Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಕಂದಾಯ ಇಲಾಖೆಯಲ್ಲಿನ ಇ- ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿರುವುದರಿಂದ ಆಗಿದ್ದು ಕಂದಾಯ ಇಲಾಖೆಯ ನೌಕರರ ಕಾರ್ಯಕ್ಷಮತೆ ಬಗ್ಗೆ ಜಿಲ್ಲಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆಯ ಕುಂದು ಕೊರತೆಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇ ಪೌತಿ ಖಾತೆ, ಸಕಾಲ ಅರ್ಜಿಗಳು, ಬೆಳೆ ಸಮೀಕ್ಷೆ ಹಾಗೂ ಎಲ್ಲಾ ವಿಷಯಗಳಲ್ಲಿ ಗುರಿ ನಿಗದಿಪಡಿಸುತ್ತಿರುವುದು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತ್ವರಿತವಾಗಿ ಕೆಲಸ ಮಾಡಿಕೊಟ್ಟ ಹಾಗೇ ಆಗುತ್ತಿದೆ. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಪೌತಿ ಖಾತೆ ಆಂದೋಲನದ ಕೆಲಸವನ್ನು ಕಾನೂನು ಬದ್ಧವಾಗಿ ಸರ್ಕಾರ ನಿಗದಿಪಡಿಸಿರುವ ನಿಯಮಗಳ ಅನುಸಾರ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇರ ನೇಮಕಾತಿ ಸರ್ಕಾರದ ಮಟ್ಟದಲ್ಲಿ ಇದೆ. ಸರ್ಕಾರದಕ್ಕೆ ಈ ಸಂಬಂಧ ಪ್ರಸ್ತಾವನೆ ಕಳುಹಿಸಲಾಗಿದ್ದು ನೇಮಕಾತಿ…
ಮಂಡ್ಯ: ಸಾರ್ವಜನಿಕ ಸೋಮವಾರ ಪ್ರಾರಂಭವಾದ ನಂತರ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಗಳಲ್ಲಿ ಸ್ವೀಕೃತವಾದ ಅರ್ಜಿಗಳನ್ನು ನಿಯಮಾನುಸಾರ ಇತ್ಯರ್ಥಗೊಳಿಸಲು ಕ್ರಮವಹಿಸಬೇಕೆಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್ ಅವರು ಮದ್ದೂರು ತಾಲ್ಲೂಕು ಪಂಚಾಯತ್ ಇಓ ಮತ್ತು ಮದ್ದೂರು ತಾಲ್ಲೂಕಿನ ಪಿಡಿಓ ಗಳಿಗೆ ಸೂಚಿಸಿದರು. ಸೋಮವಾರ ಮದ್ದೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ ಮಳವಳ್ಳಿ ಮತ್ತು ನಾಗಮಂಗಲ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಗಳ ಅನುಪಾಲನಾ ಸಭೆಗಳನ್ನು ನಡೆಸಲಾಗಿದೆ. ಇಂದು ಮದ್ದೂರಿನಲ್ಲಿ ಸಭೆ ನಡೆಸಲಾಗುತ್ತಿದ್ದು ಇದೇ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಭೆ ನಡೆಸಲಾಗುವುದು ಎಂದರು. ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್ ಗಳು ಕಡ್ಡಾಯವಾಗಿ ಪ್ರತಿ ಸೋಮವಾರ ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಬೇಕು ಮತ್ತು ಪ್ರತೀ ಗ್ರಾಮ ಪಂಚಾಯಿತಿಯು ಸಭೆಯಲ್ಲಿ ಸ್ವೀಕೃತವಾಗುವ ಅರ್ಜಿಗಳ ವಿವರ ಮತ್ತು ತೆಗೆದುಕೊಂಡ ಕ್ರಮದ ವಿವರವನ್ನು ವಹಿಯಲ್ಲಿ ನಮೂದಿಸಿರಬೇಕು ಎಂದು ಸೂಚಿಸಿದರು. ಹಾಗೆಯೇ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನಿಂದಲೂ…
ಶಿವಮೊಗ್ಗ: ಪ್ರತಿ ವರ್ಷದಂತೆ ಈ ವರ್ಷವೂ ಮಕರ ಸಂಕ್ರಾಂತಿಯ ಸಿಗಂದೂರು ಜಾತ್ರೆಗೆ ಶ್ರೀ ಸಿಗಂದೂರು ಕ್ಷೇತ್ರ ಸಜ್ಜಾಗಿದೆ. ಮೊದಲ ಬಾರಿಗೆ ತೂಗು ಸೇತುವೆ ಬಳಿಕ ಮಕರ ಸಂಕ್ರಾಂತಿಯ ಜಾತ್ರೆ ಇದಾಗಿದ್ದು, ಭಕ್ತ ಸಾಗರವೇ ಹರಿದು ಬರುವ ನಿರೀಕ್ಷೆಯಲ್ಲಿ ಆಡಳಿತ ಮಂಡಲಿ ಇದೆ. ಈ ಕುರಿತಂತೆ ಶ್ರೀ ಕ್ಷೇತ್ರದ ಸಿಗಂದೂರು ಚೌಡೇಶ್ವರಿ ದೇವಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹೆಚ್.ಆರ್ ರವಿ ಕುಮಾರ್ ಮಾಹಿತಿ ನೀಡಿದ್ದು, ಜನವರಿ 14 ಮತ್ತು 15ರಂದು ಶ್ರೀ ಕ್ಷೇತ್ರ ಸಿಗಂದೂರಲ್ಲಿ ಸಿಗಂದೂರು ಜಾತ್ರಾ ಮಹೋತ್ಸವ ನೆರವೇರಲಿದೆ. ಜಾತ್ರೆಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಪೂಜೆ, ಉತ್ಸವ, ಹೋಮ-ಹವನಗಳು ಜರುಗಲಿವೆ. ಇದಕ್ಕಾಗಿ ಸಿಗಂದೂರು ಕ್ಷೇತ್ರದ ಅಂತಿಮ ತಯಾರಿ ಪೂರ್ಣಗೊಂಡಿದೆ ಎಂಬುದು ತಿಳಿಸಿದ್ದಾರೆ. ಜ.14ರಂದು ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ? ಜನವರಿ.14ರ ಬುಧವಾರದಂದು ಶ್ರೀ ಕ್ಷೇತ್ರ ಸಿಗಂದೂರಲ್ಲಿ ಮುಂಜಾನೆ 4ರಿಂದಲೇ ಮಹಾಭಿಷೇಕ, ಹೂವಿನ ಮತ್ತು ಆಭರಣದ ಅಲಂಕಾರ ನೆರವೇರಲಿದೆ. ಜೊತೆಗೆ 5 ಗಂಟೆಗೆ ಗೋ ಪೂಜೆ, 6ಕ್ಕೆ ಗುರು ಪೂಜೆ, 7ಕ್ಕೆ ದೇವಿ…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇತ್ತೀಚೆಗೆ ನಡೆಸಲಾದಂತ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಕೀ-ಉತ್ತರವನ್ನು ಪ್ರಕಟಿಸಲಾಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಮತ್ತು 11ರಂದು ನಡೆಸಿದ ಪರೀಕ್ಷೆಗಳ ಕೀ ಉತ್ತರಗಳನ್ನು KEA ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ ಎಂದಿದ್ದಾರೆ. ಕೆಇಎ ಪ್ರಕಟಿಸಿರುವಂತ ಕೀ-ಉತ್ತರಗಳ ಬಗ್ಗೆ ಏನೇ ಆಕ್ಷೇಪಣೆಗಳು ಇದ್ದಲ್ಲಿ ಜನವರಿ 14ರಂದು ಬೆಳಿಗ್ಗೆ 11 ಗಂಟೆ ಒಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬೇಕು. ಬಳಿಕ ಪರಿಶೀಲಿಸಿ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ. https://twitter.com/KEA_karnataka/status/2010730305259454593
