Author: kannadanewsnow09

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿದೆ, ಜೊತೆಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕೇವಲ ಎಲ್‌ಪಿಜಿ (LPG) ಮೇಲೆ ಅವಲಂಬಿತವಾಗುವ ಬದಲು, ಲಭ್ಯವಿರುವ ಇತರ ಆಧುನಿಕ ಮತ್ತು ಸಾಂಪ್ರದಾಯಿಕ ಪರ್ಯಾಯಗಳನ್ನು ಬಳಸುವುದು ಹೆಚ್ಚು ಸೂಕ್ತ. ಅಡುಗೆಗಾಗಿ ನೀವು ಬಳಸಬಹುದಾದ ಕೆಲವು ಪ್ರಮುಖ ಪರ್ಯಾಯ ಮಾರ್ಗಗಳು ಇಲ್ಲಿವೆ: 1. ಇಂಡಕ್ಷನ್ ಸ್ಟೌವ್ (Induction Stove): ಗ್ಯಾಸ್‌ಗೆ ಅತ್ಯಂತ ವೇಗವಾದ ಮತ್ತು ಸುರಕ್ಷಿತವಾದ ಪರ್ಯಾಯವೆಂದರೆ ಇಂಡಕ್ಷನ್ ಸ್ಟೌವ್. ಇದು ವಿದ್ಯುತ್ ಮೂಲಕ ಕಾರ್ಯನಿರ್ವಹಿಸುತ್ತದೆ. ಗ್ಯಾಸ್‌ಗೆ ಹೋಲಿಸಿದರೆ ಇದು ಕಡಿಮೆ ಖರ್ಚಿನಲ್ಲಿ ಅಡುಗೆ ಮಾಡಲು ಸಹಾಯ ಮಾಡುತ್ತದೆ ಮತ್ತು ಇದನ್ನು ಬಳಸುವುದರಿಂದ ಬೆಂಕಿಯ ಅಪಾಯವೂ ಇರುವುದಿಲ್ಲ. 2. ಸೋಲಾರ್ ಕುಕ್ಕರ್ (Solar Cooker): ನೈಸರ್ಗಿಕ ಸೂರ್ಯನ ಬೆಳಕನ್ನು ಬಳಸಿಕೊಂಡು ಅಡುಗೆ ಮಾಡುವುದು ಅತ್ಯಂತ ಕಡಿಮೆ ವೆಚ್ಚದ ಮಾರ್ಗವಾಗಿದೆ. ಸೋಲಾರ್ ಕುಕ್ಕರ್ ಬಳಕೆಯಿಂದ ಪರಿಸರಕ್ಕೂ ಲಾಭ, ನಿಮ್ಮ ಜೇಬಿಗೂ ಉಳಿತಾಯ. ಒಮ್ಮೆ ಹೂಡಿಕೆ ಮಾಡಿದರೆ ಸಾಕು, ಮುಂದಿನ ದಿನಗಳಲ್ಲಿ…

Read More

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸದಾ ರಿಯಾಯಿತಿ ದರದ ಪಾಸ್‌ಗಳನ್ನು ನೀಡುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC), ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯವೊಂದನ್ನು ಘೋಷಿಸಿದೆ. ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಸುದ್ದಿಯ ಪ್ರಮುಖ ಅಂಶಗಳು: ಉಚಿತ ಪ್ರಯಾಣದ ಅವಧಿ: ದಿನಾಂಕ 18.03.2026 ರಿಂದ 02.04.2026 ರವರೆಗೆ ಪರೀಕ್ಷೆ ನಡೆಯುವ ದಿನಗಳಂದು ಈ ಸೌಲಭ್ಯ ಅನ್ವಯವಾಗಲಿದೆ. ಪ್ರವೇಶ ಪತ್ರವೇ ಟಿಕೆಟ್: ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗಲು ಮತ್ತು ಮರಳಲು ಬಸ್‌ ಕಂಡಕ್ಟರ್‌ಗೆ ಪರೀಕ್ಷಾ ಪ್ರವೇಶ ಪತ್ರ (Hall Ticket) ತೋರಿಸಿದರೆ ಸಾಕು. ಯಾವುದೇ ಟಿಕೆಟ್ ಪಡೆಯುವ ಅಗತ್ಯವಿರುವುದಿಲ್ಲ. ಸಾಮಾನ್ಯ ಸೇವೆಗಳಿಗೆ ಮಾತ್ರ: ಈ ಸೌಲಭ್ಯವು ಸಂಸ್ಥೆಯ ಸಾಮಾನ್ಯ ಬಸ್‌ ಸೇವೆಗಳಲ್ಲಿ ಮಾತ್ರ ಲಭ್ಯವಿರುತ್ತದೆ (ವೇಗದೂತ ಅಂದರೆ ಸುಪರ್ ಫಾಸ್ಟ್ ಸೇವೆಗಳನ್ನು ಹೊರತುಪಡಿಸಿ). ವಿದ್ಯಾರ್ಥಿಗಳ ಅನುಕೂಲಕ್ಕಾಗಿ…

