Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ತಲೆನೋವಾಗಿ ಪರಿಣಮಿಸಿರುವ ಹಳೆಯ ಟ್ರಾಫಿಕ್ ಫೈನ್ ಮತ್ತು ಸಾರಿಗೆ ಇಲಾಖೆಯ ಬಾಕಿ ದಂಡಗಳನ್ನು ಪಾವತಿಸಲು ಕಾಯುತ್ತಿದ್ದ ವಾಹನ ಮಾಲೀಕರಿಗೆ ಕರ್ನಾಟಕ ಸರ್ಕಾರವು ಮತ್ತೊಮ್ಮೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ (Traffic e-Challan) ಹಾಗೂ ಸಾರಿಗೆ ಇಲಾಖೆಯ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಭರಪೂರ ಶೇಕಡಾ 50 ರಷ್ಟು (50%) ರಿಯಾಯಿತಿ ನೀಡಿ ರಾಜ್ಯ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ರಾಷ್ಟ್ರೀಯ ಲೋಕ್ ಅದಾಲತ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 20 ದಿನಗಳ ಸುವರ್ಣಾವಕಾಶ: ಅವಧಿ ಯಾವಾಗ? ಈ ರಿಯಾಯಿತಿ ಸೌಲಭ್ಯವು ಸಾರ್ವಜನಿಕರಿಗೆ ಸೀಮಿತ ಅವಧಿಗೆ ಮಾತ್ರ ಲಭ್ಯವಿರಲಿದೆ. ಪ್ರಾರಂಭವಾಗುವ ದಿನಾಂಕ: 21 ಜೂನ್ 2026 ಕೊನೆಯ ದಿನಾಂಕ: 10 ಜುಲೈ 2026 ಗಮನಿಸಿ: ವಾಹನ ಸವಾರರು ಈ ನಿಗದಿತ 20 ದಿನಗಳ ಅವಧಿಯಲ್ಲಿ ತಮ್ಮ ಬಾಕಿ ದಂಡವನ್ನು ಅರ್ಧ ಬೆಲೆಯಲ್ಲಿ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ರಿಯಾಯಿತಿ ಯಾರಿಗೆ…
ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟದ ನೂತನ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಕುರಿತು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಅಧಿಕೃತ ಜ್ಞಾಪನಾ ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಅಧಿಕೃತ ಅಧಿಸೂಚನೆಯ ಮೂಲ ಪ್ರತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಮುಂದಿನ ಕ್ರಮಕ್ಕಾಗಿ ರವಾನಿಸಿದ್ದಾರೆ. ಸಂವಿಧಾನದ 166ನೇ ವಿಧಿಯ ಕ್ಲಾಸ್ (3) ಹಾಗೂ ಕರ್ನಾಟಕ ಸರ್ಕಾರದ (ವ್ಯವಹಾರ ನಿರ್ವಹಣೆ) ನಿಯಮಗಳು 1977ರ ನಿಯಮ 5ರ ಅನ್ವಯ ನೀಡಿರುವ ಅಧಿಕಾರವನ್ನು ಬಳಸಿ, ಮುಖ್ಯಮಂತ್ರಿಗಳ ಸಲಹೆಯ ಮೇರೆಗೆ ರಾಜ್ಯಪಾಲರು ಈ ಖಾತೆಗಳನ್ನು ಹಂಚಿಕೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಆದರೆ, ಈ ಸರ್ಕಾರಿ ಆದೇಶದ ಪ್ರತಿಗಳಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಹಾಗೂ ಡಾ. ಜಿ. ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿ ಎಂದು ನಮೂದಿಸಿರುವುದು ತೀವ್ರ ಕುತೂಹಲ ಮತ್ತು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು: ಕೆ ಎಸ್ ಎಸ್ ಐ ಡಿ ಸಿ ಮತ್ತು ಬೆಂಗಳೂರು ನಗರ ನೀರು ಸರಬರಾಜು ಮಂಡಳಿಯ ಗ್ರೂಪ್ ಎ ಮತ್ತು ಬಿ ವಿವಿಧ ಹುದ್ದೆಗಳಿಗಾಗಿ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಗುರುವಾರ ಪ್ರಕಟಿಸಿದೆ. ಸಂಬಂಧಪಟ್ಟ ಸಂಸ್ಥೆಗಳಿಗೆ ಅಂತಿಮ ಅಂಕಪಟ್ಟಿಯನ್ನು ಹಸ್ತಾಂತರಿಸಿ ನೇಮಕಾತಿ ಪ್ರಾಧಿಕಾರದಿಂದ ನಿಯಮಾನುಸಾರ ಆಯ್ಕೆಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿ ಅಧಿಕಾರಿ: ರೈ ವಿವಿ ಅಭ್ಯರ್ಥಿಗಳೂ ಅರ್ಹ ಕೃಷಿ ಇಲಾಖೆಯ ಮೂಲ ವೃಂದದಲ್ಲಿ ಖಾಲಿ ಇದ್ದ 671 (ಹಿಂಬಾಕಿ) ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇದ್ದ 273 (ಹಿಂಬಾಕಿ) ಗ್ರೂಪ್-ಬಿ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಯುಜಿಸಿ ಅನುಮೋದಿತ ‘ರೈ ಟೆಕ್ನಾಲಜಿ ಯೂನಿವರ್ಸಿಟಿ’ಯಿಂದ (RAI TECHNOLOGY UNIVERSTIY) ಬಿ.ಎಸ್ಸಿ. (ಅಗ್ರಿ) ಪದವಿ ಪಡೆದಿರುವ ಎಲ್ಲ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ 13 ಪ್ರಮುಖ ಸಚಿವರಿಗೆ ಇಲಾಖೆಗಳನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳು ಆಯಕಟ್ಟಿನ ಹಣಕಾಸು ಸೇರಿದಂತೆ ಹಲವು ಪ್ರಮುಖ ಇಲಾಖೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದರೆ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಇಲಾಖೆಗಳು ಸಿಎಂ ಡಿ.ಕೆ.ಶಿವಕುಮಾರ್: ಹಣಕಾಸು ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹಾಗೂ ಇತರ ಯಾವುದೇ ಸಚಿವರಿಗೆ ಹಂಚಿಕೆಯಾಗದ ಎಲ್ಲಾ ಖಾತೆಗಳು. ಡಿಸಿಎಂ ಡಾ. ಜಿ. ಪರಮೇಶ್ವರ್: ಕಂದಾಯ ಇಲಾಖೆ ಹಾಗೂ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ. 13 ಸಚಿವರು ಮತ್ತು ಅವರಿಗೆ ಹಂಚಿಕೆಯಾದ ಖಾತೆಗಳ ಪಟ್ಟಿ: ಯಾವ ಯಾವ ಸಚಿವರಿಗೆ ಯಾವ ಜವಾಬ್ದಾರಿ ಸಿಕ್ಕಿದೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ: ಸಚಿವರ ಹೆಸರು ನಿಯೋಜಿಸಲಾದ…
ಬೆಂಗಳೂರು: “ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳ ಸಭೆ ನಡೆಸಿದರು. ನಂತರ ಮಾಧ್ಯಮಗೋಷ್ಠಿ ನಡೆಸಿ ಸಭೆಯ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು. “ನಮ್ಮ ಸರ್ಕಾರದಲ್ಲಿ ಅನಿವಾಸಿ ಭಾರತೀಯರ (ಎನ್ಆರ್ ಐ) ಸಚಿವಾಲಯ ತೆರೆಯಲು ಸರ್ಕಾರ ಮುಂದಾಗಿದೆ. ನಮ್ಮ ರಾಜ್ಯದಲ್ಲಿ ಎನ್ಆರ್ ಐಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿದ್ದರೆ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಈ ಸಚಿವಾಲಯ ಸಹಾಯವಾಗುತ್ತದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿರುವೆ. ಸಾರ್ವಜನಿಕರ ಕುಂದುಕೊರತೆಯ ಸಚಿವಾಲಯ ಆರಂಭಿಸಿ, ಜನರ ಅರ್ಜಿ, ವಿಚಾರಧಾರೆ, ಸಮಸ್ಯೆ…
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಚಿವ ಸಂಪುಟ ಕಸರತ್ತು ತೀವ್ರಗೊಂಡಿದ್ದು, ಮಂಡ್ಯದಲ್ಲಿ ಸಚಿವ ಸ್ಥಾನದ ಆಕಾಂಕ್ಷಿ ಬಿ.