ಬೆಂಗಳೂರು: ನಗರದ ಆಕ್ಸ್ ಫರ್ಡ್ ಡೆಂಟಲ್ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಪ್ರಾಂಶುಪಾಲರು ಸೇರಿದಂತೆ ಇತರೆ ಉಪನ್ಯಾಸಕರ ವಿರುದ್ಧ ಮೃತ ವಿದ್ಯಾರ್ಥಿನಿ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಆಕ್ಸ್ ಫರ್ಡ್ ಕಾಲೇಜಿನ 6 ಲೆಕ್ಟರರ್ಸ್ ಅನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಬೆಂಗಳೂರಿನ ಆಕ್ಸ್ ಫರ್ಡ್ ಕಾಲೇಜಿನಲ್ಲಿ ದಂತ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಂತ ಯಶಸ್ವಿನಿ ಉಪನ್ಯಾಸಕರ ಕಿರುಕುಳಕ್ಕೆ ಬೇಸತ್ತು ಜನವರಿ.8ರಂದು ಚಂದಾಪುರದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಮುಂದೆ ಪ್ರತಿಭಟನೆ ಕೂಡ ನಡೆಸಿದ್ದರು. ಮತ್ತೊಂದೆಡೆ ಯಶಸ್ವಿನಿ ತಾಯಿ ಪೊಲೀಸರಿಗೆ ಪ್ರಾಂಶುಪಾಲರು ಸೇರಿದಂತೆ ಕಿರುಕುಳ ನೀಡಿದ್ದ ಉಪನ್ಯಾಸಕರ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಎಫ್ಐಆರ್ ಕೂಡ ದಾಖಲಾಗಿತ್ತು. ಈ ಬೆನ್ನಲ್ಲೇ ಆಕ್ಸ್ ಫರ್ಡ್ ಡೆಂಟಲ್ ಕಾಲೇಜಿನ ಆರು ಲೆಕ್ಚರರ್ಸ್ ಕೆಲಸದಿಂದ ಆಡಳಿತ ಮಂಡಳಿಯು ವಜಾಗೊಳಿಸಲಾಗಿದೆ. ಒಎಂಆರ್ ವಿಭಾಗದ ಲೆಕ್ಟರರ್ಸ್ ಗಳಾದಂತ ಡಾ.ಆನಿಮೋಲ್, ಡಾ.ಶಬಾನಾ, ಡಾ.ಪೈಕಾ, ಡಾ.ಸಿಂಧು, ಡಾ.ಸುಶ್ಮಿನಿ, ಡಾ.ಆಲ್ಬಾ…
ಬೆಂಗಳೂರು: ದಿ: 13.01.2026 (ಮಂಗಳವಾರ) ಬೆಳಿಗ್ಗೆ 10:00 ಗಂಟೆಯಿAದ ಮದ್ಯಾಹ್ನ 02:00 ಗಂಟೆಯವರೆಗೆ “66/11ಕೆ.ವಿ ಬಾಣಸವಾಡಿಯ ಉಪಕೇಂದ್ರ“ ದ 66ಕೆ.ವಿ ಲೈನನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಚ್ಆರ್ಬಿಆರ್ ಲೇಔಟ್ 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಾಪಾಳ್ಯ, ಬಾಲಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಆರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉನ್ನತಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್ಶಿಪ್, ಬಾಲಾಜಿ ಲೇಔಟ್, ಜಿಎನ್ಆರ್ ಗಾರ್ಡನ್, ಚೆಲೆಕರೆ, ಚೆಲೆಕರೆ ವಿಲೇಜ್, ಸಮುದ್ರಿಕಾ ಎನ್ಕ್ಲೇವ್, 100 ಅಡಿ ರಸ್ತೆ, 80 ಅಡಿ ರಸ್ತೆ, ಸುಬ್ಬಯ್ಯನಪಾಳ್ಯ, ಹೊರಮಾವು, ಮುನಿರೆಡ್ಡಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಅಮರ್ ಏಜೆನ್ಸಿ ಲೇಔಟ್, ಪಿ & ಟಿ ಲೇಔಟ್, ಪಪ್ಪಯ್ಯ ಲೇಔಟ್, ಕೊಕನಟ್ ಗ್ರೋವ್ ಲೇಔಟ್, ಆಶೀರ್ವಾದ್…
ಧಾರವಾಡ: ರಾಜ್ಯದಲ್ಲೊಂದು ಶಾಲಾ ಮಕ್ಕಳ ಪೋಷಕರು ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಇಬ್ಬರು ಮಕ್ಕಳನ್ನು ಅಪಹರಣ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಧಾರವಾಡದ ಕಮಲಾಪುರ ಬಡಾವಣೆಯಲ್ಲಿ ಮಕ್ಕಳಿಬ್ಬರನ್ನು ಅಪಹರಣ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಇಬ್ಬರು ಮಕ್ಕಳನ್ನು ಅಪಹರಣ ಮಾಡಿರೋದಾಗಿ ಹೇಳಲಾಗುತ್ತಿದೆ. 3ನೇ ತರಗತಿಯ ತನ್ವೀರ್(9) ಹಾಗೂ ಲಕ್ಷ್ಮೀ ಕರಿಯಪ್ಪನವರ್(9) ಅಪಹರಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಬೈಕ್ ಮೇಲೆ ಕೂರಿಸಿಕೊಂಡು ವ್ಯಕ್ತಿ ಪರಾರಿಯಾಗಿರೋ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣ ಇದಾಗಿದೆ. https://kannadanewsnow.com/kannada/shikhar-dhawan-gets-engaged-to-longtime-girlfriend-sophie-shine/
ಭಾರತ ಕ್ರಿಕೆಟಿಗ ಶಿಖರ್ ಧವನ್ ತಮ್ಮ ನಿಶ್ಚಿತಾರ್ಥವನ್ನು ಘೋಷಿಸಿದ್ದಾರೆ. ಧವನ್ ಇನ್ಸ್ಟಾಗ್ರಾಮ್ ನಲ್ಲಿ ‘ಹಂಚಿಕೊಂಡ ನಗುಗಳಿಂದ ಹಂಚಿಕೊಂಡ ಕನಸುಗಳವರೆಗೆ… ನಾವು ಶಾಶ್ವತವಾಗಿ ಒಟ್ಟಿಗೆ ಇರುವುದನ್ನು ಆರಿಸಿಕೊಳ್ಳುತ್ತಿರುವಾಗ ನಮ್ಮ ನಿಶ್ಚಿತಾರ್ಥಕ್ಕಾಗಿ ಪ್ರೀತಿ, ಆಶೀರ್ವಾದ ಮತ್ತು ಪ್ರತಿಯೊಂದು ಶುಭ ಹಾರೈಕೆಗೆ ಕೃತಜ್ಞರಾಗಿರುತ್ತೇನೆ’ ಎಂಬ ಶೀರ್ಷಿಕೆಯೊಂದಿಗೆ ರೋಮ್ಯಾಂಟಿಕ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಪೋಸ್ಟ್ ಅನ್ನು ‘ಶಿಖರ್ ಮತ್ತು ಸೋಫಿ’ ಎಂದು ಸಹಿ ಮಾಡಲಾಗಿದ್ದು, ಅವರ ನಿಶ್ಚಿತಾರ್ಥದ ಹೆಸರನ್ನು ಸೂಚಿಸುತ್ತದೆ. https://kannadanewsnow.com/kannada/ksrtc-bus-advance-ticket-booking-now-available-at-bangalore-one-and-karnataka-one-centers/
