Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಳಂಬವಾದರೆ ಕಾನೂನು ಕ್ರಮ: ಗಣತಿ ಕಾರ್ಯಕ್ಕಾಗಿ ನೇಮಕಗೊಂಡಿರುವ ಸಿಬ್ಬಂದಿಗಳು ಸಕಾಲಕ್ಕೆ ಕರ್ತವ್ಯಕ್ಕೆ ಹಾಜರಾಗದಿದ್ದರೆ, ಸಂಬಂಧಪಟ್ಟ ಇಲಾಖೆಗಳ ಬಟವಾಡೆ ಅಧಿಕಾರಿಗಳ (DDO) ವಿರುದ್ಧ ಜನಗಣತಿ ಕಾಯ್ದೆ 1948 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಅಡಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ವರದಿಯ ಮುಖ್ಯಾಂಶಗಳು: ಗಣತಿ ಆರಂಭ: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್ 16, 2026 ರಿಂದಲೇ ಮೊದಲ ಹಂತದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಿದೆ. ಸಿಬ್ಬಂದಿ ಕೊರತೆ: ವಿವಿಧ ಇಲಾಖೆಗಳಿಂದ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದರೂ, ಅವರು ಕರ್ತವ್ಯಕ್ಕೆ ಹಾಜರಾಗದ ಕಾರಣ ನಿಗದಿತ ಕಾಲಮಿತಿಯಲ್ಲಿ ಕೆಲಸ ಮುಗಿಸಲು ಅಡ್ಡಿಯಾಗುತ್ತಿದೆ. ಪತ್ರ ಬರೆಯಲಾದ ಇಲಾಖೆಗಳು: ಬೆಸ್ಕಾಂ, ಬೆಂಗಳೂರು ಜಲಮಂಡಳಿ (BWSSB),…
ದಾವಣಗೆರೆ : ದಾವಣಗೆರೆಯ ಚಾಮರಾಜಪೇಟೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಗುರುವಾರ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ಪರಿಶೀಲನೆಯ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಉತ್ತಮ ಆರೋಗ್ಯ ಸೇವೆಗಳನ್ನು ನೀಡುವ ದಿಕ್ಕಿನಲ್ಲಿ ಕ್ರಮ ಕೈಗೊಳ್ಳುವುದು ಅತ್ಯಂತ ಮುಖ್ಯ ಎಂದು ಹೇಳಿದರು. ವೈದ್ಯರು ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ಎಚ್ಚರಿಕೆ ನೀಡಿದ ಅವರು, ಆಸ್ಪತ್ರೆಯ ಸೇವೆಯನ್ನು ಕಡೆಗಣಿಸಿ ಖಾಸಗಿ ಕ್ಲಿನಿಕ್ಗಳಿಗೆ ಆದ್ಯತೆ ನೀಡುವ ವೈದ್ಯರು ತಕ್ಷಣವೇ ಸೇವೆಯಿಂದ ದೂರವಾಗಬಹುದು ಎಂದು ಕಿಡಿಕಾರಿದರು. ಸೇವಾ ಮನೋಭಾವ ಹೊಂದಿರುವ ವೈದ್ಯರನ್ನು ನೇಮಿಸಿ ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದು ಆಡಳಿತದ ಜವಾಬ್ದಾರಿ ಎಂದು ಡಿಹೆಚ್ಒ ಅವರಿಗೆ ಸೂಚಿಸಿದರು. ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆಯಿಂದ ಪಿಜಿ ವೈದ್ಯರೇ ಹೆಚ್ಚಿನ ರೋಗಿಗಳನ್ನು ನೋಡುತ್ತಿದ್ದಾರೆ ಎಂಬ ದೂರುಗಳು…