Read More

ಬೆಂಗಳೂರು: ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಪೂರೈಕೆ ವ್ಯತ್ಯಯದ ಹಿನ್ನಲೆಯಲ್ಲಿ, ಬೆಂಗಳೂರಿನ ವಿಜಯನಗರದ ಪುಡ್ ಸ್ಟ್ರೀಟ್ ನಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಹೌದು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನಲೆಯಲ್ಲಿ ಬೆಂಗಳೂರಿನ ವಿಜಯನಗರದಲ್ಲಿನ ಪುಡ್ ಸ್ಟ್ರೀಟ್ ನಲ್ಲಿನ ಅಂಗಡಿ-ಮುಂಗಟ್ಟನ್ನು ಬಂದ್ ಮಾಡಲಾಗಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಸಿಗದೇ ಇರುವುದರಿಂದ ಅಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ. ಬೆಂಗಳೂರಿನ ವಿಜಯನಗರದಲ್ಲಿನ ಪುಡ್ ಸ್ಟ್ರೀಟ್ ನಲ್ಲಿ ಕೆಲವರು ಸೌದೆ ಒಲೆಯಲ್ಲಿ ಅಡುಗೆ ಮಾಡ್ತಿದ್ದರೇ, ಕೆಲವು ವ್ಯಾಪಾರಿಗಳು ಚಾರ್ ಕೋಲ್ ಬಳಸಿ ಅಡುಗೆ ಮಾಡುತ್ತಿರುವುದು ಕಂಡು ಬಂದಿದೆ. https://kannadanewsnow.com/kannada/lpg-cylinder-shortage-in-the-assembly-intense-war-of-words-between-the-ruling-and-opposition-parties/ https://kannadanewsnow.com/kannada/no-need-to-invest-do-this-for-2-hours-a-day-and-earn-rs-1-lakh-per-month-guaranteed/

Read More

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಇಂದು ವಿಧಾನಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ಸಂಘರ್ಷಕ್ಕೆ ಕಾರಣವಾಯಿತು. ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಹಾಗೂ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಕುರಿತಾದ ಆರೋಪ-ಪ್ರತ್ಯಾರೋಪಗಳಿಂದ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಮೋದಿ ಹೆಸರು ಕೇಳಿ ಕೆರಳಿದ ಬಿಜೆಪಿ ಶೂನ್ಯವೇಳೆಯಲ್ಲಿ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ಗ್ಯಾಸ್ ಅಭಾವದ ಬಗ್ಗೆ ಗಮನ ಸೆಳೆದರು. “900 ರೂಪಾಯಿ ಇದ್ದ ಸಿಲಿಂಡರ್‌ಗೆ ಇಂದು 1,800 ರೂಪಾಯಿ ನೀಡಬೇಕಾದ ಪರಿಸ್ಥಿತಿ ಬಂದಿದೆ. ಇದಕ್ಕೆ ಪ್ರಧಾನಿ ಮೋದಿ ಸರ್ಕಾರದ ದುರ್ಬಲ ವಿದೇಶಾಂಗ ನೀತಿಯೇ ಕಾರಣ” ಎಂದು ಆರೋಪಿಸಿದರು. ಪ್ರಧಾನಿ ಮೋದಿ ಹೆಸರು ಪ್ರಸ್ತಾಪಿಸುತ್ತಿದ್ದಂತೆ ಬಿಜೆಪಿ ಸದಸ್ಯರು ರಂಗನಾಥ್ ವಿರುದ್ಧ ಮುಗಿಬಿದ್ದು, ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪ್ರಿಯಾಂಕ್ ಖರ್ಗೆ ವರ್ಸಸ್ ಸುನಿಲ್ ಕುಮಾರ್ ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಪ್ರಿಯಾಂಕ್ ಖರ್ಗೆ, “ದೇಶದ ಆರ್ಥಿಕ ಮತ್ತು ವಿದೇಶಾಂಗ ನೀತಿ ಏನಾಗಿದೆ? ಪ್ರಧಾನಿಯವರು ಇಷ್ಟೆಲ್ಲಾ…

