Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: 2026ನೇ ಹಣಕಾಸು ವರ್ಷದಲ್ಲಿ ಭಾರತವು ಶೇ.7.3 ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆಯಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ತಿಳಿಸಿದೆ. ಮುಖ್ಯವಾಗಿ, ವಿಶ್ವ ಹಣಕಾಸು ಸಂಸ್ಥೆಯು ಅಕ್ಟೋಬರ್ನಲ್ಲಿ ನೀಡಿದ್ದ ಮುನ್ಸೂಚನೆಗಿಂತ ಶೇ.0.7 ರಷ್ಟು ಏರಿಕೆ ಮಾಡಿದ್ದು, ಆರ್ಥಿಕತೆಯ ನಿರೀಕ್ಷೆಗಿಂತ ಉತ್ತಮ ಸಾಧನೆಯಿಂದಾಗಿ ಈ ಮುನ್ಸೂಚನೆ ದೊರೆತಿದೆ. ಆದಾಗ್ಯೂ, ಆವರ್ತಕ ಅಂಶಗಳು ಮಸುಕಾಗುವುದರಿಂದ ಮುಂದಿನ ಎರಡು 2026-27 ಮತ್ತು 2027-28ರಲ್ಲಿ ಭಾರತದ ಬೆಳವಣಿಗೆ 6.4% ಕ್ಕೆ ನಿಧಾನವಾಗುವ ಸಾಧ್ಯತೆಯಿದೆ. ಮಾರ್ಚ್ 31 ಕ್ಕೆ ಕೊನೆಗೊಂಡ ವರ್ಷದಲ್ಲಿ ಭಾರತದ ರಾಷ್ಟ್ರೀಯ ಅಂಕಿಅಂಶ ಕಚೇರಿಯು ಬೆಳವಣಿಗೆಯ ಅಂದಾಜನ್ನು 7.4% ಕ್ಕೆ ಏರಿಸಿದ ನಂತರ IMF ಈ ಮುನ್ಸೂಚನೆ ನೀಡಿದೆ. ಇದಕ್ಕೂ ಮೊದಲು, ಸರ್ಕಾರವು ಆರ್ಥಿಕತೆಯು ಶೇ.6.3 ರಿಂದ ಶೇ.6.8 ರಷ್ಟು ಏರಿಕೆಯಾಗಲಿದೆ ಎಂದು ಅಂದಾಜಿಸಿತ್ತು. ಸೋಮವಾರ ಬಿಡುಗಡೆಯಾದ ವಿಶ್ವ ಆರ್ಥಿಕ ಮುನ್ನೋಟ ವರದಿಯಲ್ಲಿ, 2026 ರ ಆರ್ಥಿಕ ವರ್ಷದ ಏರಿಕೆಯ ಪರಿಷ್ಕರಣೆಯು “ವರ್ಷದ ಮೂರನೇ ತ್ರೈಮಾಸಿಕದಲ್ಲಿ ನಿರೀಕ್ಷೆಗಿಂತ ಉತ್ತಮ ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ಬಲವಾದ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ಹಾಗೂ ಅಸಮರ್ಥ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಂದ ನಮ್ಮ ರಾಜ್ಯದ ಹೆಮ್ಮೆಯ ಪೊಲೀಸ್ ಇಲಾಖೆಯ ಮಾನ ಮತ್ತೊಮ್ಮೆ ಹರಾಜಾಗಿದೆ ಎಂಬುದಾಗಿ ಜೆಡಿಎಸ್ ಕಿಡಿಕಾರಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಗೃಹ ಸಚಿವ ಪರಮೇಶ್ವರ್ ಅವರ ಆಪ್ತ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಬಯಲಾಗಿದ್ದು, ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಪೊಲೀಸ್ ಸಮವಸ್ತ್ರದ ಘನತೆ ಮರೆತು, ಕಚೇರಿಯಲ್ಲೇ ಮಹಿಳೆಯರೊಂದಿಗೆ ಇಂತಹ ಕೃತ್ಯ ಎಸಗಿರುವುದು ಅಕ್ಷಮ್ಯ ಅಪರಾಧ ಎಂದಿದೆ. ಅಕ್ರಮ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ನೆರವು ನೀಡಿದ ಆರೋಪವೂ ಸಹ ಡಿಜಿಪಿ ರಾಮಚಂದ್ರ ರಾವ್ ಮೇಲಿತ್ತು. ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ಹಾಗೂ ಅಸಮರ್ಥ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಂದ ನಮ್ಮ ರಾಜ್ಯದ ಹೆಮ್ಮೆಯ ಪೊಲೀಸ್ ಇಲಾಖೆಯ ಮಾನ ಮತ್ತೊಮ್ಮೆ ಹರಾಜಾಗಿದೆ. ಸಿಎಂ ಸಿದ್ಧರಾಮಯ್ಯ ಅವರು ತತಕ್ಷಣವೇ ಡಿಜಿಪಿ ರಾಮಚಂದ್ರ ರಾವ್ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ.…
ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಶನೀಶ್ವರ ದೇವಾಲಯಗಳಲ್ಲಿ ಒಂದು ಶ್ರೀ ಕ್ಷೇತ್ರ ಕಂಚಿಗದ್ದೆಯ ಶನೀಶ್ವರ ದೇವಾಲಯ. ಈ ದೇವಾಲಯಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಆಗಮಿಸುತ್ತದೆ. ಇಂತಹ ಶ್ರೀ ಕ್ಷೇತ್ರದಲ್ಲಿ ಇದೇ ಜನವರಿ 29, 30ರಂದು 23ನೇ ವರ್ಷದ ವಾರ್ಷಿಕ ಜಾತ್ರಾ ಮಹೋತ್ಸವವನ್ನು ನೆರವೇರಿಸಲಾಗುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಶ್ರೀ ಕ್ಷೇತ್ರ ಕಂಚಿಗದ್ದೆಯ ಶನೀಶ್ವರ ದೇವಾಲಯದ ಧರ್ಮದರ್ಶಿಗಳಾದಂತ ಬಂಗಾರಪ್ಪ ಅವರು, ಜನವರಿ.29ರಂದು ಬೆಳಗ್ಗೆ 8 ಗಂಟೆಯಿಂದ ಶ್ರೀ ದೇವರಿಗೆ ಫಲಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ಪಂಚಗವ್ಯ ಹೋಮ, ದೇವನಾದಿ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಆ ಬಳಿಕ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಜೆ ಯಾಗಶಾಲಾ ಪ್ರವೇಶ, ಮಂಡಲಾರಾಧನೆ, ಕಲಶಾ ಸ್ಥಾಪನಾ ಪೂಜಾ, ಮಂಗಳಾರತಿ, ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ ಎಂದಿದ್ದಾರೆ. ದಿನಾಂಕ 30-01-2026ರ ಶುಕ್ರವಾರದಂದು ಗಣಪತಿ ಹೋಮ, ಪುಣ್ಯಾಹ, ಶ್ರೀ ದೇವರಿಗೆ ಫಲ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಪೂಜೆ ಹಾಗೂ ಶ್ರೀ ಶನೀಶ್ವರ…
ಬೆಂಗಳೂರು: ರಾಜ್ಯದಲ್ಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹೊಸ ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ. ಪ್ರಕಟಿತ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು, ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ ಎಂಬುದಾಗಿ ತಿಳಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆ-1ನ್ನು ದಿನಾಂಕ: 05.01.2026 ರಿಂದ 10.01.2026 ರವರೆಗೆ ನಡೆಸಲಾಗಿರುತ್ತದೆ. ಪೂರ್ವ ಸಿದ್ಧತಾ ಪರೀಕ್ಷೆಗೆ ಮುಖ್ಯ ಪರೀಕ್ಷೆಯ ಮಾದರಿಯಂತೆ ಪುಶ್ನೆ ಪತ್ರಿಕೆಗಳನ್ನು ಮಂಡಲಿಯಿಂದ ಸಿದ್ಧಪಡಿಸಿ, ಅಯಾ ದಿನದ ಪ್ರಶ್ನೆಪತ್ರಿಕೆಯನ್ನು ವೇಳಾಪಟ್ಟಿಯಂತೆ ವಿಷಯವಾರು ಪ್ರಶ್ನೆಪತ್ರಿಕೆಯನ್ನು ಪರೀಕ್ಷಾ ದಿನದಂದು ಪೂರ್ವಾಹ್ನ 07.00 ಗಂಟೆಗೆ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಶಾಲಾ ಲಾಗಿನ್ನಲ್ಲಿ ಅಪ್ಲೋಡ್ ಮಾಡಲಾಗಿತ್ತು. ಸಂಬಂಧಿಸಿದ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಪ್ರಶ್ನೆಪತ್ರಿಕೆಯನ್ನು ಮುದ್ರಿಸಿಕೊಂಡು ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಗತ್ಯ ಕ್ರಮವಹಿಸಲು ಉಲ್ಲೇಖಿತ-1ರ ಮಾರ್ಗಸೂಚಿಯಲ್ಲಿ ವಿವರವಾಗಿ ತಿಳಿಸಲಾಗಿತ್ತದೆ ಎಂದಿದ್ದಾರೆ. ಡೌನ್ಲೋಡ್ ಮಾಡಿಕೊಂಡಿರುವ ಪ್ರಶ್ನೆಪತ್ರಿಕೆಯ ಮೇಲೆ ಸಂಬಂಧಿಸಿದ ಶಾಲಾ ಸಂಕೇತ Watermark ಬರುವಂತೆ ಕ್ರಮವಹಿಸಲಾಗಿತ್ತು. ಯಾವುದಾದರೂ ಶಾಲೆಯ ಪಶ್ನೆಪತ್ರಿಕೆಗಳು…
ಶಿವಮೊಗ್ಗ: ಫೆಬ್ರವರಿ.3ರಿಂದ ಸಾಗರದ ಪ್ರಸಿದ್ಧ ಮಾರಿಕಾಂಬ ಜಾತ್ರೆ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ನಗರ ಪ್ರದಕ್ಷಿಣೆ ಮಾಡಿದರು. ಆ ಮೂಲಕ ಮಾರಿ ಜಾತ್ರೆಯ ಪ್ರಯುಕ್ತ ನಡೆಯುತ್ತಿರುವಂತ ಸಿದ್ಧತೆಗಳನ್ನು ವೀಕ್ಷಿಸಿದರು. ಇಂದು ಶಿವಮೊಗ್ಗದ ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಮಾರಿಕಾಂಬ ಜಾತ್ರೆಯ ಪ್ರಯುಕ್ತ ಉಳ್ಳೂರು, ಭೀಮನಕೋಣೆ, ಕಲ್ಮನೆ, ಯಡಜಿಗಳೆಮನೆ, ಖಂಡಿಕಾ, ಭೀಮನೇರೆ ಹಾಗೂ ನಾಡಕಲಸೆ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಪಿಡಿಓಗಳ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಾಗರದ ಮಾರಿಕಾಂಬ ಜಾತ್ರೆಯ ಪ್ರಯುಕ್ತ ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುವಂತೆ ಸೂಚಿಸಿದರು. ಈ ಬಳಿಕ ಮಾರಿಕಾಂಬ ದೇವಸ್ಥಾನದ ಬಳಿಗೆ ತೆರಳಿದಂತ ಅವರು, ಜಾತ್ರೆಯ ಪ್ರಯುಕ್ತ ನಡೆಯುತ್ತಿದ್ದಂತ ಸಿದ್ಧತೆಗಳನ್ನು ವೀಕ್ಷಿಸಿದರು. ಅಲ್ಲಿಂದ ನಡೆದುಕೊಂಡೇ ನಗರಸಭೆಯವರೆಗೆ ತೆರಳಿದಂತ ಶಾಸಕ ಗೋಪಾಲಕೃಷ್ಣ ಬೇಳೂರು, ಮಾರಿಕಾಂಬ ಜಾತ್ರೆಯ ಪ್ರಯುಕ್ತ ಏನೆಲ್ಲಾ ತಯಾರಿ ನಡೆಸಬೇಕು. ವಿದ್ಯುತ್ ದೀಪಾಲಂಕಾರ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಆ ನಂತ್ರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು…
