Author: kannadanewsnow09

ನವದೆಹಲಿ: ರಾಜ್ಯದ ಪ್ರಾದೇಶಿಕ ರೈಲು ಸಂಪರ್ಕಕ್ಕೆ ಮಹತ್ವದ ನಿರ್ಧಾರವನ್ನು ಕೇಂದ್ರ ಸರಕಾರ ಕೈಗೊಂಡಿದ್ದು, ಮೈಸೂರು-ಕೆಎಸ್ಆರ್ ಬೆಂಗಳೂರು ನಡುವೆ ನಿತ್ಯವು ಸಂಚರಿಸಲಿರುವ ಒಡೆಯರ್ ಎಕ್ಸ್‌ಪ್ರೆಸ್‌ ರೇಲು ರಾಮನಗರದಲ್ಲಿ ನಿಲುಗಡೆಗೆ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಕೇಂದ್ರದ ರೇಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಅವರಿಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಮನವಿ ಫಲಪ್ರಧವಾಗಿದೆ. ಮಾರ್ಚ್ 24, 2026 (ಮಂಗಳವಾರ) ರಂದು ರೈಲ್ವೆ ಸಚಿವಲಾಯ ಈ ಬಗ್ಗೆ ಆದೇಶ ಹೊರಡಿಸಿದೆ. ಈ ಮೂಲಕ ರಾಮನಗರದಿಂದ ನಿತ್ಯವೂ ಬೆಂಗಳೂರಿಗೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚು ಅನುಕೂಲ ಆಗಲಿದೆ. ಈ ಬಗ್ಗೆ ಸಚಿವ ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 4, 2026ರಂದು ಹೆಚ್.ಡಿ. ಕುಮಾರಸ್ವಾಮಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಪ್ರತಿನಿತ್ಯವೂ ರಾಮನಗರದಿಂದ ಸಾವಿರಾರು ಪ್ರಯಾಣಿಕರು ಬೆಂಗಳೂರಿಗೆ ಉದ್ಯೋಗ, ಶಿಕ್ಷಣ, ವ್ಯಾಪರ ಇತ್ಯಾದಿ ಉದ್ದೇಶಗಳಿಗೆ ಹೋಗಿ ಬರುತ್ತಾರೆ. ಅದರಲ್ಲಿಯೂ ಮುಖ್ಯವಾಗಿ ಗಾರ್ಮೆಟ್‌ ಉದ್ಯಮದಲ್ಲಿ ಸಾವಿರಾರು…

Read More

ಶಿವಮೊಗ್ಗ: ಐಪಿಎಲ್ ಹಬ್ಬದ ಅಬ್ಬರ ಶುರುವಾಗುತ್ತಿದ್ದಂತೆ ಕ್ರಿಕೆಟ್ ಲೋಕದ ಕ್ರೇಜಿ ಅಭಿಮಾನಿಗಳಾದ ಆರ್‌ಸಿಬಿ (RCB) ಫ್ಯಾನ್ಸ್‌ಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭರ್ಜರಿ ‘ಗುಡ್ ನ್ಯೂಸ್’ ನೀಡಿದ್ದಾರೆ. ಮೈದಾನಕ್ಕೆ ಹೋಗಿ ಪಂದ್ಯ ನೋಡಲಾಗದ ಅಭಿಮಾನಿಗಳಿಗಾಗಿ ಸಾಗರದಲ್ಲೇ ಸ್ಟೇಡಿಯಂ ಫೀಲ್ ತರಲು ಶಾಸಕರು ಸಜ್ಜಾಗಿದ್ದಾರೆ. ಮಾರ್ಚ್ 28ರಿಂದ ಆರಂಭವಾಗಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರತಿ ಪಂದ್ಯವನ್ನು ವೀಕ್ಷಿಸಲು ಸಾಗರದ ನಗರಸಭೆ ಆವರಣದ ಗಾಂಧಿ ಮೈದಾನದಲ್ಲಿ ಬೃಹತ್ ಎಲ್ಇಡಿ (LED) ಪರದೆಯ ವ್ಯವಸ್ಥೆ ಮಾಡಲಾಗುತ್ತಿದೆ. ಗಾಂಧಿ ಮೈದಾನವೇ ಈಗ ‘ಚಿನ್ನಸ್ವಾಮಿ ಸ್ಟೇಡಿಯಂ’! ಆರ್‌ಸಿಬಿ ಪಂದ್ಯವೆಂದರೆ ಸಾಕು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟುತ್ತದೆ. ಈ ಬಾರಿ ಸಾಗರದ ಅಭಿಮಾನಿಗಳು ಮನೆಯ ಟಿವಿ ಪರದೆಗೆ ಅಂಟಿಕೊಳ್ಳುವ ಬದಲು, ನೂರಾರು ಜನರ ಜೊತೆಗೂಡಿ ಸಂಭ್ರಮಿಸಲು ಶಾಸಕರು ವೇದಿಕೆ ಸಜ್ಜುಗೊಳಿಸಿದ್ದಾರೆ. ಮಾರ್ಚ್ 28ರ ಮೊದಲ ಪಂದ್ಯದಿಂದಲೇ ಈ ಬೃಹತ್ ಪರದೆಯ ಸೌಲಭ್ಯ ಲಭ್ಯವಿರಲಿದ್ದು, ಅಭಿಮಾನಿಗಳು ಸಾಮೂಹಿಕವಾಗಿ ಪಂದ್ಯ ವೀಕ್ಷಿಸಿ ‘ಈ ಸಲ ಕಪ್ ನಮ್ದೇ’ ಎಂದು ಜೈಕಾರ…

