Author: kannadanewsnow09

ಕರಾಚಿ: ಇರಾನ್ ಮೇಲಿನ ಇಸ್ರೇಲ್ ದಾಳಿ ಮತ್ತು ನಂತರದ ಗಲ್ಫ್ ಪ್ರದೇಶದಲ್ಲಿನ ದಾಳಿಗಳ ನಂತರ ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಗಳ ನಡುವೆ ಪಾಕಿಸ್ತಾನವು ಸೌದಿ ಅರೇಬಿಯಾ ಮತ್ತು ಇತರ ಗಲ್ಫ್ ರಾಷ್ಟ್ರಗಳೊಂದಿಗೆ ಬಲವಾದ ಒಗ್ಗಟ್ಟನ್ನು ವ್ಯಕ್ತಪಡಿಸಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ಕುರಿತು ಇಸ್ಲಾಮಾಬಾದ್‌ನ ನಿಲುವನ್ನು ತಿಳಿಸಲು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. X ನಲ್ಲಿ ಪೋಸ್ಟ್ ಮಾಡಿದ ಷರೀಫ್, “ಇಂದು ಸಂಜೆ, ನನ್ನ ಪ್ರೀತಿಯ ಸಹೋದರ, ಹಿಸ್ ರಾಯಲ್ ಹೈನೆಸ್ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದೇನೆ, ಇರಾನ್ ಮೇಲಿನ ಇಸ್ರೇಲ್ ದಾಳಿ ಮತ್ತು ನಂತರದ ಗಲ್ಫ್ ಪ್ರದೇಶದಲ್ಲಿನ ದಾಳಿಗಳ ನಂತರದ ಅಪಾಯಕಾರಿ ಪ್ರಾದೇಶಿಕ ಉಲ್ಬಣವನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ” ಎಂದು ಹೇಳಿದರು. “ಈ ಕಷ್ಟದ ಸಮಯದಲ್ಲಿ ಸೌದಿ ಅರೇಬಿಯಾ ಸಾಮ್ರಾಜ್ಯ ಮತ್ತು ಸಹೋದರಿ ಗಲ್ಫ್ ರಾಷ್ಟ್ರಗಳೊಂದಿಗೆ ಪಾಕಿಸ್ತಾನ ಸಂಪೂರ್ಣ ಒಗ್ಗಟ್ಟಿನಿಂದ ನಿಂತಿದೆ” ಎಂದು ಅವರು ಹೇಳಿದರು.…

Read More

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಈ ಸುಡುವ ಬಿಸಿಲಿನಲ್ಲಿ ದೇಹವನ್ನು ತಂಪಾಗಿರಿಸಲು ಮತ್ತು ಕಳೆದುಹೋದ ಚೈತನ್ಯವನ್ನು ಮರಳಿ ಪಡೆಯಲು ‘ಕಬ್ಬಿನ ಹಾಲು’ ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದೆ. ಕೇವಲ ಬಾಯಾರಿಕೆ ತಣಿಸುವುದು ಮಾತ್ರವಲ್ಲದೆ, ಕಬ್ಬಿನ ಹಾಲಿನಲ್ಲಿರುವ ಪೋಷಕಾಂಶಗಳು ದೇಹದ ಹತ್ತಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತವೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ. ಕಬ್ಬಿನ ಹಾಲಿನ ಪ್ರಮುಖ 5 ಆರೋಗ್ಯ ಪ್ರಯೋಜನಗಳು: ತಕ್ಷಣದ ಶಕ್ತಿ ವರ್ಧಕ: ಕಬ್ಬಿನ ಹಾಲಿನಲ್ಲಿ ನೈಸರ್ಗಿಕ ಸಕ್ಕರೆ ಮತ್ತು ಗ್ಲೂಕೋಸ್ ಹೇರಳವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತಕ್ಷಣವೇ ಹೆಚ್ಚಿಸಿ, ಸುಸ್ತಾದ ದೇಹಕ್ಕೆ ತ್ವರಿತ ಚೈತನ್ಯ ನೀಡುತ್ತದೆ. ಬೇಸಿಗೆಯ ನಿರ್ಜಲೀಕರಣ (Dehydration) ತಡೆಯಲು ಇದು ಅತ್ಯುತ್ತಮ. ಜೀರ್ಣಕ್ರಿಯೆಗೆ ಸಹಕಾರಿ: ಇದರಲ್ಲಿರುವ ಪೊಟ್ಯಾಸಿಯಮ್ ಅಂಶವು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಹೊಟ್ಟೆಯ ಸೋಂಕುಗಳನ್ನು ತಡೆಯುವ ಜೊತೆಗೆ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಕಬ್ಬಿನ ಹಾಲು ಸಹಕಾರಿಯಾಗಿದೆ. ಕಿಡ್ನಿ ಆರೋಗ್ಯದ ರಕ್ಷಕ: ಕಬ್ಬಿನ ಹಾಲು ನೈಸರ್ಗಿಕವಾಗಿ ಮೂತ್ರವರ್ಧಕ (Diuretic) ಗುಣವನ್ನು ಹೊಂದಿದೆ.…

Read More

ಬಾಳೆಹೊನ್ನೂರು : ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಇಲಾಖೆ ಯಾವುದೇ ಜನರ ವಿರುದ್ಧವಿಲ್ಲ. ಆದರೆ, ಸುಪ್ರೀಂಕೋರ್ಟ್ ತೀರ್ಪು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅರಣ್ಯ ಕಾಯಿದೆ ಕಾನೂನುಗಳ ಪಾಲನೆ ಮಾಡುವ ನಿಟ್ಟಿನಲ್ಲಿ ಕೆಲವು ಅಸಮಾಧಾನಗಳಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬಾಳೆ ಹೊನ್ನೂರಿನ ನಾರಾಯಣ ಗುರು ಸಮುದಾಯ ಭವನದಲ್ಲಿಂದು ಆಯೋಜಿಸಲಾಗಿದ್ದ ಮಲೆನಾಡು ರೈತರ ಸಮಸ್ಯೆಗಳ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ಅರಣ್ಯ ಜಮೀನನ್ನು ಯಾರಿಗೂ ಪರಿಭಾರೆ ಮಾಡಲು ಅವಕಾಶವಿಲ್ಲ. ಆ ರೀತಿ ಅನ್ಯ ಉದ್ದೇಶಕ್ಕೆ ಕಾಡನ್ನು ಬಳಸಲು ಸರ್ವೋನ್ನತ ನ್ಯಾಯಾಲಯದ ಅನುಮತಿ ಮತ್ತು ಕೇಂದ್ರ ಸರ್ಕಾರದ ಸಮ್ಮತಿ ಅಗತ್ಯ ಎಂದು ಹೇಳಿದರು. ಸೆಕ್ಷನ್ 4 ಸಮಸ್ಯೆ ಸ್ವಾತಂತ್ರ್ಯಪೂರ್ವದಿಂದಲೂ ಇದೆ. ರಾಜ ಮಹಾರಾಜರ ಕಾಲದಲ್ಲೇ ಅಧಿಸೂಚನೆ ಆದ ಹಲವು ಪ್ರಕರಣ ಸೆಕ್ಷನ್ 17 ಆಗದೆ ಬಾಕಿ ಇದೆ. ಈಗ ಈ ಸಮಸ್ಯೆ ಪರಿಹರಿಸಲು ಸರ್ಕಾರ ಕಾನೂನು ವ್ಯಾಪ್ತಿಯಲ್ಲೇ ಪ್ರಯತ್ನಿಸುತ್ತಿದೆ ಎಂದ…

