Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಹಿಂದಿನ ಪ್ರಕಟಣೆಗಳಿಗೆ ಸಂಬಂಧಿಸಿದಂತೆ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ರೈಲ್ವೆ ಮಂಡಳಿಯು ರೈಲು ಸಂಖ್ಯೆ 06281/06282 ಮೈಸೂರು – ಮದಾರ್ ಜಂಕ್ಷನ್ – ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಯನ್ನು ಮುಂದುವರಿಸಲು ಅನುಮೋದಿಸಿದೆ. ಈ ರೈಲುಗಳು ಈಗಿರುವ ಸಮಯ, ನಿಲ್ದಾಣಗಳು, ದರ ವ್ಯವಸ್ಥೆ ಹಾಗೂ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲದೆ ಮುಂದುವರಿಯಲಿವೆ. ರೈಲು ಸಂಖ್ಯೆ 06281 ಮೈಸೂರು – ಮದಾರ್ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು, ಇದು ಪ್ರಸ್ತುತ 27.06.2026ರವರೆಗೆ ಅಧಿಸೂಚಿತವಾಗಿದ್ದು, ಇದೀಗ 04.07.2026 ಮತ್ತು 11.07.2026 (ಶನಿವಾರ) ರಂದು ವಿಸ್ತರಿಸಲಾಗಿದ್ದು, ಒಟ್ಟು 2 ಹೆಚ್ಚುವರಿ ಟ್ರಿಪ್ ಸಂಚರಿಸಲಿದೆ. ರೈಲು ಸಂಖ್ಯೆ 06282 ಮದಾರ್ ಜಂಕ್ಷನ್ – ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲು, ಇದು 29.06.2026ರವರೆಗೆ ಅಧಿಸೂಚಿತವಾಗಿದ್ದು, ಇದೀಗ 06.07.2026 ಮತ್ತು 13.07.2026 (ಸೋಮವಾರ) ರಂದು ವಿಸ್ತರಿಸಲಾಗಿದ್ದು, ಒಟ್ಟು 2 ಹೆಚ್ಚುವರಿ ಟ್ರಿಪ್ ಸಂಚರಿಸಲಿದೆ. https://kannadanewsnow.com/kannada/do-you-want-to-go-to-the-kannada-bigg-boss-house-dont-delay-do-this-by-june-21st/

Read More

ಬೆಂಗಳೂರು: ರಿಯಾಲಿಟಿ ಶೋ ಪ್ರೇಕ್ಷಕರ ನೆಚ್ಚಿನ ಕಾರ್ಯಕ್ರಮ ‘ಬಿಗ್ ಬಾಸ್ ಕನ್ನಡ ಸೀಸನ್ 13’ರ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ಇದೀಗ ಆಡಿಷನ್ ಪ್ರಕ್ರಿಯೆಗಳು ಭರದಿಂದ ಸಾಗುತ್ತಿವೆ. ಪ್ರತಿ ಬಾರಿಯ ಸೀಸನ್‌ಗಿಂತಲೂ ಈ ಬಾರಿಯ ಬಿಗ್ ಬಾಸ್ ಅತ್ಯಂತ ವಿಶೇಷವಾಗಿರಲಿದ್ದು, ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಅದಕ್ಕೆ ಮುಖ್ಯ ಕಾರಣ, ಈ ಬಾರಿ ಕೇವಲ ಸೆಲೆಬ್ರಿಟಿಗಳಷ್ಟೇ ಅಲ್ಲದೆ ಸಾರ್ವಜನಿಕರಿಗೂ (ಜನಸಾಮಾನ್ಯರಿಗೂ) ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಡಲು ರನ್ ವೇ ಸಿದ್ಧಗೊಳಿಸಲಾಗಿದೆ. ವಿಡಿಯೊ ಅಪ್‌ಲೋಡ್ ಮಾಡಲು ಜೂನ್ 21 ಕೊನೆಯ ದಿನಾಂಕ! ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಲು ಕಾತರರಾಗಿರುವ ಜನಸಾಮಾನ್ಯರಿಗೆ ವಾಹಿನಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಬಿಗ್ ಬಾಸ್ ಆಡಿಷನ್‌ಗಾಗಿ ವಿಡಿಯೊ ಕಳುಹಿಸಿಕೊಡಲು ಜೂನ್ 21 ಕೊನೆಯ ದಿನಾಂಕವಾಗಿದೆ. ಆಸಕ್ತರು ತಮ್ಮ ಸ್ವ-ಪರಿಚಯದೊಂದಿಗೆ “ನಾವು ಏಕೆ ಬಿಗ್‌ಬಾಸ್ ಮನೆಯಲ್ಲಿರಬೇಕು?” ಎಂಬ ಪ್ರಮುಖ ಪ್ರಶ್ನೆಗೆ ಉತ್ತರಿಸುವ ವಿಡಿಯೊವನ್ನು ತಯಾರಿಸಬೇಕಾಗುತ್ತದೆ. ಅಪ್ಲಿಕೇಶನ್ ಸಲ್ಲಿಸುವುದು ಹೇಗೆ? ಈ ಸುವರ್ಣಾವಕಾಶವನ್ನು ಪಡೆದುಕೊಳ್ಳಲು ಇಚ್ಚಿಸುವವರು ಅಧಿಕೃತ ಆಡಿಷನ್…

Read More

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ. ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್…

Read More

ದಾವಣಗೆರೆ: ಸಹೋದ್ಯೋಗಿಗಳ ಮಾನಸಿಕ ಹಿಂಸೆ ಹಾಗೂ ಜಾತಿ ನಿಂದನೆಗೆ ಬೇಸತ್ತು ಮುಖ್ಯ ಶಿಕ್ಷಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದ್ದು, ಈ ಸಂಬಂಧ ಐವರು ಶಿಕ್ಷಕರು ಸೇರಿದಂತೆ ಒಟ್ಟು 10 ಜನರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಕೊಕ್ಕನೂರು ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಜಯಪ್ಪ (54) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಕುರಿತು ಮೃತರ ಪತ್ನಿ ಆಂಜನಮ್ಮ ಅವರು ನೀಡಿದ ದೂರಿನನ್ವಯ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 10 ಜನರ ವಿರುದ್ಧ ಎಫ್‌ಐಆರ್ ದಾಖಲು: ಮುಖ್ಯ ಶಿಕ್ಷಕ ಜಯಪ್ಪ ಅವರ ಸಾವಿಗೆ ಕಾರಣರಾದ ಆರೋಪದ ಮೇಲೆ ಸಹ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ್, ರಂಜನಿ, ಚೇತನಾ, ಮಹಾಂತೇಶ್ ಗೌಳಿ, ಅಡುಗೆ ಸಿಬ್ಬಂದಿಯಾದ ಸುಮಾ, ಚೆನ್ನಮ್ಮ, ರೂಪಾ, ವಿಜಯಮ್ಮ ಹಾಗೂ ಸಂಬಂಧಪಟ್ಟ ಸಿಆರ್‌ಪಿ (CRP) ಮತ್ತು ಬಿಆರ್‌ಪಿ (BRP) ಸೇರಿದಂತೆ ಒಟ್ಟು ಹತ್ತು ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ದೂರಿನಲ್ಲೇನಿದೆ? ಕಳೆದ 10 ತಿಂಗಳಿನಿಂದ ಕೊಕ್ಕನೂರು ಶಾಲೆಯಲ್ಲಿ ಜಯಪ್ಪ…

Read More

ರಾಯಚೂರು: ಖಾಸಗಿ ಶಾಲೆಯೊಂದರ ನವೀಕರಣದ ಕೆಲಸಕ್ಕಾಗಿ ಲಂಚ ಸ್ವೀಕರಿಸುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ (DDPI) ಪ್ರಥಮ ದರ್ಜೆ ಸಹಾಯಕರೊಬ್ಬರು (FDA) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಯಚೂರಿನ ಹೊಸ ಜಿಲ್ಲಾಧಿಕಾರಿ (DC) ಕಚೇರಿ ಸಂಕೀರ್ಣದಲ್ಲಿರುವ ಡಿಡಿಪಿಐ ಕಚೇರಿಯಲ್ಲೇ ಈ ದಾಳಿ ನಡೆದಿದ್ದು, ಎಫ್‌ಡಿಎ ಮಹಾಬಲೇಶ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ. ಘಟನೆಯ ವಿವರ: ಖಾಸಗಿ ಶಾಲೆಯ ನವೀಕರಣ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರುದಾರರಾದ ಸಿದ್ದಣ್ಣ ಎಂಬುವವರ ಬಳಿ ಎಫ್‌ಡಿಎ ಮಹಾಬಲೇಶ್ ಒಟ್ಟು 25,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಸಿದ್ದಣ್ಣ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಇಂದು ಡಿಡಿಪಿಐ ಕಚೇರಿಯಲ್ಲಿ ದೂರುದಾರರಿಂದ ಮುಂಗಡವಾಗಿ 15,000 ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿ ಮಹಾಬಲೇಶ್‌ನನ್ನು ನಗದು ಸಮೇತ ವಶಕ್ಕೆ ಪಡೆದಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕಚೇರಿಯಲ್ಲೇ ನಡೆದ ಈ ಕಾರ್ಯಾಚರಣೆ ಸರ್ಕಾರಿ…

