Author: kannadanewsnow09

ಬೆಂಗಳೂರು: ಮಳವಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆ ಹಾಗೂ ಚಿರತೆಗಳ ಹಾವಳಿ ಹೆಚ್ಚಾಗುತ್ತಿದ್ದು, ಜನವಸತಿ ಪ್ರದೇಶಗಳಿಗೆ ವನ್ಯಜೀವಿಗಳು ನುಗ್ಗದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮತ್ತು ಚಿರತೆ ಕಾರ್ಯಪಡೆ ರಚನೆಗೆ ಸರ್ಕಾರ ಮುಂದಾಗಿದೆ. ​ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಈ ವಿಷಯವನ್ನು ಪ್ರಸ್ತಾಪಿಸಿ, ಕಾವೇರಿ ನದಿ ತೀರದ ಮಳವಳ್ಳಿ ಮತ್ತು ಕನಕಪುರ ಭಾಗದಲ್ಲಿ ಆನೆಗಳ ಹಾವಳಿ ವಿಪರೀತವಾಗಿದೆ. ರೈಲ್ವೆ ಬ್ಯಾರಿಕೇಡ್ ಮತ್ತು ಸೋಲಾರ್ ಟೆಂಟಕಲ್ ಫೆನ್ಸಿಂಗ್ ಹಾಕದಿದ್ದರೆ ರೈತರ ಬೆಳೆ ಹಾನಿ ತಪ್ಪಿಸಲು ಸಾಧ್ಯವಿಲ್ಲ ಎಂದು ಸದನದ ಗಮನ ಸೆಳೆದರು. ಅಲ್ಲದೆ, ಕಳೆದ ಮೂರು ವರ್ಷಗಳಿಂದ ಈ ಭಾಗದಲ್ಲಿ ಆರ್‌ಎಫ್‌ಒ (RFO) ಹುದ್ದೆಗಳು ಖಾಲಿಯಿದ್ದು, ತಕ್ಷಣ ನೇಮಕಾತಿ ಮಾಡುವಂತೆ ಆಗ್ರಹಿಸಿದರು. ​ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ: ​ಶಾಸಕರ ಪ್ರಶ್ನೆಗೆ ಉತ್ತರಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ರಾಜ್ಯಾದ್ಯಂತ ಆನೆಗಳ ಹಾವಳಿ ತಡೆಗೆ ಪ್ರಸಕ್ತ ವರ್ಷ ಸುಮಾರು 201 ಕೋಟಿ ರೂ. ವೆಚ್ಚದಲ್ಲಿ 116 ಕಿ.ಮೀ.…

Read More

ಶಿವಮೊಗ್ಗ: ಇತ್ತೀಚೆಗೆ ನಡೆದ ಸಾಗರ ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ, ಅಭ್ಯರ್ಥಿಯಾಗಿದ್ದ ತಾರಾಮೂರ್ತಿ ಅವರು ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ​ಗೆದ್ದವರಿಗೆ ಅಭಿನಂದನೆ: ವಿಡಿಯೋ ಸಂದೇಶದ ಮೂಲಕ ಮಾತನಾಡಿರುವ ಅವರು, “ಚುನಾವಣೆಯಲ್ಲಿ ವಿಜೇತರಾದ ಎಲ್ಲಾ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಎಲ್ಲರೂ ಸೇರಿ ದೇವಸ್ಥಾನದ ಅಭಿವೃದ್ಧಿಗೆ ಮತ್ತು ಸಮಾಜದ ಹಿತದೃಷ್ಟಿಯಿಂದ ಉತ್ತಮ ಕೆಲಸಗಳನ್ನು ಮಾಡಲಿ” ಎಂದು ಹಾರೈಸಿದರು. ​ಅಕ್ರಮಗಳ ಬಗ್ಗೆ ಆಕ್ರೋಶ: ತಾವೂ ಸಹ ಚುನಾವಣಾ ಕಣದಲ್ಲಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾಗಿ ತಿಳಿಸಿದ ಅವರು, ಸೋಲನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸುವುದಾಗಿ ಹೇಳಿದರು. ಆದರೆ, ಧಾರ್ಮಿಕ ಕ್ಷೇತ್ರದ ಚುನಾವಣೆಯಲ್ಲಿ ಹಣ ಮತ್ತು ಹೆಂಡದ ಪ್ರಭಾವ ಹೆಚ್ಚಾಗಿರುವುದು ವಿಷಾದನೀಯ ಎಂದು ಮಾರ್ಮಿಕವಾಗಿ ನುಡಿದರು. ​”ರಾಜಕೀಯ ಚುನಾವಣೆಗಳಲ್ಲಿ ಹಣದ ಬಲ ನೋಡಿರುತ್ತೇವೆ, ಆದರೆ ಒಂದು ಪವಿತ್ರ ಧಾರ್ಮಿಕ ಕ್ಷೇತ್ರದ ಆಡಳಿತ ಮಂಡಳಿ ಆಯ್ಕೆಗೆ ಹಣ ಹಂಚಿ ಮತ ಪಡೆಯುವುದು ಬಹಳ ದೊಡ್ಡ ದುರಂತ. ಇದು ಒಳ್ಳೆಯ ಬೆಳವಣಿಗೆಯಲ್ಲ,”…

