Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: 2026 ರ ಐಸಿಸಿ ಟಿ 20 ವಿಶ್ವಕಪ್ಗೆ ಮುನ್ನ ನಾಟಕೀಯ ತಿರುವು ಪಡೆದು, ಭಾರತ ವಿರುದ್ಧದ ಮಾರ್ಕ್ಯೂ ಗ್ರೂಪ್ ಲೀಗ್ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಭಾನುವಾರ ಔಪಚಾರಿಕವಾಗಿ ಘೋಷಿಸಿತು. ಆದರೆ, ಸರ್ಕಾರವು ರಾಷ್ಟ್ರೀಯ ತಂಡವನ್ನು ಟೂರ್ನಮೆಂಟ್ನ ಉಳಿದ ಪಂದ್ಯಗಳಲ್ಲಿ ಭಾಗವಹಿಸಲು ಅನುಮತಿ ನೀಡಿದ್ದರೂ ಸಹ. https://twitter.com/CricSubhayan/status/2017972901597904972 ಬಾಂಗ್ಲಾದೇಶವನ್ನು ಸ್ಕಾಟ್ಲೆಂಡ್ನೊಂದಿಗೆ ಐಸಿಸಿ ವಿವಾದಾತ್ಮಕವಾಗಿ ಬದಲಾಯಿಸಿದ ನಂತರ ಪಾಕಿಸ್ತಾನದ ನಿಲುವಿನ ತೀವ್ರ ಪರಿಶೀಲನೆ ಮತ್ತು ಈ ಪ್ರದೇಶದಲ್ಲಿನ ರಾಜಕೀಯ ಉದ್ವಿಗ್ನತೆಯ ಮಧ್ಯೆ ಈ ಘೋಷಣೆ ಬಂದಿದೆ. ಭಾರತದ ಘರ್ಷಣೆಯನ್ನು ಸರ್ಕಾರ ನಿಷೇಧಿಸುತ್ತದೆ, ಆದರೆ ಭಾಗವಹಿಸುವಿಕೆಯನ್ನು ಸರ್ಕಾರ ಅನುಮೋದಿಸುತ್ತದೆ ತನ್ನ ಪರಿಶೀಲಿಸಿದ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಹಂಚಿಕೊಂಡ ಅಧಿಕೃತ ಹೇಳಿಕೆಯಲ್ಲಿ, ಪಾಕಿಸ್ತಾನ ಸರ್ಕಾರ ಹೀಗೆ ಹೇಳಿದೆ: “ಪಾಕಿಸ್ತಾನದ ಇಸ್ಲಾಮಿಕ್ ಗಣರಾಜ್ಯ ಸರ್ಕಾರವು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಐಸಿಸಿ ವಿಶ್ವ ಟಿ 20 2026 ರಲ್ಲಿ ಭಾಗವಹಿಸಲು ಅನುಮೋದನೆ ನೀಡಿದೆ, ಆದಾಗ್ಯೂ, ಫೆಬ್ರವರಿ 15, 2026 ರಂದು ಭಾರತದ ವಿರುದ್ಧ ನಿಗದಿಯಾಗಿರುವ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್…
ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಾರಿಯ ಬಜೆಟ್ ಯಥಾಪ್ರಕಾರ ನಿರಾಶದಾಯಕವಾಗಿದ್ದು, ಕರ್ನಾಟಕದ ದೃಷ್ಟಿಕೋನದಿಂದ ಕೇಂದ್ರ ಬಜೆಟ್ನಿಂದ ಯಾವುದೇ ಲಾಭವಾಗಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ. ಕೇಂದ್ರ ಬಜೆಟ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ಸಚಿವರು, ಹೈಸ್ಪೀಡ್ ರೈಲು ಕಾರಿಡಾರ್ನಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನವಾಗುವುದಿಲ್ಲ. ಬಡವರಿಗೆ ಯಾವುದೇ ಕಲ್ಯಾಣ ಯೋಜನೆಗಳನ್ನು ಪ್ರಕಟಿಸಿಲ್ಲ. ಇದು ಪ್ರತಿ ವರ್ಷದಂತೆ ನಿರಾಶದಾಯಕವಾಗಿದೆ ಎಂದು ಹೇಳಿದ್ದಾರೆ. ದೇಶದಲ್ಲಿನ ದಮನಿತರು, ರೈತರು ಮತ್ತು ಯುವಜನರ ಅಗತ್ಯಗಳನ್ನು ಈಡೇರಿಸಲು ಈ ಬಜೆಟ್ ವಿಫಲವಾಗಿದೆ. ಬದಲಾಗಿ ಶ್ರೀಮಂತರು ಮತ್ತು ಸಾಮಾನ್ಯ ಜನರ ನಡುವಿನ ಆರ್ಥಿಕ ಅಂತರವನ್ನು ಮತ್ತಷ್ಟು ಹೆಚ್ಚಿಸುವ ಅಪಾಯವನ್ನು ಸೃಷ್ಟಿಸಿದೆ ಎಂದು ಪ್ರತಿಕ್ರಿಯಸಿದ್ದಾರೆ. ಕರ್ನಾಟಕ ಸರ್ಕಾರವು, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಬೇಕು ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ ₹5,600 ಕೋಟಿ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿತ್ತು. ಆದರೆ…
ಶಿವಮೊಗ್ಗ: ಸಿಜೆ ರಾಯ್ ಆತ್ಮಹತ್ಯೆ ಕೇಸ್ ಎಸ್ ಐಟಿ ತನಿಖೆಯಿಂದ ಬಯಲು ಆಗಬೇಕಿದೆ. ಆತ್ಮಹತ್ಯೆಯ ನಿಜಾಂಶಗಳು ಗೊತ್ತಾಗಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐಟಿ ಮತ್ತು ಇಡಿ ಬಳಕೆ ಬಗ್ಗೆ ದೇಶದಲ್ಲಿ ಜನರಲ್ಲಿ ಚಿಂತನೆ ನಡೆದಿದೆ. ಈ ಸಂಸ್ಥೆಗಳ ದುರುಪಯೋಗ ಆಗುತ್ತಿದೆ ಎಂದು ಸಾರ್ವಜನಿಕರೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಜನರಿಗೆ ಭಯ ಆಗುತ್ತಿದೆ ಮತ್ತು ಅನೇಕರ ತೇಜೋವಧೆ ನಡೆಯುತ್ತಿದೆ. ರಾಜಕೀಯವಾಗಿ ಬ್ಲ್ಯಾಕ್ ಮೇಲ್ ಗೆ ಮತ್ತು ಬೇರೆ ಬೇರೆ ಉದ್ದೇಶಗಳಿಗೆ ದಾಳಿಯಾಗುತ್ತಿರುವಂತ ವ್ಯವಸ್ಥೆ ದೇಶದಲ್ಲಿದೆ. ಆದರೆ ಸಿ ಜೆ ರಾಯ್ ಆತ್ಮಹತ್ಯೆ ಕುರಿತು ಈಗಲೇ ಏನು ಹೇಳಲು ಬರುವುದಿಲ್ಲ. ತನಿಖೆಯ ಮೂಲಕವೇ ಸತ್ಯ ತಿಳಿಯಬೇಕಿದೆ ಎಂದರು. ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರವಾಗಿ ಬಳಕೆ ಆಗುತ್ತಿದೆ. ಇಡಿ ದಾಳಿ ಪ್ರಕರಣದಲ್ಲಿ ಶೇಕಡಾ 95 ರಷ್ಟು ದಾಳಿಗೊಳಗಾದವರು ತಪ್ನು ಮಾಡಿಲ್ಲ ಎನ್ನುವುದು ಬಹಿರಂಗ ಆಗಿದೆ. ದಾಳಿಗೊಳಗಾದವರಿಗೆ ಹಿಂಸೆ ಆಗುತ್ತದೆ ಇದರಿಂದ ಸಮಸ್ಯೆ ಆಗುತ್ತಿದೆ. ರಾಯ್…
