Author: kannadanewsnow09

ಲಂಡನ್: ಜಗತ್ಪ್ರಸಿದ್ಧ ಸಬ್‌ಸ್ಕ್ರಿಪ್ಷನ್ ಆಧಾರಿತ ಅಡಲ್ಟ್ ಕಂಟೆಂಟ್ ಪ್ಲಾಟ್‌ಫಾರ್ಮ್ ‘ಓನ್ಲಿಫ್ಯಾನ್ಸ್’ (OnlyFans) ಮಾಲೀಕ ಲಿಯೋನಿಡ್ ರಾಡ್ವಿನ್ಸ್ಕಿ (43) ಅವರು ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ದೀರ್ಘಕಾಲದವರೆಗೆ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಅವರು ಸೋಮವಾರ (ಮಾರ್ಚ್ 23, 2026) ಶಾಂತಿಯುತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಕಂಪನಿ ಅಧಿಕೃತವಾಗಿ ತಿಳಿಸಿದೆ. ಮುಖ್ಯಾಂಶಗಳು: ಯಶಸ್ವಿ ಉದ್ಯಮಿ: ಉಕ್ರೇನಿಯನ್-ಅಮೆರಿಕನ್ ಉದ್ಯಮಿಯಾದ ರಾಡ್ವಿನ್ಸ್ಕಿ, 2018 ರಲ್ಲಿ ಓನ್ಲಿಫ್ಯಾನ್ಸ್‌ನ ಮಾತೃ ಸಂಸ್ಥೆಯಾದ ‘ಫೆನಿಕ್ಸ್ ಇಂಟರ್ನ್ಯಾಷನಲ್’ ಅನ್ನು ಸ್ವಾಧೀನಪಡಿಸಿಕೊಂಡಿದ್ದರು. ಭಾರಿ ಬೆಳವಣಿಗೆ: ಅವರ ನೇತೃತ್ವದಲ್ಲಿ, ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಈ ಪ್ಲಾಟ್‌ಫಾರ್ಮ್ ಸ್ಫೋಟಕ ಬೆಳವಣಿಗೆಯನ್ನು ಕಂಡಿತು. ಅಡಲ್ಟ್ ಪರ್ಫಾರ್ಮರ್‌ಗಳು ಮತ್ತು ಸೆಲೆಬ್ರಿಟಿಗಳು ನೇರವಾಗಿ ಹಣ ಗಳಿಸಲು ಇದು ದೊಡ್ಡ ವೇದಿಕೆಯಾಗಿ ಹೊರಹೊಮ್ಮಿತು. ಆರ್ಥಿಕ ಲಾಭ: ಕಳೆದ ವರ್ಷವೊಂದರಲ್ಲೇ ಈ ಸಂಸ್ಥೆಯು 701 ಮಿಲಿಯನ್ ಡಾಲರ್ ಡಿವಿಡೆಂಡ್ (ಲಾಭಾಂಶ) ಘೋಷಿಸಿ ದಾಖಲೆ ಬರೆದಿತ್ತು. ಬ್ರಿಟನ್ ಮೂಲದ ಖಾಸಗಿ ಕಂಪನಿಯೊಂದರಿಂದ ಅತಿ ಹೆಚ್ಚು ಲಾಭಾಂಶ ಪಡೆದ ಉದ್ಯಮಿಗಳಲ್ಲಿ ರಾಡ್ವಿನ್ಸ್ಕಿ ಒಬ್ಬರಾಗಿದ್ದರು. ಭವಿಷ್ಯದ ಪ್ರಶ್ನೆ: ನಿಧನಕ್ಕೂ ಮುನ್ನ ರಾಡ್ವಿನ್ಸ್ಕಿ…

Read More

ಬೆಂಗಳೂರು : ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಈಗಾಗಲೇ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ ಎಂದರು. ಸಂಘಟನೆಯವರ ಜೊತೆಗೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿಗಳ ಸಮಯ ನಿಗದಿ ಮಾಡಿ ಶಿಕ್ಷಣ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುವುದು. ಎಂಎ, ಬಿಎಡ್‌, ಪದವಿ ಪಡೆದಿರುವವರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಉಳಿಸಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. ನಾನು ಈ…

