Author: kannadanewsnow09

ತುಮಕೂರು: ರಸ್ತೆ ನಿರ್ಮಾಣಕ್ಕಾಗಿ ಸ್ಥಳ ಮಹಜರು ಹಾಗೂ ಪರಿಶೀಲನೆಗೆ ಬರಲು ಕೆಲ ಅಧಿಕಾರಿಗಳು ರೈತನೊಬ್ಬನಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆದರೇ ರೈತ ಮಾತ್ರ ಲಂಚ ಕೇಳಿದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದು ಮಾತ್ರ ವಿನೂತನ ರೀತಿಯಲ್ಲಿ ಪ್ರತಿಭಟಿಸುವ ಮೂಲಕವಾಗಿದೆ. ಅದು ಹೇಗೆ ಅಂತ ಮುಂದೆ ಓದಿ.. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಜಕ್ಕೇನಹಳ್ಳಿಯ ಗ್ರಾಮದ ರೈತ ಪ್ರಸನ್ನ ಕುಮಾರ್ ಅವರೇ ಈ ರೀತಿಯ ಪ್ರತಿಭಟಿಸಿ ಲಂಚ ಕೇಳಿದ ಅಧಿಕಾರಿಗಳಿಗೆ ಶಾಕ್ ಕೊಟ್ಟವರು. ತಮ್ಮ ಜಮೀನಿಗೆ ರಸ್ತೆ ಇಲ್ಲ. ರಸ್ತೆ ಬಿಡಿಸಿಕೊಡಿ ಎಂಬುದಾಗಿ ಮಧುಗಿರಿ ತಾಲ್ಲೂಕು ಆಡಳಿತಕ್ಕೆ ಮನವಿ ಮಾಡಿದ್ದರು. ಆದರೇ ರೈತ ಪ್ರಸನ್ನ ಕುಮಾರ್ ಮನವಿಗೆ ಅಧಿಕಾರಿಗಳು ಕಿವಿಗೊಟ್ಟಿರಲಿಲ್ಲ. ಹೀಗಾಗಿ ಲೋಕಾಯುಕ್ತ ನ್ಯಾಯಾಲಯ ಮೊರೆಯನ್ನು ಹೋಗಿದ್ದರು. ಆಗ ಲೋಕಾಯುಕ್ತ ನ್ಯಾಯಾಲಯವು ರೈತ ಪ್ರಸನ್ನ ಕುಮಾರ್ ಅವರಿಗೆ ಒಂದು ತಿಂಗಳಿನಲ್ಲಿ ರಸ್ತೆ ನಿರ್ಮಿಸಿಕೊಡುವಂತೆ ಸೂಚಿಸಿತ್ತು. ಲೋಕಾಯುಕ್ತ ಕೋರ್ಟ್ ಆದೇಶದಂತೆ ರಸ್ತೆ ನಿರ್ಮಿಸಿಕೊಡಬೇಕಾಗಿದ್ದಂತ ಅಧಿಕಾರಿಗಳು ಮಾತ್ರ ಆ ಕೆಲಸಕ್ಕೆ ಅಣಿಯಾಗಿರಲಿಲ್ಲ. ಬದಲಾಗಿ ರಸ್ತೆ ನಿರ್ಮಾಣಕ್ಕಾಗಿ…

