Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: 1948ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ವಿಸರ್ಜನೆ ಮಾಡಲು ಹೇಳಿದ್ದರು. ಕಾಂಗ್ರೆಸ್ ಹೆಸರು ಬದಲಿಸಿ ಲೋಕ ಸೇವಕ ಸಂಘ ಎಂಬ ಹೆಸರು ಇಡಲು, ಮಹಿಳೆಯರು, ಹರಿಜನರು, ಗೋವುಗಳ ರಕ್ಷಣೆಗೆ ನಿಲ್ಲಲು ಹೇಳಿದ್ದರಲ್ಲವೇ? ಈಗ ನಿಮ್ಮ ತಂದೆಯವರೇ ಎಐಸಿಸಿ ಅಧ್ಯಕ್ಷರಿದ್ದಾರೆ. ಮಹಾತ್ಮ ಗಾಂಧಿಯವರ ಆಶಯಕ್ಕೆ ಅನುಗುಣವಾಗಿ ಕಾಂಗ್ರೆಸ್ಸನ್ನು ವಿಸರ್ಜಿಸುವುದು ಯಾವಾಗ ಎಂದು ಯಾಕೆ ಇನ್ನೂ ನೀವು ಪತ್ರ ಬರೆದಿಲ್ಲ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಾಂಕ್ ಖರ್ಗೆಯವರನ್ನು ಪ್ರಶ್ನಿಸಿದ್ದಾರೆ. ಇಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಪ್ರಿಯಾಂಕ್ ಖರ್ಗೆಯವರ ಪ್ರಶ್ನೆಗೆ ಮೋಹನ್ ಭಾಗವತ್ ಅವರು ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಅವರಿಗೆ ಉತ್ತರ ಸಿಕ್ಕಿದೆ ಎಂದುಕೊಳ್ಳುವೆ. ಪ್ರಶ್ನೆ ಕೇಳಿದ ಕಾಂಗ್ರೆಸ್ಸಿನವರು ಗಾಂಪರ ದೊರೆಗಳಾಗಿದ್ದರು ಎಂದು ನುಡಿದರು. ಮೋಹನ್ ಭಾಗವತ್ ಅವರು ಈಗಾಗಲೇ ಉತ್ತರ ಕೊಟ್ಟಿದ್ದಾರೆ. ದೇಶದ ಕಾನೂನು ಒಂದೇ ಎನ್ನುವಿರಲ್ಲವೇ? ಹಾಗಿದ್ದರೆ ನೀವು ಕಾನೂನಿನ ಮೊರೆ ಯಾಕೆ ಹೋಗಿಲ್ಲ ಎಂದು ಕೇಳಿದರು. ಆರೆಸ್ಸೆಸ್…

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ವಾಸಿಸುವ 1.5 ಕೋಟಿ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳು, ಬಿ-ಸ್ಮೈಲ್, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಸೇರಿದಂತೆ ವಿವಿಧ ವಿಷಯಗಳ ಕುರಿತು ಮೊದಲ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಬಹಳಷ್ಟು ಸವಾಲುಗಳನ್ನು ಹೊಂದಿರುವ ನಗರವಾಗಿದೆ. ಸುಮಾರು 1.5 ಕೋಟಿ ಜನರಿಗೆ ಆಶ್ರಯ ತಾಣವಾಗಿರುವ ಈ ನಗರವು ಉದ್ಯೋಗ, ಶಿಕ್ಷಣ ಹಾಗೂ ಉತ್ತಮ ಜೀವನಕ್ಕೆ ಅವಕಾಶ ಕಲ್ಪಿಸುತ್ತಿದೆ. ಬೆಂಗಳೂರು ನಮ್ಮ ರಾಜ್ಯ ಹಾಗೂ ದೇಶದ ಅಮೂಲ್ಯ ಆಸ್ತಿಯಾಗಿದ್ದು, ವಿಶ್ವದ ವಿವಿಧ ಭಾಗಗಳ ಜನರು ಹಾಗೂ ಅನೇಕ ಸಂಸ್ಥೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಬಿಎ ಆಡಳಿತವನ್ನು ಸುಧಾರಣೆ ಮಾಡುವ ದ್ಯೇಯೆಯೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ತಿಳಿಸಿದರು.…