Read More

ಶಿವಮೊಗ್ಗ: ಇತ್ತೀಚೆಗೆ ನಡೆದ ಪ್ರತಿಷ್ಠಿತ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ಸಾಧಿಸಿದ ಆನಂದ್ ಎಂ.ಡಿ ಅವರಿಗೆ ಹರಳಯ್ಯ ಸಮಾಜದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ​ನಗರದ ಸಮಾಜದ ಮುಖಂಡರು ಹಾಗೂ ಹಿರಿಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನಂದ್ ಅವರ ಜನಪರ ಕಾಳಜಿ ಮತ್ತು ಚುನಾವಣಾ ಯಶಸ್ಸನ್ನು ಶ್ಲಾಘಿಸಲಾಯಿತು. ಸಮಾಜದ ಪ್ರಮುಖರು ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ​ಕೃತಜ್ಞತೆ ಸಲ್ಲಿಸಿದ ಆನಂದ್ ಎಂ.ಡಿ ​ಸನ್ಮಾನ ಸ್ವೀಕರಿಸಿ ಮಾತನಾಡಿದ ಆನಂದ್ ಎಂ.ಡಿ ಅವರು, “ನನ್ನ ಮೇಲೆ ನಂಬಿಕೆಯಿಟ್ಟು ಮತ ನೀಡಿದ ಸಮಸ್ತರಿಗೂ ಹಾಗೂ ಈ ಯಶಸ್ಸಿಗೆ ಕಾರಣರಾದ ನನ್ನ ಹರಳಯ್ಯ ಸಮಾಜದ ಬಂಧುಗಳಿಗೆ ನಾನು ಚಿರಋಣಿ. ನನ್ನನ್ನು ಪ್ರೀತಿಯಿಂದ ಸನ್ಮಾನಿಸಿದ ಸಮಾಜದ ಎಲ್ಲಾ ಮುಖಂಡರುಗಳಿಗೆ ಮತ್ತು ಹಿರಿಯರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ದೇವಸ್ಥಾನದ ಅಭಿವೃದ್ಧಿ ಹಾಗೂ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ,” ಎಂದು ತಿಳಿಸಿದರು. ​ಈ…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ನವೀನ ತಂತ್ರಜ್ಞಾನದ ಉಪಕ್ರಮಗಳಿಗಾಗಿ ಮತ್ತೊಂದು ರಾಷ್ಟ್ರೀಯ ಮನ್ನಣೆಯನ್ನು ಮುಡಿಗೇರಿಸಿಕೊಂಡಿದೆ. ನವದೆಹಲಿಯಲ್ಲಿ ನಡೆದ ‘Governance Now 12th (PSU)’ ರಾಷ್ಟ್ರೀಯ ಪ್ರಶಸ್ತಿ ಸಮಾರಂಭದಲ್ಲಿ ನಿಗಮದ ‘ಧ್ವನಿಸ್ಪಂದನ’ ಯೋಜನೆಗೆ ‘Excellence In Innovation’ (ನಾವೀನ್ಯತೆಯಲ್ಲಿ ಶ್ರೇಷ್ಠತೆ) ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ​ಯೋಜನೆ ಏನು? ಅದರ ಮಹತ್ವವೇನು? ​ಜರ್ಮನಿಯ GiZ ಸಂಸ್ಥೆಯ ಸಹಯೋಗದೊಂದಿಗೆ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಈ ‘ಧ್ವನಿಸ್ಪಂದನ’ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಇದು ಮೂಲತಃ ‘ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್’ ಆಗಿದೆ. ​ದೃಷ್ಟಿ ವಿಕಲಚೇತನರಿಗೆ ವರದಾನ: ಬಸ್ಸಿನ ಒಳಗೆ ಮತ್ತು ಹೊರಗೆ ಧ್ವನಿ ಆಧಾರಿತ ಮಾಹಿತಿ ನೀಡುವ ಮೂಲಕ ದೃಷ್ಟಿ ವಿಕಲಚೇತನರು ಇತರರ ಸಹಾಯವಿಲ್ಲದೆ ಸ್ವತಂತ್ರವಾಗಿ ಪ್ರಯಾಣಿಸಲು ಇದು ಸಹಕಾರಿಯಾಗಿದೆ. ​ಸುರಕ್ಷತೆ ಮತ್ತು ಆತ್ಮವಿಶ್ವಾಸ: ಈ ವ್ಯವಸ್ಥೆಯಿಂದಾಗಿ ವಿಕಲಚೇತನ ಪ್ರಯಾಣಿಕರಲ್ಲಿ ಸಂಚಾರದ ಭದ್ರತೆ ಮತ್ತು ಆತ್ಮವಿಶ್ವಾಸ ಹೆಚ್ಚಾಗಿದ್ದು, ಸಾರ್ವಜನಿಕ ಸಾರಿಗೆಯಲ್ಲಿ ಅವರ ಅವಲಂಬನೆ ಕಡಿಮೆಯಾಗಿದೆ.…