Read More

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2026ರ (Biennial Election to Karnataka Legislative Council-2026) ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಇಂದು ಮಧ್ಯಾಹ್ನ 1:00 ಗಂಟೆಯ ವೇಳೆಗೆ ಶೇಕಡಾ 95.50 ರಷ್ಟು ದಾಖಲೆಯ ಮತದಾನವಾಗಿದೆ. ಚುನಾವಣಾಧಿಕಾರಿಗಳ ಅಧಿಕೃತ ಪತ್ರದ ಮಾಹಿತಿಯ ಪ್ರಕಾರ, ಮತದಾನದ ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ: ಒಟ್ಟು ಮತದಾರರ ಸಂಖ್ಯೆ (Total No. of Electors): 222 ಮಧ್ಯಾಹ್ನ 1:00 ಗಂಟೆಯವರೆಗೆ ಚಲಾವಣೆಯಾದ ಒಟ್ಟು ಮತಗಳು: 212 ಒಟ್ಟು ಮತದಾನದ ಶೇಕಡಾವಾರು ಪ್ರಮಾಣ: ಶೇ. 95.50% ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ಎಂ.ಕೆ. ವಿಶಾಲಾಕ್ಷಿ ಅವರು ಭಾರತೀಯ ಚುನಾವಣಾ ಆಯೋಗದ (ECI) ಕಾರ್ಯದರ್ಶಿ ಸುಮನ್ ಕುಮಾರ್ ದಾಸ್ ಅವರಿಗೆ ಅಧಿಕೃತವಾಗಿ ಪತ್ರ ಬರೆಯುವ ಮೂಲಕ ಈ ಗಂಟೆವಾರು ಮತದಾನದ ಪ್ರಗತಿ ವರದಿಯನ್ನು ಸಲ್ಲಿಸಿದ್ದಾರೆ. ಒಟ್ಟು 222 ಮತದಾರರಲ್ಲಿ ಈಗಾಗಲೇ 212 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದು, ಬಹುತೇಕ ಶಾಸಕರು ಮಧ್ಯಾಹ್ನದ ಒಳಗಾಗಿಯೇ ಮತದಾನ ಪ್ರಕ್ರಿಯೆಯಲ್ಲಿ…

Read More

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಮತದಾನ ಪ್ರಕ್ರಿಯೆ ನಡುವೆ, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮತವನ್ನು ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಸಲ್ಲಿಸಿದ್ದ ದೂರನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ವಿಧಾನಸೌಧದಲ್ಲಿ ಮತದಾನ ನಡೆದ ಬಳಿಕ ಯತ್ನಾಳ್ ವಿರುದ್ಧ ಚುನಾವಣಾ ಅಕ್ರಮದ ಆರೋಪ ಹೊರಿಸಿದ್ದ ಕಾಂಗ್ರೆಸ್ ನಾಯಕರು, ಅವರು ನಿಯಮ ಉಲ್ಲಂಘಿಸಿ ಮತ ಚಲಾಯಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ, ಯತ್ನಾಳ್ ಅವರ ಮತವನ್ನು ಅಸಿಂಧು (ರದ್ದು) ಗೊಳಿಸಬೇಕು ಎಂದು ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ಅಧಿಕೃತವಾಗಿ ದೂರು ನೀಡಿದ್ದರು. ದೂರು ತಿರಸ್ಕಾರಕ್ಕೆ ಕಾರಣವೇನು? ಕಾಂಗ್ರೆಸ್ ನೀಡಿದ್ದ ದೂರನ್ನು ಕೂಲಂಕಷವಾಗಿ ಪರಿಶೀಲಿಸಿದ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ದೂರನ್ನು ವಜಾಗೊಳಿಸಿದ್ದಾರೆ. “ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾನದ ನಿಗದಿತ ಪ್ರದೇಶದಲ್ಲಿ (ವೋಟಿಂಗ್ ಕಂಪಾರ್ಟ್‌ಮೆಂಟ್) ತಮ್ಮ ಮತವನ್ನು ಬಹಿರಂಗಪಡಿಸುವ ಯಾವುದೇ ಹೇಳಿಕೆ ಅಥವಾ ನಡವಳಿಕೆ ತೋರಿಲ್ಲ. ಹಾಗಾಗಿ ನಿಯಮ ಉಲ್ಲಂಘನೆಯಾಗಿಲ್ಲ” ಎಂದು ಸ್ಪಷ್ಟಪಡಿಸಿರುವ ಅಧಿಕಾರಿ, ಯತ್ನಾಳ್ ಅವರ ಮತ ಸಿಂಧುವಾಗಿದೆ…