Read More

ಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ‘ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಧಾರವು, ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ವಿಷಯದಲ್ಲಿ ತೋರುತ್ತಿರುವ ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ. ನೆರೆಯ ರಾಜ್ಯಕ್ಕೆ ‘ಬೆಣ್ಣೆ’, ನಮಗೆ ‘ಸುಣ್ಣ’ ಎನ್ನುವ ಕೇಂದ್ರದ ಈ ಧೋರಣೆ ಸರ್ವಥಾ ಸರಿಯಲ್ಲ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಕಿಡಿ ಕಾರಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ತಮಿಳುನಾಡು ಚುನಾವಣೆಯ ಮೇಲೆ ಕಣ್ಣಿಟ್ಟು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರಬಹುದು. ಆದರೆ, ನಮ್ಮ ರಾಜ್ಯದ ಬೇಡಿಕೆಯ ಬಗ್ಗೆ ಕೇಂದ್ರವು ಪ್ರದರ್ಶಿಸುತ್ತಿರುವ ಉದಾಸೀನ ಮನೋಭಾವವು ಪ್ರಶ್ನಾರ್ಹವಾಗಿದೆ ಎಂದಿದ್ದಾರೆ. ಉತ್ತರ ಕರ್ನಾಟಕದ ಆರ್ಥಿಕ ಪ್ರಗತಿಯ ದೃಷ್ಟಿಯಿಂದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವವಂತೆ ಕೋರಿ 24 ಜೂನ್ 2025 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಕೆ. ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಇಷ್ಟಾಗಿಯೂ…

Read More

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ದಿಢೀರ್ ಯುದ್ಧದ ಪರಿಣಾಮ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದೆಲ್ಲ ಗೊತ್ತಿದ್ದೂ ಕಾಂಗ್ರೆಸ್‍ನವರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡ್ತಾ ಇದ್ದಾರೆ. ಇದು ಕಾಂಗ್ರೆಸ್‍ನವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ವಿಧಾನಸೌದ ಬಳಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ದಾಖಲೆಯ ಬಜೆಟ್ ಮಂಡಿಸಿದರು. ಆದರೆ ರಾಜ್ಯದ ಪರಿಸ್ಥಿತಿ ಎಲ್ಲಿಗೆ ಬಂದು ಮುಟ್ಟಿದೆ ಎಂದರೆ ಪೆÇಲೀಸ್ ಇಲಾಖೆಯಲ್ಲಿ ಸಿಬ್ಬಂದಿಗೆ ವೇತನ ಕೊಡಲೂ ಸಾಧ್ಯವಾಗಿಲ್ಲ. ಕಳೆದ ಫೆಬ್ರುವರಿ ತಿಂಗಳ ವೇತನವನ್ನೇ ನೀಡಲಾಗದ ಸ್ಥಿತಿಗೆ ರಾಜ್ಯ ಸರ್ಕಾರ ಬಂದಿದೆ. ರಾಜ್ಯ ದಿವಾಳಿಯತ್ತ ಸಾಗುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು. ದಾಖಲೆಯ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಸುವರ್ಣ ಅವಕಾಶ ಇತ್ತು. ಆದರೆ ಅವರು ಅದನ್ನು ಬಳಸಿಕೊಳ್ಳಲಿಲ್ಲ. ಎಲ್ಲವನ್ನೂ ಕೈಚೆಲ್ಲಿ ಕೂತಿದ್ದಾರೆ…