ಬೆಂಗಳೂರು: ರಾಜ್ಯ ಸರ್ಕಾರ ಕೊಡ ಮಾಡುವ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ, ಕೆಯುಡಬ್ಲೂಜೆ ಹಿರಿಯ ಸದಸ್ಯರು, ಹೊಸತು ಪತ್ರಿಕೆ ಸಂಪಾದಕರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಕಳೆದ ನಾಲ್ಕು ದಶಕಗಳಿಂದಲೂ ಸಾರ್ವಜನಿಕ ಜೀವನದಲ್ಲಿರುವ ಡಾ.ಸಿದ್ಧನಗೌಡ ಪಾಟೀಲರು, ಒಬ್ಬ ಪತ್ರಕರ್ತರಾಗಿ, ಸಾಹಿತಿಯಾಗಿ, ಜನಪರ ಚಳವಳಿಗಾರರಾಗಿ ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಸದಾ ಕಾಪಿಟ್ಟುಕೊಂಡು ಬಂದಿರುವುದನ್ನು ಸಭೆಯಲ್ಲಿ ಶ್ಲಾಸಲಾಯಿತು. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕರಾದ ಕೇಸರಿ ಹರವು ಮಾತನಾಡಿ, ಬದ್ಧತೆಗೆ ಮತ್ತೊಂದು ಹೆಸರೇ ಸಿದ್ದನಗೌಡ ಪಾಟೀಲರು. ವಿದ್ಯಾರ್ಥಿ ಚಳವಳಿಯಿಂದ ಹಿಡಿದು, ಬಾಗೂರು ನವಿಲೆ ಸುರಂಗ ಸಂತ್ರಸ್ತರ ಚಳವಳಿ ಸೇರಿದಂತೆ ನೂರಾರು ಚಳವಳಿಯನ್ನು ಸಂಘಟಿಸಿದವರು, ಈಗಲೂ ಅಷ್ಟೇ ಸರಳವಾಗಿರುವುದು ವಿಶೇಷ. ಸಿದ್ದನಗೌಡ ಅವರಿಗೆ ಪ್ರಶಸ್ತಿ ನೀಡಿದ್ದರಿಂದ ಈ ಪ್ರಶಸ್ತಿ ಮೌಲ್ಯವೇ ಹೆಚ್ಚಾಗಿದೆ ಎಂದು ಹೇಳಿದರು. ಹಿರಿಯ ಪತ್ರಕರ್ತರಾದ ಜಿ.ಎನ್.ಮೋಹನ್, ಮಾನವೀಯ ತುಡಿತ ಹೊಂದಿರುವ ಸಿದ್ದನಗೌಡರು, ಎಂದೂ…
ಬೆಂಗಳೂರು: ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿದಂತೆ ಸಮಗ್ರ ವಿಚಾರಣೆ ನಡೆಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಾರ್ಯಾಲಯವು ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ. ಘಟನೆಯ ಹಿನ್ನೆಲೆ ದಿನಾಂಕ 23/04/2026 ರಂದು ನಡೆದ 2026ನೇ ಸಾಲಿನ ಸಿ.ಇ.ಟಿ (ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ) ಪರೀಕ್ಷೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೃಪಾನಿಧಿ ಪದವಿ ಪೂರ್ವ ಕಾಲೇಜು (Krupanidhi PU College) ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು ತೆಗೆಸಿ ನಂತರ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ ವಿಷಯವು ಮಾಧ್ಯಮಗಳ ಮೂಲಕ ಬೆಳಕಿಗೆ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ಕ್ರಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪರೀಕ್ಷಾ ವಸ್ತ್ರಸಂಹಿತೆಯ ಬಗ್ಗೆ ಸ್ಪಷ್ಟವಾದ ಸೂಚನೆಗಳನ್ನು ನೀಡಿದ್ದರೂ, ಇಂತಹ ಘಟನೆ ನಡೆದಿರುವುದು ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಮಾಡಿದಂತೆ ಕಂಡುಬರುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೆ.ಇ.ಎ ಕಾರ್ಯನಿರ್ವಾಹಕ ನಿರ್ದೇಶಕರು ನೀಡಿದ ದೂರಿನನ್ವಯ ತನಿಖೆಗೆ…