Read More

ಶಿವಮೊಗ್ಗ : ಜಿಲ್ಲೆಯ ಸಾಗರ ಪಟ್ಟಣ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಅಳವಡಿಕೆಯಲ್ಲಿ ನಗರಸಭೆ ತಾರತಮ್ಯ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಬುಧವಾರ ಬಿಜೆಪಿ ವತಿಯಿಂದ ನಗರಸಭೆ ಎದುರು ಪ್ರತಿಭಟನೆ ನಡೆಸಲಾಯಿತು. ಆ ಮೂಲಕ ಸಾಗರದಲ್ಲಿ ಫ್ಲೆಕ್ಸ್ ಹಾಳಿಯ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರ ಹಾಕಿತು. ಇಂದು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ನಗರ ಕಾಂಗ್ರೇಸ್ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್, ಮಾರಿಕಾಂಬಾ ಜಾತ್ರೆ ಸಂದರ್ಭದಲ್ಲಿ ನಗರದಾದ್ಯಂತ ಫ್ಲೆಕ್ಸ್ಗಳನ್ನು ಅಳವಡಿಸಲಾಗಿತ್ತು. ಇದರಲ್ಲಿ ಶಾಸಕರ ಫ್ಲೆಕ್ಸ್ಗಳೇ ಹೆಚ್ಚು ರಾರಾಜಿಸುತಿತ್ತು. ಊರು ತುಂಬಾ ಫ್ಲೆಕ್ಸ್ ಹಾಕಿದ್ದರಿಂದ ನಗರಸಭೆಗೆ ಬಂದ ಆದಾಯ ಎಷ್ಟು ಎನ್ನುವುದನ್ನು ಪೌರಾಯುಕ್ತರು ಬಹಿರಂಗಪಡಿಸಬೇಕು. ಇದರ ಜೊತೆಗೆ ಬಿಜೆಪಿಯವರು ಹಾಕಿರುವ ಫ್ಲೆಕ್ಸ್ಗಳನ್ನು ಒಂದೆರಡು ದಿನಗಳಲ್ಲಿ ತೆಗೆಯುವ ನಗರಸಭೆಯವರು, ಶಾಸಕರು ಮತ್ತು ಅವರ ಕಡೆಯವರು ಹಾಕಿರುವ ಫ್ಲೆಕ್ಸ್ಗಳನ್ನು ತಿಂಗಳುಗಟ್ಟಲೆ ತೆಗೆಯದೆ ಇರುವ ಮೂಲಕ ಮಲತಾಯಿಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಎಲ್ಲರಿಗೂ ಸಮಾನ ಕಾನೂನು ರೂಪಿಸಬೇಕಾದ ನಗರಸಭೆ ಅಧಿಕಾರಿಗಳು ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದರು.…

