Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಗುರುವಾರ (ಜೂನ್ 18) ಭಾರಿ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಿದೆ. ಪ್ರಮುಖ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ನಿಗಮ-ಮಂಡಳಿಗಳ ವ್ಯವಸ್ಥಾಪಕ ನಿರ್ದೇಶಕರುಗಳನ್ನು ಬದಲಾಯಿಸಲಾಗಿದೆ. ಅಧಿಕಾರಿಗಳ ವರ್ಗಾವಣೆ ಮತ್ತು ಹೊಸ ಹುದ್ದೆಗಳ ವಿವರ ಈ ಕೆಳಗಿನಂತಿದೆ: ಪ್ರಮುಖ ಇಲಾಖೆಗಳ ಕಾರ್ಯದರ್ಶಿಗಳ ಬದಲಾವಣೆ: ಸಮೀರ್ ಶುಕ್ಲಾ (IAS 2005): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಇವರನ್ನು ನವದೆಹಲಿಯ ಕರ್ನಾಟಕ ಭವನದ ವಾಸಿ ಕಮಿಷನರ್ (Resident Commissioner) ಆಗಿ ವರ್ಗಾಯಿಸಲಾಗಿದೆ. ಆರ್. ದೀಪ್ (IAS 2006): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (ಪಂಚಾಯತ್ ರಾಜ್) ಕಾರ್ಯದರ್ಶಿಯಾಗಿದ್ದ ಇವರನ್ನು ಸಮೀರ್ ಶುಕ್ಲಾ ಅವರ ಜಾಗಕ್ಕೆ ಅದೇ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಜೊತೆಗೆ ಪಂಚಾಯತ್ ರಾಜ್ ಕಾರ್ಯದರ್ಶಿಯ ಹೆಚ್ಚುವರಿ ಪ್ರಭಾರವನ್ನೂ ಇವರಿಗೇ ನೀಡಲಾಗಿದೆ. ತುಳಸಿ ಮದ್ದಿನೇನಿ (IAS 2005): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ…
ನವದೆಹಲಿ: ದೇಶದ ರೈತರ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರೈತರು ಕಾತುರದಿಂದ ಕಾಯುತ್ತಿದ್ದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (PM-Kisan) ಯೋಜನೆಯ 23ನೇ ಕಂತು ಜೂನ್ 20ರಂದು ಬಿಡುಗಡೆಯಾಗಲಿದೆ. ಈ ಕಂತಿನಲ್ಲಿ ದೇಶಾದ್ಯಂತ ಇರುವ 9.44 ಕೋಟಿಗೂ ಅಧಿಕ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹18,880 ಕೋಟಿ ನೇರವಾಗಿ ಜಮೆಯಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ‘ವಿಕಸಿತ ಭಾರತ, ವಿಕಸಿತ ಪಶ್ಚಿಮ ಬಂಗಾಳ’ ಸಂಕಲ್ಪದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20ರಂದು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಿಂದ ಈ ನಗದು ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಕೃಷಿ, ಗ್ರಾಮೀಣ ಅಭಿವೃದ್ಧಿ, ಮೀನುಗಾರಿಕೆ ಮತ್ತು ರೈಲ್ವೆ ವಲಯ ಸೇರಿದಂತೆ ಹಲವು ಪ್ರಮುಖ ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ. ಕೃಷಿ ವಲಯಕ್ಕೆ ಹೊಸ ಚೈತನ್ಯ ನೀಡಲಿರುವ ಪ್ರಮುಖ ಯೋಜನೆಗಳು ರೈತರ ಆದಾಯವನ್ನು ಹೆಚ್ಚಿಸಲು, ಗ್ರಾಮೀಣ…