Read More

ಬೆಂಗಳೂರು: ನಗರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ನೀರಿನ ಸಂಪು ಸ್ವಚ್ಥಗೊಳಿಸೋದಕ್ಕೆ ಇಳಿದಂತ ಸಂದರ್ಭದಲ್ಲಿ ಮೂವರು ಉಸಿರುಗಟ್ಟಿ ಅಸ್ವಸ್ಥಗೊಂಡು, ಆ ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿರುವಂತ ಘಟನೆ ವೈಟ್ ಫೀಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೀರಿನ ಸಂಪು ಸ್ವಚ್ಛಗೊಳಿಸೋದಕ್ಕೆ ಮಾಲೀಕರಾದಂತ ಮುನಿಶಾಮಪ್ಪ(67) ಎಂಬವರು ಇಳಿದಿದ್ದರು. ಅವರು ಸ್ವಚ್ಛಗೊಳಿಸಲು ತಂದಂತ ಕೆಲವು ರಾಸಾಯನಿಕದಿಂದ ಉಸಿರುಗಟ್ಟಿ ಸಂಪಿನೊಳಗೆ ಮೂರ್ಛೆ ಬಿದ್ದಿದ್ದರು. ಇದನ್ನು ಗಮನಿಸಿದಂತ ರುದ್ರ ಕುಮಾರ್(40) ಎಂಬವರು ರಕ್ಷಣೆಗೆ ತೆರಳಿ ಅವರು, ಉಸಿರುಗಟ್ಟಿ ಮೂರ್ಛೆ ಹೋಗಿದ್ದರು. ಆ ಬಳಿಕ ವಿಶ್ವನಾಥ್ ಆಚಾರಿ(24) ಎಂಬುವರು ರಕ್ಷಣೆಗೆ ಹೋಗಿ ಅವರು ಪ್ರಜ್ಞೆ ತಪ್ಪಿದ್ದರು. ಅಸ್ವಸ್ಥಗೊಂಡಿದ್ದಂತ ಮೂವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲು ಕೊಂಡೊಯ್ಯುವ ವೇಳೆಯಲ್ಲಿ ಮಾರ್ಗಮಧ್ಯದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತರ ಪಾರ್ಥೀವ ಶರೀರವನ್ನು ವೈದೇಹಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-congress-government-is-cheating-dalits-and-doing-injustice-to-the-youth-chalavadi-narayanaswamy/

Read More

ಬೆಂಗಳೂರು: ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ಜಾರಿ ಮಾಡಿಲ್ಲ. ಇಷ್ಟು ದಿನಗಳ ಕಾಲ ನೀವು ದಲಿತರಿಗೂ ವಂಚನೆ ಮಾಡಿದ್ದೀರಿ; ಯುವಜನರಿಗೂ ಅನ್ಯಾಯ ಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಈ ಪರಿಸ್ಥಿತಿಗೆ ಸರಕಾರದ ಲೋಪ ಕಾರಣವೇ ಹೊರತು ಜನರ ಲೋಪ ಅಲ್ಲ. ಈಗ ಯಾವ ರೀತಿ ಮೀಸಲಾತಿ ಕೊಡುತ್ತೀರೆಂದು ಹೇಳಿ ಎಂದು ಸವಾಲು ಹಾಕಿದರು. ಈಗ ಮೀಸಲಾತಿ ಹಳೆ ರೀತಿಯಲ್ಲೇ ಕೊಡುವುದಾದರೆ ಅದು ಒಳ ಮೀಸಲಾತಿ ಆಗುವುದಿಲ್ಲ ಎಂದು ನುಡಿದರು. ಒಳ ಮೀಸಲಾತಿ ಕೊಡುವುದಾದರೆ ಶೇ 17 ರಂತೆ ಕೊಡಬೇಕು. ಅದು ಆಗುವುದಿಲ್ಲ. ಕೋರ್ಟಿನಲ್ಲಿ ಕೇಸಿದೆ. ಜಾರ್ಖಂಡ್, ಹರಿಯಾಣ, ತೆಲಂಗಾಣದಲ್ಲಿ ಕೊಟ್ಟಿದ್ದಾರೆ. ಎಸ್‍ಸಿ ಮೀಸಲಾತಿಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಜಾಸ್ತಿ ಆಗಿದೆ. ನೀವಿಲ್ಲಿ ಶೇ 50ರ ಮಿತಿ ಇದೆ ಎಂದಿದ್ದೀರಿ. ಆದರೆ, ಎಸ್‍ಸಿ, ಎಸ್‍ಟಿ ಮೀಸಲಾತಿಗೆ ಮಿತಿ ಇಲ್ಲ ಎಂದು ಗಮನ ಸೆಳೆದರು. ಅದನ್ನು ಮನವರಿಕೆ ಮಾಡಿಕೊಡದೇ ಸರಕಾರ ವಿಫಲವಾಗಿದೆ.…

