Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ :- ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಅಸ್ಪೃಶ್ಯತೆ ಆಚರಣೆಯಂತಹ ಅನಿಷ್ಠ ಪದ್ಧತಿ ಮಾತ್ರ ತೊಲಗಿಲ್ಲ. ಮದ್ದೂರು ತಾಲೂಕಿನ ಹುಲಿಕೆರೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಪರಿಶಿಷ್ಟ ಜಾತಿಯವರು ಎಂಬ ಕಾರಣಕ್ಕೆ ದೇಗುಲದ ಅರ್ಚಕರೊಬ್ಬರು ಪ್ರವೇಶ ನಿರಾಕರಿಸಿದ್ದಾರೆ ಎಂದು ಅರೋಪಿಸಿ ಗ್ರಾಮದ ಸತೀಶ್ ಕುಮಾರ್ ಎಂಬುವರು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ. ಮಾರ್ಚ್ 10 ರಂದು ಸತೀಶ್ ಕುಮಾರ್, ಪತ್ನಿ ಶ್ವೇತ, ಮಕ್ಕಳಾದ ಯಶಿಕಾ, ಗೋಕುಲ್ ಕುಟುಂಬ ಸಮೇತ ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಕೊಡಿ ಎಂದು ಅರ್ಚಕ ಯಶ್ವಂತ್ ಅವರನ್ನು ಕೇಳಿದ್ದಾರೆ. ಈ ವೇಳೆ ಅರ್ಚಕ ಯಶ್ವಂತ್ ನೀವು ಪರಿಶಿಷ್ಟ ಜಾತಿಯವರು ಎಂದು ಕೀಳಾಗಿ ಕಂಡು ನಾನು ಸ್ನಾನ ಮಾಡಿ ಬರುವುದಾಗಿ ಸುಳ್ಳು ಹೇಳಿ ಹೋದವರು ವಾಪಾಸ್ ದೇಗುಲಕ್ಕೆ ಬರಲಿಲ್ಲ. ಇದರಿಂದ ಕಾದು ಕಾದು ಸುಸ್ತಾಗಿ ಮನನೊಂದು ನಾನು ಮತ್ತು ಕುಟುಂಬ ಸದಸ್ಯರು ಮನೆಗೆ ವಾಪಸ್ ಬಂದೆವು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಗ್ರಾಮದಲ್ಲಿ ಸುಮಾರು 56 ಪರಿಶಿಷ್ಟ ಜಾತಿ ಕುಟುಂಬಗಳಿದ್ದು,…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬೈರತಿ ಬಸವರಾಜ್ ಅವರು ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದ ಅವರಿಗೆ ನಿನ್ನೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. ನ್ಯಾಯಾಲಯದ ಬಿಡುಗಡೆ ಆದೇಶದ ಪ್ರತಿಯನ್ನು ಅಧಿಕಾರಿಗಳು ಪರಿಶೀಲಿಸಿದ ನಂತರ ಇಂದು ಜೈಲಿನಿಂದ ಹೊರಬಂದ ಬೈರತಿ ಬಸವರಾಜ್ ಅವರನ್ನು ಸ್ವಾಗತಿಸಲು ಜೈಲಿನ ಗೇಟ್ ಬಳಿ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರು ಮತ್ತು ಕಾರ್ಯಕರ್ತರು ಜಮಾಯಿಸಿದ್ದರು. ಶಾಸಕರು ಜೈಲಿನಿಂದ ಹೊರಬರುತ್ತಿದ್ದಂತೆ ಕಾರ್ಯಕರ್ತರು ಘೋಷಣೆಗಳನ್ನು ಕೂಗುವ ಮೂಲಕ ಹರ್ಷ ವ್ಯಕ್ತಪಡಿಸಿದರು. ಬಿಡುಗಡೆಯಾದ ಬಳಿಕ ಮಾಧ್ಯಮಗಳೊಂದಿಗೆ ಯಾವುದೇ ಪ್ರತಿಕ್ರಿಯೆ ನೀಡದ ಶಾಸಕರು, ಬೆಂಬಲಿಗರ ಸಮ್ಮುಖದಲ್ಲಿ ನೇರವಾಗಿ ತಮ್ಮ ಕಾರಿನಲ್ಲಿ ಸ್ಥಳದಿಂದ ನಿರ್ಗಮಿಸಿದರು. https://kannadanewsnow.com/kannada/sslc-exam-1-begins-from-march-18-prohibitory-orders-imposed-around-exam-centers-in-bengaluru/ https://kannadanewsnow.com/kannada/investors-lose-rs-5-87-trillion-in-a-day-as-markets-tumble-heres-why/