Read More

ಬೆಂಗಳೂರು: ವೆಬ್ ಕಾಸ್ಟಿಂಗ್ ಹಾಗೂ ಮುಖ ಚಹರೆ ಪತ್ತೆ ತಂತ್ರಜ್ಞಾನ ಬಳಸಿಕೊಂಡು ಅತ್ಯಂತ ಪಾರದರ್ಶಕವಾಗಿ ವಿವಿಧ ಪರೀಕ್ಷೆಗಳನ್ನು ನಡೆಸುತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇಲ್ಲಿನ ಕಚೇರಿಗೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳ ನಿಯೋಗ‌ ಬುಧವಾರ ಭೇಟಿ ನೀಡಿ ಸಮಗ್ರ ಪರೀಕ್ಷಾ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಿತು. ಭಾರತ ಸರ್ಕಾರದ ಉಪ ಕಾರ್ಯದರ್ಶಿ ದರ್ಜೆಯ ಅಧಿಕಾರಿಗಳಾದ ರಮಣ್ ಕುಮಾರ್ ಮತ್ತು ಕೆ.ಮನೋಜ್ ಅವರ ನಿಯೋಗದ ಜತೆ ಚಿತ್ರದುರ್ಗ ಜಿಪಂ ಸಿಇಒ ಡಾ.ಆಕಾಶ್ ಅವರು ಕೂಡ ಹಾಜರಿದ್ದರು. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪರೀಕ್ಷಾ ಅಕ್ರಮಗಳಿಗೆ ಹೇಗೆ ಕಡಿವಾಣ ಹಾಕಲಾಗಿದೆ ಎಂಬುದರ ಬಗ್ಗೆ ನಿಯೋಗಕ್ಕೆ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ವೆಬ್ ಕಾಸ್ಟಿಂಗ್, ಅಭ್ಯರ್ಥಿಯು ಪರೀಕ್ಷಾ ಕೇಂದ್ರಕ್ಕೆ ಬಂದ ನಂತರ ನಡೆಸುವ ತಪಾಸಣೆ, ಮುಖ ಚಹರೆ ಪತ್ತೆ ಮೂಲಕ ಅಭ್ಯರ್ಥಿಯ ನೈಜತೆ ತಿಳಿಯುವುದು, ಹಾಜರಾತಿ, ಪರೀಕ್ಷೆ ಮುಗಿದ ತಕ್ಷಣ ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಹಾಗೂ ಫಲಿತಾಂಶ ಪ್ರಕಟಣೆ- ಇಷ್ಟೂ ಹಂತಗಳ…

Read More

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಹಿರಿಯ ನಾಯಕ ಲಿಂಗರಾಜ್ ಪಾಟೀಲ್ ಅವರು ಬಿಜೆಪಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಟಿಕೆಟ್ ಕೈತಪ್ಪಿದ್ದೇ ರಾಜೀನಾಮೆಗೆ ಕಾರಣ ಮಂಗಳವಾರ ಬಿಜೆಪಿ ಹೈಕಮಾಂಡ್ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ಪಶ್ಚಿಮ ಪದವೀಧರ ಕ್ಷೇತ್ರದಿಂದ ಪ್ರಬಲ ಆಕಾಂಕ್ಷಿಯಾಗಿದ್ದ ಲಿಂಗರಾಜ್ ಪಾಟೀಲ್ ಅವರಿಗೆ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ, ಪಕ್ಷವು ಎಸ್.ವಿ. ಸಂಕನೂರ ಅವರಿಗೆ ಟಿಕೆಟ್ ಘೋಷಣೆ ಮಾಡಿರುವುದು ಪಾಟೀಲರ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯಾಧ್ಯಕ್ಷರಿಗೆ ಪತ್ರದ ಮೂಲಕ ಅಳಲು ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸಲ್ಲಿಸಿರುವ ಅವರು, ತಮ್ಮ ನೋವನ್ನು ಈ ಕೆಳಗಿನಂತೆ ವ್ಯಕ್ತಪಡಿಸಿದ್ದಾರೆ: ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಲು ಅವಕಾಶ ಸಿಗುವ ವಿಶ್ವಾಸವಿತ್ತು,…