Read More

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಲಿದ್ದು ಸಕಲ ತಯಾರಿ ಮಾಡಿಕೊಂಡಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ಶಾಲೆ, ಇಂದಿರಾಗಾಂಧಿ, ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಇತ್ಯಾದಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ನೂರು ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಒಟ್ಟು 2.31 ಲಕ್ಷ ಮಂದಿ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದು, 629 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೂಡ ಪರೀಕ್ಷೆ ನಡೆಯಲಿದೆ. ಐದನೇ ತರಗತಿ ವ್ಯಾಸಂಗ‌ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ಅವರು ವಿವರಿಸಿದರು. https://kannadanewsnow.com/kannada/iran-israel-conflict-iranian-defense-minister-revolutionary-guard-commander-killed/

Read More

ಇರಾನ್: ಇರಾನ್‌ನ ರಕ್ಷಣಾ ಸಚಿವ ಅಮೀರ್ ನಾಸಿರ್ಜಾದೆ ಮತ್ತು ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡರ್ ಮೊಹಮ್ಮದ್ ಪಾಕ್‌ಪೌರ್ ಇಸ್ರೇಲಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ ಎಂದು ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಗಳ ಬಗ್ಗೆ ಪರಿಚಿತವಾಗಿರುವ ಎರಡು ಮೂಲಗಳು ಮತ್ತು ಒಂದು ಪ್ರಾದೇಶಿಕ ಮೂಲಗಳು ತಿಳಿಸಿವೆ. ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ನೆತನ್ಯಾಹು ಮತ್ತು ಟ್ರಂಪ್ ಅವರ ಇರಾನ್ ಮೇಲಿನ ಯುದ್ಧವು ಸಂಪೂರ್ಣವಾಗಿ ಅಪ್ರಚೋದಿತ, ಕಾನೂನುಬಾಹಿರ ಮತ್ತು ನ್ಯಾಯಸಮ್ಮತವಲ್ಲ. ಟ್ರಂಪ್ ‘ಅಮೆರಿಕಾ ಮೊದಲು’ ಅನ್ನು ‘ಇಸ್ರೇಲ್ ಮೊದಲು’ ಆಗಿ ಪರಿವರ್ತಿಸಿದ್ದಾರೆ – ಇದರರ್ಥ ಯಾವಾಗಲೂ ‘ಅಮೆರಿಕಾ ಕೊನೆಯದು’. ನಮ್ಮ ಪ್ರಬಲ ಸಶಸ್ತ್ರ ಪಡೆಗಳು ಈ ದಿನಕ್ಕಾಗಿ ಸಿದ್ಧವಾಗಿವೆ ಮತ್ತು ಆಕ್ರಮಣಕಾರರಿಗೆ ಅವರು ಅರ್ಹವಾದ ಪಾಠವನ್ನು ಕಲಿಸುತ್ತವೆ ಎಂದು ಹೇಳಿದ್ದಾರೆ. ಇರಾನ್ ಮತ್ತು ಗಲ್ಫ್ ಪ್ರದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ: MEA ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ವಿದೇಶಾಂಗ ಸಚಿವಾಲಯವು “ಇರಾನ್ ಮತ್ತು ಗಲ್ಫ್…