ಬೆಂಗಳೂರು: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಮಾರ್ಚ್.18ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 18-03-2026 ರಿಂದ 02-04-2026 ರವರೆಗೆ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು ಬೆಂಗಳೂರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸುವಂತೆ ಹಾಗೂ ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್ / ಸೈಬರ್/ ಕಂಪ್ಯೂಟರ್ ಸೆಂಟರ್ಗಳನ್ನು ಮುಚ್ಚುವಂತೆ ಕೋರಲಾಗಿರುತ್ತದೆ ಎಂದಿದ್ದಾರೆ. ಈ ವಿಷಯದ ಬಗ್ಗೆ ನಾನು ಖುದ್ದಾಗಿ ಮಾಡಿದ ವಿಚಾರಣೆಯಿಂದ ಮತ್ತು ಗುಪ್ತವಾರ್ತಾ ವರದಿಯಿಂದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1 ಅನ್ನು…
ನವದೆಹಲಿ: ಗ್ರಾಮೀಣ ಭಾಗದ ಜನರ ಜೀವನೋಪಾಯವನ್ನು ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ‘ವಿಕಸಿತ ಭಾರತ – ಜಿ ರಾಮ್ ಜಿ’ (VB – G RAM G) ಕಾಯ್ದೆ 2025 ಅನ್ನು ಜಾರಿಗೆ ತಂದಿದೆ. ಈ ಹೊಸ ಯೋಜನೆಯು ಗ್ರಾಮೀಣ ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಅಡಿಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವ ಗುರಿ ಹೊಂದಿದೆ. ಯೋಜನೆಯ ಪ್ರಮುಖ ಮುಖ್ಯಾಂಶಗಳು: 125 ದಿನಗಳ ಉದ್ಯೋಗ ಖಾತರಿ: ಈ ಮೊದಲು ಇದ್ದ ಉದ್ಯೋಗ ಖಾತರಿ ದಿನಗಳನ್ನು ಹೆಚ್ಚಿಸಲಾಗಿದ್ದು, ಈಗ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 125 ದಿನಗಳ ಕಾಲ ಖಾತರಿಪಡಿಸಿದ ವೇತನ ಸಹಿತ ಉದ್ಯೋಗವನ್ನು ನೀಡಲಾಗುತ್ತದೆ. ನಿರುದ್ಯೋಗ ಭತ್ಯೆ: ಅರ್ಹ ಫಲಾನುಭವಿಗಳಿಗೆ ಉದ್ಯೋಗ ಒದಗಿಸಲು ವಿಳಂಬವಾದರೆ, ಅವರಿಗೆ ಬಲವರ್ಧಿತ ‘ನಿರುದ್ಯೋಗ ಭತ್ಯೆ’ ನೀಡುವ ವಿಶೇಷ ಅವಕಾಶವನ್ನು ಈ ಕಾಯ್ದೆಯಲ್ಲಿ ಕಲ್ಪಿಸಲಾಗಿದೆ. ಸಕಾಲಕ್ಕೆ ವೇತನ ಪಾವತಿ: ಕೆಲಸ ಮಾಡಿದ ನಂತರ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ವಹಿಸಲಾಗುವುದು. ಒಂದು ವೇಳೆ ಪಾವತಿ ವಿಳಂಬವಾದರೆ ಅದಕ್ಕೆ ತಕ್ಕಂತೆ ‘ವಿಳಂಬ…
ಬೆಂಗಳೂರು : ವಿಧಾನಸೌಧದ ಎದುರಿಗಿರೋ ಗಾರ್ಡನ್ ನಲ್ಲಿ ಇವತ್ತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಪತ್ರಕರ್ತರ ಜೊತೆ ವಿಧಾನಸೌಧದ ಗಾರ್ಡನ್ ನಲ್ಲಿ ಊಟ ಸವಿಯುತ್ತ, ಉಭಯ ಕುಶಲೋಪರಿ ವಿಚಾರಿಸುತ್ತ ಕೆಲ ಹೊತ್ತು ಕಳೆದರು. ಸಚಿವರದು ಸಂತೋಷದ ಸರಳತೆ ಸಚಿವ ಲಾಡ್ ಅವರು ಸದಾ ಸರಳತೆಗೆ ಆದ್ಯತೆ ನೀಡುವುದು ಗಮನಿಸಬೇಕಾದ ಅಂಶ. ಅವರು ಕ್ಷೇತ್ರದಲ್ಲಾಗಲಿ, ಬೇರೆಡೆಯಾಗಲಿ ಪ್ರವಾಸ ಹೋದ ವೇಳೆ, ಕಾರ್ಯಕ್ರಮಕ್ಕೆ, ಸಭೆಗಳಿಗೆ ತೆರಳುವ ವೇಳೆ ತಾನೊಬ್ಬ ಸಚಿವ ಎಂಬ ಹಮ್ಮು ಬಿಮ್ಮಿಲ್ಲದೆ ಜನರೊಂದಿಗೆ ಬೆರೆಯುತ್ತಾರೆ, ಅವರ ಕಷ್ಟಗಳನ್ನು ಆಲಿಸುತ್ತಾರೆ, ಧನಸಹಾಯ ಮಾಡುತ್ತಾರೆ. ಸಚಿವ ಲಾಡ್ ಅವರು, ಊಟದ ವಿಷಯದಲ್ಲಂತೂ ಇನ್ನೂ ಸರಳತೆ ತೋರುತ್ತಾರೆ. ಜನಸಾಮಾನ್ಯರು ಎಲ್ಲೇ ಸಿಗಲಿ ಅವರ ಬುತ್ತಿಯನ್ನು ಹಂಚಿಕೊಳ್ಳುತ್ತಾರೆ, ಅವರೊಂದಿಗೆ ಉಪಾಹಾರ ಸೇವಿಸುತ್ತಾರೆ. ರಸ್ತೆ ಬದಿಯಲ್ಲಿ ಯಾರೇ ಸಿಗಲಿ ಅವರನ್ನು ಮಾತನಾಡಿಸಿ ಕಷ್ಟಗಳನ್ನು ಅರಿಯುತ್ತಾರೆ. ಚಹಾ ಅಂಗಡಿಯಲ್ಲಿ ತಾವೇ ಮುಂದೆ ನಿಂತು ಚಹಾ ತಯಾರಿಸುತ್ತಾರೆ. ಜೊತೆಯಲ್ಲಿದ್ದವರಿಗೆ ತಾವೇ ಊಟ ಬಡಿಸುತ್ತಾರೆ.…
ಶಿವಮೊಗ್ಗ : ಮಕ್ಕಳಲ್ಲಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯದ ಕುರಿತು ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಜೊತೆಗೆ ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯತ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಿಷನ್ ಸುರಕ್ಷಾ ಅಭಿಯಾನದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಕ್ಕಳಿಗಾಗಿ ಹಾಗೂ ಸಮಾಜಕ್ಕಾಗಿ ಮಾಡುತ್ತಿರುವ ಸೇವೆ ಎಂದು ತಿಳಿದು ನಿಯಮಿತವಾಗಿ ಈ ಕಾರ್ಯ ನಿರ್ವಹಣೆಯಲ್ಲಿ ತೊಡಗಬೇಕೆಂದರು. ಮಕ್ಕಳ ಜೀವನ ಅತ್ಯಮೂಲ್ಯವಾಗಿದ್ದು ಅವರನ್ನು ನಾವು ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಇತರೆ ಅಪರಾಧಗಳಿಂದ ರಕ್ಷಣೆ ಮಾಡಿ, ಕಡ್ಡಾಯವಾಗಿ ಶಾಲೆಗೆ ದಾಖಲಾಗುವಂತೆ ಮಾಡಬೇಕು. ಪೋಕ್ಸೊ ಪ್ರಕರಣ ಆಗದಂತೆ, ಮಾದಕ ವಸ್ತುಗಳಿಂದ ಮಕ್ಕಳನ್ನು ದೂರವಿರುವಂತೆ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು. ಮಗುವಿನ ಬೆಳವಣಿಗೆ ಹಾಗೂ ಶೈಕ್ಷಣಿಕ ಅವಕಾಶಗಳನ್ನು…
ಮೈಸೂರು : ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಭಾಗವಹಿಸಿ ಮಾತನಾಡಿದರು. ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ , ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು. 1978 ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17…
ಶ್ರೀ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರವನ್ನು ಶ್ರೀ ಗುರುಜಗನ್ನಾಥ ದಾಸರು ಸಾಮಾನ್ಯ ಜನರ ಮನೋವಾಂಚ್ಯಾರ್ಥಗಳೆಲ್ಲಾ ಪೂರ್ಣಗೊಳ್ಳಲಿ ಹಾಗೂ ಪ್ರತ್ಯೇಕವಾಗಿ ಸ್ತ್ರೀಯರಿಗೆ ಸಕಲ ಭಾಗ್ಯಗಳನ್ನು ಅನುಗ್ರಹಿಸುವ ಶ್ರೇಷ್ಠವಾದ ಸ್ತೋತ್ರವನ್ನು ಅರ್ಪಿಸಿದ್ದಾರೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಪ್ರತಿ ದಿನ ” ಶ್ರೀ ರಾಘವೇಂದ್ರಾಯ ನಮಃ ” ಎಂದು ೧೦೮(108) ಬಾರಿ ಯಾರು ಸ್ತುತಿಸುತ್ತಾರೋ ಅವರಿಗೆ ಸಕಲ ಅಭೀಷ್ಟಗಳು ಲಭಿಸುವುದು . ಗುರುರಾಜಾಷ್ಟಾಕ್ಷರಂ ಸ್ಯಾತ್ ಮಹಾಪಾತಕನಾಶನಂ । ಏಕೈಕಮಕ್ಷರಮ್ ಚಾತ್ರ ಸರ್ವಕಾಮ್ಯಾರ್ಥ ಸಿದ್ಧಿಮ್ ।।