ಬೆಂಗಳೂರು : “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ಬೆಂಬಲಿಗರು ಹೈಕಮಾಂಡ್ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಕೇಳಿದಾಗ, “ಯಾರು ಹೇಳಿದರು? 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು. ರಾಹುಲ್ ಗಾಂಧಿ…
ಬೆಂಗಳೂರು: ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಒಂದೇ ಬಾರಿಗೆ ಚುನಾವಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು, ಪಾಲಿಕೆ ಚುನಾವಣೆಗಳು ಯಾವಾಗ ನಡೆಯಬಹುದು ಎಂದು ಕೇಳಿದಾಗ, “ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರ್ಕಾರ ಸಂವಿಧಾನದ 73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ ಬರಬೇಕು. ಈಗ ಐದು ಪಾಲಿಕೆಗಳಿಂದ 369 ವಾರ್ಡ್ ಗಳನ್ನು ರಚಿಸಲಾಗಿದೆ ಎಂದರು. ಇನ್ನು ಬೆಂಗಳೂರಿನ ಹೊರವಲಯವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಿನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯ್ತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು…
ಮೈಸೂರು: ಜೆಎಸ್ಎಸ್ ಕಾಲೇಜ್ ಆಫ್ ಫಾರ್ಮಸಿ ಮೈಸೂರು, ಜಪಾನ್–ಭಾರತ ಸಹಯೋಗದಡಿ ಜಿಕಾ (JICA) ಬೆಂಬಲಿತ IMPACT-VIP ಕಾರ್ಯಕ್ರಮದ ಅಡಿಯಲ್ಲಿ ಇಂದು ಮಹತ್ವದ ಸಭೆಯಲ್ಲಿ ಭಾಗವಹಿಸಿ ಸಚಿವರಾದ ದಿನೇಶ್ ಗುಂಡೂರಾವ್ ಅಂಧರ ಸಮಸ್ಯೆ ಅವರಿಗೆ ಮಾತ್ರ ಸರಿಯಾಗಿ ಅರ್ಥವಾಗಲು ಸಾಧ್ಯ. QR ಕೋಡ್ ಈಗ ಜನಸಾಮಾನ್ಯರು ಉಪಯೋಗಿಸುತ್ತಾರೆ. ಸ್ವಾವಲಂಬಿಯಾಗಿ ಬದುಕಲು ಅಂಧರಿಗೆ ಇದೊಂದು ದಾರಿಯಾಗಲಿದೆ. ಭಾಷಾ ಸಮಸ್ಯೆ ಇರುವವರಿಗೂ ಇದು ವರದಾನವಾಗಲಿದೆ. ಇನ್ನೂ ಹೆಚ್ಚಿನ ಸಂಶೋಧನೆ ಇದರ ಕುರಿತು ನಡೆಯಲಿ. ದೃಷ್ಟಿಹೀನ ವ್ಯಕ್ತಿಗಳು ದಿನನಿತ್ಯದಲ್ಲಿ ಔಷಧಿಗಳನ್ನು ಸುರಕ್ಷಿತವಾಗಿ ಮತ್ತು ಸ್ವತಂತ್ರವಾಗಿ ಬಳಸುವಲ್ಲಿ ಎದುರಿಸುವ ಸವಾಲುಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಔಷಧ ಪ್ಯಾಕೆಟ್ ಮೇಲಿನ QR ಕೋಡ್ ಮೂಲಕ ಔಷಧದ ವಿವರಗಳನ್ನು ಪಡೆಯುವ ಈ ತಂತ್ರಜ್ಞಾನದಿಂದ ಹಲವು ಅನುಕೂಲಗಳಿದೆ. ಫಾರ್ಮಸಿಸ್ಟ್ಗಳಾಗಿ ಕೆಲಸ ಮಾಡುವ ಅಂಧರು, ಔಷಧಿ ಲೇಬಲ್ಗಳು, ಸೂಚನೆಗಳು ಮತ್ತು ಪ್ಯಾಕೇಜಿಂಗ್ನ ಕಾರಣದಿಂದ ಎದುರಿಸುವ ತೊಂದರೆಗಳನ್ನು ಎದುರಿಸುತ್ತಾರೆ. ಈ ತಂತ್ರಜ್ಞಾನ ಅವರ ಸಮಸ್ಯೆಗೆ ಪರಿಹಾರ ನೀಡಲಿದೆ. ಐದು ರಾಜ್ಯಗಳಲ್ಲಿ ಸಂಗ್ರಹಿಸಿದ ಸಂಶೋಧನಾ ಮಾಹಿತಿಯನ್ನು ನೋಡಿದಾಗ ಮತ್ತು…