Read More

ಶಿವಮೊಗ್ಗ: ಇತ್ತೀಚೆಗೆ ನಡೆದ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವೈಯಕ್ತಿಕ ಪ್ರಚಾರದ ಬ್ಯಾನರ್‌ಗಳು ಮತ್ತು ಎಲ್‌ಇಡಿ ವಾಲ್‌ಗಳಿಗೆ ದೇವಸ್ಥಾನದ ಹಣವನ್ನು ಬಳಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಆರೋಪದ ಪ್ರಮುಖ ಅಂಶಗಳು: ದೇವಸ್ಥಾನದ ಹಣದ ದುರ್ಬಳಕೆ: ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜಾತ್ರೆಯ ನೆಪದಲ್ಲಿ ತಮ್ಮ ಭಾವಚಿತ್ರವಿರುವ ಬೃಹತ್ ಬ್ಯಾನರ್‌ಗಳನ್ನು ಹಾಕಿಸಿದ್ದರು. ಈ ಫ್ಲೆಕ್ಸ್‌ಗಳ ಅಂದಾಜು 4.5 ಲಕ್ಷ ರೂಪಾಯಿ ಬಿಲ್ ಮತ್ತು ಎಲ್‌ಇಡಿ ವಾಲ್‌ಗೆ ಸಂಬಂಧಿಸಿದ 2 ಲಕ್ಷ ರೂಪಾಯಿ ಬಿಲ್ ಅನ್ನು ಮಾರಿಕಾಂಬಾ ದೇವಸ್ಥಾನದ ಸಮಿತಿಯಿಂದ ಪಾವತಿಸಲಾಗಿದೆ ಎಂದು ಅರುಣ್ ಕುಗ್ವೆ ಆರೋಪಿಸಿದ್ದಾರೆ. ತಾರತಮ್ಯದ ಧೋರಣೆ: ಮಾಜಿ ಶಾಸಕ ಹರತಾಳ ಹಾಲಪ್ಪ ಅವರ ಜನ್ಮದಿನದ ಪ್ರಯುಕ್ತ ಹಾಕಲಾಗಿದ್ದ ಫ್ಲೆಕ್ಸ್‌ಗಳನ್ನು ಮತ್ತು ಶಿವಾಜಿ ಮಹಾರಾಜರ ಜಯಂತಿಯ ಫ್ಲೆಕ್ಸ್‌ಗಳನ್ನು ಕೇವಲ ಎರಡು ದಿನಗಳಲ್ಲಿ ತೆರವುಗೊಳಿಸಿದ ಅಧಿಕಾರಿಗಳು, ಶಾಸಕರ ಬ್ಯಾನರ್‌ಗಳನ್ನು ತಿಂಗಳುಗಟ್ಟಲೆ ಬಿಟ್ಟಿದ್ದರು ಎಂದು…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಉಳವಿಯಲ್ಲಿ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವ-2026ರ ಅಂಗವಾಗಿ ದೇವಸ್ಥಾನ ಸಮಿತಿಯು ಸಾರ್ವಜನಿಕರಿಗಾಗಿ ವಿಶೇಷ ಲಾಟರಿ ಯೋಜನೆಯನ್ನು ಹಮ್ಮಿಕೊಂಡಿದೆ. ಭಕ್ತರು ಮತ್ತು ಸಾರ್ವಜನಿಕರು ದೇವಿಯ ಕೃಪೆಯೊಂದಿಗೆ ಆಕರ್ಷಕ ಬಹುಮಾನಗಳನ್ನು ಗೆಲ್ಲಲು ಇದು ಉತ್ತಮ ಅವಕಾಶವಾಗಿದೆ. ಗೆಲ್ಲಬಹುದಾದ ಬೃಹತ್ ಬಹುಮಾನಗಳು: ಲಾಟರಿಯಲ್ಲಿ ಅದೃಷ್ಟಶಾಲಿಗಳಿಗಾಗಿ ಸಮಿತಿಯು ಈ ಕೆಳಗಿನ ಆರು ಪ್ರಮುಖ ಬಹುಮಾನಗಳನ್ನು ನಿಗದಿಪಡಿಸಿದೆ: ಬಂಪರ್ ಬಹುಮಾನ: ಹೀರೋ ಫ್ಯಾಷನ್ ಪ್ರೋ ಬೈಕ್ (Hero Passion Pro Bike) ಪ್ರಥಮ ಬಹುಮಾನ: ಎಲ್ ಜಿ ಕಂಪನಿಯ ವಾಷಿಂಗ್ ಮಿಷಿನ್ 2ನೇ ಬಹುಮಾನ: 41 ಇಂಚಿನ ಎಲ್ ಇ ಡಿ ಕಲರ್ ಟಿವಿ 3ನೇ ಬಹುಮಾನ: ಕಳೆ ಕಟ್ಟಿಂಗ್ ಮಿಷಿನ್ 4ನೇ ಬಹುಮಾನ: ಮಿಕ್ಸಿ 5ನೇ ಬಹುಮಾನ: ಗ್ಯಾಸ್ ಒಲೆ ವಿಶೇಷ ಸೂಚನೆ: ಮೇಲಿನ ಆರು ಬಹುಮಾನಗಳನ್ನು ಗೆದ್ದ ಸಂಖ್ಯೆಗಳ ಹಿಂದಿನ ಮತ್ತು ಮುಂದಿನ ಸಂಖ್ಯೆಗಳಿಗೂ ಸಮಾಧಾನಕರ ಬಹುಮಾನಗಳನ್ನು (Consolation Prizes) ನೀಡಲಾಗುತ್ತದೆ. ಟಿಕೆಟ್ ಪಡೆಯುವುದು ಹೇಗೆ? ಟಿಕೆಟ್…