Read More

ಕೇಂದ್ರ ಲೋಕಸೇವಾ ಆಯೋಗ (UPSC) ನಾಗರಿಕ ಸೇವಾ ಪರೀಕ್ಷೆ (CSE) 2026 ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 933 ಹುದ್ದೆಗಳ ನೇಮಕಾತಿಯನ್ನು ಪ್ರಕಟಿಸಲಾಗಿದೆ. ಆಡಳಿತಾತ್ಮಕ ಹುದ್ದೆಗಳನ್ನು (IAS, IPS, IFS, ಇತ್ಯಾದಿ) ಬಯಸುವ ಅಭ್ಯರ್ಥಿಗಳು ಫೆಬ್ರವರಿ 4 ರಿಂದ 24, 2026 ರವರೆಗೆ ಸಂಜೆ 6:00 ಗಂಟೆಯವರೆಗೆ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. UPSC ಯ CSE 2026 ಗೆ ಅರ್ಜಿ ಸಲ್ಲಿಸುವ ಮೊದಲು, ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಸುವ ನಿರ್ಬಂಧಗಳು, ಅರ್ಜಿ ಶುಲ್ಕ ಮತ್ತು ಇತರ ವಿವರಗಳನ್ನು upsc.gov.in ನಲ್ಲಿ ಎಚ್ಚರಿಕೆಯಿಂದ ಓದಲು ಸೂಚಿಸಲಾಗಿದೆ. UPSC CSE 2026 ತಾತ್ಕಾಲಿಕ ಹುದ್ದೆಗಳ ವಿವರ ಪರೀಕ್ಷೆಯ ಮೂಲಕ ಭರ್ತಿ ಮಾಡಬೇಕಾದ ಹುದ್ದೆಗಳ ಸಂಖ್ಯೆ ಸರಿಸುಮಾರು 933 ಎಂದು ನಿರೀಕ್ಷಿಸಲಾಗಿದೆ, ಇದರಲ್ಲಿ 33 ಹುದ್ದೆಗಳು ಮಾನದಂಡ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೀಸಲಾಗಿವೆ; 7 ಹುದ್ದೆಗಳು (ಎ) ಕುರುಡುತನ ಮತ್ತು ಕಡಿಮೆ ದೃಷ್ಟಿ ಹೊಂದಿರುವ ಅಭ್ಯರ್ಥಿಗಳಿಗೆ; 11 ಹುದ್ದೆಗಳು…

Read More

ಬೆಂಗಳೂರು: “ಲ್ಯಾಂಡ್ ಲಾರ್ಡ್ ಶೀರ್ಷಿಕೆಯ ಕನ್ನಡ ಚಲನಚಿತ್ರ ಮೇಲಿನ ರಾಜ್ಯ ಸರಕು ಮತ್ತು ಸೇವಾ ತೆರಿಗೆ (ಎಸ್‌ಜಿಎಸ್‌ಟಿ) ಮೊತ್ತವನ್ನು ಪ್ರದರ್ಶಕರಿಗೆ ಹಿಂಪಾವತಿ ಮಾಡುವ ಮೂಲಕ ಸದರಿ ಚಲನಚಿತ್ರ ವೀಕ್ಷಕರಿಗೆ ವಿನಾಯಿತಿ ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದ್ದು, ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) (ಅಂಬೇಡ್ಕರ್ ವಾದ), ರಾಜ್ಯ ಸಮಿತಿ, ಪ್ರಧಾನ ಕಛೇರಿ, #72, ಕಾರ್ಪೋರೇಷನ್ ಕಟ್ಟಡ, ಕ್ವಿನ್ಸ್ ರಸ್ತೆ, ಬೆಂಗಳೂರು- 560001, ಇವರು ದಿನಾಂಕ: 02-02-2026 ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಕರ್ನಾಟಕ ರಾಜ್ಯದಲ್ಲಿ ಪ್ರದರ್ಶನಗೊಳ್ಳಲಿರುವ “ಲ್ಯಾಂಡ್ ಲಾರ್ಡ್” ಕನ್ನಡ ಚಲನಚಿತ್ರಕ್ಕೆ ಶೇಕಡ 100ರಷ್ಟು ತೆರಿಗೆ ವಿನಾಯಿತಿ ಕಲ್ಪಿಸುವಂತೆ ಮನವಿ ಮಾಡಿರುತ್ತಾರೆ ಎಂದಿದೆ. ಸದರಿ ಮನವಿ ಪತ್ರದಲ್ಲಿ ಜಮೀನ್ದಾರಿ ವ್ಯವಸ್ಥೆಯ ಅವಶೇಷಗಳು, ಭೂಮಿಯಿಲ್ಲದ ಕಾರ್ಮಿಕರ ದೀರ್ಘಕಾಲದ ಹೋರಾಟ, ದಲಿತ-ಅಂಚಿನ ಸಮುದಾಯಗಳ ಬದುಕಿನ ಸಂಕಷ್ಟಗಳು ಮತ್ತು ಸಂವಿಧಾನವು ಪ್ರತಿಪಾದಿಸುವ ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ…