ರಾಂಚಿ: ಜಾರ್ಖಂಡ್ನಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎನ್ಡಿಎ (NDA) ಮೈತ್ರಿಕೂಟದ ಅಭ್ಯರ್ಥಿ ಪರಿಮಳ್ ನತ್ವಾಣಿ ಭರ್ಜರಿ ಜಯ ಸಾಧಿಸಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ಈ ಹಣಾಹಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಮುಖಭಂಗ ಅನುಭವಿಸಿದ್ದಾರೆ. ರಾಜ್ಯಸಭೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಜಾರ್ಖಂಡ್ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಈ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆಯಿಟ್ಟುಕೊಂಡಿದ್ದವು. ಆದರೆ, ಫಲಿತಾಂಶ ತಲೆಕೆಳಗಾಗಿದ್ದು, ಎನ್ಡಿಎ ಅಭ್ಯರ್ಥಿ ಸುಲಭವಾಗಿ ಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಅಡ್ಡ ಮತದಾನದ ಶಂಕೆ: ಈ ಅನಿರೀಕ್ಷಿತ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ತಮ್ಮದೇ ಮೈತ್ರಿಕೂಟದ ಕೆಲವು ಶಾಸಕರು ‘ಅಡ್ಡ ಮತದಾನ’ (Cross-voting) ಮಾಡಿರುವ ಶಂಕೆಯನ್ನು ಹೊರಹಾಕಿದ್ದಾರೆ. ನಿರೀಕ್ಷಿತ ಮತಗಳು ಬಾರದೇ ಇರುವುದನ್ನು ಗಮನಿಸಿದರೆ ಪಕ್ಷದ ಒಳಗಡೆಯೇ ಅಸಮಾಧಾನಿತರು ಎನ್ಡಿಎ ಅಭ್ಯರ್ಥಿಗೆ ಮತ ಹಾಕಿ ಕೈಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ…
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷದ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಜಯ ಸಾಧಿಸಿದ್ದಾರೆ. ವಿರೋಧ ಪಕ್ಷಗಳ ಪಾಳಯದಲ್ಲಿ ಭಾರಿ ಮಟ್ಟದ ಅಡ್ಡ ಮತದಾನ (Cross Voting) ನಡೆದಿರುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ. ಬಿಜೆಪಿ-ಜೆಡಿಎಸ್ ಅಡ್ಡ ಮತದಾನದ ಬಲ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಮೂವರು ಮತ್ತು ಜೆಡಿಎಸ್ ಪಕ್ಷದ ಮೂವರು ಶಾಸಕರು ಕ್ರಾಸ್ ವೋಟಿಂಗ್ ಮಾಡಿದ್ದಾರೆ ಎನ್ನಲಾಗಿದ್ದು, ಈ ಅಡ್ಡ ಮತದಾನದ ನಡುವೆಯೂ ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅತಿ ಹೆಚ್ಚು ಮತಗಳನ್ನು ಪಡೆದು ಬೀಗಿದ್ದಾರೆ. ಮತಗಳ ವಿವರ: ವಿನಯ್ ಕಾರ್ತಿಕ್ (ಕಾಂಗ್ರೆಸ್): 32 ಮತಗಳು ಗೋವಿಂದರಾಜು (ಜೆಡಿಎಸ್): 14 ಮತಗಳು ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಕೇವಲ 14 ಮತಗಳನ್ನು ಪಡೆಯಲಷ್ಟೇ ಶಕ್ತರಾಗಿದ್ದು, ಭಾರಿ ಮುಖಭಂಗ ಅನುಭವಿಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ನ ವಿನಯ್ ಕಾರ್ತಿಕ್ ಬರೋಬ್ಬರಿ 32 ಮತಗಳನ್ನು ಬಾಚಿಕೊಳ್ಳುವ ಮೂಲಕ ಪ್ರಚಂಡ…
