Subscribe to Updates
Get the latest creative news from FooBar about art, design and business.
Author: kannadanewsnow09
ಹುಬ್ಬಳ್ಳಿ : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಮಾದರಿಯಾಗಿವೆ. ಈ ಗ್ಯಾರಂಟಿಗಳಿಗೆ ವರ್ಷಕ್ಕೆ ಅರವತ್ತು ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. ಐದು ವರ್ಷಕ್ಕೆ ಮೂರು ಲಕ್ಷ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು ಹೇಳಿದರು. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಸಾಕಷ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಆದರೆ ಅವರು ಯಾರೂ ನಮ್ಮ ಸರ್ಕಾರ ನೀಡಿರುವ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂತಹ ಮಹತ್ವದ ಅಭೂತಪೂರ್ವ ಗ್ಯಾರಂಟಿಗಳನ್ನು ಜಾರಿ ಮಾಡಿ ಮಾದರಿಯಾಗಿದೆ ಎಂದು ಬಣ್ಣಿಸಿದರು. ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರು…
ಬೆಂಗಳೂರು: ರಾಜ್ಯದ ಜೈಲಿನಲ್ಲಿರುವಂತ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವಂತ ಸೌಕರ್ಯಗಳ ಕುರಿತಂತೆ ಮಹತ್ವದ ಆದೇಶವನ್ನು ಕಾರಾಗೃಹ ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿದ್ದಾರೆ. ಅದರಲ್ಲಿ ನಟ ದರ್ಶನ್ ಅವರಿಗೆ ಹೆಚ್ಚುವರಿ ಬ್ಲಾಂಕೆಟ್ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿರುಂತ ಆದೇಶದಲ್ಲಿ ಬೆಂಗಳೂರು: ರಾಜ್ಯದ ಜೈಲಿನಲ್ಲಿರುವಂತ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವಂತ ಸೌಕರ್ಯಗಳ ಕುರಿತಂತೆ ಮಹತ್ವದ ಆದೇಶವನ್ನು ಕಾರಾಗೃಹ ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿದ್ದಾರೆ. ಅದರಲ್ಲಿ ನಟ ದರ್ಶನ್ ಅವರಿಗೆ ಹೆಚ್ಚುವರಿ ಬ್ಲಾಂಕೆಟ್ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ರಾಜ್ಯ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಹೊರಡಿಸಿರುಂತ ಆದೇಶದಲ್ಲಿ ವಿಚಾರಣಾಧೀನ ಆರೋಪಿಗೆ ಜೈಲಿನಲ್ಲಿ ಕೊಡುವೆ ಬ್ಲಾಂಕೆಟ್ ಬಳಸಬೇಕು. ಹೆಚ್ಚುವರಿಯಾಗಿ ಒಂದು ಬ್ಲಾಂಕೆಟ್ ನೀಡಲಾಗುತ್ತದೆ. ಅದರ ಹೊರತಾಗಿ ಯಾವುದೇ ಹಾಸಿಗೆ ಸೌಲಭ್ಯ ಇರೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಸೂಚಿಸಲಾಗಿದೆ. ಜೈಲಿನ ನಿಯಮಾವಳಿ ಪ್ರಕಾರ ಆಹಾರ, ಬಟ್ಟೆ, ಹಾಸಿಗೆ ನೀಡಲಾಗುತ್ತದೆ. ಸಂದರ್ಶನ ವೇಳೆ…