Read More

ನವದೆಹಲಿ: ದೇಶದ ಪ್ರಮುಖ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಅಸ್ತಿತ್ವದ ಶತಮಾನೋತ್ಸವದ (100 ವರ್ಷ) ಸಂದರ್ಭದಲ್ಲಾದರೂ ತನ್ನ ಕಾನೂನುಬದ್ಧ ಸ್ಥಾನಮಾನವನ್ನು ಸ್ಪಷ್ಟಪಡಿಸಬೇಕು ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕರ್ನಾಟಕದ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ. ಈ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವ ಸಚಿವರು, ಸಂವಿಧಾನದ ಚೌಕಟ್ಟಿನಲ್ಲಿ ಯಾವುದೇ ಸಂಸ್ಥೆಯು ಕಾನೂನು ಮೇಲ್ವಿಚಾರಣೆ ಮತ್ತು ಸಾರ್ವಜನಿಕ ಹೊಣೆಗಾರಿಕೆಯಿಂದ ಹೊರಗಿರಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. •ಆರ್‌ಎಸ್‌ಎಸ್ ನೋಂದಣಿ ಎಲ್ಲಿದೆ?: ದೇಶಾದ್ಯಂತ 60,000ಕ್ಕೂ ಹೆಚ್ಚು ದೈನಂದಿನ ಶಾಖೆಗಳನ್ನು ಹಾಗೂ ಕೋಟ್ಯಂತರ ಸ್ವಯಂಸೇವಕರನ್ನು ಹೊಂದಿರುವ ಇಷ್ಟು ದೊಡ್ಡ ಸಂಘಟನೆಯು ಯಾವ ಕಾನೂನಿನ ಆಧಾರದ ಮೇಲೆ ಔಪಚಾರಿಕ ನೋಂದಣಿ (Registration) ಇಲ್ಲದೆ ಇಷ್ಟೊಂದು ವ್ಯಾಪಕವಾಗಿ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ. ಸಂವಿಧಾನದ ಅಡಿಯಲ್ಲಿ ಪ್ರತಿಯೊಂದು ಸಂಸ್ಥೆಯೂ ಕಾನೂನಿನ ಚೌಕಟ್ಟಿಗೆ ಬದ್ಧವಾಗಿರಬೇಕು ಎಂದಿದ್ದಾರೆ. • ಆರ್ಥಿಕ ಮತ್ತು ಆಸ್ತಿ…

Read More

ಶಿವಮೊಗ್ಗ: ಕನ್ನಡ ಸೇನೆಯ ಜಿಲ್ಲಾಧ್ಯಕ್ಷರು, ಸಾಗರ ನಗರಸಭೆಯ ಮಾಜಿ ಸದಸ್ಯರು ಹಾಗೂ ಖ್ಯಾತ ಉದ್ಯಮಿಯಾದ ಟಿಪ್ ಟಾಪ್ ಬಷೀರ್ ಅವರ ಹುಟ್ಟಿದ ಹಬ್ಬದ ಪ್ರಯುಕ್ತ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಟಿಪ್ ಟಾಪ್ ಬಷೀರ್ ಅವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಆಸ್ಪತ್ರೆಯ ಒಳ ರೋಗಿಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸಲಾಯಿತು. ಈ ಮಾನವೀಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಮುಖರಾದ ಮೊಹಮ್ಮದ್ ಅಬ್ಬಾಸ್, ಇರ್ಫಾನ್, ಮನ್ಸೂರ್, ಜಮೀನ್ ಸಾಗರ್, ಅರ್ಬಾಜ್, ರಿಯಾನ್, ತೌಫಿಕ್, ಶಹಬಾಜ್ ಸೇರಿದಂತೆ ಟಿಪ್ ಟಾಪ್ ಬಷೀರ್ ಅವರ ಅಭಿಮಾನಿ ಬಳಗದ ಹಲವು ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು. https://kannadanewsnow.com/kannada/csr-assistance-to-maddur-municipal-council-maddur-mla-k-m-uday/ https://kannadanewsnow.com/kannada/a-surprising-incident-in-the-state-a-veterinarian-revived-a-pregnant-buffalo-that-was-about-to-die/