Read More

ಬೆಂಗಳೂರು: ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸಿಹಿಸುದ್ದಿ ಸಿಕ್ಕಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ನೇರ ನೇಮಕಾತಿ ಹುದ್ದೆಗಳನ್ನು ಮುಂದಿನ 30 ದಿನಗಳಲ್ಲಿ ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸರ್ಕಾರ ಆದೇಶಿಸಿದೆ. ಈ ಕುರಿತು ಶಾಸಕ ರವಿಕುಮಾರ್ ಗೌಡ (ಗಣಿಗ) ಅವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಉತ್ತರಿಸಿದ್ದಾರೆ. ವಯೋಮಿತಿಯಲ್ಲಿ ಭಾರಿ ಸಡಿಲಿಕೆ: ನೇಮಕಾತಿ ವಿಳಂಬದಿಂದ ತೊಂದರೆ ಅನುಭವಿಸುತ್ತಿರುವ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. 31.12.2027ರವರೆಗೆ ಹೊರಡಿಸುವ ಎಲ್ಲಾ ನೇರ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗುವಂತೆ, ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆಗೆ ಚಾಲನೆ: ಮೀಸಲಾತಿ ಹೆಚ್ಚಳದ ವಿಚಾರವಾಗಿ ನ್ಯಾಯಾಲಯದಲ್ಲಿದ್ದ ಕಾನೂನು ತೊಡಕುಗಳಿಂದಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಆದರೆ ಈಗ ಸರ್ಕಾರವು ಹಳೆಯ 1995ರ ಆದೇಶದಂತೆ (ಶೇ. 50 ಮೀಸಲಾತಿ) ನೇಮಕಾತಿ ಮುಂದುವರಿಸಲು ನಿರ್ಧರಿಸಿದೆ. ಆದಾಗ್ಯೂ, ಭವಿಷ್ಯದಲ್ಲಿ ನ್ಯಾಯಾಲಯ ನೀಡುವ ಅಂತಿಮ ಆದೇಶಕ್ಕೆ…

Read More

ಬೆಂಗಳೂರು: ಕೊತ್ತನೂರು ಗ್ರಾಮದ ಆರ್‌ಬಿಐ ಬಡಾವಣೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ)ಸೇರಿದ ಜಾಗವನ್ನು ಕೆಲವು ಕಿಡಿಗೇಡಿಗಳು ಸುಳ್ಳು ದಾಖಲೆ ಸೃಷ್ಟಿಸಿ ತಮ್ಮ ಕಬಳಿಕೆ ಮಾಡುತ್ತಿರುವುದನ್ನು ಸರಕಾರ ತಕ್ಷಣ ತಡೆಯಬೇಕೆಂದು ಆರ್ ಬಿಐ ಬಡಾವಣೆಯ ಕಲ್ಯಾಣ ಸಂಘ ಆಗ್ರಹಿಸಿದೆ. ಪಾರ್ಕ್ ಗೆ ಸೇರಿದ ಜಾಗವನ್ನು ಕೆಲವು ವ್ಯಕ್ತಿಗಳು ಆಕ್ರಮವಾಗಿ ಕಬಳಿಕೆ ಮಾಡಿ ಅನಧಿಕೃತವಾಗಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ. ಇದಕ್ಕೆ ಅನಧಿಕೃತವಾಗಿ ಜಿಬಿಎಯಿಂದ ಖಾತೆಯನ್ನು ಸಹ ಸೃಷ್ಟಿಸಿದ್ದಾರೆ. ಇದು ಸಾರ್ವಜನಿಕ ಆಸ್ತಿ ಎಂಬುದು ಸಾರ್ವಜನಿಕರಿಗೆ ಚೆನ್ನಾಗಿ ತಿಳಿದಿದ್ದು, ಕೆಲವು ಪ್ರಭಾವಿ ರಾಜಕೀಯ ವ್ಯಕ್ತಿಗಳ ಹೆಸರು ದುರುಪಯೋಗ ಮಾಡಿಕೊಂಡು ಈ ರೀತಿಯಲ್ಲಿ ಕಬಳಕೆ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಮೇಲು ನೋಟಕ್ಕೆ ಸರ್ಕಾರಿ ಅಧಿಕಾರಿಗಳು ಶಾಮೀಲಾಗಿರುವುದು ಕಂಡು ಬಂದಿದ್ದು, ರಾಜ್ಯ ಸರ್ಕಾರ ಕೂಡ ಪರೋಕ್ಷವಾಗಿ ಸಾಥ್ ನೀಡುತ್ತಿದೆ ಎಂದು ಸಂಘದ ಪದಾಧಿಕಾರಿಗಳು ಆರೋಪಿಸಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರ ಕ್ರಮ ಜರುಗಿಸಬೇಕೆಂದು ಆರ್ ಬಿಐ ಬಡಾವಣೆಯ ಕಲ್ಯಾಣ ಸಂಘ ಜಿಬಿಎ ಬೆಂಗಳೂರು ದಕ್ಷಿಣ ವಲಯಕ್ಕೆ ದೂರು ನೀಡಿ…