Read More

ಬೆಂಗಳೂರು : ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರ್ಕಾರ ಈಗ ಗರ್ಭಕಂಠ ಕ್ಯಾನ್ಸರ್‌ ತಡೆಗೆ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಆಶಯದಂತೆ ರಾಜ್ಯದಲ್ಲಿಯೂ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಬೆಂಗಳೂರಿನ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ವೆಬ್‌ಕ್ಯಾಸ್ಟ್‌ ಮೂಲಕ ಕಾರ್ಯಕ್ರಮ ವೀಕ್ಷಿಸಲಾಯಿತು. ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ವೈಧ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್, ರಾಷ್ಟ್ರೀಯ ಆರೋಗ್ಯ ಮಿಷನ್‌ ವ್ಯವಸ್ಥಾಪಕ ನಿರ್ದೇಶಕರಾದ ಅವಿನಾಶ್‌ ಮೆನನ್‌, ಬೆಂಗಳೂರು ಮೆಡಿಕಲ್‌ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್‌, ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಹಾಜರಿದ್ದರು. 14 ವರ್ಷ ಮೇಲ್ಪಟ್ಟ ವಯಸ್ಸಿನ ಸುಮಾರು 1.15 ಕೋಟಿ ಹುಡುಗಿಯರಿಗೆ ಸರ್ಕಾರಿ ಆರೋಗ್ಯ ಸೌಲಭ್ಯಗಳಲ್ಲಿ, ಆಯುಷ್ಮಾನ್ ಆರೋಗ್ಯ ಮಂದಿರಗಳು (ಪ್ರಾಥಮಿಕ ಆರೋಗ್ಯ ಕೇಂದ್ರಗಳು), ಸಮುದಾಯ…

Read More

ಮಂಡ್ಯ : ಬೇಸಿಗೆ ವೇಳೆಗೆ ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆ ತಲೆದೋರುವುದಿಲ್ಲ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ನಗರಕೆರೆ, ತೊರೆಚಾಕನಹಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ರೈತರ ಬೇಸಾಯಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈಗಾಗಲೇ ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡುವಂತೆ ಚೆಸ್ಕಾಂ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ರಾತ್ರಿ ಹೊತ್ತಿನಲ್ಲಿ ವಿದ್ಯುತ್ ನೀಡಿದರೆ ಚಿರತೆ, ಹಾವು ಕಾಡು ಪ್ರಾಣಿಗಳಿಂದ ಸಾವು ನೋವು ಸಂಭವಿಸಲಿದ್ದು, ಹೀಗಾಗಿ ರೈತರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಹಗಲಿನಲ್ಲೆ ನೀಡಲಿದ್ದು, ಮುಂಬರುವ ಬೇಸಿಗೆ ವೇಳೆಗೆ ವಿದ್ಯುತ್ ಸಮಸ್ಯೆ ಉಂಟಾಗುವುದಿಲ್ಲ ಎಂದರು. ಸೋಮನಹಳ್ಳಿ ಬಳಿ ಈಗಾಗಲೇ 220 ಕೆವಿ ಸಬ್ ಸ್ಟೇಷನ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಕೆಲ ದಿನಗಳಲ್ಲೇ ಸಚಿವರಾದ ಕೆ.ಜೆ ಜಾರ್ಜ್ ಅವರು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಒಂದು ವರ್ಷದೊಳಗೆ ಕಾಮಗಾರಿ ಮುಕ್ತಾಯವಾಗಿ ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆಗೆ ಶಾಶ್ವತವಾಗಿ ಮುಕ್ತಿ ನೀಡಲಾಗುವುದು ಎಂದರು. ಇನ್ನು ಗೆಜ್ಜಲಗೆರೆ ಗ್ರಾಪಂ ಆವರಣದಲ್ಲಿ ನಡೆಯುತ್ತಿರುವ ಹೋರಾಟಕ್ಕೆ…

Read More

ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!! ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ…

Read More