Read More

ಮಂಡ್ಯ : ಸೋಮನಹಳ್ಳಿ ಮತ್ತು ಗೆಜ್ಜಲಗೆರೆಯ ವಿವಿಧ ಕೈಗಾರಿಕೆಗಳ ಸಿಎಸ್ಆರ್ ನಿಧಿಯಿಂದ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಶಿವಂ ಮತ್ತು ಶಿವಶಕ್ತಿ ಪ್ಲೈವುಡ್ ಕಂಪನಿಗಳ ಸಿಎಸ್ಆರ್ ನಿಧಿಯಿಂದ ಮದ್ದೂರು ನಗರಸಭೆ ಕಛೇರಿಗೆ ಕಂಪ್ಯೂಟರ್ ಗಳನ್ನು ಹಸ್ತಾಂತರ ಮಾಡಿ ಮಾತನಾಡಿದರು. ಗೆಜ್ಜಲಗೆರೆ ಮತ್ತು ಸೋಮನಹಳ್ಳಿ ಕೈಗಾರಿಕಾ ಪ್ರದೇಶಗಳನ್ನು ಮದ್ದೂರು ನಗರಸಭಾ ವ್ಯಾಪ್ತಿಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೈಗಾರಿಕಾ ಪ್ರದೇಶಗಳನ್ನು ಅಂದಾಜು 15 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ರಸ್ತೆ, ಚರಂಡಿ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಈಗಾಗಲೇ ತಾಲೂಕಿನ ಕೈಗಾರಿಕೋದ್ಯಮಿಗಳ ಸಭೆಯನ್ನು ಆಯೋಜಿಸಿ ಅವರಲ್ಲಿ ಕ್ಷೇತ್ರದ ಅಭಿವೃದ್ಧಿಗೆ ನಿಮ್ಮ ಸಹಕಾರವು ಅತ್ಯಗತ್ಯವಾಗಿದ್ದು, ಹೀಗಾಗಿ ಸಿಎಸ್ಆರ್ ನಿಧಿಯಿಂದ ವಿವಿಧ ಕ್ಷೇತ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಲಾಗಿತ್ತು. ಹೀಗಾಗಿ ಶಿವಂ ಮತ್ತು ಶಿವಶಕ್ತಿ ಪ್ಲೈವುಡ್ ಕಂಪನಿಗಳು ನಗರಸಭೆ ಕಛೇರಿಗೆ ಕಂಪ್ಯೂಟರ್ ಗಳನ್ನು ವಿತರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಸ್ಥೆಗಳಿಂದ ಶಿಕ್ಷಣ, ಆರೋಗ್ಯ,…

Read More

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರ (DG & IGP) ಕಾರ್ಯಾಲಯವು ದಿನಾಂಕ 15.06.2026 ರಂದು ಅತ್ಯಂತ ಮಹತ್ವದ ಸ್ಥಾಯಿ ಆದೇಶವೊಂದನ್ನು (ಸ್ಥಾಯಿ ಆದೇಶ ಸಂಖ್ಯೆ – 1061) ಹೊರಡಿಸಿದೆ. ಒಬ್ಬ ವ್ಯಕ್ತಿಯ ಅನುಮತಿಯಿಲ್ಲದೆ ಆತನ/ಆಕೆಯ ಖಾಸಗಿ ಅಥವಾ ಆಪ್ತ ಚಿತ್ರಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಜಾಲತಾಣ ಇಲ್ಲವೇ ಇಂಟರ್ನೆಟ್‌ನಲ್ಲಿ ಪ್ರಕಟಿಸುವ ಅಥವಾ ಪ್ರಸಾರ ಮಾಡುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಮತ್ತು ಇಂತಹ ದೂರುಗಳ ನಿರ್ವಹಣೆಗೆ ಕಟ್ಟುನಿಟ್ಟಾದ ಹೊಸ ಮಾರ್ಗಸೂಚಿಗಳನ್ನು ಪೊಲೀಸ್ ಅಧಿಕಾರಿಗಳಿಗೆ ನೀಡಲಾಗಿದೆ. ಈ ಕುರಿತು ಸಾರ್ವಜನಿಕರು ಹಾಗೂ ಕಾನೂನು ಜಾರಿ ಅಧಿಕಾರಿಗಳು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ಪ್ರಮುಖ ಕಾನೂನು ಅಂಶಗಳು ಮತ್ತು ಮಾರ್ಗಸೂಚಿಗಳ ವಿವರ ಇಲ್ಲಿದೆ: ಚಿತ್ರೀಕರಣಕ್ಕೆ ನೀಡಿದ ‘ಒಪ್ಪಿಗೆ’, ಪ್ರಸಾರಕ್ಕೆ ನೀಡಿದ ‘ಅನುಮತಿ’ ಅಲ್ಲ! ಅನೇಕ ಪ್ರಕರಣಗಳಲ್ಲಿ ಸಂತ್ರಸ್ತರು ಮೊದಲು ಚಿತ್ರ ಅಥವಾ ವೀಡಿಯೊಗಳನ್ನು ಚಿತ್ರೀಕರಿಸಲು ಒಪ್ಪಿಗೆ ನೀಡಿದ್ದರು ಎಂಬ ಕಾರಣದ ಆಧಾರದ ಮೇಲೆ ಕೆಲವು ಪೊಲೀಸ್ ಠಾಣೆಗಳಲ್ಲಿ ದೂರು ಸ್ವೀಕರಿಸಲು ನಿರಾಕರಿಸುತ್ತಿರುವುದು ಅಥವಾ…