Read More

ಮಂಡ್ಯ : ಬೇಸಿಗೆ ಕಾಲ ಸಮೀಪಿಸುತ್ತಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕೆಂದು ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದರು. ಮದ್ದೂರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳ ಸಭೆ ನಡೆಸಿ‌ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಕಂಡು ಬರುವ ಸಾಧ್ಯತೆ ಇದೆ. ಈಗಾಗಲೇ ಆತಗೂರು ಹೋಬಳಿಯ ಹೂತಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆ ಕಂಡು ಬಂದಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮೀಪದ ಖಾಸಗಿ ಕೊಳವೆ ಬಾವಿಗಳಿಂದ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು. ಇದಕ್ಕಾಗಿ ತಾಲೂಕು ಆಡಳಿತ ಬಳಿ 40 ಲಕ್ಷ ಕ್ಕೂ ಹೆಚ್ಚು ಅನುದಾನವಿದ್ದು, ಎಲ್ಲ ಗ್ರಾಮಗಳಲ್ಲೂ ಸೂಕ್ತ ವ್ಯವಸ್ಥೆ ಮಾಡಬೇಕು. ನೀರಿನ ಲಭ್ಯತೆ, ಕೊರತೆಯ ವಸ್ತು ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ…

Read More

ಶಿವಮೊಗ್ಗ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ, ಅದರಲ್ಲೂ ವಿಶೇಷವಾಗಿ ಸ್ಥಳೀಯ ಮಟ್ಟದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಇಂದು ಅತಂತ್ರ ಸ್ಥಿತಿಗೆ ತಲುಪಿವೆ. ಕರ್ನಾಟಕ ಸರ್ಕಾರವು ಇತ್ತೀಚೆಗೆ ಅನುಮೋದಿಸಿರುವ ‘ನೂತನ ಜಾಹೀರಾತು ನೀತಿ – 2026’ ಸ್ಥಳೀಯ ಪತ್ರಿಕೆಗಳ ಪಾಲಿಗೆ ಮರಣಶಾಸನವಾಗಲಿದೆ ಎಂಬ ಭೀತಿ ಎದುರಾಗಿದೆ. ಈ ನೀತಿಯನ್ನು ಕೈಬಿಡಬೇಕು ಅಥವಾ ಮರುಪರಿಶೀಲಿಸಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ತಾಲ್ಲೂಕು ಘಟಕವು ಎಸಿ ಮೂಲಕ ಸರ್ಕಾರಕ್ಕೆ ಮನವಿ ಮಾಡಿದೆ. ಇಂದಿನ ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮನವಿಯಲ್ಲಿ ಉಲ್ಲೇಖವೇನು? 1. ಅಸ್ತಿತ್ವಕ್ಕೆ ಎದುರಾದ ಅಪಾಯ: ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಮಂಡಿಸಿದಂತ ರಾಜ್ಯ ಬಜೆಟ್ ನಲ್ಲಿ ನೂತನ ಜಾಹೀರಾತು ನೀತಿಯನ್ನು ಘೋಷಿಸಿದ್ದರು. ಇದು ಯಥಾವತ್ತಾಗಿ ಜಾರಿಗೆ ಬಂದರೆ, ವರ್ಷಗಳಿಂದ ನಾಡು-ನುಡಿ ಮತ್ತು ಸ್ಥಳೀಯ ಸಮಸ್ಯೆಗಳ ಧ್ವನಿಯಾಗಿರುವ ಸಣ್ಣ ಪತ್ರಿಕೆಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುವ ಗಂಭೀರ ಪರಿಸ್ಥಿತಿ ನಿರ್ಮಾಣವಾಗಲಿದೆ. ಈ ನೀತಿಯು ವಾಸ್ತವಕ್ಕೆ ದೂರವಾಗಿದ್ದು, ಸಣ್ಣ ಪತ್ರಿಕೆಗಳ ಮೇಲೆ…

