Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಭಾರತೀಯರು ಜಗತ್ತಿಗೆ ಸಂಸ್ಕೃತಿ, ನಾಗರಿಕತೆ ಹಾಗೂ ಬದುಕುವ ಕಲೆಯನ್ನು ಹೇಳಿಕೊಟ್ಟವರು. ನಮ್ಮ ದೇಶ ಉಳಿಯಬೇಕೆಂದರೆ ನಮ್ಮ ಹಿಂದೂ ಧರ್ಮ ಉಳಿಯಬೇಕು. ಆ ನಿಟ್ಟಿನಲ್ಲಿ ಹಿಂದೂಗಳು ಒಗ್ಗೂಡುವ ಜೊತೆಗೆ ಇಂತಹ ಸಮಾಜೋತ್ಸವಗಳು ದೇಶದೆಲ್ಲೆಡೆ ನಡೆಯಬೇಕೆಂದು ಎಸ್.ಐ.ಹೊನ್ನಲಗೆರೆಯ ಶ್ರೀ ಶಿವಕ್ಷೇತ್ರ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು. ಮದ್ದೂರು ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹಿಂದೂ ಸಮಾಜೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಸನಾತನ ಧರ್ಮವನ್ನು ನಾವು ಉಳಿಸುವ ಕೆಲಸ ಮಾಡಬೇಕು. ಈ ಧರ್ಮದ ಉಳಿವು ಜಗತ್ತಿನಲ್ಲಿ ಬಹಳ ದೊಡ್ಡ ಪಾತ್ರ ವಹಿಸುತ್ತದೆ. ಆದ್ದರಿಂದ ಧರ್ಮವನ್ನು ಗಟ್ಟಿಯಾಗಿ ನೆಲೆಗೊಳಿಸಬೇಕು. ಈ ನೆಲದ ಪರಂಪರೆ ನಮ್ಮ ಮುಂದಿನ ಪೀಳಿಗೆಗೆ ತಲುಪಿಸಬೇಕು ಆದ್ದರಿಂದ ಹಿಂದೂಗಳೆಲ್ಲರೂ ಸ್ವಯಂ ಜಾಗೃತರಾಗಬೇಕು. ಹಿಂದೂ ಧರ್ಮ ಸಂಸ್ಕೃತಿಯ ಪ್ರತೀಕವಾಗಿದೆ. ನಮ್ಮ ದೇಶದ ಹಿಂದೂಗಳೆಲ್ಲರೂ ಧರ್ಮದ ಆಚಾರ ವಿಚಾರ ತಿಳಿದುಕೊಳ್ಳಬೇಕು. ಈ ದೇಶ, ಸಂಸ್ಕೃತಿ, ಭೂಮಿ ನನ್ನದು ಎಂಬ ಭಾವನೆ ಮೂಡಬೇಕು. ದೇಶದ ಸಂಸ್ಕೃತಿ ಬಗ್ಗೆ ಜಾಗೃತರಾಗದಿದ್ದರೆ ಧರ್ಮ ಉಳಿಸಲು…
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ನಂತ್ರ, ಸರ್ಕಾರ ಸಂರಕ್ಷಿತ ಸ್ಥಳವೆಂದು ಘೋಷಿಸಿ ಉತ್ಖನನಕ್ಕೆ ಸೂಚಿಸಿತ್ತು. ಅದರಂತೆ ಉತ್ಖನನ ಕಾರ್ಯ ಕೂಡ ನಡೆಯುತ್ತಿದೆ. ಈ ಲಕ್ಕುಂಡಿಯ ಉತ್ಖನನಕ್ಕೆ ನಿರ್ದೇಶಕರಾಗಿ ಟಿ.ಎಂ ಕೇಶವ್ ಅವರನ್ನು ನೇಮಿಸಲಾಗಿತ್ತು. ಇಂತಹ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪುರಾತತ್ವ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದಂತ ಡಾ.ಟಿ.ಎಂ ಕೇಶವ್(77) ಅವರನ್ನು ಲಕ್ಕುಂಡಿ ಉತ್ಖನನ ಕಾರ್ಯದ ನಿರ್ದೇಶಕನ್ನಾಗಿ ನೇಮಿಸಲಾಗಿತ್ತು. ಆದರೇ ಅನಾರೋಗ್ಯದಿಂದ ಬಳಲುತ್ತಿದ್ದಂತ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಕೇಂದ್ರ ಪುರಾತತ್ವ ಇಲಾಖೆಯ ಅಧೀಕ್ಷರಾಗಿ ನಿವೃತ್ತರಾದ ಬಳಿಕ, ಲಕ್ಕುಂಡಿಯ ಉತ್ಕನನ ಕಾರ್ಯಕ್ಕೆ ನಿರ್ದೇಶಕರನ್ನಾಗಿ ಸರ್ಕಾರ ನೇಮಿಸಿತ್ತು. ಆದರೇ ಅವರು ಇಂದಿನ ನಿಧನರಾಗಿದ್ದು, ಲಕ್ಕುಂಡಿ ಉತ್ಕನನಕ್ಕೆ ಹಿನ್ನಡೆಯೇ ಆದಂತೆ ಆಗಿದೆ. https://kannadanewsnow.com/kannada/cm-siddaramaiah-prepares-to-present-record-17th-budget-preliminary-meeting-scheduled-for-feb-5/ https://kannadanewsnow.com/kannada/businessman-cj-roy-committed-suicide-by-shooting-himself-in-the-chest-bangalore-city-police-commissioner/
ಬೆಂಗಳೂರು: ಉದ್ಯಮಿ ಸಿ.ಜೆ ರಾಯ್ ಅವರು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಸಿಜೆ ರಾಯ್ ಜೊತೆಗೆ ನಾನು ನಿತ್ಯ ಮಾತನಾಡುತ್ತಿದ್ದೆನು. ಅವರು ಈ ರೀತಿ ಮಾಡ್ತಾರೆ ಅಂತ ನಂಬೋಕೆ ಆಗ್ತಿಲ್ಲ. ಉದ್ಯಮಿ ಸಿ.ಜೆ ರಾಯ್ ಹಾಗೂ ನನ್ನ ನಡುವೆ ಅಪ್ಪ-ಮಕ್ಕಳ ಸಂಬಂಧವಿತ್ತು. ಅವರು ನನಗೆ ಅಪ್ಪನಂತಿದ್ದರು ಎಂಬುದಾಗಿ ಮೊಹಮ್ಮದ್ ನಲಪಾಡ್ ತಿಳಿಸಿದ್ದಾರೆ. ಇಂದು ಅವರ ಆತ್ಮಹತ್ಯೆ ಕುರಿತು ಮಾತನಾಡಿದಂತ ಅವರು, ನಾಳೆ ಬೆಂಗಳೂರಲ್ಲೇ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. ಕಾನ್ಫಿಡೆಂಟ್ ಗ್ರೂಪ್ಸ್ ಜಾಗದಲ್ಲೇ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರ ಪತ್ನಿ ಹಾಗೂ ಮಕ್ಕಳಿಗೆ ವಿಷಯ ತಿಳಿಸಲಾಗಿದೆ ಎಂದರು. ಇಂದು ರಾತ್ರಿ ಕುಟುಂಬದವರು ದುಬೈನಿಂದ ಬರಲಿದ್ದಾರೆ. ನಮ್ಮಿಬ್ಬರದ್ದು ಅಪ್ಪ-ಮಗನ ಸಂಬಂಧವಾಗಿತ್ತು. ಅವರು ಹೀಗೆ ಮಾಡಿಕೊಳ್ಳುತ್ತಾರೆ ಅಂತ ಅಂದುಕೊಂಡಿರಲಿಲ್ಲ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/businessman-cj-roy-suicide-case-high-level-investigation-dcm-dk-shivakumar-announcement/ https://kannadanewsnow.com/kannada/cm-siddaramaiah-made-this-request-to-prime-minister-narendra-modi/
ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ, ಉದ್ಯಮಿ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ಮಾಡಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಇಂದು ಕನಕಪುರದಲ್ಲಿ ಸುದ್ದಿಗಾರರೊಂದಿಗೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದಂತ ಅವರು, ಈ ಬಗ್ಗೆ ಸರ್ಕಾರದಿಂದಲೇ ಉನ್ನತ ಮಟ್ಟದ ತನಿಖೆ ಮಾಡಿಸುವುದಾಗಿ ತಿಳಿಸಿದರು. ಎದೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ: ಬೆಂಗಳೂರು ನಗರ ಪೊಲೀಸ್ ಆಯುಕ್ತರು ಬೆಂಗಳೂರು: ಕಾಲ್ಫಿಡೆಂಟ್ ಕಂಪನಿಯ ಮುಖ್ಯಸ್ಥ, ಉದ್ಯಮಿ ಸಿ.