Read More

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿರುವುದಾಗಿ ಯಶವಂತಪುರ ಕ್ಷೇತ್ರದ ಬಿಜೆಪಿ ಬಂಡಾಯ ಶಾಸಕ ಎಸ್.ಟಿ. ಸೋಮಶೇಖರ್ ಬಹಿರಂಗಪಡಿಸಿದ್ದಾರೆ. ಮತ್ತೊಂದೆಡೆ ಯಲ್ಲಾಪುರ ಕ್ಷೇತ್ರದ ಮತ್ತೊಬ್ಬ ಬಿಜೆಪಿ ಬಂಡಾಯ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ತಾವು “ಆತ್ಮಸಾಕ್ಷಿ ಮತ” ಚಲಾಯಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್, “ನಾನು ಕಾಂಗ್ರೆಸ್ ಅಭ್ಯರ್ಥಿ ಪರವಾಗಿಯೇ ಮತ ಚಲಾಯಿಸಿದ್ದೇನೆ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಂಡಿದ್ದೇನೆ,” ಎಂದು ಸ್ಪಷ್ಟಪಡಿಸಿದರು. ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲ: ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಸೋಮಶೇಖರ್, “ಬಿಜೆಪಿ ಅಥವಾ ಜೆಡಿಎಸ್ ನಾಯಕರು ಯಾರೂ ನನ್ನನ್ನು ಮತ ಕೇಳಲು ಸಂಪರ್ಕ ಮಾಡಿರಲಿಲ್ಲ. ಸಂಪರ್ಕಿಸದೇ ಇದ್ದಾಗ ಮತ ಹಾಕುವುದು ಹೇಗೆ? ಯಾರು ಮನವಿ ಮಾಡುತ್ತಾರೋ ಅವರಿಗೆ ಮತ ಹಾಕಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ಕರೆ ಮಾಡಿ ಮತ ನೀಡುವಂತೆ ಕೋರಿದ್ದರು. ನಮ್ಮ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಿಕೊಟ್ಟರೆ ಮತ ಹಾಕುವುದಾಗಿ ನಾನು…

Read More

ಶಿವಮೊಗ್ಗ: ಕಾರ್ಮಿಕ ಇಲಾಖೆಯಲ್ಲಿ ಸಾಕಷ್ಟು ಅನುದಾನವಿದ್ದರೂ ನೈಜ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲತ್ತುಗಳು ಸರಿಯಾಗಿ ತಲುಪುತ್ತಿಲ್ಲ ಎಂದು ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಕೆ. ಸಂಜಯ್ ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಕಲ್ಯಾಣಕ್ಕಾಗಿ ಇರುವ ಹಣವನ್ನು ಅನಗತ್ಯ ಕಿಟ್‌ಗಳು ಹಾಗೂ ಟೆಂಡರ್‌ಗಳ ಮೂಲಕ ಬೇರೆಡೆಗೆ ಡೈವರ್ಟ್ ಮಾಡಲಾಗುತ್ತಿದೆ. ಮಂಡಳಿಯ ದುಡ್ಡು ಕಾರ್ಮಿಕರ ಹಿತಕ್ಕಾಗಿಯೇ ಬಳಕೆಯಾಗಬೇಕು ಮತ್ತು ಯಾವುದೇ ಕಾರಣಕ್ಕೂ ಇಲಾಖೆಯಲ್ಲಿ ಖಾಸಗೀಕರಣ ಬೇಡ ಎಂಬ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು. ​ಸುದ್ದಿಗೋಷ್ಠಿಯಲ್ಲಿ ಅವರು ಪ್ರಸ್ತಾಪಿಸಿದ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ: ​ತರಬೇತಿ ಹೆಸರಿನಲ್ಲಿ ಕಣ್ಣೊರೆಸುವ ತಂತ್ರ ​ಇಲಾಖೆಯಿಂದ ನೀಡಲಾಗುತ್ತಿರುವ ಆರ್‌ಪಿಎಲ್ (RPL) ತರಬೇತಿ ಕೇವಲ ಕಣ್ಣೊರೆಸುವ ತಂತ್ರವಾಗಿದೆ. ತರಬೇತಿ ನೀಡುವವರಿಗೇ ಸರಿಯಾದ ಮಾಹಿತಿ ಇಲ್ಲ. ​ನೈಜ ಕಾರ್ಮಿಕರನ್ನು…