Read More

ಮಂಡ್ಯ : ಮದ್ದೂರು ನಗರ ವ್ಯಾಪ್ತಿಯಲ್ಲಿ ಬೆಂಗಳೂರು ಮಾದರಿಯ ಉದ್ಯಾನಗಳ ಅಭಿವೃದ್ಧಿ, ನಗರವನ್ನು ಸುಂದರ ಹಾಗೂ ಹಸಿರೀಕರಣ, ಸುಸಜ್ಜಿತ ಮಾರುಕಟ್ಟೆ, ಮದ್ದೂರು, ಸೋಮನಹಳ್ಳಿ ಕೆರೆಗಳ ಅಭಿವೃದ್ಧಿ ಹಾಗೂ ವಿದ್ಯುತ್‌ ಚಿತಾಗಾರ ನಿರ್ಮಾಣ ಸೇರಿದಂತೆ ಈ ಬಾರಿಯ ಮದ್ದೂರು ನಗರಸಭೆ ಬಜೆಟ್‌ 2025–26ರಲ್ಲಿ ಆದ್ಯತೆ ನೀಡಲಾಗಿದೆ. ನಗರಸಭೆಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ಹಾಗೂ ಆಡಳಿತಾಧಿಕಾರಿ ಡಾ.ಕುಮಾರ ಅವರು 2025-26 ನೇ ಸಾಲಿನ ಪರಿಷ್ಕೃತ ಹಾಗೂ 2026-27 ನೇ ಸಾಲಿನ ಅಂದಾಜು ಬಜೆಟ್ ಮಂಡಿಸಿದರು. ಆರಂಭಿಕ ಶಿಲ್ಕು 8.63 ಕೋಟಿ ಹಾಗೂ 2025 -26 ನೇ ಸಾಲಿಗೆ ನಗರಸಭೆಯ ಸ್ವಂತ ಸಂಪನ್ಮೂಲಗಳಿಂದ ನಿರೀಕ್ಷಿತ ಆದಾಯ 15.88 ಕೋಟಿ ಹಾಗೂ ಕೇಂದ್ರದ ಅನುದಾನ 18.95 ಕೋಟಿ ಮತ್ತು ರಾಜ್ಯ ಸರ್ಕಾರದಿಂದ 75 ಕೋಟಿ ನಿರೀಕ್ಷಿತ ಅನುದಾನ ಸೇರಿ ಒಟ್ಟು 120.66 ಕೋಟಿ ಆದಾಯ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು. 2026-27 ನೇ ಸಾಲಿಗೆ ನೌಕರರ ವೇತನ, ನಿರ್ವಹಣಾ ವೆಚ್ಚ, ಬಂಡವಾಳ ಕಾಮಗಾರಿಗಳು, ಕಲ್ಯಾಣ ಕಾರ್ಯಕ್ರಮಗಳು ಮತ್ತು…

Read More

ನವದೆಹಲಿ: ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿಯೇ ಸೋಮವಾರ ತಿರುಗೇಟು ನೀಡಿದರು. ಈ ಬಗ್ಗೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ದೇವೇಗೌಡರು, ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ಅವರು ನಾನೇನೂ ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ ಎಂದು ಎಂದು ಹರಿಹಾಯ್ದರು. ಕಾಂಗ್ರೆಸ್ ಪಕ್ಷವು ನಮ್ಮ ಪಕ್ಷಕ್ಕೆ ಒಂದಲ್ಲ, ಎರಡಲ್ಲ.. ಅನೇಕ ಬಾರಿ ದ್ರೋಹ ಮಾಡಿದೆ. ಅದರ ಬಗ್ಗೆ ನಾನು ಸಾಕ್ಷಿ ಸಹಿತವಾಗಿ ಮಾತನಾಡಬಲ್ಲೆ. ಅದೆಲ್ಲವನ್ನು ಮರೆಮಾಚಲು ಖರ್ಗೆ ಅವರು ನನ್ನ ವಿಷಯ ಎಳೆದು ತಂದಿದ್ದಾರೆ. ಅದಕ್ಕೆ ನಾನು ಉತ್ತರ ನೀಡಬೇಕಿದೆ ಎಂದು ದೇವೇಗೌಡರು ಹೇಳಿದರು. ಈ ಸಂದರ್ಭದಲ್ಲಿ ತಮ್ಮ…