Read More

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ನಗರದ ಜೀವನಾಡಿ ಬಿ.ಎಚ್. ರಸ್ತೆ ಇಂದು ಅಭಿವೃದ್ಧಿಯ ಹೆಸರಿನಲ್ಲಿ ಅಧ್ವಾನದ ಹಾದಿಯಾಗಿದೆ. ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯು, ಅವೈಜ್ಞಾನಿಕ ಮತ್ತು ವಿಳಂಬ ಧೋರಣೆಯಿಂದಾಗಿ ಸಾರ್ವಜನಿಕರ ಪಾಲಿಗೆ ನರಕದರ್ಶನ ಮಾಡಿಸುತ್ತಿದೆ. ಐದು ವರ್ಷಗಳ ದೀರ್ಘ ಕಾಯುವಿಕೆಯ ನಂತರವೂ ರಸ್ತೆ ಸುಗಮವಾಗುವ ಬದಲು ಸರಣಿ ಅಪಘಾತಗಳ ತಾಣವಾಗಿ ಮಾರ್ಪಟ್ಟಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಸ್ಥಳ ಪರಿಶೀಲನೆಗೆ ಬಂದಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಕಂಡ ಸಾರ್ವಜನಿಕರು ಮತ್ತು ರೈತ ಮುಖಂಡರು ತಮ್ಮ ಐದು ವರ್ಷಗಳ ನೋವನ್ನು ಪ್ರತಿಭಟನೆಯ ರೂಪದಲ್ಲಿ ಹೊರಹಾಕಿದರು. ಒಂದು ವರ್ಷದ ಕೆಲಸಕ್ಕೆ ಐದು ವರ್ಷ! – ಸಾರ್ವಜನಿಕರ ಆಕ್ರೋಶ “ಒಂದು ವರ್ಷದಲ್ಲಿ ಮುಗಿಯಬೇಕಿದ್ದ ಕಾಮಗಾರಿಯನ್ನು ಐದು ವರ್ಷಗಳ ಕಾಲ ಎಳೆಯಲಾಗಿದೆ. ಇದು ಅಭಿವೃದ್ಧಿಯೋ ಅಥವಾ ಸಾರ್ವಜನಿಕರಿಗೆ ನೀಡುತ್ತಿರುವ ಶಿಕ್ಷೆಯೋ?” ಎಂದು ಮಲೆನಾಡು ರೈತ ಹೋರಾಟ ವೇದಿಕೆಯ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಅಧಿಕಾರಿಗಳನ್ನು ನೇರವಾಗಿ ಪ್ರಶ್ನಿಸಿದರು. ರಸ್ತೆ ಅಗಲೀಕರಣದಲ್ಲಿ ಅನುಸರಿಸಲಾಗಿರುವ ‘ದಂಧೆ’ ಮತ್ತು ‘ತಾರತಮ್ಯ’ದ ಬಗ್ಗೆ…

