Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯದಲ್ಲಿ ಜ.13 ರಂದು ನಡೆದ ಜಿಲ್ಲಾ ಮಟ್ಟದ 2025-26 ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮದ್ದೂರು ನಗರದ ಶಿವಪುರದ ಪೂರ್ಣಪ್ರಜ್ಞಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕನ್ನಡ ಭಾಷಣದಲ್ಲಿ ಎಸ್.ಪಿ.ಚಂದನ, ಹಿಂದಿ ಭಾಷಣದಲ್ಲಿ ಕುಲ್ಸಮ್ ನಿದಾ, ಗಜಲ್ ನಲ್ಲಿ ಸಾರಾ ಅಲಿ ಪ್ರಥಮ ಬಹುಮಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆಂದು ಬಿಇಒ ಎಸ್.ಬಿ.ಧನಂಜಯ, ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ, ಕಾರ್ಯದರ್ಶಿ ಎಚ್.ಆರ್.ಅನಂತೇಗೌಡ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/government-land-grabbing-four-government-employees-of-nagamangala-taluk-office-mandya-suspended/
ಮಂಡ್ಯ : ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಸರ್ಕಾರಿ ದಾಖಲೆಗಳನ್ನು ಅಕ್ರಮವಾಗಿ ತಿದ್ದಿರುವ ಮತ್ತು ಸೃಷ್ಟಿಸಿರುವ ಆರೋಪದ ಮೇರೆಗೆ ನಾಲ್ವರು ಸರ್ಕಾರಿ ನೌಕರರನ್ನು ಅಮಾನತು ಮಾಡಿ, ಜಿಲ್ಲಾಧಿಕಾರಿ ಕುಮಾರ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ. ದ್ವಿತೀಯ ದರ್ಜೆ ಸಹಾಯಕರಾದ ಸತೀಶ್ ಎಚ್.ವಿ., ಯೋಗೇಶ್, ಗುರುಮೂರ್ತಿ ಮತ್ತು ವಿಜಯ್ಕುಮಾರ್ (ಅನಧಿಕೃತ ಗೈರು ಹಾಜರಿ) ಅವರನ್ನು ವಿಚಾರಣೆ ಕಾಯ್ದಿರಿಸಿ, ಅಮಾನತು ಮಾಡಲಾಗಿದೆ. ಆರೋಪಿತ ನೌಕರರು ಕರ್ತವ್ಯದಲ್ಲಿ ಮುಂದುವರಿದರೆ, ಸಾಕ್ಷ್ಯಗಳನ್ನು ನಾಶಪಡಿಸುವ ಮತ್ತು ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆ ಇರುವುದರಿಂದ ಅಮಾನತು ಜೊತೆಗೆ ಬೇರೆ ಸ್ಥಳಗಳಿಗೆ ವರ್ಗಾಯಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸತೀಶ್ ಅವರನ್ನು ಮದ್ದೂರು ತಾಲ್ಲೂಕು ಕಚೇರಿಗೆ, ಯೋಗೇಶ್ ಅವರನ್ನು ಪಾಂಡವಪುರ ತಾಲ್ಲೂಕು ಕಚೇರಿಗೆ, ಗುರುಮೂರ್ತಿ ಅವರನ್ನು ಶ್ರೀರಂಗಪಟ್ಟಣ ತಾಲ್ಲೂಕು ಕಚೇರಿಗೆ ಹಾಗೂ ವಿಜಯ್ಕುಮಾರ್ ಅವರನ್ನು ಕೆ.ಆರ್.ಪೇಟೆ ತಾಲ್ಲೂಕು ಕಚೇರಿಗೆ ವರ್ಗಾಯಿಸಿ ಆದೇಶಿಸಲಾಗಿದೆ. ಕಾಂತಾಪುರ ಗ್ರಾಮದ ಗ್ರಾಮ ಸಹಾಯಕ ಎಸ್.ಯೋಗೇಶ್ ಅವರನ್ನು ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಕರ್ತವ್ಯದಿಂದ ಬಿಡುಗಡೆಗೊಳಿಸಿ, ಆದೇಶಿಸಲಾಗಿದೆ. ಶಿರಸ್ತೇದಾರರಾದ ರವಿಶಂಕರ್ (ಭೂ ಮಂಜೂರಾತಿ…
ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ. ಮಕರ ಸಂಕ್ರಾಂತಿಯ ಪ್ರಯುಕ್ತ ನಡೆಯುವಂತ ಸಿಗಂದೂರು ಜಾತ್ರಾ ಮಹೋತ್ಸವಕ್ಕೆ ಸಾಗರ-ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದಂತ ಗೋಪಾಲಕೃಷ್ಣ ಬೇಳೂರು ಅವರು ವಿದ್ಯುಕ್ತ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಐತಿಹಾಸಿಕ ಪ್ರಸಿದ್ಧವಾದ ಶ್ರೀ ಸಿಗಂದೂರು ಚೌಡೇಶ್ವರಿ ಜಾತ್ರೆಗೆ ವಿದ್ಯುಕ್ತ ಚಾಲನೆಯನ್ನು ನೀಡಲಾಗಿದೆ. ಸಿಗಂದೂರಿನ ದೇವಿಯ ಮೂಲ ಸ್ಥಾನದಲ್ಲಿ ಪೂಜೆ, ಆ ಬಳಿಕ ಧರ್ಮ ಜ್ಯೋತಿಯನ್ನು ಬೆಳಗಿಸುವ ಮೂಲಕ ಶಾಸಕ ಗೋಪಾಲಕೃಷ್ಣ ಬೇಳೂರು ಭವ್ಯ ಶೋಭಾ ಯಾತ್ರೆಗೆ ಚಾಲನೆಯನ್ನು ನೀಡಿದರು. ಈ ವೇಳೆ ಶಿಕಾರಿಪುರ ತಾಲೂಕಿನ ಕಡೆನಂದಿಹಳ್ಳಿ ಮಠದ ರೇವಣ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ, ಎಂ.ಶ್ರೀಕಾಂತ್, ಹೊಳಡಕೊಪ್ಪದ ಬೀರಪ್ಪ ದಂಪತಿಗಳು, ನಿರಂಜನ್ ಕುಪ್ಪಗಡ್ಡೆ ದಂಪತಿಗಳು, ಕಲಸೆ ಚಂದ್ರಪ್ಪ, ಅನಿತಾಕುಮಾರಿ, ಅಶೋಕ ಬೇಳೂರು, ಹೊಳೆಯಪ್ಪ ಇತರರು ಹಾಜರಿದ್ದರು. ಮೂಲ ಸ್ಥಾನದಲ್ಲಿ ಬೆಳಗಿದಂತ ಧರ್ಮ ಜ್ಯೋತಿ…
ಬೆಂಗಳೂರು : ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಅವರು ಇಂದು ನಡೆದ ವಿಶೇಷ ತುರ್ತು ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿ ಗೋಷ್ಠಿ ನಡೆಸಿ ವಿವರಿಸಿದರು. ಸಚಿವ ಸಂಪುಟದಲ್ಲಿ ಮೂರು ಮುಖ್ಯ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವಿಧಾನ ಸಭೆ ಹಾಗೂ ವಿಧಾನ ಅಧಿವೇಶನವನ್ನು 22-1- 2026 ರಂದು ಕರೆಯಲು ತೀರ್ಮಾನಿಸಲಾಗಿದೆ. 22-1-2026 ವಿಧಾನ ಮಂಡಲದ ಅಧಿವೇಶನದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರನ್ನು ಆಹ್ವಾನಿಸಲು ಸಚಿವ ಸಂಪುಟ ತೀರ್ಮಾನಿಸಿದೆ. ರಾಜ್ಯಪಾಲರು ಮಾಡಲಿರುವ ಭಾಷಣವನ್ನು ಅನುಮೋದಿಸಲು ಸಚಿವ ಸಂಪುಟವು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಿದೆ. ವಿಬಿಜಿ ರಾಮ್ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿಶೇಷ ಚರ್ಚೆ ನೂತನ ಕಾಯ್ದೆಯು ಸಮಾಜದ ಮೇಲೆ ಬೀರಿರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ…
ಶಿವಮೊಗ್ಗ : ಅಂಗವಿಕಲ ಮಹಿಳೆಗೆ ಸ್ವಯಂ ಉದ್ಯೋಗಕ್ಕಾಗಿ ಕಿರಾಣಿ ಅಂಗಡಿ ಹಾಗೂ ಅದಕ್ಕೆ ಬೇಕಾದ ಸಾಮಗ್ರಿಗಳನ್ನು ಒದಗಿಸಿ ಸ್ವಯಂ ಉದ್ಯೋಗ ಮಾಡುವಂತೆ ಪ್ರೋತ್ಸಾಹಿಸುವ ಮಾದರಿ ಕಾರ್ಯವನ್ನು ಸಾಗರದ ಸಫಾ ಬೈತುಲ್ ಮಾಲ್ ಸಂಸ್ಥೆ ಮಾಡಿದೆ. ಈ ಮೂಲಕ ಸಫಾ ಸಂಸ್ಥೆ ಸಾಮಾಜಿಕ ಕ್ಷೇತ್ರಕ್ಕೆ ಮತ್ತೊಂದು ಕೊಡುಗೆ ನೀಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಜಂಬಗಾರು ಆಶ್ರಯ ಬಡಾವಣೆ ನಿವಾಸಿ ಮಮ್ತಾಜ್ ತನ್ನ ವೃದ್ಧ ತಾಯಿಯೊಂದಿಗೆ ವಾಸಿಸುತ್ತಿದ್ದರು. ಈಗಾಗಲೇ ಈ ಮಹಿಳೆಗೆ ಸಫಾ ಸಂಸ್ಥೆಯ ಮೂಲಕ ಮಾಸಿಕ ಪಿಂಚಣೆ ವ್ಯವಸ್ಥೆ ನೀಡಲಾಗುತ್ತಿದೆ. ಮಹಿಳೆಯ ಸಮಸ್ಯೆಯನ್ನರಿತು ಸಫಾ ಸಂಸ್ಥೆಯ ಅಧ್ಯಕ್ಷ ಮೌಲಾನಾ ಕಲೀಮುಲ್ಲಾ ,ಹಾಫಿಜ್ ಷಫೀವುಲ್ಲಾ ಹಾಗೂ ಇನ್ನಿತರ ಪ್ರಮುಖರು ಮುಮ್ತಾಜ್ ಅವರ ಮನೆಗೆ ತೆರಳಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ದಾನಿಗಳ ನೆರವಿನಿಂದ ಸುಸಜ್ಜಿತವಾದ ಕಿರಾಣಿ ಅಂಗಡಿ ಹಾಗೂ ಅಂಗಡಿಗೆ ಬೇಕಾದ ವಸ್ತುಗಳನ್ನು ನೀಡಿದ್ದಾರೆ. ಈಚೆಗೆ ಸಫಾ ಬೈತುಲ್ ಮಾಲ್ ಸಂಸ್ಥೆಯ ರಾಷ್ಟ್ರಾಧ್ಯಕ್ಷ ಮೌಲಾನಾ ಗಯಾಸ್ ಅಹಮದ್ ರಶಾದಿ ಕಿರಾಣಿ ಅಂಗಡಿಯನ್ನು ಉದ್ಘಾಟಿಸಿದರು. ಇದೇ ವೇಳೆ ಸಾಗರದ ಸಫಾ ಬೈತುಲ್ ಮಾಲ್…
ಶಿವಮೊಗ್ಗ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಪತಿ, ಮಕ್ಕಳು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ವಡಗೆರೆ ಬಳಿಯಲ್ಲಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ತೆರಳುತ್ತಿದ್ದಂತ ಶಿಕಾರಿಪುರ ಮೂಲದ ಅಮೃತಾ ದುರ್ಮರಣ ಹೊಂದಿದ್ದಾರೆ. ಪಲ್ಸರ್ ಬೈಕ್ ನಲ್ಲಿ ಶಿಕಾರಿಪುರದಿಂದ ರಿಪ್ಪನ್ ಪೇಟೆಗೆ ಪತಿ, ಪತ್ನಿ ಮಕ್ಕಳು ತೆರಳುತ್ತಿದ್ರು. ಇವರ ಬೈಕ್ ಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪತ್ನಿ ಅಮೃತಾ ಸಾವನ್ನಪ್ಪಿದ್ದರೇ, ಪತಿ, ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/good-news-for-guillain-barre-syndrome-sufferers-in-the-state-treatment-available-under-ayushman-bharat/ https://kannadanewsnow.com/kannada/shivamogga-case-registered-against-those-who-illegally-cut-down-trees-in-sagars-ullur/