Read More

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಸಂಘರ್ಷಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಕಳೆದ ಎರಡು ದಿನಗಳಿಂದ ‘ಅತ್ಯಂತ ಉತ್ತಮ ಮತ್ತು ಫಲಪ್ರದ’ ಮಾತುಕತೆಗಳು ನಡೆದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಘೋಷಿಸಿದ್ದಾರೆ. ಈ ಬೆಳವಣಿಗೆಯು ಜಾಗತಿಕ ಇಂಧನ ಮಾರುಕಟ್ಟೆ ಮತ್ತು ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಹೊಸ ಭರವಸೆ ಮೂಡಿಸಿದೆ. ಸುದ್ದಿಯ ಮುಖ್ಯಾಂಶಗಳು: ಸಕಾರಾತ್ಮಕ ಚರ್ಚೆ: ಕಳೆದ ಎರಡು ದಿನಗಳಿಂದ ನಡೆದ ಮಾತುಕತೆಗಳು ಅತ್ಯಂತ ವಿವರವಾದ ಮತ್ತು ರಚನಾತ್ಮಕವಾಗಿದ್ದವು ಎಂದು ಟ್ರಂಪ್ ಬಣ್ಣಿಸಿದ್ದಾರೆ. ಈ ಚರ್ಚೆಗಳು ಈ ವಾರವಿಡೀ ಮುಂದುವರಿಯಲಿವೆ ಎಂದು ಅವರು ತಿಳಿಸಿದ್ದಾರೆ. ದಾಳಿಗೆ 5 ದಿನಗಳ ವಿರಾಮ: ಮಾತುಕತೆಯ ಫಲಿತಾಂಶವನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ನಡೆಸಲು ಉದ್ದೇಶಿಸಿದ್ದ ಸೇನಾ ದಾಳಿಯನ್ನು ಐದು ದಿನಗಳ ಕಾಲ ಮುಂದೂಡುವಂತೆ ಟ್ರಂಪ್ ಅಮೆರಿಕದ ಯುದ್ಧ ಇಲಾಖೆಗೆ (Department of War) ಸೂಚಿಸಿದ್ದಾರೆ. ಮಾತುಕತೆಯ ಯಶಸ್ಸಿನ ಮೇಲೆ…

Read More

ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಮಾರ್ಚ್ 27 ರಂದು ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಿದೆ. ಉದ್ಯೋಗ ಮೇಳದ ವಿವರಗಳು: ದಿನಾಂಕ ಮತ್ತು ಸಮಯ: ಮಾರ್ಚ್ 27, 2026 ರಂದು ಬೆಳಿಗ್ಗೆ 11:00 ಗಂಟೆಗೆ. ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ. ಭಾಗವಹಿಸುವ ಕಂಪನಿಗಳು: ಪ್ರತಿಷ್ಠಿತ ಸಂಸ್ಥೆಗಳಾದ ಶಾಹಿ ಎಕ್ಸ್‌ಪೋರ್ಟ್ಸ್, ಅಪೋಲೋ ಫಾರ್ಮಸಿ ಮತ್ತು ಮಹಾಂತ್ ಮೋಟಾರ್ಸ್ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಅರ್ಹತೆಗಳು: ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ (SSLC), ಪಿಯುಸಿ (PUC), ಐಟಿಐ (ITI), ಡಿಪ್ಲೊಮಾ ಹಾಗೂ ಯಾವುದೇ ಪದವಿ (Degree) ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು. ವಯೋಮಿತಿ: 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳಿಗೆ ಅವಕಾಶವಿದೆ. ಅಗತ್ಯ ದಾಖಲೆಗಳು: ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೆಟಾ (Resume) ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ತರುವುದು ಕಡ್ಡಾಯ. ವಿಶೇಷ ಸೂಚನೆ: ಈ ಉದ್ಯೋಗ ಮೇಳಕ್ಕೆ…

Read More