Read More

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವ ಚುನಾವಣಾ ಅಧಿಕಾರಿಗಳು, ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಸಿ ದಾಖಲೆಯಿಲ್ಲದ ಒಟ್ಟು 6.17 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಮೂರು ಪ್ರತ್ಯೇಕ ಕಡೆಗಳಲ್ಲಿ ನಡೆದ ಈ ಕಾರ್ಯಾಚರಣೆಯ ವಿವರಗಳು ಹೀಗಿವೆ: ಭೂಮಿಕಾ ನಗರ ಚೆಕ್‌ಪೋಸ್ಟ್: ದಾವಣಗೆರೆ ನಗರದ ಭೂಮಿಕಾ ನಗರದ ಬಳಿ ಇರುವ ಚೆಕ್‌ಪೋಸ್ಟ್‌ನಲ್ಲಿ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದಾಗ, ಜಯನಗರದ ನಿವಾಸಿ ಪವನಕುಮಾರ್ ಎಂಬುವವರ ಬಳಿ ದಾಖಲೆಯಿಲ್ಲದ 4 ಲಕ್ಷ ರೂಪಾಯಿ ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿದೆ. ಕಾರಿಗನೂರು ಕ್ರಾಸ್: ಕಾರಿಗನೂರು ಕ್ರಾಸ್ ಚೆಕ್‌ಪೋಸ್ಟ್‌ನಲ್ಲಿ ಪ್ರಕಾಶ್ ಮರುಳಸಿದ್ದ ಎಂಬುವವರು ಸಾಗಿಸುತ್ತಿದ್ದ 1.15 ಲಕ್ಷ ರೂಪಾಯಿ ನಗದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಾಗನಹಳ್ಳಿ ಚೆಕ್‌ಪೋಸ್ಟ್: ಮಾಗನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ವೇಳೆ ಚಿತ್ತನಹಳ್ಳಿ ಮೂಲದ ವ್ಯಕ್ತಿಯೊಬ್ಬರಿಂದ 1.12 ಲಕ್ಷ ರೂಪಾಯಿ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚುನಾವಣಾ ಅಕ್ರಮಗಳನ್ನು ತಡೆಯಲು ಸ್ಥಾಪಿಸಲಾಗಿರುವ ಈ ಚೆಕ್‌ಪೋಸ್ಟ್‌ಗಳಲ್ಲಿ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ನಗರದ ಪ್ರಮುಖ ರಸ್ತೆಯಾದ ಬಿ.ಹೆಚ್. ರಸ್ತೆಯಲ್ಲಿ ವೈಜ್ಞಾನಿಕವಾಗಿ ಡಿವೈಡರ್ ಅಳವಡಿಸದ ಕಾರಣ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಡಿವೈಡರ್ ತೆರವುಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಹಾಗೂ ಯುವ ಮುಖಂಡ ಜಮೀಲ್ ಸಾಗರ್ ಅವರು ಪೊಲೀಸ್ ಉಪಾಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ. ನಗರದ ಸಂಚಾರ ವ್ಯವಸ್ಥೆಯ ಹಿತದೃಷ್ಟಿಯಿಂದ ಜಮೀಲ್ ಸಾಗರ್ ಅವರು ತಮ್ಮ ಪತ್ರದಲ್ಲಿ ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಪೊಲೀಸ್ ಇಲಾಖೆಯ ಮುಂದಿಟ್ಟಿದ್ದಾರೆ: ಶರಾವತಿ ಮೆಡಿಕಲ್ ಮುಂಭಾಗ: ಈ ಭಾಗದಲ್ಲಿ ಎರಡೂ ಬದಿಗಳಲ್ಲಿ ಕ್ರಾಸ್ ರಸ್ತೆಗಳಿರುವುದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಸುಗಮ ಸಂಚಾರಕ್ಕಾಗಿ ಇಲ್ಲಿನ ಡಿವೈಡರ್ ಅನ್ನು ಕೂಡಲೇ ತೆರವುಗೊಳಿಸಬೇಕು. ಟಿ.ವಿ.ಎಸ್. ಶೋರೂಂ ಮುಂಭಾಗ: ಟಿ.ವಿ.ಎಸ್ ಶೋರೂಂನಿಂದ ಬಿಲಾಲಿಯಾ ಮೈದಾನಕ್ಕೆ (ನೆಹರೂ ಮೈದಾನ) ಸಂಪರ್ಕ ಕಲ್ಪಿಸುವ ರಸ್ತೆಯ ಎದುರು ಇರುವ ಡಿವೈಡರ್ ಅನ್ನು ಸಾರ್ವಜನಿಕ ಅನುಕೂಲಕ್ಕಾಗಿ ತೆಗೆಯಬೇಕು. ಯುನೈಟೆಡ್ ಪೆಟ್ರೋಲ್ ಬಂಕ್ ಬಳಿ: ಪೆಟ್ರೋಲ್ ಬಂಕ್ ಎದುರು ಅರ್ಧಕ್ಕೆ ನಿಂತಿರುವ ಡಿವೈಡರ್ ಕಾಮಗಾರಿಯನ್ನು…