ಬೆಂಗಳೂರು: ಸರ್ಕಾರದ ಜನಪದ ಯೋಜನೆಗಳು ಬಡವರ ಬದುಕಿಗೆ ಹೇಗೆ ಆಸರೆಯಾಗಬಲ್ಲವು ಎಂಬುದಕ್ಕೆ ಮೈಸೂರಿನ ಇಲವಾಲದ ವಿದ್ಯಾರ್ಥಿನಿ ಮಾಧುರಿಯ ಸಾಧನೆಯೇ ಸಾಕ್ಷಿ. ಅನಾರೋಗ್ಯದ ನಡುವೆಯೂ ಗೃಹಲಕ್ಷ್ಮಿ ಯೋಜನೆಯ ನೆರವಿನಿಂದ ಮಗಳು ಓದಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿರುವುದು ಗ್ಯಾರಂಟಿ ಯೋಜನೆಗಳ ಸಾರ್ಥಕತೆಯನ್ನು ಸಾರುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಸಂಕಷ್ಟದಲ್ಲಿ ಸಾಥ್ ನೀಡಿದ ‘ಗೃಹಲಕ್ಷ್ಮಿ’ ಮೈಸೂರಿನ ಇಲವಾಲ ನಿವಾಸಿಯಾದ ಮಾಧುರಿಯ ತಾಯಿ ಅನಾರೋಗ್ಯದ ಕಾರಣ ಕೆಲಸ ಬಿಡಬೇಕಾದ ಅನಿವಾರ್ಯತೆ ಎದುರಾಗಿತ್ತು. ಇಂತಹ ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಡಿ ಬರುತ್ತಿದ್ದ ಹಣವು ಕುಟುಂಬಕ್ಕೆ ಆಸರೆಯಾಯಿತು. ಮನೆಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರೂ, ತಾಯಿ ತನ್ನ ಮಗಳ ವಿದ್ಯಾಭ್ಯಾಸಕ್ಕೆ ಈ ಹಣವನ್ನೇ ಆಧಾರವಾಗಿ ಬಳಸಿಕೊಂಡಿದ್ದರು. ಸಾಧನೆಯ ಶಿಖರಕ್ಕೇರಿದ ಮಗಳು ತಾಯಿಯ ಶ್ರಮ ಮತ್ತು ಸರ್ಕಾರದ ಆಸರೆಯನ್ನು ವ್ಯರ್ಥ ಮಾಡದ ಮಾಧುರಿ, ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ 625 ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ದ್ವಿತೀಯ…
ಬೆಂಗಳೂರು: “ಯುವತಿಯ ಭವಿಷ್ಯವನ್ನೇ ನಾಶಪಡಿಸಿರುವ ನಿಮಗೆ ಸಂತ್ರಸ್ತೆಯ ಕಷ್ಟ ಅರ್ಥವಾಗುವುದಿಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಉಚ್ಚ ನ್ಯಾಯಾಲಯವು, ಅತ್ಯಾಚಾರ ಆರೋಪಿ ಕೃಷ್ಣ ರಾವ್ ಎಂಬಾತನಿಗೆ ತನ್ನ ಹತ್ತು ತಿಂಗಳ ಮಗು ಮತ್ತು ಸಂತ್ರಸ್ತೆಯ ನಿರ್ವಹಣೆಗಾಗಿ ಪ್ರತಿ ತಿಂಗಳು 75,000 ರೂಪಾಯಿ ಪಾವತಿಸುವಂತೆ ಆದೇಶಿಸಿದೆ. ಪ್ರಕರಣದ ಹಿನ್ನೆಲೆ: ಪುತ್ತೂರು ನಗರಸಭೆ ಸದಸ್ಯ ಹಾಗೂ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ರಾವ್ ಈ ಪ್ರಕರಣದ ಆರೋಪಿ. ಆರೋಪಿ ಮತ್ತು ಸಂತ್ರಸ್ತೆ ಶಾಲಾ ದಿನಗಳಿಂದಲೂ ಪ್ರೀತಿಸುತ್ತಿದ್ದರು. ಮದುವೆಯಾಗುವ ಭರವಸೆ ನೀಡಿ ಆರೋಪಿಯು ಸಂತ್ರಸ್ತೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಸಂತ್ರಸ್ತೆ ಗರ್ಭಿಣಿಯಾದಾಗ ಮದುವೆಯ ಭರವಸೆಯಿಂದ ಆತ ಹಿಂದೆ ಸರಿದಿದ್ದ. ಈ ಹಿನ್ನೆಲೆಯಲ್ಲಿ 2025ರ ಜುಲೈನಲ್ಲಿ ದೂರು ದಾಖಲಾದ ನಂತರ ಆತನನ್ನು ಬಂಧಿಸಲಾಗಿತ್ತು. ನ್ಯಾಯಾಲಯದ ಕಠಿಣ ನಿಲುವು: ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಆರೋಪಿಯ ನಡೆಯನ್ನು ತೀವ್ರವಾಗಿ ಖಂಡಿಸಿತು. ವಿಚಾರಣೆಯ ಸಂದರ್ಭದಲ್ಲಿ ಕಂಡುಬಂದ ಪ್ರಮುಖ…