Read More

ಬೆಂಗಳೂರು: ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೂಡಿದ್ದ ಅಸಮಾಧಾನ ಕೊನೆಗೂ ತಣ್ಣಗಾಗಿದ್ದು, ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಅಧಿಕೃತವಾಗಿ ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ (GBA Minister) ಜಿಬಿಎ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆ್ಯಕ್ಷನ್ ಮೂಡ್‌ಗೆ ಜಾರಿದ ಸಚಿವರು, ನಗರದ ಜ್ವಲಂತ ಸಮಸ್ಯೆಗಳ ಕುರಿತು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐದು ಜಿಬಿಎ ಆಯುಕ್ತರ ಜೊತೆ ಸರಣಿ ಸಭೆ: ಅಧಿಕಾರ ಸ್ವೀಕರಿಸಿದ ತಕ್ಷಣವೇ ಸಚಿವ ಕೃಷ್ಣ ಬೈರೇಗೌಡ ಅವರು ಐದು ಜಿಬಿಎ ಆಯುಕ್ತರ ಮಹತ್ವದ ಸಭೆ ನಡೆಸಿದರು. ಜಿಬಿಎ ವ್ಯಾಪ್ತಿಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಪ್ರಗತಿ ಹಾಗೂ ಮುಂಬರುವ ಯೋಜನೆಗಳ ಕುರಿತು ಆಯುಕ್ತರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. “ಬೆಂಗಳೂರು ಅಂದರೆ ಗುಂಡಿ ಯಾಕೆ?” – ಅಧಿಕಾರಿಗಳಿಗೆ ಕ್ಲಾಸ್: ಸಭೆಯ ಉದ್ದಕ್ಕೂ ನಗರದ ರಸ್ತೆಗಳ ದುಸ್ಥಿತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಅಧಿಕಾರಿಗಳಿಗೆ ಸರಿಯಾಗಿಯೇ ಕ್ಲಾಸ್ ತಗೆದುಕೊಂಡರು. ರಸ್ತೆ ಗುಂಡಿಗಳ ವಿಚಾರವಾಗಿ…

Read More

ಪೋಷಕರು ಬುಧವಾರದಂದು 27 ಬಾರಿ ಈ ಮಂತ್ರವನ್ನು ಪಠಿಸಬೇಕು. ನಿಮ್ಮ ಮಕ್ಕಳು ಚೆನ್ನಾಗಿ ಓದುತ್ತಾರೆ ಮತ್ತು ಅವರ ಭವಿಷ್ಯ ಉಜ್ವಲವಾಗುತ್ತದೆ. ಪರೀಕ್ಷೆ ಹತ್ತಿರ ಸಮೀಪಿಸುತ್ತಿದೆ, ಮಕ್ಕಳು ಚೆನ್ನಾಗಿ ಓದಲು ಪೋಷಕರು ಪ್ರಾರ್ಥಿಸಲು ಹೇಳಬೇಕಾದ ಮಂತ್ರ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ,…