Read More

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೂ ಭಾರತದ ಇಂಧನ ಭದ್ರತೆ ಸ್ಥಿರವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಭರವಸೆ ನೀಡಿದೆ. ಸುಮಾರು ಒಂದು ಗಂಟೆ 45 ನಿಮಿಷಗಳ ಕಾಲ ನಡೆದ ಈ ಸುದೀರ್ಘ ಸಭೆಯಲ್ಲಿ ದೇಶದ ಪ್ರಸಕ್ತ ರಾಜತಾಂತ್ರಿಕ ಮತ್ತು ಆರ್ಥಿಕ ಸಿದ್ಧತೆಗಳ ಬಗ್ಗೆ ವಿರೋಧ ಪಕ್ಷಗಳಿಗೆ ಮಾಹಿತಿ ನೀಡಲಾಯಿತು. ಇಂಧನ ಲಭ್ಯತೆ ಮತ್ತು ಮುನ್ನೆಚ್ಚರಿಕೆ: ದೇಶದ ಇಂಧನ ಅಗತ್ಯತೆಗಳನ್ನು ಪೂರೈಸಲು ಸರ್ಕಾರ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಅಗತ್ಯವಿರುವ ತೈಲ ಮತ್ತು ಅನಿಲಕ್ಕಾಗಿ ಈಗಾಗಲೇ ‘ಅಡ್ವಾನ್ಸ್ ಬುಕಿಂಗ್’ ಮಾಡಲಾಗಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ವಿವಿಧ ದೇಶಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಪ್ರಮುಖವಾಗಿ, ಹಾರ್ಮುಜ್ ಜಲಸಂಧಿಯ ಮೂಲಕ ಸರಕು ಸಾಗಣೆಯ ಬಗ್ಗೆ ವಿರೋಧ ಪಕ್ಷಗಳು ವ್ಯಕ್ತಪಡಿಸಿದ ಕಳವಳಕ್ಕೆ ಉತ್ತರಿಸಿದ ಸರ್ಕಾರ, ಮುಂದಿನ 4-5 ದಿನಗಳಲ್ಲಿ ನಾಲ್ಕು ಹಡಗುಗಳು ಭಾರತದ ಬಂದರು ತಲುಪಲಿವೆ ಮತ್ತು ಎಲ್‌ಪಿಜಿ (LPG) ಸೇರಿದಂತೆ…