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅಶ್ಲೀಲವಾಗಿ ನಿಂದಿಸಿ, ಧಮ್ಕಿ ಹಾಕಿದ ಪ್ರಕರಣದಲ್ಲಿ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಮಹಿಳಾ ಆಯೋಗದ ಡಾ.ನಾಗಲಕ್ಷ್ಮೀ ಚೌಧರಿ ಅವರು ಚಿಕ್ಕಬಳ್ಳಾಪುರ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಘಟನೆಯ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಂಡು ವರದಿ ನೀಡಲು ಸೂಚನೆ ನೀಡಲಾಗಿದೆ. ಶಿಡ್ಲಘಟ್ಟ ನಗರಸಭೆ ಆಯುಕ್ತರಿಗೆ ಬೆದರಿಕೆ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೊಲೀಸರಿಗೆ ದೂರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬ್ಯಾನರ್ ತೆರವುಗೊಳಿಸೋ ವಿಚಾರಕ್ಕಾಗಿ ಕಾಂಗ್ರೆಸ್ ಮುಖಂಡರೊಬ್ಬರು ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ್ದರು. ಈ ಆಡಿಯೋ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಕೈ ಮುಖಂಡ ಬೆದರಿಕೆ ವಿಚಾರವಾಗಿ ರಾಜೀವ್ ಗೌಡ ವಿರುದ್ಧ ನಗರಸಭೆ ಆಯುಕ್ತೆ ಅಮೃತಾಗೌಡ ಅವರು…
ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಜಮೀನಿನಲ್ಲಿ ಬೆಳೆದಿದ್ದಂತ ಕಾಡು ಜಾತಿಯ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಲಾಗಿತ್ತು. ಈ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ ಸಾಗರದ ಉಳ್ಳೂರಲ್ಲಿ ‘ಮರಗಳ ಮಾರಣಹೋಮ’: ಕಣ್ಣುಚ್ಚಿ ಕುಳಿತ ‘ಅರಣ್ಯ ಇಲಾಖೆ’ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಬೆನ್ನಲ್ಲೇ ಅಕ್ರಮವಾಗಿ ಕಡಿದ ಮರಗಳನ್ನು ಜಪ್ತಿ ಮಾಡಿದ್ದಲ್ಲದೇ, ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಈ ಕುರಿತಂತೆ ಅರಣ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಿನ ಸರ್ವೆ ನಂಬರ್.25ರಲ್ಲಿ ಖಾಸಗಿ ಜಮೀನಿನಲ್ಲಿ ಇದ್ದಂತ ಮರಗಳನ್ನು ಅಕ್ರಮವಾಗಿ ರಿಯಾಜ್ ಅಹ್ಮದ್ ಹಾಗೂ ಖಲೀಮುಲ್ಲಾ ಎಂಬುವರು ಕಡಿತಲೆ ಮಾಡಿದ್ದರು. ಜೆಸಿಬಿ ಬಳಸಿ ಕಡಿತಲೆ ಮಾಡಿದಂತ ಮರಗಳ ಬುಡಗಳನ್ನು ಕಿತ್ತು ಹಾಕಿದ್ದರು. ಕಡಿತಲೆ ಮಾಡಿದ್ದಂತ 20 ಮೀಟರ್ ನಷ್ಟು ನಾಟವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಇಬ್ಬರ ವಿರುದ್ಧ ಕೆಟಿಪಿಪಿ ಕಾಯ್ದೆ 1976ರ 8, 15, 22 ಹಾಗೂ ಕೆಎಫ್ ಸಿಯ 1963 ಸೆಕ್ಷನ್ 62ರಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ…