Read More

ಬೆಂಗಳೂರು: ನೀವು ಅಧಿಕಾರಕ್ಕೆ ಬಂದಿರುವುದೇ ಸುಳ್ಳು, ಅಪಪ್ರಚಾರ, ತೇಜೋವಧೆಯ ಆಧಾರದ ಮೇಲೆ. ಬಜೆಟ್ ಮಾತ್ರವಲ್ಲ, ತಮ್ಮ ಇಡೀ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವುದೇ ಸುಳ್ಳಿನ ಕಂತೆಯ ಮೇಲೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷದ ಶಾಸಕರು ಸಾಂಕೇತಿಕವಾಗಿ ಖಾಲಿ ಚೊಂಬು ತಂದು ಪ್ರತಿಭಟನೆ ಮಾಡಿದ್ದಕ್ಕೆ ನಿನ್ನೆ ಸದನದಲ್ಲಿ ಮಹಾನ್ ಸತ್ಯಹರಿಶ್ಚಂದ್ರನ ರೀತಿ ಆಕ್ಷೇಪಣೆ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷ ಏನು ಮಾಡಿತ್ತು ಎಂಬುದನ್ನ ಮರೆತಂತಿದೆ ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ, ನಾವು ಬಜೆಟ್ ಮಂಡನೆ ಆದ ನಂತರ ಚೊಂಬು ಹಿಡಿದು ಪ್ರತಿಭಟನೆ ಮಾಡಿದೆವು. ಆದರೆ, 2023ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸುವಾಗಲೇ ಇಡೀ ಕಾಂಗ್ರೆಸ್ ಪಕ್ಷದ ಶಾಸಕರು ಕಿವಿಯ ಮೇಲೆ ಹೂವಿಟ್ಟುಕೊಂಡು ಸದನದಲ್ಲಿ ಕೂತಿದ್ದನ್ನ ಕರ್ನಾಟಕದ ಜನತೆ ಮರೆತಿಲ್ಲ. ಸಭ್ಯತೆ, ಶಿಷ್ಟಾಚಾರ, ನೈತಿಕತೆ ಬಗ್ಗೆ ತಮ್ಮಿಂದ ನಾವು…

