Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ವಿಶ್ವಜೀತ ಮೆಹತಾ ಅವರನ್ನು ಬಳ್ಳಾರಿ ಕಚೇರಿ ಸಹಾಯಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಬಸವರಾಜ ತನ್ನಹಳ್ಳಿ ಅವರನ್ನು ಕೊಪ್ಪಳ ತಹಶೀಲ್ದಾರ್ ಗ್ರೇಡ್-1 ಆಗಿ ವರ್ಗಾವಣೆಗೊಳಿಸಿದ್ದರೇ, ಪುರಂದರ ಕೆ ಅವರನ್ನು ಸೊರಬ ತಹಶೀಲ್ದಾರ್ ಗ್ರೇಡ್-1 ಆಗಿ ವರ್ಗಾವಣೆ ಮಾಡಲಾಗಿದೆ. ಹೀಗಿದೆ 11 ತಹಶೀಲ್ದಾರರ ವರ್ಗಾವಣೆ ಪಟ್ಟಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಸ್ಮಾರ್ಟ್ ಕ್ಲಾಸ್ ಗಳನ್ನು ಸರ್ಕಾರಿ ಶಾಲೆಗಳಲ್ಲಿ ನಿರ್ಮಿಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಪುರಸ್ಕೃತ ಕಾರ್ಯಕ್ರಮವಾದಂತ ಸಮಗ್ರ ಶಿಕ್ಷಣ ಕರ್ನಾಟಕದಡಿ 2022-23, 2024-25 ಮತ್ತು 2025-26ನೇ ಸಾಲಿನ ಕೇಂದ್ರ ಶಿಕ್ಷಣ ಸಚಿವಾಲಯದ ಯೋಜನಾ ಅನುಮೋದನಾ ಮಂಡಳಿ ಅನುಮೋದಿ ರಾಜ್ಯದ 3862 ಪ್ರಾಥಮಿಕ, ಪ್ರೌಢ ಮತ್ತು ಕೆ ಜಿ ಬಿ ವಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ರೂಂ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಟಿಸಿದ್ದು, ಮೇಲೆ ಓದಲಾದ ಕ್ರಮಾಂಕ (1)ರಲ್ಲಿನ 2022-23ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕದ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿರುವ ಯೋಜನಾ ಅನುಮೋದನಾ ಮಂಡಳಿ (PAB)ಯ ದಿನಾಂಕ: 09.05.2022ರ ಸಭೆಯಲ್ಲಿ 1631 ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಘಟಕ ವೆಚ್ಚ ರೂ. 2.4 ಲಕ್ಷದಂತೆ ಒಟ್ಟು ವೆಚ್ಚ ರೂ.3914.40ಲಕ್ಷಗಳಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪಿಸಲು ಅನುಮೋದನೆ ನೀಡಲಾಗಿರುತ್ತದೆ ಎಂದಿದ್ದಾರೆ. 2024-25ನೇ ಸಾಲಿನ…
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳಿಗೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆ.5ರಿಂದ ಫೆ.9ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ. ಅಖಿಲ ಭಾರತ ಕೋಟಾದ 3ನೇ ಸುತ್ತಿನ ಸೀಟು ಹಂಚಿಕೆಯ ವೇಳಾ ಪಟ್ಟಿ ಎಂಸಿಸಿ ಪರಿಷ್ಕರಿಸಿದ ಕಾರಣ ಫೆ.2ರ ಬದಲಿಗೆ ಫೆ.5ರಿಂದ ಇಚ್ಛೆ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಫೆ.9ರಂದು ಬೆಳಿಗ್ಗೆ 8 ಗಂಟೆವರೆಗೆ ಇಚ್ಛೆ ದಾಖಲಿಸಬಹುದು ಎಂದು ಅವರು ವಿವರಿಸಿದ್ದಾರೆ. ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ್ದ ಇಚ್ಛೆಗಳು ಈ ಸುತ್ತಿಗೆ ಇರುವುದಿಲ್ಲ. ಹೀಗಾಗಿ ಹೊಸದಾಗಿಯೇ ಆಪ್ಷನ್ಸ್ ದಾಖಲಿಸಬೇಕು ಎಂದು ಅವರು ತಿಳಿಸಿದ್ದಾರೆ. ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಫೆ.9ರಂದು ಸಂಜೆ 5 ಗಂಟೆಗೆ ಹಾಗೂ ಅಂತಿಮ ಫಲಿತಾಂಶವನ್ನು ಫೆ.10ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಸೀಟು ಹಂಚಿಕೆಯಾದವರು ಫೆ.11ರಿಂದ 13ರವರೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬೇಕು. ಫೆ.13ರೊಳಗೆ ಕಾಲೇಜುಗಳಿಗೆ ವರದಿ…
ಶಿವಮೊಗ್ಗ : ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್ https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿ ನೋಂದಣಿ ಮಾಡಲು ಫೆ.14 ಹಾಗೂ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕಪಾವತಿಸಲು ಫೆ.16 ಕಡೆಯ ದಿನವಾಗಿದೆ. ಎಲ್ಲ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಹಾಗೂ ಗಣಿತ ಮತ್ತು ಇಂಗ್ಲೀಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷವಿದ್ದು ಮೀಸಲು ವರ್ಗಗಳಿಗೆ ವಯೋಮಿತಿ ಸಡಲಿಕೆ ಇರುತ್ತದೆ. ಅಂಕಗಳ ಆಧಾರದಲ್ಲಿ ಆನ್ ಲೈನ್ ಮೂಲಕವೇ ನೇಮಕಾತಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-222835 ನ್ನು ಸಂರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ. https://kannadanewsnow.com/kannada/attention-bengaluru-residents-power-outages-expected-in-these-areas-of-the-city-tomorrow/…
ಬೆಂಗಳೂರು: ರಂಜಾನ್ ಮಾಸದ ಹಿನ್ನಲೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿಯನ್ನು ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 4-20 ರವರೆಗೆ ಶಾಲಾ ಅವಧಿ ನಿಗಧಿಪಡಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ: 31-10-2002 ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್…