೧।। ಅರ್ಥ : ಶ್ರೀ ಮದ್ರಾಘವೇಂದ್ರತೀರ್ಥ ಗುರುಸಾರ್ವಭೌಮರ ‘ ಶ್ರೀ ರಾಘವೇಂದ್ರಾಯ ನಮಃ ‘ ಎಂಬ ಅಷ್ಟಾಕ್ಷರ ಮಂತ್ರವು ಮಹಾಪಾತಕಗಳನ್ನು ಕಳೆಯುವಂಥದಾಗಿದೆ. ಇದರಲ್ಲಿರುವ ಒಂದೊಂದು ಅಕ್ಷರವು ಸರ್ವಕಾಮ್ಯಾರ್ಥಗಳನ್ನು ಕೊಡುವಂಥದಾಗಿದೆ. ರಕಾರೋಚ್ಚಾರಣಮಾತ್ರೇಣ ರೋಗಹಾನಿರ್ನ ಸಂಶಯಃ ।…
ಬೆಂಗಳೂರು: ಮುಂಬರುವ ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕದ ವಿವಿಧ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರ ಹೀಗಿದೆ: 1. ರೈಲು ಸಂಖ್ಯೆ 06503/06504 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (1 ಟ್ರಿಪ್): ರೈಲು ಸಂಖ್ಯೆ 06503 ಮಾರ್ಚ್ 18ರಂದು ಸಂಜೆ 7ಕ್ಕೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 7.35ಕ್ಕೆ ಬೆಳಗಾವಿ ತಲುಪಲಿದೆ. ಹಾಗೆಯೇ, ರೈಲು ಸಂಖ್ಯೆ 06504 ಮಾರ್ಚ್ 22ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಈ ರೈಲು 2 ಎಸಿ 2-ಟೈರ್, 4 ಎಸಿ 3-ಟೈರ್, 7…
ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರ ಸೇವಾ ವಿವರಗಳನ್ನು ಹೆಚ್ ಆರ್ ಎಂ ಎಸ್ ತಂತ್ರಾಂಶದ Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಿ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ಸರ್ಕಾರಿ ಆದೇಶಗಳು, ಸುತ್ತೋಲೆಗಳು ಹಾಗೂ ನಿರ್ದೇಶನಗಳನ್ವಯ, ರಾಜ್ಯ ಸರ್ಕಾರದ ಸೇವೆಗೆ ದಿನಾಂಕ: 01.04.2021 ರ ಮೊದಲು ಹಾಗೂ ನಂತರ ನೇಮಕಗೊಂಡಿರುವ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ಸೇವಾ ವಹಿಯನ್ನು HRMS-2.0 ತಂತ್ರಾಂಶದ ಅಂಗವಾಗಿರುವ ವಿದ್ಯುನ್ಮಾನ ಸೇವಾ ವಹಿ (Electronic Service Register-ESR) ಯಲ್ಲಿಯೇ ಕಡ್ಡಾಯವಾಗಿ ದಾಖಲಿಸಿ ಹಾಗೂ ನಿರ್ವಹಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಪ್ರಧಾನ ಮಹಾಲೇಖಪಾಲರ (CAG) ಮಾರ್ಗಸೂಚಿಗಳಂತೆ, ಪಿಂಚಣಿ ಪ್ರಕ್ರಿಯೆಯನ್ನು ಸಂಪೂರ್ಣ ಕಾಗದರಹಿತ (Paperless) ಹಾಗೂ ಅಂತ್ಯದಿಂದ ಅಂತ್ಯಕ್ಕೆ (End-to-End) ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಪಿಂಚಣಿ ಪ್ರಕರಣಗಳನ್ನು ಸಂಪೂರ್ಣವಾಗಿ ಆನ್-ಲೈನ್ ಮೂಲಕ ಪ್ರಕ್ರಿಯೆಗೊಳಿಸುವ ವ್ಯವಸ್ಥೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಖಜಾನೆ-2 ತಂತ್ರಾಂಶದ ಮುಖಾಂತರ ರಾಜ್ಯದ ಎಲ್ಲಾ ಹಣ ಸೆಳೆಯುವ…