ಝೆಡ್. ಜಮೀರ್ ಅಹಮ್ಮದ್ ಖಾನ್ ಬೆಂಬಲಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ. ಜಮೀರ್ ಅಹಮ್ಮದ್ ಅವರಿಗೆ ಮೊದಲ ಪಟ್ಟಿಯಲ್ಲೇ ಸಚಿವ ಸ್ಥಾನ ಕೈತಪ್ಪಿರುವುದನ್ನು ತೀವ್ರವಾಗಿ ಖಂಡಿಸಿರುವ ಮುಸ್ಲಿಂ ಸಮುದಾಯದ ನಾಯಕರು, ಜಿಲ್ಲೆಯಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಸುವ ಮೂಲಕ ಬಂಡಾಯದ ತುತ್ತೂರಿ ಊದಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ಮಾಜಿ ಮುಡಾ (MUDA) ಅಧ್ಯಕ್ಷ ನಹೀಮ್ ಅವರ ನೇತೃತ್ವದಲ್ಲಿ ಜಮೂನಾಯpattern ಸಮುದಾಯದ ನೂರಾರು ಕಾರ್ಯಕರ್ತರು ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಪಂಜು ಹಿಡಿದು ಬೃಹತ್ ಮೆರವಣಿಗೆ ನಡೆಸಿದರು. ಪ್ರತಿಭಟನಾಕಾರರು ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು, ಮಾನವ ಸರಪಳಿ ನಿರ್ಮಿಸುವ ಮೂಲಕ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಬೇಕು ಬೇಕು, ಜಮೀರ್ ಅಹಮ್ಮದ್ ಅವರಿಗೆ ಡಿಸಿಎಂ ಸ್ಥಾನ ಬೇಕು” ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ತಕ್ಷಣವೇ ಅವರಿಗೆ ಉನ್ನತ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದರು.…
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಸದ್ಯ ಕೇಳಿಬರುತ್ತಿರುವ ಅತಿ ದೊಡ್ಡ ಸುದ್ದಿ ಎಂದರೆ ಅದು ರಾಜ್ಯ ಬಿಜೆಪಿಯ ಮುಖವಾಡವಾಗಿದ್ದ ಕೆ. ಅಣ್ಣಾಮಲೈ ಅವರ ರಾಜೀನಾಮೆ ನಿರ್ಧಾರ. ದ್ರಾವಿಡ ಸಿದ್ಧಾಂತದ ಭದ್ರಕೋಟೆಯಾಗಿರುವ ತಮಿಳುನಾಡಿನಲ್ಲಿ ಹಿಂದುತ್ವದ ರಾಜಕಾರಣಕ್ಕೆ ಹೊಸ ಆಯಾಮ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ಇದೀಗ ಕಮಲ ಪಾಳಯದಿಂದ ದೂರ ಸರಿಯುತ್ತಿರುವುದು ರಾಷ್ಟ್ರ ರಾಜಕಾರಣದಲ್ಲೂ ತೀವ್ರ ಕುತೂಹಲ ಮೂಡಿಸಿದೆ. ಜೂನ್ 5 ರಂದು ಚೆನ್ನೈನಲ್ಲಿ ಕರೆಯಲಾಗಿರುವ ಜಂಟಿ ಸುದ್ದಿಗೋಷ್ಠಿಯಲ್ಲಿ ಅಣ್ಣಾಮಲೈ ತಮ್ಮ ರಾಜೀನಾಮೆ ಹಾಗೂ ಮುಂದಿನ ರಾಜಕೀಯ ನಡೆಯನ್ನು ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆಯಿದೆ. ದೆಹಲಿ ಮಟ್ಟದಲ್ಲಿ ನಡೆದ ಹೈಡ್ರಾಮಾ ಕಳೆದ ಎರಡು ದಿನಗಳಿಂದ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದ ಹಲವು ರಾಜಕೀಯ ಬೆಳವಣಿಗೆಗಳು ಈ ಮಹತ್ವದ ನಿರ್ಧಾರಕ್ಕೆ ಮುನ್ನುಡಿ ಬರೆದಿವೆ. ಮೂಲಗಳ ಪ್ರಕಾರ, ಅಣ್ಣಾಮಲೈ ಈಗಾಗಲೇ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ತಮ್ಮ ಪ್ರಾಥಮಿಕ ಸದಸ್ಯತ್ವದ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ವರಿಷ್ಠರೊಂದಿಗೆ ಪ್ರತ್ಯೇಕ ಸಭೆ: ಪ್ರಧಾನಿ ನರೇಂದ್ರ ಮೋದಿ ಮತ್ತು…
ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಇರುವ ಕಾವೇರಿ ನದಿಯ ದಡದಲ್ಲಿ ಉಡವನ್ನು ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಉಡವನ್ನು ಕೊಳ್ಳೇಗಾಲ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡಿದೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಇರುವ ಕಾವೇರಿ ನದಿ ದಡದಲ್ಲಿ ಉಡವನ್ನು ಹಿಡಿದು ಮಾರಾಟ ಮಾಡುವ ಸಲುವಾಗಿ ಸಾಗಾಣಿಕೆ ಮಾಡುತ್ತಿರುವುದಾಗಿ ದೊರೆತ ಮಾಹಿತಿಯಂತೆ ಜೂನ್ 3ರಂದು ಮಧ್ಯಾಹ್ನ 3.15 ಗಂಟೆ ಸಮಯದಲ್ಲಿ ಕಾವೇರಿ ನದಿಯ ದಡದ ಬಳಿ ಹೋದಾಗ ಇಬ್ಬರು ವ್ಯಕ್ತಿಗಳು ರಟ್ಟಿನಿಂದ ಸುತ್ತಿರುವ ಕಬ್ಬಿಣದ ಪಂಜರ ಸಮೇತ ಇರುವ ಒಂದು ಜೀವಂತ ಉಡವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದುದ್ದು ಕಂಡು ಬಂತು. ತಕ್ಷಣ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಸ್ವತ್ತನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಬಂಧಿತ ಆರೋಪಿಗಳು ಸರ್ದಾರ್ ಬಿನ್ ಲೇಟ್ ಮುಕ್ತಾರ್ ಅಹಮದ್ ಅಲಿಯಾಸ್ ಮುಕ್ತಾರ್ ಪಾಶ (45 ವರ್ಷ), ಹುಣಸೂರು…
ಮೈಸೂರು: ಪುಣೆ-ಮಿರಜ್ ಭಾಗದ ಜೋಡಿ ಮಾರ್ಗ ಕಾಮಗಾರಿಗೆ ಸಂಬಂಧಿಸಿದಂತೆ, ನೀರಾ ಯಾರ್ಡ್ ನಲ್ಲಿ ಇಂಜಿನಿಯರಿಂಗ್ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕೆಳಗಿನ ರೈಲುಗಳ ಸಂಚಾರದಲ್ಲಿ ನಿಯಂತ್ರಣ, ಭಾಗಶಃ ರದ್ದು ಮತ್ತು ಮಾರ್ಗ ಬದಲಾವಣೆ ಮಾಡಲಾಗುತ್ತಿದೆ ಎಂದು ಮಧ್ಯ ರೈಲ್ವೆಯು ತಿಳಿಸಿದೆ. ವಿವರಗಳು ಈ ಕೆಳಗಿನಂತಿವೆ: 1. ದಿನಾಂಕ 06.06.2026 ಮತ್ತು 13.06.2026 ರಂದು ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 20686 ಕೆಎಸ್ಆರ್ ಬೆಂಗಳೂರು – ಗಾಂಧಿಧಾಮ್ ವೀಕ್ಲಿ ಸೂಪರ್’ಫಾಸ್ಟ್ ಎಕ್ಸ್’ಪ್ರೆಸ್ ರೈಲನ್ನು ಲೋನಂದ್ ನಿಲ್ದಾಣದಲ್ಲಿ 25 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. 2. ದಿನಾಂಕ 06.06.2026, 09.06.2026 ಮತ್ತು 13.06.2026 ರಂದು ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16553 ಎಸ್ಎಂವಿಟಿ ಬೆಂಗಳೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಬೈ-ವೀಕ್ಲಿ ಎಕ್ಸ್’ಪ್ರೆಸ್ ರೈಲನ್ನು ಮಿರಜ್-ಲೋನಂದ್ ಭಾಗದಲ್ಲಿ 2 ಗಂಟೆ 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. 3. ದಿನಾಂಕ 09.06.2026 ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16210 ಮೈಸೂರು – ಅಜ್ಮೀರ್…
ಬೆಂಗಳೂರು: ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ನೈಋತ್ಯ ಮುಂಗಾರು (Monsoon) ಜೂನ್ 4 ರಂದು ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಮುಂಗಾರು ಮಳೆ ಚುರುಕುಗೊಳ್ಳಲಿದ್ದು, ಜೂನ್ 4 ರಿಂದ ಜೂನ್ 9 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಆರ್ಭಟ: ಕರಾವಳಿ ಜಿಲ್ಲೆಗಳಲ್ಲಿ ಜೂನ್ 4 ರಿಂದಲೇ ಸಾಧಾರಣ ಮಳೆ ಆರಂಭವಾಗಲಿದ್ದು, ಜೂನ್ 6 ರಿಂದ ಜೂನ್ 9 ರ ಅವಧಿಯಲ್ಲಿ ಮಳೆಯ ತೀವ್ರತೆ ಗಣನೀಯವಾಗಿ ಹೆಚ್ಚಾಗಲಿದೆ. ಈ ಭಾಗದ ಹಲವು ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ಮಲೆನಾಡು ಭಾಗದಲ್ಲೂ ಜೂನ್ 7 ರಿಂದ 9 ರವರೆಗೆ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣದಿಂದ ಭಾರೀ…