Read More

ನವದೆಹಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಸದನದಲ್ಲಿ ಸೋಲನ್ನನುಭವಿಸಿದೆ. ಇದರೊಂದಿಗೆ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಸ್ಥಾನದಲ್ಲಿ ಮುಂದುವರಿಯುವುದು ಖಚಿತವಾಗಿದೆ. ಸದನದಲ್ಲಿ ನಡೆದ ಪ್ರಕ್ರಿಯೆ: ಕಳೆದ ಕೆಲವು ದಿನಗಳಿಂದ ಸದನದ ಕಲಾಪಗಳಲ್ಲಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪ ಹೊರಿಸಿ ಪ್ರತಿಪಕ್ಷಗಳು ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿದ್ದವು. ಇಂದು ನಡೆದ ಸುದೀರ್ಘ ಚರ್ಚೆಯ ನಂತರ ನಡೆದ ಮತದಾನದಲ್ಲಿ ಅಥವಾ ಧ್ವನಿಮತದ ಪ್ರಕ್ರಿಯೆಯಲ್ಲಿ ಪ್ರತಿಪಕ್ಷಗಳ ನಿರ್ಣಯಕ್ಕೆ ಅಗತ್ಯ ಬೆಂಬಲ ಸಿಗದ ಕಾರಣ ನಿರ್ಣಯವು ಬಿದ್ದುಹೋಗಿದೆ. ಮುಂದುವರಿಯಲಿರುವ ಓಂ ಬಿರ್ಲಾ: ನಿರ್ಣಯವು ಸೋಲನ್ನನುಭವಿಸಿದ ಹಿನ್ನೆಲೆಯಲ್ಲಿ, ಓಂ ಬಿರ್ಲಾ ಅವರು ಸಭಾಧ್ಯಕ್ಷರಾಗಿ ತಮ್ಮ ಜವಾಬ್ದಾರಿಯನ್ನು ಮುಂದುವರಿಸಲಿದ್ದಾರೆ. ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ಸ್ಪೀಕರ್ ಪರವಾಗಿ ಬಲವಾಗಿ ನಿಂತಿದ್ದರಿಂದ ಪ್ರತಿಪಕ್ಷಗಳ ತಂತ್ರ ಫಲಿಸಲಿಲ್ಲ. ಸದನದ ಘನತೆಯನ್ನು ಎತ್ತಿಹಿಡಿಯುವಲ್ಲಿ ಮತ್ತು ಎಲ್ಲಾ ಸದಸ್ಯರಿಗೆ ಸಮಾನ ಅವಕಾಶ ನೀಡುವಲ್ಲಿ ಓಂ ಬಿರ್ಲಾ ಅವರು ಯಶಸ್ವಿಯಾಗಿದ್ದಾರೆ ಎಂದು ಆಡಳಿತ ಪಕ್ಷದ ನಾಯಕರು…

Read More

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವದ ಕುರಿತು ಕೇಳಿಬರುತ್ತಿರುವ ಸುದ್ದಿಗಳ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಸಾರ್ವಜನಿಕರಿಗೆ ಧೈರ್ಯ ತುಂಬಿದ್ದಾರೆ. “ಗೃಹಬಳಕೆಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬುಧವಾರ ವಸಂತನಗರದ ಆಹಾರ ಭವನದಲ್ಲಿ ಐಒಸಿ (IOC), ಬಿಪಿಸಿ (BPC), ಎಚ್‌ಪಿಸಿ (HPC) ಹಾಗೂ ಗೇಲ್ (GAIL) ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪೂರೈಕೆ ತಡವಾಗಲು ಅಂತರಾಷ್ಟ್ರೀಯ ಸಂಘರ್ಷವೇ ಕಾರಣ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅನಿಲ ಸಾಗಿಸುವ ಹಡಗುಗಳಿಗೆ (ವೆಸೆಲ್ಸ್) ಹಾನಿಯಾಗಿದೆ. ಇದರಿಂದಾಗಿ ಅಮೆರಿಕ, ರಷ್ಯಾ ಮತ್ತು ಗಲ್ಫ್ ರಾಷ್ಟ್ರಗಳಿಂದ ಆಮದಾಗುವ ಅನಿಲ ಪೂರೈಕೆಯಲ್ಲಿ ಸ್ವಲ್ಪ ವಿಳಂಬವಾಗುತ್ತಿದೆ ಎಂದು ಸಚಿವರು ವಿವರಿಸಿದರು. ರಾಜ್ಯದ ಅನಿಲ ಬೇಡಿಕೆಯ ಅಂಕಿ-ಅಂಶಗಳು: ಸಭೆಯಲ್ಲಿ ಚರ್ಚೆಯಾದ ರಾಜ್ಯದ ದೈನಂದಿನ ಅವಶ್ಯಕತೆ ಹೀಗಿದೆ: ಗೃಹಬಳಕೆ (14.2 ಕೆಜಿ): ದಿನಕ್ಕೆ…

Read More