Read More

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್-2 ರಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟಿ ಬೆಲೆಬಾಳುವ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ: ಮಂಗಳವಾರ (ಮಾರ್ಚ್ 10, 2026) ಬ್ಯಾಂಕಾಕ್‌ನಿಂದ ಬಂದಿಳಿದ ಪ್ರಯಾಣಿಕನೊಬ್ಬನ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆಗೊಳಪಡಿಸಿದರು. ಈ ವೇಳೆ ಆತನ ಚೆಕ್-ಇನ್ ಲಗೇಜ್‌ನಲ್ಲಿ ಬಚ್ಚಿಟ್ಟಿದ್ದ 4.5 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಜಪ್ತಿ ಮಾಡಿದ ಮಾಲು: 4.5 ಕೆಜಿ ಹೈಡ್ರೋಪೋನಿಕ್ ಗಾಂಜಾ. ಅಂದಾಜು ಮೌಲ್ಯ: ಸುಮಾರು 1.57 ಕೋಟಿ ರೂಪಾಯಿ. ಕಾರ್ಯಾಚರಣೆ ನಡೆದ ಸ್ಥಳ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಟರ್ಮಿನಲ್-2. ಕಾನೂನು ಕ್ರಮ: ಮಾದಕ ವಸ್ತುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎನ್‌.ಡಿ.ಪಿ.ಎಸ್ (NDPS) ಕಾಯ್ದೆ 1985 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಲಾಗಿದೆ. ಈ ಜಾಲದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ. https://twitter.com/blrcustoms/status/2031601117952618533

Read More

ನವದೆಹಲಿ: ಭಾರತದ ಕೋಟ್ಯಂತರ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್, ಟ್ಯಾಬ್ಲೆಟ್ ಮತ್ತು ಸ್ಮಾರ್ಟ್‌ವಾಚ್‌ಗಳು ಹ್ಯಾಕಿಂಗ್ ಭೀತಿಯನ್ನು ಎದುರಿಸುತ್ತಿವೆ ಎಂದು ಕೇಂದ್ರ ಸರ್ಕಾರ ಗಂಭೀರ ಎಚ್ಚರಿಕೆ ನೀಡಿದೆ. ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂನಲ್ಲಿರುವ ಕೆಲವು ತಾಂತ್ರಿಕ ದೋಷಗಳನ್ನು ಬಳಸಿಕೊಂಡು ಹ್ಯಾಕರ್ಸ್ ನಿಮ್ಮ ವೈಯಕ್ತಿಕ ಮಾಹಿತಿ ಕದಿಯುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ​ಸರ್ಕಾರದ ಎಚ್ಚರಿಕೆಯಲ್ಲಿ ಏನಿದೆ? ಭಾರತದ ರಾಷ್ಟ್ರೀಯ ಸೈಬರ್ ಭದ್ರತಾ ಸಂಸ್ಥೆಯಾದ ‘ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್’ (CERT-In) ಈ ಕುರಿತು ವರದಿ ಬಿಡುಗಡೆ ಮಾಡಿದೆ. ಈ ತಾಂತ್ರಿಕ ದೋಷಗಳನ್ನು ‘ಅತ್ಯಂತ ಅಪಾಯಕಾರಿ’ (High Risk) ಎಂದು ವರ್ಗೀಕರಿಸಲಾಗಿದ್ದು, ಇವುಗಳ ಮೂಲಕ ಹ್ಯಾಕರ್ಸ್ ನಿಮ್ಮ ಅನುಮತಿಯಿಲ್ಲದೆಯೇ ಡಿವೈಸ್‌ಗಳನ್ನು ಪ್ರವೇಶಿಸಬಹುದು. ​ಯಾವ ಡಿವೈಸ್‌ಗಳಿಗೆ ಅಪಾಯ ಹೆಚ್ಚು? ವಿಶೇಷವಾಗಿ ಕ್ವಾಲ್ಕಾಮ್ (Qualcomm) ಮತ್ತು ಮೀಡಿಯಾಟೆಕ್ (MediaTek) ಚಿಪ್‌ಸೆಟ್‌ಗಳನ್ನು ಬಳಸುವ ಫೋನ್‌ಗಳಲ್ಲಿ ಈ ದೋಷ ಕಂಡುಬಂದಿದೆ. ​ಆಂಡ್ರಾಯ್ಡ್ ಆವೃತ್ತಿ: ಆಂಡ್ರಾಯ್ಡ್ 13, 14, 15 ಮತ್ತು ಆರಂಭಿಕ ಹಂತದ ಆಂಡ್ರಾಯ್ಡ್ 16 ಆವೃತ್ತಿಗಳಲ್ಲಿ ಕಾರ್ಯನಿರ್ವಹಿಸುವ ಸಾಧನಗಳಿಗೆ ಹೆಚ್ಚಿನ ಅಪಾಯವಿದೆ.…

Read More