Read More

ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ” ಪ್ರಶಸ್ತಿಯನ್ನು ಗೀತರಚನಕಾರ, ಸಂಗೀತ ನಿರ್ದೇಶಕ ಡಾ.ಹಂಸಲೇಖಗೆ ರಾಜ್ಯ ಸರ್ಕಾರ ನೀಡಿದೆ.  ಈ ಕುರಿತು ರಾಜ್ಯ ಸರ್ಕಾರ 2025-26ನೇ ಸಾಲಿನಲ್ಲಿ ಆಯೋಜಿಸಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದ್ದ ಮೇರೆಗೆ ಈ ಆಯ್ಕೆ ಸಮಿತಿಯು ದಿನಾಂಕ:04/02/2026ರಂದು ಸಭೆ ಸೇರಿ ರಾಜ್ಯದ ಕನ್ನಡ ಚಲನಚಿತ್ರ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಅವಿರೋಧವಾಗಿ ಆಯ್ಕೆ ಮಾಡಿರುವ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು ಲಗತ್ತಿಸುತ್ತಾ, ಈ ಪೈಕಿ ಒಬ್ಬರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಿ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಏಕಕಡತದಲ್ಲಿ ರಿಜಿಸ್ಟ್ರಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು ಇವರು ಕೋರಿರುತ್ತಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ರಾಜ್ಯದ ಕನ್ನಡ…