ನವದೆಹಲಿ: ಪ್ರಸಕ್ತ ಸಾಲಿನ ಮುಂಗಡ ಪತ್ರದಲ್ಲಿ ಭೂಮಿಯಲ್ಲಿನ ಅಪರೂಪದ ಅಯಸ್ಕಾಂತಗಳ (ರೇರ್ ಅರ್ಥ್ ಮೆಟಲ್ಸ್) ಉತ್ಪಾದನೆ-ಬಳಕೆ ಹಾಗೂ ಎಲೆಕ್ಟ್ರಿಕ್ ವಾಹನಗಳ ಉತ್ತೇಜನಕ್ಕೆ ದೊಡ್ಡ ಪ್ರಮಾಣದ ಘೋಷಣೆಗಳನ್ನು ಮಾಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಇವಿ ಬ್ಯಾಟರಿಗಳು ಮತ್ತು ಇವಿ ವಾಹನಗಳ ಚಲನಶೀಲತೆಯನ್ನು ಉತ್ತೇಜಿಸಲು ಬಜೆಟ್ ನಲ್ಲಿ ಒತ್ತು ನೀಡಲಾಗಿದ್ದು; ಬ್ಯಾಟರಿ ತಯಾರಿಕೆಗೆ ಕಸ್ಟಮ್ಸ್ ಸುಂಕ ವಿನಾಯಿತಿಯನ್ನು ಮುಂದುವರಿಸಲಾಗಿದೆ. ಅಲ್ಲದೆ; ಬ್ಯಾಟರಿ ಉತ್ಪಾದನೆ ಮತ್ತು ಇವಿ ಪೂರೈಕೆ ಸರಪಳಿಯನ್ನು ಬಲಪಡಿಸಲು ಲಿಥಿಯಂ-ಐಯಾನ್ ಕೋಶಗಳನ್ನು ತಯಾರಿಸಲು ಬಳಕೆ ಮಾಡಲಾಗುವ ಬಂಡವಾಳ ಸರಕುಗಳ ಮೇಲೆ ಮೂಲ ಕಸ್ಟಮ್ಸ್ ಸುಂಕ (ಬಿಸಿಡಿ) ವಿನಾಯಿತಿಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಸೌರ ಗಾಜಿನ ತಯಾರಿಕೆಯಲ್ಲಿ ಬಳಸುವ ಸೋಡಿಯಂ ಆಂಟಿಮೋನೇಟ್ ಆಮದಿನ ಮೇಲೆ ಮೂಲ ಅಬಕಾರಿ ಸುಂಕ (BCD) ವಿನಾಯಿತಿ ನೀಡಲಾಗಿದೆ. ದೇಶೀಯ ಸೌರ ಉತ್ಪಾದನೆಯನ್ನು…
ರಾಯಚೂರು : ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಬ್ರಹ್ಮಲೀನರಾದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು , ಮೈಸೂರು ಮುಂಬಯಿ ಕರ್ನಾಟಕ ವಿಭಾಗಗಳಿದ್ದು, ಈ ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿದ್ದರು. ಗುರುಪೀಠದಲ್ಲಿ ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದರು. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣ ವಾಗಿದೆ.ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ…
ಇರಾನ್: IRGC ಹುದ್ದೆಯ ನಂತರ ಯುರೋಪಿಯನ್ ಸೈನ್ಯಗಳನ್ನು ‘ಭಯೋತ್ಪಾದಕ ಗುಂಪುಗಳೆಂದು ಇರಾನ್ ಘೋಷಣೆಯುರೋಪಿಯನ್ ಒಕ್ಕೂಟವು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಅನ್ನು ಭಯೋತ್ಪಾದಕ ಸಂಘಟನೆ ಎಂದು ಹಣೆಪಟ್ಟಿ ಕಟ್ಟುವ ನಿರ್ಧಾರಕ್ಕೆ, ಇರಾನ್ ಯುರೋಪ್ ಜೊತೆಗಿನ ತನ್ನ ಬಿಕ್ಕಟ್ಟನ್ನು ಹೆಚ್ಚಿಸಿದೆ, ಯುರೋಪಿಯನ್ ರಾಷ್ಟ್ರಗಳ ಸೈನ್ಯಗಳನ್ನು “ಭಯೋತ್ಪಾದಕ ಗುಂಪುಗಳು ಎಂದು ಘೋಷಿಸಿದೆ. ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಅವರು ಭಾನುವಾರ ಈ ಕ್ರಮವನ್ನು ಘೋಷಿಸಿದರು, ಶಾಸಕರು ಸದನದೊಳಗೆ ಗಾರ್ಡ್ಗಳ ಹಸಿರು ಸಮವಸ್ತ್ರವನ್ನು ಧರಿಸಿ ಏಕತೆಯ ಪ್ರದರ್ಶನ ನಡೆಸಿದರು. ರಾಜ್ಯ ದೂರದರ್ಶನದ ದೃಶ್ಯಗಳಲ್ಲಿ ಸಂಸದರು “ಅಮೆರಿಕಕ್ಕೆ ಸಾವು”, “ಇಸ್ರೇಲ್ಗೆ ಸಾವು” ಮತ್ತು “ಯುರೋಪ್ಗೆ ನಾಚಿಕೆಗೇಡು” ಸೇರಿದಂತೆ ಘೋಷಣೆಗಳನ್ನು ಕೂಗುತ್ತಿರುವುದು ತೋರಿಸಿದೆ, ಇದು EU ನ ಕ್ರಮದ ಬಗ್ಗೆ ಟೆಹ್ರಾನ್ನ ಕೋಪವನ್ನು ಒತ್ತಿಹೇಳುತ್ತದೆ. https://twitter.com/RT_com/status/2017873782111629624 ಬ್ಲಾಕ್ನ “ಬೇಜವಾಬ್ದಾರಿಯುತ ಕ್ರಮ” ಎಂದು ಅವರು ಕರೆದದ್ದನ್ನು ಖಂಡಿಸಿದ ಗಾಲಿಬಾಫ್, “IRGC ಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವುದರ ವಿರುದ್ಧ ಪ್ರತಿಕ್ರಮಗಳ ಕುರಿತ ಕಾನೂನಿನ 7 ನೇ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್ : ಫೆಬ್ರವರಿ 1 ರ ಭಾನುವಾರ ಮೆಲ್ಬೋರ್ನ್ ಪಾರ್ಕ್ನ ರಾಡ್ ಲೇವರ್ ಅರೆನಾದಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ 2026 ರ ಫೈನಲ್ನಲ್ಲಿ ವಿಶ್ವದ ನಂ.1 ಮತ್ತು ಸ್ಪ್ಯಾನಿಷ್ ಟೆನಿಸ್ ತಾರೆ ಕಾರ್ಲೋಸ್ ಅಲ್ಕರಾಜ್ ಗೆಲುವಿನೊಂದಿಗೆ ಐತಿಹಾಸಿಕ ವೃತ್ತಿಜೀವನದ ಗ್ರ್ಯಾಂಡ್ ಸ್ಲ್ಯಾಮ್ ಅನ್ನು ಪೂರ್ಣಗೊಳಿಸಿದರು. ಸ್ಪೇನ್ ಆಟಗಾರ ಸೆರ್ಬಿಯಾದ ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ಅವರನ್ನು ಪ್ರಶಸ್ತಿ ಹಣಾಹಣಿಯಲ್ಲಿ ಸೋಲಿಸಿ ತಮ್ಮ ಮೊದಲ ಮೆಲ್ಬೋರ್ನ್ ಮೇಜರ್ ಪ್ರಶಸ್ತಿಯನ್ನು ಗೆದ್ದರು. ಅಲ್ಕರಾಜ್ ಮೊದಲ ಸೆಟ್ ಅನ್ನು ಕಳೆದುಕೊಂಡರು, ನಂತರ ಮುಂದಿನ ಮೂರು ಸೆಟ್ಗಳಲ್ಲಿ – 2-6, 6-3, 6-3, 7-5 ಸೆಟ್ಗಳಿಂದ ಜೊಕೊವಿಕ್ ಅವರನ್ನು ಸೋಲಿಸಿ, ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು ಮತ್ತು ವೃತ್ತಿಜೀವನದ ಗ್ರ್ಯಾಂಡ್ ಸ್ಲ್ಯಾಮ್ ಅನ್ನು ಪೂರ್ಣಗೊಳಿಸಿದರು. ಸ್ಪೇನ್ ಆಟಗಾರನ ಮೊದಲ ಆಸ್ಟ್ರೇಲಿಯನ್ ಓಪನ್ ಫೈನಲ್ ಪ್ರದರ್ಶನವು ಐತಿಹಾಸಿಕ ವಿಜಯದಲ್ಲಿ ಕೊನೆಗೊಂಡಿತು. ಮೆಲ್ಬೋರ್ನ್ ಸ್ಲ್ಯಾಮ್ನಲ್ಲಿ ಅಲ್ಕರಾಜ್ ಅವರ ಕೊನೆಯ ಅತ್ಯುತ್ತಮ ಪ್ರದರ್ಶನವೆಂದರೆ ಕ್ವಾರ್ಟರ್ ಫೈನಲ್,…