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭಗೊಂಡಿದೆ. ಆದರೆ, ಮತ ಎಣಿಕೆಯ ಆರಂಭದಲ್ಲೇ ದೊಡ್ಡದೊಂದು ತಿರುವು ಸಿಕ್ಕಿದ್ದು, ಚಲಾವಣೆಯಾಗಿದ್ದ ಒಟ್ಟು 222 ಮತಗಳ ಪೈಕಿ ಒಂದು ಮತ ಅಸಿಂಧು (ರದ್ದು) ಗೊಂಡಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಚುನಾವಣಾಧಿಕಾರಿಗಳು ಸದ್ಯ 221 ಮತಗಳನ್ನು ಮಾತ್ರವೇ ಪರಿಗಣಿಸಿ ಎಣಿಕೆ ಕಾರ್ಯವನ್ನು ಮುಂದುವರಿಸಿದ್ದಾರೆ. ಪ್ರಾಶಸ್ತ್ಯದ ಮತಗಳನ್ನು ಸರಿಯಾದ ಕ್ರಮದಲ್ಲಿ ಚಲಾಯಿಸದ ಹಿನ್ನೆಲೆಯಲ್ಲಿ ಈ ಒಂದು ಮತ ರದ್ದಾಗಿದೆ ಎನ್ನಲಾಗುತ್ತಿದ್ದು, ಈ ಅಸಿಂಧುಗೊಂಡ ಮತ ಯಾರದ್ದು ಹಾಗೂ ಇದು ಯಾವ ಪಕ್ಷಕ್ಕೆ ನಷ್ಟ ಉಂಟುಮಾಡಲಿದೆ ಎಂಬುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಮಂಡ್ಯ : ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಭೀಮನಹಳ್ಳಿಯಲ್ಲಿ ಇತ್ತೀಚೆಗೆ ನಡೆದಿದ್ದ ಮಹೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರು ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿರುವ ರೋಮಾಂಚನಕಾರಿ ಘಟನೆ ನಡೆದಿದೆ. ಸ್ಥಳ ಮಹಜರು ನಡೆಸುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಈ ಕ್ರಮ ಕೈಗೊಂಡಿದ್ದಾರೆ. ಹಲಗೂರು ಸಮೀಪದ ಹುಲ್ಲೇಗಾಲದ ಬಳಿ ಈ ಫೈರಿಂಗ್ ನಡೆದಿದ್ದು, ಆರೋಪಿ ಸಿದ್ದರಾಜು ಅಲಿಯಾಸ್ ‘ಸೀಜರ್ ಸಿದ್ದು’ ಕಾಲಿಗೆ ಗುಂಡೇಟು ಬಿದ್ದಿದೆ. ಘಟನೆಯ ವಿವರ: ಮೊನ್ನೆಯಷ್ಟೇ ಭೀಮನಹಳ್ಳಿಯಲ್ಲಿ ಮಹೇಶ್ ಎಂಬ ವ್ಯಕ್ತಿಯ ಭೀಕರ ಕೊಲೆಯಾಗಿತ್ತು. ಮೊಬೈಲ್ ಮೆಸೇಜ್ ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ವಾಹನಗಳ ಸೀಜಿಂಗ್ ಕೆಲಸ ಮಾಡುತ್ತಿದ್ದ ಸಿದ್ದರಾಜು, ಮಹೇಶ್ನನ್ನು ಹತ್ಯೆ ಮಾಡಿದ್ದ ಎನ್ನಲಾಗಿದೆ. ಈ ಪ್ರಕರಣದ ಎ೧ (A1) ಆರೋಪಿಯಾಗಿದ್ದ ಸಿದ್ದರಾಜುನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಹುಲ್ಲೇಗಾಲದ ಬಳಿ ಆರೋಪಿಯನ್ನು ಮಹಜರು ಪ್ರಕ್ರಿಯೆಗಾಗಿ ಸ್ಥಳಕ್ಕೆ ಕರೆತರಲಾಗಿತ್ತು. ಈ ವೇಳೆ ಪೊಲೀಸರ ಕಣ್ಣಿಗೆ ಮಣ್ಣೆರಚಿ…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಯಾವುದೇ ರೀತಿಯ ರಾಜಕೀಯ ತಂತ್ರಗಾರಿಕೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪರಿಷತ್ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಎಲ್ಲಾ ಶಾಸಕರು ಬುದ್ಧಿವಂತರು ಹಾಗೂ ಪ್ರಜ್ಞಾವಂತರಾಗಿದ್ದಾರೆ. ಯಾರೂ ಒತ್ತಡಕ್ಕೆ ಮಣಿದಿಲ್ಲ, ಎಲ್ಲರೂ ತಮ್ಮ ಸ್ವಇಚ್ಛೆಯಿಂದಲೇ ಮತ ಚಲಾಯಿಸಿದ್ದಾರೆ. ಹೀಗಾಗಿ ನಮಗೆ ಯಾವುದೇ ತಂತ್ರಗಾರಿಕೆ ಮಾಡುವ ಅವಶ್ಯಕತೆ ಇರಲಿಲ್ಲ,” ಎಂದರು. ರೆಸಾರ್ಟ್ ರಾಜಕಾರಣವಲ್ಲ, ಅದು ತರಬೇತಿ: ಶಾಸಕರನ್ನು ರೆಸಾರ್ಟ್ನಲ್ಲಿ ಇರಿಸಿದ್ದರ ಕುರಿತು ಪ್ರತಿಕ್ರಿಯಿಸಿದ ಸಿಎಂ, “ನಾನು ಶಾಸಕರ ಜೊತೆ ಎರಡು ದಿನ ರೆಸಾರ್ಟ್ನಲ್ಲಿದ್ದದ್ದು ನಿಜ. ಆದರೆ ಅಲ್ಲಿ ಯಾವುದೇ ಗುಪ್ತ ತಂತ್ರಗಾರಿಕೆ ನಡೆದಿಲ್ಲ. ಪರಿಷತ್ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತಗಳನ್ನು (Preference Votes) ಅತ್ಯಂತ ಎಚ್ಚರಿಕೆಯಿಂದ ಚಲಾಯಿಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮ ಶಾಸಕರಿಗೆ ಸೂಕ್ತ ತರಬೇತಿ ನೀಡಲು ಮಾತ್ರ ನಾವು ರೆಸಾರ್ಟ್ಗೆ ಹೋಗಿದ್ದೆವು. ನಮ್ಮ ಮತಗಳನ್ನು ನಮಗೆ ಹಾಕಿ ಎಂದು ಕೇಳಿದ್ದೇವೆಯೇ ಹೊರತು…
ದಾವಣಗೆರೆ: ಪೋಕ್ಸೋ (POCSO) ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರದ ವಚನಾನಂದ ಸ್ವಾಮೀಜಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ತೀರ್ಪನ್ನು ಇಲ್ಲಿನ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಜೂನ್ 30ಕ್ಕೆ ಕಾಯ್ದಿರಿಸಿದೆ. ಶ್ರೀಗಳಿಗೆ ಮೇ 2 ರಂದು ಮಂಜೂರಾಗಿದ್ದ ಜಾಮೀನನ್ನು ರದ್ದುಪಡಿಸುವಂತೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು, ಸರ್ಕಾರಿ ಅಭಿಯೋಜಕರು ಹಾಗೂ ದೂರುದಾರರು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಜೂನ್ 11 ರಂದೇ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಇಂದು ಆದೇಶ ಪ್ರಕಟಿಸಬೇಕಿತ್ತು. ಆದರೆ, ಪ್ರಕರಣ ಈಗ ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ಜಿಲ್ಲಾ ನ್ಯಾಯಾಲಯವು ತನ್ನ ತೀರ್ಪನ್ನು ಜೂನ್ 30ಕ್ಕೆ ಮುಂದೂಡಿದೆ. ಹೈಕೋರ್ಟ್ ಆದೇಶದ ಬಳಿಕ ಕೆಳ ನ್ಯಾಯಾಲಯದ ತೀರ್ಪು: ಈ ಕುರಿತು ಮಾಹಿತಿ ನೀಡಿರುವ ವಚನಾನಂದ ಸ್ವಾಮೀಜಿ ಪರ ವಕೀಲ ಎಸ್.ವಿ. ಪಾಟೀಲ್, “ಜಾಮೀನು ರದ್ದು ಕೋರಿ ದೂರುದಾರರು ಜೂನ್ 6 ರಂದೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 23 ರಂದು ಹೈಕೋರ್ಟ್ನಲ್ಲಿ ಈ ಅರ್ಜಿ ವಿಚಾರಣೆಗೆ ಬರಲಿದ್ದು, ಸ್ವಾಮೀಜಿಯವರಿಗೆ…
ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳು, ಮಳೆ ಹಾನಿ ಹಾಗೂ ಮಳೆ-ಗಾಳಿಗೆ ಬಿದ್ದ ಮರ ತೆರವು ಸೇರಿದಂತೆ ಇನ್ನಿತರ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಲು ಅಭಿವೃದ್ಧಿಪಡಿಸಲಾದ ಬೆಂಗಳೂರು ಸಂಚಾರ ಪೊಲೀಸ್ ಬಳಸುತ್ತಿರುವ ‘ಅಸ್ತ್ರಂ’ ಆಪ್ ಅನ್ನು ಪರಿಣಾಮಕಾರಿಯಾಗಿ ಬಳಸಲು ಪಾಲಿಕೆಯ ಅಭಿಯಂತರರಿಗೆ ಕಾರ್ಯಗಾರವನ್ನು ಇಂದು ಪಾಲಿಕೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅಸ್ತ್ರಂ ಆ್ಯಪ್ ತಂಡದಿಂದ ಎಂಜಿನಿಯರ್ಗಳಿಗೆ ತರಬೇತಿ: ಈ ತರಬೇತಿ ಕಾರ್ಯಾಗಾರದಲ್ಲಿ ‘ಅಸ್ತ್ರಂ’ ತಾಂತ್ರಿಕ ತಂಡದವರು ಆ್ಯಪ್ ಬಳಕೆ ಕುರಿತು ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟುಮಾಡುವ ಗುಂಡಿಗಳು, ಮಳೆ ಹಾನಿ ಹಾಗೂ ರಸ್ತೆಗೆ ಬಿದ್ದ ಮರಗಳನ್ನು ಈ ತಂತ್ರಜ್ಞಾನದ ಮೂಲಕ ಹೇಗೆ ಗುರುತಿಸಬೇಕು ಮತ್ತು ತಕ್ಷಣವೇ ಸ್ಥಳಕ್ಕೆ ತೆರಳಿ ದುರಸ್ತಿ ಹಾಗೂ ತೆರವು ಕಾರ್ಯಗಳ ಕುರಿತ ಸಂಕ್ಷಿಪ್ತ ಮಾಹಿತಿ ನೀಡುವ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಣೆ ನೀಡಿದರು. ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ನೇತೃತ್ವದಲ್ಲಿ ಕಾರ್ಯಗಾರ: ಪಾಲಿಕೆಯ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ ಅವರ ನೇತೃತ್ವದಲ್ಲಿ ಈ…
ನವದೆಹಲಿ: ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. 2025–26ನೇ ಆರ್ಥಿಕ ಸಾಲಿನ ನೌಕರರ ಭವಿಷ್ಯ ನಿಧಿ (EPF) ಠೇವಣಿಗಳಿಗೆ ಶೇಕಡಾ 8.25ರಷ್ಟು ಬಡ್ಡಿದರವನ್ನು ನೀಡಲು ಕೇಂದ್ರ ಸರ್ಕಾರ ಅಧಿಕೃತ ಒಪ್ಪಿಗೆ ಸೂಚಿಸಿದೆ. ಇದರೊಂದಿಗೆ, ನೌಕರರ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ತನ್ನ 7 ಕೋಟಿಗೂ ಅಧಿಕ ಇರುವ ಚಂದಾದಾರರ ಖಾತೆಗಳಿಗೆ ಈ ಬಡ್ಡಿಯ ಮೊತ್ತವನ್ನು ಇದೇ ತಿಂಗಳಿನಲ್ಲೇ ಜಮೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಹಣಕಾಸು ಸಚಿವಾಲಯದಿಂದ ಗ್ರೀನ್ ಸಿಗ್ನಲ್: ನಿಯಮಾವಳಿಗಳ ಪ್ರಕಾರ, ಇಪಿಎಫ್ಒ ಕೇಂದ್ರೀಯ ಧರ್ಮದರ್ಶಿ ಮಂಡಳಿಯು (CBT) ನಡೆಸಿದ ಸಭೆಯಲ್ಲಿ 2025–26ನೇ ಸಾಲಿಗೆ ಶೇ 8.25ರಷ್ಟು ಬಡ್ಡಿ ಪಾವತಿಸಲು ತೀರ್ಮಾನಿಸಿ, ಅಂತಿಮ ಅನುಮೋದನೆಗಾಗಿ ಕೇಂದ್ರ ಹಣಕಾಸು ಸಚಿವಾಲಯಕ್ಕೆ ವರದಿಯನ್ನು ಕಳುಹಿಸಿಕೊಟ್ಟಿತ್ತು. ಸದ್ಯ ಈ ಪ್ರಸ್ತಾವನೆಗೆ ಹಣಕಾಸು ಸಚಿವಾಲಯವು ಹಸಿರು ನಿಶಾನೆ ತೋರಿದೆ. ಇದಕ್ಕೂ ಮುನ್ನ, ಮಾರ್ಚ್ ತಿಂಗಳಲ್ಲಿ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಮಹತ್ವದ ಸಭೆಯಲ್ಲೂ ಸಹ 2025–26ನೇ…