ಶಿವಮೊಗ್ಗ: ಹಾಲಪ್ಪ 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದರೂ ನಾನು ಎದುರಿಸೋದಕ್ಕೆ ಸಿದ್ಧನಿದ್ದೇನೆ. ಅದಕ್ಕೆಲ್ಲ ಜಗ್ಗೋದು ಇಲ್ಲ, ಬಗ್ಗೋದು ಇಲ್ಲ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಬಹಿರಂಗವಾಗಿಯೇ ಸವಾಲ್ ಹಾಕಿದ್ದಾರೆ. ಇಂದು ಸುದ್ದಿಗಾರರು ಮಾನನಷ್ಟ ಮೊಕದ್ದಮೆ ನೋಟಿಸ್ ಕುರಿತಂತೆ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಹಾಲಪ್ಪ ಶಾಸಕರಾಗಿದ್ದಂತ ಸಂದರ್ಭದಲ್ಲಿ ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿಯ ರಾಮಪ್ಪನವರ ನಡುವೆ ವೈಮನಸ್ಸು ಇದ್ದ ಕಾರಣ, ಅಂದಿನ ಬಿಜೆಪಿ ಸರ್ಕಾವು ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಹೊರಟಿತ್ತು. ಆ ಬಗ್ಗೆ ಹಾಲಪ್ಪ ವಿರೋಧ ವ್ಯಕ್ತ ಪಡಿಸಲಿಲ್ಲ. ಅದಕ್ಕೆ ಸಮ್ಮತಿ ಎನ್ನುವಂತೆ ಮೌನವಾಗಿಯೇ ಇದ್ದರು. ಹಾಗಾಗೀ ನಾನು ಬಹಿರಂಗವಾಗಿ ಅವರ ವಿರುದ್ಧ ಮಾತನಾಡಿದ್ದೇನೆ ಎಂದರು. ಸಿಗಂದೂರು ದೇವಸ್ಥಾನದ ವಿಚಾರವಾಗಿ ನಾನು ಯಾವತ್ತೂ ರಾಜಕೀಯ ಮಾಡುವುದಿಲ್ಲ. ದೇವಿಯ ಸನ್ನಿಧಿಗೆ ನಮ್ಮ ಕುಟುಂಬ ತಲೆ ತಲಾಂತರಿಂದ ನಡೆದುಕೊಳ್ಳುತ್ತಿದೆ. ನಾನು ಸಿಗಂದೂರು ದೇವಿಯ ಭಕ್ತನಾಗಿದ್ದೇನೆ. ನಾನು ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿ ಅಥವಾ ಪೂಜೆ ಮಾಡುವಂತ ಭಟ್ಟರ…
ಬೆಂಗಳೂರು: ನಗರದ ಮೆಜೆಸ್ಟಿಕ್ ನಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ಸಬ್ ಅರ್ಬನ್ ರೈಲು ಯೋಜನೆಗೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಮೆಜೆಸ್ಟಿಕ್ ಟು ಏರ್ ಪೋರ್ಟ್ ಗೆ ಸಬ್ ಅರ್ಬನ್ ರೈಲು ಯೋಜನೆಗೆ ಸುಮಾರು 4,100 ಕೋಟಿ ವೆಚ್ಚ ಆಗಲಿದೆ. ಇದಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. 2030ರ ವೇಳೆಗೆ ಕಾಮಗಾರಿ ಮುಗಿಯೋ ಸಾಧ್ಯತೆ ಇದೆ. https://kannadanewsnow.com/kannada/cm-siddaramaiah-issues-stern-instructions-to-all-ministers-to-attend-the-session-in-person-not-absent/ https://kannadanewsnow.com/kannada/ex-minister-harathalu-halappa-defamation-suit-notice-to-mla-belur-gopalakrishna/