ಜೆ ರಾಯ್ ಅವರು ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ವರು, ಕಳೆದ ಮೂರು ದಿನಗಳಿಂದ ಕೇರಳ ಐಟಿ…
ಬೆಂಗಳೂರು: ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಹಿರಂಗ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೆಲ ಒತ್ತಾಯಗಳನ್ನು ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರ್ನಾಟಕದ ಸಮಸ್ತ ಜನತೆಯ ಪರವಾಗಿ ರಾಜ್ಯ ಸರ್ಕಾರವು 16ನೇ ಹಣಕಾಸು ಆಯೋಗದ ಮುಂದೆ ಕೆಲವು ನ್ಯಾಯ ಸಮ್ಮತ ಮತ್ತು ಸಂವಿಧಾನಾತ್ಮಕ ಬೇಡಿಕೆಗಳನ್ನು ಮಂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ನ್ಯಾಯಯುತ ತೆರಿಗೆ ಪಾಲು, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ, ವಿಶೇಷ ಅನುದಾನ ನೀಡುವುದು ಸೇರಿದಂತೆ ಸಮಾನ ಹಂಚಿಕೆಯ ಮೂಲಕ ಸದೃಢ ಒಕ್ಕೂಟಕ್ಕೆ ಮನ್ನಣೆ ನೀಡಬೇಕು ಎನ್ನುವುದು ಕರ್ನಾಟಕದ ಒತ್ತಾಯವಾಗಿದೆ ಎಂದಿದ್ದಾರೆ. ಕರ್ನಾಟಕದ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ನನ್ನ ಸಾಮಾಜಿಕ ಜಾಲತಾಣದಲ್ಲಿ “ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ” ಎಂಬ ಅಭಿಯಾನ ಕೈಗೊಂಡಿದ್ದು, ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ತಮ್ಮ ಪತ್ರಿಕೆ, ಯೂಟ್ಯೂಬ್ ಹಾಗೂ ಟಿವಿ ಸುದ್ದಿ ಮಾಧ್ಯಮದಲ್ಲಿ ಹಂಚಿಕೊಂಡು, ಕರ್ನಾಟಕ ಹಾಗೂ ಕನ್ನಡಿಗರ ಹಿತದೃಷ್ಟಿಯಿಂದ ಕೈಗೊಳ್ಳಲಾದ ಈ ಅಭಿಯಾನ…
ನವದೆಹಲಿ: 40,000 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಬ್ಯಾಂಕ್ ವಂಚನೆ ಮತ್ತು ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (ಆರ್ಸಿಒಎಂ) ನ ಮಾಜಿ ನಿರ್ದೇಶಕ ಪುನೀತ್ ಗಾರ್ಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ), ವಿಶೇಷ ಕಾರ್ಯಪಡೆ ಬಂಧಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ಜನವರಿ 29, 2026 ರಂದು ಗಾರ್ಗ್ ಅವರನ್ನು ಬಂಧಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಈ ಪ್ರಕರಣವು ಆರ್ಸಿಒಎಂ ಮತ್ತು ಅದರ ಗುಂಪು ಘಟಕಗಳಿಂದ ಹಣವನ್ನು ಬೇರೆಡೆಗೆ ತಿರುಗಿಸುವುದು ಮತ್ತು ಅಕ್ರಮವಾಗಿ ವರ್ಗಾಯಿಸುವುದಕ್ಕೆ ಸಂಬಂಧಿಸಿದೆ ಎಂದು ಇಡಿ ತಿಳಿಸಿದೆ. ಆಗಸ್ಟ್ 21, 2025 ರಂದು ಕೇಂದ್ರ ತನಿಖಾ ದಳ (ಸಿಬಿಐ) ಎಫ್ಐಆರ್ ದಾಖಲಿಸಿದ ನಂತರ ತನಿಖೆಯನ್ನು ಪ್ರಾರಂಭಿಸಲಾಯಿತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ), 406 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ), ಮತ್ತು 420 (ವಂಚನೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1989 ರ…
ಬೆಂಗಳೂರು: ಕಾಲ್ಫಿಡೆಂಟ್ ಕಂಪನಿಯ ಮುಖ್ಯಸ್ಥ, ಉದ್ಯಮಿ ಸಿ.ಜೆ ರಾಯ್ ಅವರು ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ವರು, ಕಳೆದ ಮೂರು ದಿನಗಳಿಂದ ಕೇರಳ ಐಟಿ ಅಧಿಕಾರಿಗಳ ತಂಡವು ಸಿ.ಜೆ ರಾಯ್ ನಿವಾಸದ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಇಂದು ಮಧ್ಯಾಹ್ನ 3 ಗಂಟೆಯಿಂದ 3.15ರ ಸುಮಾರಿಗೆ ಈ ಘಟನೆ ನಡೆದಿದೆ ಎಂದರು. ಕಾನ್ಫಿಡೆಂಟ್ ಗ್ರೂಪ್ ನಿರ್ದೇಶಕರು ಈ ಘಟನೆ ಸಂಬಂಧ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಸಿ.ಜೆ ರಾಯ್ ಶೂಟ್ ಮಾಡಿಕೊಂಡ ಗನ್ ಯಾವುದು ಸೇರಿದಂತೆ ಇತರೆ ಘಟನೆಯ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಪಿಸಿಎಲ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದಂತ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರನ್ನು ವರ್ಗಾವಣೆ ಮಾಡಿ ಆದೇಶಿದೆ. ಸಿಎಂ ಸೂಚನೆ ಮೇರೆಗೆ ಪಂಕಜ್ ಕುಮಾರ್ ಪಾಂಡೆಗೆ ನೋಟಿಸ್ ನೀಡಲಾಗಿದ್ದು, ಉಕ್ಷಣವೇ ತಮ್ಮ ಮೇಲಿನ ಗಂಭೀರ ಕರ್ತವ್ಯ ಲೋಪ, ಶಿಸ್ತು ಕ್ರಮದ ಉಲ್ಲಂಘನೆಯ ಬಗ್ಗೆ ಉತ್ತರ ನೀಡುವಂತೆ ಸಿಎಸ್ ಶಾಲಿನಿ ರಜನೀಶ್ ಸೂಚಿಸಿದ್ದರು. ಜನವರಿ.20ರಂದು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಗೆ ಸೂಚಿಸಲಾಗಿತ್ತು. ಆದರೇ ಪಂಕಜ್ ಕುಮಾರ್ ಪಾಂಡೆ ಅವರು ಸರಿಯಾದ ಸಮಯಕ್ಕೆ ಸಿಎಂ ಭೇಟಿಯಾಗದೇ ಕಡೆಗಣಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದಂತ ಸಿಎಂ ಸಿದ್ಧರಾಮಯ್ಯ ಕೆಂಡಾಮಂಡಲರಾಗಿದ್ದರು. ಮುಖ್ಯಮಂತ್ರಿ ಕರೆ ಮೇರೆಗೆ ಹಾಜರಾಗದೇ ಕರ್ತವ್ಯಲೋಪ ಎಸಗಿದ್ದಂತ ಆರೋಪ ಪಂಕಜ್ ಕುಮಾರ್ ಪಾಂಡೆ ಮೇಲಿತ್ತು. ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮಗಳ ಉಲ್ಲಂಘನೆಯ ಹಿನ್ನಲೆಯಲ್ಲಿ ಸಿಎಂ ಶಾಲಿನಿ ರಜನೀಶ್ ಅವರು ಪಂಕಜ್ ಕುಮಾರ್ ಪಾಂಡೆಗೆ ಲಿಖಿತ ನೋಟಿಸ್ ನೀಡಿದ್ದಾರೆ. ತಕ್ಷಣವೇ ಉತ್ತರಿಸುವಂತೆಯೂ ಖಡಕ್ ವಾರ್ನಿಂಗ್ ಮಾಡಿದ್ದರು. ಇದಾದ ಬೆನ್ನಲ್ಲೇ ಕರ್ನಾಟಕ ಪವರ್…
ಬೆಂಗಳೂರು : ‘ಕನ್ನಡ ನಮ್ಮ ಉಸಿರು, ನಮ್ಮ ಜೀವ’ ಕರ್ನಾಟಕದ ಜನತೆಯ ಅಭಿವೃದ್ದಿಯೇ ನಮ್ಮ ಮುಖ್ಯ ಗುರಿ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಮಾರುತಿ ಸೇವಾ ನಗರದ ಬಾಣಸವಾಡಿ ಮುಖ್ಯರಸ್ತೆಯಲ್ಲಿ ಶುಕ್ರವಾರ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಹಾಗೂ ಕೆ.ಜೆ.ಜಾರ್ಜ್ ಮಾತನಾಡಿದರು. “ಅಖಿಲ ಕರ್ನಾಟಕ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಬಸ್ ತಂಗುದಾಣ ನಿರ್ಮಾಣವಾಗಿದೆ. ನಾನು ಡಾ.ರಾಜ್ಕುಮಾರ್ ಅಭಿಮಾನಿ, ಅವರ ಹೆಸರಿನ ಬಸ್ನಿಲ್ದಾಣವನ್ನು ಉದ್ಘಾಟಿಸುತ್ತಿರುವುದು ನನ್ನ ಸೌಭಾಗ್ಯ. ನಮ್ಮ ಕನ್ನಡದ ಧ್ವಜ ಜಾಗತಿಕ ಮಟ್ಟದಲ್ಲಿ ಹಾರಾತ್ತಿದೆ. ಕನ್ನಡವೇ ನನ್ನ ಉಸಿರು, ರಾಜ್ಯದ ಜನರ ಅಭಿವೃದ್ದಿಯೇ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಮುಖ್ಯ ಗುರಿ” ಎಂದರು. “ಸಂಘದವರು ಪ್ರಯಾಣಿಕರಿಗೆ ನೆರಳು, ಮಳೆಯಿಂದ ರಕ್ಷಣೆ ಮತ್ತು ಕುಡಿಯುವ ನೀರಿನ ಸೌಕರ್ಯ ಒದಗಿಸಿಕೊಟ್ಟಿದ್ದಾರೆ. ಇದು ಎಲ್ಲರೂ ಹೆಮ್ಮೆ ಪಡುವ ಕಾರ್ಯಕ್ರಮವಾಗಿದೆ. ಜನ ನೆನಯುವುದು ಒಳ್ಳೆಯ…
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಖಾಲಿ ಇರುವಂತ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಖಾಸಗಿ ಅನುದಾನಿತ ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಲ್ಲಿ 2016 – 2020ರ ಅವಧಿಯಲ್ಲಿ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಬರುವ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಪೂರ್ಣಗೊಳಿಸಲಾಗುವುದು ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. https://twitter.com/KarnatakaVarthe/status/2017218074873925641