Read More

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಬಳಿ ನಡೆದಿದೆ. ಅಪಘಾತದಲ್ಲಿ ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಚರ್ಚೆಗೆ ತೆರಳುತ್ತಿದ್ದಾಗ ಅಪಘಾತ: ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಲಾಗಿತ್ತು. ಈ ಕೇಸ್‌ಗೆ ಸಂಬಂಧಿಸಿದಂತೆ ಪ್ರಮುಖ ಚರ್ಚೆ ಹಾಗೂ ತನಿಖಾ ಪ್ರಕ್ರಿಯೆಗಾಗಿ ಎಸ್‌ಐಟಿ ಅಧಿಕಾರಿಗಳ ತಂಡ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಚಾರ್ಮಾಡಿ ಘಾಟ್ ಪ್ರದೇಶದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಸ್ಥಳೀಯರ ನೆರವು: ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಹತ್ತಿರದಲ್ಲಿದ್ದ ಸಾರ್ವಜನಿಕರು ಧಾವಿಸಿ ಬಂದು ಕಾರಿನಲ್ಲಿದ್ದ ಅಧಿಕಾರಿಗಳನ್ನು ಹೊರತೆಗೆಯಲು ನೆರವಾಗಿದ್ದಾರೆ. ಗಾಯಾಳುಗಳಿಗೆ…

Read More

ಬೆಂಗಳೂರು: ಫಿಟ್‌ನೆಸ್ ಕಾಪಾಡಿಕೊಳ್ಳಬೇಕು, ಡಯಟ್ ಮಾಡಬೇಕು ಅನ್ನೋ ಕಾರಣಕ್ಕೆ ಎಷ್ಟೋ ಜನರು ತಮ್ಮ ಇಷ್ಟದ ಬಿರಿಯಾನಿ, ಬರ್ಗರ್ ತಿನ್ನುವುದನ್ನು ಬಿಡುತ್ತಾರೆ. ಆದರೆ ಇನ್ನು ಮುಂದೆ ಹಾಗೆ ಮಾಡಬೇಕಾಗಿಲ್ಲ. ಇದಕ್ಕೆ ಕಾರಣ, ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ. ಹೌದು, ಸ್ವಿಗ್ಗಿ ಬೆಂಗಳೂರಿನಲ್ಲಿ ವಿಶೇಷ ‘ಈಟ್‌ರೈಟ್ ಎಕ್ಸ್‌ಕ್ಲೂಸಿವ್ಸ್’ ಅನ್ನು ಆರಂಭಿಸಿದೆ. ಇದರಲ್ಲಿ ನಗರದ ದಿಗ್ಗಜ ಹೋಟೆಲ್ ಬ್ರ್ಯಾಂಡ್‌ಗಳಾದ ಟ್ರಫಲ್ಸ್, ಎ2ಬಿ (ಅಡ್ಯಾರ್ ಆನಂದ ಭವನ್), ಬಿರಿಯಾನಿ ಬ್ಲೂಸ್, ದಿ ಬೌಲ್ ಕಂಪನಿ, ಪಾಟ್‌ಫುಲ್ ಸೇರಿದಂತೆ ಹಲವು ಸಂಸ್ಥೆಗಳ ಜೊತೆ ಸ್ವಿಗ್ಗಿ ಕೈಜೋಡಿಸಿದೆ. ಇವು ಹೆಚ್ಚಿನ ಪ್ರೋಟೀನ್ ಮತ್ತು ಕಡಿಮೆ ಕ್ಯಾಲೋರಿ ಇರುವ ರುಚಿಕರ ಖಾದ್ಯಗಳನ್ನು ತಯಾರಿಸಿದ್ದು, ಇವುಗಳನ್ನು ಆ್ಯಪ್‌ನಲ್ಲಿ ಪರಿಚಯಿಸಲಾಗಿದೆ. ಬರ್ಗರ್, ಬಿರಿಯಾನಿ ಇನ್ಮುಂದೆ ‘ಹೆಲ್ತಿ’ & ‘ಟೇಸ್ಟಿ’! ಹೋಟೆಲ್‌ಗಳು ಕಳೆದ 10-12 ವಾರಗಳಿಂದ ನಿರಂತರವಾಗಿ ಶ್ರಮಿಸಿ, ತಮ್ಮ ಜನಪ್ರಿಯ ಖಾದ್ಯಗಳ ರುಚಿ ಕೆಡದಂತೆ, ಅವುಗಳನ್ನು ಆರೋಗ್ಯಕರವಾಗಿ ವಿನ್ಯಾಸಗೊಳಿಸಿವೆ. ಇದರ ಅಡಿಯಲ್ಲಿ ಗ್ರಾಹಕರಿಗೆ ಹಲವು ಆಯ್ಕೆಗಳನ್ನು ನೀಡಲಾಗಿದೆ. ಅವುಗಳಲ್ಲಿ ಒಂದಿಷ್ಟು…

Read More