ಶಿವಮೊಗ್ಗ: ಮಾನ್ಯ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002 ರ ಮತದಾರರ ಪಟ್ಟಿಯನ್ನು 2025 ರ ಪರಿಷ್ಕೃತ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು ಈ ಪ್ರಕ್ರಿಯೆಯು ಪ್ರತಿಯೊಬ್ಬ ಮತದಾರರಿಗೂ ಅತಿ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಹಾಗೂ ಮಾನ್ಯ ಆಯೋಗವು ದಿನಾಂಕ: 06-01-2025 ರ ಆದೇಶವನ್ನು ಹೊರಡಿಸಿದ ದಿನಾಂಕದಲ್ಲಿ ಇದ್ದಂತೆ ಪ್ರಸ್ತುತ ಇರುವ ಪ್ರತಿಯೊಬ್ಬ ಮತದಾರನಿಗೆ ಮುಂಚಿತವಾಗಿ ಭರ್ತಿ ಮಾಡಲಾದ ಗಣತಿ ನಮೂನೆಯು ಲಭ್ಯವಿರತಕ್ಕದ್ದು ಮತ್ತ ಕರಡು ಮತದಾರನಿಗೆ ಪಟ್ಟಿಯು 2025 ರ ಜುಲೈ 25 ನೇ ದಿನಾಂಕಕ್ಕಿAತ ಮುಂಚೆ ಭರ್ತಿ ಮಾಡಿ ಸಲ್ಲಿಸಲಾಗಿರುವಂತಹ ಎಲ್ಲಾ ಮತದಾರರ ಹೆಸರುಗಳನ್ನು ಒಳಗೊಂಡಿರಬೇಕೆAದು ನಿರ್ದೇಶಿಸಿರುತ್ತದೆ. ಸಂಸತ್ತು ಹಾಗೂ ರಾಜ್ಯ ವಿಧಾನ ಮಂಡಲಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಹಾಗೂ ಮತದಾರರ ಪಟ್ಟಿಗಳ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಮೂಲಭೂತ ಅವಶ್ಯಕತೆಯಾಗಿರುವುದರಿಂದ ಭಾರತ ಸಂವಿಧಾನದ ಅನುಚ್ಛೇದ 32 ಜನತಾ ಪ್ರಾತಿನಿಧ್ಯ ಅಧಿನಿಯಮ, 1950 (ಆರ್ ಪಿ ಎ 1950) ರ ಅನುಸಾರ…
ಬೆಂಗಳೂರು: ವಿಡಿಯೋ-ಆಡಿಯೋ ವೈರಲ್ ಬೆನ್ನಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ ರಾಮಚಂದ್ರ ರಾವ್ ಅವರು ಹತ್ತು ದಿನಗಳ ಕಾಲ ರಜೆಯನ್ನು ಹಾಕಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಯಾರ ಕೈಗೂ ಸಿಗದೇ ಅವರು ಸದ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದ್ದು, ತಮ್ಮ ವಕೀಲರ ಜೊತೆಗೆ ಮುಂದಿನ ಕಾನೂನು ಕ್ರಮವನ್ನು ಕೈಗೊಳ್ಳುವುದಕ್ಕೆ ನಿರ್ಧಾರ ಮಾಡಿದ್ದಾರ ಎನ್ನಲಾಗಿದೆ. ಘಟನೆ ಹಿನ್ನಲೆ : ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಕಾಣಿಸಿಕೊಂಡಿರುವ ಅಶ್ಲೀಲವ ವಿಡಿಯೋ ವೈರಲ್ ಆಗಿದೆ. ಪ್ರಸ್ತುತ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿದ್ದಾಗ ಮಹಿಳೆಯೊಂದಿಗೆ ಚುಂಬಿಸುತ್ತಿರುವಾಗ ಮತ್ತು ಮುದ್ದಾಡುತ್ತಿರುವಾಗ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ನಡುವೆ ಆರ್ ರಾಮಚಂದ್ರ ರಾವ್ ಮಹಿಳೆ ಜೊತೆಗೆ ಮಾತನಾಡಿರುವ ಆಡಿಯೋವೊಂದು ಕೂಡ ವೈರಲ್ ಆಗಿದೆ. ಆಡಿಯೋದಲ್ಲಿ ಬಂಗಾರಿ ಅಂಥ ಮಹಿಳೆ ಜೊತೆಗೆ ಮಾತನಾಡುವುದನ್ನು ಕೇಳಿಸಿಕೊಳ್ಳಹುದಾಗಿದೆ. ನಿನ್ನ…