Read More

ಬೆಂಗಳೂರು: ಇಂದಿನ ಗ್ರಾಹಕರು ಆರೋಗ್ಯದ ಬಗ್ಗೆ ಹೆಚ್ಚು ಜಾಗೃತರಾಗಿದ್ದು, ಪ್ಯಾಕ್ ಮಾಡಿದ ಆಹಾರಗಳಿಗಿಂತ ಯಾವುದೇ ರಾಸಾಯನಿಕಗಳಿಲ್ಲದ, ತಾಜಾ ಮತ್ತು ಸಾಂಪ್ರದಾಯಿಕ ಶೈಲಿಯ ಆಹಾರವನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಉತ್ತಮ ಗುಣಮಟ್ಟದ ಹಾಗೂ ತಾಜಾ ಆಹಾರಕ್ಕೆ ಕೊಂಚ ಹೆಚ್ಚಿನ ಹಣ ನೀಡಲೂ ಸಿದ್ಧರಿದ್ದಾರೆ. ಗ್ರಾಹಕರ ಈ ಬದಲಾದ ಬೇಡಿಕೆಗೆ ಸ್ಪಂದಿಸಿರುವ ಐಟಿಸಿ ತನ್ನ ಜನಪ್ರಿಯ ಬ್ರ್ಯಾಂಡ್ ‘ಆಶೀರ್ವಾದ್’ ಅಡಿಯಲ್ಲಿ ಹೊಸ ‘ರೆಡಿ-ಟು-ಈಟ್’ ಚಟ್ನಿ ಮತ್ತು ಸಾಂಬಾರ್ ಉತ್ಪನ್ನಗಳನ್ನು ಪರಿಚಯಿಸಿದೆ. ಗೃಹಿಣಿಯರು, ಬ್ಯಾಚುಲರ್‌ಗಳ ದೈನಂದಿನ ಅಡುಗೆಯ ಶ್ರಮವನ್ನು ಕಡಿಮೆ ಮಾಡಿ, ರುಚಿಕರ ಊಟಕ್ಕೆ ಸಹಾಯ ಮಾಡುವುದೇ ಇದರ ಉದ್ದೇಶವಾಗಿದೆ. ಏನು ಈ ಉತ್ಪನ್ನಗಳ ವಿಶೇಷತೆ? ಆಶೀರ್ವಾದ್‌ನ ಈ ಹೊಸ ಚಟ್ನಿ ಮತ್ತು ಸಾಂಬಾರ್‌ಗಳನ್ನು ಅತ್ಯಂತ ಎಚ್ಚರಿಕೆಯಿಂದ ಆಯ್ಕೆ ಮಾಡಿದ ಪದಾರ್ಥಗಳನ್ನು ಬಳಸಿ ತಯಾರಿಸಲಾಗಿದೆ. ರಾಸಾಯನಿಕ ಮುಕ್ತ: ಇದರಲ್ಲಿ ಯಾವುದೇ ರೀತಿಯ ಪ್ರಿಸರ್ವೇಟಿವ್‌ಗಳನ್ನು ಸೇರಿಸಿಲ್ಲ. ಕಡಿಮೆ ಬಳಕೆ ಅವಧಿ: ಇದರ ಎಕ್ಸ್‌ಪೈರಿ ದಿನಾಂಕ (ಬಳಕೆ ಅವಧಿ) ತುಂಬಾ ಕಡಿಮೆಯಿರುತ್ತದೆ. ಉತ್ಪನ್ನದ ತಾಜಾತನವನ್ನು ಇದು ಹೇಳುತ್ತದೆ. ಕೋಲ್ಡ್ ಚೈನ್…

Read More