ಬೆಂಗಳೂರು: ಅಕ್ರಮವಾಗಿ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಅನ್ನು ತೆರವುಗೊಳಿಸಿದ್ದ ಶಿಡ್ಲಘಟ್ಟದ ಪೌರ ಆಯುಕ್ತಕಾರಾದ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅವಾಚ್ಯವಾಗಿ ನಿಂದಿಸಿದ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಘಟನೆ ಬಗ್ಗೆ ಬುಧವಾರ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರ ಆಗುತ್ತಿದ್ದಂತೆಯೇ ಮುಖ್ಯ ಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿದ ಕೇಂದ್ರ ಸಚಿವರು; ಮಹಿಳಾ ಅಧಿಕಾರ ಒಬ್ಬರನ್ನು ನಿಂದಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾವು ಒಬ್ಬ ಮಹಿಳಾ ಅಧಿಕಾರಿ ಆಗಿದ್ದು, ಉನ್ನತ ಸ್ಥಾನ ಅಲಂಕರಿಸುವ ತಮ್ಮ ಅಧೀನದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿ, ಅಸಹ್ಯ ಪದಗಳನ್ನು ಬಳಸಿ ನಿಂದಿಸಿರುವ ಪ್ರಕರಣ ಖಂಡನೀಯ. ಈ ಸರಕಾರದಲ್ಲಿ ಕಾನೂನುಬದ್ಧವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ರಕ್ಷಣೆ ಇಲ್ಲವೇ ಎಂದು ಸಚಿವರು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರಶ್ನಿಸಿದರು. “ಒಬ್ಬ ಮಹಿಳಾ ಅಧಿಕಾರಿಗೆ ಈ…
ಶಬರಿಮಲೆ: ಮಕರ ಸಂಕ್ರಾಂತಿಯ ದಿನದಂದು ಪ್ರತಿ ವರ್ಷದಂತೆ ಈ ವರ್ಷವೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನವಾಯಿತು. ಜ್ಯೋತಿಯನ್ನು ಕಂಡಂತ ಅಯ್ಯಪ್ಪ ಭಕ್ತಗಣವು ಭಾವ ಪರವಶತೆಯಲ್ಲಿ ಮುಳುಗಿದರು. ಸಂಜೆ ಸುಮಾರು 6.30ರಿಂದ 6.45ರ ನಡುವೆ ಗೋಚರಿಸಿದಂತ ಮಕರ ಜ್ಯೋತಿಯನ್ನು ಕಂಡಂತ ಅಯ್ಯಪ್ಪ ಸ್ವಾಮಿ ಭಕ್ತರು ಭಕ್ತಿ ಭಾವದಲ್ಲಿ ಮಿಂದೆದ್ದರು. ಶಬರಿ ಮಲೆ ಬೆಟ್ಟದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷ ನಡೆಯುವ ವಿಶೇಷ ಪೂಜೆಗೆ ಶಬರಿಮಲೆ ಮಕರವಿಳಕ್ಕು ಎನ್ನುವ ಹೆಸರಿನಿಂದ ಕರೆಯಲಾಗುತ್ತದೆ. ಮಕರ ಸಂಕ್ರಮಣದ ಕಾಲದಲ್ಲಿಯೇ ಶಬರಿಮಲೆ ಮಕರ ವಿಳಕ್ಕು ಪೂಜೆಗಳು ನಡೆಯುವುದರಿಂದ ಇದರಿಂದ ಮಕರ ಜ್ಯೋತಿ ಎಂಬ ಹೆಸರಿನಿಂದಲೂ ಗುರುತಿಸಲಾಗುತ್ತದೆ. ಮಕರ ಜ್ಯೋತಿಯ ಐತಿಹಾಸಿಕ ಹಿನ್ನಲೆ ಶಬರಿಮಲೆಯ ಪ್ರಮುಖ ಕಾರ್ಯಕ್ರಮವೆಂದರೆ ಮಕರ ಜ್ಯೋತಿ ದರ್ಶನವಾಗಿದೆ. ಜ.14ರ ಇಂದು ಮಕರ ಜ್ಯೋತಿ ದರ್ಶನವಾಗಿದೆ. ತಿರುವಾಭರಣಂ ಅಥವಾ ಭಗವಂತನ ಪವಿತ್ರ ಆಭರಣಗಳು (ಪಂದಳಂ ರಾಜನು ಪ್ರಸ್ತುತಪಡಿಸಿದ) ಮೂರು ಪೆಟ್ಟಿಗೆಗಳಲ್ಲಿ ಶಬರಿಮಲೆಗೆ ಆಗಮಿಸುತ್ತವೆ. ಆಭರಣ ಪೆಟ್ಟಿಗೆಗಳ ಆಗಮನದ ನಂತರ ಇಡೀ ಪರ್ವತವು ಈ ಕಾರ್ಯಕ್ರಮವನ್ನು ವೀಕ್ಷಿಸಲು ಅಲ್ಲಿ ನೆರೆದಿದ್ದ…