ಬೆಂಗಳೂರು: ಹೊಸತನಕ್ಕೆ ಒಗ್ಗಿಕೊಂಡಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ದೊರಕಲು ಸಾಧ್ಯ. ಅರಣ್ಯ ಅಧಿಕಾರಿಗಳು ಕೂಡ ಮಾನವ-ವನ್ಯಜೀವಿ ಸಂಘರ್ಷಕ್ಕೆ ವಿನೂತನ ಮಾರ್ಗೋಪಾಯ ಸಂಶೋಧಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಅರಣ್ಯ ಭವನದಲ್ಲಿ ನಡೆದ 2 ದಿನಗಳ ಕೆಡಿಪಿ ಮತ್ತು ಎಂ.ಎಂ.ಆರ್. ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇ-ಗಸ್ತು ಮತ್ತು ಅತ್ಯಾಧುನಿಕ ಉಪಕರಣಗಳ ಬಳಕೆಯಿಂದ ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟಬಹುದಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಮತ್ತು ಅಭಿವೃದ್ಧಿಪಡಿಸಲು ಸೂಚಿಸಿದರು. ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಕಡಿತಲೆ, ವನ್ಯಜೀವಿಗಳ ಅಸಹಜ ಸಾವು, ಕಳ್ಳಬೇಟೆ, ಅರಣ್ಯ ಒತ್ತುವರಿ, ಮಾನವ-ವನ್ಯಜೀವಿ ಸಂಘರ್ಷ ಇದು ಮುಖ್ಯವಾಗಿ ನಮ್ಮ ಮುಂದಿರುವ ಸವಾಲಾಗಿದೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ವನ್ಯಜೀವಿಗಳಿಂದ ಯಾವುದೇ ಸಾವು ಸಂಭವಿಸದಂತೆ ಶಾಶ್ವತ ಪರಿಹಾರ ಒದಗಿಸಲು ಕಾಡಿನೊಂದಿಗೆ ಹೆಚ್ಚು ಒಡನಾಟ ಹೊಂದಿರುವ ನೀವೆಲ್ಲರೂ ಶ್ರಮಿಸಬೇಕು ಎಂದರು. ಯಾವ ಪ್ರದೇಶದಲ್ಲಿ ಹೆಚ್ಚಿನ ವನ್ಯಜೀವಿ ಸಂಘರ್ಷ ಇದೆ, ಈ ಸಂಘರ್ಷಕ್ಕೆ ಕಾರಣವೇನು, ಅದನ್ನು…
ಮಂಡ್ಯ : ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಮದ್ದೂರು ತಾಲ್ಲೂಕಿಗೆ ಉತ್ತಮ ಫಲಿತಾಂಶ ಬಂದಿದ್ದು, ಸರ್ಕಾರಿ ಶಾಲೆಗಳೆ ಮೇಲುಗೈ ಸಾಧಿಸಿದ್ದು, ಶೇಕಡಾವಾರು ಗಣನೀಯ ಏರಿಕೆ ಕಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ತಿಳಿಸಿದರು. ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಕರೆಯಲಾಗಿದ್ದ ಪತ್ರಿಕಾ ಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಅವರು ಮಾತನಾಡಿದರು. ಕಳೆದ ಸಾಲಿನಲ್ಲಿ ತಾಲ್ಲೂಕಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 65.65 ಫಲಿತಾಂಶ ಪಡೆದು ಜಿಲ್ಲೆಯಲ್ಲಿ 6 ನೇ ಸ್ಥಾನದಲ್ಲಿತ್ತು ಆದರೆ ಈ ಬಾರಿ ಶೇಕಡಾ 97.30 ಫಲಿತಾಂಶ ಪಡೆದು ಜಿಲ್ಲೆಯಲ್ಲಿ 5 ನೇ ಸ್ಥಾನದಲ್ಲಿದೆ ಎಂದರು. ಮದ್ದೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಬಾರಿ ಪರೀಕ್ಷೆ ಬರೆದಿದ್ದ ಒಟ್ಟು 3116 ವಿದ್ಯಾರ್ಥಿಗಳ ಪೈಕಿ 3032 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಅದರಲ್ಲಿ ಏ+ ಶ್ರೇಣಿಯಲ್ಲಿ 361, ಏ ಶ್ರೇಣಿಯಲ್ಲಿ 641, ಬಿ+ ಶ್ರೇಣಿಯಲ್ಲಿ 612, ಬಿ ಶ್ರೇಣಿಯಲ್ಲಿ 637 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದರು. ತಾಲ್ಲೂಕು ವ್ಯಾಪ್ತಿಯಲ್ಲಿರುವ…