ಬೆಂಗಳೂರು: ದಿ: 03.02.2026 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿAದ ಸಂಜೆ 06:00 ಗಂಟೆಯವರೆಗೆ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ“ ದ 66ಕೆ.ವಿ ಲೈನನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ನಾಳೆ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಎಚ್ಆರ್ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉನ್ನತಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್ಶಿಪ್, ಬಾಲಾಜಿ ಲೇಔಟ್, ಜಿಎನ್ಆರ್ ಗಾರ್ಡನ್, ಚೆಲೆಕರೆ, ಚೆಲೆಕರೆ ವಿಲೇಜ್, ಸಮುದ್ರಿಕಾ ಎನ್ಕ್ಲೇವ್, 100 ಅಡಿ ರಸ್ತೆ, 80 ಅಡಿ ರಸ್ತೆ, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಅಮರ್ ಏಜೆನ್ಸಿ ಲೇಔಟ್, ಪಿ & ಟಿ ಲೇಔಟ್, ಪಪ್ಪಯ್ಯ ಲೇಔಟ್,…
ಶಿವಮೊಗ್ಗ: ಜಿಲ್ಲೆಯ ಉಳ್ಳೂರು ಬಳಿಯಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸಾಗರದ ಅಕ್ಷಯ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ಮತ್ತೊಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಲ್ಲಿ ಭೀಕರ ಅಪಘಾತವೊಂದು ಕಳೆದ ರಾತ್ರಿ ಸಂಭವಿಸಿದೆ. ಕ್ಯಾಂಟರ್ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಕಾರಿಗೆ ಡಿಕ್ಕಿಯಾದ ಪರಿಣಾಮ ಸಾಗರದ ಅಕ್ಷಯ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಂತ ಯುವತಿ ಪವಿತ್ರಾ.ಸಿ(25) ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಲ್ಲದೇ ಈಕೆಯ ಸ್ನೇಹಿತ ವೀರೇಶ್ ಟಿ.ಎಸ್(25) ಎಂಬಾತ ಕೂಡ ಸಾವನ್ನಪ್ಪಿದ್ದಾರೆ. ಮೃತ ಪವಿತ್ರಾ ಸೊರಬ ತಾಲ್ಲೂಕಿನ ಮಳಲಗದ್ದೆ ಗ್ರಾಮದ ಚನ್ನಬಸವಯ್ಯ ಪುತ್ರಿಯಾಗಿದ್ದರೇ, ಮೃತ ವೀರೇಶ್ ಸಾಗರ ತಾಲ್ಲೂಕಿನ ತಡಗಳಲೆ ಗ್ರಾಮದವರಾಗಿದ್ದಾರೆ. ಪವಿತ್ರಾ ಸಾಗರದ ಅಕ್ಷಯ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಾ, ಸಾಗರದಲ್ಲೇ ಪಿಜಿಯಲ್ಲಿ ಇದ್ದರು. ಕಳೆದ ರಾತ್ರಿ ಆನಂದಪುರಕ್ಕೆ ಸ್ನೇಹಿತರೊಬ್ಬರ ಕಾರ್ಯಕ್ರಮಕ್ಕೆ ಮಾರುತಿ ಆಲ್ಟೋ ಕಾರಿನಲ್ಲಿ ಸ್ನೇಹಿತ ವೀರೇಶ್ ಜೊತೆಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ವಾಪಾಸ್ ಸಾಗರಕ್ಕೆ ಕಾರಿನಲ್ಲಿ…
ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ ಬಗ್ಗೆ ಅಭಿಪ್ರಾಯಾಗಲು ಕೇಳಿಬಂದಿವೆ. ಇನ್ನೊಂದೆಡೆ, ಸಾಮಾಜಿಕ ಮಾಧ್ಯಮ ಕುರಿತ ಜಾಗೃತಿಗೆ ಪೂರಕವಾಗಿ ಶೈಕ್ಷಣಿಕ ಪಠ್ಯಕ್ರಮ ರೂಪಿಸಬೇಕೆಂದು ಆಡಳಿತ ಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ. ಈ ಸಂಬಂಧ ಸರ್ಕಾರಕ್ಕೆ ಕಾಂಗ್ರೆಸ್ ಕಾನೂನು ಘಟಕದಿಂದ ಪ್ರಸ್ತಾವನೆಯೊಂದು ಸಲ್ಲಿಕೆಯಾಗುವ ಮೂಲಕ ಸೋಶಿಯಲ್ ಮೀಡಿಯಾ ಕುರಿತ ಬೆಳವಣಿಗೆಗಳಿಗೆ ನಿರ್ಣಾಯಕ ತಿರುವು ಸಿಕ್ಕಿದೆ. ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಸಿ.ಕೆ.ಶಿವಕುಮಾರ್, ಗೃಹಸಚಿವ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಕಾನೂನು ರೂಪಿಸುವುದಷ್ಟೇ ಅಲ್ಲ, ವಿದ್ಯಾರ್ಥಿ ಬದುಕಿನಲ್ಲೇ ಸಾಮಾಜಿಕ ಮಾಧ್ಯಮ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡುವ ಅಗತ್ಯದತ್ತ ಗಮನಸೆಳೆದಿದ್ದಾರೆ. ಕರ್ನಾಟಕ ಶಾಲೆಗಳಲ್ಲಿ ಮಾಧ್ಯಮ ಸಾಕ್ಷರತೆ ಮತ್ತು ವಿಮರ್ಶಾತ್ಮಕ…
ಬೆಂಗಳೂರು: ಕ್ಲಾಸಿಕ್ ಲೆಜೆಂಡ್ಸ್ ತಾಂತ್ರಿಕ ಸಾಮರ್ಥ್ಯ ಮತ್ತು ಸೇವಾ ಶ್ರೇಷ್ಠತೆಯನ್ನು ಬಲಪಡಿಸುವ ಉದ್ದೇಶದಿಂದ ಸುಧಾರಿತ ರಾಷ್ಟ್ರೀಯ ತರಬೇತಿ ಕೇಂದ್ರವನ್ನು ಉದ್ಘಾಟಿಸಿದೆ. ಭವಿಷ್ಯಕ್ಕೆ ಸಿದ್ಧವಾಗಿರುವ ಪ್ರತಿಭೆಗಳನ್ನು ನಿರ್ಮಿಸುವ ಮತ್ತು ವಿಶ್ವ ದರ್ಜೆಯ ತರಬೇತಿ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡುವ ಕಂಪನಿಯ ನಿರಂತರ ಬದ್ಧತೆಯನ್ನು ಈ ಹೊಸ ಸೌಲಭ್ಯವು ಒತ್ತಿಹೇಳುತ್ತದೆ. ಈ ಕುರಿತು ಮಾತನಾಡಿದ ಕ್ಲಾಸಿಕ್ ಲೆಜೆಂಡ್ಸ್ನ ಸಹ-ಸಂಸ್ಥಾಪಕ ಅನುಪಮ್ ಥರೇಜಾ, ಯೋಗಿಕ ಮತ್ತು ಕೌಶಲ್ಯ-ಆಧಾರಿತ ತಾಂತ್ರಿಕ ತರಬೇತಿಯನ್ನು ನೀಡಲು ಕಾರ್ಯತಂತ್ರವಾಗಿ ಅಭಿವೃದ್ಧಿಪಡಿಸಲಾದ ರಾಷ್ಟ್ರೀಯ ತರಬೇತಿ ಕೇಂದ್ರವು ರೋಗನಿರ್ಣಯ, ನಿಖರ ದುರಸ್ತಿ ಅಭ್ಯಾಸಗಳು ಮತ್ತು ರಚನಾತ್ಮಕ ಕೌಶಲ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತದೆ. ಡೀಲರ್ಶಿಪ್ಗಳಾದ್ಯಂತ ತಂತ್ರಜ್ಞರು ಮತ್ತು ಸೇವಾ ವೃತ್ತಿಪರರನ್ನು ಬೆಂಬಲಿಸಲು ಇದನ್ನು ವಿನ್ಯಾಸಗೊಳಿಸಲಾಗಿದೆ. ಸೇವಾ ಗುಣಮಟ್ಟವನ್ನು ಪ್ರಮಾಣೀಕರಿಸುವಲ್ಲಿ ಮತ್ತು ಮಾರಾಟದ ನಂತರದ ಶ್ರೇಷ್ಠತೆಯನ್ನು ಹೆಚ್ಚಿಸುವಲ್ಲಿ ಈ ಸೌಲಭ್ಯವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. “ನಮ್ಮ ಬ್ರ್ಯಾಂಡ್ಗಳು ಬೆಳೆಯುತ್ತಲೇ ಇರುವುದರಿಂದ, ನಮ್ಮ ಸೇವಾ ಸಾಮರ್ಥ್ಯ ಪರಿಸರ ವ್ಯವಸ್ಥೆಯನ್ನು ಬಲಪಡಿಸುವುದು ಅತ್ಯಂತ ಮುಖ್ಯವಾಗುತ್ತದೆ” ಎಂದು ಹೇಳಿದರು. ಭವಿಷ್ಯಕ್ಕೆ ಸಿದ್ಧವಾಗಿರುವ ತಂತ್ರಜ್ಞರನ್ನು…
ಬೆಂಗಳೂರು: ನಗರದಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ ಮನೆಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. 4ನೇ ಮಹಡಿಯಿಂದ ಬಿದ್ದು ಇರ್ಫಾನ್ ಮುಲ್ಲಾನಿ(26) ಎಂಬ ಯುವಕ ಸಾವನ್ನಪ್ಪಿದ್ದಾನೆ.