Read More

ಬೆಂಗಳೂರು: ಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಇಡೀ ಪ್ರಪಂಚದಲ್ಲಿಯೇ ಭಾರತ ದೇಶ ಶ್ರೀಮಂತವಾದದ್ದು ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಗೋಪಾಲಗೌಡ ಅವರು ಹೇಳಿದ್ದಾರೆ. ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಏರ್ಪಡಿಸಿದ್ದ ವಕೀಲ ಆರ್.ಮಹೇಶ್ ಮತ್ತು ಆಶಾ ದಂಪತಿಗಳ ಸುಪುತ್ರಿ ಶ್ರೇಯಾ ಮಹೇಶ್ ಅವರ ರಂಗ ಪ್ರವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಲವು ವಿಭಾಗದಲ್ಲಿ ದೇಶದ ಶ್ರೀಮಂತಿಕೆ ಇಲ್ಲದೆ ಇರಬಹುದು. ಆದರೆ,ಕೆಲೆ ಮತ್ತು ಸಂಸ್ಕೃತಿಕತೆಯಲ್ಲಿ ನಮ್ಮ ದೇಶ ಎಂದೂ ಹಿಂದೆ ಬಿದ್ದಿಲ್ಲ. ಇದು ನಮ್ಮ ಹೆಗ್ಗಳಿಕೆ ಎಂದರು. ಭರತ ನಾಟ್ಯ ಎನ್ನುವುದು ನಮ್ಮ ನೆಲದಲ್ಲಿಯೇ ಬೆಳೆದು ಅರಳಿದ ಕಲೆ. ಕು.ಶ್ರೇಯ ಅವರು ಅಮೋಘವಾಗಿ ನಾಟ್ಯ ಪ್ರದರ್ಶನ ಮಾಡಿದ್ದಾರೆ. ಒತ್ತಡ, ದುಗುಡವನ್ನು ಹೊರತಾದ ಪರಿಸಥಿತಿಯಲ್ಲಿ ಮನಸ್ಸಿಗೆ ಇಂಪಾದ ವಾತಾವರಣವನ್ನು ಕಲಾ ಪ್ರದರ್ಶನ ನೀಡುತ್ತದೆ ಎಂದರು. ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತೆ ಕು.ಶ್ರೇಯ ಅವರನ್ನು ಹಲವು ಸಂಘ ಸಂಸ್ಥೆಗಳು ಸನ್ಮಾನಿಸಿದವು. ಕಾರ್ಯಕ್ರಮದಲ್ಲ ಹೆಚ್ಚುವರಿ ಅಡ್ವಕೇಟ್ ಕಿರಣ್ ವಿ ರಾವ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ, ಯೋಗಮಿತ್ರ…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ವತಿಯಿಂದ ಇತ್ತೀಚೆಗೆ ನಮ್ಮನ್ನು ಅಗಲಿರುವ ಸುದ್ದಿಮನೆಯ ಹಿರಿಯ ಪತ್ರಕರ್ತರುಗಳಿಗೆ ಫೆ.6 ರಂದು ಬೆಳಿಗ್ಗೆ 11.30 ಕ್ಕೆ ಕೆಯುಡಬ್ಲೂಜೆ ಸಭಾಂಗಣ, 3ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು -09. ಇಲ್ಲಿ ಶ್ರದ್ದಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ. ಹಿರಿಯ ಪತ್ರಕರ್ತರುಗಳಾದ ಕೋಲಾರದ ಹೊನ್ನುಡಿ ಎಂ.ಜಿ.ಪ್ರಭಾಕರ, ಬೀದರ ನಾಗಶೆಟ್ಟಿ ಧರಂಪುರ, ಬೆಂಗಳೂರು ಸಂಜೆವಾಣಿ ದೊಡ್ಡಬೊಮ್ಮಯ್ಯ, ಹುಬ್ಬಳ್ಳಿಯ ಸಂಯುಕ್ತ ಕರ್ನಾಟಕ ಭೀಮಸೇನ ಪದಕಿ, ಬೆಳಗಾವಿ ಎಂ.ಎನ್.ಪಾಟೀಲ, ಸಕಲೇಶಪುರದ ಶಿವಕುಮಾರ್, ಕಲಬುರ್ಗಿ ವಿಜಯಕರ್ನಾಟಕ ಪ್ರಭುಲಿಂಗ ನೀಲೂರೆ, ಮೈಸೂರಿನ ಸೂರಜ್, ರಾಯಚೂರಿನ ನಹೀಮ್ ಅಶ್ರಫ್ ಅವರುಗಳಿಗೆ ಸಂತಾಪ ಸೂಚಕ ಸಭೆಯಲ್ಲಿ ನುಡಿನಮನ ಸಲ್ಲಿಸಲಾಗುವುದು. ಸಭೆಯಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್. ಪ್ರೆಸ್ ಕ್ಲಬ್ ಆಪ ಬೆಂಗಳೂರು ಅಧ್ಯಕ್ಷ ಆರ್.ಶ್ರೀಧರ್, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ಭಾಗವಹಿಸುವರು. ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸುವರು ಎಂದು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಾರ್ವಾಡಿಗಳು ಈ ಲಕ್ಷ್ಮೀ ಕುಬೇರ ಪೂಜೆಯನ್ನು ಬಹಳ ವಿಮರ್ಶಾತ್ಮಕವಾಗಿ ನೆರವೇರಿಸುತ್ತಾರೆ. ನಮ್ಮ ಮನೆಯಲ್ಲಿ ಲಕ್ಷ್ಮೀ ಕುಬೇರ ಪೂಜೆಯನ್ನು ಅತ್ಯಂತ ವಿಮರ್ಶಾತ್ಮಕವಾಗಿ ಮಾಡುವುದಾಗಲಿ ಅಥವಾ ಕುಬೇರನನ್ನು ಅತ್ಯಂತ ಸರಳವಾಗಿ ಪೂಜಿಸುವುದಾಗಲಿ ಅದರೊಂದಿಗೆ ಈ ಮಂತ್ರವನ್ನು ಪಠಿಸಬೇಕು. ಈ ಕುಬೇರ ಪೂಜೆಯನ್ನು ಯಂತ್ರವನ್ನು ಇಟ್ಟುಕೊಂಡು, ಪೆಟ್ಟಿಗೆಯನ್ನು ಇಟ್ಟು, ಮಂತ್ರಗಳನ್ನು ಪಠಿಸುವ ಮೂಲಕ ಬಹಳ ವಿಮರ್ಶಾತ್ಮಕವಾಗಿ ನಡೆಸಲಾಗುತ್ತದೆ. ಅಷ್ಟರ ಮಟ್ಟಿಗೆ ಈ ಪೂಜೆ ಮಾಡಬಹುದೋ ಗೊತ್ತಿಲ್ಲ. ಆದರೆ ಮಂಗಳವಾರ ಮತ್ತು ಶುಕ್ರವಾರ ಸಂಜೆ ನಮ್ಮ ಮನೆಯಲ್ಲಿ ಈ ಪೂಜೆಯನ್ನು ಮಾಡಬಹುದಷ್ಟೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ…