ಶಿವಮೊಗ್ಗ : ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಿಗೆ ನೀಡಿದರು. ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು, ಮೂಲಭೂತ ಸೌಲಭ್ಯಗಳು, ಪಾರ್ಕಿಂಗ್ ಇತರೆ ವ್ಯವಸ್ಥೆಗಳ ಕುರಿತಾದ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ವೀಕ್ಷಣಾ ಗೋಪುರ, ಪ್ರವೇಶದ್ವಾರ ಮತ್ತು ಇತರೆ ಕಾಮಗಾರಿಗಳನ್ನು ವೀಕ್ಷಿಸಿ, ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಇಲಾಖೆ, ಕೆಪಿಟಿಸಿಎಲ್ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ವೇಳೆ ಹಾಜರಿದ್ದರು. https://kannadanewsnow.com/kannada/a-nandanavan-that-resonates-in-the-memory-of-annavra-minister-k-j-george-dedicates-dr-raj-udyan-to-the-public/ https://kannadanewsnow.com/kannada/a-terrible-tragedy-in-the-state-a-9-year-old-girl-died-after-being-strangled-by-a-jockey/
ಬೆಂಗಳೂರು: ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಡಾ.ರಾಜ್ ಕುಮಾರ್ ಜನ್ಮದಿನದ ಪ್ರಯುಕ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಕಮ್ಮನಹಳ್ಳಿಯಲ್ಲಿ ನವೀಕರಣಗೊಂಡ ಡಾ.ರಾಜ್ಕುಮಾರ್ ಉದ್ಯಾನವನ್ನು ಉದ್ಘಾಟಿಸಿ, ನೂತನವಾಗಿ ನಿರ್ಮಿಸಿರುವ ಬಯಲು ರಂಗಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಸಚಿವರು ಮಾತನಾಡಿದರು. “ನಮ್ಮ ಕ್ಷೇತ್ರದಲ್ಲಿ ಡಾ.ರಾಜ್ಕುಮಾರ್ ಹೆಸರಿನಲ್ಲಿ ಉದ್ಯಾನ ನಿರ್ಮಿಸಿ, ಅಚ್ಚುಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಈಗ ಹೊಸದಾಗಿ ನಿರ್ಮಿಸಿರುವ ಬಯಲು ರಂಗಮಂದಿರವು ಸಾಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ವೇದಿಕೆಯಾಗಲಿದೆ. ಕ್ಷೇತ್ರದ ಇತರ ಉದ್ಯಾನಗಳನ್ನೂ ನವೀಕರಿಸಿ ಮತ್ತಷ್ಟು ಸುಂದರಗೊಳಿಸಲಾಗುವುದು,” ಎಂದರು. ಉದ್ಯಾನದಲ್ಲಿ ಒಂದು ಸುತ್ತು ಹಾಕಿದ ಸಚಿವರು, ಶುಚಿತ್ವ, ಉದ್ಯಾನ ಬಳಕೆದಾರರಿಗೆ ಒದಗಿಸಿರುವ ಸೌಕರ್ಯಗಳನ್ನು ಪರಿಶೀಲಿಸದರಲ್ಲದೆ, ವಿಕಲಚೇತನರಿಗೆ ವ್ಹೀಲ್ಚೇರ್ ಹಾಗೂ ಕ್ರೀಡಾಪಟುಗಳಿಗೆ ಕ್ರೀಡಾಸಾಮಾಗ್ರಿಗಳನ್ನು ವಿತರಿಸಿದರು. ಹೆಣ್ಣೂರು ಜೀವವೈವಿದ್ಯ ಉದ್ಯಾನಕ್ಕೂ ಭೇಟಿ ನೀಡಿದ ಸಚಿವ ಕೆ.ಜೆ. ಜಾರ್ಜ್, ಸುಸ್ಥಿರ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಹಸಿರು ಹೊದಿಕೆ ಹೆಚ್ಚಿಸಲು ಸೂಕ್ತ ಹನಿ ನೀರಾವರಿ ವ್ಯವಸ್ಥೆ…














