಂಡು 8 ಮಂದಿ ಸಾವನ್ನಪ್ಪಿದ್ದರೇ, ನಾಲ್ಕಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯವನ್ನು ತಿಳಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೂಡಲೇ ಘಟನಾ ಸ್ಥಳಕ್ಕೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಸ್ಥಳದಲ್ಲಿದ್ದಂತ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಲ್ಲಿಂದ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಂತ ಆಸ್ಪತ್ರೆಗೆ ತೆರಳಿದಂತ ಸಿಎಂ ಸಿದ್ಧರಾಮಯ್ಯ ಅವರು…

Read More