ಬೆಂಗಳೂರು: ನಾಟಕ&ಚಿತ್ರ ಕಲಾವಿದ ದೇವನಾಗೇಶ್ (62)ಅವರು ಬೆಂಗಳೂರಿನಲ್ಲಿ ನಿಧನರಾದರು. ಅವರು ಕಲಾವಿದೆಯಾಗಿದ್ದ ಪತ್ನಿ ರತ್ನನಾಗೇಶ್, ಒಬ್ಬ ಪುತ್ರನನ್ನು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ದೇವನಾಗೇಶ್ ಅಂತ್ಯಕ್ರಿಯೆ ಅವರ ಹುಟ್ಟೂರಾದ ಚನ್ನರಾಯಪಟ್ಟಣ ತಾಲೂಕು ನುಗ್ಗೇಹಳ್ಳಿ ಹೋಬಳಿ ಕಲ್ಕೆರೆ ಬಳಿ ದೇವಿಹಳ್ಳಿಯಲ್ಲಿ ಇಂದು ಸಂಜೆ ನಡೆಯಲಿದೆ. ದೇವನಾಗೇಶ್ ನಿಧನಕ್ಕೆ ಚಿತ್ರರಂಗ ಮತ್ತು ಹಾಸನದ ರಂಗಸಿರಿ ಬಳಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ನಾಗೇಶ್ ಪ್ರತಿಭಾವಂತ ಕಲಾವಿದರಾಗಿದ್ದರು. ಬೆಂಗಳೂರಿನಿಂದ ತಮ್ಮ ನಾಟಕ ತಂಡವನ್ನು ಕರೆತಂದು ತಗಡೂರಿನಲ್ಲಿ ನಾಟಕ ಮಾಡಿಸಿದ್ದನ್ನು ಮರೆಯುವಂತಿಲ್ಲ ಎಂದು ಹಳೆ ನೆನಪು ಮೆಲುಕು ಹಾಕಿ, ಶೋಕಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ನಾಗೇಶ್ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ಪ್ರಾರ್ಥಿಸಿದ್ದಾರೆ. https://kannadanewsnow.com/kannada/good-news-for-the-people-of-sagar-taluk-mla-gopalakrishna-belur-to-inaugurate-sagar-urban-transport-tomorrow/ https://kannadanewsnow.com/kannada/budget-2026-no-tax-on-bike-accident-compensation-insurance-money-central-government-makes-important-announcement/
ಶಿವಮೊಗ್ಗ: ಸಾಗರದ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನಾಳೆಯಿಂದ ಸಾಗರ ನಗರ ಸಾರಿಗೆ ಬಸ್ ಸಂಚಾರ ಆರಂಭಗೊಳ್ಳಲಿದೆ. ಇದಕ್ಕೆ ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆ, ತಾಲ್ಲೂಕು ಹಂತದಲ್ಲಿ ನಗರ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯಲ್ಲೇ ಮೊದಲು ಎನ್ನುವಂತೆ ಸಾಗರ ನಗರ ಸಾರಿಗೆಗೆ ನಾಳೆ ಜನರ ಸೇವೆಗೆ ತೆರೆದುಕೊಳ್ಳಲಿದೆ. ನಾಳೆ ಬೆಳಗ್ಗೆ 10.30ಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ನಗರ ಸಾರಿಗೆ ನೂತನ ಬಸ್ ಮಾರ್ಗಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಆ ಬಳಿಕ ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ವಿವಿಧ ಮಾರ್ಗದಲ್ಲಿ ಸಾಗರ ನಗರ ಸಾರಿಗೆ ಬಸ್ ಸಂಚಾರ ಆರಂಭಗೊಳ್ಳಲಿದೆ. ಈ ಮಾರ್ಗದಲ್ಲಿ ಸಾಗರ ನಗರ ಸಾರಿಗೆ ಬಸ್ ಸಂಚಾರ ಆರಂಭ ಸಾಗರ, ಸಿಗಂದೂರು, ಮರಾಠಿಕೇರಿ, ನಾಗೋಡಿ – ಸಮಯ ಸಂಜೆ 5.15ಕ್ಕೆ ನಾಗೋಡಿ, ಮರಾಠಿಕೇರಿ, ಸಿಗಂದೂರು, ಸಾಗರ – ಸಮಯ ಬೆಳಗ್ಗೆ 7 ಗಂಟೆಗೆ…
ರಾಯಚೂರು: ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಮೂಲಕ ಜಾತಿಗಣತಿ ವರದಿ ಬಿಡುಗಡೆ ಶೀಘ್ರವೇ ಆಗಲಿದೆ ಎಂಬುದಾಗಿ ತಿಳಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ಮಾತನಾಡಿದಂತ ಅವರು, ನಾನು ಯಾವತ್ತೂ ಅಧಿಕಾರದ ಹಿಂದೆ ಬಿದ್ದವನಲ್ಲ. ನಾನು ಹೋರಾಟದ ಮೂಲಕ ರಾಜಕೀಯ ಮಾಡುತ್ತಾ ಬಂದವನು. ಮುಂದೆಯೂ ಶಕ್ತಿ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಅವರ ಪರ ಹೋರಾಟ ಮಾಡುತ್ತೇನೆ ಎಂದರು. ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಅಂದ್ರೆ ಎರಡು ತಿಂಗಳಿಲ್ಲಿ ವರದಿ ಬಿಡುಗಡೆ ಮಾಡುತ್ತೇವೆ. ಸರ್ವೆ ಆಗಿದೆ. ಆ ಬಗ್ಗೆ ವರದಿ ಕೊಟ್ಟ ಮೇಲೆ ಅಂಗೀಕರಿಸಿ ಬಿಡುಗಡೆ ಮಾಡಲಾಗುತ್ತದೆ. ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. https://kannadanewsnow.com/kannada/budget-2026-no-tax-on-bike-accident-compensation-insurance-money-central-government-makes-important-announcement/ https://kannadanewsnow.com/kannada/amusement-park-in-sagara-closed-due-to-flexing-problem-tender-process-in-trouble/