Read More

ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಿಂದ 1 ವರ್ಷದಲ್ಲಿ 36474 ಮೇಲ್ಮನವಿಗಳ ವಿಲೇವಾರಿ ಮಾಡಲಾಗಿದೆ. ಮಾಹಿತಿ ನೀಡದ  245 ಅಧಿಕಾರಿಗಳಿಗೆ 45.29 ಲಕ್ಷ ದಂಡಾಸ್ತ್ರವನ್ನು ಪ್ರಯೋಗಿಸಲಾಗಿದೆ. ಈ ಕುರಿತು ಕರ್ನಾಟಕ ಮಾಹಿತಿ ಆಯೋಗ ಪತ್ರಿಕಾ ಪ್ರಕಟಣೆಯಲ್ಲು ಮಾಹಿತಿ ಬಿಡುಗಡೆ ಮಾಡಿದ್ದು, ಮಾಹಿತಿ ಆಯೋಗವು ಇಡೀ ದೇಶದಲ್ಲಿಯೇ ಅತ್ಯಂತ ವೇಗವಾಗಿ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ವಿಲೇವಾರಿ ಮಾಡುತ್ತಿದ್ದು, ಕಳೆದ ಒಂದು ವರ್ಷದ ಅವಧಿಯಲ್ಲಿ ಮಾಹಿತಿ ನೀಡದ ಅಧಿಕಾರಿಗಳಿಗೆ ದಂಡ, ಶಿಸ್ತುಕ್ರಮಕ್ಕೆ ಶಿಫಾರಸುಗಳ ಜತೆಗೆ 36474 ಮೇಲ್ಮನವಿಗಳನ್ನು ವಿಲೇವಾರಿ ಮಾಡಿದೆ ಎಂದಿದೆ. ಕರ್ನಾಟಕ ಮಾಹಿತಿ ಆಯೋಗಕ್ಕೆ 2005ರ ಫೆಬ್ರವರಿ 4 ರಂದು ಎಂಟು ಜನ ಮಾಹಿತಿ ಆಯುಕ್ತರನ್ನು ನೇಮಕ ಮಾಡಿತ್ತು. ಡಿಸೆಂಬರ್‌ನಲ್ಲಿ ಮೂರು ಜನ ಮಾಹಿತಿ ಆಯುಕ್ತರ ನೇಮಕವಾಗಿದೆ. 2023 ರಿಂದ 2025ರ ಫೆಬ್ರವರಿ ತನಕ ಕೇವಲ ಮೂರು ಜನ ಮಾತ್ರ ಆಯುಕ್ತರು ಕಾರ್ಯ ನಿರ್ವಹಿಸುತ್ತಿದ್ದರು. ಆದ್ದರಿಂದ ಅರ್ಜಿಗಳ ವಿಲೇವಾರಿ ಕುಂಠಿತವಾಗಿತ್ತು. ಆದರೆ ಒಂದು ವರ್ಷದ ಅವಧಿಯಲ್ಲಿ ದ್ವಿತೀಯ ಮೇಲ್ಮನವಿ ಅರ್ಜಿಗಳ ವಿಲೇವಾರಿಗೆ ವೇಗ ಸಿಕ್ಕಿದೆ.…

Read More

ಶಿವಮೊಗ್ಗ: 2026ನೇ ಸಾಲಿನ ರಾಜ್ಯ ಮಟ್ಟ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ‌. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರಾದ ಆರ್.ಮೋಹನ್ ಕುಮಾರ್‌ರವರು ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, 2026ನೇ ಸಾಲಿನ ರಾಜ್ಯ ಮಟ್ಟದ ಹಾಗೂ ಶಿವಮೊಗ್ಗ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅರ್ಹ ಅಧಿಕಾರಿ-ನೌಕರರು ತಮ್ಮ ನಾಮನಿರ್ದೇಶನಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ ಎಂದಿದ್ದಾರೆ. ರಾಜ್ಯ ಮಟ್ಟಕ್ಕೆ 30 ಪ್ರಶಸ್ತಿ ಹಾಗೂ ಶಿವಮೊಗ್ಗ ಜಿಲ್ಲೆಗೆ 10 ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ರಾಜ್ಯ ಮಟ್ಟದ ಪ್ರಶಸ್ತಿ ತಲಾ 50 ಸಾವಿರ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ತಲಾ 20 ಸಾವಿರ ನಗದು ಬಹುಮಾನ ಒಳಗೊಂಡಿರಲಿದೆ. ಜಿಲ್ಲಾ ಮತ್ತು ರಾಜ್ಯ ಮಟ್ಟದ ಎರಡೂ ಹಂತದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಧಿಕಾರಿ-ನೌಕರರು ಪ್ರತ್ಯೇಕ ನಾಮನಿರ್ದೇಶನ ಸಲ್ಲಿಸುವ ನೌಕರರು ಕನಿಷ್ಠ 03 ವರ್ಷಗಳ…

Read More

ಬೆಂಗಳೂರು : 220/66/11 kV ಹೆಬ್ಬಾಳ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 07.02.2026 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 18:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್.ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ,…

Read More