ಬೆಂಗಳೂರು: ಯುವಸಮೂಹವನ್ನು ಆಕರ್ಷಿಸುವ ವಿಶಿಷ್ಟ ವಿನ್ಯಾಸದೊಂದಿಗೆ ರಿಯಲ್ಮೀ ತನ್ನ ಬಹುನಿರೀಕ್ಷೆಯ 16 ಪ್ರೊ ಸರಣಿ ಬಿಡುಗಡೆ ಮಾಡಿದೆ. ಬಿಡುಗಡೆಗೊಳಿಸಿ ಮಾತನಾಡಿದ ರಿಯಲ್ಮಿ ಇಂಡಿಯಾ ಪ್ರಾಡಕ್ಟ್ ಸ್ಟಾಟರ್ಜಿ ಮ್ಯಾನೇಜರ್ ದೇವೇಂದರ್ ಸಿಂಗ್ ಮಾತನಾಡಿ, ರಿಯಲ್ಮಿ ಇಂಡಿಯಾ ಇದರೊಂದಿಗೆ ಪ್ರೀಮಿಯಂ ಮಿಡ್-ರೇಂಜ್ ವಿಭಾಗದಲ್ಲಿ ತನ್ನ ಮಾನದಂಡವನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ರಿಯಲ್ ಮಿ 16 ಪ್ರೊ+ ಮತ್ತು ಎಲ್ಲ ಅಗತ್ಯಗಳನ್ನು ಪೂರೈಸುವ ರಿಯಲ್ ಮಿ 16 ಪ್ರೊ ಮಾದರಿಗಳನ್ನು ಒಳಗೊಂಡಿರುವ ಈ ಸರಣಿ, ಪರ್ಫಾರ್ಮೆನ್ಸ್ ಮತ್ತು ಡಿಸೈನ್ ಅಲ್ಲಿ ಮಾಸ್ಟರ್ಕ್ರಾಫ್ಟ್ ಶ್ರೇಷ್ಠತೆಯನ್ನು ಹೊಂದಿದೆ. ಜೊತೆಗೆ, ಪೋರ್ಟ್ರೇಟ್ ಇಮೇಜಿಂಗ್ ಮಾನದಂಡಗಳನ್ನು ಮರುನಿರ್ವಹಿಸುವ ಕ್ರಾಂತಿಕಾರಿ ಕೇಂದ್ರೀಕರಣದೊಂದಿಗೆ ಗಮನ ಸೆಳೆಯುತ್ತದೆ. 200MP ಪೋರ್ಟ್ರೇಟ್ ಮಾಸ್ಟರ್: ಪ್ರೀಮಿಯಂ ಮಿಡ್-ರೇಂಜ್ ವಿಭಾಗದಲ್ಲಿ 200MP ಪೋರ್ಟ್ರೇಟ್ ಮಾಸ್ಟರ್ ಆಗಿ ರಿಯಲ್ ಮಿ 16 ಪ್ರೊ ಸರಣಿ ಹೊರಹೊಮ್ಮಿದೆ. 200MP ಲೂಮಾಕಲರ್ ಕ್ಯಾಮೆರಾ ಹಾಗೂ 3.5× ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್ ಹೊಂದಿರುವ ರಿಯಲ್ ಮಿ 16 ಪ್ರೊ+, “ಸ್ನ್ಯಾಪ್ ಯುವರ್ ವೈಬ್ ಅಟ್ ಎವೆರಿ ಜೂಮ್”…
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಬೆಂಗಳೂರು-ಒನ್ ಮತ್ತು ಕರ್ನಾಟಕ-ಒನ್ ಕೇಂದ್ರಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ ಎಂದಿದೆ. ಕೆಎಸ್ಆರ್ಟಿಸಿ ವೆಬ್ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್ಗಳು ಹಾಗೂ ಫ್ರಾಂಚೈಸಿ ಕೌಂಟರ್ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಮುಂಗಡ ಬಸ್ ಟಿಕೆಟ್ಗಳನ್ನು ಬುಕ್ ಮಾಡಬಹುದು. ಈ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶನಾಲಯ (EDCS) ರವರ ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದೆ. ಈ ಸೇವೆ ಬೆಂಗಳೂರು ನಗರದಲ್ಲಿರುವ 161…