ಬೆಂಗಳೂರು: ರಾಜ್ಯದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದ ವೇಳೆಯಲ್ಲೇ ಕೆಲ ಸಚಿವರು ಗೈರು ಹಾಜರಾಗಿದ್ದರ ಬಗ್ಗೆ ವಿಪಕ್ಷಗಳ ಸದಸ್ಯರು ಆಕ್ರೋಶ ಹೊರಹಾಕಿದ್ದರು. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಅಧಿವೇಶನದಕ್ಕೆ ಎಲ್ಲರೂ ಹಾಜರಿರಬೇಕು. ಯಾವುದೇ ಕಾರಣಕ್ಕೂ ಗೈರಾಗದಂತೆ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವಿಧಾನಮಂಡಲದ ಅಧಿವೇಶನಕ್ಕೆ ಸಚಿವರೇ ಗೈರು ಹಾಜರಾಗುವುದರಿಂದ ಸಾರ್ವಜನಿಕ ವಲಯದಲ್ಲಿ ತಪ್ಪು ಸಂದೇಶ ರವಾನೆಯಾಗಲಿದೆ. ಹೀಗಾಗಿ ವಿವಿಧ ಕಾರಣಗಳನ್ನು ನೀಡಿ ಸದನಕ್ಕೆ ಸಚಿವರು ಗೈರ ಹಾಜರಾಗಬಾರದು. ಖುದ್ದು ಹಾಜರಿರುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಅಧಿವೇಶನ ನಡೆಯುತ್ತಿರುವಂತ ಸಂದರ್ಭದಲ್ಲಿಯೇ ಆಯಾ ಸಚಿವರು ತಮ್ಮ ಇಲಾಖೆ ಅಥವಾ ಬೇರೆ ಯಾವುದೇ ಸಭೆ ಸಮಾರಂಭಗಳನ್ನು ಆಯೋಜಿಸಬಾರದು. ಪ್ರತಿ ದಿನವೂ ಸದನದಕ್ಕೆ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಖುದ್ದು ಹಾಜರಾಗಿ ಎಂಬುದಾಗಿ ಸೂಚಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. https://kannadanewsnow.com/kannada/boy-commits-suicide-by-shooting-himself-after-stabbing-father/ https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/
ಮಂಗಳೂರು : ತಂದೆಯೊಂದಿಗೆ ಜಗಳವಾಡಿದಂತ ಬಾಲಕನೊಬ್ಬ, ಸಿಟ್ಟಿನಲ್ಲಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಆ ಬಳಿಕ ಮನೆಯಲ್ಲಿದ್ದಂತ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಉಪ್ಪಿನಂಗಡಿ ಸಮೀಪದ ರಾಮಕುಂಜ ಗ್ರಾಮದ ಪಾದೆಯಲ್ಲಿ ನಡೆದಿದೆ. ಮಂಗಳೂರಿನ ಉಪ್ಪಿನಂಗಡಿ ಸಮೀಪದ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ತಂದೆ ವಸಂತ ಅಮೀನ್ ಹಾಗೂ ಬಾಲಕ ಮೋಕ್ಷ ನಡುವೆ ಜಗಳ ಉಂಟಾಗಿದೆ. ಈ ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ತಂದೆ ವಸಂತ ಅಮೀನ್ ಅವರಿಗೆ ಬಾಲಕ ಮೋಕ್ಷ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಪುತ್ರನ ಚಾಕು ಇರಿತಕ್ಕೆ ಒಳಗಾದಂತ ತಂದೆ ವಸಂತ ಅಮೀನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆದೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ತಂದೆ ವಸಂತ ಅಮೀನ್ ಸಾವು ಬದುಕಿನ ನಡುವೆ ಹೋರಾಡುತ್ತಿರುವ ವಿಷಯ ತಿಳಿದಂತ ಅವರ ಪುತ್ರ ಬಾಲಕ ಮೋಕ್ಷ, ಮನೆಯಲ್ಲಿದ್ದಂತ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ-ಪುತ್ರನ ನಡುವೆ ಯಾವ ವಿಷಯಕ್ಕೆ ಜಗಳವಾಗಿದೆ ಎನ್ನುವ ವಿಚಾರ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಅಂದಹಾಗೇ…
ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಜೈಲುಗಳ ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕಾರಾಗೃಹ ಡಿಜಿಪಿ ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಈ ಕುರಿತಂತೆ ಎಲ್ಲಾ ಜೈಲುಗಳಿಗೆ ಕಾರಾಗೃಹ ಡಿಜಿಪಿ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಜೈಲಿನ ನಿಯಮಾವಳಿ ಪ್ರಕಾರ ಆಹಾರ, ಬಟ್ಟೆ, ಹಾಸಿಗೆ ನೀಡಲಾಗ್ತಿದೆ. ಸಂದರ್ಶನದ ವೇಳೆ ಕೈದಿಗಳಿಗೆ ಖಾಸಗಿ ವ್ಯಾಕ್ತಿಗಳಿಂದ ಆಹಾರ ಪೂರೈಕೆ ಬಗ್ಗೆ ನಿಯಂತ್ರಣ ಹೇರುವಂತೆ ತಿಳಿಸಲಾಗಿದೆ. ಕೈದಿಗಳಿಗೆ ಖಾಸಗಿ ವ್ಯಕ್ತಿಗಳು ಆಹಾರ ಪೂರೈಸುವಕ್ಕೆ ಕಾರಾಗೃಹ ಡಿಜಿಪಿ ಬ್ರೇಕ್ ಹಾಕಲಾಗಿದೆ. ನಿರ್ದಿಷ್ಟ ಪ್ರಮಾಣದಲ್ಲಿ ಪ್ಯಾಕ್ ಮಾಡಿರುವ ಆಹಾರ ನೀಡಲು ಮಾತ್ರವೇ ಅವಕಾಶ ನೀಡಲಾಗಿದೆ. ಬಾಳೆಹಣ್ಣು, ಸೇಬು, ಸೀಬೆಹಣ್ಣು, ಸಪೋಟ ಸೇರಿ 2 ಕೆಜಿಯಷ್ಟು ಇರಬೇಕು. ಡ್ರೈಪ್ರೂಟ್ಸ್, ಬೇಕರಿ ತಿನಿಸು ಸೇರಿದಂತೆ 500 ಗ್ರಾಮ್ ಮೀರುವಂತಿಲ್ಲ ಎಂಬುದಾಗಿ ಖಡಕ್ ಸೂಚನೆ ನೀಡಲಾಗಿದೆ. https://kannadanewsnow.com/kannada/pakistan-threatens-to-boycott-t20-world-cup/ https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/
ಇಸ್ಲಮಾಬಾದ್: ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಆಡೋದಕ್ಕೆ ಬಾಂಗ್ಲಾದೇಶ ನಿರಾಕರಿಸಿತ್ತು. ಹೀಗಾಗಿ ಬಾಂಗ್ಲಾ ಕ್ರಿಕೆಟ್ ತಂಡಕ್ಕೆ ಬಿಸಿಸಿಐ ಕೋಕ್ ನೀಡಿ, ಸ್ಕಾಟ್ ಲ್ಯಾಂಡ್ ತಂಡವನ್ನು ಇನ್ ಮಾಡಲಾಗಿತ್ತು. ಈ ಬೆನ್ನಲ್ಲೇ ಟಿ20 ವಿಶ್ವಕಪ್ ಬಾಯ್ ಕಾಟ್ ಮಾಡೋದಾಗಿ ಪಾಕಿಸ್ತಾನ ಬೆದರಿಕೆ ಹಾಕಿದೆ. ಹೌದು ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಬಾಯ್ ಕಾಟ್ ಮಾಡೋದಾಗಿ ಪಾಕ್ ಬೆದರಿಕೆ ಹಾಕಿದೆ. ಟಿ20 ವಿಶ್ವಕಪ್ ನಿಂದ ಬಾಂಗ್ಲಾದೇಶ ಹೊರಬಿದ್ದ ಬೆನ್ನಲ್ಲೇ ಪಾಕ್ ಈ ಕ್ಯಾತೆ ತೆಗೆದಿದೆ. ಬಾಂಗ್ಲಾ ಹೊರಬಿದ್ರೆ ತಾನೂ ಹೊರಗುಳಿಯೋದಾಗಿ ಬೆದರಿಕೆ ಹಾಕಿದೆ. ಈ ಬಗ್ಗೆ ಐಸಿಸಿಗೆ ಪಾಕ್ ಕ್ರಿಕೆಟ್ ಮಂಡಳಿ ಬೆದರಿಕೆ ಹಾಕಿದೆ. ಬಾಂಗ್ಲಾ ಬೇಡಿಕೆ ಒಪ್ಪದೇ ಐಸಿಸಿಯಿಂದ ಅನ್ಯಾಯವೆಂದು ಪಾಕ್ ಕಿಡಿಕಾರಿದೆ. ಪಾಕ್ ಕ್ಯಾತೆ ಕುರಿತು ಯಾವುದೇ ಪ್ರತಿಕ್ರಿಯೆಯನ್ನು ಐಸಿಸಿ ನೀಡಿಲ್ಲ. https://kannadanewsnow.com/kannada/bumper-gift-from-the-state-government-to-mlcs-299-crore-grant-released/ https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಪರಿಷತ್ ಸದಸ್ಯರಿಗೆ ಭಂಪರ್ ಗಿಫ್ಟ್ ನೀಡಲಾಗಿದೆ. ಬರೋಬ್ಬರಿ 299 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯವು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಯೋಜನಾ ಕಾರ್ಯಕ್ರಮಗಳನ್ನು 2025-26ನೇ ಸಾಲಿಗೆ ಮುಂದುವರೆಸಲಾಗಿದೆ ಹಾಗೂ ಪುಸಕ್ತ ಸಾಲಿನ ಆಯವ್ಯಯದಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯಡಿ ಒಟ್ಟು ರೂ.60225.17 ಲಕ್ಷಗಳನ್ನು ಈ ಕೆಳಕಂಡಂತೆ ಒದಗಿಸಲಾಗಿದೆ ಎಂದಿದ್ದಾರೆ. ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯ ಮಾರ್ಗಸೂಚಿ ಕಂಡಿಕೆ 4.7 ರನ್ವಯ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಲೆಕ್ಕ ಶೀರ್ಷಿಕೆ 2575-60-265-0-02- 034 (ಗುತ್ತಿಗೆ/ಹೊರಗುತ್ತಿಗೆ) ರಡಿ 2025-26ನೇ ಸಾಲಿನಲ್ಲಿ ಒದಗಿಸಿರುವ ಅನುದಾನದ ಪೈಕಿ ರೂ.6.71 ಲಕ್ಷಗಳನ್ನು, 2024-25ನೇ ಸಾಲಿನಲ್ಲಿ ಕಾರ್ಯನಿರತ ಸಿಬ್ಬಂದಿಗಳ ವೇತನಕ್ಕೆ ಕೊರತೆಯಾಗಿದ್ದ ಅನುದಾನವನ್ನು…
ಚಾಮರಾಜನಗರ: ರಾಜ್ಯದಲ್ಲೊಂದು ಅಮಾನವೀಯ ಘಟನೆ ಎನ್ನುವಂತೆ ಜಮೀನಿಗೆ ಹಸು ನುಗ್ಗಿ ಬೆಳೆ ಮೇಯ್ದ ಕಾರಣಕ್ಕಾಗಿ ವೃದ್ಧೆಯೊಬ್ಬರನ್ನು ಕಂಬಕ್ಕೆ ಕಟ್ಟಿಹಾಕಿ ಸತತ 2 ಗಂಟೆಗಳ ಕಾಲ ಥಳಿಸಿರುವಂತ ಘಟನೆ ಚಾಮರಾಜನಗರದ ಹನೂರಿನ ದೊಮ್ಮನಗದ್ದೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಮ್ಮನಗದ್ದೆಯಲ್ಲಿ ಅಂಗಮುತ್ತು ಎಂಬುವರ ಜಮೀನಿಗೆ ಕಣ್ಣಮ್ಮ ಎಂಬುವರ ಹಸು ನುಗ್ಗಿ ಬೆಳೆ ಮೇಯ್ದಿತ್ತು. ಹೀಗಾಗಿ ವೃದ್ಧೆ ಕಣ್ಣಮ್ಮರನ್ನು ಕಂಬಕ್ಕೆ ಕಟ್ಟಿಹಾಕಿ ಸತತ 2 ಗಂಟೆಗಳ ಕಾಲ ಥಳಿಸಲಾಗಿದೆ. ಅಂಕಮುತ್ತು, ಕುಟುಂಬದ ಸದಸ್ಯರು ಕಣ್ಣಮ್ಮಗೆ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಹಲ್ಲೆ ನಡೆಸಿದ್ದ ಅಂಗಮುತ್ತು, ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಕೇಸ್ ದಾಖಲಿಸಿ ಹನೂರು ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/ex-minister-harathalu-halappa-defamation-suit-notice-to-mla-belur-gopalakrishna/ https://kannadanewsnow.com/kannada/three-injured-after-a-cutout-collapsed-during-installation-in-hubballi-cm-inquires-about-their-health/ https://kannadanewsnow.com/kannada/from-now-on-government-officials-must-accept-phone-calls-from-public-representatives-state-government-orders/