Read More

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದರೂ, ಹೆಚ್ಚಿನ ಸಂಖ್ಯೆಯ ಭಾರತದತ್ತ ಮುಖ ಮಾಡಿರುವ ಹಡಗುಗಳು ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ದಾಟಲಿವೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚಿಸಲು ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಸರ್ಕಾರವು ಈ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ನಾಯಕರೊಬ್ಬರು ಹೆಸರು ಹೇಳಲಿಚ್ಛಿಸದೆ ತಿಳಿಸಿದ್ದಾರೆ. ಜಾಗತಿಕ ತೈಲ ಮತ್ತು ಅನಿಲ ವ್ಯಾಪಾರಕ್ಕೆ ಹಾರ್ಮುಜ್ ಜಲಸಂಧಿಯು ಅತ್ಯಂತ ಆಯಕಟ್ಟಿನ ಮಾರ್ಗವಾಗಿದ್ದು, ಪ್ರಸ್ತುತ ಸಂಘರ್ಷದ ನಡುವೆಯೂ ಭಾರತಕ್ಕೆ ಬರುವ ಸರಕು ಸಾಗಣೆ ಹಡಗುಗಳ ಸಂಚಾರ ಸುಗಮವಾಗಿರಲಿದೆ ಎಂಬುದು ಈ ಹೇಳಿಕೆಯ ಸಾರಾಂಶವಾಗಿದೆ. ಯುದ್ಧ ಭೀತಿಯ ನಡುವೆ ಸಮುದ್ರ ಮಾರ್ಗದ ಭದ್ರತೆಯ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಈ ಸಮಯದಲ್ಲಿ, ಭಾರತದ ಇಂಧನ ಮತ್ತು ವ್ಯಾಪಾರ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರವು ಸನ್ನದ್ಧವಾಗಿದೆ ಎಂಬ ಸಂದೇಶವನ್ನು ಈ ಸಭೆಯಲ್ಲಿ ನೀಡಲಾಗಿದೆ. ದೇಶದ ಆರ್ಥಿಕತೆಗೆ ಪೂರಕವಾದ ಈ ಸಂಚಾರ ವ್ಯವಸ್ಥೆಯು ಅಡೆತಡೆಯಿಲ್ಲದೆ ಸಾಗುವಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು…

Read More

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಭಾರತದ ಪಾಲಿಗೆ ಆಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ. ದೇಶದ ಆಂತರಿಕ ಅನಿಲ ಉತ್ಪಾದನೆಯು ಗಮನಾರ್ಹವಾಗಿ ಏರಿಕೆಯಾಗಿದ್ದು, ಸಂಘರ್ಷದ ಆರಂಭದಲ್ಲಿದ್ದ ಶೇ. 28ರಿಂದ ಈಗ ಶೇ. 60ಕ್ಕೆ ತಲುಪಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇತ್ತೀಚೆಗೆ ನಡೆದ ಸರ್ವಪಕ್ಷ ಸಭೆಯಲ್ಲಿ ಸರ್ಕಾರವು ಈ ಮಹತ್ವದ ಬೆಳವಣಿಗೆಯನ್ನು ವಿವಿಧ ಪಕ್ಷಗಳ ನಾಯಕರಿಗೆ ವಿವರಿಸಿದೆ ಎಂದು ಸಭೆಯ ವಿವರಗಳನ್ನು ಬಲ್ಲ ಮೂಲಗಳು ತಿಳಿಸಿವೆ. ಜಾಗತಿಕ ಮಟ್ಟದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವ ಈ ಸಂದರ್ಭದಲ್ಲಿ, ಭಾರತವು ತನ್ನ ಸ್ವಾವಲಂಬನೆಯನ್ನು ಹೆಚ್ಚಿಸಿಕೊಳ್ಳುತ್ತಿರುವುದು ಆರ್ಥಿಕ ಭದ್ರತೆಯ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವೆಂದು ಪರಿಗಣಿಸಲಾಗಿದೆ. ವಿದೇಶಿ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಮತ್ತು ದೇಶೀಯ ಸಂಪನ್ಮೂಲಗಳನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳುವ ಸರ್ಕಾರದ ಕಾರ್ಯತಂತ್ರವು ಈ ಯಶಸ್ಸಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ಬೆಲೆ ಮತ್ತು ಪೂರೈಕೆಯಲ್ಲಿ ಅನಿಶ್ಚಿತತೆ ಎದುರಾಗಿದ್ದರೂ, ಭಾರತದ ಈ ಸಾಧನೆಯು ದೇಶದ ಇಂಧನ…

Read More

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿ ಆರು ಲಕ್ಷ ರೂಪಾಯಿ ನಗದನ್ನು ಒಳಗೆ ಸಾಗಿಸಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಕೆಂಗಲ್ ಗೇಟ್ ಮೂಲಕ ಪ್ರವೇಶಿಸಲು ಯತ್ನಿಸುತ್ತಿದ್ದ ಯುವಕನ ಬ್ಯಾಗ್ ತಪಾಸಣೆ ನಡೆಸಿದಾಗ ಈ ಭಾರಿ ಮೊತ್ತದ ಹಣ ಪತ್ತೆಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಲೆಟರ್ ಹೆಡ್ ಪಡೆಯುವ ಉದ್ದೇಶದಿಂದ ಬಂದಿರುವುದಾಗಿ ಹೇಳಿಕೊಂಡ ಈ ಯುವಕ, ತನ್ನ ಬ್ಯಾಗ್‌ನಲ್ಲಿ ಆರು ಲಕ್ಷ ರೂಪಾಯಿ ಹಣವನ್ನು ಬಚ್ಚಿಟ್ಟುಕೊಂಡಿದ್ದ. ಭದ್ರತಾ ತಪಾಸಣೆಯ ವೇಳೆ ಹಣ ಪತ್ತೆಯಾದಾಗ, ಇಷ್ಟು ದೊಡ್ಡ ಮೊತ್ತದೊಂದಿಗೆ ಒಳಗೆ ಹೋಗಲು ಅವಕಾಶವಿಲ್ಲ ಎಂದು ಪೊಲೀಸರು ತಿಳಿಸಿ ವಾಪಸ್ ಹೋಗುವಂತೆ ಸೂಚಿಸಿದರು. ಆದರೆ, ಶಾಸಕರನ್ನು ಭೇಟಿಯಾಗಲೇಬೇಕು ಎಂದು ಯುವಕ ಹಠ ಹಿಡಿದಿದ್ದರಿಂದ ಅನುಮಾನಗೊಂಡ ಪೊಲೀಸರು ತಕ್ಷಣ ಆತನನ್ನು ವಶಕ್ಕೆ ಪಡೆದು ಎಸಿಪಿ ಕೃಷ್ಣಯ್ಯ ಅವರ ಕಚೇರಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಯುವಕ ವಿಚಿತ್ರ…

Read More

ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಅವರು ಬುಧವಾರ ಸಂಜೆ 12 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ​ಘಟನೆಯ ವಿವರ: ತಿಪಟೂರಿನ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಕೆ. ರಾಜಶೇಖರ್ ಅವರು 2025-26ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲೆಯ 10 ತಾಲ್ಲೂಕುಗಳ ಸಂತೆ ಮತ್ತು ಜಾತ್ರೆಗಳಲ್ಲಿ ಆರೋಗ್ಯ ಜಾಗೃತಿ ವಸ್ತುಪ್ರದರ್ಶನ ನಡೆಸಿಕೊಟ್ಟಿದ್ದರು. ಈ ಕಾರ್ಯಕ್ಕೆ ಸಂಬಂಧಿಸಿದಂತೆ ಅಂದಾಜು ₹1.98 ಲಕ್ಷ ಮೊತ್ತದ ಬಿಲ್ ಪಾವತಿಯಾಗಬೇಕಿತ್ತು. ​ಈ ಬಿಲ್ ಹಣವನ್ನು ಮಂಜೂರು ಮಾಡಲು ಕಚೇರಿಯ ವ್ಯವಸ್ಥಾಪಕ ಅರವಿಂದ್ ಅವರು ₹12 ಸಾವಿರ ಲಂಚ ನೀಡುವಂತೆ ರಾಜಶೇಖರ್ ಅವರಿಗೆ ಒತ್ತಾಯಿಸಿದ್ದರು. ಲಂಚ ನೀಡಲು ಇಷ್ಟವಿಲ್ಲದ ರಾಜಶೇಖರ್ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ​ಲೋಕಾಯುಕ್ತ ದಾಳಿ: ದೂರಿನ ಅನ್ವಯ ಬುಧವಾರ ಸಂಜೆ ಡಿಎಚ್‌ಒ ಕಚೇರಿಯ ಆವರಣದಲ್ಲೇ…

Read More